Author: kannadanewsnow09

ಬೆಂಗಳೂರು: ವೈಟ್ನರ್ ಬಳಿದಿದ್ದ ದಾಖಲೆಗಳಿಗೆ ಟಾರ್ಚ್ ಹಾಕಿ ತೋರಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಬಗ್ಗೆ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರು; ಶಿಶುಪಾಲನ ಹಾಗೆ ತಪ್ಪಿನ ತಪ್ಪು ಮಾಡುತ್ತಿದ್ದೀರಿ ಚಾಟಿ ಬೀಸಿದ್ದಾರೆ. ಈ ಬಗ್ಗೆ ಮಾಧ್ಯಮ ಹೇಳಿಕೆ ನೀಡಿರುವ ಅವರು; ವೈಟ್ನರ್ ಅಡಿಯಲ್ಲಿ ಅಡಗಿಸಿಟ್ಟಿದ್ದ ಅಕ್ಷರಗಳಿಗೆ ಟಾರ್ಚ್ ಹಾಕಿ ತಡಕಾಡುತ್ತಿರುವುದು ಈ ರಾಜ್ಯದ ಘನತೆವೆತ್ತ ಮುಖ್ಯಮಂತ್ರಿಗಳಿಗೆ ಶೋಭೆಯಲ್ಲ ಎಂದು ಕಟುವಾಗಿ ಟೀಕಿಸಿದ್ದಾರೆ. ಇದು ಮೂಲ ದಾಖಲೆ, ಮೂಡಾದಲ್ಲಿದೆ. ನಿಮ್ಮ ಬಳಿಗೆ ಹೇಗೆ ಬಂತು? ನಿಮಗೆ ಈ ಮೂಲ‌ ದಾಖಲೆ ತಂದು ಕೊಟ್ಟ ಮಹಾಶಯರು ಯಾರು? ಇಷ್ಟಕ್ಕೂ ಈ ಮೂಲ ದಾಖಲೆ ಮೂಡಾದಲ್ಲಿದೆಯಾ? ಅಥವಾ ನಿಮ್ಮ ಮನೆಯಲ್ಲಿದೆಯಾ? ಈ ಮೂಲ ದಾಖಲೆಗೆ ಟಾರ್ಚ್ ಹಾಕಿದವರು ಯಾರು? ನೀವಾ..? ಅಥವಾ ಇನ್ನಾರಾದರೂ ಇದ್ದಾರಾ? ಎಂದು ಪ್ರಶ್ನಿಸಿದ್ದಾರೆ ಅವರು. ನನ್ನ ಪ್ರಶ್ನೆ ಇಷ್ಟೇ, ಈ ದಾಖಲೆಯನ್ನೇಕೆ ನೀವು ಕೋರ್ಟ್‌ಗೆ ಕೊಟ್ಟಿಲ್ಲ!? ನ್ಯಾಯಾಲಯವನ್ನೂ ದಾರಿ ತಪ್ಪಿಸುತ್ತಿದ್ದೀರಿ. ಜನರನ್ನು ದಿಕ್ಕು ತಪ್ಪಿಸಿದ ಹಾಗೇ ನ್ಯಾಯಾಲಯಕ್ಕೂ ಸುಳ್ಳು ಮಾಹಿತಿ ಕೊಟ್ಟು ಅಲ್ಲಿಯೂ…

Read More

ಬೆಂಗಳೂರು: ರಾಜ್ಯ ಸರ್ಕಾರದಿಂದ ರಾಜ್ಯದ ನಿವೃತ್ತ ಪೊಲೀಸ್ ಅಧಿಕಾರಿ, ಸಿಬ್ಬಂದಿಗಳಿಗೆ ಸಿಹಿಸುದ್ದಿಯನ್ನು ನೀಡಲಾಗಿದೆ. ಅದೇನೆಂದರೇ, ನಿವೃತ್ತ ಪೊಲೀಸ್ ಅಧಿಕಾರಿ, ಸಿಬ್ಬಂದಿಗಳಿಗೂ ಆರೋಗ್ಯ ಯೋಜನೆಯಡಿಯಲ್ಲಿ ಆಸ್ಪತ್ರೆಗಳನ್ನು ಸೇರ್ಪಡೆಗೊಳಿಸಲಾಗುತ್ತಿದೆ. ಈ ಕುರಿತಂತೆ ಐಜಿಪಿ ಡಾ.ಬಿಆರ್ ರವಿಕಾಂತೇಗೌಡ ಅವರು ಆದೇಶ ಹೊರಡಿಸಿದ್ದು, ಅದರಲ್ಲಿ ನಿವೃತ್ತ ಪೊಲೀಸ್ ಅಧಿಕಾರಿ/ಸಿಬ್ಬಂದಿಗಳಿಗೆ ಆರೋಗ್ಯ ಯೋಜನೆಯನ್ನು ಜಾರಿಗೆ ತರಲಾಗಿರುತ್ತದೆ. ನಿವೃತ್ತ ಪೊಲೀಸ್ ಅಧಿಕಾರಿ/ಸಿಬ್ಬಂದಿ ಮತ್ತು ಅವರ ಪತಿ/ಪತ್ನಿ ರವರಿಗೆ ಚಿಕಿತ್ಸೆ ಒದಗಿಸುವ ಸಂಬಂಧ ಈ ಕೆಳಕಂಡ ಆಸ್ಪತ್ರೆಯನ್ನು ನಿವೃತ್ತ ಪೊಲೀಸ್ ಅಧಿಕಾರಿ/ಸಿಬ್ಬಂದಿಗಳಿಗೆ ನಿವೃತ್ತ ಆರೋಗ್ಯ ಯೋಜನೆಯಡಿಯಲ್ಲಿ ಸೇರ್ಪಡೆಗೊಳಿಸಲಾಗಿದೆ ಎಂದು ತಿಳಿಸಿದ್ದಾರೆ. 1. K.S. Health Care, Hosapete Road, Koppal dist ಆರೋಗ್ಯ ಭಾಗ್ಯ ಯೋಜನೆಯಡಿಯಲ್ಲಿ ಸೇವಾನಿರತ ಪೊಲೀಸ್ ಅಧಿಕಾರಿ/ಸಿಬ್ಬಂದಿ ಮತ್ತು ಅವರ ಕುಟುಂಬದವರಿಗೆ ಸಿ.ಜಿ.ಹೆಚ್.ಎಸ್ ದರದಲ್ಲಿ ಚಿಕಿತ್ಸೆ ಒದಗಿಸುತ್ತಿದ್ದೀರಿ. ಅದೇ ರೀತಿ ನಿವೃತ್ತ ಪೊಲೀಸ್ ಅಧಿಕಾರಿ/ಸಿಬ್ಬಂದಿ ಮತ್ತು ಅವರ ಪತಿ/ಪತ್ನಿ ರವರಿಗೆ ಚಿಕಿತ್ಸೆ ಒದಗಿಸುವ ಬಗ್ಗೆ ಸಾಮಾನ್ಯ ವೈದ್ಯಕೀಯ ಚಿಕಿತ್ಸೆ ಪ್ರಕ್ರಿಯೆಗೆ ಗುಷ್ಟ ಮಿತಿ ಒಂದು ವರ್ಷಕ್ಕೆ ಓರ್ವ ಸದಸ್ಯನ…

Read More

ಬೆಂಗಳೂರು: ಗೌರಿ ಹಾಗೂ ಗಣೇಶ ಹಬ್ಬ ಪ್ರಯುಕ್ತ, ಗೌರಿ ಹಾಗೂ ಗಣೇಶ ವಿಗ್ರಹಗಳನ್ನು ಸಾರ್ವಜನಿಕ ಪ್ರದೇಶಗಳಲ್ಲಿ ಪ್ರತಿಷ್ಠಾಪಿಸುವ ಮುನ್ನ ಉತ್ಸವ ಆಯೋಜಕರು ಗಣೇಶ ಪ್ರತಿಷ್ಠಾಪನೆಗೆ ಅಗತ್ಯವಿರುವ ಸ್ಥಳ, ಪೆಂಡಾಲ್, ವಿದ್ಯುತ್ ಸಂಪರ್ಕ ಇನ್ನು ಮುಂತಾದ ವ್ಯವಸ್ಥೆಗಳನ್ನು ಮಾಡಿಕೊಳ್ಳುವ ಮುನ್ನ ಸಂಬಂಧಪಟ್ಟ ಇಲಾಖೆಗಳಿಂದ ಅನುಮತಿ ಪಡೆದು ಕಾರ್ಯಕ್ರಮವನ್ನು ಆಯೋಜಿಸುವುದು. ಗೌರಿ-ಗಣೇಶ ವಿಗ್ರಹಗಳನ್ನು ಪ್ರತಿಷ್ಠಾಪನೆ ಮಾಡುವವರು ವಿಷಕಾರಿ ರಾಸಾಯನಿಕ ಲೋಹದ ಲೇಪದ ಪ್ಲಾಸ್ಟರ್ ಆಫ್ ಪ್ಯಾರೀಸ್ ಅಂತಹ ಪರಿಸರಕ್ಕೆ ಹಾನಿ ಮಾಡುವಂತಹ ಸಾಮಾಗ್ರಿಗಳಿಂದ ತಯಾರಿಸಿದ ವಿಗ್ರಹಗಳನ್ನು ಬಳಸದೆ ಪರಿಸರ ಸ್ನೇಹಿ ಸಾದಾ ಜೇಡಿ ಮಣ್ಣಿನಿಂದ ತಯಾರಿಸಿದ ವಿಗ್ರಹ ಬಳಸುವುದು. ಈ ಬಗ್ಗೆ ಅನುಮತಿ ಪಡೆಯುವ ಮುನ್ನ ರೂ.100 ಗಳ ಛಾಪಾ ಕಾಗದದ ಮೇಲೆ ಮುಚ್ಚಳಿಕೆಯನ್ನು ಸಲ್ಲಿಸುವುದು ಸರ್ಕಾರದ ಆದೇಶದ ಪ್ರಕಾರ ಕಡ್ಡಾಯವಾಗಿದೆ. ಇಲ್ಲವಾದಲ್ಲಿ ನಿಯಂತ್ರಣ ಮಂಡಳಿಯ ಜಲಮಾಲಿನ್ಯ (ತಡೆ ಮತ್ತು ನಿಯಂತ್ರಣ) ಕಾಯ್ದೆ 1974ರ ಪ್ರಕಾರ ಕಲಂ 33(ಆ)ರ ಪ್ರಕಾರ ರೂ.10 ಸಾವಿರ ವರೆಗೂ ದಂಡ ವಿಧಿಸಲಾಗುತ್ತದೆ. ಜೊತೆಗೆ ಜೈಲುವಾಸ ವಿಧಿಸುವುದಾಗಿದೆ ಸಾರ್ವಜನಿಕರಿಗೆ ಹಾಗೂ…

Read More

ಬಳ್ಳಾರಿ : ಗ್ರಾಮೀಣ ಜೆಸ್ಕಾಂ ವ್ಯಾಪ್ತಿಯ 110ಕೆ.ವಿ ಮೋಕಾ-ಮೀನಹಳ್ಳಿ ಮಾರ್ಗದ ಲಿಲೋ ನಿರ್ಮಾಣ ಕಾರ್ಯವನ್ನು ತುರ್ತಾಗಿ ಕೈಗೆತ್ತಿಕೊಳ್ಳುತ್ತಿರುವುದರಿಂದ 110/11ಕೆ.ವಿ ಮೀನಹಳ್ಳಿ, 110/11ಕೆ.ವಿ ಮೋಕಾ ಮತ್ತು 33/11ಕೆ.ವಿ ರ‍್ರಗುಡಿ ಉಪಕೇಂದ್ರದಲ್ಲಿ ವಿದ್ಯುತ್ ಸರಬರಾಜು ಆಗುವ 11ಕೆ.ವಿ ಮಾರ್ಗಗಳಲ್ಲಿ ಆ.27 ರಂದು ಬೆಳಿಗ್ಗೆ 09 ಗಂಟೆಯಿAದ ಸಂಜೆ 05 ಗಂಟೆಯವರೆಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ ಎಂದು ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಮೋಹನ್‌ಬಾಬು ಅವರು ತಿಳಿಸಿದ್ದಾರೆ. ವಿದ್ಯುತ್ ವ್ಯತ್ಯಯವಾಗುವ ಪ್ರದೇಶಗಳು: ಎಫ್-1 ಬಿ.ಡಿ.ಹಳ್ಳಿ ಐಪಿ ಮಾರ್ಗದ ಮೋಕಾ, ಬಿ.ಡಿ.ಹಳ್ಳಿ ಕೃಷಿ ಪ್ರದೇಶಗಳು. ಎಫ್-2 ಜಿ.ಎನ್ ಹಳ್ಳಿ ಐಪಿ ಮಾರ್ಗದ ಗೋಟೂರು, ಕೆ.ಕೆ.ಹಾಳ್, ಮಸೀದಿಪುರ, ವಣೆನೂರು, ಗುಡುದೂರು ಗ್ರಾಮಗಳು. ಎಫ್-4 ಮೋಕಾ, ಶಿವಪುರ ಐಪಿ ಮಾರ್ಗದ ಶಿವಪುರ, ಅಶೋಕನಗರ ಕ್ಯಾಂಪ್, ಕಪ್ಪಗಲ್ಲು, ಸಿರಿವಾರ, ಸಂಗನಕಲ್ಲು, ಚಾಗನೂರು ಕೃಷಿ ಪ್ರದೇಶಗಳು. ಎಫ್-5 ವಾಟರ್ ವರ್ಕ್ಸ್ ಮಾರ್ಗದ ಶಿವಪುರ ವಾಟರ್ ವರ್ಕ್ಸ್. ಎಫ್-12 ಬಸರಕೋಡು ಎನ್.ಜೆ.ವೈ ಮಾರ್ಗದ ಗೋಟೂರು, ಕೆ.ಕೆಹಾಳ್, ಮಸೀದಿಪುರ, ವಣೆನೂರು, ಕರ್ಚೇಡು, ಬಸರಕೋಡು, ಹೀರೆಹಡ್ಲಿಗಿ ಗ್ರಾಮಗಳು. ಎಫ್-13 ಬಸರಕೋಡು…

Read More

ಬೆಂಗಳೂರು: ನಮ್ಮ ಸರ್ಕಾರ ಜಾರಿಗೆ ತಂದಿರುವಂತ ಗ್ಯಾರಂಟಿ ಯೋಜನೆಗಳನ್ನು ಯಾವುದೇ ಕಾರಣಕ್ಕೂ ನಿಲ್ಲಿಸುವುದಿಲ್ಲ ಎಂಬುದಾಗಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಮತ್ತೊಮ್ಮೆ ಸ್ಪಷ್ಟ ಪಡಿಸಿದ್ದಾರೆ. ನಮ್ಮ ಸರ್ಕಾರ ಜಾರಿಗೆ ತಂದಿರುವ ಐದು ಜನಪರ ಗ್ಯಾರಂಟಿಗಳನ್ನು ಯಾವುದೇ ಕಾರಣಕ್ಕೂ ನಿಲ್ಲಿಸುವುದಿಲ್ಲ. ಯಾರೂ ಆತಂಕ ಪಡುವ ಅಗತ್ಯವಿಲ್ಲ. ಶಕ್ತಿ, ಅನ್ನಭಾಗ್ಯ, ಗೃಹಜ್ಯೋತಿ, ಗೃಹಲಕ್ಷ್ಮಿ, ಯುವನಿಧಿ ಯೋಜನೆಗಳು ಮಹಿಳೆಯರಿಗೆ ಸಾಮಾಜಿಕ ಮತ್ತು ಆರ್ಥಿಕವಾಗಿ ಬಲ ತುಂಬುವ ಕಾರ್ಯಕ್ರಮಗಳಾಗಿವೆ ಎಂದಿದ್ದಾರೆ. ರಾಜಕೀಯ ಸ್ವಾತಂತ್ರ್ಯದ ಜೊತೆಗೆ ಸಾಮಾಜಿಕ, ಆರ್ಥಿಕ ಸ್ವಾತಂತ್ರ್ಯ ದೊರೆತಾಗ ಮಾತ್ರ ದೇಶದಲ್ಲಿ ಬಡತನ ತೊಲಗಿಸಲು, ಸಾಮಾಜಿಕ ಸಮಾನತೆ ತರಲು ಸಾಧ್ಯವಾಗುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. https://twitter.com/KarnatakaVarthe/status/1828053206477238714 https://kannadanewsnow.com/kannada/shirur-landslide-centre-releases-additional-relief-funds/ https://kannadanewsnow.com/kannada/bmtc-conductor-vacancy-recruitment-15-merit-list-published-for-verification-of-original-documents/

Read More

ಹೊನ್ನಾವರದಿಂದ ಕೇವಲ 15 ಕಿಲೋ ಮೀಟರ್ ಹಾಗೂ ಮುರ್ಡೇಶ್ವರದಿಂದ 23 ಕಿಲೋ ಮೀಟರ್ ದೂರದಲ್ಲಿರುವ ಈ ಪವಿತ್ರ ಪುಣ್ಯಧಾಮಕ್ಕೆ ಇಡಗುಂಜಿ ಎಂದು ಹೆಸರು ಹೇಗೆ ಬಂತು ಗೊತ್ತೆ. ಇಡಾ ಎಂದರೆ ಎಡ, ಕುಂಜು ಎಂದರೆ ಗಿಡಗಂಟೆಗಳಿಂದ ತುಂಬಿರುವ ಅರಣ್ಯಪ್ರದೇಶ. ಶರಾವತಿಯ ಎಡ ಭಾಗದಲ್ಲಿರುವ ಅರಣ್ಯದ ರಮಣೀಯತೆಗೆ ಮನಸೋತು ನಾರದ ಮರ್ಷಿಗಳು ಈ ಹೆಸರು ಇಟ್ಟರೆಂದು ಸ್ಥಳ ಪುರಾಣ ಹೇಳುತ್ತದೆ. ದೈವಜ್ಞ ಪಂಡಿತ್ ಶ್ರೀ ವಿದ್ಯಾಧರ್ ನಕ್ಷತ್ರಿ ಪ್ರಧಾನ್ ತಾಂತ್ರಿಕ್ ನಿಮ್ಮ ಜೀವನದ ಯಾವುದೇ ಗುಪ್ತ,ಪ್ರೀತಿ-ಪ್ರೇಮ ದಾಂಪತ್ಯ,ವೈವಾಹಿಕ,ವ್ಯವಹಾರಿಕ ಎಂತಹ ಸಮಸ್ಯೆಗಳೇ ಇದ್ದರೂ ಆ ಸಮಸ್ಯೆಗಳಿಗೆ ದೈವಿಕ ವಿಧಿವಿಧಾನದ ಶಾಸ್ತ್ರೋವಾದ ಮಾರ್ಗವನ್ನು ಕೆಲವೇ ಗಂಟೆಯಲ್ಲಿ ಪೋನಿನ ಮೂಲಕ ಶಾಶ್ವತವಾಗಿ ಪರಿಹಾರ ತಿಳಿಸಿಕೊಡುತ್ತಾರೆ ನಿಮ್ಮ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಇವರನ್ನು ಒಮ್ಮೆ ನಂಬಿ ಕರೆ ಮಾಡಿ ಖಂಡಿತಾ ಪರಿಹಾರ ಸಿಗುತ್ತದೆ. ಮೊಬೈಲ್ ನಂ ಶ್ರೀ ವಿದ್ಯಾಧರ್ ನಕ್ಷತ್ರಿ ಪ್ರಧಾನ ತಾಂತ್ರಿಕ ತಪ್ಪದೆ ಕರೆ ಮಾಡಿ 9686268564 ಇತಿಹ್ಯ: ಪ್ರಾಚೀನ ಕಾಲದಲ್ಲಿ ಇಲ್ಲಿ ವಾಲಖಿಲ್ಯಾದಿ ಋಷಿಗಳೂ…

Read More

ಬೆಂಗಳೂರು: ಬಿಎಂಟಿಸಿಯಿಂದ ಕರೆಯಲಾಗಿದ್ದಂತ ನಿರ್ವಾಹಕರ ಹುದ್ದೆ ನೇಮಕಾತಿಗೆ ಸಂಬಂಧಿಸಿದಂತೆ ಮೂಲ ದಾಖಲೆಗಳ ಪರಿಶೀಲನೆಗೆ 1:5ರ ಅರ್ಹತಾ ಪಟ್ಟಿಯನ್ನು ಪ್ರಕಟಿಸಲಾಗಿದೆ. ಈ ಕುರಿತಂತೆ ಬಿಎಂಟಿಸಿಯಿಂದ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಲಾಗಿದ್ದು,  ಕಲ್ಯಾಣ-ಕರ್ನಾಟಕ (371-ಜೆ) ಮೀಸಲಾತಿಯ ಸ್ಥಳೀಯ ವೃಂದದ ನಿರ್ವಾಹಕ ಹುದ್ದೆಗೆ ಅರ್ಜಿ ಸಲ್ಲಿಸಿದ್ದ ಅಭ್ಯರ್ಥಿಗಳು ದಿನಾಂಕ:14/07/2024 ರಂದು ನಡೆದ ಸಾಮಾನ್ಯ ಸಾಮರ್ಥ್ಯ ಪರೀಕ್ಷೆಯಲ್ಲಿ ಗಳಿಸಿದ ಒಟ್ಟು ಅಂಕಗಳ ಶೇಕಡ 75ರಷ್ಟು ಮತ್ತು ಹುದ್ದೆಗೆ ನಿಗಧಿಪಡಿಸಲಾದ ಶೈಕ್ಷಣಿಕ ವಿದ್ಯಾರ್ಹತೆಯಲ್ಲಿ ಗಳಿಸಿದ ಒಟ್ಟು ಅಂಕಗಳ ಶೇಕಡ 25ರಷ್ಟು ಅಂಕಗಳನ್ನು ಸೇರಿಸಿ ಬಂದ ಒಟ್ಟು ಶೇಕಡ ಅಂಕಗಳ ಆಧಾರದ ಮೇಲೆ ಮತ್ತು ನೇರನೇಮಕಾತಿ ಸಂಬಂಧ ಜಾರಿಯಲ್ಲಿರುವ ಸರ್ಕಾರದ ಮೀಸಲಾತಿ ನಿಯಮಾನುಸಾರ ಮೂಲದಾಖಲಾತಿಗಳ ಮತ್ತು ದೇಹದಾರ್ಢ್ಯತೆ ಪರಿಶೀಲನೆಗಾಗಿ 1:5ರ ಅನುಪಾತದಲ್ಲಿ ಅರ್ಹತಾ ಪಟ್ಟಿಯನ್ನು ಪ್ರಕಟಿಸಲಾಗಿದೆ.  371-ಜೆ ಮೀಸಲಾತಿಯ ನಿರ್ವಾಹಕ ಹುದ್ದೆಯ ಅರ್ಹತಾ ಪಟ್ಟಿಯಲ್ಲಿ ಸೇರ್ಪಡೆಗೊಂಡಿರುವ ಮೀಸಲಾತಿವಾರು  ಕೊನೆಯ ಅಭ್ಯರ್ಥಿಯ ಶೇಕಡವಾರು (Cut-Off) ಅಂಕಗಳು ಈ ಕೆಳಕಂಡಂತಿದೆ ಎಂದಿದೆ. ಮೀಸಲಾತಿ ಶೇಕಡವಾರು ಸಾಮಾನ್ಯ ಮಹಿಳಾ ಮೀಸಲು ಗ್ರಾಮೀಣ ಮೀಸಲು ಕನ್ನಡ…

Read More

ಬೆಂಗಳೂರು; ಕೇಂದ್ರ ಸರ್ಕಾರದಿಂದ ಶಿರೂರು ಗುಡ್ಡ ಕುಸಿತ ಪ್ರಕರಣ ಸಂಬಂಧ ಈಗಾಗಲೇ ಪರಿಹಾರವನ್ನು ನೀಡಲಾಗಿತ್ತು. ಈಗ ಮುಂದುವರೆದು ಹೆಚ್ಚುವರಿ ಪರಿಹಾರದ ಹಣವನ್ನು ಬಿಡುಗಡೆ ಮಾಡಲಾಗಿದೆ. ಈ ಕುರಿತಂತೆ ಅಧಿವೇಶನದ ವೇಳೆಯಲ್ಲಿ ಉತ್ತರ ಕನ್ನಡ ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು ಶಿರೂರು ಗುಡ್ಡ ಕುಸಿತ ದುರಂತವನ್ನು ವಿಶೇಷ ಪ್ರಕರಣವೆಂದು ಪರಿಗಣಿಸುವಂತೆ ಮನವಿ ಮಾಡಿದ್ದರು. ಕಾಗೇರಿ ಅವರ ಮನವಿಯನ್ನು ಪುರಸ್ಕರಿಸಿರುವಂತ ಪ್ರಧಾನಮಂತ್ರಿ ಕಾರ್ಯಾಲಯವು, ಶಿರೂರು ಗುಡ್ಡ ಕುಸಿತ ದುರಂತದಲ್ಲಿ ಸಾವನ್ನಪ್ಪಿದವರಿಗೆ ಹೆಚ್ಚುವರಿಯಾಗಿ 2 ಲಕ್ಷ ಪರಿಹಾರವನ್ನು ಬಿಡುಗಡೆ ಮಾಡಲಾಗಿದೆ. ಅಲ್ಲದೇ ಗಾಯಾಳುಗಳಿಗೆ ತಲಾ 50 ಸಾವಿರ ಹೆಚ್ಚುವರಿ ಹಣವನ್ನು ಬಿಡುಗಡೆ ಮಾಡಲಾಗಿದೆ. ಅಂದಹಾಗೇ ಈ ಹಿಂದೆ ಎನ್ ಡಿ  ಆರ್ ಎಫ್ ನಿಧಿಯಿಂದ ಕೇಂದ್ರ ಸರ್ಕಾರದಿಂದ ಪರಿಹಾರವಾಗಿ ಮೃತರ ಕುಟುಂಬಗಳಿಗೆ ತಲಾ 5 ಲಕ್ಷ ಪರಿಹಾರವನ್ನು ನೀಡಲಾಗಿತ್ತು. ಈಗ ಹೆಚ್ಚುವರಿ ಪರಿಹಾರದ ಹಣವನ್ನು ಬಿಡುಗಡೆ ಮಾಡಲಾಗಿದೆ. https://kannadanewsnow.com/kannada/helpline-for-women-call-this-number-in-case-of-emergency-need/ https://kannadanewsnow.com/kannada/state-govt-issues-guidelines-regarding-aadhaar-authentication-in-property-registration/

Read More

ಬೆಂಗಳೂರು: ಕೋಲ್ಕತ್ತಾದಲ್ಲಿ ಮಹಿಳಾ ವೈದ್ಯೆಯ ಮೇಲೆ ಅತ್ಯಾಚಾರ ಕೊಲೆ ಘಟನೆಯ ನಂತ್ರ ರಾಜ್ಯ ಸರ್ಕಾರ ಎಚ್ಚೆತ್ತುಕೊಂಡಿದೆ. ಮಹಿಳೆಯರ ಸುರಕ್ಷತೆಗಾಗಿ ಪೊಲೀಸ್ ಠಾಣೆಗಳಲ್ಲಿ ರಾತ್ರಿ ಪಾಳಿಗೆ ಇಬ್ಬರು ಮಹಿಳಾ ಸಿಬ್ಬಂದಿಗಳನ್ನು ನಿಯೋಜಿಸುವಂತೆ ಆದೇಶಿಸಲಾಗಿತ್ತು. ಈ ಬೆನ್ನಲ್ಲೇ ಮಹಿಳೆಯರ ನೆರವಿಗಾಗಿ ಸಹಾಯವಾಣಿ ಸಂಖ್ಯೆ ಶುರು ಮಾಡಿದೆ. ನಮ್ಮ ಸರ್ಕಾರವು ಮಹಿಳೆಯರ ಸುರಕ್ಷತೆ, ಮಹಿಳಾ ಸಬಲೀಕರಣಕ್ಕೆ ಮೊದಲ ಆದ್ಯತೆಯನ್ನು ನೀಡಿದೆ. ಮಹಿಳೆಯರು ತುರ್ತು ಹಾಗೂ ಅಗತ್ಯ ಸಂದರ್ಭಗಳಲ್ಲಿ 1091 ಅಥವಾ 080 22943225 ಗೆ ಸಂಪರ್ಕಿಸಬಹುದು. https://twitter.com/KarnatakaVarthe/status/1828024149584830932 https://kannadanewsnow.com/kannada/russia-launches-100-missiles-on-ukraine-launches-100-drones/ https://kannadanewsnow.com/kannada/state-govt-issues-guidelines-regarding-aadhaar-authentication-in-property-registration/ https://kannadanewsnow.com/kannada/indian-railways-recruitment-2019-indian-railways-recruitment-2018-for-14298-vacancies-rrb-recruitment-2024/

Read More

ಉಕ್ರೇನ್: ರಷ್ಯಾ ಸೋಮವಾರ ಬೆಳಿಗ್ಗೆ ಉಕ್ರೇನ್ ಮೇಲೆ 100 ಕ್ಕೂ ಹೆಚ್ಚು ಕ್ಷಿಪಣಿಗಳು ಮತ್ತು ಸುಮಾರು 100 ದಾಳಿ ಡ್ರೋನ್ಗಳನ್ನು ಉಕ್ರೇನ್ ಮೇಲೆ ಉಡಾಯಿಸಿತು. ಕನಿಷ್ಠ ಐದು ಜನರು ಸಾವನ್ನಪ್ಪಿದ್ದಾರೆ. ದೇಶಾದ್ಯಂತ ಇಂಧನ ಸೌಲಭ್ಯಗಳ ಮೇಲೆ ದಾಳಿ ನಡೆಸಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ರಷ್ಯಾದ ಪೂರ್ಣ ಪ್ರಮಾಣದ ಆಕ್ರಮಣದ 2-1/2 ವರ್ಷಗಳ ನಂತರ ಕನಿಷ್ಠ 10 ಪ್ರದೇಶಗಳಲ್ಲಿ ವಿದ್ಯುತ್ ಅಥವಾ ಇತರ ನಿರ್ಣಾಯಕ ಮೂಲಸೌಕರ್ಯಗಳನ್ನು ಗುರಿಯಾಗಿಸಿಕೊಂಡು ದಾಳಿ ನಡೆಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದರಿಂದ ಕೈವ್ನ ಕೆಲವು ಭಾಗಗಳು ಸೇರಿದಂತೆ ಹಲವಾರು ಸ್ಥಳಗಳಲ್ಲಿ ವಿದ್ಯುತ್ ಕಡಿತ ಮತ್ತು ನೀರು ಸರಬರಾಜು ಕಡಿತಗಳು ವರದಿಯಾಗಿವೆ. ಮಾರ್ಚ್ನಲ್ಲಿ ಉಕ್ರೇನಿಯನ್ ವಿದ್ಯುತ್ ಗ್ರಿಡ್ ಮೇಲೆ ರಷ್ಯಾ ನಾಟಕೀಯವಾಗಿ ತನ್ನ ದಾಳಿಯನ್ನು ಹೆಚ್ಚಿಸಿತು, ಜನರಿಗೆ ವಿದ್ಯುತ್ ಮತ್ತು ಹೆಚ್ಚು ಬಿಸಿಮಾಡುವ ಚಳಿಗಾಲದಲ್ಲಿ ವ್ಯವಸ್ಥೆಯನ್ನು ಕೆಳಮಟ್ಟಕ್ಕೆ ಇಳಿಸುವ ಸಂಘಟಿತ ಪ್ರಯತ್ನದಂತೆ ಕಾಣುತ್ತದೆ ಎಂದು ಕೀವ್ ಹೇಳಿದ್ದಾರೆ. ಸೋಮವಾರದ ಕ್ಷಿಪಣಿ ಮತ್ತು ಡ್ರೋನ್ ದಾಳಿಯು ವಾರಗಳಲ್ಲಿ ರಷ್ಯಾದ ಅತ್ಯಂತ ತೀವ್ರವಾಗಿದೆ, ರಷ್ಯಾದ…

Read More