Subscribe to Updates
Get the latest creative news from FooBar about art, design and business.
Author: ವಸಂತ ಬಿ ಈಶ್ವರಗೆರೆ
ವಸಂತ ಬಿ ಈಶ್ವರಗೆರೆ (Vasantha B Eshwaragere) ಅವರು ಕರ್ನಾಟಕದ ಪತ್ರಕರ್ತರು ಮತ್ತು ಕವಿ. ಉದಯ ನ್ಯೂಸ್, ಟಿವಿ5 ಕನ್ನಡ ಸೇರಿದಂತೆ ವಿವಿಧ ಸುದ್ದಿ ಮಾಧ್ಯಮಗಳಲ್ಲಿ ಸುಮಾರು 15 ವರ್ಷಗಳ ಅನುಭವವನ್ನು ಹೊಂದಿದ್ದಾರೆ. ಪ್ರಸ್ತುತ ಅವರು Kannada News Now ಡಿಜಿಡಿಲ್ ಮಾಧ್ಯಮದಲ್ಲಿ ಸಂಪಾದಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಇವರು ತಾಜಾ ಸುದ್ದಿ, ಸಾಹಿತ್ಯ, ಸಾಮಾಜಿಕ ವರದಿಗಾರಿಕೆ, ನ್ಯಾಯಾಂಗ ಸಂಬಂಧಿತ ವರದಿ ಮತ್ತು ಶಿಕ್ಷಣ ಕ್ಷೇತ್ರಕ್ಕೆ ಸಂಬಂಧಿಸಿದ ಸುದ್ದಿಗಳ ವರದಿಯಲ್ಲಿ ಸಕ್ರಿಯರಾಗಿದ್ದಾರೆ. ಗುಡವಿ ಪಕ್ಷಿಧಾಮದಂತಹ ಪ್ರವಾಸಿ ತಾಣಗಳ ಕುರಿತು ಲೇಖನಗಳನ್ನು ಬರೆದಿದ್ದಾರೆ.
ವಿಶ್ವ ಕ್ರಿಕೆಟ್ನ ಅತ್ಯಂತ ಸುಸಂಸ್ಕೃತ, ಶಾಂತಚಿತ್ತ ಹಾಗೂ ಶ್ರೇಷ್ಠ ಬ್ಯಾಟರ್ಗಳಲ್ಲಿ ಒಬ್ಬರಾದ ನ್ಯೂಜಿಲೆಂಡ್ನ ಮಾಜಿ ನಾಯಕ ಕೇನ್ ವಿಲಿಯಮ್ಸನ್ ಅವರು ಶುಕ್ರವಾರದಂದು ತಮ್ಮ 16 ವರ್ಷಗಳ ಸುದೀರ್ಘ ಅಂತರರಾಷ್ಟ್ರೀಯ ಕ್ರಿಕೆಟ್ ಬದುಕಿಗೆ ತಕ್ಷಣದಿಂದಲೇ ಜಾರಿಗೆ ಬರುವಂತೆ ನಿವೃತ್ತಿ ಘೋಷಿಸಿದ್ದಾರೆ. ಈ ಮೂಲಕ ಕೀವಿಸ್ ಕ್ರಿಕೆಟ್ನ ಸುವರ್ಣ ಯುಗವೊಂದು ಅಂತ್ಯಗೊಂಡಂತಾಗಿದೆ. 35 ವರ್ಷದ ವಿಲಿಯಮ್ಸನ್, ನ್ಯೂಜಿಲೆಂಡ್ ಕ್ರಿಕೆಟ್ ಇತಿಹಾಸದಲ್ಲೇ ಸಾರ್ವಕಾಲಿಕ ಶ್ರೇಷ್ಠ ಕ್ರಿಕೆಟಿಗ ಎಂದು ಗುರುತಿಸಿಕೊಂಡವರು. ಮೂರೂ ಮಾದರಿಯ ಕ್ರಿಕೆಟ್ನಲ್ಲಿ ನ್ಯೂಜಿಲೆಂಡ್ ಪರ ಅತಿ ಹೆಚ್ಚು ರನ್ ಗಳಿಸಿದ ದಾಖಲೆ ಇವರ ಹೆಸರಲ್ಲಿದೆ. ಜಾಗತಿಕ ಕ್ರಿಕೆಟ್ನಲ್ಲಿ ತಮ್ಮ ಅದ್ಭುತ ಸ್ಥಿರತೆ, ಸಂಯಮ ಮತ್ತು ಸಾಟಿಯಿಲ್ಲದ ನಾಯಕತ್ವ ಗುಣಗಳಿಂದಾಗಿ ಅವರು ಕೋಟ್ಯಂತರ ಅಭಿಮಾನಿಗಳ ಹೃದಯ ಗೆದ್ದಿದ್ದಾರೆ. ಅಂಕಿ-ಅಂಶಗಳ ಮಹಾಸಾಮ್ರಾಜ್ಯ ಅಂತರರಾಷ್ಟ್ರೀಯ ಕ್ರಿಕೆಟ್ನಲ್ಲಿ ಕೇನ್ ವಿಲಿಯಮ್ಸನ್ ಅವರ ಸಾಧನೆ ಬೆರಗುಗೊಳಿಸುವಂತದ್ದು: ಒಟ್ಟು ರನ್ಗಳು: 19,346 ಅಂತರರಾಷ್ಟ್ರೀಯ ರನ್. ಶತಕಗಳು: 48 ಶತಕಗಳು ಮತ್ತು 6 ದ್ವಿಶತಕಗಳು. ಟೆಸ್ಟ್ ಕ್ರಿಕೆಟ್: 110 ಪಂದ್ಯಗಳಲ್ಲಿ 54.06ರ ಸರಾಸರಿಯಲ್ಲಿ 9,515…
ಬೆಂಗಳೂರು: ಕರ್ನಾಟಕ ವಿಧಾನ ಪರಿಷತ್ತಿಗೆ ಶೀಘ್ರದಲ್ಲೇ ನಡೆಯಲಿರುವ ದ್ವೈ-ವಾರ್ಷಿಕ ಚುನಾವಣೆಯ ಹಿನ್ನೆಲೆಯಲ್ಲಿ ರಾಜ್ಯ ರಾಜಕಾರಣದಲ್ಲಿ ಭಾರಿ ಚಟುವಟಿಕೆಗಳು ಗರಿಗೆದರಿವೆ. ಇದರ ಭಾಗವಾಗಿ, ಕರ್ನಾಟಕ ಕಾಂಗ್ರೆಸ್ ಶಾಸಕಾಂಗ ಪಕ್ಷದ (CLP) ಮಹತ್ವದ ಸಭೆಯನ್ನು ಇದೇ ಬರುವ ಜೂನ್ 16ರಂದು ಕರೆಯಲಾಗಿದೆ. ವಿಶೇಷವೆಂದರೆ, ಈ ಬಾರಿ ಕಾಂಗ್ರೆಸ್ ತನ್ನ ಶಾಸಕರಿಗೆ ಬೆಂಗಳೂರು ದಕ್ಷಿಣ ಜಿಲ್ಲೆಯ ರಾಮನಗರ ತಾಲೂಕಿನ ಬಿಡದಿ ಬಳಿಯಿರುವ ಪ್ರಸಿದ್ಧ **”ವಂಡರ್ಲಾ ರೆಸಾರ್ಟ್”**ನಲ್ಲಿ ಸಭೆ ಆಯೋಜಿಸಿದ್ದು, ಜೂನ್ 16ರ ಮಂಗಳವಾರ ಸಂಜೆ 6:00 ಗಂಟೆಗೆ ಈ ಸಭೆ ಆರಂಭವಾಗಲಿದೆ ಎಂದು ಪಕ್ಷದ ಪ್ರಕಟಣೆ ತಿಳಿಸಿದೆ. ಡಿಕೆಶಿ ಅಧ್ಯಕ್ಷತೆ, ಸಿದ್ದರಾಮಯ್ಯ ಭಾಗಿ ಕರ್ನಾಟಕ ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕರಾದ ಡಿ.ಕೆ. ಶಿವಕುಮಾರ್ ಅವರ ಅಧ್ಯಕ್ಷತೆಯಲ್ಲಿ ಈ ಉನ್ನತ ಮಟ್ಟದ ಸಭೆ ನಡೆಯಲಿದೆ. ಸಭೆಯಲ್ಲಿ ಎ.ಐ.ಸಿ.ಸಿ. ಪ್ರಧಾನ ಕಾರ್ಯದರ್ಶಿ ಹಾಗೂ ಕರ್ನಾಟಕ ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ, ರಾಜ್ಯ ಕೆ.ಪಿ.ಸಿ.ಸಿ. ಅಧ್ಯಕ್ಷ ಬಿ.ಕೆ. ಹರಿಪ್ರಸಾದ್, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಪಕ್ಷದ ಎಲ್ಲಾ ಕಾರ್ಯಾಧ್ಯಕ್ಷರು…
ಬೆಂಗಳೂರು: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಯೋಜನೆಗಳಲ್ಲಿ ಒಂದಾದ ಶಾಲಾ ಕಾಲೇಜುಗಳ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ಗಳನ್ನು ಉಪಯೋಗಿಸಿ ಹೊರ ರಾಜ್ಯಗಳ ಶಿಕ್ಷಣ ಸಂಸ್ಥೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೂ ಪ್ರಯಾಣಿಸಲು ಅವಕಾಶ ಕಲ್ಪಿಸಲಾಗಿದೆ. ಗಂಡು ಮಕ್ಕಳಿಗೂ ಉಚಿತ ಪಾಸ್ ವಿತರಣೆಯ ಸಂಬಂಧ ರಾಜ್ಯ ಸಾರಿಗೆ ಇಲಾಖೆ ಮಾರ್ಗಸೂಚಿಗಳನ್ನು ಪ್ರಕಟಿಸಿದೆ. ಅದರಂತೆ, 1) ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ, ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮ, ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಮತ್ತು ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯ ಬಸ್ ಗಳಲ್ಲಿ ಇನ್ನು ಮುಂದೆ ವಿದ್ಯಾರ್ಥಿಗಳು, ವಿದ್ಯಾರ್ಥಿನಿಯರೆಲ್ಲರೂ ಉಚಿತವಾಗಿ ಪ್ರಯಾಣಿಸಬಹುದಾಗಿದೆ. 2) ರಸ್ತೆ ಸಾರಿಗೆ ನಿಗಮಗಳು ಮತ್ತು ಸಂಸ್ಥೆಗಳು ವಿದ್ಯಾರ್ಥಿಗಳ ಉಚಿತ ಪಾಸ್ ವಿತರಣೆಗೆ ಸಂಬಂಧಿಸಿದಂತೆ ಹಾಲಿ ಇರುವ ನಿಯಮಾವಳನ್ನು ಅನುಸರಿಸಲಾಗುತ್ತದೆ. ಅಂದರೆ, ವಿದ್ಯಾರ್ಥಿ ಪಾಸಿಗಾಗಿ ಶೈಕ್ಷಣಿಕ ವಿದ್ಯಾಭ್ಯಾಸದ ಅರ್ಹತಾ ಮಾನದಂಡಗಳು, ದೂರದ ಮಿತಿ, ಪಾಸಿನ ಕಾಲಾವಧಿಯಂತಹ ನಿಬಂಧನೆಗಳು ಅನ್ವಯವಾಗುತ್ತವೆ. 3) ವಿದ್ಯಾರ್ಥಿಗಳು ರಾಜ್ಯ ಸರ್ಕಾರದ ಸೇವಾ ಸಿಂಧು ಪೋರ್ಟಲ್…
ಬೆಂಗಳೂರು: ರಾಜ್ಯದ ಶಾಲಾ-ಕಾಲೇಜುಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಕರ್ನಾಟಕ ಸರ್ಕಾರವು ಭರ್ಜರಿ ಕೊಡುಗೆಯೊಂದನ್ನು ನೀಡಿದೆ. ರಾಜ್ಯದ ಎಲ್ಲಾ ಶಾಲಾ-ಕಾಲೇಜು ವಿದ್ಯಾರ್ಥಿಗಳಿಗೆ ತಕ್ಷಣದಿಂದಲೇ ಜಾರಿಗೆ ಬರುವಂತೆ “ಉಚಿತ ಬಸ್ ಪಾಸ್” ಸೌಲಭ್ಯವನ್ನು ವಿಸ್ತರಿಸಿ ಸಾರಿಗೆ ಇಲಾಖೆಯು ಅಧಿಕೃತ ಆದೇಶ ಹೊರಡಿಸಿದೆ. ಮುಖ್ಯಮಂತ್ರಿಗಳ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯ ತೀರ್ಮಾನದನ್ವಯ ಈ ಮಹತ್ವದ ಆದೇಶವನ್ನು ಜಾರಿಗೊಳಿಸಲಾಗಿದೆ. ಯೋಜನೆ ವ್ಯಾಪ್ತಿಗೆ ಒಳಪಡುವ ಸಾರಿಗೆ ಸಂಸ್ಥೆಗಳು ರಾಜ್ಯದ ಪ್ರಮುಖ ನಾಲ್ಕು ಸರ್ಕಾರಿ ರಸ್ತೆ ಸಾರಿಗೆ ಸಂಸ್ಥೆಗಳ ಬಸ್ಗಳಲ್ಲಿ ಪ್ರಯಾಣಿಸುವ ವಿದ್ಯಾರ್ಥಿಗಳಿಗೆ ಈ ಉಚಿತ ಪಾಸ್ ಸೌಲಭ್ಯ ಅನ್ವಯವಾಗಲಿದೆ: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (KSRTC) ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (BMTC) ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ (NWKRTC) ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮ (KKRTC) ರೂ. 286.08 ಕೋಟಿ ವೆಚ್ಚದ ಬೃಹತ್ ಯೋಜನೆ ಈ ಹಿಂದೆ ಚಾಲ್ತಿಯಲ್ಲಿದ್ದ ನಿಯಮಾವಳಿಗಳ ಪ್ರಕಾರ ಸಾಮಾನ್ಯ ವರ್ಗದ ವಿದ್ಯಾರ್ಥಿ ಪಾಸ್ಗಳ ಒಟ್ಟು ವೆಚ್ಚದಲ್ಲಿ ಶೇ.…
ಬೆಂಗಳೂರು: ಅನಿರೀಕ್ಷಿತ ತಾಂತ್ರಿಕ ಸಮಸ್ಯೆಯ ಹಿನ್ನೆಲೆಯಲ್ಲಿ, ರಾಷ್ಟ್ರೀಯ ಸಾಮಾನ್ಯ ಸಂಚಾರ ಕಾರ್ಡ್ (NCMC) ಗಳ ಟಾಪ್-ಅಪ್/ರೀಚಾರ್ಜ್ ಸೌಲಭ್ಯವು ತಾತ್ಕಾಲಿಕವಾಗಿ ಸ್ಥಗಿತಗೊಂಡಿದೆ. ಸೇವೆಯನ್ನು ಶೀಘ್ರದಲ್ಲೇ ಪುನಃ ಆರಂಬಿಸಲು ಆದ್ಯತೆಯ ಮೇರೆಗೆ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ ಅಂತ ಬಿಎಂಆರ್ ಸಿಎಲ್ ತಿಳಿಸಿದೆ. ಈ ಬಗ್ಗೆ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಹಂಚಿಕೊಂಡಿದ್ದು, ಎನ್ಸಿಎಂಸಿ ಕಾರ್ಡ್ ಬಳಸುವ ಪ್ರಯಾಣಿಕರು ತಮ್ಮ ಪ್ರಯಾಣವನ್ನು ಅದಕ್ಕೆ ಅನುಗುಣವಾಗಿ ಯೋಜಿಸಿಕೊಳ್ಳುವಂತೆ ಕೋರಲಾಗಿದೆ. ಕಾರ್ಡ್ಗಳನ್ನು ರೀಚಾರ್ಜ್ ಮಾಡಲು ಅಥವಾ ಬಳಸಲು ಸಾಧ್ಯವಾಗದಿದ್ದಲ್ಲಿ, ಪ್ರಯಾಣಿಕರು ಯಾವುದೇ ತೊಂದರೆ ತಪ್ಪಿಸಲು ಕ್ಯೂಆರ್ ಟಿಕೆಟ್ಗಳು ಅಥವಾ ಟೋಕನ್ಗಳನ್ನು ಖರೀದಿಸಿ ಪ್ರಯಾಣಿಸಬಹುದು ಎಂದಿದೆ. ಈ ತಾತ್ಕಾಲಿಕ ಅನಾನೂಕೂತೆಗೆ ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತ (ಬಿಎಂಆರ್ಸಿಎಲ್) ವಿಷಾದ ವ್ಯಕ್ತಪಡಿಸುತ್ತಿದ್ದು, ಪ್ರಯಾಣಿಕರ ಸಹನೆ, ಸಹಕಾರ ಮತ್ತು ತಿಳುವಳಿಕೆಗೆ ಕೃತಜ್ಞತೆ ಸಲ್ಲಿಸುತ್ತದೆ ಅಂತ ಹೇಳಿದೆ. ಸದರಿ ಸೇವೆ ಸಂಪೂರ್ಣವಾಗಿ ಯಾತಸ್ಥಿತಿಗೆ ಬಂದಕೂಡಲೇ ಮಾಹಿತಿಯನ್ನು ಪ್ರಕಟಿಸಲಾಗುವುದು ಎಂಬುದಾಗಿ ಬಿಎಂಆರ್ ಸಿಎಲ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ.
ಬೆಂಗಳೂರು: ರಾಜ್ಯದ ವಿದ್ಯಾರ್ಥಿ ಸಮೂಹದ ಶೈಕ್ಷಣಿಕ ಪ್ರಗತಿಗೆ ಪೂರಕವಾಗಿ ಕರ್ನಾಟಕ ಸರ್ಕಾರ ಮತ್ತೊಂದು ಐತಿಹಾಸಿಕ ಹೆಜ್ಜೆ ಇಟ್ಟಿದೆ. ಬಡತನ ಅಥವಾ ಆರ್ಥಿಕ ಮುಗ್ಗಟ್ಟು ಯಾವುದೇ ಮಗುವಿನ ಶಿಕ್ಷಣಕ್ಕೆ ಅಡ್ಡಿಯಾಗಬಾರದು ಎಂಬ ಉದಾತ್ತ ಉದ್ದೇಶದಿಂದ, ರಾಜ್ಯದ ಇತಿಹಾಸದಲ್ಲೇ ಇದೇ ಮೊದಲ ಬಾರಿಗೆ ಎಲ್ಲಾ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ವಿತರಿಸುವ ಮಹತ್ವಾಕಾಂಕ್ಷೆಯ ಗ್ಯಾರಂಟಿ ಯೋಜನೆಗೆ ಚಾಲನೆ ನೀಡಲಾಗಿದೆ. ಸಾರಿಗೆ ಸಚಿವರಾದ ಬೈರತಿ ಸುರೇಶ್ ಅವರು ಈ ಐತಿಹಾಸಿಕ ನಿರ್ಧಾರವನ್ನು ಅಧಿಕೃತವಾಗಿ ಪ್ರಕಟಿಸಿದ್ದು, ವಿದ್ಯಾರ್ಥಿ ವಲಯದಲ್ಲಿ ಸಚೇತನ ಮೂಡಿಸಿದೆ. ಲಿಂಗ ತಾರತಮ್ಯವಿಲ್ಲದೆ ಎಲ್ಲ ಮಕ್ಕಳಿಗೂ ಸೌಲಭ್ಯ ರಾಜ್ಯದಲ್ಲಿ ಈಗಾಗಲೇ ಜಾರಿಯಲ್ಲಿದ್ದ ‘ಶಕ್ತಿ’ ಯೋಜನೆಯಡಿ ಕೇವಲ ವಿದ್ಯಾರ್ಥಿನಿಯರಿಗೆ ಮಾತ್ರ ಉಚಿತ ಬಸ್ ಪ್ರಯಾಣದ ಸೌಲಭ್ಯವಿತ್ತು. ಆದರೆ, ಪ್ರಸ್ತುತ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹತ್ವದ ನಿರ್ಧಾರವೊಂದನ್ನು ಕೈಗೊಂಡು, ಇನ್ಮುಂದೆ ಗಂಡುಮಕ್ಕಳಿಗೂ ಉಚಿತ ಬಸ್ ಪಾಸ್ ಸೌಲಭ್ಯವನ್ನು ವಿಸ್ತರಿಸಿದೆ. ಇದರಿಂದಾಗಿ ರಾಜ್ಯದ ಲಕ್ಷಾಂತರ ವಿದ್ಯಾರ್ಥಿಗಳಿಗೆ ಹಾಗೂ ಅವರ ಪೋಷಕರಿಗೆ ಆರ್ಥಿಕವಾಗಿ ದೊಡ್ಡ ಮಟ್ಟದ ನೆರವು…
BIG NEWS: ಸಾಗರದಲ್ಲಿ ‘ಪೆಟ್ರೋಲ್ ಕದಿಯೋ ಗ್ಯಾಂಗ್’ ಆಕ್ಟೀವ್: ಬಸ್, ರೈಲ್ವೆ ನಿಲ್ದಾಣದ ‘ಬೈಕ್’ಗಳೇ ಕಳ್ಳರ ಟಾರ್ಗೆಟ್!
ಶಿವಮೊಗ್ಗ: ದಿನದಿಂದ ದಿನಕ್ಕೆ ಪೆಟ್ರೋಲ್ ದರ ಗಗನಕ್ಕೇರುತ್ತಿರುವ ಬೆನ್ನಲ್ಲೇ, ವಾಹನ ಸವಾರರ ಜೇಬಿಗೆ ಕತ್ತರಿ ಹಾಕಲು ವಿನೂತನ ಕಳ್ಳರ ಗ್ಯಾಂಗ್ ಒಂದು ಸಾಗರ ನಗರದಲ್ಲಿ ಸಕ್ರಿಯವಾಗಿದೆ. ತುರ್ತು ಕೆಲಸಗಳ ನಿಮಿತ್ತ ಸಾರ್ವಜನಿಕ ಸ್ಥಳಗಳಲ್ಲಿ ಬೈಕ್ ನಿಲ್ಲಿಸಿ ಹೋಗುವ ಸವಾರರೇ ಈ ಗ್ಯಾಂಗ್ನ ಮುಖ್ಯ ಟಾರ್ಗೆಟ್. ಸದ್ಯ ಶಿವಮೊಗ್ಗ ಜಿಲ್ಲೆಯ ಸಾಗರ ನಗರದಲ್ಲಿ ರಾತ್ರೋರಾತ್ರಿ ಬೈಕ್ಗಳಿಂದ ಪೆಟ್ರೋಲ್ ಕದಿಯುವ ತಂಡವೊಂದು ಹುಟ್ಟಿಕೊಂಡಿದ್ದು, ಸಾರ್ವಜನಿಕರಲ್ಲಿ ಭಾರಿ ಆತಂಕ ಮೂಡಿಸಿದೆ. ಜಂಬಗಾರು ರೈಲ್ವೆ ನಿಲ್ದಾಣವೇ ಕಳ್ಳರ ಅಡ್ಡೆ! ಸಾಗರ ಪೇಟೆ ಪೊಲೀಸ್ ಠಾಣೆಯ ಕೂಗಳತೆಯ ದೂರದಲ್ಲೇ ಇರುವ ಜಂಬಗಾರು ರೈಲ್ವೆ ನಿಲ್ದಾಣದ ಬಳಿ ಈ ಪೆಟ್ರೋಲ್ ಕಳ್ಳತನ ದಂಧೆ ಮಿತಿಮೀರಿದೆ. ಪ್ರತಿದಿನ ನೂರಾರು ಪ್ರಯಾಣಿಕರು ತುರ್ತು ಕೆಲಸದ ನಿಮಿತ್ತ ರೈಲ್ವೆ ನಿಲ್ದಾಣದ ಮುಂದೆ ತಮ್ಮ ಬೈಕ್ಗಳನ್ನು ಪಾರ್ಕ್ ಮಾಡಿ ಬೇರೆ ಊರುಗಳಿಗೆ ತೆರಳುತ್ತಾರೆ. ಆದರೆ, ಕಳ್ಳರು ಈ ಪರಿಸ್ಥಿತಿಯನ್ನೇ ಬಂಡವಾಳ ಮಾಡಿಕೊಂಡಿದ್ದಾರೆ. ವಾಹನ ಸವಾರರು ಏನಾದರೂ ರಾತ್ರಿ ವೇಳೆ ಮರಳಿ ಬಾರದಿದ್ದರೆ, ಬೆಳಗಾಗುವುದರೊಳಗೆ ಅವರ ಬೈಕ್ನಲ್ಲಿನ…
ಬೆಂಗಳೂರು: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ‘ಅನ್ನಭಾಗ್ಯ’ (Annabhagya) ಯೋಜನೆಯಡಿ ಅಕ್ಕಿ ವಿತರಣೆಯಲ್ಲಿ ಉಂಟಾಗಿದ್ದ ವ್ಯತ್ಯಯದ ಕುರಿತು ಮಾಧ್ಯಮಗಳ ನಿರಂತರ ವರದಿಯ ಬೆನ್ನಲ್ಲೇ ಆಹಾರ ಇಲಾಖೆ ಎಚ್ಚೆತ್ತುಕೊಂಡಿದೆ. ತನ್ನ ಹಳೆಯ ಆದೇಶವನ್ನು ಬದಲಾಯಿಸಿರುವ ರಾಜ್ಯ ಸರ್ಕಾರ, ಇದೇ ಜೂನ್ ತಿಂಗಳಿನಿಂದ ರೇಷನ್ ಕಾರ್ಡ್ದಾರರಿಗೆ ಪೂರ್ಣ 10 ಕೆಜಿ ಅಕ್ಕಿ ವಿತರಿಸಲು ತುರ್ತು ಆದೇಶ ಹೊರಡಿಸಿದೆ. ರಾಜ್ಯದಲ್ಲಿ ಕಳೆದ ಕೆಲವು ಸಮಯದಿಂದ ಅನ್ನಭಾಗ್ಯ ಯೋಜನೆಯಡಿ ರಾಜ್ಯ ಸರ್ಕಾರ ನೀಡಬೇಕಿದ್ದ ಅಕ್ಕಿ ವಿತರಣೆ ಸಂಪೂರ್ಣ ಸ್ಥಗಿತಗೊಂಡಿತ್ತು. ಫಲಾನುಭವಿಗಳಿಗೆ ಕೇವಲ ಕೇಂದ್ರ ಸರ್ಕಾರದ ಯೋಜನೆಯಡಿ ಸಿಗುತ್ತಿದ್ದ ಅಕ್ಕಿ ಮಾತ್ರ ತಲುಪುತ್ತಿತ್ತು. ಇದರ ಬೆನ್ನಲ್ಲೇ ಆಹಾರ ಇಲಾಖೆಯು “ಕಳೆದ ಎರಡು ತಿಂಗಳಿನಿಂದ 6 ಕೆಜಿ ರಾಗಿ ಮತ್ತು 4 ಕೆಜಿ ಅಕ್ಕಿ ವಿತರಿಸಲಾಗುವುದು” ಎಂದು ಹೊಸ ಆದೇಶ ಹೊರಡಿಸಿತ್ತು. ಬಡ ಜನರಿಗೆ ಅಕ್ಕಿಯ ಬದಲಾಗಿ ಕಡ್ಡಾಯವಾಗಿ ರಾಗಿ ನೀಡುತ್ತಿರುವುದರಿಂದ ಉಂಟಾಗುತ್ತಿದ್ದ ತೊಂದರೆ ಹಾಗೂ ಅನ್ನಭಾಗ್ಯ ಯೋಜನೆ ಹಳಿ ತಪ್ಪುತ್ತಿರುವ ಕುರಿತು ಮಾಧ್ಯಮಗಳಲ್ಲಿ ನಿರಂತರವಾಗಿ ಜನಾಭಿಪ್ರಾಯದ ವರದಿಗಳನ್ನು ಪ್ರಸಾರ ಮಾಡಿ…
ದಾವಣಗೆರೆ: ಹರಿಹರ ತಾಲೂಕಿನ ರಾಜನಹಳ್ಳಿಯ ಜಗದ್ಗುರು ಹರಿಹರ ಬ್ರಹ್ಮಾನಂದ ಮಹಾಸಂಸ್ಥಾನದ ಪೀಠಾಧಿಪತಿಯಾದ ವಚನಾನಂದ ಸ್ವಾಮೀಜಿ (Vachanananda Swamiji) ಅವರ ವಿರುದ್ಧ ದಾಖಲಾಗಿದ್ದ ಪೋಕ್ಸೋ (POCSO) ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ನ್ಯಾಯಾಲಯಕ್ಕೆ ದೋಷಾರೋಪಣೆ ಪಟ್ಟಿ (Chargesheet) ಸಲ್ಲಿಸಿದ್ದಾರೆ. ಮೈನರ್ ಬಾಲಕಿ ನೀಡಿದ್ದ ದೂರಿನ ಅನ್ವಯ ದಾವಣಗೆರೆ ಜಿಲ್ಲೆಯ ಮಹಿಳಾ ಪೊಲೀಸ್ ಠಾಣೆಯಲ್ಲಿ ಸ್ವಾಮೀಜಿ ವಿರುದ್ಧ ಲೈಂಗಿಕ ದೌರ್ಜನ್ಯದ ಆರೋಪದಡಿ ಪೋಕ್ಸೋ ಕಾಯ್ದೆಯಡಿ ಮೊಕದ್ದಮೆ ದಾಖಲಾಗಿತ್ತು. ಈ ಪ್ರಕರಣದ ತನಿಖೆಯನ್ನು ನಡೆಸಿದ ತನಿಖಾಧಿಕಾರಿಗಳು, ಅಗತ್ಯ ಸಾಕ್ಷ್ಯಾಧಾರಗಳನ್ನು ಕಲೆಹಾಕಿ ದಾವಣಗೆರೆಯ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯಕ್ಕೆ ಚಾರ್ಜ್ಶೀಟ್ ಸಲ್ಲಿಕೆ ಮಾಡಿದ್ದಾರೆ. ಪ್ರಕರಣದ ಹಿನ್ನೆಲೆ: ಕಳೆದ ವರ್ಷ ಮಠದ ಆವರಣದಲ್ಲಿ ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ನೀಡಲಾಗಿದೆ ಎಂಬ ಗಂಭೀರ ಆರೋಪ ಕೇಳಿಬಂದಿತ್ತು. ಈ ಸಂಬಂಧ ಸಂತ್ರಸ್ತೆ ಮತ್ತು ಆಕೆಯ ಕುಟುಂಬದವರು ನೀಡಿದ ದೂರಿನ ಮೇರೆಗೆ ಪೊಲೀಸರು ಎಫ್ಐಆರ್ (FIR) ದಾಖಲಿಸಿಕೊಂಡಿದ್ದರು. ಪ್ರಕರಣ ದಾಖಲಾದ ಬಳಿಕ ನ್ಯಾಯಾಲಯದಿಂದ ಮುಂಗಡ ಜಾಮೀನು ಪಡೆದಿದ್ದ ವಚನಾನಂದ ಸ್ವಾಮೀಜಿ, ತಮ್ಮ…
ಬೆಂಗಳೂರು: ರಾಜ್ಯದಲ್ಲಿ ಇದೇ ಮೊದಲ ಬಾರಿಗೆ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ವಿತರಣೆ ಮಾಡುವ ಐತಿಹಾಸಿಕ ಗ್ಯಾರಂಟಿ ಯೋಜನೆಗೆ ರಾಜ್ಯ ಸರ್ಕಾರ ಚಾಲನೆ ನೀಡಿದೆ. ಸಾರಿಗೆ ಸಚಿವರಾದ ಬೈರತಿ ಸುರೇಶ್ ಅವರು ಈ ವಿಷಯವನ್ನು ಘೋಷಿಸಿದ್ದಾರೆ. ಈಗಾಗಲೇ ಹಣ ಪಾವತಿ ಮಾಡಿ ಬಸ್ ಪಾಸ್ ಖರೀದಿಸಿರುವ ವಿದ್ಯಾರ್ಥಿಗಳಿಗೆ ಆ ಹಣವನ್ನು ವಾಪಸ್ ನೀಡಲಾಗುವುದು ಎಂದೂ ಅವರು ವಿದ್ಯಾರ್ಥಿ ಸಮೂಹಕ್ಕೆ ಸಿಹಿ ಸುದ್ದಿ ನೀಡಿದ್ದಾರೆ. ಈ ಬಗ್ಗೆ ಮಾಹಿತಿ ನೀಡಿರುವ ಅವರು, ಇದುವರೆಗೆ ವಿದ್ಯಾರ್ಥಿನಿಯರಿಗೆ ಮಾತ್ರ ಉಚಿತ ಬಸ್ ಪಾಸ್ ವಿತರಣೆ ಮಾಡಲಾಗುತ್ತಿತ್ತು. ಇದೀಗ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನೇತೃತ್ವದ ಕಾಂಗ್ರೆಸ್ ಸರ್ಕಾರ ಗಂಡುಮಕ್ಕಳಿಗೂ ಈ ಸೌಲಭ್ಯವನ್ನು ಕಲ್ಪಿಸುವ ಮಹತ್ವದ ನಿರ್ಧಾರ ಕೈಗೊಂಡಿದೆ ಎಂದರು. ಉಚಿತ ಬಸ್ ಪಾಸ್ ವಿತರಣೆಗೆ ಸಂಬಂಧಿಸಿದಂತೆ ಮಾರ್ಗಸೂಚಿಗಳನ್ನು ಸಿದ್ಧಪಡಿಸಲಾಗಿದ್ದು, ಬಿಡುಗಡೆ ಮಾಡಲಾಗುವುದು ಎಂದು ತಿಳಿಸಿದರು. ಎಲ್ಲಾ ಮಕ್ಕಳಿಗೂ ಸೌಲಭ್ಯ ಬಡವ ಶ್ರೀಮಂತ ಎನ್ನದೇ ಪ್ರತಿಯೊಬ್ಬ ಮಕ್ಕಳೂ ಆರ್ಥಿಕ ಹೊರೆ ಇಲ್ಲದೇ ತಮ್ಮ ವಿದ್ಯಾಭ್ಯಾಸ ಮಾಡಬೇಕೆಂಬುದು ನಮ್ಮ ಸರ್ಕಾರದ ಪ್ರಮುಖ ಉದ್ದೇಶವಾಗಿದೆ.…














