Subscribe to Updates
Get the latest creative news from FooBar about art, design and business.
Author: kannadanewsnow09
ಚಿತ್ರದುರ್ಗ: ಕ್ರೀಡೆಗಳಲ್ಲಿ ತಮ್ಮನ್ನು ತಾವು ತೊಡಗಿಸಿಕೊಳ್ಳುವ ಮೂಲಕ ದೈಹಿಕ ಮತ್ತು ಮಾನಸಿಕವಾಗಿ ಸದೃಢರಾಗಬೇಕು ಎಂದು ಸಮಾಜ ಸೇವಕ ಜಿ. ಜಯರಾಮಯ್ಯ ಅಭಿಪ್ರಾಯಪಟ್ಟರು. ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಆನೆಸಿದ್ರಿ ಗೊಲ್ಲರಹಟ್ಟಿ ಗ್ರಾಮದಲ್ಲಿ ಯಧು ಕ್ರಿಕೆಟರ್ಸ್ ಏರ್ಪಡಿಸಿದ್ದ ಟೆನ್ನಿಸ್ ಬಾಲ್ ಕ್ರಿಕೆಟ್ ಟ್ರೋಫಿ ಪಂದ್ಯಾವಳಿಗೆ ಚಾಲನೆ ನೀಡಿ, ಕ್ರೀಡಾಪಟುಗಳಿಗೆ ಶುಭ ಹಾರೈಸಿ, ಮಾತನಾಡಿದರು. ಯುವ ಜನತೆ ಕ್ರೀಡ್ರೆಗಳ ಮಹತ್ವ ಅರಿತು, ಅಭಿವೃದ್ಧಿ ಪಡಿಸುವ ಮನೋಭಾವ ಬೆಳೆಸಿಕೊಳ್ಳಬೇಕು. ಜೊತೆಗೆ ಕ್ರೀಡೆಗಳಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡು ದೇಹ ಮತ್ತು ಮನಸ್ಸು ಸದೃಢರಾಗಿರುತ್ತದೆ. ಕ್ರೀಡೆಯಿಂದ ಯುವಜನರಲ್ಲಿ ನಾಯಕತ್ವ ಗುಣ ಮತ್ತು ಕ್ರೀಡಾ ಮನೋಭಾವ ಬೆಳೆಸಲು ಉಪಯುಕ್ತವಾಗಿವೆ. ಕ್ರೀಡೆಯಲ್ಲಿ ಸೋಲು ಗೆಲುವು ಸಾಮಾನ್ಯ, ಆದರೆ ಕ್ರೀಡೆಯಲ್ಲಿ ಪಾಲ್ಗೋಳ್ಳುವುದು ಮುಖ್ಯವಾಗಿದೆ. ಕ್ರೀಡೆಗಳಲ್ಲಿ ಗೆಲುವು ಸ್ವೀಕರಿಸಿದಂತೆ ಸೋಲನ್ನು ಹಾಗೆಯೇ ಸಮಾನವಾಗಿ ಸ್ವೀಕರಿಸಬೇಕು ಎಂದು ತಿಳಿಸಿದರು. ಈ ಸಂದರ್ಭದಲ್ಲಿ ಮುಖಂಡರಾದ ಡಾಬಾ ಚಿಕ್ಕಣ್ಣ, ಗ್ರಾಪಂ ಸದಸ್ಯ ಮಹಾಲಿಂಗಪ್ಪ, ತಿಪ್ಪಣ್ಣ, ರಾಮಣ್ಣ, ಚಿತ್ತಯ್ಯ, ಶಿವಣ್ಣ, ನಾಗಪ್ಪ, ಕಿಟ್ಟಿ ಸೇರಿದಂತೆ ಮತ್ತಿತರರು ಇದ್ದರು.
ಆಂಧ್ರಪ್ರದೇಶ: ಬುಡಕಟ್ಟು ಸಮುದಾಯವನ್ನು ಉಲ್ಲೇಖಿಸಿ ವಿವಾದಾತ್ಮಕ ಹೇಳಿಕೆ ನೀಡಿದ ಒಂದು ತಿಂಗಳ ನಂತರ, ನಟ ವಿಜಯ್ ದೇವರಕೊಂಡ ವಿರುದ್ಧ ಎಸ್ಸಿ/ಎಸ್ಟಿ (ದೌರ್ಜನ್ಯ ತಡೆ) ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ. ಸೈಬರಾಬಾದ್ನ ರಾಯದುರ್ಗಂ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ. ಸೈದಾಬಾದ್ ನಿವಾಸಿ ಮತ್ತು ಬುಡಕಟ್ಟು ಸಮುದಾಯಗಳ ಜಂಟಿ ಕ್ರಿಯಾ ಸಮಿತಿಯ ರಾಜ್ಯ ಅಧ್ಯಕ್ಷ ನೆನವತ್ ಅಶೋಕ್ ಕುಮಾರ್ ನಾಯಕ್ ಅವರು ದೂರು ದಾಖಲಿಸಿದ್ದಾರೆ ಎಂದು ANI ವರದಿ ಮಾಡಿದೆ. ಸೂರ್ಯ ಅವರ ‘ರೆಟ್ರೊ’ ಚಿತ್ರದ ಪೂರ್ವ-ಬಿಡುಗಡೆ ಕಾರ್ಯಕ್ರಮದ ಸಂದರ್ಭದಲ್ಲಿ ವಿಜಯ್ ಮಾಡಿದ ಹೇಳಿಕೆಗೆ ಅವರು ಆಕ್ಷೇಪ ವ್ಯಕ್ತಪಡಿಸಿದರು. ಈ ಕಾರ್ಯಕ್ರಮದಲ್ಲಿ, ದೇವರಕೊಂಡ ಅವರು ಕಾಶ್ಮೀರದಲ್ಲಿ ಪಹಲ್ಗಾಂವ್ ಭಯೋತ್ಪಾದಕ ದಾಳಿಯನ್ನು ಉಲ್ಲೇಖಿಸಿ, ಕಾಶ್ಮೀರದಲ್ಲಿ ನಡೆಯುತ್ತಿರುವ ಘಟನೆಗಳಿಗೆ ಪರಿಹಾರವೆಂದರೆ ಅವರಿಗೆ (ಭಯೋತ್ಪಾದಕರಿಗೆ) ಶಿಕ್ಷಣ ನೀಡುವುದು ಮತ್ತು ಅವರು ಮೆದುಳು ತೊಳೆಯದಂತೆ ನೋಡಿಕೊಳ್ಳುವುದು. ಅವರು ಏನು ಸಾಧಿಸುತ್ತಾರೆ? ಕಾಶ್ಮೀರ ಭಾರತಕ್ಕೆ ಸೇರಿದ್ದು, ಕಾಶ್ಮೀರಿಗಳು ನಮ್ಮವರು ಎಂದಿದ್ದರು. ಭಾರತ ಪಾಕಿಸ್ತಾನದ ಮೇಲೆ ದಾಳಿ ಮಾಡುವ ಅಗತ್ಯವಿಲ್ಲ, ಏಕೆಂದರೆ ಪಾಕಿಸ್ತಾನಿಗಳು ಸ್ವತಃ…
ಹಾಸನ: ಕರ್ನಾಟಕದಲ್ಲಿ ಸಂಕ್ರಾಂತಿ ಬಳಿಕ ರಾಜಕೀಯ ವಿಪ್ಲವದ ಲಕ್ಷಣಗಳು ಗೋಚರಿಸಲಿದ್ದಾವೆ. ಆದರೇ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರಿಗೆ ಯಾವುದೇ ತೊಂದರೆ ಆಗುವುದಿಲ್ಲ ಎಂಬುದಾಗಿ ಕೋಡಿಮಠ ಶ್ರೀಗಳು ಸ್ಪೋಟಕ ಭವಿಷ್ಯ ನುಡಿದಿದ್ದಾರೆ. ಹಾಸನ ಜಿಲ್ಲೆಯ ಅರಸೀಕೆರೆಯ ಹಾರನಹಳ್ಳಿ ಕೋಡಿಮಠದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಡಾ.ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿ ಅವರು, ಭಾರತಕ್ಕೆ ನಿರೀಕ್ಷೆಗೂ ಮೀರಿದಂತ ದುಃಖ ಬರಲಿದೆ ಎಂದರು. ಇನ್ನೂ ಮೇಘ ಸ್ಪೋಟ, ಯುದ್ಧದ ಜೊತೆಗೆ ಅರಸನಾಲಯಕ್ಕೆ ಕಾರ್ಮೋಡವು ಕಾದಿದೆ. ಇದು ರಾಜ್ಯ, ದೇಶಕ್ಕೂ ಕಾಲಿಡುವುದಾಗಿ ಆಘಾತಕಾರಿ ಭವಿಷ್ಯ ನುಡಿದರು. ಈ ಹಿಂದೆ ಎರಡು ಮೂರು ಪ್ರಧಾನ ಮಂತ್ರಿಗಳ ಕೊಲೆ ಆಗ್ತಾರೆ ಎಂಬುದಾಗಿ ಭವಿಷ್ಯ ನುಡಿದಿದ್ದೆನು. ಅದು ಈಗ ಆಗಿದೆ. ಸಾಗರದಲ್ಲಿ ಒಂದು ಜಲಸ್ಪೋಟ ಎದ್ದಿದೆ. ಅದು ಕೂಡ ಆಗಲಿದೆ ಎಂದು ತಿಳಿಸಿದರು. ವಿಶ್ವದಲ್ಲಿ ನಡೆಯುತ್ತಿರುವಂತ ಯುದ್ಧ ನಿಲ್ಲೋದು ಸಂವತ್ಸರ ಪರ್ವದಲ್ಲಿ ಕಷ್ಟವಾಗಿದೆ. ಈ ದ್ವೇಷ, ಅಸೂಯೆಗಳ ಮಧ್ಯದಲ್ಲಿ ಒಂದಿಬ್ಬರು ಬಲಿಯಾಗುತ್ತಾರೆ ಎಂಬುದಾಗಿ ಸ್ಪೋಟಕ ಭವಿಷ್ಯ ನುಡಿದರು. ಕೊರೋನಾ ವಿಶ್ವದಲ್ಲಿ ಮತ್ತೊಂದು ರೂಪ ತಾಳಲಿದೆ. ಅಕಾಲದಲ್ಲಿ…
ಬೆಂಗಳೂರು: ರಾಜ್ಯ ಸರ್ಕಾರದಿಂದ ಪರಿಶಿಷ್ಟ ಜಾತಿಯ ಸಮಗ್ರ ಸಮೀಕ್ಷೆ-2025 ಅಂತಿಮವಾಗಿ ದಿನಾಂಕವನ್ನು ವಿಸ್ತರಿಸಿ ಆದೇಶಿಸಿದೆ. ಆದೇಶದಂತೆ ಜೂನ್ 30ರವರೆಗೆ ವಿಸ್ತರಣೆ ಮಾಡಿರುವುದಾಗಿ ತಿಳಿಸಿದೆ. ಈ ಕುರಿತಂತೆ ನ್ಯಾಯಮೂರ್ತಿ ಡಾ.ಹೆಚ್ ಎನ್ ನಾಗಮೋಹನ್ ದಾಸ್ ಏಕ ಸದಸ್ಯ ಆಯೋಗದ ಕಾರ್ಯದರ್ಶಿ ಆದೇಶ ಹೊರಡಿಸಿದ್ದು, ಕರ್ನಾಟಕ ರಾಜ್ಯದಲ್ಲಿ ಶಿಕ್ಷಣ ಮತ್ತು ಸರ್ಕಾರಿ ಸೇವೆಗಳಲ್ಲಿ ಪರಿಶಿಷ್ಟ ಜಾತಿ ಪಟ್ಟಿಯಲ್ಲಿನ 101 ಜಾತಿಗಳಿಗೆ ಸೇರಿದವರ ಪ್ರಾತಿನಿದ್ಯತೆ ಕುರಿತು ವೈಜ್ಞಾನಿಕ ದತ್ತಾಂಶವನ್ನು (Emperical Data) ಸಂಗ್ರಹಿಸಲು, ದಿನಾಂಕ: 05-05-2025 ರಿಂದ ಮನ-ಮನ ಭೇಟಿ ಮೂಲಕ ರಾಜ್ಯಾದ್ಯಂತ ಸಮೀಕ್ಷೆಯನ್ನು ಪ್ರಾರಂಭಿಸಲಾಗಿರುತ್ತದೆ ಎಂದಿದ್ದಾರೆ. ಸಮೀಕ್ಷಾ ಕಾರ್ಯದಲ್ಲಿ ಶೇ. 100 ರಷ್ಟು ಪ್ರಗತಿ ಸಾಧಿಸಲು ಸಮೀಕ್ಷೆಯಲ್ಲಿ ಇದುವರೆಗೂ ಭಾಗವಹಿಸದೇ ಇರುವ ಕರ್ನಾಟಕ ರಾಜ್ಯಕ್ಕೆ ಸೇರಿದ ಪರಿಶಿಷ್ಟ ಜಾತಿ ಕುಟುಂಬದವರಿಗೆ, ದಿನಾಂಕ: 09.06.2025 ರಿಂದ ದಿನಾಂಕ: 22.06.2025 ರವರೆಗೆ ಈ ಕೆಳಕಂಡ ಸ್ಥಳಗಳಲ್ಲಿ ವಿಧಾನದ ಮೂಲಕ ಸಮೀಕ್ಷೆಯಲ್ಲಿ ಪಾಲ್ಗೊಳ್ಳಲು ಅವಕಾಶ ಕಲ್ಪಿಸಲಾಗಿರುತ್ತದೆ. 1. ನಾಗರೀಕ ಸೇವಾ ಕೇಂದ್ರಗಳಾದ, “ಕರ್ನಾಟಕ ಒನ್’ (Karnataka one) ‘ಬೆಂಗಳೂರು…
ಸಿರಿಯಾ: ಇಲ್ಲಿನ ಚರ್ಚ್ವೊಂದರಲ್ಲಿ ಇಸ್ಲಾಮಿಕ್ ಸ್ಟೇಟ್ ಆತ್ಮಾಹುತಿ ಬಾಂಬರ್ ದಾಳಿ: ಕನಿಷ್ಠ 15 ಸಾವುನ್ನಪ್ಪಿದ್ದು, ಹಲವರಿಗೆ ಗಾಯಗೊಂಡಿದ್ದಾರೆ. ಸಿರಿಯಾದ ಡಮಾಸ್ಕಸ್ನ ದ್ವೇಲಾ ಪ್ರದೇಶದಲ್ಲಿ ಭಾನುವಾರ ಜನರಿಂದ ತುಂಬಿದ್ದ ಚರ್ಚ್ನೊಳಗೆ ಇಸ್ಲಾಮಿಕ್ ಸ್ಟೇಟ್ ಆತ್ಮಹತ್ಯಾ ಬಾಂಬರ್ ಸ್ವತಃ ಸ್ಫೋಟಿಸಿಕೊಂಡ ಪರಿಣಾಮ ಕನಿಷ್ಠ 15 ಜನರು ಸಾವನ್ನಪ್ಪಿದ್ದಾರೆ. ಮಾರ್ ಎಲಿಯಾಸ್ ಚರ್ಚ್ ಒಳಗೆ ಜನರು ಪ್ರಾರ್ಥನೆ ಸಲ್ಲಿಸುತ್ತಿದ್ದಾಗ ಈ ಸ್ಫೋಟ ಸಂಭವಿಸಿದೆ. “ಡಮಾಸ್ಕಸ್ನ ದ್ವೇಲಾ ಪ್ರದೇಶದಲ್ಲಿರುವ ಸೇಂಟ್ ಎಲಿಯಾಸ್ ಚರ್ಚ್ ಒಳಗೆ ಆತ್ಮಹತ್ಯಾ ದಾಳಿಕೋರನೊಬ್ಬ ಸ್ಫೋಟಕ ಪಟ್ಟಿಯನ್ನು ಸ್ಫೋಟಿಸಿದ್ದಾನೆ” ಎಂದು ರಾಜ್ಯ ಟಿವಿ ವರದಿ ಮಾಡಿದೆ. ದಾಳಿಯಲ್ಲಿ “ಪ್ರಾಥಮಿಕ ಸಂಖ್ಯೆಯ ಪ್ರಕಾರ 15 ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ ಮತ್ತು ಹಲವಾರು ಜನರು ಗಾಯಗೊಂಡಿದ್ದಾರೆ” ಎಂದು ಸಿರಿಯನ್ ನಾಗರಿಕ ರಕ್ಷಣಾ ಹೇಳಿಕೆಯಲ್ಲಿ ತಿಳಿಸಿದೆ. ಡಮಾಸ್ಕಸ್ ಚರ್ಚ್ನಲ್ಲಿ ತನ್ನನ್ನು ತಾನು ಸ್ಫೋಟಿಸಿಕೊಂಡ ಆತ್ಮಹತ್ಯಾ ಬಾಂಬರ್ ಇಸ್ಲಾಮಿಕ್ ಸ್ಟೇಟ್ ಸದಸ್ಯ ಎಂದು ಸಿರಿಯಾದ ಆಂತರಿಕ ಸಚಿವಾಲಯ ತಿಳಿಸಿದೆ. “ಡಾಯೇಶ್ (IS) ಭಯೋತ್ಪಾದಕ ಗುಂಪಿನೊಂದಿಗೆ ಸಂಬಂಧ ಹೊಂದಿರುವ ಆತ್ಮಹತ್ಯಾ…
ಶಿವಮೊಗ್ಗ: ವಿದ್ಯಾರ್ಥಿಗಳು ಶಿಸ್ತು, ಪರಿಶ್ರಮ, ಸಮಯ ಪ್ರಜ್ಞೆ, ಆತ್ಮವಿಶ್ವಾಸ ಹಾಗೂ ನಿರ್ಭಯದಂತ ಪಂಚಮಂತ್ರಗಳನ್ನು ಜೀವನದಲ್ಲಿ ಅಳವಡಿಸಿಕೊಂಡಾಗ ಮಾತ್ರ ಯಶಸ್ಸು ಸಾಧಿಸಲು ಸಾಧ್ಯ ಎಂಬುದಾಗಿ ಕರ್ನಾಟಕ ಹೈಕೋರ್ಟ್ ನ ನ್ಯಾಯಮೂರ್ತಿ ಹೆಚ್.ಪಿ ಸಂದೇಶ್ ಹೇಳಿದರು. ಇಂದು ಶಿವಮೊಗ್ಗ ಜಿಲ್ಲೆಯ ಸಾಗರದ ಎಂ ಎಲ್ ಹಳ್ಳಿಯಲ್ಲಿ ಶ್ರೀ ರಾಮಕೃಷ್ಣ ವಿವೇಕಾನಂದ ವಸತಿ ವಿದ್ಯಾಲಯ, ಶ್ರೀ ರಾಮಕೃಷ್ಣ ಸಮೂಹ ಸಂಸ್ಥೆಗಳು ಹಾಗೂ ಚಿಕ್ಕಮಗಳೂರು ಯುವ ಸ್ಪೂರ್ತಿ ಅಕಾಡೆಮಿ ಸಂಯುಕ್ತ ಆಶ್ರಯದಲ್ಲಿ ಆಯೋಜಿಸಿದ್ದಂತ ವ್ಯಕ್ತಿತ್ವ ವಿಕಸನ ಮತ್ತು ವಿದ್ಯಾರ್ಥಿ ಜಾಗೃತ ಸಮಾವೇಶ ಕಾರ್ಯಕ್ರಮದಲ್ಲಿ ಭಾಗಿಯಾಗಿ ಮಾತನಾಡಿದರು. ವಿದ್ಯಾರ್ಥಗಳು ಇತಿಹಾಸ ಮತ್ತು ಸಂಸ್ಕೃತಿ ತಿಳಿದುಕೊಳ್ಳಬೇಕು. ರಾಮಕೃಷ್ಣ ಪರಮಹಂಸರ ಸಮನ್ವಯತೆಯನ್ನು ಅರಿಯಬೇಕು. ಮಹಾತ್ಮಾ ಗಾಂಧೀಜಿಯವರ ಕಲ್ಯಾಣ ರಾಜ್ಯ, ಸರ್ವೋದಯ ಉದಯದ ಬಗ್ಗೆ ಅರಿವಿದ್ದಾಗ ಮಾತ್ರ ಜೀವನದಲ್ಲಿ ಯಶಸ್ಸು ಸಾಧಿಸಲು ಸಾಧ್ಯವೆಂದರು. ನನಗೆ ಕುವೆಂಪು ಅವರ ಸಮನ್ವಯತೆ, ಸರ್ವೋದಯ, ಪೂರ್ಣದೃಷ್ಠಿ ಪ್ರೇರಣೆ. ಆ ಮೂಲಕ ಮಾನವೀಯ ಗುಣಲಕ್ಷಣ ಬೆಳೆಸಿಕೊಳ್ಳುವಂತಾಗಬೇಕು. ಕಲಿಕೆಗೆ ವಿರಾಮವಿಲ್ಲ. ಅದೊಂದು ನಿರಂತರ ಪ್ರಕ್ರಿಯೆಯಾಗಿದೆ. ತಾಯಿಯ ಗರ್ಭಾಶಯದಿಂದ ಹೊರಬಂದಾಗಿನಿಂದ ಆರಂಭಗೊಂಡು,…
ಶಿವಮೊಗ್ಗ: 2ನೇ ಬಾರಿಗೆ ಸಾಗರ ತಾಲ್ಲೂಕು ಮೊಗವೀರ ಸಂಘದ ನೂತನ ಅಧ್ಯಕ್ಷರಾಗಿ ಸತೀಶ್ ಕೆ ಮೊಗವೀರ ಅವರು ಎರಡೇ ಬಾರಿಗೆ ಸರ್ವಾನುಮತದಿಂದ ಆಯ್ಕೆಯಾಗಿದ್ದಾರೆ. ಮೊಗವೀರ ಸಮಾಜದ ಮುಖಂಡ ನಾಡೋಜ. ಜಿ. ಶಂಕರ್ ನೇತೃತ್ವದಲ್ಲಿ, ದಕ್ಷಿಣ ಕನ್ನಡ ಮೊಗವೀರ ಮಹಾಜನ ಸಂಘದ ಅಧ್ಯಕ್ಷ ಜಯ ಸಿ ಕೋಟ್ಯಾ ಉಪಸ್ಥಿತಿಯಲ್ಲಿ ಸಾಗರ ತಾಲ್ಲೂಕು ಮೊಗವೀರ ಸಂಘದ ವಾರ್ಷಿಕ ಮಹಾಸಭೆ ನಡೆಯಿತು. ಈ ಸಭೆಯಲ್ಲಿ ಸತೀಶ್ ಕೆ ಮೊಗವೀರ ಅವರ ಆಯ್ಕೆಯನ್ನು ಸಭೆಯ ಎಲ್ಲಾ ಮುಖಂಡರು ಸರ್ವಾನುಮತದಿಂದ ಅನುಮೋದಿಸಿದರು. ಈ ಮೂಲಕ ಸತೀಶ್ ಕೆ ಮೊಗವೀರ ಅವರು ಸಾಗರ ತಾಲ್ಲೂಕು ಮೊಗವೀರ ಸಂಘದ ಅಧ್ಯಕ್ಷರಾಗಿ ಸರ್ವಾನುಮತದಿಂದ ಆಯ್ಕೆಯಾಗಿದ್ದಾರೆ. ಸಾಗರ ತಾಲ್ಲೂಕು ಮೊಗವೀರ ಸಮುದಾಯದ ಏಳಿಗೆಗಾಗಿ ಶ್ರಮೀಸುತ್ತೇನೆ. ನನಗೆ ಸಮುದಾಯದ ಸೇವೆ ಮಾಡಲು ಅವಕಾಶ ಮಾಡಿಕೊಟ್ಟಂತ ನಾಡೋಜ ಜಿ.ಶಂಕರ್, ಜಯ ಸಿ ಕೋಟ್ಯಾ, ಉಡುಪಿ ಮೊಗವೀರ ಯುವ ಸಂಘಟನೆಯ ಅಧ್ಯಕ್ಷ ಜಯಂತ್ ಅಮೀನ್, ಹಾಲಿ ಅಧ್ಯಕ್ಷರಾಗಿದ್ದಂತ ನಾಗರಾಜ್ ಬಿಲಗುಂಜಿ ಸೇರಿದಂತೆ ಸಮುದಾಯದ ಎಲ್ಲಾ ಮುಖಂಡರಿಗೆ ಸತೀಶ್ ಕೆ…
ಬೆಂಗಳೂರು: ನಗರದಲ್ಲಿ ಮುಂದಿನ ಮೂರು ಗಂಟೆಗಳ ಕಾಲ ಬಿರುಗಾಳಿ ಸಹಿತ ಭಾರೀ ಮಳೆಯಾಗುವುದಾಗಿ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಸಿಲಿಕಾನ್ ಸಿಟಿ ಬೆಂಗಳೂರಲ್ಲಿ ಮಳೆ ಕೊಂಚ ಬಿಡುವು ಕೊಟ್ಟಿತ್ತು. ಆ ಬಳಿಕ ಇಂದು ಮತ್ತೆ ಆರ್ಭಟಿಸಿದೆ. ಇಂದು ಸಂಜೆಯಿಂದ ಬೆಂಗಳೂರಿನ ಹಲವೆಡೆ ಮಳೆಯಾಗಿದೆ. ಇದರ ನಡುವೆ ಮುಂದಿನ ಮೂರು ಗಂಟೆಗಳ ಕಾಲ ಬಿರುಗಾಳಿ ಸಹಿತ ಭಾರೀ ಮಳೆಯಾಗಲಿದೆ ಅಂತ ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಬೆಂಗಳೂರು ಗ್ರಾಮಾಂತರ, ನಗರ ವ್ಯಾಪ್ತಿಯಲ್ಲಿ ಬಿರುಗಾಳಿ ಸಹಿತ ಮಳೆಯಾಗುವಂತ ಮುನ್ಸೂಚನೆಯನ್ನು ನೀಡಿರುವಂತ ಹವಾಮಾನ ಇಲಾಖೆ, ಗುಡುಗು ಸಿಡಿಲು ಸಹಿತ ಮಳೆಯಾಗುವ ನಿರೀಕ್ಷೆಯಿದೆ ಎಂದಿದೆ. ಇತ್ತ ಕರ್ನಾಟಕದ ವಿವಿಧ ಜಿಲ್ಲೆಗಳಲ್ಲೂ ಮುಂಗಾರು ಮಳೆ ಆರ್ಭಟಿಸುತ್ತಿದೆ. ಜೂನ್.23ರವರೆಗೆ ಸಾಧಾರಣ ಮಳೆ, ಬೆಂಗಳೂರಿನಲ್ಲೂ ಸಾಧಾರಣ ಮಳೆಯ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. https://kannadanewsnow.com/kannada/children-should-work-to-increase-the-respect-of-parents-jay-c-kottiyan-president-of-dakshina-kannada-mogaveera-mahasabha/ https://kannadanewsnow.com/kannada/breaking-mother-daughter-body-found-in-farm-pond-in-bengaluru-alleges-husband-murder/
ಶಿವಮೊಗ್ಗ: ಪ್ರಸ್ತುತ ದಿನಗಳಲ್ಲಿ ಮಕ್ಕಳಲ್ಲಿ ಶಿಸ್ತು, ಸಂಯಮ ಕಡಿಮೆಯಾಗುತ್ತಿದೆ. ಮಕ್ಕಳು ಸಂಸ್ಕಾರವನ್ನು ಕಲಿಯುವ ಕೆಲಸ ಆಗಬೇಕಿದೆ. ಆ ಮೂಲಕ ಪೋಷಕರ ಗೌರವ ಹೆಚ್ಚಿಸುವಂತ ಕೆಲಸ ಮಾಡುವಂತೆ ಆಗಲಿ ಎಂಬುದಾಗಿ ದಕ್ಷಿಣ ಕನ್ನಡ ಮೊಗವೀರ ಮಹಾಜನ ಸಂಘದ ಅಧ್ಯಕ್ಷ ಜಯ ಸಿ ಕೋಟ್ಯಾನ್ ಅಭಿಪ್ರಾಯ ಪಟ್ಟಿದ್ದಾರೆ. ಇಂದು ಶಿವಮೊಗ್ಗ ಜಿಲ್ಲೆಯ ಸಾಗರ ನಗರದಲ್ಲಿ ಸಾಗರ ತಾಲ್ಲೂಕು ಮೊಗವೀರ ಮಹಾಜನ ಸಂಘ, ಉಡುಪಿಯ ಅಂಬಲವಾಡಿ ಡಾ.ಜಿ ಶಂಖರ್ ಫ್ಯಾಮಿಲಿ ಟ್ರಸ್ಟ್ ಇವರ ನೇತೃತ್ವದಲ್ಲಿ, ಉಡುಪಿ ಮೊಗವೀರ ಯುವ ಸಂಘಟನೆ, ಉಳ್ಳಾಲದ ಮಾರುತಿ ಜನ ಸೇವಾ ಸಂಘ, ಮಾರುತಿ ಯುವಕ ಸಂಘದ ಸಹಯೋಗದೊಂದಿಗೆ ವಾರ್ಷಿಕ ಮಹಾಸಭೆ ಹಾಗೂ ನೋಟ್ ಬುಕ್, ಸ್ಕಾಲರ್ ಶಿಪ್ ವಿತರಣಾ ಕಾರ್ಯಕ್ರಮ ನಡೆಯಿತು. ಈ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದಂತ ಮೊಗವೀರ ಸಮಾಜದ ಮುಖಂಡ ನಾಡೋಜ. ಜಿ. ಶಂಕರ್ ಶೈಶೈಕ್ಷಣಿಕವಾಗಿ ನಮ್ಮ ಸಮಾಜದವರನ್ನು ಮುಂಚೂಣಿಯಾಗಿ ತರಬೇಕು. ಅನಾರೋಗ್ಯ ಪೀಡಿತ ಸಮುದಾಯದ ಜನರಿಗೆ ಸಹಾಯ ಮಾಡಬೇಕು ಎಂಬುದಾಗಿ ಹೇಳಿದರು. ದಕ್ಷಿಣ ಕನ್ನಡ ಜಿಲ್ಲಾ ಮೊಗವೀರ…
ಮಂಡ್ಯ: ಅನ್ನ ಕೊಡಿ ಅಂದರೆ ಕಂಡ ಕಂಡಲ್ಲಿ ಕನ್ನ ಹಾಕಲಾಗುತ್ತಿದೆ. ಹೌಸಿಂಗ್ ಬೋರ್ಡ್ ಕಮಿಷನ್ ಬೋರ್ಡ್ ಆಗಿದೆ. ಮನಿ ಕೊಟ್ಟರೆ ಮನೆ ಎಂಬುದು ಹೌಸಿಂಗ್ ಬೋರ್ಡ್ನ ಹೊಸ ಸ್ಲೋಗನ್ ಆಗಿದೆ ಎಂದು ವಿಧಾನಸಭೆ ಪ್ರತಿಪಕ್ಷದ ನಾಯಕ ಆರ್.ಅಶೋಕ್ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಮಂಡ್ಯದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ವಿಪಕ್ಷ ನಾಯಕ ಆರ್ ಅಶೋಕ್, ಈ ಕಾಂಗ್ರೆಸ್ ಸರ್ಕಾರ ಬಡವರಿಗೆ ಅನ್ನ ಕೊಡಿ ಅಂದ್ರೆ ಬಡವರ ಮನೆಗೆ ಕನ್ನ ಹಾಕಿದೆ . ಈ ಸರ್ಕಾರದಲ್ಲಿ ಹೌಸಿಂಗ್ ಬೋರ್ಡ್ ಕಲೆಕ್ಷನ್ ಬೋರ್ಡ್ ಆಗಿದೆ. ಮನಿ ಕೊಟ್ರೆ ಮನೆ ಎಂಬ ಹೊಸ ಸ್ಲೋಗನ್ ಬಿಟ್ಟಿದ್ದಾರೆ. ವಸತಿ ಇಲಾಖೆಯಲ್ಲಿ ರಕ್ತ ಹೀರುವ ಜಿಗಣೆಗಳು ಸೇರಿಕೊಂಡಿದೆ. ಬಡವರಿಗೆ ಮನೆ ನೀಡುವ ಬದಲು ಸೇಲ್ ಮಾಡುತ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದರು. ಅಬಕಾರಿ, ವಾಲ್ಮೀಕಿ ನಿಗಮದ ಬಳಿಕ ವಸತಿ ಇಲಾಖೆಯ ಭ್ರಷ್ಟಾಚಾರ ಬಯಲಿಗೆ ಬಂದಿದೆ. “ಮನೆಗಾಗಿ ಕಾಸು” ವಿಷಯ ಬಹಳ ಚರ್ಚಿತವಾಗುತ್ತಿದೆ. ಕಾಂಗ್ರೆಸ್ನವರೇ ಆದ ಶಾಸಕ ಬಿ.ಆರ್.ಪಾಟೀಲ್ ಅವರೇ ವಸತಿ…













