Author: kannadanewsnow09

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿಯವರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದಂತ ಸಿಎಂ ಸಿದ್ಧರಾಮಯ್ಯ ಅವರ ಪುತ್ರ ಡಾ.ಯತೀಂದ್ರ ಅವರ ವಿರುದ್ಧ ಚುನಾವಣಾ ಆಯೋಗಕ್ಕೆ ಬಿಜೆಪಿ ದೂರು ನೀಡಿದೆ. ಮಾಜಿ ಪರಿಷತ್ ಸದಸ್ಯ ಅಶ್ವತ್ಥನಾರಾಯಣ ಅವರ ನೇತೃತ್ವದ ನಿಯೋಗವು ರಾಜ್ಯ ಚುನಾವಣಾ ಅಧಿಕಾರಿ ಕಚೇರಿಗೆ ತೆರಳಿ, ಸಿಎಂ ಸಿದ್ಧರಾಮಯ್ಯ ಅವರ ಪುತ್ರ ಡಾ.ಯತೀಂದ್ರ ಸಿದ್ಧರಾಮಯ್ಯ ಅವರ ವಿರುದ್ಧ ದೂರು ನೀಡಿದೆ. ‘ಬಿಜೆಪಿ’ ಅಧಿಕಾರಕ್ಕೆ ಬಂದ್ರೆ ತಾಯಂದಿರು ‘ಗಂಡ-ಮಕ್ಕಳ’ನ್ನ ಕಳೆದುಕೊಳ್ತಾರೆ: ಯತೀಂದ್ರ ವಿವಾದ್ಮಕ ಹೇಳಿಕೆ ಮೈಸೂರು: ದೇಶದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದ್ರೆ ಎಲ್ಲಾ ಧರ್ಮದ ತಾಯಂದಿರು ಗಂಡ-ಮಕ್ಕಳನ್ನು ಕಳೆದುಕೊಳ್ತಾರೆ ಎಂಬುದಾಗಿ ಡಾ.ಯತೀಂದ್ರ ಸಿದ್ಧರಾಮಯ್ಯ ವಿವಾದಾತ್ಮಕ ಹೇಳಿಕೆ ನೀಡಿದ್ದರು. ಮೈಸೂರಿನಲ್ಲಿ ಸಿಎಂ ಸಿದ್ಧರಾಮಯ್ಯ ಅವರ ಪುತ್ರ ಡಾ.ಯತೀಂದ್ರ ಅವರು ಪ್ರಧಾನಿ ಮೋದಿ ಅವರನ್ನು ಟೀಕಿಸೋ ಭರದಲ್ಲಿ ವಿವಾದಾತ್ಮಕ ಹೇಳಿಕೆಯನ್ನು ನೀಡುವ ಮೂಲಕ, ಜನರ ಟೀಕೆಗೆ ಗುರಿಯಾಗಿದ್ದರು. ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ಕಳೆದ 70 ವರ್ಷಗಳಿಂದ ರಾಜ್ಯದಲ್ಲಿ ವಿವಿಧ ಪಕ್ಷಗಳು ಆಡಳಿತ ನಡೆಸಿದ್ದಾವೆ. ಯಾವಾಗ್ಲೂ ಹಿಂದೂಗಳಿಗೆ…

Read More

ಬೆಂಗಳೂರು: “ಬೆಲೆ ಏರಿಕೆ, ಜಿಎಸ್ಟಿ ಹೊರೆ, ನಿರುದ್ಯೋಗ ಕೇಂದ್ರ ಬಿಜೆಪಿ ಸರ್ಕಾರ ಹಾಗೂ ಪ್ರಧಾನಿ ನರೇಂದ್ರ ಮೋದಿ ಅವರ ನಿಜವಾದ ಗ್ಯಾರಂಟಿ” ಎಂದು ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಡಿ.ಕೆ. ಸುರೇಶ್ ವಾಗ್ದಾಳಿ ನಡೆಸಿದರು. ಗ್ರಾಮಾಂತರ ಕ್ಷೇತ್ರ ವ್ಯಾಪ್ತಿಯ ಬೆಂಗಳೂರು ದಕ್ಷಿಣದ ವಿವಿಧೆಡೆ ಭಾನುವಾರ ಪ್ರಚಾರ ನಡೆಸಿದ ಸುರೇಶ್ ಅವರು, “ಈ ಬಾರಿ ಲೋಕಸಭೆ ಚುನಾವಣೆಯಲ್ಲಿ ನಿಮ್ಮೆಲ್ಲರ ಆಶೀರ್ವಾದ ಕೇಳಲು ನಾನು ಬಂದಿದ್ದೇನೆ. ಈ ದೇಶದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದು 10 ವರ್ಷವಾಗಿದೆ. ರಾಜ್ಯದ ಜನರ ಆಶೀರ್ವಾದದಿಂದ ಕಾಂಗ್ರೆಸ್ ಸರ್ಕಾರ ಕರ್ನಾಟಕದಲ್ಲಿ ಅಧಿಕಾರಕ್ಕೆ ಬಂದು 10 ತಿಂಗಳಾಗಿವೆ. ಕಾಂಗ್ರೆಸ್ ಸರ್ಕಾರದ ಈ ಹತ್ತು ತಿಂಗಳ ಸಾಧನೆ ಏನು, ಕೇಂದ್ರ ಬಿಜೆಪಿ ಸರ್ಕಾರ 10 ವರ್ಷಗಳ ಸಾಧನೆ ಏನು ಎಂಬುದನ್ನು ಈ ಚುನಾವಣೆಯಲ್ಲಿ ಚರ್ಚೆ ಮಾಡಬೇಕು ಎಂದರು. ನೀವೆಲ್ಲರೂ ಟಿವಿಗಳಲ್ಲಿ ಕಾಂಗ್ರೆಸ್ ನ ಐದು ಗ್ಯಾರಂಟಿ ಹಾಗೂ ಮೋದಿ ಗ್ಯಾರಂಟಿ ಬಗ್ಗೆ ಜಾಹೀರಾತು ನೋಡುತ್ತಿದ್ದೀರಿ. ಇಲ್ಲಿರುವ ಜನರ ಪೈಕಿ ಮೋದಿ ಗ್ಯಾರಂಟಿ ಎಷ್ಟು…

Read More

ಬೆಂಗಳೂರು: ಹಾಪ್‌ಕಾಮ್ಸ್ ರೈತರು ಹಾಗೂ ನೌಕರರ ಸಂಘ, ಕರ್ನಾಟಕ ರಾಜ್ಯ ನೇಕಾರರ ಸಮುದಾಯಗಳ ಸಮ್ಮಿಲನ ವೇದಿಕೆ ಹಾಗೂ ರಾಜ್ಯ ಆರ್ಯ ವೈಶ್ಯ ಸಮುದಾಯದವರು ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಸೌಮ್ಯ ರೆಡ್ಡಿಗೆ ಬೆಂಬಲ ಘೋಷಿಸಿದ್ದಾರೆ. ಇಂದು ಹಾಪ್‌ಕಾಮ್ಸ್ ರೈತರು ಹಾಗೂ ನೌಕರರ ಸಂಘ ಸಭೆಯನ್ನು ನಡೆಸಿ, ಕಳೆದ 30 ವರ್ಷಗಳಿಂದಲೂ ಹಾಪ್‌ಕಾಮ್ಸ್ ಹಾಗೂ ನೌಕರರ ಬಗ್ಗೆ ವಿಶೇಷ ಕಾಳಜಿ ಮತ್ತು ಪ್ರೀತಿ ತೋರಿ, ಹಾಫ್ ಕಾಮ್ಸ್ ಅಭಿವೃದ್ಧಿಗೆ ನಿರಂತರ ಸಹಕಾರ ನೀಡಿರುವ ಏಕೈಕ ರಾಜಕಾರಣಿ ಅಂದರೆ ಅದು ರಾಮಲಿಂಗಾರೆಡ್ಡಿರವರು, ಅವರ ಕಾರ್ಯವನ್ನು ಸ್ಮರಿಸಿ ಅಖಂಡ ಹಾಪ್ ಕಾಮ್ಸ್ ನೌಕರರು ರಾಮಲಿಂಗಾರೆಡ್ಡಿ ರವರ ಮಗಳಾದ ಸೌಮ್ಯ ರೆಡ್ಡಿ ಅವರಿಗೆ ಲೋಕಸಭಾ ಚುನಾವಣೆಯಲ್ಲಿ ಬೆಂಬಲ ನೀಡುವುದಾಗಿ ಘೋಷಿಸಿದರು. ಅದರಂತೆ ರಾಜ್ಯ ನೇಕಾರರ ಸಮುದಾಯದ ಒಕ್ಕೂಟದ ಅಧ್ಯಕ್ಷರಾದ ಲಕ್ಷ್ಮಿ ನಾರಾಯಣಪ್ಪ ರವರು ಮಾತನಾಡಿ ರಾಜ್ಯ ಸರ್ಕಾರವು ನೇಕಾರರಿಗೆ ಉಚಿತ ವಿದ್ಯುತ್, ರೂ.2 ಲಕ್ಷದವರೆಗೆ ಶೇ.1 ರೂ ಬಡ್ಡಿ ದರದಲ್ಲಿ ಸಾಲ, ರೂ. 2…

Read More

ಬೆಂಗಳೂರು: ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದಿದ್ದು ಮತಾಂಧ ಶಕ್ತಿಗಳು ಹಿಂದೂಗಳನ್ನು ಕೊಲ್ಲಿಸುವುದಕ್ಕಾ ಎನ್ನುವ ಅನುಮಾನ ಹುಟ್ಟಿಕೊಂಡಿದೆ ಎಂಬುದಾಗಿ ಕರ್ನಾಟಕ ಬಿಜೆಪಿ ಅನುಮಾನ ವ್ಯಕ್ತ ಪಡಿಸಿದೆ. ಈ ಬಗ್ಗೆ ಇಂದು ಎಕ್ಸ್ ಮಾಡಿರುವಂತ ಬಿಜೆಪಿಯು, ಯಾದಗಿರಿಯಲ್ಲಿ ಮತಾಂಧರಿಂದ ದಲಿತನ ಹತ್ಯೆ. ಮತಾಂಧ ಶಕ್ತಿಗಳನ್ನು ಮುಖ್ಯಮಂತ್ರಿ ಸಿದ್ಧರಾಮಯ್ಯ ಮತ್ತು ಡಿಕೆ ಶಿವಕುಮಾರ್ ಅವರು ತಲೆ ಮೇಲೆ ಕೂರಿಸಿಕೊಂಡಿದ್ದಾರೆ. ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದಿದ್ದು ಮತಾಂಧ ಶಕ್ತಿಗಳು ಹಿಂದೂಗಳನ್ನು ಕೊಲ್ಲಿಸುವುದಕ್ಕೆ ಎನ್ನುವ ಅನುಮಾನ ಹುಟ್ಟಿಕೊಂಡಿದೆ ಎಂಬುದಾಗಿ ಕಿಡಿಕಾರಿದೆ. https://twitter.com/BJP4Karnataka/status/1782367969823392201?t=36sij7b-YZDF2D0DkvD7Eg&s=08 ಹಿಂದೂ ಯುವತಿ ನೇಹಾ ಹತ್ಯೆ ಖಂಡಿಸಿ ರಾಜ್ಯಾದ್ಯಂತ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ಬಿಜೆಪಿ ಪ್ರತಿಭಟನೆಗೆ ಪ್ರತಿಯೊಬ್ಬರು ಜಾತಿ, ಧರ್ಮವನ್ನು ಮೀರಿ ಬೆಂಬಲ ವ್ಯಕ್ತಪಡಿಸಿದರು. ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದಾಗಿನಿಂದ ಮತಾಂಧತೆ ಹೆಚ್ಚಾಗಿದೆ. ಜಾತಿ, ಧರ್ಮಗಳ ನಡುವೆ ವಿಷ ಬೀಜ ಬಿತ್ತಲಾಗುತ್ತಿದೆ. ಕಾನೂನು ಸುವ್ಯವಸ್ಥೆ ಸಂಪೂರ್ಣ ಹದಗೆಟ್ಟು ಅರಾಜಕತೆ ಸೃಷ್ಟಿಯಾಗಿರುವುದೇ ಈ ಎಲ್ಲಾ ಅನಾಹುತಗಳಿಗೆ ಕಾರಣ ಎಂದು ಗುಡುಗಿದೆ. https://twitter.com/BJP4Karnataka/status/1782377739183632490 ಬಾಂಧವರ ವೋಟ್‌ ಕಳೆದುಕೊಳ್ಳುವ ಭಯಕ್ಕೆ…

Read More

ಧನುಸ್ಸು ರಾಶಿಯವರಿಗೆ ಈ ಒಂದು ತಾಂತ್ರಿಕ ಅನುಷ್ಠಾನ ಮಾಡಿ ನೋಡಿ ಅದೃಷ್ಟದ ಬದಲಾವಣೆಯಾಗುತ್ತದೆ.. ಮೂಲ ನಕ್ಷತ್ರದವರಿಗೆ ಯೆ,ಯೊ,ಬ,ಬಿ ಇವರಿಗೆ ನೀಮ್ಮಗೆ ಎಷ್ಟೇ ಸಮಸ್ಯೆಗಳು ಇದರು ಬಗ್ಗೆ ಆರಿಯುತ್ತದೆ. ಇದು ಹರಿ ವಾಕ್ ಸತ್ಯ ನೀವು ತಾಮ್ರದ ರ್ಸಪಗಳನು ತೆಗೆದುಕೊಂಡು ಪ್ರತಿ ಮಂಗಳವಾರ ಒಂದು ಶುಕ್ರವಾರ ಒಂದು ಹೀಗೆ 5 ಮಂಗಳವಾರ 5 ಶುಕ್ರವಾರ ಒಂದು ಕೆಂಪು ವಸ್ತ್ರದಲ್ಲಿ ಪೂಜೆ ಮಾಡಿ ಗಂಟು ಕಟ್ಟಿ ಇಡಿ5 ಮಂಗಳವಾರ 5 ಶುಕ್ರವಾರವಾದ ಮೇಲೆ ಯಾವುದಾದರೂ ಪುಣೆಯ ಕ್ಷೇತ್ರ ಶಿವನ ದೇವಾಲಯವೆ ಆಗಬೇಕು ಅಲ್ಲಿ ಹುಂಡಿಗೆ ಹಾಕಿ ಇಲ್ಲವೆಂದರೆ ಎಲ್ಲಾದರೂ ಹೋಮ ಮಾಡುತ್ತಿದರೆ ಹೋಮಕ್ಕೆ ಹಾಕಿ ಮನೆಗೆ ಬಂದು ಬಿಡಿ ನಂತರ ನೋಡಿ ಬದಲಾವಣೆ ನಂತರ ನನಗೆ ತಿಳಿಸಿ. ಶ್ರೀ ಸಿಗಂಧೂರು ಚೌಡೇಶ್ವರಿ ದೇವಿಯನ್ನು ಆರಾಧನೆ ಮಾಡುವ ದೈವಜ್ಞ ವಿದ್ವಾನ್ ವಿದ್ಯಾಧರ್ ತಂತ್ರಿ ದೈವಜ್ಞ ಪ್ರಧಾನ ತಾಂತ್ರಿಕ್ ಹಾಗೂ ಮಾಂತ್ರಿಕರು 9686268564 ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು…

Read More

ಧಾರವಾಡ: ಜಿಎಸ್ಟಿ ಪಾವತಿಸದೇ ವಂಚಿಸಿದಂತ ಆರೋಪ ಕೇಳಿ ಬಂದ ಹಿನ್ನಲೆಯಲ್ಲಿ ಹುಬ್ಬಳ್ಳಿ-ಧಾರವಾಡ ಅವಳಿ ನಗರದ 8 ಕಾಲೇಜುಗಳ ಮೇಲೆ ವಾಣಿಜ್ಯ ತೆರಿಗೆ ಇಲಾಖೆಯ ಅಧಿಕಾರಿಗಳು ದಾಳಿ ಮಾಡಿ, ಮಹತ್ವದ ದಾಖಲೆಗಳನ್ನು ಸಂಗ್ರಹಿಸಿದ್ದಾರೆ. ಏಕಕಾಲಕ್ಕೆ ಹುಬ್ಬಳ್ಳಿ-ಧಾರವಾಡ ಅವಳಿ ನಗರದ 8 ಕಾಲೇಜುಗಳ ಮೇಲೆ ಜಿಎಸ್ಟಿ ವಂಚನೆ ಆರೋಪದ ಹಿನ್ನಲೆಯಲ್ಲಿ ತೆರಿಗೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಧಾರವಾಡದ ಅಣ್ಣಿಗೇರಿ ಕಾಲೇಜು, ಮಹೇಶ ಪಿಯು ಕಾಲೇಜು, ಪ್ರೇರಣಾ ಕಾಲೇಜುಗಳ ಮೇಲೆ ದಾಳಿ ನಡೆಸಲಾಗಿದೆ. ಇವಲ್ಲದೇ ಜಿಎಸ್ಎಸ್ ಆವಂತಿಕಾ ಕೋಚಿಂಗ್ ಸೆಂಟರ್ ಮತ್ತು ಚೇತನಾ ಪಿಯು ಕಾಲೇಜು ಸೇರಿದಂತೆ 8 ಕಾಲೇಜುಗಳ ಮೇಲೆ ವಾಣಿಜ್ಯ ತೆರಿಗೆ ಅಧಿಕಾರಿಗಳು ದಾಳಿ ನಡೆಸಿ, ಮಹತ್ವದ ದಾಖಲೆಗಳನ್ನು ಪರಿಶೀಲನೆಯಲ್ಲಿ ತೊಡಗಿದ್ದಾರೆ. ವಿದ್ಯಾರ್ಥಿಗಳಿಗೆ ಕೋಚಿಂಗ್ ಹೆಸರಿನಲ್ಲಿ ವಿವಿಧ ಪರೀಕ್ಷೆಗಾಗಿ ಸಂಗ್ರಹಿಸಿದಂತ ಹಣದಲ್ಲಿ ಜಿಎಸ್ಟಿ ಕಟ್ಟದೇ ವಂಚನೆ ಮಾಡಿದಂತ ಆರೋಪ ಈ ಕಾಲೇಜುಗಳ ಮೇಲೆ ಕೇಳಿ ಬಂದಿತ್ತು. ಈ ಹಿನ್ನಲೆಯಲ್ಲಿ ವಾಣಿಜ್ಯ ತೆರಿಗೆ ಇಲಾಖೆಯ ಜಾರಿ ವಿಭಾಗದ ಜಂಟಿ ಆಯುಕ್ತ ರವಿಕುಮಾರ್ ನೇತೃತ್ವದಲ್ಲಿ ದಾಳಿ…

Read More

ಬೆಂಗಳೂರು: ನಗರದಲ್ಲಿ ಸಂಚಾರ ನಿಯಮ ಉಲ್ಲಂಘಿಸೋ ವಾಹನ ಸವಾರರಿಗೆ ಸಂಚಾರ ಪೊಲೀಸರು ಬಿಗ್ ಶಾಕ್ ನೀಡಿದ್ದಾರೆ. ವಿಶೇಷ ಕಾರ್ಯಾಚರಣೆ ನಡೆಸಿ, ನಗರದಲ್ಲಿ ಸಂಚಾರ ನಿಯಮ ಉಲ್ಲಂಘಿಸಿದ ವಾಹನ ಸವಾರರಿಂದ ಬರೋಬ್ಬರಿ 19.55 ಕೋಟಿ ದಂಡವನ್ನು ವಸೂಲಿ ಮಾಡಿದ್ದಾರೆ. ಬೆಂಗಳೂರು ನಗರದಲ್ಲಿ ಸಂಚಾರ ನಿಯಮ ರೂಲ್ಸ್ ಬ್ರೇಕ್ ಮಾಡೋರಿಗೆ, ಸಂಚಾರ ಪೊಲೀಸರು ಆಗಾಗ್ಗೆ ಶಾಕ್ ನೀಡ್ತಾ ಇದ್ದಾರೆ. ಈಗ 1 ಲಕ್ಷಕ್ಕೂ ಹೆಚ್ಚು ದಂಡದ ಮೊತ್ತವಿರುವ 123 ವಾಹನಗಳ ಪಟ್ಟಿ ಮಾಡಿ, ವಾಹನ ಮಾಲೀಕರ ಪತ್ತೆಗೆ ನೋಟಿಸ್ ನೀಡಲು ಪೊಲೀಸ್ ಇಲಾಖೆ ಚಿಂತನೆ ನಡೆಸಿದೆ. ಅಲ್ಲದೇ ದಂಡ ಪಾವತಿಸದೇ ಇದ್ದಂತವರ ವಿರುದ್ಧ ಚಾರ್ಜ್ ಶೀಟ್ ಸಲ್ಲಿಸೋದಕ್ಕೂ ನಿರ್ಧಾರ ಕೈಗೊಳ್ಳಲಾಗಿದೆ. ಇನ್ನೂ ಇತ್ತೀಚೆಗೆ ಸಂಚಾರ ನಿಯಮ ಉಲ್ಲಂಘಿಸಿದಂತ 3,71,516 ವಾಹನ ಮಾಲೀಕರಿಂದ ಬರೋಬ್ಬರಿ 19,54,16,400 ದಂಡವನ್ನು ವಸೂಲಿ ಮಾಡಿದ್ದಾರೆ. ಇವುಗಳಲ್ಲಿ 2,742 ಬೈಕ್ ಸವಾರರಿಂದ 3,61,292 ಬಾರಿ ಸಂಚಾರ ನಿಯಮ ಉಲ್ಲಂಘಿಸಿದ್ದಕ್ಕಾಗಿ ಸುಮಾರು 18,76,34,300 ರೂ ದಂಡವನ್ನು ವಸೂಲಿ ಮಾಡಿದ್ದು ಸೇರಿದೆ. https://kannadanewsnow.com/kannada/kannadigas-will-never-tolerate-step-motherly-attitude-of-central-government-randeep-surjewala/ https://kannadanewsnow.com/kannada/computer-literacy-test-important-information-for-state-government-employees/

Read More

ಬೆಂಗಳೂರು: ಪ್ರಧಾನಮಂತ್ರಿಗಳು ಹಾಗೂ ಗೃಹ ಮಂತ್ರಿಗಳು ಮೊದಲು ಒಕ್ಕೂಟ ವ್ಯವಸ್ಥೆಯನ್ನು ಗೌರವಿಸುವುದನ್ನು ಕಲಿಯಬೇಕು. ಕನ್ನಡಿಗರು ಕೇಂದ್ರ ಸರ್ಕಾರದ ಮಲತಾಯಿ ಧೋರಣೆಯನ್ನು ಎಂದಿಗೂ ಸಹಿಸುವುದಿಲ್ಲ ಎಂಬುದಾಗಿ ಕಾಂಗ್ರೆಸ್ ನಾಯಕ ರಣದೀಪ್ ಸುರ್ಜೇವಾಲ ಹೇಳಿದ್ದಾರೆ. ಇಂದು ಎಕ್ಸ್ ಮಾಡಿರುವಂತ ಅವರು, ಇಂದು ನಮ್ಮ ರಾಜ್ಯದ ರೈತರಿಗೆ ಮತ್ತು ಮುಖ್ಯಮಂತ್ರಿ ಸಿದ್ಧರಾಮಯ್ಯ ಹಾಗೂ ಉಪಮುಖ್ಯಮಂತ್ರಿಗಳಾದ ಡಿಕೆ ಶಿವಕುಮಾರ್ ರವರ ನೇತೃತ್ವದ ಕಾಂಗ್ರೆಸ್ ಸರ್ಕಾರದ ರೈತಪರ ಹೋರಾಟಕ್ಕೆ ಜಯ ಸಿಕ್ಕಿದೆ ಎಂಬುದಾಗಿ ತಿಳಿಸಿದ್ದಾರೆ. ರಾಜ್ಯಕ್ಕೆ ಬರಬೇಕಾಗಿದ್ದ 18,172 ಕೋಟಿ ಬರ ಪರಿಹಾರ ತಡೆಯಲು ಷಡ್ಯಂತ್ರ ನಡೆಸಿದ ಮೋದಿ ನೇತೃತ್ವದ ಬಿಜೆಪಿ ಸರ್ಕಾರಕ್ಕೆ ಇಂದು ಮುಖಭಂಗವಾಗಿದೆ. ಬರ ಪರಿಹಾರ ವಿಚಾರವಾಗಿ ನ್ಯಾಯಾಲಯದ ಮೊರೆ ಹೋಗಿದ್ದ ಕರ್ನಾಟಕ ರಾಜ್ಯ ಸರ್ಕಾರಕ್ಕೆ ಜಯ ಸಿಕ್ಕಿದ್ದು ಈ ಮೂಲಕ ಪ್ರಧಾನಮಂತ್ರಿಗಳು ಗೃಹಮಂತ್ರಿಗಳ ರೈತ ವಿರೋಧಿ ನಿಲುವಿಗೆ ನ್ಯಾಯಾಲಯವು ತಕ್ಕ ಪಾಠ ಕಲಿಸಿದೆ ಎಂದು ಹೇಳಿದ್ದಾರೆ. https://twitter.com/rssurjewala/status/1782340434892894231?t=V8ENsJI6Du1sOJLtqkWNaQ&s=08 https://kannadanewsnow.com/kannada/delhi-court-rejects-arvind-kejriwals-plea-for-daily-doctor-consultation/ https://kannadanewsnow.com/kannada/computer-literacy-test-important-information-for-state-government-employees/

Read More

ನವದೆಹಲಿ: ವೈದ್ಯರೊಂದಿಗೆ ಖಾಸಗಿ ಸಮಾಲೋಚನೆ ನಡೆಸಬೇಕೆಂಬ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ಮನವಿಯನ್ನು ದೆಹಲಿ ನ್ಯಾಯಾಲಯ ಸೋಮವಾರ ತಿರಸ್ಕರಿಸಿದೆ. ಅವರಿಗೆ ಅಗತ್ಯ ವೈದ್ಯಕೀಯ ಚಿಕಿತ್ಸೆ ನೀಡುವಂತೆ ತಿಹಾರ್ ಜೈಲಿಗೆ ಸೂಚಿಸಿದೆ. ವಿಶೇಷ ಸಿಬಿಐ ನ್ಯಾಯಾಧೀಶೆ ಕಾವೇರಿ ಬವೇಜಾ ಈ ತೀರ್ಪು ನೀಡಿದ್ದಾರೆ. ಆಲ್ ಇಂಡಿಯಾ ಇನ್ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸಸ್ (ಏಮ್ಸ್) ರಚಿಸಿದ ವೈದ್ಯಕೀಯ ಮಂಡಳಿಯು ಇನ್ಸುಲಿನ್ ನೀಡುವ ಬಗ್ಗೆ ನಿರ್ಧಾರ ತೆಗೆದುಕೊಳ್ಳುತ್ತದೆ ಎಂದು ರೂಸ್ ಅವೆನ್ಯೂ ನ್ಯಾಯಾಲಯ ಹೇಳಿದೆ. “ವೈದ್ಯಕೀಯ ಮಂಡಳಿಯು ಆಹಾರ ಮತ್ತು ವ್ಯಾಯಾಮ ಯೋಜನೆಯನ್ನು ಸಹ ಸೂಚಿಸುತ್ತದೆ” ಎಂದು ನ್ಯಾಯಾಲಯ ಹೇಳಿದೆ. ಇದಕ್ಕೂ ಮುನ್ನ ಭಾನುವಾರ, ತಿಹಾರ್ ಆಡಳಿತವು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ಏಮ್ಸ್ನ ಹಿರಿಯ ತಜ್ಞರೊಂದಿಗೆ ವಿಡಿಯೋ ಕಾನ್ಫರೆನ್ಸ್ ಆಯೋಜಿಸಿತ್ತು. ಈ ಸಮಯದಲ್ಲಿ “ಇನ್ಸುಲಿನ್ ವಿಷಯವನ್ನು ಕೇಜ್ರಿವಾಲ್ ಎತ್ತಲಿಲ್ಲ ಅಥವಾ ವೈದ್ಯರು ಸೂಚಿಸಲಿಲ್ಲ” ಎಂದು ಜೈಲಿನ ಅಧಿಕಾರಿಗಳು ತಿಳಿಸಿದ್ದಾರೆ. ಮಧುಮೇಹದಿಂದ ಬಳಲುತ್ತಿರುವ ಕೇಜ್ರಿವಾಲ್ ಅವರಿಗೆ ಇನ್ಸುಲಿನ್ ನೀಡಲು ತಿಹಾರ್ ಆಡಳಿತ ನಿರಾಕರಿಸಿದೆ ಎಂದು…

Read More

ನವದೆಹಲಿ: ವಿವಿಧ ಸಾಮಾಜಿಕ ಮಾಧ್ಯಮ ಪ್ಲಾಟ್ಫಾರ್ಮ್ಗಳಲ್ಲಿ ಪ್ರಸಾರವಾಗುತ್ತಿದ್ದ ಮತ್ತು ಅಮುಲ್ ಹಾಲಿನ ಗುಣಮಟ್ಟದ ಬಗ್ಗೆ ಕಳವಳಗಳನ್ನು ಹುಟ್ಟುಹಾಕಿದ ವೈರಲ್ಗೆ ಪ್ರತಿಕ್ರಿಯೆಯಾಗಿ, ಡೈರಿ ಕಂಪನಿಯು ಸಾರ್ವಜನಿಕ ಹಿತದೃಷ್ಟಿಯಿಂದ ಹೇಳಿಕೆಯನ್ನು ಬಿಡುಗಡೆ ಮಾಡಿದೆ.  ವೀಡಿಯೊವನ್ನು “ನಕಲಿ ಪೋಸ್ಟ್” ಎಂದು ವಿವರಿಸಿದ ಅಮುಲ್, ಆರೋಪಗಳನ್ನು ನಿರಾಕರಿಸಿತು. “ತಪ್ಪು ಮಾಹಿತಿಯನ್ನು ಸೃಷ್ಟಿಸಲು ಮತ್ತು ಗ್ರಾಹಕರಲ್ಲಿ ಅನಗತ್ಯ ಭಯ ಮತ್ತು ಕಾಳಜಿಯನ್ನು ಹರಡಲು” ಇದನ್ನು ಕುಶಲತೆಯಿಂದ ಬಳಸಲಾಗಿದೆ ಎಂದು ಪ್ರತಿಪಾದಿಸಿತು. ಕಂಪನಿಯ ಹೇಳಿಕೆಯು ವೈರಲ್ ವೀಡಿಯೊ ಎತ್ತಿದ ಕಳವಳಗಳನ್ನು ಪರಿಹರಿಸುವ ಗುರಿಯನ್ನು ಹೊಂದಿದೆ. ತನ್ನ ಉತ್ಪನ್ನಗಳಲ್ಲಿ ಗುಣಮಟ್ಟದ ಅತ್ಯುನ್ನತ ಮಾನದಂಡಗಳನ್ನು ಕಾಪಾಡಿಕೊಳ್ಳುವ ಬದ್ಧತೆಯನ್ನು ಪುನರುಚ್ಚರಿಸುತ್ತದೆ. ಈ ವೀಡಿಯೊ 2019 ರ ಹಿಂದಿನದು ಮತ್ತು ಮತ್ತೆ ಕಾಣಿಸಿಕೊಂಡಿದೆ. ವೀಡಿಯೊದ ಸ್ಕ್ರೀನ್ಶಾಟ್ ಅನ್ನು ಹಂಚಿಕೊಂಡ ಅಮುಲ್, “ಅಮುಲ್ ಹಾಲಿಗೆ ಸಂಬಂಧಿಸಿದಂತೆ ವಾಟ್ಸಾಪ್ ಮತ್ತು ಸಾಮಾಜಿಕ ಮಾಧ್ಯಮ ಪ್ಲಾಟ್ಫಾರ್ಮ್ಗಳಲ್ಲಿ ವೀಡಿಯೊವನ್ನು ಫಾರ್ವರ್ಡ್ ಮಾಡಲಾಗುತ್ತಿದೆ. ಈ ವೀಡಿಯೊವನ್ನು 2019 ರಲ್ಲಿ ಚಿತ್ರೀಕರಿಸಲಾಗಿದೆ. ಏಕೆಂದರೆ ವೀಡಿಯೊದಲ್ಲಿ ತೋರಿಸಲಾದ ಪ್ಯಾಕೇಜಿಂಗ್ ದಿನಾಂಕದಿಂದ 14 ಡಿಸೆಂಬರ್ 2019 ಎಂದು ನೋಡಬಹುದು…

Read More