Author: ವಸಂತ ಬಿ ಈಶ್ವರಗೆರೆ

ವಸಂತ ಬಿ ಈಶ್ವರಗೆರೆ (Vasantha B Eshwaragere) ಅವರು ಕರ್ನಾಟಕದ ಪತ್ರಕರ್ತರು ಮತ್ತು ಕವಿ. ಉದಯ ನ್ಯೂಸ್, ಟಿವಿ5 ಕನ್ನಡ ಸೇರಿದಂತೆ ವಿವಿಧ ಸುದ್ದಿ ಮಾಧ್ಯಮಗಳಲ್ಲಿ ಸುಮಾರು 15 ವರ್ಷಗಳ ಅನುಭವವನ್ನು ಹೊಂದಿದ್ದಾರೆ. ಪ್ರಸ್ತುತ ಅವರು Kannada News Now ಡಿಜಿಡಿಲ್‌ ಮಾಧ್ಯಮದಲ್ಲಿ ಸಂಪಾದಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಇವರು ತಾಜಾ ಸುದ್ದಿ, ಸಾಹಿತ್ಯ, ಸಾಮಾಜಿಕ ವರದಿಗಾರಿಕೆ, ನ್ಯಾಯಾಂಗ ಸಂಬಂಧಿತ ವರದಿ ಮತ್ತು ಶಿಕ್ಷಣ ಕ್ಷೇತ್ರಕ್ಕೆ ಸಂಬಂಧಿಸಿದ ಸುದ್ದಿಗಳ ವರದಿಯಲ್ಲಿ ಸಕ್ರಿಯರಾಗಿದ್ದಾರೆ. ಗುಡವಿ ಪಕ್ಷಿಧಾಮದಂತಹ ಪ್ರವಾಸಿ ತಾಣಗಳ ಕುರಿತು ಲೇಖನಗಳನ್ನು ಬರೆದಿದ್ದಾರೆ.

ಮಧ್ಯಪ್ರದೇಶ: ನಿಂತಿದ್ದ ರೈಲಿನಿಂದ ಕೆಳಗಿಳಿದು ಹಳಿ ದಾಟುತ್ತಿದ್ದ ಪ್ರಯಾಣಿಕರ ಮೇಲೆ ಎದುರಿನಿಂದ ಬಂದ ಮತ್ತೊಂದು ಎಕ್ಸ್‌ಪ್ರೆಸ್ ರೈಲು ಹರಿದ ಪರಿಣಾಮ ಹಲವರು ಸಾವನ್ನಪ್ಪಿ, ಹಲವಾರು ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡಿರುವ ಭೀಕರ ದುರಂತ ಮಧ್ಯಪ್ರದೇಶದ ಮೊರೇನಾ ಜಿಲ್ಲೆಯಲ್ಲಿ ಭಾನುವಾರ ಸಂಭವಿಸಿದೆ. ರೈಲ್ವೆ ಅಧಿಕಾರಿಗಳು ನೀಡಿರುವ ಪ್ರಾಥಮಿಕ ಮಾಹಿತಿಯ ಪ್ರಕಾರ ಈ ಆಘಾತಕಾರಿ ಘಟನೆ ಸಂಭವಿಸಿದೆ. ದುರಂತ ಸಂಭವಿಸಿದ್ದು ಹೇಗೆ?: ಉತ್ತರ ಮಧ್ಯ ರೈಲ್ವೆಯ ಝಾನ್ಸಿ ವಿಭಾಗದ ಹೇತಂಪುರ ರೈಲು ನಿಲ್ದಾಣದ ಬಳಿ ಸಾಯಂಕಾಲ ಸುಮಾರು 4.15 ರ ವೇಳೆಗೆ ರೈಲು ಸಂಖ್ಯೆ 19665 ಖಜುರಾಹೊ-ಉದಯ್‌ಪುರ ಇಂಟರ್‌ಸಿಟಿ ಎಕ್ಸ್‌ಪ್ರೆಸ್ ರೈಲು ಹಠಾತ್ ಆಗಿ ಬಂದು ನಿಂತಿದೆ. ಆರಂಭಿಕ ವರದಿಗಳ ಪ್ರಕಾರ, ರೈಲಿನಲ್ಲಿ ಬೆಂಕಿ ಕಾಣಿಸಿಕೊಂಡಿದೆ ಎಂಬ ವದಂತಿ ಹರಡಿದ್ದರಿಂದ ಗಾಬರಿಗೊಂಡ ಪ್ರಯಾಣಿಕರು ತಕ್ಷಣವೇ ರೈಲಿನಿಂದ ಕೆಳಗಿಳಿದು ಓಡಲಾರಂಭಿಸಿದ್ದಾರೆ. ಆದರೆ ರೈಲ್ವೆ ಅಧಿಕಾರಿಗಳ ಪ್ರಕಾರ, ಜನರಲ್ ಬೋಗಿಯಲ್ಲಿದ್ದ ಪ್ರಯಾಣಿಕರೊಬ್ಬರು ಚೈನ್ (Alarm Chain Pulling – ACP) ಎಳೆದಿದ್ದರಿಂದ ರೈಲು ಅಲ್ಲಿ ನಿಲ್ಲಬೇಕಾಯಿತು. ಪಕ್ಕದ ಹಳಿಯಲ್ಲೇ…

Read More

ನವದೆಹಲಿ: ಮಾತು ಬಾರದ ಮೂಕ ಪ್ರಾಣಿಗಳ ಯೋಗಕ್ಷೇಮ ಮತ್ತು ಹಕ್ಕುಗಳ ರಕ್ಷಣೆಗೆ ಸಂಬಂಧಿಸಿದಂತೆ ದೇಶದ ಸರ್ವೋಚ್ಚ ನ್ಯಾಯಾಲಯವು ಅತ್ಯಂತ ಪ್ರಮುಖ ಮತ್ತು ಐತಿಹಾಸಿಕ ತೀರ್ಪೊಂದನ್ನು ನೀಡಿದೆ. “ಮೂಕ ಪ್ರಾಣಿಗಳ ವಿಷಯ ಬಂದಾಗ ನ್ಯಾಯಾಲಯಗಳು ಕೇವಲ ಮೂಕ ಪ್ರೇಕ್ಷಕರಾಗಿ (Mute Spectator) ಉಳಿಯಲು ಸಾಧ್ಯವಿಲ್ಲ” ಎಂದು ಗಂಭೀರವಾಗಿ ಹೇಳಿರುವ ಸುಪ್ರೀಂ ಕೋರ್ಟ್, ಕೇರಳ ರಾಜ್ಯದ ಅತ್ಯಂತ ಎತ್ತರದ ಸಾಕಾನೆ ಎಂದೇ ಪ್ರಸಿದ್ಧಿಯಾಗಿರುವ ‘ತೀಚಿಕ್ಕೊಟ್ಟುಕಾವು ರಾಮನ್’ (Raman) ಆನೆಯನ್ನು ತಕ್ಷಣವೇ ಕೇರಳ ಸರ್ಕಾರದ ವಶಕ್ಕೆ ಒಪ್ಪಿಸುವಂತೆ ಹಾಗೂ ಅದನ್ನು ಸೂಕ್ತ ಪುನರ್ವಸತಿ ಅಥವಾ ರಕ್ಷಣಾ ಕೇಂದ್ರದಲ್ಲಿ ಇರಿಸುವಂತೆ ಆದೇಶಿಸಿದೆ. ನ್ಯಾಯಮೂರ್ತಿಗಳಾದ ದೀಪಂಕರ್ ದತ್ತಾ ಮತ್ತು ಸತೀಶ್ ಚಂದ್ರ ಶರ್ಮಾ ಅವರನ್ನೊಳಗೊಂಡ ದ್ವಿ ಸದಸ್ಯ ಪೀಠವು ಈ ಮಹತ್ವದ ಆದೇಶವನ್ನು ಹೊರಡಿಸಿದೆ. ನ್ಯಾಯಾಲಯಕ್ಕೆ ನೀಡಿದ್ದ ಲಿಖಿತ ಮುಚ್ಚಳಿಕೆಯನ್ನು (Undertaking) ಉಲ್ಲಂಘಿಸಿ ಆನೆಯನ್ನು ವಾಣಿಜ್ಯ ಮತ್ತು ಧಾರ್ಮಿಕ ಉತ್ಸವಗಳಿಗೆ ಬಳಸಿ ಶೋಷಣೆ ಮಾಡಿದ ಕೇರಳದ ನಿವಾಸಿ ಕೃಷ್ಣನ್‌ಕುಟ್ಟಿ ಎಂಬುವವರನ್ನು ನ್ಯಾಯಾಂಗ ನಿಂದನೆ ಆರೋಪದಡಿಯಲ್ಲಿ ತಪ್ಪಿತಸ್ಥರೆಂದು ನ್ಯಾಯಾಲಯ ಘೋಷಿಸಿದೆ.…

Read More

ಬೆಂಗಳೂರು: ಸಿಲಿಕಾನ್ ಸಿಟಿಯ ತಿಗಳರಪಾಳ್ಯದ ಬಾಡಿಗೆ ಮನೆಯೊಂದರಲ್ಲಿ ನಡೆದ ಯುವತಿಯ ನಿಗೂಢ ಕೊಲೆ ಪ್ರಕರಣಕ್ಕೆ ಈಗ ಭಾರಿ ತಿರುವು ಸಿಕ್ಕಿದೆ. ಆಟೋ ಚಾಲಕನೊಬ್ಬ ತನಗೆ ಈಗಾಗಲೇ ಮದುವೆಯಾಗಿರುವ ವಿಷಯವನ್ನು ಮುಚ್ಚಿಟ್ಟು ಯುವತಿಯನ್ನು ಪ್ರೀತಿಸಿ, ಕೊನೆಗೆ ಆಕೆಯನ್ನು ಉಸಿರುಗಟ್ಟಿಸಿ ಕೊಲೆ ಮಾಡಿರುವ ಆಘಾತಕಾರಿ ಸಂಗತಿ ತನಿಖೆಯಿಂದ ಬೆಳಕಿಗೆ ಬಂದಿದೆ. ಭವಾನಿ ಕೊಲೆಯಾದ ದುರ್ದೈವಿ ಯುವತಿ. ಸದ್ಯ ಆರೋಪಿ ಚಂದ್ರಶೇಖರ್ ಆಲಿಯಾಸ್ ಚಂದು ತಾನೂ ಸಹ ವಿಷ ಸೇವಿಸಿದ್ದು, ಆಸ್ಪತ್ರೆಯಲ್ಲಿ ಸಾವು-ಬದುಕಿನ ನಡುವೆ ಹೋರಾಡುತ್ತಿದ್ದಾನೆ. ಆಟೋ ಪ್ರಯಾಣದಲ್ಲಿ ಶುರುವಾದ ಪ್ರೇಮ ಕಥೆ: ಆರೋಪಿ ಚಂದ್ರಶೇಖರ್ ಬೆಂಗಳೂರಿನ ಚಿಕ್ಕಗೊಲ್ಲರಹಟ್ಟಿಯಲ್ಲಿ ವಾಸವಿದ್ದು, ಆಟೋ ಡ್ರೈವರ್ ಆಗಿ ಕೆಲಸ ಮಾಡುತ್ತಿದ್ದನು. ಒಂದೊಮ್ಮೆ ಭವಾನಿ ಆತನ ಆಟೋ ಹತ್ತಿದಾಗ ಇಬ್ಬರ ನಡುವೆ ಪರಿಚಯವಾಗಿತ್ತು. ಈ ಪರಿಚಯ ದಿನ ಕಳೆದಂತೆ ಸ್ನೇಹಕ್ಕೆ ತಿರುಗಿ, ಬಳಿಕ ಪ್ರೀತಿಗೆ ಮುನ್ನಡೆದಿತ್ತು. ಪ್ರೀತಿ ಎಷ್ಟು ಗಾಢವಾಗಿತ್ತೆಂದರೆ, ಇಬ್ಬರೂ ತಮ್ಮ ಮನೆಯವರಿಗೆ ತಿಳಿಸದೆಯೇ ರಹಸ್ಯವಾಗಿ ಹಾರ ಬದಲಾಯಿಸಿಕೊಂಡು ಮದುವೆಯಾಗಿದ್ದರು. ತಿಗಳರಪಾಳ್ಯದ ಬಾಡಿಗೆ ರೂಮ್‌ನಲ್ಲಿದ್ದ ಭವಾನಿಯನ್ನು ಭೇಟಿಯಾಗಲು ಚಂದು…

Read More

ಬಳ್ಳಾರಿ: ಕೌಟುಂಬಿಕ ಕಲಹ ಹಾಗೂ ವೈಯಕ್ತಿಕ ಕಾರಣಗಳಿಂದ ಮನನೊಂದ ವ್ಯಕ್ತಿಯೊಬ್ಬ ತನ್ನ ಮೂರನೇ ಪತ್ನಿ ಹಾಗೂ ಮೂರು ತಿಂಗಳ ಹಸುಗೂಸಿಗೆ ವಿಷ ಕುಡಿಸಿ, ತಾನೂ ಸಹ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಧೃತಿಗೆಡಿಸುವ ಘಟನೆ ಆಂಧ್ರಪ್ರದೇಶದ ಗಡಿಭಾಗದ ಗೂಳ್ಯಂ ಬಳಿ ಸಂಭವಿಸಿದೆ. ಬಳ್ಳಾರಿ ತಾಲೂಕಿನ ಸಂಗನಕಲ್ಲು ಗ್ರಾಮದ ಮಹೇಶ್ (37), ಆತನ ಪತ್ನಿ ಹಾಗೂ ಮೂರು ತಿಂಗಳ ಮಗು ಮೃತಪಟ್ಟ ದುರ್ದೈವಿಗಳಾಗಿದ್ದಾರೆ. ಘಟನೆಯ ವಿವರ: ಮೃತ ಮಹೇಶ್ ಈ ಹಿಂದೆ ಎರಡು ಮದುವೆಗಳಾಗಿದ್ದನು. ಆದರೆ ಆರು ವರ್ಷಗಳ ಹಿಂದೆಯೇ ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ತನ್ನ ಮೊದಲ ಮತ್ತು ಎರಡನೇ ಪತ್ನಿಯರಿಂದ ದೂರವಾಗಿದ್ದನು. ಆ ಬಳಿಕ ಆತ ಮೂರನೇ ಮದುವೆಯಾಗಿದ್ದು, ದಂಪತಿಗೆ ಮೂರು ತಿಂಗಳ ಮಗುವಿತ್ತು. ಆದಾಗ್ಯೂ, ಕೌಟುಂಬಿಕ ಸಮಸ್ಯೆಗಳು ಮತ್ತು ವೈಯಕ್ತಿಕ ಕಾರಣಗಳಿಂದಾಗಿ ಮಹೇಶ್ ತೀವ್ರ ಜುಗುಪ್ಸೆಗೊಂಡಿದ್ದನು. ಇದೇ ಕಾರಣಕ್ಕಾಗಿ ಆತ ತನ್ನ ಮೂರನೇ ಪತ್ನಿ ಮತ್ತು ಮೂರು ತಿಂಗಳ ಮಗುವಿನೊಂದಿಗೆ ಪಕ್ಕದ ಆಂಧ್ರಪ್ರದೇಶದ ಗೂಳ್ಯಂ ಪ್ರದೇಶದ ಹೊಲವೊಂದಕ್ಕೆ ತೆರಳಿದ್ದಾನೆ. ಅಲ್ಲಿ…

Read More

ಬೆಂಗಳೂರು : ಕಾಂಗ್ರೆಸ್ ಸರಕಾರದ ಹೆಮ್ಮೆಯ ಗ್ಯಾರಂಟಿ ಯೋಜನೆಗಳಾದ “ಗೃಹಲಕ್ಷ್ಮಿ” ಮತ್ತು “ಗೃಹಜ್ಯೋತಿ” ಯೋಜನೆಗಳನ್ನು ಯಾವುದೇ ಕಾರಣಕ್ಕೂ ನಿಲ್ಲಿಸುವುದಿಲ್ಲ. ಈ ಬಗ್ಗೆ ವಿರೋಧ ಪಕ್ಷಗಳು ಹಬ್ಬಿಸುತ್ತಿರುವ ಸುಳ್ಳು ಸುದ್ದಿಗಳಿಗೆ ಸಾರ್ವಜನಿಕರು ಕಿವಿಗೊಡಬಾರದು ಎಂದು ಸಿಎಂ ಡಿ ಕೆ ಶಿವಕುಮಾರ್ ಅವರು ಹೇಳಿದ್ದಾರೆ. ಕೆಲವರು ಸತ್ತವರ ಹೆಸರಿನಲ್ಲಿ ನಕಲಿ ದಾಖಲೆ ಸೃಷ್ಟಿಸಿ, ಅಕೌಂಟ್ ತೆರೆದು ಯೋಜನೆಯ ಲಾಭ ಪಡೆಯುತ್ತಿದ್ದಾರೆ. ಹೀಗಾಗಿ ಗ್ಯಾರಂಟಿ ಯೋಜನೆ ಫಲಾನುಭವಿಗಳ ದೃಢೀಕರಣಕ್ಕಾಗಿ, ಅವರ ಹೆಸರು, ವಿಳಾಸ, ಅಕೌಂಟ್ ನಂಬರ್ ಖಚಿತಪಡಿಸಿಕೊಳ್ಳಲು ಮತ್ತೇ ಅರ್ಜಿ ಸಲ್ಲಿಸಲು ಹೇಳಲಾಗಿದೆಯೇ ಹೊರತು ಯೋಜನೆಗಳನ್ನು ನಿಲ್ಲಿಸಲು ಅಲ್ಲ ಎಂದು ಮುಖ್ಯಮಂತ್ರಿಗಳು ಮಾಧ್ಯಮ ಹೇಳಿಕೆಯಲ್ಲಿ ಸ್ಪಷ್ಟಪಡಿಸಿದ್ದಾರೆ. ಎಲ್ಲ ಗ್ಯಾರಂಟಿ ಯೋಜನೆಗಳು ಶೇಕಡಾ ನೂರಕ್ಕೆ ನೂರರಷ್ಟು ಮುಂದುವರಿಯುತ್ತವೆ. ಯಾರೂ ಆತಂಕಪಡುವ ಅವಶ್ಯಕತೆ ಇಲ್ಲ ಎಂದು ಸಿಎಂ ಶಿವಕುಮಾರ್ ಅವರು ಸ್ಪಷ್ಟವಾಗಿ ಹೇಳಿದ್ದಾರೆ. https://kannadanewsnow.com/kannada/a-student-studying-veterinary-medicine-committed-suicide-by-jumping-in-front-of-a-train-in-shivamogga/

Read More

ಶಿವಮೊಗ್ಗ: ನಗರದ ಹರಿಗೆ ಸಮೀಪ ಯುವಕನೊಬ್ಬ ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡಿರುವ ದುರದೃಷ್ಟಕರ ಘಟನೆ ನಡೆದಿದೆ. ದಾವಣಗೆರೆ ಜಿಲ್ಲೆಯ ಹರಿಹರದ ವಿದ್ಯಾನಗರ ನಿವಾಸಿಯಾದ ಮನೋಜ್ ಕುಮಾರ್ (21) ಮೃತಪಟ್ಟ ದುರ್ದೈವಿಯಾಗಿದ್ದು, ಇವರು ಶಿವಮೊಗ್ಗದ ಪಶುವೈದ್ಯಕೀಯ ಕಾಲೇಜಿನಲ್ಲಿ ದ್ವಿತೀಯ ವರ್ಷದ ವಿದ್ಯಾರ್ಥಿಯಾಗಿದ್ದರು. ನಿಗೂಢವಾದ ಆತ್ಮಹತ್ಯೆಗೆ ಕಾರಣ ಮೃತ ವಿದ್ಯಾರ್ಥಿ ಮನೋಜ್ ಕುಮಾರ್ ಹರಿಗೆ ಸಮೀಪದ ರೈಲ್ವೆ ಹಳಿಯ ಮೇಲೆ ಆತ್ಮಹತ್ಯೆ ಮಾಡಿಕೊಂಡಿದ್ದು, ಇವರ ಈ ತೀವ್ರ ನಿರ್ಧಾರಕ್ಕೆ ನಿಖರವಾದ ಕಾರಣ ಏನೆಂಬುದು ಸದ್ಯಕ್ಕೆ ತಿಳಿದುಬಂದಿಲ್ಲ. ಕಾಲೇಜು ವಿದ್ಯಾರ್ಥಿಯೊಬ್ಬ ಹೀಗೆ ದಿಢೀರನೆ ಪ್ರಾಣ ಕಳೆದುಕೊಂಡಿರುವುದು ತೀವ್ರ ವಿಷಾದ ಮೂಡಿಸಿದೆ. ಸ್ಥಳಕ್ಕೆ ಪೊಲೀಸರ ಭೇಟಿ ಮತ್ತು ತನಿಖೆ ಘಟನೆ ನಡೆದ ವಿಷಯ ತಿಳಿಯುತ್ತಿದ್ದಂತೆ ರೈಲ್ವೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಹಳಿಯ ಮೇಲೆ ಪತ್ತೆಯಾದ ಮೃತದೇಹವನ್ನು ತೆರವುಗೊಳಿಸಿ ಮುಂದಿನ ಕ್ರಮ ಕೈಗೊಳ್ಳಲಾಗಿದೆ. ಈ ದುರಂತಕ್ಕೆ ಸಂಬಂಧಿಸಿದಂತೆ ರೈಲ್ವೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ವಿದ್ಯಾರ್ಥಿಯ ಸಾವಿಗೆ ನಿಖರ ಕಾರಣ ಏನೆಂಬುದನ್ನು ಪತ್ತೆ ಹಚ್ಚಲು…

Read More

ಬೆಂಗಳೂರು: ಎಂಜಿನಿಯರಿಂಗ್ ಸೇರಿದಂತೆ ವಿವಿಧ ವೃತ್ತಿಪರ ಕೋರ್ಸ್ ಗಳ ಪ್ರವೇಶಕ್ಕೆ ಕ್ರೀಡೆ ಮತ್ತು ವಿಶೇಷ ಚೇತನ‌ ಕೋಟಾ ಕ್ಲೇಮ್ ಮಾಡಿದವರು ಎರಡು ದಿನ ಬಿಟ್ಟು ವೆರಿಫಿಕೇಷನ್ ಕ್ಲಿಪ್ ಡೌನ್‌ಲೋಡ್ ಮಾಡಿಕೊಳ್ಳಬೇಕು ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಹೆಚ್.ಪ್ರಸನ್ನ ತಿಳಿಸಿದ್ದಾರೆ. ರಕ್ಷಣೆ (ಡಿಫೆನ್ಸ್) ಮತ್ತು ಎನ್ ಸಿಸಿ ಕೋಟಾ ಕ್ಲೇಮ್ ಮಾಡಿದ್ದವರ ಅರ್ಹತಾ ಪಟ್ಟಿ ಬಂದಿದ್ದು ಅವರ ಕ್ಲೇಮ್ ವೆರಿಫಿಕೇಷನ್ ಸ್ಲಿಪ್ ನಲ್ಲಿ ದಾಖಲಾಗಿದೆ. ಆದರೆ ಕ್ರೀಡೆ ಮತ್ತು ವಿಶೇಷ ಚೇತನಾ ಕೋಟಾ ಕ್ಲೇಮ್ ಮಾಡಿದವರ ಅರ್ಹತಾ ಪಟ್ಟಿ ಸಂಬಂಧಪಟ್ಟ ಇಲಾಖೆಗಳಿಂದ ಕೆಇಎ ಗೆ ಬಂದಿಲ್ಲ. ಬಂದ ತಕ್ಷಣ ಆ ಮಾಹಿತಿಯನ್ನು ಅಪ್ ಲೋಡ್ ಮಾಡಲಾಗುವುದು. ಪುನಃ ಮತ್ತೊಮ್ಮೆ ವೆರಿಫಿಕೇಷನ್ ಸ್ಲಿಪ್ ಡೌನ್‌ಲೋಡ್ ಮಾಡಿಕೊಳ್ಳಬೇಕಾಗುತ್ತದೆ ಎಂದು ಅವರು ತಿಳಿಸಿದ್ದಾರೆ. ಈ ವಿಷಯದಲ್ಲಿ ಆತಂಕಪಡುವ ಅಗತ್ಯ ಇಲ್ಲ. ಅರ್ಹತಾ ಪಟ್ಟಿ ಬಂದ ತಕ್ಷಣವೇ ಮಾಹಿತಿಯನ್ನು ವೆರಿಫಿಕೇಷನ್ ಸ್ಲಿಪ್ ನಲ್ಲಿ ದಾಖಲಿಸಲಾಗುವುದು ಎಂದು ಅವರು ಹೇಳಿದ್ದಾರೆ.

Read More

ಬೆಂಗಳೂರು: ಬಿಡದಿ ಟೌನ್‌ಶಿಪ್ ಯೋಜನೆ ಸರಕಾರಿ ರಿಯಲ್ ಎಸ್ಟೇಟ್ ಯೋಜನೆಯಾಗಿದೆ. ಇದು ಸಂಪೂರ್ಣವಾಗಿ ಹಣ ಲೂಟಿ ಮಾಡುವ ಯೋಚನೆಯಾಗಿದೆ ಎಂದು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಆರೋಪಿಸಿದರು. ಬೆಂಗಳೂರಿನ ತಮ್ಮ ನಿವಾಸದಲ್ಲಿ ಮಾಧ್ಯಮಗಳು ಕೇಳಿದ ಪ್ರಶ್ನೆಗಳಿಗೆ ಉತ್ತರಿಸಿದ ಕೇಂದ್ರ ಸಚಿವರು; ಬಿಡದಿ ಟೌನ್‌ಶಿಪ್ ನಾಡಿನ ಹಿತಾಸಕ್ತಿ ಅಡಗಿಲ್ಲ. ಭೂ ಮಾಫಿಯ ಹಾಗೂ ಭೂ ಲೂಟಿಕೋರರಿಗೆ ಲಾಭ ಮಾಡಿಕೊಡಲು ಇದನ್ನು ರೂಪಿಸಲಾಗಿದೆ. ಹೀಗಾಗಿ ಇದನ್ನು ನಾನು ಸರಕಾರಿ ರಿಯಲ್ ಎಸ್ಟೇಟ್ ದಂಧೆ ಎಂದು ಕರೆಯುತ್ತೇನೆ ಎಂದು ಹೇಳಿದರು. ರಸ್ತೆಗಳಲ್ಲಿ ಮೊಣಕಾಲುದ್ದ ಗುಂಡಿಗಳು ಬಿದ್ದು ವಾಹನ ಸಂಚಾರ ದೊಡ್ಡ ಪ್ರಯಾಸವಾಗಿದೆ. ಅದೇನೋ ಬ್ರ್ಯಾಂಡ್ ಬೆಂಗಳೂರು ಎಂದು ಹೇಳುತ್ತಿದ್ದರಲ್ಲ, ಅದನ್ನು ಮಾಡುವುದು ಬಿಟ್ಟು ಬಿಡದಿ ರೈತರ ಬದುಕಿಗೆ ಬೆಂಕಿ ಹಾಕಲು ಹೊರಟಿದ್ದಾರೆ ಎಂದು ಅವರು ಕಟುವಾಗಿ ಟೀಕಿಸಿದರು. ಬೆಂಗಳೂರು ಅಭಿವೃದ್ಧಿಗೆ ಎಳ್ಳಷ್ಟು ಉಪಯೋಗ ಆಗದ ಈ ಯೋಜನೆಯನ್ನು ತಮ್ಮ ಸ್ವಾರ್ಥಕ್ಕಾಗಿ, ರಿಯಲ್ ಎಸ್ಟೇಟ್ ಮಾಫಿಯಾದೊಂದಿಗೆ ಕೈಜೋಡಿಸಿ ರೈತರ ಭೂಮಿಯನ್ನು ಲೂಟಿ ಹೊಡೆಯಲು ಹೊರಟಿದ್ದಾರೆ. ಈ ಹಿನ್ನೆಯಲ್ಲಿ ನಮ್ಮ ಪಕ್ಷ…

Read More

ಬೆಂಗಳೂರು: ರಾಜ್ಯದ ಕಾಂಗ್ರೆಸ್ ಸರ್ಕಾರದ ಮಹತ್ವಾಕಾಂಕ್ಷೆಯ ಪಂಚ ಗ್ಯಾರಂಟಿ ಯೋಜನೆಗಳಲ್ಲಿ ಅತ್ಯಂತ ಜನಪ್ರಿಯವಾಗಿರುವ ‘ಗೃಹಲಕ್ಷ್ಮಿ’ ಮತ್ತು ‘ಗೃಹಜ್ಯೋತಿ’ ಯೋಜನೆಗಳಿಗೆ ಈಗ ದೊಡ್ಡ ಮಟ್ಟದ ಮೇಜರ್ ಸರ್ಜರಿ ಮಾಡಲು ಸರ್ಕಾರ ಮುಂದಾಗಿದೆ. ಈ ಯೋಜನೆಗಳಲ್ಲಿ ನುಸುಳಿರುವ ಲಕ್ಷಾಂತರ ನಕಲಿ ಫಲಾನುಭವಿಗಳನ್ನು ಪತ್ತೆ ಹಚ್ಚಿ, ಯೋಜನೆಗೆ ಲಗಾಮು ಹಾಕಲು ಸರ್ಕಾರ ನಿರ್ಧರಿಸಿದ್ದು, ಹಾಲಿ ಫಲಾನುಭವಿಗಳು ಸೇರಿದಂತೆ ಸೌಲಭ್ಯ ಪಡೆಯಲು ಬಯಸುವವರೆಲ್ಲರೂ ಮತ್ತೆ ಹೊಸದಾಗಿ ಅರ್ಜಿ ಸಲ್ಲಿಸುವುದನ್ನು ಕಡ್ಡಾಯಗೊಳಿಸಲಾಗಿದೆ. ​ಅರ್ಜಿ ಸಲ್ಲಿಸಿದವರಿಗೆ ಮಾತ್ರ ಮುಂದಿನ ದಿನಗಳಲ್ಲಿ ಸೌಲಭ್ಯ ಸಿಗಲಿದ್ದು, ಹೊಸದಾಗಿ ‘ಗ್ಯಾರಂಟಿ ಕಾರ್ಡ್’ ನೀಡಲು ಸಿಎಂ ಡಿ.ಕೆ. ಶಿವಕುಮಾರ್ ಆದೇಶಿಸಿದ್ದಾರೆ. ​ಹೊಸ ಅರ್ಜಿ ಸಲ್ಲಿಕೆ ಕಡ್ಡಾಯಕ್ಕೆ ಕಾರಣಗಳೇನು? ​ಸರ್ಕಾರದ ಇತ್ತೀಚಿನ ಪರಿಶೀಲನೆಯಲ್ಲಿ ಈ ಎರಡೂ ಯೋಜನೆಗಳಲ್ಲಿ ಭಾರಿ ಪ್ರಮಾಣದ ದುರುಪಯೋಗ ಮತ್ತು ನಕಲಿ ಫಲಾನುಭವಿಗಳು ಇರುವುದು ಪತ್ತೆಯಾಗಿದೆ. ​1. ಗೃಹಲಕ್ಷ್ಮಿ ಯೋಜನೆಯಲ್ಲಿನ ಅಕ್ರಮಗಳು: ​ಪ್ರಸ್ತುತ ಈ ಯೋಜನೆಯಲ್ಲಿ 1.28 ಕೋಟಿ ಫಲಾನುಭವಿಗಳಿದ್ದಾರೆ. ​ಆದರೆ, ಇವರಲ್ಲಿ ಸುಮಾರು 4.30 ಲಕ್ಷ ಫಲಾನುಭವಿಗಳು ಐಟಿ (ಆದಾಯ ತೆರಿಗೆ) ಪಾವತಿದಾರರಾಗಿದ್ದಾರೆ…

Read More

ನವದೆಹಲಿ: ರಿಲಯನ್ಸ್ ಇಂಡಸ್ಟ್ರೀಸ್ ಲಿಮಿಟೆಡ್ (ಆರ್‌ಐಎಲ್) ತನ್ನ 49ನೇ ವಾರ್ಷಿಕ ಸಾಮಾನ್ಯ ಸಭೆಗೆ (ಎಜಿಎಂ) ಮುನ್ನ ತನ್ನ ಷೇರುದಾರರ ಅನುಕೂಲಕ್ಕಾಗಿ ವಾಟ್ಸ್‌ಆಪ್ ಆಧಾರಿತ ‘ಎಜಿಎಂ ಡಿಜಿಟಲ್ ಅಸಿಸ್ಟೆಂಟ್’ ಸೇವೆಯನ್ನು ಸಕ್ರಿಯಗೊಳಿಸಿದೆ. ಕಂಪನಿಯು ಸತತ ಆರನೇ ವರ್ಷವೂ ಈ ಸೌಲಭ್ಯವನ್ನು ಒದಗಿಸುತ್ತಿದೆ. ಇದರ ಮೂಲಕ 44 ಲಕ್ಷಕ್ಕೂ ಹೆಚ್ಚು ಷೇರುದಾರರು ಎಜಿಎಮ್‌ಗೆ ಸಂಬಂಧಿಸಿದ ಮಾಹಿತಿ, ದಾಖಲೆಗಳು, ಮತದಾನದ ಪ್ರಕ್ರಿಯೆ ಮತ್ತು ಸಹಾಯ ಸೇವೆಗಳನ್ನು ನೇರವಾಗಿ ತಮ್ಮ ಮೊಬೈಲ್ ಫೋನ್‌ಗಳ ಮೂಲಕವೇ ಪಡೆದುಕೊಳ್ಳಬಹುದು. ಕಂಪನಿಯು ಎಜಿಎಂ ಡಿಜಿಟಲ್ ಅಸಿಸ್ಟೆಂಟ್ ಅನ್ನು ವಾಟ್ಸ್‌ ಆಪ್ ಸಂಖ್ಯೆ +91 79771 11111 ರಲ್ಲಿ ಸಕ್ರಿಯಗೊಳಿಸಿದೆ. ಷೇರುದಾರರು ಕೇವಲ ಈ ಸಂಖ್ಯೆಯನ್ನು ತಮ್ಮ ಮೊಬೈಲ್‌ನಲ್ಲಿ ಉಳಿಸಿಕೊಂಡು ವಾಟ್ಸ್‌ ಆಪ್‌ನಲ್ಲಿ “Hi” ಎಂದು ಸಂದೇಶ ಕಳುಹಿಸಬೇಕಾಗುತ್ತದೆ. ಇದರ ನಂತರ ಚಾಟ್‌ಬಾಟ್‌ನ ಮೆನು ತೆರೆದುಕೊಳ್ಳುತ್ತದೆ, ಅಲ್ಲಿಂದ ಅವರು ಎಜಿಎಮ್‌ಗೆ ಸಂಬಂಧಿಸಿದ ವಿವಿಧ ಸೇವೆಗಳು ಮತ್ತು ಮಾಹಿತಿಯ ಪ್ರಯೋಜನವನ್ನು ಪಡೆಯಬಹುದು. ರಿಲಯನ್ಸ್ ಇಂಡಸ್ಟ್ರೀಸ್‌ನ 49ನೇ ವಾರ್ಷಿಕ ಸಾಮಾನ್ಯ ಸಭೆಯು 2026ರ ಜೂನ್ 19,…

Read More