Subscribe to Updates
Get the latest creative news from FooBar about art, design and business.
Author: kannadanewsnow09
ಬೆಂಗಳೂರು: ರಾಜ್ಯ ಸರ್ಕಾರವು ಆಡಳಿತ ಯಂತ್ರಕ್ಕೆ ಚುರುಕು ಮುಟ್ಟಿಸುವ ನಿಟ್ಟಿನಲ್ಲಿ ಸೋಮವಾರದಂದು ಮೂವರು ಹಿರಿಯ ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ. ಈ ವರ್ಗಾವಣೆಯು ತಕ್ಷಣದಿಂದಲೇ ಜಾರಿಗೆ ಬರಲಿದೆ ಎಂದು ಸರ್ಕಾರದ ಅಧಿಸೂಚನೆ ತಿಳಿಸಿದೆ. ವರ್ಗಾವಣೆಗೊಂಡ ಅಧಿಕಾರಿಗಳ ವಿವರ: ರಿತ್ವಿಕ್ ರಂಜನಂ ಪಾಂಡೆ (IAS 1998): ಕಂದಾಯ ಇಲಾಖೆಯ (ವಿಪತ್ತು ನಿರ್ವಹಣೆ, ಮುದ್ರಾಂಕ ಮತ್ತು ನೋಂದಣಿ) ಪ್ರಧಾನ ಕಾರ್ಯದರ್ಶಿಯಾಗಿದ್ದ ಇವರನ್ನು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಪ್ರಧಾನ ಕಾರ್ಯದರ್ಶಿಯಾಗಿ ವರ್ಗಾವಣೆ ಮಾಡಲಾಗಿದೆ. ಈ ಹಿಂದೆ ಈ ಹುದ್ದೆಯಲ್ಲಿದ್ದ ಶ್ರೀ ಹರ್ಷ್ ಗುಪ್ತ ಅವರ ವರ್ಗಾವಣೆಯಿಂದ ತೆರವಾಗಿದ್ದ ಸ್ಥಾನಕ್ಕೆ ಇವರನ್ನು ನೇಮಿಸಲಾಗಿದೆ. ಮನೋಜ್ ಕುಮಾರ್ ಮೀನಾ (IAS 2003): ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆಯ ಕಾರ್ಯದರ್ಶಿಯಾಗಿದ್ದ ಇವರನ್ನು ಕಂದಾಯ ಇಲಾಖೆಯ (ವಿಪತ್ತು ನಿರ್ವಹಣೆ, ಮುದ್ರಾಂಕ ಮತ್ತು ನೋಂದಣಿ) ಕಾರ್ಯದರ್ಶಿಯಾಗಿ ವರ್ಗಾಯಿಸಲಾಗಿದೆ. ಸಲ್ಮಾ ಕೆ. ಫಾಹಿಮ್ (IAS 2006): ಪ್ರಸ್ತುತ ಕಾರ್ಮಿಕ ಇಲಾಖೆಯ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸುತ್ತಿರುವ ಇವರಿಗೆ, ಶ್ರೀ…
ನವದೆಹಲಿ: ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ (Rohini Sindhuri) ಅವರಿಗೆ ಸುಪ್ರೀಂ ಕೋರ್ಟ್ನಲ್ಲಿ ದೊಡ್ಡ ಮಟ್ಟದ ಕಾನೂನು ಜಯ ಸಿಕ್ಕಿದೆ. ಬಟ್ಟೆ ಚೀಲಗಳ ಖರೀದಿ ಪ್ರಕ್ರಿಯೆಯಲ್ಲಿ ಅಕ್ರಮ ಎಸಗಿದ ಆರೋಪಕ್ಕೆ ಸಂಬಂಧಿಸಿದಂತೆ ಅವರ ವಿರುದ್ಧ ತನಿಖೆ ನಡೆಸಲು ಅನುಮತಿ ನೀಡುವಂತೆ ರಾಜ್ಯ ಸರ್ಕಾರಕ್ಕೆ ಸೂಚಿಸಿದ್ದ ಕರ್ನಾಟಕ ಹೈಕೋರ್ಟ್ನ ಆದೇಶಕ್ಕೆ ಸುಪ್ರೀಂ ಕೋರ್ಟ್ ಇಂದು ತಡೆಯಾಜ್ಞೆ ನೀಡಿದೆ. ಪ್ರಕರಣದ ಹಿನ್ನೆಲೆ: ಮೈಸೂರು ಜಿಲ್ಲಾಧಿಕಾರಿಯಾಗಿದ್ದ ಅವಧಿಯಲ್ಲಿ ರೋಹಿಣಿ ಸಿಂಧೂರಿ ಅವರು ‘ಪ್ಲಾಸ್ಟಿಕ್ ಮುಕ್ತ ಜಿಲ್ಲೆ’ ಮಾಡುವ ಉದ್ದೇಶದಿಂದ ಪರಿಸರ ಸ್ನೇಹಿ ಬಟ್ಟೆ ಚೀಲಗಳನ್ನು ಖರೀದಿಸಲು ನಿರ್ದೇಶಿಸಿದ್ದರು. ಈ ಪ್ರಕ್ರಿಯೆಯಲ್ಲಿ ಮಾರುಕಟ್ಟೆ ದರಕ್ಕಿಂತ ಹೆಚ್ಚಿನ ದರಕ್ಕೆ ಚೀಲಗಳನ್ನು ಖರೀದಿಸಿ, ಸರ್ಕಾರದ ಬೊಕ್ಕಸಕ್ಕೆ ಸುಮಾರು ₹7.65 ಕೋಟಿ ನಷ್ಟ ಉಂಟುಮಾಡಿದ್ದಾರೆ ಎಂದು ಎನ್.ಆರ್. ರವಿಚಂದ್ರೇಗೌಡ ಎಂಬುವವರು ದೂರು ನೀಡಿದ್ದರು. ಹೈಕೋರ್ಟ್ ನೀಡಿದ್ದ ಆದೇಶವೇನು? ಈ ಅಕ್ರಮದ ಕುರಿತು ಭ್ರಷ್ಟಾಚಾರ ನಿಗ್ರಹ ಕಾಯ್ದೆಯಡಿ ತನಿಖೆ ನಡೆಸಲು ಪೂರ್ವಾನುಮತಿ ನೀಡುವಂತೆ ಕರ್ನಾಟಕ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ಸೂಚಿಸಿತ್ತು. ಈ ಆದೇಶವು…
ನವದೆಹಲಿ/ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರು ಮತ್ತು ವಾಣಿಜ್ಯ ನಗರಿ ಮುಂಬೈ ನಡುವೆ ಪ್ರಯಾಣಿಸುವ ಜನರಿಗೆ ಕೇಂದ್ರ ಸರ್ಕಾರವು ಸಿಹಿ ಸುದ್ದಿಯೊಂದನ್ನು ನೀಡಿದೆ. ಇವೆರಡು ನಗರಗಳ ನಡುವೆ ನೂತನ ‘ವಂದೇ ಭಾರತ್ ಸ್ಲೀಪರ್ ರೈಲು’ (Vande Bharat Sleeper Train) ಸಂಚಾರಕ್ಕೆ ಕೇಂದ್ರ ರೈಲ್ವೆ ಇಲಾಖೆ ಅಧಿಕೃತವಾಗಿ ಅನುಮೋದನೆ ನೀಡಿದೆ. ಪ್ರಹ್ಲಾದ್ ಜೋಶಿ ಅವರ ಪ್ರಯತ್ನಕ್ಕೆ ಯಶಸ್ಸು: ಕೇಂದ್ರ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಪ್ರಹ್ಲಾದ್ ಜೋಶಿ ಅವರು ಬೆಂಗಳೂರು ಮತ್ತು ಮುಂಬೈ ನಡುವೆ ಸುಸಜ್ಜಿತ ರೈಲು ಸೌಲಭ್ಯ ಕಲ್ಪಿಸುವಂತೆ ಪ್ರಧಾನಿ ನರೇಂದ್ರ ಮೋದಿ ಹಾಗೂ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರಿಗೆ ಮನವಿ ಸಲ್ಲಿಸಿದ್ದರು. ಉತ್ತರ ಕರ್ನಾಟಕ, ಮಧ್ಯ ಕರ್ನಾಟಕ ಹಾಗೂ ಕಲ್ಯಾಣ ಕರ್ನಾಟಕ ಭಾಗದ ಜನರಿಗೆ ಅನುಕೂಲವಾಗುವಂತೆ ಈ ರೈಲು ಆರಂಭಿಸಬೇಕೆಂಬ ಅವರ ಪ್ರಸ್ತಾವನೆಗೆ ಕೇಂದ್ರ ಸರ್ಕಾರ ಈಗ ಒಪ್ಪಿಗೆ ಸೂಚಿಸಿದೆ. ಸಂಚರಿಸುವ ಮಾರ್ಗ: ಈ ನೂತನ ವಂದೇ ಭಾರತ್ ಸ್ಲೀಪರ್ ರೈಲು ಕೆಎಸ್ಆರ್ ಬೆಂಗಳೂರು (ಮೆಜೆಸ್ಟಿಕ್) ನಿಲ್ದಾಣದಿಂದ…
ಬೆಂಗಳೂರು: ಬೇಸಿಗೆ ರಜೆಯ ಹಿನ್ನೆಲೆಯಲ್ಲಿ ಪ್ರಯಾಣಿಕರ ಹೆಚ್ಚಿನ ದಟ್ಟಣೆಯನ್ನು ನಿಯಂತ್ರಿಸಲು, ನೈಋತ್ಯ ರೈಲ್ವೆಯು ಬೆಂಗಳೂರಿನ ಯಶವಂತಪುರ ಮತ್ತು ಪಶ್ಚಿಮ ಬಂಗಾಳದ ನ್ಯೂ ಜಲ್ಪೈಗುರಿ ನಡುವೆ ಎರಡು ಟ್ರಿಪ್ಗಳ ವಿಶೇಷ ಎಕ್ಸ್ ಪ್ರೆಸ್ ರೈಲುನ್ನು ಓಡಿಸಲಿದೆ. ಈ ರೈಲು ಹಿಂದಿರುಗುವಾಗ ಬೆಂಗಳೂರು ಕಂಟೋನ್ಮೆಂಟ್ ನಿಲ್ದಾಣಕ್ಕೆ ಬಂದು ತಲುಪಲಿವೆ. ರೈಲು ಸಂಖ್ಯೆ 06567 ಯಶವಂತಪುರ–ನ್ಯೂ ಜಲ್ಪೈಗುರಿ ವಿಶೇಷ ಎಕ್ಸ್ ಪ್ರೆಸ್ ರೈಲು ಏಪ್ರಿಲ್ 17 ಮತ್ತು 24 ರಂದು ಬೆಳಿಗ್ಗೆ 7ಕ್ಕೆ ಯಶವಂತಪುರದಿಂದ ಹೊರಟು, ಮೂರನೇ ದಿನ ಬೆಳಿಗ್ಗೆ 7ಕ್ಕೆ ನ್ಯೂ ಜಲ್ಪೈಗುರಿ ತಲುಪಲಿದೆ. ಹಿಂದಿರುಗುವ ಹಾದಿಯಲ್ಲಿ, ರೈಲು ಸಂಖ್ಯೆ 06568 ನ್ಯೂ ಜಲ್ಪೈಗುರಿ–ಬೆಂಗಳೂರು ಕಂಟೋನ್ಮೆಂಟ್ ವಿಶೇಷ ರೈಲು ಏಪ್ರಿಲ್ 20 ಮತ್ತು 27 ರಂದು ಬೆಳಿಗ್ಗೆ 8.30ಕ್ಕೆ ನ್ಯೂ ಜಲ್ಪೈಗುರಿಯಿಂದ ಹೊರಟು, ಮೂರನೇ ದಿನ ಬೆಳಿಗ್ಗೆ 9.55ಕ್ಕೆ ಬೆಂಗಳೂರು ಕಂಟೋನ್ಮೆಂಟ್’ಗೆ ಆಗಮಿಸಲಿದೆ. ಮಾರ್ಗ ಮಧ್ಯದಲ್ಲಿ ಈ ರೈಲು ಯಲಹಂಕ, ಹಿಂದೂಪುರ, ಧರ್ಮಾವರಂ, ಅನಂತಪುರ, ಗೂಟಿ, ಧೋಣೆ, ನಂದ್ಯಾಲ್, ಮಾರ್ಕಾಪುರ ರೋಡ್, ನರಸರಾವ್ಪೇಟೆ, ಗುಂಟೂರು, ವಿಜಯವಾಡ,…
ಬೆಂಗಳೂರು: ಬೀದರನಲ್ಲಿ ಎರಡು ದಿನಗಳ ಕಾಲ ನಡೆದ 40ನೇ ರಾಜ್ಯ ಪತ್ರಕರ್ತರ ಸಮ್ಮೇಳನ ಅರ್ಥಪೂರ್ಣವಾಗಿ ಮತ್ತು ಯಶಸ್ವಿಯಾಗಿ ನಡೆಯಲು ಕಾರಣರಾದ ಎಲ್ಲರಿಗೂ ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘದ(ಕೆಯುಡಬ್ಲೂೃಜೆ) ರಾಜ್ಯಾಧ್ಯಕ್ಷರಾದ ಶಿವಾನಂದ ತಗಡೂರು ಅವರು ಧನ್ಯವಾದಗಳನ್ನು ಸಲ್ಲಿಸಿದ್ದಾರೆ. 40ನೇ ಸಮ್ಮೇಳನ ಎಲ್ಲಕ್ಕಿಂತ ಭಿನ್ನವಾಗಿತ್ತು. ಗಾಂಧಿ ಮತ್ತು ಅಂಬೇಡ್ಕರ್ ಅವರು, ಪತ್ರಕರ್ತರಾಗಿ ಸಲ್ಲಿಸಿದ ಸೇವೆ ಬಗ್ಗೆ ಗೋಷ್ಠಿ ಆಯೋಜಿಸಿದ್ದು, ಕಲ್ಯಾಣ ಕರ್ನಾಟಕ ಅಭಿವೃದ್ಧಿ ಮತ್ತು ಮಾಧ್ಯಮ ವಿಷಯ ಬಗ್ಗೆ ಚರ್ಚೆ ನಡೆದಿದ್ದು ಸಮ್ಮೇಳನವನ್ನು ಅರ್ಥಪೂರ್ಣಗಿಸಿತು. ಆರ್ಟಿಫಿಷಿಯಲ್ ಇಂಟಲಜೆನ್ಸಿ ಮತ್ತು ಡಿಜಿಟಲೀಕರಣ ಪ್ರಭಾವ ಬಗೆಗಿನ ಗೋಷ್ಠಿ ಸುದ್ದಿ ಮನೆಯಲ್ಲಿನ ಎಲ್ಲರಿಗೂ ಹೊಸ ಆಯಾಮಗಳ ಸಾಧ್ಯತೆಯನ್ನು ಉಣಬಡಿಸಿತು ಎಂದಿದ್ದಾರೆ. ಮಾಹಿತಿ ಹಕ್ಕು ಆಯೋಗ ಮತ್ತು ಪತ್ರಕರ್ತರು ಎಂಬ ವಿಷಯದ ಗೋಷ್ಠಿ ಪ್ರಸ್ತುತವಾಗಿತ್ತು. ಗಡಿ ಭಾಗದ ಸಮಸ್ಯೆ ಬಗ್ಗೆ ನಡೆದ ಉಪನ್ಯಾಸ, ಮಾಧ್ಯಮ ಮತ್ತು ಉದ್ಯಮ ಬಗ್ಗೆ ನಡೆದ ಚರ್ಚೆ ಎಲ್ಲವೂ ಸಮ್ಮೇಳನಕ್ಕೆ ಹೊಸ ಮೆರಗನ್ನು ನೀಡಿತು ಎಂದು ಹೇಳಿದ್ದಾರೆ. ಚಾಮರಾಜನಗರದಿಂದ ಹಿಡಿದು, ಕಲಬುರ್ಗಿ, ಬಿಜಾಪುರದ ತನಕ…
ಬೆಂಗಳೂರು: ರಾಜಧಾನಿಯ ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಮುಂಬರುವ ಏಪ್ರಿಲ್ 15, 18 ಮತ್ತು 24 ರಂದು ನಡೆಯಲಿರುವ TATA IPL 2026 ಕ್ರಿಕೆಟ್ ಪಂದ್ಯಾವಳಿಗಳ ವೀಕ್ಷಣೆಗೆ ಆಗಮಿಸುವ ಕ್ರೀಡಾಭಿಮಾನಿಗಳಿಗೆ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (BMTC) ಸಿಹಿ ಸುದ್ದಿ ನೀಡಿದೆ. ಪಂದ್ಯ ಮುಗಿದ ನಂತರ ವೀಕ್ಷಕರು ಸುಗಮವಾಗಿ ಮನೆ ತಲುಪಲು ಅನುಕೂಲವಾಗುವಂತೆ ನಗರದ ವಿವಿಧ ಭಾಗಗಳಿಗೆ ವಿಶೇಷ ಬಸ್ಗಳ ಕಾರ್ಯಾಚರಣೆಯನ್ನು ಘೋಷಿಸಲಾಗಿದೆ. ಕ್ರೀಡಾಂಗಣಕ್ಕೆ ಬಂದು ಹೋಗುವ ಸಾರ್ವಜನಿಕರ ದಟ್ಟಣೆಯನ್ನು ಗಮನದಲ್ಲಿಟ್ಟುಕೊಂಡು, ಪಂದ್ಯ ಮುಗಿಯುವ ಸಮಯದಲ್ಲಿ ಕ್ರೀಡಾಂಗಣದ ಸುತ್ತಮುತ್ತಲಿನ ಪ್ರಮುಖ ಸ್ಥಳಗಳಿಂದ ಈ ಕೆಳಕಂಡ ಮಾರ್ಗಗಳಲ್ಲಿ ಸಾರಿಗೆ ಸೌಲಭ್ಯ ಲಭ್ಯವಿರಲಿದೆ: ವಿಶೇಷ ಬಸ್ ಕಾರ್ಯಾಚರಣೆಯ ವಿವರಗಳು: ಕ್ರ.ಸಂ ಮಾರ್ಗ ಸಂಖ್ಯೆ ಎಲ್ಲಿಂದ ಎಲ್ಲಿಗೆ (ತಲುಪುವ ಸ್ಥಳ) 1 ಜಿ-2 ಚಿನ್ನಸ್ವಾಮಿ ಕ್ರೀಡಾಂಗಣ ಸರ್ಜಾಪುರ 2 ಜಿ-3 ಚಿನ್ನಸ್ವಾಮಿ ಕ್ರೀಡಾಂಗಣ ಎಲೆಕ್ಟ್ರಾನಿಕ್ ಸಿಟಿ (ಹೊಸೂರು ರಸ್ತೆ) 3 ಜಿ-4 ಚಿನ್ನಸ್ವಾಮಿ ಕ್ರೀಡಾಂಗಣ ಬನ್ನೇರುಘಟ್ಟ ನ್ಯಾಷನಲ್ ಪಾರ್ಕ್ 4 ಜಿ-10 ಚಿನ್ನಸ್ವಾಮಿ ಕ್ರೀಡಾಂಗಣ ಆರ್.ಕೆ. ಹೆಗಡೆ…
ಮಂಡ್ಯ :- ಉದ್ಯೋಗದ ನಿರೀಕ್ಷೆಯಲ್ಲಿರುವ ಮದ್ದೂರು ನಗರ ಮತ್ತು ಸುತ್ತಮುತ್ತಲಿನ ಉದ್ಯೋಗಾಕಾಂಕ್ಷಿ ಯುವಕ-ಯುವತಿಯರಿಗೆ ಇಲ್ಲೊಂದು ಭರ್ಜರಿ ಸಿಹಿಸುದ್ದಿ ಇದೆ. ಮದ್ದೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಮುಖಂಡ ಹಾಗೂ ಮನ್ ಮುಲ್ ನಿರ್ದೇಶಕ ಎಸ್.ಪಿ.ಸ್ವಾಮಿ ಅವರ ಹುಟ್ಟುಹಬ್ಬ ಹಾಗೂ ಅಕ್ಷರ ಫೌಂಡೇಶನ್ ಗ್ರಾಮಾಭಿವೃದ್ಧಿ ಸಂಸ್ಥೆ ಸಹಯೋಗದಲ್ಲಿ ಯುವಜನತೆಗೆ ಉದ್ಯೋಗ ಕಲ್ಪಿಸುವ ಸದುದ್ದೇಶದಿಂದ ಏಪ್ರಿಲ್ 21 ರ ಮಂಗಳವಾರ ದಂದು ಬೃಹತ್ ಉದ್ಯೋಗ ಮೇಳವನ್ನು ಆಯೋಜಿಸಲಾಗಿದೆ. ಮದ್ದೂರು ನಗರದ ಮಳವಳ್ಳಿ ರಸ್ತೆಯ ಬಿಜೆಪಿ ಕಚೇರಿ ಆವರಣದಲ್ಲಿ ಬೆಳಿಗ್ಗೆ 9 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ಈ ಮಹತ್ವದ ಉದ್ಯೋಗ ಮೇಳ ನಡೆಯಲಿದೆ. ಉದ್ಯೋಗಾಕಾಂಕ್ಷಿಗಳು ಈ ಸುವರ್ಣಾವಕಾಶವನ್ನು ಸದುಪಯೋಗಪಡಿಸಿಕೊಳ್ಳುವಂತೆ ಬಿಜೆಪಿ ಮುಖಂಡ ಹಾಗೂ ಮನ್ ಮುಲ್ ನಿರ್ದೇಶಕ ಎಸ್.ಪಿ.ಸ್ವಾಮಿ ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದರು. ಉದ್ಯೋಗ ಮೇಳದ ಮುಖ್ಯಾಂಶಗಳು ಈಗಾಗಲೇ 50 ಕ್ಕೂ ಹೆಚ್ಚು ಕಂಪನಿಗಳು ಈ ಮೇಳದಲ್ಲಿ ಪಾಲ್ಗೊಳ್ಳಲು ನೋಂದಾಯಿಸಿಕೊಂಡಿವೆ. ಈ ಬೃಹತ್ ಮೇಳದಲ್ಲಿ ಬರೋಬ್ಬರಿ 5000ಕ್ಕೂ ಹೆಚ್ಚು ಉದ್ಯೋಗಾವಕಾಶಗಳು ಲಭ್ಯವಿರುವುದು ವಿಶೇಷವಾಗಿದೆ. ವಿದ್ಯಾರ್ಹತೆ…
ಬೆಂಗಳೂರು: ರಾಜ್ಯದ ಎಸ್ಎಸ್ಎಲ್ಸಿ (SSLC) ವಿದ್ಯಾರ್ಥಿಗಳಿಗೆ ಶಿಕ್ಷಣ ಇಲಾಖೆಯು ಮಹತ್ವದ ಸುದ್ದಿಯೊಂದನ್ನು ನೀಡಿದೆ. ಇನ್ನು ಮುಂದೆ ಎಸ್ಎಸ್ಎಲ್ಸಿ ಪರೀಕ್ಷೆಯ ಒಟ್ಟು ಅಂಕಗಳಲ್ಲಿ ಬದಲಾವಣೆಯಾಗಲಿದ್ದು, ಈ ಕುರಿತು ಶಿಕ್ಷಣ ಇಲಾಖೆಯು ಅಧಿಕೃತ ಕರಡು ಅಧಿಸೂಚನೆಯನ್ನು ಹೊರಡಿಸಿದೆ. 525 ಅಂಕಗಳ ಹೊಸ ಸೂತ್ರ: ಈ ಮೊದಲು ಎಸ್ಎಸ್ಎಲ್ಸಿ ಪರೀಕ್ಷೆಯು ಒಟ್ಟು 625 ಅಂಕಗಳಿಗೆ ನಡೆಯುತ್ತಿತ್ತು. ಆದರೆ, ಹೊಸ ನಿಯಮದ ಪ್ರಕಾರ ತೃತೀಯ ಭಾಷೆ (Third Language) ವಿಷಯಕ್ಕೆ ನೀಡಲಾಗುತ್ತಿದ್ದ 100 ಅಂಕಗಳನ್ನು ತೆಗೆದುಹಾಕಲಾಗಿದೆ. ಇದರ ಬದಲಾಗಿ ತೃತೀಯ ಭಾಷೆಯಲ್ಲಿ ಕೇವಲ ‘ಗ್ರೇಡ್’ (Grade System) ನೀಡಲು ತೀರ್ಮಾನಿಸಲಾಗಿದೆ. ಹೀಗಾಗಿ, ಇನ್ಮುಂದೆ ಫಲಿತಾಂಶವನ್ನು ಒಟ್ಟು 525 ಅಂಕಗಳಿಗೆ ಪರಿಗಣಿಸಲಾಗುತ್ತದೆ. ಉತ್ತೀರ್ಣರಾಗಲು ಮಾನದಂಡಗಳೇನು? ಹೊಸ ಅಧಿಸೂಚನೆಯಲ್ಲಿ ಉತ್ತೀರ್ಣರಾಗಲು ಅಗತ್ಯವಿರುವ ಕನಿಷ್ಠ ಅಂಕಗಳ ಬಗ್ಗೆ ಸ್ಪಷ್ಟಪಡಿಸಲಾಗಿದೆ: ಒಟ್ಟು ಅಂಕಗಳು: 525 ಅಂಕಗಳಲ್ಲಿ ಕನಿಷ್ಠ 173 ಅಂಕಗಳನ್ನು (ಶೇ. 33) ಗಳಿಸುವುದು ಕಡ್ಡಾಯ. ವಿಷಯವಾರು ಅಂಕ: ಪ್ರತಿ ವಿಷಯದಲ್ಲಿ ಕನಿಷ್ಠ ಶೇ. 30ರಷ್ಟು ಅಂಕಗಳನ್ನು ಪಡೆಯಲೇಬೇಕು. ತೃತೀಯ ಭಾಷೆಗೆ ಗ್ರೇಡ್…
ಮುಂಬೈ: ಭಾರತೀಯ ಚಿತ್ರರಂಗದ ಅಪ್ರತಿಮ ಗಾಯಕಿ, ಪದ್ಮವಿಭೂಷಣ ಆಶಾ ಭೋಂಸ್ಲೆ (92) ಅವರು ಭಾನುವಾರ (ಏಪ್ರಿಲ್ 12, 2026) ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಯಲ್ಲಿ ನಿಧನರಾದರು. ಇಂದು ಸಂಜೆ 4 ಗಂಟೆಗೆ ಮುಂಬೈನ ಐತಿಹಾಸಿಕ ಶಿವಾಜಿ ಪಾರ್ಕ್ನಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ ಅವರ ಅಂತ್ಯಕ್ರಿಯೆ ನೆರವೇರಿಸಲಾಯಿತು. ಈ ಮೂಲಕ ಎಂಟು ದಶಕಗಳ ಕಾಲ ಭಾರತೀಯರ ಕಿವಿಯಲ್ಲಿ ಜೇನಿನಂತೆ ಸಪ್ತಸ್ವರಗಳನ್ನು ಸುರಿಸಿದ್ದ ಮಹಾನ್ ಚೇತನ ಪಂಚಭೂತಗಳಲ್ಲಿ ಲೀನವಾಯಿತು. ಗೌರವ ವಂದನೆ ಮತ್ತು ಅಂತಿಮ ವಿಧಿವಿಧಾನ ಮುಂಬೈ ಪೊಲೀಸರು ಕುಶಾಲತೋಪುಗಳ ಗೌರವ ವಂದನೆ (Gun Salute) ಸಲ್ಲಿಸುವ ಮೂಲಕ ಗಾಯಕಿಗೆ ಅಂತಿಮ ನಮನ ಸಲ್ಲಿಸಿದರು. ಆಶಾ ಅವರ ಪಾರ್ಥಿವ ಶರೀರದ ಮೇಲೆ ಹೊದಿಸಲಾಗಿದ್ದ ತ್ರಿವರ್ಣ ಧ್ವಜವನ್ನು ಪೊಲೀಸರು ಗೌರವಪೂರ್ವಕವಾಗಿ ಅವರ ಪುತ್ರ ಆನಂದ್ ಭೋಂಸ್ಲೆ ಅವರಿಗೆ ಹಸ್ತಾಂತರಿಸಿದರು. ನಂತರ ಆನಂದ್ ಭೋಂಸ್ಲೆ ಅವರು ಚಿತೆಗೆ ಅಗ್ನಿಸ್ಪರ್ಶ ಮಾಡುವ ಮೂಲಕ ಅಂತಿಮ ವಿಧಿವಿಧಾನಗಳನ್ನು ನೆರವೇರಿಸಿದರು. https://twitter.com/ANI/status/2043658768014250288 ಗಣ್ಯರ ದಂಡು ಗಾಯಕಿಯ ಅಂತಿಮ ದರ್ಶನ ಪಡೆಯಲು ರಾಜಕೀಯ…
ಬೆಂಗಳೂರು: ಟಾಟಾ ಐಪಿಎಲ್ ಟಿ-20 ಕ್ರಿಕೆಟ್ ಪಂದ್ಯಗಳು 2026ರ ಏಪ್ರಿಲ್ 15, 18 ಹಾಗೂ 24ರಂದು ಬೆಂಗಳೂರಿನಲ್ಲಿ ನಡೆಯಲಿದ್ದು, ಪ್ರಯಾಣಿಕರಿಗೆ ಸುರಕ್ಷಿತ ಹಾಗೂ ಅನುಕೂಲಕರ ಸಂಚಾರವನ್ನು ಕಲ್ಪಿಸುವ ಉದ್ದೇಶದಿಂದ ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತವು ಏಪ್ರಿಲ್ 15 ಮತ್ತು 24ರ ರಾತ್ರಿ ಪಂದ್ಯಗಳ ದಿನಗಳಲ್ಲಿ ಮೆಟ್ರೋ ರೈಲು ಸೇವಾ ಅವಧಿಯನ್ನು ವಿಸ್ತರಿಸಲಾಗುತ್ತಿದೆ. ಈ ದಿನಗಳಲ್ಲಿ, ಎಲ್ಲಾ ಟರ್ಮಿನಲ್ ನಿಲ್ದಾಣಗಳಿಂದ ಕೊನೆಯ ಮೆಟ್ರೋ ರೈಲು ಸೇವೆಗಳು ರಾತ್ರಿ 11:00 ಗಂಟೆಯಿಂದ ಮುಂದಿನ ದಿನದ ಮುಂಜಾನೆ 2:00 ಗಂಟೆಯವರೆಗೆ ವಿಸ್ತರಿಸಲಾಗಿದೆ. ಎಲ್ಲಾ ಟರ್ಮಿನಲ್ ನಿಲ್ದಾಣಗಳಿಂದ ಕೊನೆಯ ರೈಲುಗಳು ಕೆಳಗಿನ ವೇಳಾಪಟ್ಟಿಯಂತೆ ಹೊರಡಲಿವೆ: ವೈಟ್ಫೀಲ್ಡ್ (ಕಾಡುಗೋಡಿ) ಯಿಂದ ರಾತ್ರಿ 12.30ಕ್ಕೆ ಮತ್ತು ಚೆಲ್ಲಘಟ್ಟ ದಿಂದ ರಾತ್ರಿ 12.45ಕ್ಕೆ. ರೇಷ್ಮೆ ಸಂಸ್ಥೆ ಹಾಗೂ ಮಾದಾವರ ದಿಂದ ರಾತ್ರಿ 12.45ಕ್ಕೆ. ಬೊಮ್ಮಸಂದ್ರ ದಿಂದ ರಾತ್ರಿ 12.30ಕ್ಕೆ ಹಾಗೂ ಆರ್.ವಿ. ರಸ್ತೆ ಯಿಂದ ರಾತ್ರಿ 02.00ಕ್ಕೆ. ನಾಡಪ್ರಭು ಕೆಂಪೇಗೌಡ ನಿಲ್ದಾಣ-ಮಜೆಸ್ಟಿಕ್ ನಿಂದ ನಾಲ್ಕು ದಿಕ್ಕುಗಳಿಗೆ ಮಧ್ಯರಾತ್ರಿ 01:30ಕ್ಕೆ ಕೊನೆಯ ರೈಲು…














