Author: kannadanewsnow09

ಸಾಗರ: ಶಿವಮೊಗ್ಗ ಜಿಲ್ಲೆಯ ಪ್ರಮುಖ ವಾಣಿಜ್ಯ ನಗರಿ ಸಾಗರದ ನಗರಸಭೆಯಲ್ಲಿ ಇಂದು ಸಂಭ್ರಮದ ವಾತಾವರಣ ಮನೆಮಾಡಿತ್ತು. ಸಾಗರ ನಗರಸಭೆಯ ಪೌರಾಯುಕ್ತರಾದ ಹೆಚ್.ಕೆ. ನಾಗಪ್ಪ ಅವರ 58ನೇ ವರ್ಷದ ಹುಟ್ಟುಹಬ್ಬವನ್ನು ಪೌರ ಸೇವಾ ನೌಕರರ ಸಂಘದ ವತಿಯಿಂದ ಅತ್ಯಂತ ಅರ್ಥಪೂರ್ಣವಾಗಿ ಆಚರಿಸಲಾಯಿತು. ನೌಕರರ ಸಂಘದಿಂದ ಅದ್ದೂರಿ ಶುಭಾಶಯ ನಗರಸಭೆಯ ಪೌರ ಸೇವಾ ಸಂಘದ ಕಚೇರಿಯಲ್ಲಿ ಆಯೋಜಿಸಲಾಗಿದ್ದ ಈ ಸರಳ ಸುಂದರ ಸಮಾರಂಭದಲ್ಲಿ, ನೌಕರರು ಒಗ್ಗೂಡಿ ಕೇಕ್ ಕತ್ತರಿಸುವ ಮೂಲಕ ತಮ್ಮ ನೆಚ್ಚಿನ ಅಧಿಕಾರಿಗೆ ಜನ್ಮದಿನದ ಶುಭಾಶಯಗಳನ್ನು ಕೋರಿದರು. ಕೇವಲ ಒಬ್ಬ ಅಧಿಕಾರಿಯಾಗಿ ಮಾತ್ರವಲ್ಲದೆ, ನೌಕರರೊಂದಿಗೆ ಉತ್ತಮ ಬಾಂಧವ್ಯ ಹೊಂದಿರುವ ನಾಗಪ್ಪ ಅವರಿಗೆ ಸಂಘದ ಪದಾಧಿಕಾರಿಗಳು ಹೂಗುಚ್ಛ ನೀಡಿ ಗೌರವಿಸಿದರು. ಬಸವರಾಜ ಹೊರಟ್ಟಿ ಅವರ ಕಥೆಗಳ ಮೂಲಕ ಬದುಕಿನ ಪಾಠ ಹುಟ್ಟುಹಬ್ಬದ ಸಂಭ್ರಮದ ನಡುವೆಯೂ ಪೌರಾಯುಕ್ತ ಹೆಚ್.ಕೆ. ನಾಗಪ್ಪ ಅವರು ನೌಕರರಿಗೆ ಪ್ರಸ್ತುತ ಕಾಲಘಟ್ಟದ ಬಗ್ಗೆ ಮಾರ್ಮಿಕವಾಗಿ ಅರಿವು ಮೂಡಿಸಿದರು. ಈ ಸಂದರ್ಭದಲ್ಲಿ ಅವರು ಕರ್ನಾಟಕ ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅವರು…

Read More

ದುಬೈ/ಮಸ್ಕತ್: ಜಗತ್ತಿನ ಅತ್ಯಂತ ಪ್ರಮುಖ ತೈಲ ಸಾಗಾಣಿಕಾ ಮಾರ್ಗವಾದ ಹಾರ್ಮುಜ್ ಜಲಸಂಧಿಯು ಪ್ರಸ್ತುತ ಭೀಕರ ‘ಡಿಜಿಟಲ್ ಬ್ಲಾಕೌಟ್’ಗೆ ಸಾಕ್ಷಿಯಾಗಿದೆ. ಅತ್ಯಾಧುನಿಕ ಎಲೆಕ್ಟ್ರಾನಿಕ್ ಯುದ್ಧತಂತ್ರದ ಭಾಗವಾಗಿ ನಡೆಯುತ್ತಿರುವ ಜಿಪಿಎಸ್ (GPS) ಜಾಮಿಂಗ್‌ನಿಂದಾಗಿ ನೂರಾರು ತೈಲ ಟ್ಯಾಂಕರ್‌ಗಳು ಸಮುದ್ರದ ಮಧ್ಯೆ ದಿಕ್ಕುತೋಚದೆ ನಿಂತಿದ್ದು, ಜಾಗತಿಕ ತೈಲ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗುವ ಭೀತಿ ಎದುರಾಗಿದೆ. ಏನಿದು ಬಿಕ್ಕಟ್ಟು? ಕಾರ್ಯಾಚರಣೆಯ ಹಿನ್ನೆಲೆ: ಫೆಬ್ರವರಿ 28 ರಂದು ಇರಾನ್ ಮೇಲೆ ಅಮೆರಿಕ ಮತ್ತು ಇಸ್ರೇಲ್ ಮಿಲಿಟರಿ ಪಡೆಗಳು ಜಂಟಿಯಾಗಿ ನಡೆಸಿದ ‘ಆಪರೇಷನ್ ಎಪಿಕ್ ಫ್ಯೂರಿ’ ದಾಳಿಯ ನಂತರ ಈ ಪ್ರದೇಶವು ಎಲೆಕ್ಟ್ರಾನಿಕ್ ಯುದ್ಧಭೂಮಿಯಾಗಿ ಮಾರ್ಪಟ್ಟಿದೆ. ಜಾಗತಿಕ ತೈಲ ಪೂರೈಕೆಯ ಶೇ. 20 ರಷ್ಟು ಭಾಗವನ್ನು ನಿರ್ವಹಿಸುವ ಈ ಜಲಮಾರ್ಗದಲ್ಲಿ ಈಗ ಹಡಗುಗಳ ಸಂಚಾರ ಸಂಪೂರ್ಣ ಹಳಿ ತಪ್ಪಿದೆ. ಜಾಮಿಂಗ್ ಮತ್ತು ವಂಚನೆ (Spoofing): ಹಡಗುಗಳ ಸಂಚರಣಾ ವ್ಯವಸ್ಥೆಯನ್ನು (Navigation) ಹದಗೆಡಿಸಲು ಎರಡು ರೀತಿಯ ತಂತ್ರಗಳನ್ನು ಬಳಸಲಾಗುತ್ತಿದೆ: ಜಾಮಿಂಗ್: ಉಪಗ್ರಹ ಸಂಕೇತಗಳನ್ನು ಪ್ರಬಲ ರೇಡಿಯೊ ಶಬ್ದದ ಮೂಲಕ ಅಡಚಣೆ ಮಾಡುವುದು.…

Read More

ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗವು (KPSC) ಗೆಜೆಟೆಡ್‌ ಪ್ರೊಬೇಷನರಿ ಗ್ರೂಪ್‌ ‘ಎ’ ಮತ್ತು ಗ್ರೂಪ್‌ ‘ಬಿ’ ವೃಂದದ ಒಟ್ಟು 384 ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಮುಖ್ಯ ಪರೀಕ್ಷೆಯ ಫಲಿತಾಂಶವನ್ನು ಸೋಮವಾರ ಪ್ರಕಟಿಸಿದೆ. ಅರ್ಹತೆ ಪಡೆದ ಅಭ್ಯರ್ಥಿಗಳನ್ನು 1:3 ಅನುಪಾತದ ಆಧಾರದ ಮೇಲೆ ವ್ಯಕ್ತಿತ್ವ ಪರೀಕ್ಷೆಗೆ (ಸಂದರ್ಶನ) ಆಯ್ಕೆ ಮಾಡಲಾಗಿದೆ. ಈ ನೇಮಕಾತಿ ಪ್ರಕ್ರಿಯೆಯ ಮುಖ್ಯ ಪರೀಕ್ಷೆಯು 2025ರ ಮೇ 3, 5, 7 ಮತ್ತು 9ರಂದು ರಾಜ್ಯದಾದ್ಯಂತ ಯಶಸ್ವಿಯಾಗಿ ನಡೆದಿತ್ತು. ದೀರ್ಘಕಾಲದ ಕಾಯುವಿಕೆಯ ನಂತರ ಆಯೋಗವು ಇದೀಗ ಸಂದರ್ಶನಕ್ಕೆ ಅರ್ಹರಾದವರ ಪಟ್ಟಿಯನ್ನು ಬಿಡುಗಡೆ ಮಾಡಿದ್ದು, ಅಭ್ಯರ್ಥಿಗಳಲ್ಲಿ ಸಂಚಲನ ಮೂಡಿಸಿದೆ. ಕೋರ್ಟ್ ಮೆಟ್ಟಿಲೇರಿದ್ದ ಅಭ್ಯರ್ಥಿಗಳಿಗೂ ಯಶಸ್ಸು: ಈ ಬಾರಿ ನೇಮಕಾತಿಯಲ್ಲಿ ಒಂದು ವಿಶೇಷ ಬೆಳವಣಿಗೆ ಕಂಡುಬಂದಿದೆ. ಡಿ. 29ರಂದು ನಡೆದಿದ್ದ ಪೂರ್ವಭಾವಿ ಪರೀಕ್ಷೆಯಲ್ಲಿ ಪ್ರಶ್ನೆ ಮತ್ತು ಉತ್ತರಗಳ ಭಾಷಾಂತರದ ಲೋಪದಿಂದಾಗಿ (ಇಂಗ್ಲಿಷ್‌ನಿಂದ ಕನ್ನಡಕ್ಕೆ) ಅನೇಕ ಅಭ್ಯರ್ಥಿಗಳು ಅನ್ಯಾಯವಾಗಿದೆ ಎಂದು ಹೈಕೋರ್ಟ್ ಮತ್ತು ಕೆಎಟಿ (KAT) ಮೆಟ್ಟಿಲೇರಿದ್ದರು. ನ್ಯಾಯಾಲಯದ ಷರತ್ತುಬದ್ಧ ಅನುಮತಿಯೊಂದಿಗೆ ಮುಖ್ಯ ಪರೀಕ್ಷೆ…

Read More

ಶಿವಮೊಗ್ಗ : ರಾಜ್ಯದಲ್ಲಿ 56 ಸಾವಿರ ಹುದ್ದೆಯನ್ನು ಭರ್ತಿ ಮಾಡುತ್ತಿರುವುದು ಐತಿಹಾಸಿಕ ನಿರ್ಧಾರ. ದೇಶದ ಯಾವ ರಾಜ್ಯದಲ್ಲೂ ಇಷ್ಟು ದೊಡ್ಡ ಪ್ರಮಾಣದ ನೇಮಕಾತಿ ನಡೆದಿಲ್ಲ ಎಂದು ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ತಿಳಿಸಿದರು. ಸೋಮವಾರದಂದು ತಮ್ಮ ಹುಟ್ಟು ಹಬ್ಬದ ನಿಮಿತ್ತ ಶಿವಮೊಗ್ಗ ಜಿಲ್ಲೆಯ ಸಾಗರದ ಜೋಸೆಫ್ ನಗರದಲ್ಲಿರುವ ಮಾಜಿ ಸಚಿವ ಕಾಗೋಡು ತಿಮ್ಮಪ್ಪ ಅವರ ಮನೆಗೆ ಭೇಟಿ ನೀಡಿ ಪತ್ರಕರ್ತರ ಜೊತೆ ಮಾತನಾಡಿದ ಅವರು, ಮೀಸಲಾತಿ ನಿಗಧಿಪಡಿಸದೆ ನೇಮಕಾತಿ ಮಾಡಿಕೊಂಡರೆ ಕೆಲವು ವರ್ಗಗಳಿಗೆ ಅನ್ಯಾಯವಾಗುತ್ತದೆ ಎಂದು ಹೇಳಿದರು. ಧಾರವಾಡದಲ್ಲಿ ಉದ್ಯೋಗಾಕಾಂಕ್ಷಿಗಳು ಪ್ರತಿಭಟನೆ ಮಾಡಿದ್ದಾರೆ. ನಮ್ಮ ಇಲಾಖೆಯಲ್ಲಿ ಹೆಚ್ಚು ಜನರು ಉದ್ಯೋಗಾಕಾಂಕ್ಷಿಗಳಿದ್ದಾರೆ. ವಿರೋಧ ಪಕ್ಷದ ನಾಯಕ ಅಶೋಕ್ ಪುಗಸಟ್ಟೆ ಭಾಷಣ ಮಾಡುತ್ತಾರೆ. 2 ಲಕ್ಷ ಉದ್ಯೋಗ ಭರ್ತಿ ಮಾಡಬೇಕು ಎಂದು ಹೇಳಿಕೆ ನೀಡುತ್ತಾರೆ. ಅವರೇನು ಕತ್ತೆ ಕಾಯುತ್ತಿದ್ದರಾ, ಮೂರು ಜನ ಉಪಮುಖ್ಯಮಂತ್ರಿಗಳು ಹಿಂದಿನ ಸರ್ಕಾರದಲ್ಲಿ ಇದ್ದರು. ಏನು ಸೆಗಣಿ ತಿನ್ನುತ್ತಿದ್ದರಾ ಎಂದು ಪ್ರಶ್ನಿಸಿದ ಸಚಿವರು, 56ಸಾವಿರ ಜನರನ್ನು ಏಕಕಾಲಕ್ಕೆ ಭರ್ತಿ ಮಾಡುತ್ತಿರುವುದು…

Read More

ಬೆಂಗಳೂರು: ಸೋಮವಾರದಂದು ಸರ್ಕಾರಿ ವೈಧ್ಯಾಧಿಕಾರಿಗಳ ಸಂಘದ ಪ್ರಮುಖರೊಂದಿಗೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಸಭೆ ನಡೆಸಿ, ಬೇಡಿಕೆ ಈಡೇರಿಕೆ ಬಗ್ಗೆ ಚರ್ಚೆ ನಡೆಸಿದರು. ಆದರೇ ಈ ಸಭೆಯಲ್ಲಿ ಮಾತುಕತೆ ವಿಫಲವಾಗಿದ್ದು, ನಿಗದಿಯಂತೆ ಮಾರ್ಚ್.11ರಂದು ಮುಷ್ಕರ ನಡಸಲಾಗುತ್ತಿದೆ ಎಂಬುದಾಗಿ ಸರ್ಕಾರಿ ವೈದ್ಯಾಧಿಕಾರಿಗಳ ಸಂಘ ಸ್ಪಷ್ಟ ಪಡಿಸಿದೆ. ಈ ಬಗ್ಗೆ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಹಂಚಿಕೊಂಡಿರುವಂತ ಕರ್ನಾಟಕ ಸರ್ಕಾರಿ ವೈದ್ಯಾಧಿಕಾರಿಗಳ ಸಂಘವು, ಸೋಮವಾರದಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ವೈದ್ಯರು, ಅಧಿಕಾರಿ ನೌಕರರ ಪ್ರಮುಖ ಬೇಡಿಕೆಗಳ ಬಗ್ಗೆ ಚರ್ಚಿಸಲು ಸಚಿವ ದಿನೇಶ್ ಗುಂಡೂರಾವ್ ಅವರ ಅಧ್ಯಕ್ಷತೆಯಲ್ಲಿ ವಿಕಾಸಸೌಧದಲ್ಲಿ ಸಭೆ ನಡೆಯಿತು ಎಂದಿದೆ. ಸೋಮವಾರದಂದು ನಡೆದ ಸಭೆಯಲ್ಲಿ ಆರೋಗ್ಯ ಇಲಾಖೆಯ ಸರ್ಕಾರಿ ವೈದ್ಯರು, ನೌಕರರ ಪ್ರಮುಖ ಬೇಡಿಕೆಗಳಿಗೆ ಸಂಬಂಧಿಸಿದಂತೆ ಸುದೀರ್ಘವಾದಂತ ಚರ್ಚೆ ನಡೆಸಲಾಯಿತು. ಆದರೇ ಸಚಿವರು ಹಾಗೂ ಇಲಾಖೆಯ ಉನ್ನತ ಮಟ್ಟದ ಅಧಿಕಾರಿಗಳು ನಮ್ಮ ಬೇಡಿಕೆಗಳನ್ನು ಈಡೇರಿಸುವ ಸ್ಪಷ್ಟವಾದಂತ ಭರವಸೆಯನ್ನು ನೀಡಿರುವುದಿಲ್ಲ ಎಂದು ಹೇಳಿದೆ. ಈ ಹಿನ್ನಲೆಯಲ್ಲಿ ನಮ್ಮ ಸಂಘವು ಈ ಹಿಂದೆ ಕೈಗೊಂಡ…

Read More

ಬೆಂಗಳೂರು: ಇ-ಸ್ವತ್ತು 2.0 ತಂತ್ರಾಂಶದಡಿ ಇದುವರೆಗೆ ರಾಜ್ಯದಲ್ಲಿ 1,14,907 ಅರ್ಜಿಗಳನ್ನು ಅನುಮೋದಿಸಿ ವಿಲೇವಾರಿ ಮಾಡಲಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಹಾಗೂ ಮಾಹಿತಿ ಮತ್ತು ಜೈವಿಕ ತಂತ್ರಜ್ಞಾನ ಸಚಿವ ಪ್ರಿಯಾಂಕ್‌ ಖರ್ಗೆ ತಿಳಿಸಿದ್ದಾರೆ. ಸಾರ್ವಜನಿಕರಿಂದ ಇದುವರೆಗೆ ಒಟ್ಟು 1,38,470 ಅರ್ಜಿಗಳು ಸ್ವೀಕೃತವಾಗಿದ್ದು, 23,563 ಅರ್ಜಿಗಳು ಅನುಮೋದನೆಗಾಗಿ ಬಾಕಿ ಉಳಿದಿವೆ ಎಂದೂ ಸಚಿವರು ಮಾಹಿತಿ ನೀಡಿದ್ದಾರೆ. ವಿಕಾಸಸೌಧದ ತಮ್ಮ ಕಚೇರಿ ಸಭಾಂಗಣದಲ್ಲಿ ಸಚಿವರು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಇಲಾಖೆಯ ಅಧಿಕಾರಿಗಳ ಸಭೆ ನಡೆಸಿ ಪಂಚಾಯತ್‌ ರಾಜ್‌ ಇಲಾಖೆಯ ವಿವಿಧ ಕಾರ್ಯಕ್ರಮಗಳನ್ನು ಪರಿಶೀಲಿಸಿದರು. ಇ-ಸ್ವತ್ತು 2.0 ತಂತ್ರಾಂಶದ ಸಿಟಿಜನ್‌ ಇಂಟರ್‌ಫೇಸ್‌ (Citizen interface) ಮೂಲಕ ಅರ್ಜಿಗಳನ್ನು ಸಲ್ಲಿಸುವ ಸಂದರ್ಭದಲ್ಲಿ ಮತ್ತು ಅರ್ಜಿಗಳನ್ನು ಅನುಮೋದನೆ ಮಾಡುವ ಸಮಯದಲ್ಲಿ ಕೆಲವು ತಾಂತ್ರಿಕ ಸಮಸ್ಯೆಗಳು ಎದುರಾಗುತ್ತಿರುವುದು ಸರ್ಕಾರದ ಗಮನಕ್ಕೆ ಬಂದ ಹಿನ್ನೆಲೆಯಲ್ಲಿ ಇ-ಸ್ವತ್ತು ತಂತ್ರಾಂಶವನ್ನು ನಿರ್ವಹಿಸುತ್ತಿರುವ ಕೇಂದ್ರ ಸರ್ಕಾರದ ಎನ್‌ಐಸಿ (NIC) ಸಂಸ್ಥೆ ಮೂಲಕ ಉದ್ಭವಿಸಿರುವ ಇ-ಸ್ವತ್ತು 2.0 ತಂತ್ರಾಂಶದ ಸಮಸ್ಯೆಗಳನ್ನು ತ್ವರಿತವಾಗಿ ಬಗೆಹರಿಸಲು ಮತ್ತು ಉಳಿದ…

Read More

ಕೆಎನ್ಎನ್ ಡಿಜಿಟಲ್ ಡೆಸ್ಕ್: ಆಧುನಿಕ ಜೀವನಶೈಲಿಯಲ್ಲಿ ರಾಸಾಯನಿಕಯುಕ್ತ ಸಕ್ಕರೆಯ ಬಳಕೆಯಿಂದಾಗಿ ಮಧುಮೇಹ, ಬೊಜ್ಜು ಮುಂತಾದ ಸಮಸ್ಯೆಗಳು ಹೆಚ್ಚಾಗುತ್ತಿವೆ. ಈ ಹಿನ್ನೆಲೆಯಲ್ಲಿ, ನಮ್ಮ ಹಿರಿಯರು ಬಳಸುತ್ತಿದ್ದ ಸಾಂಪ್ರದಾಯಿಕ ‘ಜೋನಿ ಬೆಲ್ಲ’ (Liquid Jaggery) ಮತ್ತೆ ಜನಪ್ರಿಯವಾಗುತ್ತಿದೆ. ಕೇವಲ ಸಿಹಿಗಾಗಿ ಮಾತ್ರವಲ್ಲದೆ, ಇದರಲ್ಲಿರುವ ಅದ್ಭುತ ಆರೋಗ್ಯಕರ ಗುಣಗಳು ಇದನ್ನು ‘ಆರೋಗ್ಯದ ಗಣಿ’ ಎಂದು ಕರೆಯುವಂತೆ ಮಾಡಿದೆ. ಜೋನಿ ಬೆಲ್ಲದ ಪ್ರಮುಖ ಆರೋಗ್ಯಕಾರಿ ಉಪಯೋಗಗಳು: ನೈಸರ್ಗಿಕ ಶಕ್ತಿ ವರ್ಧಕ: ಜೋನಿ ಬೆಲ್ಲದಲ್ಲಿರುವ ಸಂಕೀರ್ಣ ಕಾರ್ಬೋಹೈಡ್ರೇಟ್‌ಗಳು ದೇಹಕ್ಕೆ ನಿಧಾನವಾಗಿ ಮತ್ತು ನಿರಂತರವಾಗಿ ಶಕ್ತಿಯನ್ನು ಒದಗಿಸುತ್ತವೆ. ಇದು ಆಯಾಸವನ್ನು ಕಡಿಮೆ ಮಾಡಿ, ದಿನವಿಡೀ ಲವಲವಿಕೆಯಿಂದ ಇರಲು ಸಹಾಯ ಮಾಡುತ್ತದೆ. ಜೀರ್ಣಕ್ರಿಯೆಗೆ ಸಹಕಾರಿ: ಊಟದ ನಂತರ ಒಂದು ಚಮಚ ಜೋನಿ ಬೆಲ್ಲ ಸೇವಿಸುವುದರಿಂದ ಜೀರ್ಣಕ್ರಿಯೆ ಸುಲಭವಾಗುತ್ತದೆ. ಇದು ಮಲಬದ್ಧತೆ ಸಮಸ್ಯೆಯನ್ನು ನಿವಾರಿಸಿ, ಹೊಟ್ಟೆಯ ಆರೋಗ್ಯವನ್ನು ಕಾಪಾಡುತ್ತದೆ. ರೋಗನಿರೋಧಕ ಶಕ್ತಿ ಹೆಚ್ಚಳ: ಇದರಲ್ಲಿ ಸತು (Zinc) ಮತ್ತು ಸೆಲೆನಿಯಮ್‌ನಂತಹ ಖನಿಜಾಂಶಗಳು ಸಮೃದ್ಧವಾಗಿವೆ. ಇವು ದೇಹದ ರೋಗನಿರೋಧಕ ಶಕ್ತಿಯನ್ನು ಬಲಪಡಿಸಿ, ಸೋಂಕುಗಳ ವಿರುದ್ಧ…

Read More

ಬೆಂಗಳೂರು: ಬೆಂಗಳೂರು ನಗರಾಭಿವೃದ್ಧಿ ಸಚಿವರೂ ಆಗಿರುವ ಡಿಸಿಎಂ ಡಿ.ಕೆ. ಶಿವಕುಮಾರ್ ಅವರ ಸೂಚನೆ ಹಿನ್ನೆಲೆಯಲ್ಲಿ ರಸ್ತೆ ಬದಿ ಹಾಗೂ ರಸ್ತೆ ವಿಭಜಕಗಳಲ್ಲಿ ನೆಡಲಾಗಿದ್ದ ಗಿಡಗಳನ್ನು ಸೂಕ್ತ ನಿರ್ವಹಣೆಗೆ ನಗರಾಭಿವೃದ್ಧಿ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿಗಳು ಆದೇಶ ಹೊರಡಿಸಿದ್ದಾರೆ. ಬೆಂಗಳೂರಿನ ಸೌಂದರ್ಯ ಹೆಚ್ಚಿಸಲು ನೆಡಲಾಗಿರುವ ಅಲಂಕಾರಿಕ ಗಿಡಗಳು ಸರಿಯಾಗಿ ಪೋಷಣೆಯಾಗದೇ ಒಣಗಿದ್ದು, ಬಹಳ ಕೆಟ್ಟದಾಗಿ ಕಾಣುತ್ತಿವೆ. ಹೀಗಾಗಿ ಗ್ರೇಟರ್ ಬೆಂಗಳೂರು ವ್ಯಾಪ್ತಿಯ ಎಲ್ಲಾ ರಸ್ತೆಬದಿ ಹಾಗೂ ರಸ್ತೆ ವಿಭಜಕಗಳಲ್ಲಿನ ಗಿಡಗಳನ್ನು ಸರಿಯಾಗಿ ಪೋಷಣೆ ಮಾಡಬೇಕು, ಒಣಗಿ ಬಿದ್ದಿರುವ ಕಸವನ್ನು ತೆರವುಗೊಳಿಸಬೇಕು. ಈ ಪ್ರಕ್ರಿಯೆಯನ್ನು ನಿರಂತರ ಪರಿಶೀಲಿಸಬೇಕು ಎಂದು ಶಿವಕುಮಾರ್ ಅವರು ಇತ್ತೀಚೆಗೆ ಸೂಚನೆ ನೀಡಿದ್ದರು. ಈ ಹಿನ್ನೆಲೆಯಲ್ಲಿ ನಗರಾಭಿವೃದ್ಧಿ ಇಲಾಖೆಯು ದಿನಾಂಕ 02.03.2026 ರಂದು ಆದೇಶ ಹೊರಡಿಸಿದ್ದು, “ರಸ್ತೆ ಬದಿ ಹಾಗೂ ರಸ್ತೆ ವಿಭಜಕಗಳಲ್ಲಿ ಬೆಳಸಲಾಗಿರುವ ಅಲಂಕಾರಿಕ ಗಿಡಗಳನ್ನು ಸರಿಯಾಗಿ ಪೋಷಣೆ ಮಾಡಿ, ಅವಕಾಶವಿರುವ ಕಡೆ ಹೊಸದಾಗಿ ಅಲಂಕಾರಿಕ ಗಿಡ, ಮರಗಳನ್ನು ಬೆಳೆಸಬೇಕು, ಈಗಾಗಲೇ ಒಣಗಿ ಬಿದ್ದಿರುವ ಕಸವನ್ನು ತೆಗೆದು ಸ್ವಚ್ಛಗೊಳಿಸಬೇಕು” ಎಂದು ಆದೇಶದಲ್ಲಿ…

Read More

ಶಿವಮೊಗ್ಗ: ಜಿಲ್ಲೆಯ ಸೊರಬ ತಾಲ್ಲೂಕಿನ ದೂಗೂರಿಗೆ ಮೂರು ಕಾಡಾನೆಗಳು ಎಂಟ್ರಿಯಾಗಿವೆ. ಮೊನ್ನೆಯಷ್ಟೇ ಕಾನಹಳ್ಳಿಯಲ್ಲಿದ್ದಂತ ಈ ಆನೆಗಳು, ಈಗ ದೂಗೂರು ಕಾಡಿಗೆ ಆಗಮಿಸಿದ್ದಾವೆ. ಕಾಡಾನೆಗಳ ಆಗಮನದಿಂದ ರೈತರು ಬೆಳೆ ನಾಶದ ಆತಂಕಕ್ಕೆ ಒಳಗಾಗಿದ್ದಾರೆ. ಕೆಲ ತಿಂಗಳ ಹಿಂದಷ್ಟೇ ಎರಡು ಜೋಡಿ ಕಾಡಾನೆಗಳು ಉಳವಿ, ಕೈಸೋಡಿ, ಕಾನಹಳ್ಳಿ, ದೂಗೂರು, ಬರಗಿಗೆ ಬಂದಿದ್ದವು. ಅಲ್ಲಲ್ಲಿ ರೈತರ ಫಲಸು ತಿಂದು ನಾಶಪಡಿಸಿದ್ದವು. ಇದೀಗ ಮತ್ತೆ ಕಾಡಾನೆಗಳು ರಿಟರ್ನ್ ಆಗಿದ್ದಾವೆ. ಈಗ ಒಂದಲ್ಲ, ಎರಡಲ್ಲ, ಬರೋಬ್ಬರಿ ಮೂರು ಕಾಡಾನೆಗಳು ದೂಗೂರು ವ್ಯಾಪ್ತಿಯ ಕಾಡಲ್ಲಿ ಕಾಣಿಸಿಕೊಂಡಿರೋದಾಗಿ ಅರಣ್ಯ ಇಲಾಖೆಯ ಮೂಲಗಳ ಮಾಹಿತಿಯಾಗಿದೆ. ಕಳೆದ ಒಂದೆರಡು ದಿನಗಳ ಹಿಂದೆ ಕಾನಹಳ್ಳಿಯಲ್ಲಿ ರೈತರೊಬ್ಬರ ತೋಟಕ್ಕೆ ನುಗ್ಗಿದ್ದಂತ ಇವೇ ಕಾಡಾನೆಗಳು, ರೈತನ ಅಡಿಕೆ ಮರಗಳನ್ನು ಮುರಿದು ಹಾಕಿದ್ದರೇ, ಬೆಳೆಯನ್ನು ತಿಂದು ಹಾಕಿ ನಾಶ ಪಡಿಸಿದ್ದವು. ಅಡಿಕೆ, ಬಾಳಿ ಗಿಡಗಳ ನಾಶದಿಂದ ರೈತ ಕಂಗಾಲಾಗಿದ್ದನು. ಇದೀಗ ಕಾನಹಳ್ಳಿ ಕಡೆಯಿಂದ ಮೂರು ಕಾಡಾನೆಗಳು ದೂಗೂರಿಗೆ ಎಂಟ್ರಿಯಾಗಿವೆ. ದೂಗೂರು ಕಾಡಿನಲ್ಲಿ ಮೂರು ಕಾಡಾನೆಗಳು ಬೀಡು ಬಿಟ್ಟಿವೆ ಎನ್ನಲಾಗುತ್ತಿದೆ. ಆದರೇ…

Read More

ಬೆಂಗಳೂರು: ಗ್ರೇಟರ್ ಬೆಂಗಳೂರು ಜೆಡಿಎಸ್ ಸಂಘಟನೆಗೆ ಸಂಬಂಧಿಸಿದಂತೆ ಎಲ್ಲಾ 28 ವಿಧಾನಸಭೆ ಕ್ಷೇತ್ರಗಳ ಪ್ರಮುಖರ ಜತೆ ಮಹತ್ವದ ಸಭೆ ನಡೆಸಿದ ಪಕ್ಷದ ರಾಜ್ಯಾಧ್ಯಕ್ಷರು, ಕೇಂದ್ರ ಸಚಿವರೂ ಆಗಿರುವ ಹೆಚ್.ಡಿ. ಕುಮಾರಸ್ವಾಮಿ ಅವರು, ಒಟ್ಟು 369 ವಾರ್ಡುಗಳಲ್ಲಿ ಪಕ್ಷ ಸಂಘಟನೆ ಮಾಡುವ ಬಗ್ಗೆ ಕೆಲ ನಿರ್ದಿಷ್ಟ ಸೂಚನೆಗಳನ್ನು ಕೊಟ್ಟರು. ಪಕ್ಷದ ರಾಜ್ಯದ ಕಚೇರಿಯಲ್ಲಿ ನಡೆದ ಈ ಸಭೆಯಲ್ಲಿ ಗ್ರೇಟರ್ ಬೆಂಗಳೂರು ಜೆಡಿಎಸ್ ಅಧ್ಯಕ್ಷ ಹೆಚ್.ಎಂ. ರಮೇಶ್ ಗೌಡ ಸೇರಿದಂತೆ ಐದು ವಿಭಾಗಗಳ ನೂತನ ಅಧ್ಯಕ್ಷರು, ಎಲ್ಲಾ ವಿಧಾನಸಭೆ ಕ್ಷೇತ್ರಗಳ ನೂತನ ಅಧ್ಯಕ್ಷರ ಜತೆ ಸಚಿವರು ಸುದೀರ್ಘ ಮಾತುಕತೆ ನಡೆಸಿದರು. ಗ್ರೇಟರ್ ಬೆಂಗಳೂರು ವ್ಯಾಪ್ತಿಯ ಪಕ್ಷದ ಘಟಕವನ್ನು ಪುನಾರಚನೆ ಮಾಡಲಾಗಿದ್ದು, ಎಲ್ಲಾ ಹೊಸ ಪದಾಧಿಕಾರಿಗಳನ್ನು ನೇಮಕ ಮಾಡಲಾಗಿದೆ. ಇದಾದ ನಂತರ ನಡೆದ ಮೊದಲ ಸಭೆ ಇದಾಗಿದೆ. ವಾರ್ಡುವಾರು, ಮತಗಟ್ಟೆವಾರು ಸಂಘಟನೆ ಮಾಡುವ ಕೆಲ ಮಹತ್ವದ ಸೂಚನೆಗಳನ್ನು ಕೊಟ್ಟ ಕುಮಾರಸ್ವಾಮಿ ಅವರು; ನಗರದ ಎಲ್ಲಾ ಭಾಗಗಳಲ್ಲಿ ಪಕ್ಷದ ಚಟುವಟಿಕೆಗಳು ನಿರಂತರವಾಗಿ ನಡೆಯಬೇಕು. ಎಲ್ಲಾ ಮುಖಂಡರು ಸಕ್ರಿಯವಾಗಿ ಕೆಲಸ…

Read More