Subscribe to Updates
Get the latest creative news from FooBar about art, design and business.
Author: kannadanewsnow09
ಬೆಂಗಳೂರು: ಆಟೋ ಹಾಗೂ ಬೈಕ್ ಗಳನ್ನೇ ಕದಿಯುವಂತ ವೃತ್ತಿಯಲ್ಲಿ ತೊಡಗಿದ್ದಂತ, ವೃತ್ತಿಯನ್ನಾಗಿಸಿಕೊಂಡಿದ್ದಂತ ಕುಖ್ಯಾತ ಕಳ್ಳನನ್ನು ಪೊಲೀಸರು ಬಂಧಿಸಿದ್ದಾರೆ. ಬೆಂಗಳೂರಿನ ಬನ್ನೇರುಘಟ್ಟ ಠಾಣೆಯ ಪೊಲೀಸರು ತಮ್ಮ ಠಾಣೆ ವ್ಯಾಪ್ತಿ ಹಾಗೂ ಅತ್ತಿಬೆಲೆ, ಆನೇಕಲ್ ನಲ್ಲಿ ಆಟೋ, ಬೈಕ್ ಕದ್ದಿದ್ದಂತ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ್ದರು. ಈ ಸಂಬಂಧ ತನಿಖೆಗೆ ಇಳಿದು ಆಟೋ, ಬೈಕ್ ಕದಿಯೋದನ್ನೇ ವೃತ್ತಿಯನ್ನಾಗಿಸಿಕೊಂಡಿದ್ದಂತ ಕುಖ್ಯಾತ ಕಳ್ಳ ಅರ್ಬಾಜ್ ನನ್ನು ಬಂಧಿಸಿದ್ದಾರೆ. ಶಾನುಭೋಗರಹಳ್ಳಿಯ ನಿವಾಸಿಯಾಗಿದ್ದ ಕುಖ್ಯಾತ ಕಳ್ಳ ಅರ್ಬಾಜ್ ನನ್ನು ಬಂಧಿಸಿದ್ದಾರೆ. ಈ ಹಿಂದೆಯೂ ಹಲವು ಬಾರಿ ಕಳ್ಳತನ ಪ್ರಕರಣದಲ್ಲಿ ಜೈಲಿಗೆ ಹೋಗಿ ಬಂದಿದ್ದನು. ಆ ಬಳಿಕವೂ ಬದಲಾಗದೇ ಮತ್ತೆ ಆಟೋ, ಬೈಕ್ ಕದಿಯೋದನ್ನೇ ತನ್ನ ಕೆಲಸವಾಗಿಸಿಕೊಂಡಿದ್ದನು. ಕೆಲ ದಿನಗಳ ಹಿಂದೆ ನಡೆದಿದ್ದಂತ ಕಳ್ಳತನ ಪ್ರಕರಣದ ತನಿಖೆ ನಡೆಸಿದ ವೇಳೆಯಲ್ಲಿ ಅರ್ಬಾಜ್ ಕೈಚಳಕ ಪತ್ತೆಯಾಗಿತ್ತು. ಇದೀಗ ಖಚಿತ ಮಾಹಿತಿ ಮೇರೆಗೆ ಬನ್ನೇರುಘಟ್ಟ ಠಾಣೆ ಪೊಲೀಸರು ದಾಳಿ ಮಾಡಿ, ಕುಖ್ಯಾತ ಕಳ್ಳ ಅರ್ಬಾಜ್ ನನ್ನು ಬಂಧಿಸಿದ್ದಾರೆ. https://kannadanewsnow.com/kannada/man-attempts-suicide-by-consuming-poison-after-girlfriends-abandonment-dies/ https://kannadanewsnow.com/kannada/big-news-temperatures-rise-across-the-country-harmful-to-the-heart-lungs-and-brain/
ಶಿವಮೊಗ್ಗ: ಪ್ರಿಯತಮೆ ಕೈಕೊಟ್ಟಿದ್ದ ಕಾರಣಕ್ಕೆ ವಿಷ ಸೇವಿಸಿ ಪ್ರಿಯಕರನೊಬ್ಬ ಆತ್ಮಹತ್ಯೆಗೆ ಯತ್ನಿಸಿದ್ದನು. ಕಳೆದ ನಾಲ್ಕು ದಿನಗಳ ಹಿಂದೆ ಆತ್ಮಹತ್ಯೆಗೆ ಯತ್ನಿಸಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಂತ ಪ್ರಿಯಕರ ಇಂದು ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದಾನೆ. ಶಿವಮೊಗ್ಗ ತಾಲ್ಲೂಕಿನ ಕಲ್ಲಾಪುರ ಗ್ರಾಮದ ಸಂಜಯ್(21) ಎಂಬಾತ ಹುಡುಗಿ ಕೈಕೊಟ್ಟಿದ್ದಕ್ಕೆ ನಾಲ್ಕು ದಿನಗಳ ಹಿಂದೆ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದನು. ಸಾವು ಬದುಕಿನ ನಡುವೆ ಹೋರಾಟುತ್ತಿದ್ದಂತ ಸಂಜಯ್ ನನ್ನು ಮೆಗ್ಗಾನ್ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಲಾಗಿತ್ತು. ಇಂದು ಮೆಗ್ಗಾನ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಂತ ಸಂಜಯ್(21) ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದಾನೆ. ಹೀಗಾಗಿ ಮೆಗ್ಗಾನ್ ಆಸ್ಪತ್ರೆಯ ಬಳಿಯಲ್ಲಿ ಸಂಜಯ್ ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ. ಈ ಸಂಬಂಧ ಶಿವಮೊಗ್ಗ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. https://kannadanewsnow.com/kannada/four-labourers-die-of-suffocation-while-cleaning-water-tank-in-mumbai/ https://kannadanewsnow.com/kannada/big-news-temperatures-rise-across-the-country-harmful-to-the-heart-lungs-and-brain/
ಮುಂಬೈ: ಮುಂಬೈನ ನಾಗಪಾಡಾದಲ್ಲಿ ನಿರ್ಮಾಣ ಹಂತದಲ್ಲಿದ್ದ ಸ್ಥಳದಲ್ಲಿದ್ದಂತ ನೆಲದಡಿಯ ನೀರಿನ ಟ್ಯಾಂಕ್ ಗೆ ಪ್ರವೇಶಿಸಿದ ಕನಿಷ್ಠ ನಾಲ್ವರು ಕಾರ್ಮಿಕರು ಭಾನುವಾರ ಉಸಿರುಗಟ್ಟಿ ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಭಾನುವಾರ ಬೆಳಿಗ್ಗೆ 11:30 ರ ಸುಮಾರಿಗೆ ಈ ಘಟನೆ ನಡೆದಿದ್ದು, ಐವರು ಗುತ್ತಿಗೆ ಕಾರ್ಮಿಕರು ಬಿಸ್ಮಿಲ್ಲಾ ಸ್ಪೇಸ್ ಎಂಬ ನಿರ್ಮಾಣ ಹಂತದ ಕಟ್ಟಡದ ಟ್ಯಾಂಕ್ ಅನ್ನು ಸ್ವಚ್ಛಗೊಳಿಸಲು ಪ್ರವೇಶಿಸಿ ಪ್ರಜ್ಞೆ ಕಳೆದುಕೊಂಡರು. ಘಟನೆಯ ನಂತರ, ಸ್ಥಳದಲ್ಲಿದ್ದ ಇತರರು ಅಗ್ನಿಶಾಮಕ ದಳಕ್ಕೆ ಮಾಹಿತಿ ನೀಡಿದರು. ಸಿಕ್ಕಿಬಿದ್ದ ಕಾರ್ಮಿಕರನ್ನು ರಕ್ಷಿಸಿದ ನಂತರ, ಅವರನ್ನು ಹತ್ತಿರದ ಜೆಜೆ ಆಸ್ಪತ್ರೆಗೆ ಸಾಗಿಸಲಾಯಿತು. ಅಲ್ಲಿ ಅವರಲ್ಲಿ ನಾಲ್ವರು ಮೃತಪಟ್ಟಿದ್ದಾರೆ ಎಂದು ಘೋಷಿಸಲಾಯಿತು. ಇತರರೊಂದಿಗೆ ಸಿಕ್ಕಿಬಿದ್ದ ಇನ್ನೊಬ್ಬ ಕಾರ್ಮಿಕನ ಸ್ಥಿತಿ ಸ್ಥಿರವಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. https://kannadanewsnow.com/kannada/pune-bmw-driver-apologises-for-urinating-in-public/ https://kannadanewsnow.com/kannada/big-news-temperatures-rise-across-the-country-harmful-to-the-heart-lungs-and-brain/
ಪುಣೆ: ಬಿಎಂಡಬ್ಲ್ಯು ಕಾರು ಚಾಲಕ ಗೌರವ್ ಅಹುಜಾ ಸಾರ್ವಜನಿಕವಾಗಿ ಮೂತ್ರ ವಿಸರ್ಜನೆ ಮಾಡುತ್ತಿರುವ ವಿಡಿಯೋ ವೈರಲ್ ಆಗಿದ್ದು, ಈ ಕೃತ್ಯಕ್ಕೆ ಕ್ಷಮೆಯಾಚಿಸಿದ್ದಾರೆ. ಕೋಪಗೊಂಡ ಸಾರ್ವಜನಿಕರು ತಮ್ಮ ಕುಟುಂಬಕ್ಕೆ ತೊಂದರೆ ನೀಡದಂತೆ ಅವರು ವಿನಂತಿಸಿದರು. ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡಿದ ವೀಡಿಯೊದಲ್ಲಿ, ಅಹುಜಾ ತಾನು ಮಾಡಿದ್ದು ತಪ್ಪು ಎಂದು ಒಪ್ಪಿಕೊಂಡಿದ್ದಾರೆ. ಘಟನೆ ನಡೆದ ಮಹಾರಾಷ್ಟ್ರದ ಪುಣೆಯಲ್ಲಿ ಪೊಲೀಸರ ಮುಂದೆ ಶರಣಾಗುವುದಾಗಿ ಅವರು ಭರವಸೆ ನೀಡಿದರು. “ನಾನು ಗೌರವ್ ಅಹುಜಾ, ನಾನು ಸಾರ್ವಜನಿಕವಾಗಿ ಮಾಡಿದ್ದು ತುಂಬಾ ತಪ್ಪು. ನಾನು ಸಾರ್ವಜನಿಕರಿಗೆ, ಪೊಲೀಸ್ ಇಲಾಖೆಗೆ ಮತ್ತು ಶಿಂಧೆ ಸಾಹೇಬರಿಗೆ ಕ್ಷಮೆಯಾಚಿಸುತ್ತೇನೆ. ನನಗೆ ಒಂದು ಅವಕಾಶ ನೀಡಿ, ಕ್ಷಮಿಸಿ. ನನ್ನ ಕುಟುಂಬದ ಯಾವುದೇ ಸದಸ್ಯರಿಗೆ ತೊಂದರೆ ನೀಡಬೇಡಿ. ಮುಂದಿನ ಎಂಟು ಗಂಟೆಗಳಲ್ಲಿ ನಾನು ಯೆರವಾಡಾ ಪೊಲೀಸ್ ಠಾಣೆಯಲ್ಲಿ ಶರಣಾಗುತ್ತೇನೆ” ಎಂದು ಅವರು ಕೈಮುಗಿದು ವೀಡಿಯೊದಲ್ಲಿ ಹೇಳಿದ್ದಾರೆ. https://twitter.com/VijayKumbhar62/status/1898554935866016062 ವೀಡಿಯೊದಲ್ಲಿ ಉಲ್ಲೇಖಿಸಲಾದ ‘ಶಿಂಧೆ ಸಾಹೇಬ್’ ಮಹಾರಾಷ್ಟ್ರ ಉಪಮುಖ್ಯಮಂತ್ರಿ ಏಕನಾಥ್ ಶಿಂಧೆ ಅವರನ್ನು ಉಲ್ಲೇಖಿಸಬಹುದು. ನಂತರ ಅಹುಜಾ ಪುಣೆ ಪೊಲೀಸರ…
ಬೆಳಗಾವಿ: ಕ್ಷುಲ್ಲಕ ಕಾರಣಕ್ಕಾಗಿ ಮನೆಯ ಖುಷಿಯಲ್ಲಿದ್ದಂತ ಮಗನನ್ನೇ ತಂದೆಯೊಬ್ಬ ಕಲ್ಲಿನಿಂದ ಹೊಡೆದು ಕೊಂದಿರುವಂತ ಘಟನೆ ಬೆಳಗಾವಿಯಲ್ಲಿ ನಡೆದಿದೆ. ಬೆಳಗಾವಿ ತಾಲ್ಲೂಕಿನ ಚಿಕ್ಕ ನಂದಿಹಳ್ಳಿ ಗ್ರಾಮದ ಮಂಜುನಾಥ್ ಕುಡಿದು ಬಂದು ಗಲಾಟೆ ಮಾಡಿದ್ದಾನೆ. ಎಷ್ಟೇ ಕುಡಿತ ಬಿಡಿಸೋದಕ್ಕೆ ಪ್ರಯತ್ನಿಸಿದರೂ ಬಿಟ್ಟಿಲ್ಲ. ಮದುವೆ ಬೇರೆ ಸೆಟ್ ಆಗಿದೆ. ಈಗಲಾದರೂ ಸರಿಯಾಗಿ ಇರುವಂತ ತಂದೆ ನಾಗಪ್ಪ ಹಾಗೂ ಸಹೋದರ ಗುರುಬಸಪ್ಪ ಬುದ್ಧಿವಾದ ಹೇಳಿದ್ದಾರೆ. ಕುಡಿದ ಮತ್ತಿನಲ್ಲಿ ಮಂಜುನಾಥ್ ಉಳ್ಳಾಗಡ್ಡಿ ಗಲಾಟೆ ಜೋರಾಗಿ ಮಾಡಿದ್ದಾನೆ. ಇದರಿಂದ ಬೇಸತ್ತಂತ ತಂದೆ ನಾಗಪ್ಪ ಹಾಗೂ ಗುರಬಸಪ್ಪ ಇಬ್ಬರು ಸೇರಿ ಕಲ್ಲಿನಿಂದ ಹೊಡೆದಿದ್ದಾರೆ. ತಲೆಗೆ ಕಲ್ಲಿನಿಂದ ಹೊಡೆದ ಕಾರಣ ತೀವ್ರವಾಗಿ ಗಾಯಗೊಂಡಿದ್ದಂತ ಮಂಜುನಾಥ್ ಉಳ್ಳಾಗಡ್ಡಿ(25) ಸಾವನ್ನಪ್ಪಿದ್ದಾರೆ. ಅಂದಹಾಗೇ ಮಾರ್ಚ್.12ರಂದು ಸಹೋದರ ಮಂಜುನಾಥ್ ಮದುವೆ ನಿಗದಿಯಾಗಿತ್ತು. ಈ ಕಾರಣ ಸೇನೆಯಲ್ಲಿದ್ದಂತ ಗುರುಬಸಪ್ಪ ರಜೆಯ ಮೇಲೆ ಊರಿಗೆ ಬಂದಿದ್ದರು. ಇದೀಗ ಸಹೋದರ ಮಂಜುನಾಥ್ ಹತ್ಯೆ ಕೇಸಲ್ಲಿ ತಂದೆ ನಾಗಪ್ಪ ಹಾಗೂ ಗುರುಬಸಪ್ಪ ವಿರುದ್ಧ ಪ್ರಕರಣ ದಾಖಲಿಸಿ, ತನಿಖೆ ನಡೆಸುತ್ತಿದ್ದಾರೆ. https://kannadanewsnow.com/kannada/two-killed-as-sajjana-collapses-in-hassans-belur/ https://kannadanewsnow.com/kannada/isro-to-get-two-new-launchpads-in-two-states-chandrayaan-4-getting-ready/ https://kannadanewsnow.com/kannada/big-news-temperatures-rise-across-the-country-harmful-to-the-heart-lungs-and-brain/
ಹಾಸನ: ಜಿಲ್ಲೆಯ ಬೇಲೂರಲ್ಲಿ ಹಳೆಯ ಕಟ್ಟಡದ ಸಜ್ಜಾ ಕುಸಿದು ಘೋರ ದುರಂತವೊಂದು ಸಂಭವಿಸಿದೆ. ಬೀದಿ ಬದಿಯಲ್ಲಿ ವ್ಯಾಪಾರ ಮಾಡುತ್ತಿದ್ದಂತ ಇಬ್ಬರು ಸಾವನ್ನಪ್ಪಿದ್ದಾರೆ. ಇನ್ನೂ ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಹಾಸನದ ಬೇಲೂರಿನ ಚನ್ನಕೇಶವ ದೇವಾಲಯ ರಸ್ತೆಯ ಸಮೀಪದ ಖಾಸಗಿ ಕಟ್ಟಡ ಸಜ್ಜಾವೊಂದು ದಿಢೀರ್ ಕುಸಿತಗೊಂಡಿದೆ. ಈ ಘಟನೆಯಲ್ಲಿ ನಜೀರ್ ಹಗೂ ಅಮರನಾಥ್ ಎಂಬುವರು ಸಾವನ್ನಪ್ಪಿದ್ದಾರೆ. ಇನ್ನೂ ಈ ದುರಂತದಲ್ಲಿ ನೀಲಮ್ಮ, ಜ್ಯೋತಿ ಎಂಬುವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಶಿಲ್ಪಾ ಎಂಬುವರಿಗೆ ತಾಲ್ಲೂಕು ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂಬುದಾಗಿ ಹಾಸನ ಎಸ್ಪಿ ಮೊಹಮ್ಮದ್ ಸುಜೇತಾ ತಿಳಿಸಿದ್ದಾರೆ. ಇಂದು ಮಧ್ಯಾಹ್ನ 1.30ರ ಸುಮಾರಿಗೆ ಈ ಘಟನೆ ನಡೆದಿದೆ. ಮೃತರು ಹಾಗೂ ಗಾಯಗೊಂಡವರು ಬೀದಿ ಬರಿಯ ವ್ಯಾಪಾರಿಗಳು ಹಾಗೂ ಖರೀದಿದಾರರು ಎಂಬುದಾಗಿ ತಿಳಿದು ಬಂದಿದೆ. ಹಳೆಯ ಕಟ್ಟಡ ಕೆಳಗೆ ವ್ಯಾಪಾರ ಮಾಡುತ್ತಿದ್ದದ್ದೇ ಈ ಘಟನೆಗೆ ಕಾರಣ ಎನ್ನಲಾಗುತ್ತಿದೆ. https://kannadanewsnow.com/kannada/opposition-leader-r-ashoka-challenged-siddaramaiah-will-the-cm-give-the-responsibility/ https://kannadanewsnow.com/kannada/big-news-temperatures-rise-across-the-country-harmful-to-the-heart-lungs-and-brain/
ಬೆಂಗಳೂರು: ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರಿಗೆ ವಿಪಕ್ಷ ನಾಯಕ ಆರ್ ಅಶೋಕ್ ಅವರು ಎಕ್ಸ್ ನಲ್ಲಿ ಪೋಸ್ಟ್ ಒಂದನ್ನು ಮಾಡಿ ಈ ಕೆಳಗಿನಂತೆ ಸವಾಲ್ ಹಾಕಿದ್ದಾರೆ. ಆರ್ ಅಶೋಕ್ ಅವರ ಸವಾಲಿಗೆ ಸಿಎಂ ಜವಾಬ್ ಕೊಡ್ತಾರಾ ಎಂಬುದನ್ನು ಕಾದು ನೋಡಬೇಕಿದೆ. ಜಾರಿ ನಿರ್ದೇಶನಾಲಯ (ಇ.ಡಿ.) ಬಂಧನದಿಂದ ತಪ್ಪಿಸಿಕೊಳ್ಳಲು ಮುಡಾದಿಂದ ಅಕ್ರಮವಾಗಿ ಪಡೆದ 14 ಸೈಟುಗಳನ್ನು ವಾಪಸ್ಸು ಕೊಟ್ಟಿದ್ದ ಸಿಎಂ ಸಿದ್ದರಾಮಯ್ಯ ಕುಟುಂಬ, ಈಗ ಸೈಟುಗಳನ್ನು ವಾಪಸ್ಸು ಪಡೆಯುವ ಮಾತಾಡುತ್ತಿದೆ ಎಂದಿದ್ದಾರೆ. ಸನ್ಮಾನ್ಯ ಮುಖ್ಯಮಂತ್ರಿಗಳೇ, ನಿಮಗೆ ನನ್ನದೊಂದು ಸವಾಲು. ನಿಮ್ಮ ಪುತ್ರ, ವಿಧಾನ ಪರಿಷತ್ ಸದಸ್ಯರಾದ ಡಾ.ಯತೀಂದ್ರ ಅವರು ಮೂಡಾದಿಂದ 14 ಸೈಟುಗಳನ್ನು ವಾಪಸ್ಸು ಪಡೆಯುತ್ತೇವೆ, ಅದು ನಮಗೇ ಸೇರಬೇಕು ಎಂದು ಹೇಳಿದ್ದಾರೆ. ಅಷ್ಟೇ ಅಲ್ಲದೆ ನೀವು 16 ಬಜೆಟ್ ಅಲ್ಲ, 19 ಬಜೆಟ್ ಮಂಡಿಸುತ್ತೀರಿ ಎಂದೂ ಕೂಡ ಹೇಳಿದ್ದಾರೆ ಎಂದು ತಿಳಿಸಿದ್ದಾರೆ. ಸಿಎಂ ಸಿದ್ದರಾಮಯ್ಯನವರು ನಿಜವಾಗಿಯೂ ಸತ್ಯವಂತರಾಗಿದ್ದಾರೆ, ಪ್ರಾಮಾಣಿಕರಾಗಿದ್ದರೆ, ಸ್ಟ್ರಾಂಗ್ ಮುಖ್ಯಮಂತ್ರಿ ಆಗಿದ್ದರೆ, ಮುಂದಿನ ಬಜೆಟ್ ಮಂಡಿಸುವ ಮುನ್ನ ಮುಡಾಗೆ ಹಿಂದಿರುಗಿಸಿರುವ ಸೈಟುಗಳನ್ನು…
ಮುಂಬೈ: ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಹಿನ್ನಲೆಯಲ್ಲಿ ಹೋಟೆಲ್ ಒಂದರಲ್ಲಿ ಪಾರ್ಟಿ ಮಾಡಲು ಮಹಿಳೆಯರು ನಿರ್ಧರಿಸಿದ್ದರು. ಅದರಂತೆ ಮುಂಬೈನಲ್ಲಿನ ಹೋಟೆಲ್ ಒಂದಕ್ಕೆ ತೆರಳಿ ಪಾರ್ಟಿ ನಡೆಸಿದ್ದರು. ಆ ವೇಳೆಯಲ್ಲಿ ಪೋಟೆಲ್ ನವರು ಸರ್ವ್ ಮಾಡಿದಂತ ಗೋಬಿ ಮಂಚೂರಿಯಲ್ಲಿ ಇಲಿ ಮರಿ ಪತ್ತೆಯಾಗಿದ್ದನ್ನು ಕಂಡು ಶಾಕ್ ಆಗಿದ್ದಾರೆ. ಮುಂಬೈನ ಪರ್ಪಲ್ ಬಟರ್ ಪ್ಲೈ ಹೋಟೆಲ್ ಗೆ ನಿನ್ನೆ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಪ್ರಯುಕ್ತ ಸ್ನೇಹಿತೆಯರು ಸೇರಿದಂತೊಂ ಪಾರ್ಟಿಗೆಂದು ತೆರಳಿದ್ದರು. ವಿವಿಧ ಭಕ್ಷ್ಯಗಳನ್ನು ಆರ್ಡರ್ ಮಾಡಿದ್ದರು. ಇದರ ಜೊತೆಗೆ ಗೋಬಿ ಮಂಚೂರಿ ಕೂಡ ಆರ್ಡರ್ ನೀಡಿದ್ದರು. ಊಟವನ್ನು ಮಾಡುತ್ತಿದ್ದಾಗ, ಮಹಿಳೆಯೊಬ್ಬರಿಗೆ ಗೋಬಿ ಮಂಚೂರಿಯಲ್ಲಿ ಸತ್ತ ಇಲಿ ಮರಿ ಪತ್ತೆಯಾಗಿದೆ. ಇದನ್ನು ಕಂಡ ಮಹಿಳೆಯರು ಶಾಕ್ ಆಗಿದ್ದಾರೆ. ಈ ಬಗ್ಗೆ ಹೋಟೆಲ್ ಮಾಲೀಕರಿಗೆ ಜ್ಯೋತಿ ಕೊಂಡೆ ಎಂಬುವರು ಪ್ರಶ್ನಿಸಿದ್ದಾರೆ. ಸರಿಯಾಗಿ ಪ್ರತಿಕ್ರಿಯಿಸದ ಕಾರಣ ಹೋಟೆಲ್ ಮುಂದೆ ಪ್ರತಿಭಟನೆ ನಡೆಸಿದ್ದಾರೆ. ಈ ಬಳಿಕ ಹೋಟೆಲ್ ಮಾಲೀಕ ತಮ್ಮ ತಪ್ಪು ಒಪ್ಪಿಕೊಂಡಿದ್ದಾರೆ. ಆ ಬಳಿಕ ಜ್ಯೋತಿ ಕೊಂಡೆ ಅವರು ಮುಂಬೈನ…
ಕೊಪ್ಪಳ: ಜಿಲ್ಲೆಯ ಗಂಗಾವತಿಯಲ್ಲಿ ಪ್ರವಾಸಿಗರ ಮೇಲೆ ಹಲ್ಲೆ ಮಾಡಿ, ಇಬ್ಬರು ಮಹಿಳೆಯರ ಮೇಲೆ ಗ್ಯಾಂಗ್ ರೇಪ್ ನಡೆಸಲಾಗಿತ್ತು. ಈ ಪ್ರಕರಣ ಸಂಬಂಧ ಪರಾರಿಯಾಗಿದ್ದಂತ ಮತ್ತೋರ್ವ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಕೊಪ್ಪಳದ ಗಂಗಾವತಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರವಾಸಿಗರ ಮೇಲೆ ಹಲ್ಲೆ ಮತ್ತು ಇಬ್ಬರು ಮಹಿಳೆಯರ ಮೇಲೆ ಗ್ಯಾಂಗ್ ರೇಪ್ ಪ್ರಕರಣ ದಾಖಲಾಗಿತ್ತು. ಈ ಘಟನೆಯನ್ನು ಸಿಎಂ ಸಿದ್ಧರಾಮಯ್ಯ ಖಂಡಿಸಿದ್ದರು. ಅಲ್ಲದೇ ಸೂಕ್ತ ಕಾನೂನು ಕ್ರಮಕ್ಕೆ ಸೂಚನೆ ನೀಡಿದ್ದರು. ಈ ಬೆನ್ನಲ್ಲೇ ಪೊಲೀಸರು ಪರಾರಿಯಾಗಿದ್ದಂತ ಮತ್ತೋರ್ವ ಆರೋಪಿಯನ್ನು ಬಂಧಿಸಿದ್ದಾರೆ. ಇಂದು ತಮಿಳುನಾಡಿನಲ್ಲಿ ಗಂಗಾವತಿ ಗ್ಯಾಂಗ್ ರೇಪ್ ಪ್ರಕರಣ ಸಂಬಂಧ ಆರೋಪಿಯನ್ನು ಬಂಧಿಸಲಾಗಿದೆ. ನಿನ್ನೆಯಷ್ಟೇ ಪೊಲೀಸರು ಮಲ್ಲೇಶ್, ಚೇತನ್, ಸಾಯಿ ಎಂಬಾತನನ್ನು ಬಂಧಿಸಿದ್ದರು. ಈ ಪ್ರಕರಣದಲ್ಲಿ ಸಾಯಿರಾಮ್ ತಲೆಮರೆಸಿಕೊಂಡಿದ್ದು, ಆತನ ಪತ್ತೆಗೆ ಗಂಗಾವತಿ ಗ್ರಾಮಾಂತರ ಠಾಣೆಯ ಪೊಲೀಸರು ಬಲೆ ಬೀಸಿದ್ದಾರೆ. https://kannadanewsnow.com/kannada/aishwarya-gowda-fraud-case-ex-minister-vinay-kulkarnis-driver-questioned/ https://kannadanewsnow.com/kannada/big-news-temperatures-rise-across-the-country-harmful-to-the-heart-lungs-and-brain/
ಬೆಂಗಳೂರು: ಹಲವರಿಗೆ ಚಿನ್ನ ವಂಚನೆ ಪ್ರಕರಣದ ಐಶ್ವರ್ಯ ಗೌಡ ಪ್ರಕರಣಕ್ಕೆ ಈಗ ಬಿಗ್ ಟ್ವಿಸ್ಟ್ ಸಿಕ್ಕಿದೆ. ಈ ಕೇಸಲ್ಲಿ ಮಾಜಿ ಸಚಿವ ವಿನಯ್ ಕುಲಕರ್ಣಿ ಅವರ ಕಾರು ಚಾಲಕನನ್ನು ಪೊಲೀಸರು ವಿಚಾರಣೆಗೆ ಒಳಪಡಿಸಿದ್ದಾರೆ. ಐಶ್ವರ್ಯ ಗೌಡ ಚಿನ್ನ ವಂಚನೆ ಕೇಸ್ ಸಂಬಂಧ ಎಸಿಪಿ ಭರತ್ ರೆಡ್ಡಿ ಅವರ ಕಾರು ಚಾಲಕ ವೀರೇಶ್ ದಳವಾಯಿಯನ್ನು ವಿಚಾರಣೆ ನಡೆಸುತ್ತಿದ್ದಾರೆ. ಐಶ್ವರ್ಯ ಗೌಡಗೆ ಸೇರಿದ್ದಂತ ಕಾರು ವಿನಯ್ ಕುಲಕರ್ಣಿ ಮನೆಯಲ್ಲಿ ಪತ್ತೆಯಾಗಿದ್ದರಿಂದ ಕಾರು ಚಾಲಕ ವೀರೇಶ್ ದಳವಾಯಿಯನ್ನು ವಿಚಾರಣೆ ನಡೆಸುತ್ತಿದ್ದಾರೆ. ಅಂದಹಾಗೇ ಮಾಜಿ ಸಚಿವ ವಿನಯ್ ಕುಲಕರ್ಣಿಗೆ ಐಶ್ವರ್ಯ ಗೌಡ ಅವರ ಪರಿಚಯವಿತ್ತು. ಮಹಾರಾಷ್ಟ್ರಕ್ಕೆ ಹೋಗುವಾಗ ವಿನಯ್ ಕುಲಕರ್ಣಿ ಮನೆಗೆ ಐಶ್ವರ್ಯ ಗೌಡ ಬಂದಿದ್ದರು. ವಾಪಾಸ್ ಹೋಗುವಾಗ ಕಾರು ಬಿಟ್ಟು ವಿಮಾನದಲ್ಲಿ ಹೋಗಿದ್ದರು. ಅವರ ಬೆನ್ಜ್ ಕಾರು ವಿನಯ್ ಕುಲಕರ್ಣಿ ಮನೆ ಬಳಿಯೇ ಇತ್ತು ಎಂಬುದಾಗಿ ತಿಳಿದು ಬಂದಿದೆ. https://kannadanewsnow.com/kannada/bjp-to-protest-against-inadequate-power-supply-in-sagar-stage-protest-in-front-of-mescom-office-tomorrow/ https://kannadanewsnow.com/kannada/big-news-temperatures-rise-across-the-country-harmful-to-the-heart-lungs-and-brain/