Subscribe to Updates
Get the latest creative news from FooBar about art, design and business.
Author: kannadanewsnow09
ಬೆಂಗಳೂರು: ಡೆಂಗ್ಯೂ, ಮಲೇರಿಯಾದಂತಹ ಸಾಂಕ್ರಾಮಿಕ ರೋಗ ಹರಡುವ ಈಡಿಸ್ ಸೊಳ್ಳೆಗಳಿಗೆ ಖೆಡ್ಡ ತೋಡಲು ಆರೋಗ್ಯ ಇಲಾಖೆ ಹಾಗೂ ಬಿಬಿಎಂಪಿ ವಿಭಿನ್ನ ಪ್ರಯತ್ನಕ್ಕೆ ಕೈಹಾಕಿದೆ. ಸೊಳ್ಳೆಗಳನ್ನ ಆಕರ್ಷಿಸಿ ನಾಶಪಡಿಸುವ ಓವಿ ಟ್ರ್ಯಾಪ್ ಸಾಧನಗಳನ್ನ ಬೆಂಗಳೂರಿನ ಗೋಪಾಲಪುರದಲ್ಲಿ ಅಳವಡಿಸಲಾಗಿದ್ದು, ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಇಂದು ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಪ್ರಾಯೋಗಿಕವಾಗಿ ಬೆಂಗಳೂರಿನ ಗೋಪಾಲಪುರದಲ್ಲಿ 120 ಓವಿ ಟ್ರ್ಯಾಪ್ ಸಾಧನಗಳನ್ನ ಮನೆ ಮನೆಗಳಿಗೆ ಅಳವಡಿಸಲಾಗಿದೆ. ಓವಿ ಟ್ರ್ಯಾಪ್ ಬಯೋ ಸಾಧನವಾಗಿದ್ದು, ಈಡಿಸ್ ಸೊಳ್ಳೆಗಳನ್ನ ಆಕರ್ಷಿಸಿ ನಾಶಪಡಿಸುತ್ತದೆ. ಬಿಬಿಎಂಪಿ ಹಾಗೂ ಆರೋಗ್ಯ ಇಲಾಖೆ ಸೊಳ್ಳೆಗಳು ಹೆಚ್ಚಿರೋ ಕಡೆ ಈ ಸಾಧನ ಅಳವಡಿಸುವ ಮೂಲಕ ಡೆಂಗ್ಯೂ ನಿಯಂತ್ರಣಕ್ಕೆ ತರುವ ನಿಟ್ಟಿನಲ್ಲಿ ಯೋಜನೆ ರೂಪಿಸಿವೆ. ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಬಳಿಕ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಈಡಿಸ್ ಸೊಳ್ಳೆಗಳನ್ನ ನಾಶಪಡಿಸುವ ಬಯೋ ಸಾಧನಗಳನ್ನ ಪ್ರಾಯೋಗಿಕವಾಗಿ ಬಳಕೆ ಮಾಡುತ್ತಿದ್ದೇವೆ.. ಓವಿ ಟ್ರ್ಯಾಪ್ ಸಾಧನಗಳಿಂದ ಈಡಿಸ್ ಸೊಳ್ಳೆಗಳ ನಿಯಂತ್ರಣ ಚೆನ್ನಾಗಿ ಆದರೆ ಡೆಂಗ್ಯೂ, ಮಲೇರಿಯಾ, ಝೀಕಾದಂತಹ ಸಾಂಕ್ರಾಂಮಿಕ ರೋಗಗಳನ್ನೂ…
ನಮ್ಮ ಮನೆಯಲ್ಲಿ ಬೆಳಗ್ಗೆ ಮತ್ತು ಸಂಜೆ ದೀಪ ಹಚ್ಚುವುದು ಸಂಪ್ರದಾಯ. ದಿನಕ್ಕೆರಡು ಬಾರಿ ದೀಪ ಹಚ್ಚಲು ಸಾಧ್ಯವಾಗದವರು ಕೂಡ ಒಮ್ಮೆಯಾದರೂ ದೀಪ ಹಚ್ಚುತ್ತಾರೆ. ದಿನವೂ ದೀಪ ಹಚ್ಚಲು ಸಾಧ್ಯವಾಗದವರೂ ವಾರದ ಪ್ರಮುಖ ದಿನಗಳಾದ ಮಂಗಳವಾರ ಮತ್ತು ಶುಕ್ರವಾರದಂದು ದೀಪವನ್ನು ಹಚ್ಚುತ್ತಾರೆ. ಬೆಳಕಿಲ್ಲದ ಮನೆ ಸುಭಿಕ್ಷವಲ್ಲ ಎಂಬ ಮಾತನ್ನೂ ಕೇಳಿದ್ದೇವೆ. ಈ ಆಧ್ಯಾತ್ಮಿಕ ಪೋಸ್ಟ್ನಲ್ಲಿ, ನಮ್ಮ ಸಂಪತ್ತು ಮತ್ತು ಸಮೃದ್ಧಿಯನ್ನು ಸುಧಾರಿಸಲು ನಾವು ಬೆಳಗಿಸಬೇಕಾದ ದೀಪದ ಬಗ್ಗೆ ನಾವು ನೋಡಲಿದ್ದೇವೆ . ಶ್ರೀ ಸಿಗಂದೂರು ಚೌಡೇಶ್ವರಿ ಜ್ಯೋತಿಷ್ಯ ಪೀಠ ನಂ 1ಕೇರಳ ಕೊಳ್ಳೇಗಾಲದ ಮಹಾ ಮಾಂತ್ರಿಕ ಜ್ಯೋತಿಷ್ಯರು ವಿದ್ವಾನ್ ವಿದ್ಯಾಧರ್ ನಕ್ಷತ್ರಿ ತಂತ್ರಿ ನಂ:- 9686268564. ನಂ 1ವಶೀಕರಣ ಸ್ಪೆಷಲಿಸ್ಟ್ ಒಂದು ಕರೆಯಲ್ಲಿ ಪರಿಹಾರ ತಿಳಿಸುತ್ತಾರೆ ತಾವು ಎಷ್ಟೋ ಜ್ಯೋತಿಷ್ಯರಲ್ಲಿ ಕೇಳಿಯು ಪರಿಹಾರ ಸಿಗದೇ ಮನನೊಂದಿದ್ದರೆ ಇಲ್ಲಿ ಪರಿಹಾರ ಶತಸಿದ್ಧ ನಿಮ್ಮ ಸಮಸ್ಯೆಗಳಾದ ಅತ್ತೆ-ಸೊಸೆ ಕಿರಿಕಿರಿ, ಪ್ರೀತಿಯಲ್ಲಿ ನಂಬಿ ಮೋಸ, ಇಷ್ಟ ಪಟ್ಟವರು ನಿಮ್ಮಂತೆ ಆಗಲು, ಗಂಡ ಹೆಂಡತಿ ಕಿರಿಕಿರಿ, ಮದುವೆಯಲ್ಲಿ ಅಡೆತಡೆ,…
ಮಂಡ್ಯ: ಬೆಂಗಳೂರಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಖೈದಿಗಳಿಗೆ ಪಂಚತಾರ ವ್ಯವಸ್ಥೆ ಇದೆ. ಈಗ ದರ್ಶನ್ ವಿಚಾರದಲ್ಲಿ ಅದು ಪ್ರಚಾರಕ್ಕೆ ಬಂದಿದೆ ಎಂಬುದಾಗಿ ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ಗಂಭೀರ ಆರೋಪ ಮಾಡಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ಜೈಲಿನ ವ್ಯವಸ್ಥೆ ಹೊಸದಾಗಿ ಆಗಿಲ್ಲ, ಹಿಂದಿನಿಂದಲೂ ನಡೆಯುತ್ತಾ ಇದೆ. ಹಿಂದೆ ಡಿಜಿ ಮತ್ತು ಡಿಸಿಪಿ ನಡುವೆ ದೊಡ್ಡ ಗಲಾಟೆ ಆಗಿತ್ತು. ತನಿಖೆ ನಡೆಯಬೇಕು ಎಂದು ಗಲಾಟೆ ಆಗಿತ್ತು. ಪರಪ್ಪನ ಅಗ್ರಹಾರದಲ್ಲಿರುವ ಖೈದಿಗಳಿಗೆ ಪಂಚತಾರ ವ್ಯವಸ್ಥೆ ಇದೆ. ಈಗ ದರ್ಶನ್ ವಿಚಾರದಲ್ಲಿ ಅದು ಪ್ರಚಾರಕ್ಕೆ ಬಂದಿದೆ. ಸರ್ಕಾರ ಆ ಖೈದಿಗಳನ್ನು ಬೇರೆ ಕಡೆಗೆ ವರ್ಗಾಯಿಸಬೇಕು ಎಂದು ತೀರ್ಮಾನ ಮಾಡ್ತಾ ಇದ್ಯಂತೆ. ಈ ಸರ್ಕಾರದ ಜನರಿಗೆ ನಂಬಿಕೆ ಬರಲು ಸಾಧ್ಯ ಇಲ್ಲ. ರಾಜ್ಯದಲ್ಲಿ ಸರ್ಕಾರವೇ ಇಲ್ಲ ಎಂಬುದಾಗಿ ಕಿಡಿಕಾರಿದರು. ರಾಜ್ಯದಲ್ಲಿ ಆಡಳಿತ ಎನ್ನುವ ನಡವಳಿಕೆ ಇಲ್ಲ. ಭ್ರಷ್ಟಾಚಾರದ ಬಗ್ಗೆ ಬೀದಿ ಬೀದಿಯಲ್ಲಿ ಮಾತಾಡಿಕೊಂಡು ಇರುವ ಕೆಲಸ ಮಾಡ್ತಾ ಇದ್ದಾರೆ. ಸರ್ಕಾರದಲ್ಲಿ ಮಂತ್ರಿಗಳಿಗೆ ಕೆಲಸವಿಲ್ಲ. ಸಿಎಂಗೆ…
ಬೆಂಗಳೂರು : ಕಾಂಗ್ರೆಸ್ ಶಾಸಕರಿಗೆ ಹಣ ನೀಡುತ್ತೇವೆಂದು ಮುಂದೆ ಬಂದ ಬಿಜೆಪಿ ನಾಯಕರು ಯಾರೆಂದು ಸರಿಯಾಗಿ ತಿಳಿಸಲಿ. ಇಲ್ಲವಾದರೆ ಇದು ಹಿಟ್ ಆಂಡ್ ರನ್ ಆಗುತ್ತದೆ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ ಹೇಳಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಸರ್ಕಾರ ಮುಡಾ ಮತ್ತು ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣದಲ್ಲಿ ಮುಳುಗಿರುವುದರಿಂದ ಸರ್ಕಾರ ಉಳಿಸಿಕೊಳ್ಳಲು ಶಾಸಕರಿಗೆ ಬೇರೆ ದಾರಿ ಇಲ್ಲ. ಇದಕ್ಕಾಗಿ ಬಿಜೆಪಿ ವಿರುದ್ಧ ಆಪಾದನೆ ಮಾಡಲಾಗಿದೆ. ಜನರ ಮನಸ್ಸನ್ನು ಬೇರೆಡೆ ಸೆಳೆಯುವ ಕುತಂತ್ರವಿದು. ಸರ್ಕಾರ ಬೀಳಿಸಲು ಬಿಜೆಪಿ ಯಾವುದೇ ಪ್ರಯತ್ನ ಮಾಡುತ್ತಿಲ್ಲ ಎಂದು ಈಗಾಗಲೇ ಸ್ಪಷ್ಟಪಡಿಸಲಾಗಿದೆ. ಅವರ ಪಕ್ಷದವರೇ ಸರ್ಕಾರ ಬೀಳಿಸಲು ಮುಂದಾಗಿದ್ದಾರೆ ಎಂದರು. ಕಾಂಗ್ರೆಸ್ ಶಾಸಕರ ಬಳಿ ಬಂದು ಮಾತಾಡಿದ ಬಿಜೆಪಿ ನಾಯಕರು ಯಾರು ಎಂದು ಕಾಂಗ್ರೆಸ್ ನಾಯಕರು ಸ್ಪಷ್ಟವಾಗಿ ತಿಳಿಸಲಿ. ಗ್ಯಾರಂಟಿಗಳನ್ನು ತೆಗೆದುಹಾಕಬೇಕೆಂದು ಶಾಸಕರೇ ಒತ್ತಾಯಿಸುತ್ತಿದ್ದಾರೆ. ಸರ್ಕಾರದಲ್ಲಿ ಹಣವಿಲ್ಲದೆ, ಮದ್ಯದ ತೆರಿಗೆಯನ್ನು ಮೂರನೇ ಬಾರಿಗೆ ಏರಿಕೆ ಮಾಡಲು ಪ್ರಯತ್ನ ಶುರುವಾಗಿದೆ. ನೀರಿನ ದರ ಹಾಗೂ ಬಸ್ ಟಿಕೆಟ್ ದರ ಹೆಚ್ಚಿಸಲು…
ಬೆಂಗಳೂರು: ನಗರದ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಬಹುದೊಡ್ಡ ಭ್ರಷ್ಟಾಚಾರವನ್ನೇ ಖೈದಿಯೊಬ್ಬ ಬಿಚ್ಚಿಟ್ಟಿದ್ದಾನೆ. ಜೈಲಲ್ಲ ಅದು ಸ್ವರ್ಗ. ದುಡ್ಡು ಕೊಟ್ಟರೇ ಎಲ್ಲವೂ ಸಿಗುತ್ತದೆ. ಏನು ಬೇಕಾದ್ರೂ ವ್ಯವಸ್ಥೆ ಮಾಡುತ್ತಾರೆ ಎಂಬುದಾಗಿ ಬಿಡುಗಡೆಯಾದಂತ ಖೈದಿಯೊಬ್ಬ ಸ್ಪೋಟಕ ಮಾಹಿತಿ ಬಿಚ್ಚಿಟ್ಟಿದ್ದಾನೆ. ಈ ಬಗ್ಗೆ ಮಾಧ್ಯಮಗಳಿಗೆ ಹೆಸರು ಹೇಳಲು ಇಚ್ಚಿಸದಂತ ಬಿಡುಗಡೆಯಾದಂತ ಖೈದಿಯೊಬ್ಬ ಮಾತನಾಡಿದ್ದು, ಪರಪ್ಪನ ಅಗ್ರಹಾರದಲ್ಲಿ ಭ್ರಷ್ಟಾಚಾರ ತಾಂಡವವಾಡುತ್ತಿದೆ. ಅಲ್ಲಿ ಏನು ಬೇಕಾದ್ರೂ ವ್ಯವಸ್ಥೆ ಮಾಡ್ತಾರೆ. ಅದಕ್ಕೆ ದುಡ್ಡು ಕೊಡಬೇಕು ಎಂದರು. ಸಿಗರೇಟ್, ಗಾಂಜಾ, ಗುಟ್ಕವೂ ಪರಪ್ಪನ ಅಗ್ರಹಾರ ಜೈಲಿನಲ್ಲಿ ಸಿಗುತ್ತೆ. ಮೊಬೈಲ್ ಪೋನ್ ಅಂತೂ ಎಲ್ಲರೂ ಬಳಕೆ ಮಾಡ್ತಾರೆ. ಚಿಕನ್ ಬೇಕಾದವರಿಗೆ ಚಿಕನ್ ಮಾಡಿಕೊಡ್ತಾರೆ. ಡ್ರಗ್ಸ್ ಬೇಕಾದವರಿಗೆ ಅದನ್ನು ಸಪ್ಲೈ ಮಾಡ್ತಾರೆ. ಅದಕ್ಕಾಗಿ ಇಂತಿಷ್ಟು ದುಡ್ಡು ಕೊಡಬೇಕು ಎಂದು ಸ್ಪೋಟಕ ಮಾಹಿತಿ ಬಿಚ್ಚಿಟ್ಟಿದ್ದಾರೆ. ನಾನು ಜೈಲಿನಲ್ಲಿ ಇದ್ದಾಗ ಎಲ್ಲಾ ಸೌಲಭ್ಯಗಳನ್ನು ಬಳಕೆ ಮಾಡಿಕೊಂಡಿದ್ದೇನೆ. ಇದಕ್ಕಾಗಿ 1.30 ಲಕ್ಷ ಹಣವನ್ನು ಖರ್ಚು ಮಾಡಿದ್ದೇನೆ. ದುಡ್ಡು ಇದ್ದರೇ ದುನಿಯಾ ಅಂತಾರಲ್ಲ ಹಾಗೆ ಪರಪ್ಪನ ಅಗ್ರಹಾರ ಜೈಲು.…
ಬೆಂಗಳೂರು: ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯಿಂದ ಇದೀಗ ಎಸ್ ಎಸ್ ಎಲ್ ಸಿ ಪರೀಕ್ಷೆ-3ರ ಫಲಿತಾಂಶವನ್ನು ಪ್ರಕಟಿಸಲಾಗಿದೆ. ಪರೀಕ್ಷೆ ಬರೆದಂತ ವಿದ್ಯಾರ್ಥಿಗಳು ಹೇಗೆ ರಿಸಲ್ಟ್ ಚೆಕ್ ಮಾಡಬೇಕು ಎನ್ನುವ ಬಗ್ಗೆ ಮುಂದೆ ಓದಿ. ಶಾಲಾ ಶಿಕ್ಷಣ ಇಲಾಖೆಯಿಂದ ಮಾಹಿತಿ ನೀಡಲಾಗಿದ್ದು ಆಗಸ್ಟ್ 2024ರ ಮಾಹೆಯಲ್ಲಿ ನಡೆದ ಎಸ್.ಎಸ್.ಎಲ್.ಸಿ ಪರೀಕ್ಷೆ-3ರ ಪರೀಕ್ಷೆಯನ್ನು ದಿನಾಂಕ:02.08.2024 ರಿಂದ 09.08.2024 ರವರೆಗೆ ನಡೆಸಲಾಯಿತು ಎಂದು ತಿಳಿಸಿದೆ. ಎಲ್ಲಾ ವಿಷಯಗಳ ಉತ್ತರ ಪತ್ರಿಕೆಗಳ ಮೌಲ್ಯಮಾಪನ ಕಾರ್ಯವು ಮುಕ್ತಾಯವಾದ ಹಿನ್ನಲೆಯಲ್ಲಿ, ಫಲಿತಾಂಶವನ್ನು ಪ್ರಕಟಿಸಲಾಗಿದೆ ಎಂಬುದಾಗಿ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯು ಹೇಳಿದೆ. ಈ ರೀತಿ SSLC ಪರೀಕ್ಷೆ-3ರರ ಫಲಿತಾಂಶ ಚೆಕ್ ಮಾಡಿ ಇದೀಗ ಬಿಡುಗಡೆಯಾಗಿರುವಂತ ಎಸ್ ಎಸ್ ಎಲ್ ಸಿ ಪರೀಕ್ಷೆ-3ರ ಫಲಿತಾಂಶವನ್ನು ವಿದ್ಯಾರ್ಥಿಗಳು https://karresults.nic.in ಜಾಲತಾಣಕ್ಕೆ ಭೇಟಿ ನೀಡಿ, ವೀಕ್ಷಿಸಬಹುದಾಗಿದೆ. ಎಸ್ ಎಸ್ ಎಲ್ ಸಿ ಪರೀಕ್ಷೆ-3ಕ್ಕೆ 97,952 ವಿದ್ಯಾರ್ಥಿಗಳು ಹಾಜರಾಗಿದ್ದರು. ಇವರಲ್ಲಿ 25,347 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಲಿಂಗವಾರು ಪ್ರಮಾಣ ನೋಡುವುದಾದರೇ 67729 ವಿದ್ಯಾರ್ಥಿಗಳು…
ಬೆಂಗಳೂರು: ಇಂದು ಮಧ್ಯಾಹ್ನ 12 ಗಂಟೆಗೆ ಎಸ್ ಎಸ್ ಎಲ್ ಸಿ ಪರೀಕ್ಷೆ-3ರ ಫಲಿತಾಂಶವನ್ನು ಪ್ರಕಟಿಸಲಾಗುತ್ತದೆ. ಈ ಕುರಿತು ಶಾಲಾ ಶಿಕ್ಷಣ ಇಲಾಖೆಯಿಂದ ಮಾಹಿತಿ ನೀಡಲಾಗಿದ್ದು ಆಗಸ್ಟ್ 2024ರ ಮಾಹೆಯಲ್ಲಿ ನಡೆದ ಎಸ್.ಎಸ್.ಎಲ್.ಸಿ ಪರೀಕ್ಷೆ-3ರ ಪರೀಕ್ಷೆಯನ್ನು ದಿನಾಂಕ:02.08.2024 ರಿಂದ 09.08.2024 ರವರೆಗೆ ನಡೆಸಲಾಯಿತು ಎಂದಿದೆ. ಎಲ್ಲಾ ವಿಷಯಗಳ ಉತ್ತರ ಪತ್ರಿಕೆಗಳ ಮೌಲ್ಯಮಾಪನ ಕಾರ್ಯವು ಮುಕ್ತಾಯವಾಗಿದೆ ಎಂದು ತಿಳಿಸಿದೆ. ಈ ರೀತಿ SSLC ಪರೀಕ್ಷೆ-3ರರ ಫಲಿತಾಂಶ ಚೆಕ್ ಮಾಡಿ https://karresults.nic.in ಜಾಲತಾಣದಲ್ಲಿ ಇಂದು ದಿನಾಂಕ:26.08.2024 ರಂದು ಮಧ್ಯಾಹ್ನ 12.00 ನಂತರ ವೀಕ್ಷಿಸಬಹುದಾಗಿದೆ ಎಂದು ಹೇಳಿದೆ. ವರದಿ: ವಸಂತ ಬಿ ಈಶ್ವರಗೆರೆ, ಸಂಪಾದಕರು
01.ವೀಳ್ಯದೆಲೆ ತುದಿಯಲ್ಲಿ – ಲಕ್ಷ್ಮೀ ದೇವಿಯವಾಸವಿರುತ್ತದೆ, 02.ವೀಳ್ಯದೆಲೆ ಬಲಭಾಗದಲ್ಲಿ ಬ್ರಹ್ಮ ದೇವರ ವಾಸಸ್ಥಾನ . 03.ವೀಳ್ಯದೆಲೆ ಮಧ್ಯದಲ್ಲಿ ಸರಸ್ವತೀ ದೇವಿಯ ವಾಸಸ್ಥಾನ, 04.ವೀಳ್ಯದೆಲೆ ಎಡಭಾಗದಲ್ಲಿ ಪಾರ್ವತೀ ದೇವಿಯ ವಾಸಸ್ಥಾನ, 05.ವೀಳ್ಯದೆಲೆ ಸಣ್ಣದಂಟಿನಲ್ಲಿ ಮಹಾವಿಷ್ಣುವಿನ ವಾಸಸ್ಥಾನ, 06.ವೀಳ್ಯದೆಲೆ ಹಿಂಭಾಗದಲ್ಲಿ ಚಂದ್ರದೇವತೆ ವಾಸಸ್ಥಾನ, 07.ವೀಳ್ಯದೆಲೆ ಎಲ್ಲಾ ಮೂಲೆಗಳಲ್ಲಿ ಪರಮೇಶ್ವರನ ವಾಸಸ್ಥಾನ, 08.ವೀಳ್ಯದೆಲೆಯ ಬುಡದಲ್ಲಿ ಮೃತ್ಯುದೇವತೆಯ ವಾಸಸ್ಥಾನ, ,ಇದೆ ಕಾರಣಕ್ಕೆ ತಾಂಬೂಲ ಹಾಕಿಕೊಳ್ಳುವಾಗ ತುದಿ ಭಾಗ ತೆಗೆದು ಹಾಕಿಕೊಳ್ಳುವುದು} 09.ವೀಳ್ಯದೆಲೆ ತೊಟ್ಟಿನಲ್ಲಿ ಅಹಂಕಾರ ದೇವತೆ ಹಾಗೂ ದಾರಿದ್ರ್ಯಲಕ್ಷ್ಮೀ ಇರುತ್ತಾರೆ, {ಆದುದರಿಂದನೇ ವೀಳ್ಯದೆಲೆ ಹಾಕಿಕೊಳ್ಳುವವರು ತೊಟ್ಟನ್ನು ಮುರಿದು ಹಾಕುತ್ತಾರೆ} ಅಹಂಕಾರಹಾಗೂ ದರಿದ್ರ ಲಕ್ಷ್ಮೀ ಬರಬಾರದೆಂಬ ಎಂದರ್ಥ} 10.ವೀಳ್ಯದೆಲೆಮಧ್ಯಭಾಗ ಮನ್ಮಥನ ವಾಸ ಶ್ರೀ ಸಿಗಂದೂರು ಚೌಡೇಶ್ವರಿ ಜ್ಯೋತಿಷ್ಯ ಪೀಠ ನಂ 1ಕೇರಳ ಕೊಳ್ಳೇಗಾಲದ ಮಹಾ ಮಾಂತ್ರಿಕ ಜ್ಯೋತಿಷ್ಯರು ವಿದ್ವಾನ್ ವಿದ್ಯಾಧರ್ ನಕ್ಷತ್ರಿ ತಂತ್ರಿ ನಂ:- 9686268564. ನಂ 1ವಶೀಕರಣ ಸ್ಪೆಷಲಿಸ್ಟ್ ಒಂದು ಕರೆಯಲ್ಲಿ ಪರಿಹಾರ ತಿಳಿಸುತ್ತಾರೆ ತಾವು ಎಷ್ಟೋ ಜ್ಯೋತಿಷ್ಯರಲ್ಲಿ ಕೇಳಿಯು ಪರಿಹಾರ ಸಿಗದೇ ಮನನೊಂದಿದ್ದರೆ ಪರಿಹಾರ ನಿಮ್ಮ…
ನವದೆಹಲಿ: ಹಲವಾರು ಟಿವಿ ಕಾರ್ಯಕ್ರಮಗಳು ಮತ್ತು ಚಲನಚಿತ್ರಗಳ ಭಾಗವಾಗಿದ್ದ ಹಿರಿಯ ನಟಿ ಆಶಾ ಶರ್ಮಾ ನಿಧನರಾಗಿದ್ದಾರೆ. ಈ ಸುದ್ದಿಯನ್ನು ಸಿಐಎನ್ಟಿಎಎ (ಸಿನಿ ಮತ್ತು ಟಿವಿ ಕಲಾವಿದರ ಸಂಘ) ಅಧಿಕೃತ ಟ್ವಿಟರ್ (ಈಗ ಎಕ್ಸ್) ಹ್ಯಾಂಡಲ್ ಇಂದು ಮಧ್ಯಾಹ್ನ ಹಂಚಿಕೊಂಡಿದೆ. https://twitter.com/CintaaOfficial/status/1827623296931655757 ಆಶಾ ಕಿರುತೆರೆಯಲ್ಲಿ ಪ್ರಸಿದ್ಧ ನಟಿಯಾಗಿ ಗುರುತಿಸಿಕೊಂಡಿದ್ದರು. ಶರ್ಮಾ ಅವರ ಕುಟುಂಬಕ್ಕೆ ಸಂತಾಪ ಸೂಚಿಸುವ ಟ್ವೀಟ್ ಅನ್ನು ಸಿಐಎನ್ಟಿಎಎ ಪೋಸ್ಟ್ ಮಾಡಿದೆ. ಈ ಟ್ವೀಟ್ ಅನ್ನು ಆಗಸ್ಟ್ 25, 2024 ರಂದು ಮಧ್ಯಾಹ್ನ 3:01 ಕ್ಕೆ ಪೋಸ್ಟ್ ಮಾಡಲಾಗಿದೆ. “ಆಶಾ ಶರ್ಮಾ ಅವರ ನಿಧನಕ್ಕೆ #cintaa ಸಂತಾಪ ಸೂಚಿಸುತ್ತೇನೆ” ಎಂದು ಅವರು ಬರೆದಿದ್ದಾರೆ. ಆಕೆಯ ಸಾವಿಗೆ ಕಾರಣ ಇನ್ನೂ ತಿಳಿದುಬಂದಿಲ್ಲ. ಆಶಾ ಅವರು ಚಲನಚಿತ್ರ ಮತ್ತು ದೂರದರ್ಶನ ಕಾರ್ಯಕ್ರಮಗಳಲ್ಲಿ ತಾಯಿ ಮತ್ತು ಅಜ್ಜಿಯ ಪಾತ್ರಗಳಿಗೆ ಹೆಸರುವಾಸಿಯಾಗಿದ್ದರು. ಪ್ರೇಮ್ ಚೋಪ್ರಾ, ಅರುಣಾ ಇರಾನಿ ಮತ್ತು ನಿರುಪಾ ರಾಯ್ ಅವರಂತಹ ಜನಪ್ರಿಯ ಹೆಸರುಗಳು ನಟಿಸಿದ ಧರ್ಮೇಂದ್ರ ಮತ್ತು ಹೇಮಾ ಮಾಲಿನಿ ಅವರ ದೋ ದಿಶಾಯೆನ್…
ಬೆಂಗಳೂರು: ಸೋಷಿಯಲ್ ಮೀಡಿಯಾದಲ್ಲಿ ಸುದ್ದಿಯೊಂದು ವೈರಲ್ ಆಗಿದೆ. ಪೊಲೀಸರಿಂದ ಮಹಿಳೆಯರಿಗೆ ರಾತ್ರಿ 10ರಿಂದ ಬೆಳಿಗ್ಗೆ 6 ಗಂಟೆಯವರೆಗೆ ಉಚಿತವಾಗಿ ಮನೆಗೆ ತಲುಪಿಸಲಿದ್ದಾರೆ. ಅದಕ್ಕಾಗಿ ಈ ಒಂದು ಸಂಖ್ಯೆಗೆ ಕರೆ ಮಾಡಿ ಅಂತ ಸುದ್ದಿ ವೈರಲ್ ಆಗಿತ್ತು. ಹಾಗಾದ್ರೇ ಅದು ಏನು.? ಅದರ ಅಸಲಿ ಸತ್ಯವೇನು ಅಂತ ಮುಂದೆ ಓದಿ. ಹೀಗಿದೆ ವೈರಲ್ ಆಗಿರುವಂತ ಸುದ್ದಿ ರಾತ್ರಿ 10 ರಿಂದ ಬೆಳಗ್ಗೆ 6 ಗಂಟೆಯೊಳಗೆ ಮನೆಗೆ ತೆರಳಲು ವಾಹನ ಸಿಗದೇ ಒಂಟಿಯಾಗಿರುವ ಯಾವುದೇ ಮಹಿಳೆ ಪೊಲೀಸ್ ಸಹಾಯವಾಣಿ ಸಂಖ್ಯೆಗಳನ್ನು (1091 ಮತ್ತು 7837018555) ಸಂಪರ್ಕಿಸಬಹುದಾದ ಉಚಿತ ಪ್ರಯಾಣ ಯೋಜನೆಯನ್ನು ಪೊಲೀಸರು ಪ್ರಾರಂಭಿಸಿದ್ದಾರೆ. ವಾಹನವನ್ನು ಕೋರಬಹುದು ಮತ್ತು ವಿನಂತಿಸಬಹುದು. ಅವರು 24×7 ಗಂಟೆಗಳ ಕಾಲ ಕೆಲಸ ಮಾಡುತ್ತಾರೆ. ನಿಯಂತ್ರಣ ಕೊಠಡಿಯ ವಾಹನ ಅಥವಾ ಹತ್ತಿರದ ಪಿಸಿಆರ್ ವಾಹನ/ಎಸ್ಎಚ್ಒ ವಾಹನವು ಅವನನ್ನು ಸುರಕ್ಷಿತವಾಗಿ ಅವನ ಗಮ್ಯಸ್ಥಾನಕ್ಕೆ ಕೊಂಡೊಯ್ಯುತ್ತದೆ. ಇದನ್ನು ಉಚಿತವಾಗಿ ಮಾಡಲಾಗುವುದು. ನಿಮಗೆ ತಿಳಿದಿರುವ ಎಲ್ಲರಿಗೂ ಈ ಸಂದೇಶವನ್ನು ಹರಡಿ. ನಿಮ್ಮ ಹೆಂಡತಿ, ಹೆಣ್ಣುಮಕ್ಕಳು, ಸಹೋದರಿಯರು,…