Author: kannadanewsnow09

ತೈವಾನ್: ತೈವಾನ್ ರಾಜಧಾನಿ ಸೋಮವಾರ ಸಂಜೆ ಪ್ರಬಲ ಭೂಕಂಪದಿಂದ ನಡುಗಿದೆ ಎಂದು ಎಎಫ್ಪಿ ಸಿಬ್ಬಂದಿ ವರದಿ ಮಾಡಿದ್ದಾರೆ. ಇದು ಪೂರ್ವ ಹುವಾಲಿಯನ್ನಲ್ಲಿ 5.5 ತೀವ್ರತೆಯ ಭೂಕಂಪನವಾಗಿದೆ ಎಂದು ಕೇಂದ್ರ ಹವಾಮಾನ ಆಡಳಿತ ತಿಳಿಸಿದೆ. 5.5 ತೀವ್ರತೆಯಲ್ಲಿ ಭೂಕಂಪನ ಉಂಟಾಗಿದ್ದರಿಂದ ತೈವಾನ್ ಜನತೆ ಮನೆಯಿಂದ ಓಡಿ ಬಂದು ಕೆಲ ಕಾಲ ಬೀದಿಯಲ್ಲಿ ಆತಂಕದಿಂದ ಕಳೆಯುವಂತೆ ಆಯ್ತು ಎಂಬುದಾಗಿ ವರದಿಯಿಂದ ತಿಳಿದು ಬಂದಿದೆ. https://kannadanewsnow.com/kannada/computer-literacy-test-important-information-for-state-government-employees/ https://kannadanewsnow.com/kannada/lok-sabha-elections-how-to-download-voter-slip-on-mobile-heres-the-information/

Read More

ಯಾದಗಿರಿ: ದಲಿತ ಯುವಕನೊಬ್ಬನ ಮರ್ಮಾಂಗಕ್ಕೆ ಮುಸ್ಲೀಂ ಯುವಕನೊಬ್ಬ ಒದ್ದ ಪರಿಣಾಮ, ಸ್ಥಳದಲ್ಲೇ ದಲಿತ ಯುವಕ ಸಾವನ್ನಪ್ಪಿರುವಂತ ಘಟನೆ ಯಾದಗಿರಿಯಲ್ಲಿ ನಡೆದಿದೆ. ಯಾದಗಿರಿ ನಗರದ ಶಗಾಪುರಪೇಟೆ ಬಡಾವಣೆಯಲ್ಲಿದ್ದಂತ ರೊಟ್ಟಿ ಕೇಂದ್ರಕ್ಕೆ ನಿನ್ನೆ ರಾತ್ರಿ ದಲಿತ ಯುವಕ ರಾಕೇಶ್ ಎಂಬಾತ ರೊಟ್ಟಿ ತೆಗೆದುಕೊಂಡು ಬರೋದಕ್ಕೆ ತೆರಳಿದ್ದಾನೆ. ರೊಟ್ಟಿ ಖರೀದಿಯ ವೇಳೆಯಲ್ಲಿ ವಾಗ್ವಾದ ನಡೆದು, ಮುಸ್ಲೀಂ ಯುವಕ ಫಯಾಜ್ ಹಾಗೂ ರಾಕೇಶ್ ನಡುವೆ ಗಲಾಟೆಯಾಗಿದೆ. ಈ ಗಲಾಟೆಯ ಬಳಿಕ ಮನೆಗೆ ರಾಕೇಶ್ ತೆರಳಿದ್ದಾನೆ. ನಂತ್ರ ಮನೆಗೆ ರಾಕೇಶ್ ಮರಳಿದ ನಂತ್ರ ಫಯಾಜ್ ಹಾಗೂ ರಾಕೇಶ್ ನಡುವೆ ಜಗಳವಾಗಿದೆ. ಈ ಗಲಾಟೆಯ ವೇಳೆಯಲ್ಲಿ ಫಯಾಜ್ ಎಂಬಾತ ರಾಕೇಶ್ ಮರ್ಮಾಂಗಕ್ಕೆ ಒದ್ದ ಪರಿಣಾಮ, ಸ್ಥಳದಲ್ಲೇ ಸಾವನ್ನಪ್ಪಿರೋದಾಗಿ ತಿಳಿದು ಬಂದಿದೆ. ಈ ಘಟನೆಯ ನಂತ್ರ ಆರೋಪಿ, ಕೊಲೆಯಾದ ಯುವಕನ ಕುಟುಂಬದ ನಡುವೆ ಸಂಧಾನದ ಮಾತುಕತೆ ನಿನ್ನೆ ರಾತ್ರಿ 11 ಗಂಟೆಯ ಹಾಗೆ ನಡೆದಿದೆ. ಇದಾದ ನಂತ್ರ ಬಿಜೆಪಿ ಮುಖಂಡರು ಮಧ್ಯ ಪ್ರವೇಶಿಸಿ ಕೊಲೆಯಾದ ರಾಕೇಶ್ ತಾಯಿಯಿಂದ ಪೊಲೀಸರಿಗೆ ದೂರು ಕೊಡಿಸಿದ್ದಾರೆ.…

Read More

ಬೆಂಗಳೂರು: ಮಾಜಿ ಸ್ಪೀಕರ್ ರಮೇಶ್‍ಕುಮಾರ್ ಅವರ ಹೇಳಿಕೆ ಖಂಡನೀಯ. ಬಿಜೆಪಿ ಇದನ್ನು ಖಂಡಿಸುತ್ತದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ತಿಳಿಸಿದರು. ಮೈಸೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ರಮೇಶ್ ಕುಮಾರ್ ಅವರ ಯೋಗ್ಯತೆ ಅವರ ಕ್ಷೇತ್ರದ ಜನತೆಗೆ ಗೊತ್ತಿದೆ. ಹಾಗಾಗಿಯೇ ಅವರನ್ನು ಜನರು ಸೋಲಿಸಿದ್ದಾರೆ. ಆಚಾರವಿಲ್ಲದ ನಾಲಿಗೆ ಎಂಬಂತೆ ಅವರ ನಾಲಿಗೆ ಅವರ ಸಂಸ್ಕøತಿಯನ್ನು ತೋರಿಸುತ್ತದೆ ಎಂದು ಟೀಕಿಸಿದರು. ಮುಖ್ಯಮಂತ್ರಿಗಳ ಸ್ಥಾನದಲ್ಲಿರುವ ಸಿದ್ದರಾಮಯ್ಯನವರು ಆರೂವರೆ ಕೋಟಿ ಜನರಿಗೆ ಮುಖ್ಯಮಂತ್ರಿ ಎಂಬುದನ್ನು ಮರೆತು ಈ ದೇಶದ ಗೌರವಾನ್ವಿತ ಪ್ರಧಾನಮಂತ್ರಿಗಳ ಕುರಿತು ಅವರು ನೀಡಿದ ‘ಒಬ್ಬ ನಾಲಾಯಕ್ ಪ್ರಧಾನಮಂತ್ರಿ’ ಎಂಬ ಉದ್ಧಟತನದ ಹೇಳಿಕೆ ನೀಡಿದ್ದು ಖಂಡನೀಯ ಎಂದರು. ರಾಜ್ಯದಲ್ಲಿ ಕಾನೂನು- ಸುವ್ಯವಸ್ಥೆ ಸಂಪೂರ್ಣವಾಗಿ ಹಾಳಾಗಿದೆ. ಈ ದರಿದ್ರ ಕಾಂಗ್ರೆಸ್ ಸರಕಾರಕ್ಕೆ ಗ್ಯಾರಂಟಿ ಬಿಡಿ; ನಾಡಿನ ಮಹಿಳೆಯರಿಗೆ ರಕ್ಷಣೆ ಕೊಡಲಾಗದೆ ನಾಲಾಯಕ್‍ತನ ಪ್ರದರ್ಶನ ಮಾಡುತ್ತಿದೆ ಎಂದು ಆಕ್ಷೇಪಿಸಿದರು. ಇಂಥ ನಾಲಾಯಕ್ ಸರಕಾರಕ್ಕೆ ರಾಜ್ಯದ ಜನತೆ ಮುಂದಿನ ದಿನಗಳಲ್ಲಿ ಸರಿಯಾದ ಉತ್ತರ ಕೊಡುತ್ತಾರೆ ಎಂದು ವಿಶ್ವಾಸ ಸೂಚಿಸಿದರು.…

Read More

ಯಾದಗಿರಿ: ಜಿಲ್ಲೆಯಲ್ಲಿ ರಾಜ್ಯದ ಜನರೇ ಬೆಚ್ಚಿ ಬೀಳಿಸುವಂತ ಘಟನೆಯೊಂದು ನಡೆದಿದೆ. ಮುಸ್ಲೀಂ ಯುವಕರಿಂದ ದಲಿತ ಯುವಕನೊಬ್ಬನನ್ನು ಹತ್ಯೆ ಮಾಡಿರೋ ಘಟನೆ ನಡೆದಿದೆ. ಹುಬ್ಬಳ್ಳಿಯ ನೇಹಾ ಹಿರೇಮಠ್ ಕೊಲೆ ಪ್ರಕರಣ ಹಸಿಯಾಗಿರೋ ಮುನ್ನವೇ, ಯಾದಗಿರಿಯಲ್ಲಿ ಮುಸ್ಲೀಂ ಯುವಕರಿಂದ ದಲಿತ ಯುಕನೊಬ್ಬನನ್ನು ಹತ್ಯೆ ಮಾಡಿರುವಂತ ಘಟನೆ ನಡೆದಿದೆ. ಯಾದಗಿರಿ ನಗರದ ಶಗಾಪುರಪೇಟೆಯ ಬಡಾವಣೆಯಲ್ಲಿ ಇಂತದ್ದೊಂದು ಘಟನೆ ನಡೆದಿದೆ. ರೊಟ್ಟಿ ಕೇಂದ್ರದ ಸದಸ್ಯ ಫಯಾಜ್ ಸೇರಿದಂತೆ ನಾಲ್ವರು ದಲಿತ ಯುವಕನೊಬ್ಬನನ್ನು ಹತ್ಯೆ ಮಾಡಿರೋದಾಗಿ ತಿಳಿದು ಬಂದಿದೆ. ಈ ವಿಷಯ ತಿಳಿದು ಘಟನಾ ಸ್ಥಳಕ್ಕೆ ಆಗಮಿಸಿರುವಂತ ಪೊಲೀಸರು, ಸ್ಥಳ ಪರಿಶೀಲನೆ ನಡೆಸಿ, ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ. ಈ ಬಗ್ಗೆ ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ. https://kannadanewsnow.com/kannada/neha-murder-case-cm-siddaramaiah-announces-setting-up-of-special-court-for-speedy-trial/ https://kannadanewsnow.com/kannada/computer-literacy-test-important-information-for-state-government-employees/

Read More

ಶಿವಮೊಗ್ಗ: ಹುಬ್ಬಳ್ಳಿ ನೇಹಾ ಹಿರೇಮಠ್ ಕೊಲೆ ಪ್ರಕರಣವನ್ನು ಸಿ.ಒ.ಡಿ ತನಿಖೆಗೆ ವಹಿಸಲಾಗುವುದು. ವಿಶೇಷ ನ್ಯಾಯಾಲಯ ಸ್ಥಾಪಿಸಿ ಕಾಲಮಿತಿಯಲ್ಲಿ ವಿಚಾರಣೆ ನಡೆಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಶಿವಮೊಗ್ಗ ವಿಮಾನನಿಲ್ದಾಣದಲ್ಲಿ ಮಾಧ್ಯಮ ದವರೊಂದಿಗೆ ಮಾತನಾಡಿದರು. ಮುಖ್ಯಮಂತ್ರಿಗಳು ಹುಬ್ಬಳ್ಳಿಯಲ್ಲಿ ನೇಹಾ ಮನೆಗೆ ಭೇಟಿ ನೀಡಿಲ್ಲ ಎಂಬ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿ ನಮ್ಮ ಸಚಿವರು, ಕಾರ್ಯಕರ್ತರು ಹಾಗೂ ಸಚಿವ ಹೆಚ್. ಕೆ.ಪಾಟೀಲ್ ಭೇಟಿ ನೀಡಿದ್ದಾರೆ. ಧಾರವಾಡಕ್ಕೆ ತೆರಳಿದ ಸಂದರ್ಭದಲ್ಲಿ ಭೇಟಿ ನೀಡುವುದಾಗಿ ಹೇಳಿದರು. ದಿಂಗಾಲೇಶ್ವರ ಸ್ವಾಮಿಗಳ ಉಮೇದುವಾರಿಕೆ ಹಿಂಪಡೆದು ಕಾಂಗ್ರೆಸ್ ಬೆಂಬಲಿಸಲು ಮನವಿ ಜಾತ್ಯಾತೀತ ಫಕೀರೇಶ್ವರ ಮಠದ ದಿಂಗಾಲೇಶ್ವರ ಸ್ವಾಮೀಜಿ ಧಾರವಾಡ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸುತ್ತಿದ್ದು, ಅವರ ಉಮೇದುವಾರಿಕೆಯನ್ನು ಹಿಂಪಡೆದು ಜಾತ್ಯಾತೀತ ಪಕ್ಷ ಕಾಂಗ್ರೆಸ್ ನ್ನು ಬೆಂಬಲಿಸಬೇಕೆಂದು ಅವರಲ್ಲಿ ಮನವಿ ಮಾಡಿದ್ದೇನೆ. ಅವರ ಮಠ ಜಾತ್ಯಾತೀತವಾಗಿದ್ದು ಅವರ ಬೆಂಬಲ ಅಗತ್ಯವಿದೆ ಎಂದರು. ಕುಡಿಯುವ ನೀರು ಹಾಗೂ ಮೇವಿಗೆ ತೊಂದರೆಯಾಗದಂತೆ ಕ್ರಮ ಬರ ಪರಿಹಾರ ನೀಡಿಲ್ಲದ್ದರ ಬಗ್ಗೆ ಕೇಂದ್ರ ಸರ್ಕಾರದ ವಿರುದ್ಧ ಸರ್ವೋಚ್ಚ ನ್ಯಾಯಾಲಯದ…

Read More

ಬೆಂಗಳೂರು : ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷರು ಹಾಗೂ ಮಾಜಿ ಪೊಲೀಸ್‌ ಅಧಿಕಾರಿ ಅಣ್ಣಾಮಲೈ ಅವರು ಸೋಮವಾರ ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ತೇಜಸ್ವೀ ಸೂರ್ಯ ಪರ ಜಯನಗರ, ಚಿಕ್ಕಪೇಟೆ ವಿಧಾನಸಭಾ ಕ್ಷೇತ್ರಗಳಲ್ಲಿ ಅಬ್ಬರದ ರೋಡ್‌ ಶೋ ನಡೆಸಿ ಮತ ಯಾಚಿಸಿದರು. ಪ್ರಚಾರ ಸಭೆಯನ್ನುದ್ದೇಶಿಸಿ ಮಾತನಾಡಿದ ತೇಜಸ್ವೀ ಸೂರ್ಯ, “ನವಭಾರತದ ನಿರ್ಮಾಣದಲ್ಲಿ ಯುವಶಕ್ತಿಯ ಪಾತ್ರ ಬಹುದೊಡ್ಡದಿದ್ದು ಅದರಂತೆ ಪ್ರಧಾನಿ ನರೇಂದ್ರಮೋದಿಯವರು ಯುವ ಸಬಲೀಕರಣಕ್ಕೆ ಹೆಚ್ಚು ಒತ್ತು ನೀಡಿ ಅನೇಕ ಯೋಜನೆಗಳು ಮತ್ತು ಕಾರ್ಯಕ್ರಮಗಳನ್ನು ಯಶಸ್ವಿಯಾಗಿ ಜಾರಿಗೊಳಿಸಿದ್ದಾರೆ. ರಕ್ಷಣಾ ಪಡೆಗಳಲ್ಲಿ ಹೆಣ್ಣು ಮಕ್ಕಳ ಸಂಖ್ಯೆ ಎರಡು ಪಟ್ಟು ಹೆಚ್ಚಿದೆ. ಸರ್ಕಾರದ ಪ್ರೋತ್ಸಾಹದಿಂದ ಯುವಜನರಲ್ಲಿ ಕ್ರೀಡಾಸಕ್ತಿ ಹೆಚ್ಚುತ್ತಿದ್ದು, ವಿವಿಧ ವಲಯಗಳಲ್ಲಿ ತಮ್ಮ ಪ್ರತಿಭೆ, ಸಾಮರ್ಥ್ಯ ತೋರಲು ಸಾಧ್ಯವಾಗಿದೆ. ಖೇಲೋ ಇಂಡಿಯಾ ಕಾರ್ಯಕ್ರಮ ಕ್ರೀಡಾ ವಲಯದಲ್ಲಿ ಬಹು ದೊಡ್ಡ ಬದಲಾವಣೆಯನ್ನು ತಂದಿದ್ದು, ಅಪಾರ ಕ್ರೀಡಾ ಪ್ರತಿಭೆಗಳು ಬೆಳಕಿಗೆ ಬರಲು ಕಾರಣವಾಗಿದೆ. ಒಲಿಂಪಿಕ್ಸ್‌, ಏಷ್ಯನ್‌ ಕ್ರೀಡಾಕೂಟ ಸೇರಿದಂತೆ ಅಂತಾರಾಷ್ಟ್ರೀಯ ಮಟ್ಟದ ಕ್ರೀಡಾ ಕೂಟಗಳಲ್ಲಿ ಭಾರತೀಯ ಕ್ರೀಡಾಪಟುಗಳು…

Read More

ಹಾವೇರಿ: ಹುಬ್ಬಳ್ಳಿ ಕಾಲೇಜು ವಿದ್ಯಾರ್ಥಿನಿ ನೇಹಾ ಹಿರೇಮಠ ಕೊಲೆಯ ಹಿಂದೆ ದೊಡ್ಡ ಷಡ್ಯಂತ್ರ ಇದ್ದು, ಇದು ವಯಕ್ತಿಕ ವಿಚಾರವಲ್ಲ. ಇದರ ಹಿಂದೆ ದೇಶದ ಸಾಮಾಜಿಕ ವಿಚಾರ ಇದೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಹಾವೇರಿ ಗದಗ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಅವರು ಇಂದು ಹಾವೇರಿಯಲ್ಲಿ ನೇಹಾ ಹತ್ಯೆ ಖಂಡಿಸಿ ಅಖಿಲ ಭಾರತಿಯ ವಿದ್ಯಾರ್ಥಿ ಪರಿಷತ್ ವತಿಯಿಂದ ಏರ್ಪಡಿಸಿದ್ದ ಪ್ರತಿಭಟನೆಯಲ್ಲಿ ಪಾಲ್ಗೊಂಡು ಮಾತನಾಡಿದರು. ನಾವು ಅತ್ಯಂತ ದುಖ ಆಘಾತದ ಸಂದರ್ಭದಲ್ಲಿ ಸೇರಿದ್ದೇವೆ. ಹೆಣ್ಸು ಮಕ್ಕಳು ಮಾತನಾಡಿದ್ದು ಕರಳು ಕಿತ್ತು ಬರುವಂತಿದೆ. ಅವನು ಹಾಡಹಗಲೆ ಭಯಂಕರ ಕೊಲೆ ಮಾಡಿದ್ದಾನೆ ಎಂದರೆ ಅವನು ಒಬ್ಬನೇ ಇಲ್ಲ. ಇದು ಕೇವಲ ವಯಕ್ತಿಕ ವಿಚಾರ ಅಲ್ಲ. ಇದರ ಹಿಂದೆ ದೇಶದ ಸಾಮಾಜಿಕ ವಿಚಾರ ಇದೆ ಎಂದು ಹೇಳಿದರು. ನಾವು ಅಧಿಕಾರದಲ್ಲಿ ಇದ್ದಾಗ ಚಿಕ್ಕಮಗಳೂರಿನಲ್ಲಿ ಅಮಾಯಕ ಮಹಿಳೆಯ ಮೇಲೆ ಅತ್ಯಾಚಾರ ನಡೆದಾಗ ಅವನನ್ನು ಗಲ್ಲಿಗೇರಿಸುವಂತೆ ಕ್ರಮ ಕೈಗೊಂಡಿದ್ದೇವು. ನೇಹಾ ತಂದೆ ರಾಜ್ಯದ ಪೊಲಿಸರ ಮೇಲೆ…

Read More

ಶಿವಮೊಗ್ಗ: ಕಾಂಗ್ರೆಸ್ ಪಕ್ಷದವರ ಮೇಲೆ, ವಿಪಕ್ಷಗಳ ನಾಯಕರ ಮೇಲೆ ಆದಾಯ ತೆರಿಗೆ, ಜಾರಿ ನಿರ್ದೇಶನಾಲಯದ ಅಧಿಕಾರಿಗಳು ದಾಳಿ ಮಾಡ್ತಿದ್ದಾರೆ. ಆದ್ರೇ ಬಿಜೆಪಿಯವರ ಮೇಲೆ ರೈಡ್ ಯಾಕೆ ಆಗ್ತಿಲ್ಲ ಎಂಬುದಾಗಿ ಸಿಎಂ ಸಿದ್ಧರಾಮಯ್ಯ ಪ್ರಶ್ನಿಸಿದ್ದಾರೆ. ನಗರದಲ್ಲಿ ಚುನಾವಣಾ ಪ್ರಚಾರದಲ್ಲಿ ಭಾಗಿಯಾಗಿ ಮಾತನಾಡಿದಂತ ಅವರು, ರಾಜ್ಯದಲ್ಲಿ ಕಾಂಗ್ರೆಸ್ ಇದ್ದರೆ, ಭ್ರಷ್ಟಾಚಾರ ಹೆಚ್ಚಾಗಲಿದೆ ಎಂಬ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ನಡ್ಡಾ ಅವರ ಹೇಳಿಕೆಗೆ ಪ್ರತಿಕ್ರಿಯೆ ನೀಡಿ, ಕಾನೂನು ಪ್ರಕಾರ ರೇಡ್ ಮಾಡುವುದನ್ನು ನಾವು ಎಂದೂ ವಿರೋಧಿಸುವುದಿಲ್ಲ. ಆದರೆ ಬಿಜೆಪಿಯಲ್ಲಿ ಶ್ರೀಮಂತರಿಲ್ಲವೇ, ಯಡಿಯೂರಪ್ಪ , ವಿಜಯೇಂದ್ರ ಭ್ರಷ್ಟಾಚಾರ ಮಾಡಿಲ್ಲವೇ ? ಶೋಭಾ ಕರಂದ್ಲಾಜೆ, ಅಶೋಕ್, ಬಸವರಾಜ್ ಬೊಮ್ಮಾಯಿ ಸೇರಿದಂತೆ ಬಿಜೆಪಿಯವರ ಮೇಲೆ, ಅವರ ಮೇಲೆ ರೇಡ್ ಗಳು ಏಕೆ ಆಗುತ್ತಿಲ್ಲ. ಆದಾಯ ತೆರಿಗೆಯನ್ನು ಸರಿಯಾಗಿ ಕಟ್ಟದವರ ಮೇಲೆ ಕ್ರಮವಾಗಲಿ, ಆದರೆ ಒಬ್ಬರ ಮೇಲೆ ರೇಡ್ ಮಾಡಿ ಮತ್ತೊಬ್ಬರನ್ನು ಬಿಡುವ ಬದಲು, ಆದಾಯಮೀರಿ ಆಸ್ತಿ ಸಂಪಾದಿಸಿದ ಎಲ್ಲರ ಮೇಲೆ ಕಾನೂನು ಕ್ರಮವಾಗಬೇಕು ಎಂದರು. ಕಾಂಗ್ರೆಸ್ ತನ್ನ ಶಕ್ತಿಯನ್ನು ನಂಬಿದೆ ರಾಜ್ಯದಲ್ಲಿ…

Read More

ಧಾರವಾಡ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿಯವರನ್ನು ಸೋಲಿಸಲೇಬೇಕು. ಅವರು ಸಮುದಾಯಕ್ಕಾಗಲೀ, ತಮ್ಮ ಲೋಕಸಭಾ ಕ್ಷೇತ್ರಕ್ಕೆ ಆಗಲೀ ಯಾವುದೇ ಕೊಡುಗೆ ನೀಡಿಲ್ಲ ಎಂಬುದಾಗಿ ವಾಗ್ಧಾಳಿ ನಡೆಸಿದ್ದಂತ ದಿಂಗಾಲೇಶ್ವರ ಶ್ರೀಗಳು, ಲೋಕಸಭಾ ಚುನಾವಣಾ ಆಖಾಡಕ್ಕೆ ಇಳಿದಿದ್ದರು. ನಾಮಪತ್ರ ಕೂಡ ಸಲ್ಲಿಸಿ, ಚುನಾವಣಾ ಪ್ರಚಾರದಲ್ಲೂ ತೊಡಗಿದ್ದರು. ಆದ್ರೇ ದಿಢೀರ್ ಬೆಳವಣಿಗೆಯಲ್ಲಿ ಇಂದು ತಮ್ಮ ನಾಮಪತ್ರವನ್ನು ಹಿಂಪಡೆದಿದ್ದಾರೆ. ಹುಬ್ಬಳ್ಳಿ-ಧಾರವಾಡ ಲೋಕಸಭಾ ಕ್ಷೇತ್ರದಿಂದ ಪಕ್ಷೇತರ ಅಭ್ಯರ್ಥಿಯಾಗಿ ಹಾಗೂ ಬಿಜೆಪಿ ಅಭ್ಯರ್ಥಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿಯನ್ನು ಸೋಲಿಸಲೇಬೇಕು ಅಂತ ಕಣಕ್ಕೆಶಿರಹಟ್ಟಿಯ ಬಾಳೆಹೊಸೂರು ಫಕೀರೇಶ್ವರ ಮಠದ ಶ್ರೀ ದಿಂಗಾಲೇಶ್ವರ ಸ್ವಾಮೀಜಿ ಇಳಿದಿದ್ದರು. ಇದಷ್ಟೇ ಅಲ್ಲದೇ ಹುಬ್ಬಳ್ಳಿ-ಧಾರವಾಡ ಲೋಕಸಭಾ ಕ್ಷೇತ್ರದಿಂದ ಪಕ್ಷೇತರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿ, ಲೋಕಸಭಾ ಚುನಾವಣೆಯ ಮತಬೇಟೆಯಲ್ಲೂ ತೊಡಗಿದ್ದರು. ಇಂತಹ ಅವರು ಇಂದು ನಾಮಪತ್ರವನ್ನು ಹಿಂಪಡೆಯುವ ಮೂಲಕ, ಸ್ಪರ್ಧೆಯಿಂದ ಹಿಂದೆ ಸರಿದಿದ್ದಾರೆ. ಅಂದಹಾಗೇ, ದಿಂಗಾಲೇಶ್ವರ ಶ್ರೀಗಳು ನಾಪಮಪತ್ರವನ್ನು ತಮ್ಮ ಸೂಚಕಾರದ ಸಚ್ಚಿನ್​ ಪಾಟೀಲ್​ ಮತ್ತು ಅಮೃತ ಬಳ್ಳೊಳ್ಳಿ ಮೂಲಕ ಹಿಂಪಡೆದು, ಸ್ಪರ್ಧೆಯಿಂದ ಹಿಂದೆ ಸರಿದಿದ್ದಾರೆ. ಹೀಗಾಗಿ ಕಾಂಗ್ರೆಸ್ ಹಾಗೂ…

Read More

ಶಿವಮೊಗ್ಗ : ಲೋಕಸಭಾ ಚುನಾವಣೆಗೆ ಸಂಬಂಧಿಸಿದಂತೆ ಜಿಲ್ಲೆಯಲ್ಲಿ ಸುಗಮ ಮತ್ತು ಶಾಂತಿಯುತ ಮತದಾನ ನಡೆಯಲು ಅಗತ್ಯವಾದ ಎಲ್ಲ ಕ್ರಮಗಳನ್ನು ಕಟ್ಟುನಿಟ್ಟಾಗಿ ಚುನಾವಣಾಧಿಕಾರಿಗಳು ಕೈಗೊಳ್ಳಬೇಕೆಂದು 14-ಶಿವಮೊಗ್ಗ ಲೋಕಸಭಾ ಕ್ಷೇತ್ರದ ವೀಕ್ಷಕರಾದ ಪೂನಂ ಅವರು ತಿಳಿಸಿದರು. ಲೋಕಸಭಾ ಸಾರ್ವತ್ರಿಕ ಚುನಾವಣೆ 2024 ರ ಸಂಬಂಧ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಏ.22 ರಂದು ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ನಡೆದ ಮತಕ್ಷೇತ್ರಗಳ ಎಆರ್‍ಓ ಮತ್ತು ಇತರೆ ಚುನಾವಣಾ ನಿಯೋಜಿತ ಅಧಿಕಾರಿಗಳೊಂದಿಗೆ ಏರ್ಪಡಿಸಲಾಗಿದ್ದ ಸಭೆಯಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. 14-ಲೋಕಸಭಾ ಕ್ಷೇತ್ರ ಕ್ಕೆ ಸಂಬಂಧಿಸಿದಂತೆ 111-ಶಿವಮೊಗ್ಗ ಗ್ರಾಮಾಂತರ, 112-ಭದ್ರಾವತಿ, 113-ಶಿವಮೊಗ್ಗ, 114-ತೀರ್ಥಹಳ್ಳಿ, 115-ಶಿಕಾರಿಪುರ, 116ಸೊರಬ, 117-ಸಾಗರ ಮತ್ತು 118 ಬೈಂದೂರು ಮತಕ್ಷೇತ್ರಗಳ ಸಹಾಯಕ ಚುನಾವಣಾಧಿಕಾರಿಗಳು, ಅಬಕಾರಿ ಮತ್ತು ಆದಾಯ ತೆರಿಗೆ ಅಧಿಕಾರಿಗಳು ಹಾಗೂ ಚುನಾವಣೆಗೆ ಸಂಬಂಧಿಸಿದ ವಿವಿಧ ಸಮಿತಿ, ತಂಡಗಳ ನೋಡಲ್ ಅಧಿಕಾರಿಗಳಿಂದ ಅವರ ಕಾರ್ಯಕ್ಷೇತ್ರದ ಕುರಿತು ಸಭೆಯಲ್ಲಿ ಮಾಹಿತಿ ಪಡೆದುಕೊಂಡ ಅವರು ಎಲ್ಲ ಸಹಾಯಕ ಚುನಾವಣಾಧಿಕಾರಿಗಳು ಮತ್ತು ಇತರೆ ತಂಡಗಳ ನೋಡಲ್ ಅಧಿಕಾರಿಗಳು ಸುಗಮವಾಗಿ ಮತದಾನ ಆಗುವ ನಿಟ್ಟಿನಲ್ಲಿ…

Read More