Subscribe to Updates
Get the latest creative news from FooBar about art, design and business.
Author: kannadanewsnow09
ಶಿವಮೊಗ್ಗ : ಬಿಜೆಪಿಯವರು ಅತ್ಯಂತ ಕೀಳುಮಟ್ಟದ ರಾಜಕೀಯ ಮಾಡುತ್ತಿದ್ದಾರೆ. ಅನುದಾನದ ಹೆಸರಿನಲ್ಲಿ ಫ್ಲೆಕ್ಸ್ ಅಳವಡಿಸಿ ಚಿಲ್ಲರೆ ರಾಜಕಾರಣ ಮಡುವ ಮೂಲಕ ಜನರನ್ನು ತಪ್ಪುದಾರಿಗೆ ಎಳೆಯುತ್ತಿದ್ದಾರೆ ಎಂದು ಶಾಸಕ ಹಾಗೂ ಅರಣ್ಯ ಕೈಗಾರಿಕಾ ಅಭಿವೃದ್ದಿ ನಿಗಮದ ಅಧ್ಯಕ್ಷ ಗೋಪಾಲಕೃಷ್ಣ ಬೇಳೂರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇಂದು ಶಿವಮೊಗ್ಗ ಜಿಲ್ಲೆಯ ಸಾಗರದ ಜೋಸೆಫ್ ನಗರದಲ್ಲಿ ನಗರೋತ್ಥಾನ ಯೋಜನೆಯಡಿ ರಸ್ತೆ ಕಾಮಗಾರಿಗೆ ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿದಂತ ಅವರು, ನಗರವ್ಯಾಪ್ತಿಯಲ್ಲಿ 60ಕ್ಕೂ ಹೆಚ್ಚು ರಸ್ತೆ ಕಾಮಗಾರಿಗಳು ನಡೆಯುತ್ತಿದೆ. ನಾನು ಮುಖ್ಯಮಂತ್ರಿಗಳಿಗೆ ಮನವಿ ಮಾಡಿ ವಿಶೇಷ ಅನುದಾನ ತಂದಿದ್ದೇನೆ. ಹಣ ಬಂದಿಲ್ಲ ಎಂದು ಬಿಜೆಪಿಯವರು ಬೊಗಳೆ ಬಿಡುತ್ತಿದ್ದಾರೆ. ಯಾರು ಶಾಸಕರು ಇರುತ್ತಾರೋ ಅವರ ಅವಧಿಯಲ್ಲಿ ಒಂದಷ್ಟು ಅನುದಾನ ಬಿಡುಗಡೆಯಾಗಿರುತ್ತದೆ. ಅವರ ನಂತರ ಬರುವ ಮತ್ತೊಬ್ಬ ಶಾಸಕರು ಅದನ್ನು ವಿನಿಯೋಗ ಮಾಡುತ್ತಾರೆ. ಕಾಗೋಡು ತಿಮ್ಮಪ್ಪ ಅವರು 10 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಿದ್ದ ಆಡಳಿತ ಸೌಧವನ್ನು ಹಾಲಪ್ಪ ಶಾಸಕರಾಗಿದ್ದಾಗ ಉದ್ಘಾಟನೆ ಮಾಡಿದ್ದಾರೆ. ಅವರ ಅವಧಿಯಲ್ಲಿ ಉಳಿದ ಸಣ್ಣಪುಟ್ಟ ಅನುದಾನದ ಕಾಮಗಾರಿ ಈಗ…
ಮಿಸ್ಸಿಸ್ಸಿಪ್ಪಿ (ಯುಎಸ್): ಪೂರ್ವ ಮಿಸ್ಸಿಸ್ಸಿಪ್ಪಿಯಲ್ಲಿ ನಡೆದ ಗುಂಡಿನ ದಾಳಿಯಲ್ಲಿ 6 ಜನರು ಸಾವನ್ನಪ್ಪಿದ ನಂತರ ಶನಿವಾರ ಒಬ್ಬ ಶಂಕಿತನನ್ನು ವಶಕ್ಕೆ ತೆಗೆದುಕೊಳ್ಳಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲಬಾಮಾ ಗಡಿಯ ಸಮೀಪದಲ್ಲಿರುವ ವೆಸ್ಟ್ ಪಾಯಿಂಟ್ ಪಟ್ಟಣದಲ್ಲಿ ಹಿಂಸಾಚಾರದಿಂದಾಗಿ ಹಲವಾರು ಅಮಾಯಕ ಜೀವಗಳು ಬಲಿಯಾಗಿವೆ ಎಂದು ಕ್ಲೇ ಕೌಂಟಿ ಶೆರಿಫ್ ಎಡ್ಡಿ ಸ್ಕಾಟ್ ಫೇಸ್ಬುಕ್ ಪೋಸ್ಟ್ನಲ್ಲಿ ತಿಳಿಸಿದ್ದಾರೆ. WTVA ಜೊತೆ ಮಾತನಾಡಿದ ಶೆರಿಫ್, 3 ವಿಭಿನ್ನ ಸ್ಥಳಗಳಲ್ಲಿ 6 ಸಾವುಗಳು ಸಂಭವಿಸಿವೆ ಎಂದು ಹೇಳಿದರು. ಶಂಕಿತನೊಬ್ಬ ಬಂಧನದಲ್ಲಿದ್ದಾನೆ ಮತ್ತು ಸಮುದಾಯಕ್ಕೆ ಯಾವುದೇ ಬೆದರಿಕೆ ಇಲ್ಲ ಎಂದು ಶೆರಿಫ್ ದೃಢಪಡಿಸಿದರು. ನಿಮ್ಮ ಪ್ರಾರ್ಥನೆಯಲ್ಲಿ ನಮ್ಮ ಮೃತರುಗಳು ಮತ್ತು ಅವರ ಕುಟುಂಬಗಳನ್ನು ಕರೆತರುವಂತೆ ನಾನು ಕೇಳುತ್ತೇನೆ. ಕಾನೂನು ಜಾರಿ ಸಂಸ್ಥೆಗಳು ತನಿಖೆಯಲ್ಲಿ ನಿರತವಾಗಿವೆ ಮತ್ತು ಸಾಧ್ಯವಾದಷ್ಟು ಬೇಗ ನವೀಕರಣವನ್ನು ಬಿಡುಗಡೆ ಮಾಡುತ್ತವೆ ಎಂದು ಸ್ಕಾಟ್ ಬರೆದಿದ್ದಾರೆ. ಶೆರಿಫ್ ಕಚೇರಿ ಶನಿವಾರ ಮುಂಜಾನೆ ಹೆಚ್ಚಿನ ವಿವರಗಳನ್ನು ಬಿಡುಗಡೆ ಮಾಡಲಿಲ್ಲ ಆದರೆ ಬೆಳಿಗ್ಗೆ ನಂತರ ಪತ್ರಿಕಾಗೋಷ್ಠಿಯನ್ನು ಯೋಜಿಸಲಾಗಿದೆ ಎಂದು ಹೇಳಿದರು.
ಬೆಂಗಳೂರು: ಈಗ ಇರುವಂತ ತೆನೆ ಹೊತ್ತ ಮಹಿಳೆಯು ರಾಜ್ಯ ಜಾತ್ಯಾತೀತ ಜನತಾ ದಳದ ಚಿಹ್ನೆಯಾಗಿದೆ. ಇಂತಹ ಚಿಹ್ನೆಯಲ್ಲಿ ಕೆಲ ಬದಲಾವಣೆ ಮಾಡೋದಕ್ಕೆ ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಹೆಚ್.ಡಿ ದೇವೇಗೌಡ ಮುಂದಾಗಿದ್ದಾರೆ ಎನ್ನಲಾಗುತ್ತಿದೆ. ನಿನ್ನೆ ಬೆಂಗಳೂರಿನಲ್ಲಿ ನಡೆದಂತ ಜೆಡಿಎಸ್ ಕೋರ್ ಕಮಿಟಿ ಸಭೆಯಲ್ಲಿ ಈ ಪ್ರಸ್ತಾಪವನ್ನು ಮಾಡಿರೋದಾಗಿ ಹೇಳಲಾಗುತ್ತಿದೆ. ಪ್ರಸ್ತುತ ಇರುವಂತ ಜೆಡಿಎಸ್ ಪಕ್ಷದ ತೆನೆ ಹೊತ್ತ ಮಹಿಳೆಯ ಚಿತ್ರದ ಜೊತೆಗೆ ಚಕ್ರದ ಗುರುತನ್ನು ಸೇರಿಸೋದಕ್ಕೆ ಗಂಭೀರ ಚರ್ಚೆಯನ್ನು ಮಾಡಲಾಗಿದೆ ಎಂದು ಹೇಳಲಾಗುತ್ತಿದೆ. ಈ ಹಿಂದೆ ಜನತಾದಳ ಅವಿಭಜಿತವಾಗಿದ್ದಾಗ ಚಕ್ರವು ಪಕ್ಷದ ಪ್ರಮುಖ ಗುರುತಾಗಿತ್ತು. ಇದೇ ಗುರುತನ್ನು ಈಗಿನ ತೆನೆ ಹೊತ್ತ ಮಹಿಳೆಯ ಜೊತೆಗೆ ಸೇರಿಸೋದಕ್ಕೆ ಮುಂದಾಗಿದೆ ಎನ್ನಲಾಗುತ್ತಿದೆ. ಇದರಿಂದ ರೈತ ಮತ್ತು ಪ್ರಗತಿಯ ಸಂಕೇತಗಳನ್ನು ಒಟ್ಟುಗೂಡಿಸಿದಂತೆ ಆಗಲಿದೆ ಎಂಬುದು ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡ ಅವರ ಚಿಂತನೆ ಎನ್ನಲಾಗಿದೆ. ಅಂದಹಾಗೇ ಜೆಡಿಎಸ್ ಪಕ್ಷದ ತೆನೆ ಹೊತ್ತ ಮಹಿಳೆಯ ಚಿಹ್ನೆಯ ಜೊತೆಗೆ ಚಕ್ರವನ್ನು ಸೇರಿಸುವುದರಿಂದ ಪಕ್ಷದ ಇತಿಹಾಸ, ಸಿದ್ಧಾಂತವನ್ನು ಜನರಿಗೆ ತಿಳಿಸಿಕೊಟ್ಟಂತೆ…
ಬೆಂಗಳೂರು: ದ್ವೇಷಭಾಷಣ ಪ್ರತಿಬಂಧಕ ಮಸೂದೆ ವಾಕ್ ಸ್ವಾತಂತ್ರ್ಯವನ್ನು ಕಸಿಯಲಿದೆ. ಈ ಕುರಿತು ರಾಜ್ಯಪಾಲರಿಗೆ ಮನವರಿಕೆ ಮಾಡಿಕೊಡುತ್ತೇವೆ. ಕೇರಳದಲ್ಲಿ ಕನ್ನಡ ಭಾಷೆಗೆ ಧಕ್ಕೆ, ಇದು ಮೊದಲೇ ಆಗಿರುವ ಮ್ಯಾಚ್ ಫಿಕ್ಸಿಂಗ್ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ ಹೇಳಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದ್ವೇಷಭಾಷಣ ಪ್ರತಿಬಂಧಕ ಮಸೂದೆಯ ಬಗ್ಗೆ ಅಧಿವೇಶನದಲ್ಲಿ ಚರ್ಚೆಗೆ ಅವಕಾಶ ನೀಡಬೇಕಿತ್ತು. ಇಂತಹ ಮಸೂದೆ ತರುವಾಗ ಅದು ಜನರ ಮೇಲೆ ಯಾವ ಪರಿಣಾಮ ಬೀರುತ್ತದೆ ಎಂದು ನೋಡಬೇಕಾಗುತ್ತದೆ. ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ರಚಿಸಿದ ಸಂವಿಧಾನದಲ್ಲಿ ಮಸೂದೆ ಬಗ್ಗೆ ಚರ್ಚೆ ನಡೆಸಲು ಅವಕಾಶವಿದೆ. ವಿಧಾನಸಭೆ ಇರುವುದು ಮಸೂದೆ ಮಂಡನೆ ಹಾಗೂ ಚರ್ಚೆಗೇ ಹೊರತು ಗಲಾಟೆ ಮಾಡುವುದಕ್ಕಲ್ಲ. ಆದರೆ ಕಾಂಗ್ರೆಸ್ ಸರ್ಕಾರ ಇದರ ಚರ್ಚೆಗೆ ಅವಕಾಶ ನೀಡಲಿಲ್ಲ. ನಾನು ಮಸೂದೆಯ ಬಗ್ಗೆ ಚರ್ಚೆ ಮಾಡಲು ಮುಂದಾದಾಗ ಕಾಂಗ್ರೆಸ್ ಶಾಸಕರು, ಸಚಿವರು ಭಯಗೊಂಡು ತರಾತುರಿಯಲ್ಲಿ ಮಸೂದೆ ಮಂಡನೆ ಮಾಡಿದರು. ಈ ವಿಚಾರದಲ್ಲಿ ಸ್ಪೀಕರ್ ಯು.ಟಿ.ಖಾದರ್ ಅವರ ನಡೆಯೂ ನನಗೆ ಬೇಸರ ತಂದಿದೆ ಎಂದರು. ಬಿಜೆಪಿಯಲ್ಲಿ 15 ಶಾಸಕರು…
ಬೆಂಗಳೂರು : ತಲಾ ಆದಾಯದಲ್ಲಿ ನಮ್ಮ ರಾಜ್ಯವು ದೇಶದಲ್ಲೇ ಮೊದಲ ಸ್ಥಾನದಲ್ಲಿರಲು ನಮ್ಮ ಸರ್ಕಾರದ ಗ್ಯಾರಂಟಿ ಯೋಜನೆಗಳೇ ಕಾರಣ ಎಂದು ಇಂಧನ ಸಚಿವ ಕೆ.ಜೆ. ಜಾರ್ಜ್ ಹೇಳಿದ್ದಾರೆ. ಡಾ.ಬಿ.ಅರ್. ಅಂಬೇಡ್ಕರ್ ವೈದ್ಯಕೀಯ ಮತ್ತು ಆಸ್ಪತ್ರೆ ಸಮೂಹ ಸಂಸ್ಥೆಯಲ್ಲಿ ಶನಿವಾರ ಆಯೋಜಿಸಿದ್ದ ಸಂಸ್ಥಾಪಕರ ದಿನಾಚರಣೆಯಲ್ಲಿ ಭಾಗವಹಿಸಿ ಸಚಿವರು ಮಾತನಾಡಿದರು. “ತ್ಯಾಗ ಮತ್ತು ಮಮತೆಯ ಪ್ರತೀಕ ಎನಿಸಿರುವ ಮಹಿಳೆಯರಿಗೆ ನಮ್ಮ ಸರ್ಕಾರವು ಗ್ಯಾರಂಟಿ ಯೋಜನೆಗಳ ಮೂಲಕ ಆರ್ಥಿಕ ಶಕ್ತಿ ತುಂಬಿದೆ. ಇದರಿಂದಾಗಿಯೇ ತಲಾ ಆದಾಯದಲ್ಲಿ ನಾವು ದೇಶದಲ್ಲೇ ನಂಬರ್ ಒನ್ ಸ್ಥಾನಕ್ಕೇರಿದ್ದೇವೆ ಎಂದು ಹೇಳಲು ಹೆಮ್ಮೆಯಾಗುತ್ತದೆ. ಯೋಜನೆಗಳಿಂದ ಒಂದು ಕುಟುಂಬಕ್ಕೆ ಸುಮಾರು ಐದು ಸಾವಿರದ ಐನೂರು ರೂಪಾಯಿ ಸಂದಾಯ ಆಗಲಿದೆ. ಇದರಿಂದ ಕುಟುಂಬಗಳು ಸಬಲವಾಗುವ ಜತೆಗೆ ರಾಜ್ಯದ ಆರ್ಥಿಕ ವಹಿವಾಟಿನಲ್ಲೂ ಏರಿಕೆ ಕಂಡಿದೆ. ಸಾವಿರಾರು ಉದ್ಯೋಗಗಳು ಸೃಷ್ಟಿಯಾಗಿವೆ. ಮುಖ್ಯವಾಗಿ ಜನರ ಖರೀದಿ ಶಕ್ತಿ ಹೆಚ್ಚಿದೆ,”ಎಂದು ಹೇಳಿದರು. “ಇಂದಿರಾ ಗಾಂಧಿ ಅವರು ಹೇಳಿದಂತೆ ಸರ್ಕಾರವು ಎಲ್ಲರನ್ನೊಳಗೊಳ್ಳುವ ಸರ್ಕಾರವಾಗಬೇಕು. ಸಂಪತ್ತು ಕೇವಲ ಒಂದು ವರ್ಗದ ಸ್ವತ್ತಾಗದೆ, ಸಮರ್ಪಕವಾಗಿ…
ಬೆಂಗಳೂರು: ಅಮೃತ ಮಹೋತ್ಸವ ಪ್ರಯುಕ್ತ ಬೆಂಗಳೂರಿನ ಬಡ ಕುಟುಂಬಗಳಿಗೆ ವಸತಿ ಕಲ್ಪಿಸಲು ಜಿಬಿ ಎ (ಹಿಂದಿನ ) ಬಿಬಿಎಂಪಿ 550 ಫಲಾನುಭವಿಗಳಿಗೆ ತಲಾ ಐದು ಲಕ್ಷ ರೂ. ನಂತೆ ರಾಜೀವ್ ಗಾಂಧಿ ವಸತಿ ನಿಗಮದ ಖಾತೆಗೆ ಜಮೆ ಮಾಡಿದೆ. ಆದರೆ ಫಲಾನುಭವಿಗಳ ಪಟ್ಟಿ ಕೊಡದ ಕಾರಣ ಮನೆ ಹಂಚಿಕೆ ಮಾಡಿಲ್ಲ ಎಂದು ರಾಜೀವ್ ಗಾಂಧಿ ವಸತಿ ನಿಗಮದ ವ್ಯವಸ್ಥಾಪಕ ನಿರ್ದೇಶಕ ಪರಶುರಾಮ್ ಶಿನ್ನಾಳ್ಕರ್ ಸ್ಪಷ್ಟ ಪಡಿಸಿದ್ದಾರೆ. ಜಿಬಿಎ ಜಮೆ ಮಾಡಿರುವ ಮೊತ್ತ ಸುರಕ್ಷಿತ ವಾಗಿದ್ದು ಯಾವುದೇ ಆತಂಕ ಪಡಬೇಕಿಲ್ಲ. ಪಾಲಿಕೆ ವತಿಯಿಂದ ಫಲಾನುಭವಿಗಳ ಪಟ್ಟಿ ಕೊಟ್ಟ ತಕ್ಷಣ ಮುಖ್ಯಮಂತ್ರಿ ಯವರ ಒಂದು ಲಕ್ಷ ಮನೆ ಯೋಜನೆಯಡಿಯಲ್ಲಿ ಮನೆ ಹಂಚಿಕೆ ಮಾಡಲಾಗುವುದು. 19 ಸಾವಿರ ಮನೆಗಳು ಈಗಾಗಲೇ ಹಂಚಿಕೆಗೆ ಸಿದ್ದವಿದೆ ಎಂದು ಹೇಳಿದ್ದಾರೆ. ಈಗಾಗಲೇ ಫಲಾನುಭವಿಗಳ ಪಟ್ಟಿ ನೀಡುವ ಸಂಬಂಧ ಹಲವಾರು ಬಾರಿ ಪತ್ರ ಬರೆಯಲಾಗಿದೆ. ಆದರೂ ಪಾಲಿಕೆ ವತಿಯಿಂದ ಪಟ್ಟಿ ಬಂದಿಲ್ಲ. ಫಲಾನುಭವಿಗಳ ಪಟ್ಟಿ ಕಳುಹಿಸುವವರೆಗೂ ಈ ಹಣ ಬಳಕೆ ಮಾಡುವಂತಿಲ್ಲ…
ದೇವನಹಳ್ಳಿ : ಮನರೇಗಾ ಯೋಜನೆಯ ಹೆಸರಲ್ಲಿ ನಡೆಯುತ್ತಿರುವ ಭ್ರಷ್ಟಾಚಾರವನ್ನು ವಿಬಿ ಜಿ ರಾಮ್ಜಿ ಯೋಜನೆ ಅಂತ್ಯಗೊಳಿಸಿದೆ. ಆದರೆ ಕಾಂಗ್ರೆಸ್ ನಾಯಕರು ಕೇವಲ ಹೆಸರು ಬದಲಾವಣೆಯ ವಿಚಾರವನ್ನು ಮುಂದಿಟ್ಟುಕೊಂಡು ರಾಜಕೀಯ ಮಾಡುತ್ತಿದ್ದಾರೆ ಎಂದು ಸಂಸದ ಡಾ.ಕೆ.ಸುಧಾಕರ್ ಹೇಳಿದರು. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎನ್ಡಿಎ ಸರ್ಕಾರ ಮನರೇಗಾ ಯೋಜನೆಯನ್ನು ಸುಧಾರಣೆ ಮಾಡಿ ವಿಬಿ ಜಿ ರಾಮ್ ಜಿ ಯೋಜನೆ ತಂದಿದೆ. ಇದು 2047 ರ ‘ವಿಕಸಿತ ಭಾರತ’ದ ಗುರಿಯನ್ನು ತಲುಪಲು ಪೂರಕವಾಗಿದೆ. 2005 ರ ಮೂಲ ಕಾಯಿದೆಯನ್ನು ಈಗಿನ ಕಾಲಕ್ಕೆ ತಕ್ಕಂತೆ ಸುಧಾರಣೆ ಮಾಡುವುದು ಅನಿವಾರ್ಯವಾಗಿತ್ತು. ಯುಪಿಎ ಆಡಳಿತದ ಅವಧಿಯಲ್ಲಿ ಈ ಯೋಜನೆಯಡಿ ಭ್ರಷ್ಟಾಚಾರ ಹಾಗೂ ರಾಜಕೀಯ ಹಸ್ತಕ್ಷೇಪ ನಡೆಯುತ್ತಿತ್ತು. ಗ್ರಾಮ ಪಂಚಾಯಿತಿಗಳ ಪಾತ್ರ ಹೆಸರಿಗೆ ಮಾತ್ರವಿದ್ದು, ರಾಜಕೀಯ ತೀರ್ಮಾನಗಳೇ ಹೆಚ್ಚಾಗಿರುತ್ತಿತ್ತು. ಇದನ್ನು ಸ್ಥಳೀಯ ಶಾಸಕರು ಮತ್ತು ಕಾರ್ಯಕರ್ತರು ನಿಯಂತ್ರಣ ಮಾಡುತ್ತಿದ್ದರು. ಹಾಜರಾತಿಯಲ್ಲಿ ಭ್ರಷ್ಟಾಚಾರ ಸಾಮಾನ್ಯವಾಗಿದ್ದು, 10 ಜನ ಕೆಲಸಕ್ಕೆ ಬಂದರೆ 50 ಜನರ ಹೆಸರು ನೋಂದಾಯಿಸಲಾಗುತ್ತಿತ್ತು. ಯೋಜನೆಯ ಹಣದಲ್ಲಿ…
ಬೆಂಗಳೂರು: ನಮ್ಮ ಮೆಟ್ರೋ ಕಾಳೆನ ಅಗ್ರಹಾರದಿಂದ ತಾವರೆಕೆರೆಯವರೆಗೆ ಇರುವ ಗುಲಾಬಿ ಮಾರ್ಗದಲ್ಲಿ (ಸುಮಾರು 7.5 ಕಿಮೀ ಉದ್ದ) ರೋಲಿಂಗ್ ಸ್ಟಾಕ್ ಪರೀಕ್ಷೆಗಳನ್ನು ದಿನಾಂಕ 11ನೇ ಜನವರಿ 2026 ರಿಂದ ಆರಂಭಿಸಿ ಏಪ್ರಿಲ್ 2026ರ ಮಧ್ಯಭಾಗದೊಳಗೆ ನಿಗಮವು ಪೂರ್ಣಗೊಳಿಸುವ ಯೋಜನೆ ಹೊಂದಿದೆ. ಈ ಮುಖ್ಯ ಪರೀಕ್ಷೆಗಳು (Main Line Testing) ವಾಣಿಜ್ಯ ಸಂಚಾರ ಮಾಡುವ ಮೊದಲು ಕೈಗೊಳ್ಳಲಾಗುವ ಅತ್ಯಂತ ಮಹತ್ವದ ಚಟುವಟಿಕೆಯಾಗಿದ್ದು, ನೈಜ ಕ್ಷೇತ್ರ ಪರಿಸ್ಥಿತಿಗಳಲ್ಲಿ ರೈಲುಗಳ ಕಾರ್ಯಕ್ಷಮತೆ ಹಾಗೂ ವ್ಯವಸ್ಥೆಗಳ ಪರಸ್ಪರ ಸಂಯೋಜನೆಯ ಸಮಗ್ರ ಪರಿಶೀಲನೆಯನ್ನು ಒಳಗೊಂಡಿರುತ್ತದೆ. ಶಾಸನಬದ್ಧ ಅನುಮೋದನೆಗಳನ್ನು ಪಡೆಯಲು ಈ ಪರೀಕ್ಷೆಗಳು ಅಗತ್ಯವಾಗಿದೆ. ಮೇಲ್ಕಂಡ ಅವಧಿಯಲ್ಲಿ ಟ್ರಾಕ್ಷನ್ ಮತ್ತು ಬ್ರೇಕ್, ಆಸಿಲೇಷನ್ (Oscillation), ಸಿಗ್ನಲಿಂಗ್, ವಿದ್ಯುತ್ ಮತ್ತು ದೂರಸಂಪರ್ಕ ವ್ಯವಸ್ಥೆಗಳೊಂದಿಗೆ ಏಕೀಕರಣ (Integration) ಸೇರಿದಂತೆ ಹಲವು ಪರೀಕ್ಷೆಗಳು ನಡೆಸಲಾಗುತ್ತವೆ. ಇದು ಗುಲಾಬಿ ಮಾರ್ಗದಲ್ಲಿನ ಯೋಜನೆಯ ಮಹತ್ವದ ಮೈಲಿಗಲ್ಲಿನತ್ತ ಸಾಗುತ್ತಿರುವುದನ್ನು ಸೂಚಿಸುತ್ತದೆ. ಸಾರ್ವಜನಿಕ ಸೇವೆಗೆ ಸದರಿ ಮಾರ್ಗ ತೆರೆಯುವ ಮೊದಲು ಅತ್ಯುನ್ನತ ಮಟ್ಟದ ಸುರಕ್ಷತೆ ಮತ್ತು ವಿಶ್ವಾಸಾರ್ಹತೆಯನ್ನು ಖಚಿತಪಡಿಸಿಕೊಳ್ಳಲು ಬಿಎಂಆರ್ಸಿಎಲ್…
ನವದೆಹಲಿ: ಪ್ರತಿ ವರ್ಷ ಕೇಂದ್ರ ಬಜೆಟ್ ಭಾರತದಲ್ಲಿ ಅತ್ಯಂತ ಸೂಕ್ಷ್ಮವಾಗಿ ವೀಕ್ಷಿಸಲ್ಪಡುವ ಕಾರ್ಯಕ್ರಮಗಳಲ್ಲಿ ಒಂದಾಗಿದೆ. ಏಕೆಂದರೆ ಇದು ದೇಶದ ಆರ್ಥಿಕ ಮಾರ್ಗಸೂಚಿಯನ್ನು ಹೊಂದಿಸುತ್ತದೆ. ಸಾಂಪ್ರದಾಯಿಕವಾಗಿ, ಫೆಬ್ರವರಿ 1 ರಂದು ಹಣಕಾಸು ಸಚಿವರು ಬಜೆಟ್ ಮಂಡಿಸುತ್ತಾರೆ ಮತ್ತು ಕಳೆದ ಹಲವಾರು ವರ್ಷಗಳಿಂದ, ಈ ಜವಾಬ್ದಾರಿಯನ್ನು ನಿರ್ಮಲಾ ಸೀತಾರಾಮನ್ ಹೊತ್ತಿದ್ದಾರೆ. ಈ ವರ್ಷವೂ ಅವರು ಕೇಂದ್ರ ಬಜೆಟ್ ಮಂಡಿಸಲಿದ್ದಾರೆ. ಆದಾಗ್ಯೂ, ಫೆಬ್ರವರಿ 1 ಭಾನುವಾರದಂದು ಬರುವುದರಿಂದ ಬಜೆಟ್ ಇನ್ನೂ ಆ ದಿನದಂದು ಮಂಡನೆಯಾಗುತ್ತದೆಯೇ ಎಂಬ ಪ್ರಶ್ನೆಗಳು ಉದ್ಭವಿಸುತ್ತಿವೆ. ಇಲ್ಲಿಯವರೆಗೆ, ಸರ್ಕಾರ ಯಾವುದೇ ಅಧಿಕೃತ ಸ್ಪಷ್ಟೀಕರಣವನ್ನು ನೀಡಿಲ್ಲ, ಆದ್ದರಿಂದ ಅಂತಿಮ ನಿರ್ಧಾರಕ್ಕಾಗಿ ಇನ್ನೂ ಕಾಯಲಾಗುತ್ತಿದೆ. ಫೆಬ್ರವರಿ 1 ರಂದು ಕೇಂದ್ರ ಬಜೆಟ್ ಅನ್ನು ಏಕೆ ಮಂಡಿಸಲಾಗುತ್ತದೆ? ಕುತೂಹಲಕಾರಿಯಾಗಿ, ಫೆಬ್ರವರಿ 1 ಯಾವಾಗಲೂ ಬಜೆಟ್ ದಿನವಾಗಿರಲಿಲ್ಲ. 2017 ರ ಮೊದಲು, ಭಾರತವು ಫೆಬ್ರವರಿಯ ಕೊನೆಯ ಕೆಲಸದ ದಿನದಂದು ಬಜೆಟ್ ಮಂಡಿಸುವ ಬ್ರಿಟಿಷ್ ಯುಗದ ಪದ್ಧತಿಯನ್ನು ಅನುಸರಿಸುತ್ತಿತ್ತು. ಏಪ್ರಿಲ್ 1 ರಂದು ಹೊಸ ಹಣಕಾಸು ವರ್ಷ ಪ್ರಾರಂಭವಾಗುವ ಮೊದಲು…
ಬೆಂಗಳೂರು: ವಿಬಿ ಜಿ ರಾಮ್ ಜಿ ಯೋಜನೆಗೆ ಹಣ ನೀಡಲು ಕೂಡ ಕಾಂಗ್ರೆಸ್ ಬಳಿ ಅನುದಾನವಿಲ್ಲ. ಆ ಮಟ್ಟಿಗೆ ಖಜಾನೆ ಖಾಲಿಯಾಗಿದೆ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ ಹೇಳಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಇಷ್ಟು ದಿನ ಮನರೇಗಾ ಅಡಿಯಲ್ಲಿ ಹಣ ಕಳ್ಳತನ ಮಾಡುತ್ತಿತ್ತು. ಈಗ ಪ್ರಧಾನಿ ನರೇಂದ್ರ ಮೋದಿ ವಿಬಿ ಜಿ ರಾಮ್ ಜಿ ಯೋಜನೆ ಜಾರಿ ಮಾಡಿ ಪಾರದರ್ಶಕತೆ ಹೆಚ್ಚಿಸಿದ್ದಾರೆ. ಈ ಹಿಂದೆ ಪೂರ್ಣ ಅನುದಾನ ಬರುತ್ತಿದ್ದರೆ, ಈಗ 60-40 ರಂತೆ ಅನುದಾನ ಹಂಚಿಕೆ ಮಾಡಬೇಕಿದೆ. ಆದರೆ 40% ಹಣ ನೀಡಲು ಕೂಡ ಕಾಂಗ್ರೆಸ್ ಬಳಿ ಅನುದಾನವಿಲ್ಲ. ಆ ಮಟ್ಟಿಗೆ ಕಾಂಗ್ರೆಸ್ ಸರ್ಕಾರದ ಖಜಾನೆ ಖಾಲಿಯಾಗಿದೆ. ರೈಲು, ಮೆಟ್ರೋ ಸೇರಿದಂತೆ ಅನೇಕ ಯೋಜನೆಗಳಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಪಾಲು ಇದೆ. ಅದೇ ರೀತಿ ಈಗ ಪಾಲು ಮಾಡಬಹುದು ಎಂದರು. ಮನಮೋಹನ್ ಸಿಂಗ್ ಸರ್ಕಾರದ ಅವಧಿಯಲ್ಲಿ ಈ ಯೋಜನೆಗೆ 2 ಲಕ್ಷ ಕೋಟಿ ರೂ. ನೀಡಿದ್ದರೆ, ಮೋದಿ ಸರ್ಕಾರದ…














