Author: ವಸಂತ ಬಿ ಈಶ್ವರಗೆರೆ

ವಸಂತ ಬಿ ಈಶ್ವರಗೆರೆ (Vasantha B Eshwaragere) ಅವರು ಕರ್ನಾಟಕದ ಪತ್ರಕರ್ತರು ಮತ್ತು ಕವಿ. ಉದಯ ನ್ಯೂಸ್, ಟಿವಿ5 ಕನ್ನಡ ಸೇರಿದಂತೆ ವಿವಿಧ ಸುದ್ದಿ ಮಾಧ್ಯಮಗಳಲ್ಲಿ ಸುಮಾರು 15 ವರ್ಷಗಳ ಅನುಭವವನ್ನು ಹೊಂದಿದ್ದಾರೆ. ಪ್ರಸ್ತುತ ಅವರು Kannada News Now ಡಿಜಿಡಿಲ್‌ ಮಾಧ್ಯಮದಲ್ಲಿ ಸಂಪಾದಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಇವರು ತಾಜಾ ಸುದ್ದಿ, ಸಾಹಿತ್ಯ, ಸಾಮಾಜಿಕ ವರದಿಗಾರಿಕೆ, ನ್ಯಾಯಾಂಗ ಸಂಬಂಧಿತ ವರದಿ ಮತ್ತು ಶಿಕ್ಷಣ ಕ್ಷೇತ್ರಕ್ಕೆ ಸಂಬಂಧಿಸಿದ ಸುದ್ದಿಗಳ ವರದಿಯಲ್ಲಿ ಸಕ್ರಿಯರಾಗಿದ್ದಾರೆ. ಗುಡವಿ ಪಕ್ಷಿಧಾಮದಂತಹ ಪ್ರವಾಸಿ ತಾಣಗಳ ಕುರಿತು ಲೇಖನಗಳನ್ನು ಬರೆದಿದ್ದಾರೆ.

ನಾವೊಬ್ಬರನ್ನು ಭೇಟಿಯಾದಾಗ ನೀಡುವ ಹಸ್ತಲಾಘವ ಅಥವಾ ಹ್ಯಾಂಡ್‌ಶೇಕ್ (Handshake) ಕೇವಲ ಒಂದು ಔಪಚಾರಿಕ ಸೌಜನ್ಯದ ನಡವಳಿಕೆಯಲ್ಲ. ಬದಲಿಗೆ, ಅದು ನಿಮ್ಮ ವೈಯಕ್ತಿಕ ಸಂಬಂಧಗಳು, ದೀರ್ಘಕಾಲದ ಪ್ರೇಮ ಜೀವನ ಹಾಗೂ ನಿಮ್ಮ ಲೈಂಗಿಕ ಪಾಲುದಾರರ (Sexual Partners) ಸಂಖ್ಯೆಯನ್ನು ನಿರ್ಧರಿಸಬಲ್ಲದು! ಕೇಳಲು ಆಶ್ಚರ್ಯವೆನಿಸಿದರೂ ಇದು ನಿಜ ಎಂದು ಇತ್ತೀಚಿನ ಹೊಸ ಸಂಶೋಧನೆಯೊಂದು ಬಹಿರಂಗಪಡಿಸಿದೆ. ‘ಎವಲ್ಯೂಷನ್ ಅಂಡ್ ಹ್ಯೂಮನ್ ಬಿಹೇವಿಯರ್’ (Evolution and Human Behavior) ಎಂಬ ಜರ್ನಲ್‌ನಲ್ಲಿ ಪ್ರಕಟವಾದ ಜಾಗತಿಕ ಅಧ್ಯಯನದ ಪ್ರಕಾರ, ಒಬ್ಬ ವ್ಯಕ್ತಿಯ ದೇಹದ ಮೇಲ್ಭಾಗದ ಶಕ್ತಿ (Upper Body Strength) ಮತ್ತು ಅವನ ಹಸ್ತಲಾಘವದ ಗಟ್ಟಿತನವು ಅವನ ಪ್ರೇಮ ಹಾಗೂ ಲೈಂಗಿಕ ಜೀವನದ ಯಶಸ್ಸನ್ನು ಪ್ರತಿಬಿಂಬಿಸುತ್ತದೆ. ಈ ರೋಚಕ ಅಧ್ಯಯನದ ಪ್ರಮುಖ ಮುಖ್ಯಾಂಶಗಳು ಇಲ್ಲಿವೆ: 1. ಗಟ್ಟಿಯಾದ ಹ್ಯಾಂಡ್‌ಶೇಕ್; ದೀರ್ಘಕಾಲದ ಸಂಬಂಧ ವಾಷಿಂಗ್ಟನ್ ಸ್ಟೇಟ್ ಯೂನಿವರ್ಸಿಟಿಯ (Washington State University) ಸಂಶೋಧಕರು ಅಮೆರಿಕದ ವಯಸ್ಕರ ರಾಷ್ಟ್ರೀಯ ಆರೋಗ್ಯ ಮತ್ತು ಪೌಷ್ಟಿಕಾಂಶ ಪರೀಕ್ಷೆಯ ಸಮೀಕ್ಷೆಯ ದತ್ತಾಂಶಗಳನ್ನು ಆಧರಿಸಿ ಈ ಸಂಶೋಧನೆ…

Read More

ಬೆಂಗಳೂರು: ಮಾಜಿ ಸಚಿವ ಹಾಗೂ ಗಂಗಾವತಿ ಕ್ಷೇತ್ರದ ಹಾಲಿ ಶಾಸಕ ಗಾಲಿ ಜನಾರ್ದನ ರೆಡ್ಡಿ ಅವರಿಗೆ ಕಾನೂನು ಹೋರಾಟದಲ್ಲಿ ಅತ್ಯಂತ ಮಹತ್ವದ ಜಯ ಸಿಕ್ಕಿದೆ. ಅಕ್ರಮ ಅದಿರು ರಫ್ತು ಹಗರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತದ ವಿಶೇಷ ತನಿಖಾ ದಳ (SIT) ದಾಖಲಿಸಿದ್ದ ಎರಡು ಪ್ರಮುಖ ಮೊಕದ್ದಮೆಗಳನ್ನು ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ವಜಾಗೊಳಿಸಿದೆ. ತಮ್ಮ ವಿರುದ್ಧದ ದೋಷಾರೋಪ ಪಟ್ಟಿಯನ್ನು ರದ್ದುಪಡಿಸುವಂತೆ ಕೋರಿ ಜನಾರ್ದನ ರೆಡ್ಡಿ ಸಲ್ಲಿಸಿದ್ದ ಅರ್ಜಿಯನ್ನು ಪುರಸ್ಕರಿಸಿದ ನ್ಯಾಯಾಧೀಶರು, ರೆಡ್ಡಿ ಹಾಗೂ ಅವರ ಸಹಚರರನ್ನು ಈ ಪ್ರಕರಣದಿಂದ ಮುಕ್ತಗೊಳಿಸಿ ಆದೇಶ ಹೊರಡಿಸಿದ್ದಾರೆ. ಸಾಕ್ಷ್ಯಾಧಾರಗಳ ಕೊರತೆ: ಸಿಕ್ಕಿತು ಕ್ಲೀನ್ ಚೀಟ್ ಈ ಹಿಂದೆ ಬಳ್ಳಾರಿ ಜಿಲ್ಲಾ ಉಸ್ತುವಾರಿ ಸಚಿವರಾಗಿದ್ದ ಅವಧಿಯಲ್ಲಿ ಜನಾರ್ದನ ರೆಡ್ಡಿ ಅವರು ತಮ್ಮ ಅಧಿಕಾರವನ್ನು ದುರ್ಬಳಕೆ ಮಾಡಿಕೊಂಡು, ಗಣಿ ಸಂಪತ್ತನ್ನು ಕಾನೂನುಬಾಹಿರವಾಗಿ ಸಾಗಿಸಲು ಸಂಚು ರೂಪಿಸಿದ್ದರು ಎಂದು ಎಸ್‌ಐಟಿ ಗಂಭೀರ ಆರೋಪ ಮಾಡಿತ್ತು. ಆದರೆ, ಈ ಆಪಾದನೆಗಳನ್ನು ಸಾಬೀತುಪಡಿಸಲು ತನಿಖಾ ಸಂಸ್ಥೆಯು ಸೂಕ್ತ ಸಾಕ್ಷ್ಯಗಳನ್ನು ಒದಗಿಸಲು ವಿಫಲವಾದ ಹಿನ್ನೆಲೆಯಲ್ಲಿ ನ್ಯಾಯಾಲಯವು…

Read More

ಬೆಳಗಾವಿ: ಬೆಳಗಾವಿ ನಗರದಲ್ಲಿ ಅತ್ಯಂತ ಆಘಾತಕಾರಿ ಘಟನೆಯೊಂದು ಸಂಭವಿಸಿದೆ. ರಾಜ್ಯ ವಿಪತ್ತು ಸ್ಪಂದನಾ ಪಡೆಯ (SDRF) ಪೊಲೀಸ್ ಇನ್ಸ್‌ಪೆಕ್ಟರ್ (CPI) ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ಶ್ರೀಶೈಲ ಚೌಗಲೆ (37) ಅವರು ತಮ್ಮ ನಿವಾಸದಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ನಗರದ ಚನ್ನಮ್ಮ ನಗರದಲ್ಲಿರುವ ತಮ್ಮ ಮನೆಯ ರೂಮ್‌ನಲ್ಲಿ ಬಾಗಿಲು ಹಾಕಿಕೊಂಡು ಅವರು ಈ ಗಂಭೀರ ನಿರ್ಧಾರ ಕೈಗೊಂಡಿದ್ದಾರೆ. ಘಟನೆ ನಡೆದ ತಕ್ಷಣವೇ ಅವರ ಪತ್ನಿ, ಪತಿಯ ಆತ್ಮಹತ್ಯೆಯ ಯತ್ನದ ಕುರಿತು ಎಸ್‌ಡಿಆರ್‌ಎಫ್ ಸಿಬ್ಬಂದಿಗೆ ಮಾಹಿತಿ ನೀಡಿದ್ದಾರೆ. ಬಾಗಿಲು ಮುರಿದು ಆಸ್ಪತ್ರೆಗೆ ದಾಖಲಿಸಿದರೂ ಫಲಿಸದ ಯತ್ನ ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಧಾವಿಸಿದ ಎಸ್‌ಡಿಆರ್‌ಎಫ್ ಅಧೀನ ಸಿಬ್ಬಂದಿ, ತಕ್ಷಣವೇ ರೂಮ್‌ನ ಬಾಗಿಲನ್ನು ಮುರಿದು ಒಳಪ್ರವೇಶಿಸಿದ್ದಾರೆ. ತಕ್ಷಣವೇ ಅವರನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ಕರೆದುಕೊಂಡು ಹೋಗಲಾಯಿತಾದರೂ, ಅಷ್ಟರಲ್ಲಾಗಲೇ ಅವರು ಮೃತಪಟ್ಟಿದ್ದರು. ಸದ್ಯ ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಬೆಳಗಾವಿಯ ಬಿಮ್ಸ್ (BIMS) ಆಸ್ಪತ್ರೆಯ ಶವಾಗಾರಕ್ಕೆ ರವಾನಿಸಲಾಗಿದೆ. ಕಾರಣ ನಿಗೂಢ-ತನಿಖೆ ಆರಂಭ: > ಸಿಪಿಐ ಶ್ರೀಶೈಲ ಚೌಗಲೆ ಅವರ ಆತ್ಮಹತ್ಯೆಗೆ…

Read More

ಬೆಂಗಳೂರು: ರಾಜಧಾನಿಯ ವಿದ್ಯಾರ್ಥಿಗಳಿಗೆ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯು (ಬಿಎಂಟಿಸಿ) ಸಿಹಿ ಸುದ್ದಿ ನೀಡಿದೆ. ಸರ್ಕಾರದ ನಿರ್ದೇಶನದಂತೆ 2026-27ನೇ ಶೈಕ್ಷಣಿಕ ಸಾಲಿನ 1 ರಿಂದ 12ನೇ ತರಗತಿವರೆಗಿನ ವಿದ್ಯಾರ್ಥಿಗಳಿಗೆ ಉಚಿತ ಹಾಗೂ ರಿಯಾಯಿತಿ ದರದ ಬಸ್ ಪಾಸುಗಳ ವಿತರಣಾ ಪ್ರಕ್ರಿಯೆಗೆ ಚಾಲನೆ ನೀಡಲಾಗಿದೆ. ಈ ಕುರಿತು ಬಿಎಂಟಿಸಿ ಅಧಿಕೃತ ಪ್ರಕಟಣೆ ಹೊರಡಿಸಿದ್ದು, ಅರ್ಹ ವಿದ್ಯಾರ್ಥಿಗಳು ಇಂದಿನಿಂದಲೇ ಅರ್ಜಿ ಸಲ್ಲಿಸಬಹುದಾಗಿದೆ. ಮೇ 30 ರಿಂದ ಆನ್‌ಲೈನ್ ಅರ್ಜಿ ಸಲ್ಲಿಕೆ, ಜೂನ್ 1 ರಿಂದ ಪಾಸ್ ವಿತರಣೆ 2026-27ನೇ ಸಾಲಿನ ವಿದ್ಯಾರ್ಥಿ ರಿಯಾಯಿತಿ ಬಸ್ ಪಾಸಿಗಾಗಿ ದಿನಾಂಕ 30.05.2026 ರಿಂದಲೇ ಆನ್‌ಲೈನ್ ಮೂಲಕ ಅರ್ಜಿ ಸ್ವೀಕಾರ ಪ್ರಕ್ರಿಯೆ ಆರಂಭಗೊಂಡಿದೆ. ಆನ್‌ಲೈನ್‌ನಲ್ಲಿ ಯಶಸ್ವಿಯಾಗಿ ಅರ್ಜಿ ಸಲ್ಲಿಸಿದ ವಿದ್ಯಾರ್ಥಿಗಳಿಗೆ ದಿನಾಂಕ 01.06.2026 ರಿಂದ ಬೆಂಗಳೂರು ಒನ್ ಸೇರಿದಂತೆ ಸಂಸ್ಥೆಯ ನಿಗದಿಪಡಿಸಿದ ಪ್ರಮುಖ ಕೇಂದ್ರಗಳ ಮೂಲಕ ವಿದ್ಯಾರ್ಥಿ ಪಾಸುಗಳನ್ನು ವಿತರಣೆ ಮಾಡಲಾಗುವುದು ಎಂದು ಸಂಸ್ಥೆ ತಿಳಿಸಿದೆ. ಸೇವಾಸಿಂಧು ಪೋರ್ಟಲ್ ಮೂಲಕ ಸುಲಭ ಅರ್ಜಿ ವಿದ್ಯಾರ್ಥಿ ರಿಯಾಯಿತಿ ಪಾಸಿನ ಆನ್‌ಲೈನ್…

Read More

ನವದೆಹಲಿ: ಗುಜರಾತ್ ನ ಜಾಮ್ ನಗರದಲ್ಲಿ ಇರುವ ವನ್ಯಪ್ರಾಣಿಗಳ ಸಂರಕ್ಷಣೆ ಹಾಗೂ ಪುನರ್ವಸತಿ ಕೇಂದ್ರ ವಂತಾರಕ್ಕೆ ಅಂತಾರಾಷ್ಟ್ರೀಯ ಪ್ರಾಣಿಗಳ ಸ್ಥಳಾಂತರ ಮಾಡುವ ಪ್ರಕರಣವನ್ನು ಮತ್ತೆ ತನಿಖೆ ಮಾಡಬೇಕು ಎಂಬ ಮನವಿಯನ್ನು ಸುಪ್ರೀಂ ಕೋರ್ಟ್ ನಿರಾಕರಿಸಿದೆ. ಈ ವಿಶಿಷ್ಟ ಕೇಂದ್ರ ವಂತಾರವನ್ನು ರಿಲಯನ್ಸ್ ಸಮೂಹ ನಿರ್ವಹಣೆ ಮಾಡುತ್ತಿದೆ. ಮಾರ್ಚ್ 9, 2026ರಂದು ನೀಡಿದ್ದ ಆದೇಶವನ್ನು ಹಿಂಪಡೆದು, ಹೊಸದಾಗಿ ಸಿಬಿಐ, ಇ.ಡಿ. ಮತ್ತಿತರ ಸಂಸ್ಥೆಗಳ ಮೂಲಕ ಹೊಸದಾಗಿ ಅಂತಾರಾಷ್ಟ್ರೀಯ ಪ್ರಾಣಿಗಳ ಸ್ಥಳಾಂತರದ ಬಗ್ಗೆ ತನಿಖೆ ನಡೆಸುವುದಕ್ಕೆ ಸೂಚಿಸಬೇಕು ಎಂದು ಹಾಕಿದ್ದ ಅರ್ಜಿಯನ್ನು ವಿಭಾಗೀಯ ಪೀಠವು ನಿರಾಕರಿಸಿದೆ. ನ್ಯಾಯಮೂರ್ತಿಗಳಾದ ಪ್ರಶಾಂತ್ ಕುಮಾರ್ ಮಿಶ್ರಾ ಹಾಗೂ ಎನ್ ವಿ ಅಂಜಾರಿಯಾ ಅವರನ್ನು ಒಳಗೊಂಡ ವಿಭಾಗೀಯ ಪೀಠವು ಈ ಪ್ರಕರಣದ ಮರು ತನಿಖೆಯನ್ನು ನಿರಾಕರಿಸಿದೆ. ಅರ್ಜಿದಾರರಾದ ಕರಣಾರ್ಥಂ ವಿರಾಮಃ ಫೌಂಡೇಶನ್ ಅವರು ಅರ್ಜಿ ಸಲ್ಲಿಸಿದ್ದರು. ಹೊಸದಾಗಿ ತನಿಖೆ ನಡೆಸಲು, ಪ್ರಾಣಿಗಳನ್ನು ವಶಪಡಿಸಿಕೊಳ್ಳಲು ಮತ್ತು ಮರಳಿ ಆಯಾ ದೇಶಕ್ಕೆ ವಾಪಸ್ ಕಳುಹಿಸಲು ಹಾಗೂ ಜಾಮ್‌ನಗರದ ಸೌಲಭ್ಯವನ್ನು ಕೇಂದ್ರ ಸರ್ಕಾರವು ತನ್ನ…

Read More

ಬೆಂಗಳೂರು: ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಕಾಂಗ್ರೆಸ್ ಶಾಸಕಾಂಗ ಪಕ್ಷದ (CLP) ನಾಯಕನಾಗಿ ಅವಿರೋಧವಾಗಿ ಆಯ್ಕೆಯಾದ ಬೆನ್ನಲ್ಲೇ, ನಿರ್ಗಮಿತ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ‘ಎಕ್ಸ್’ (ಟ್ವಿಟರ್) ಖಾತೆಯಲ್ಲಿ ಸುದೀರ್ಘ ಹಾಗೂ ಅತ್ಯಂತ ಭಾವನಾತ್ಮಕ ಪತ್ರವೊಂದನ್ನು ಹಂಚಿಕೊಂಡಿದ್ದಾರೆ. ತಮ್ಮ ಸಹೋದ್ಯೋಗಿಗೆ ಹಾರ್ದಿಕ ಅಭಿನಂದನೆ ಸಲ್ಲಿಸಿರುವ ಸಿದ್ದರಾಮಯ್ಯ, ರಾಜ್ಯದ ಗದ್ದುಗೆಯನ್ನು ಅಲಂಕರಿಸಲಿರುವ ಡಿಕೆಶಿಗೆ ಕರ್ನಾಟಕದ ಮುಂದಿನ ಸವಾಲುಗಳು ಹಾಗೂ ಸೈದ್ಧಾಂತಿಕ ಬದ್ಧತೆಯ ಮಹತ್ವವನ್ನು ನೆನಪಿಸಿದ್ದಾರೆ. ಸಿದ್ದರಾಮಯ್ಯ ಅವರ ಆ ಎಕ್ಸ್ ಪೋಸ್ಟ್‌ನ ಸಂಪೂರ್ಣ ಸಾರಾಂಶ ಇಲ್ಲಿದೆ: 1. ಡಿಕೆಶಿ ಸಂಘಟನಾ ಚಾತುರ್ಯಕ್ಕೆ ಸಿದ್ದರಾಮಯ್ಯ ಶ್ಲಾಘನೆ “ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕನಾಗಿ ಆಯ್ಕೆಯಾಗಿರುವ ಸಂಗಾತಿ ಡಿ.ಕೆ. ಶಿವಕುಮಾರ್ ಅವರಿಗೆ ಹಾರ್ದಿಕವಾದ ಅಭಿನಂದನೆಗಳು” ಎಂದು ಸಿದ್ದರಾಮಯ್ಯ ಪತ್ರವನ್ನು ಆರಂಭಿಸಿದ್ದಾರೆ. “ಪ್ರಿಯ ಶಿವಕುಮಾರ್, ನಿಮ್ಮಲ್ಲಿರುವ ಅದಮ್ಯವಾದ ಕ್ರಿಯಾಶೀಲತೆ, ಸಂಘಟನಾ ಚಾತುರ್ಯ ಮತ್ತು ಕಾಂಗ್ರೆಸ್ ಪಕ್ಷದ ಮೇಲಿನ ಸಂಶಯಾತೀತ ನಿಷ್ಠೆಯನ್ನು ಒಬ್ಬ ಸಹೋದ್ಯೋಗಿಯಾಗಿ ನಾನು ಸಮೀಪದಿಂದ ಗಮನಿಸಿದ್ದೇನೆ. ಇವೆಲ್ಲದರ ಸದುಪಯೋಗ ರಾಜ್ಯದ ಜನತೆಗೆ ಆಗಲಿ ಎಂದು…

Read More

ಕಲಬುರಗಿ: ಆಳಂದ ಪಟ್ಟಣದ ರಾಘವ ಚೈತನ್ಯ ಶಿವಲಿಂಗ ಮೂರ್ತಿ ಪೂಜೆಗೆ ಅಡ್ಡಿಪಡಿಸಿದ ಗುಂಡಾಗಳ ಮೇಲಿನ ಕೇಸ್ ವಾಪಸ್ಸು ಪಡೆದಿರುವುದನ್ನು ಖಂಡಿಸಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ನೇತೃತ್ವದಲ್ಲಿ ಬಿಜೆಪಿ ಜೂನ್ 1ರಂದು ಕಲಬೂರಗಿ ನಗರದಲ್ಲಿ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ಮಾಜಿ ಶಾಸಕ ರಾಜಕುಮಾರ ಪಾಟೀಲ್ ತೇಲ್ಕೂರ ತಿಳಿಸಿದರು. ಈ ಕುರಿತು ಪತ್ರಿಕಾ ಪ್ರಕಟಣೆ ಹೊರಡಿಸಿರುವ ಅವರು ಆಳಂದ ಪಟ್ಟಣದಲ್ಲಿ ರಾಘವ ಚೈತನ್ಯ ಶಿವಲಿಂಗ ಮೂರ್ತಿಗೆ ಪೂಜೆ ಸಲ್ಲಿಸಲು ತೆರಳುವ ಸಂದರ್ಭದಲ್ಲಿ ಆಗ ಕೇಂದ್ರದ ಸಚಿವರಾಗಿದ್ದ ಭಗವಂತ ಖೂಬಾ, ಆಂದೋಲಾ ಸಿದ್ದಲಿಂಗ ಸ್ವಾಮಿ ಸೇರಿ ಅದರಲ್ಲೂ ಜಿಲ್ಲಾಧಿಕಾರಿ ಕಾರಿನ ಮೇಲೆ ಕೆಲವು ಗುಂಡಾಗಳು ಕಲ್ಲೂ ತೂರಾಟ ನಡೆಸಿದ್ದರ ಹಿನ್ನೆಲೆಯಲ್ಲಿ 13 ಪ್ರಕರಣಗಳು ದಾಖಲಾಗಿದ್ದವು. ಅದರಲ್ಲಿ 8 ಪ್ರಕರಣಗಳು ಸಚಿವರ, ಶಾಸಕರ ಹಾಗೂ ಇತರರ ಮೇಲೆ ಕಲ್ಲೂ ತೂರಾಟ ನಡೆಸಿದ್ದಲ್ಲದೇ ಮಾರಕಾಸ್ತ್ರದಿಂದ ಹಿಡಿದು ಭಯದ ವಾತಾವರಣ ನಿರ್ಮಾಣ ಮಾಡಿರುವ ಹಿನ್ನೆಲೆಯಲ್ಲಿ ಸ್ವಯಂಪ್ರೇರಿತವಾಗಿ ದಾಖಲಾಗಿದ್ದವು. 5 ಪ್ರಕರಣಗಳು ಖಾಸಗಿಯಾಗಿ ದಾಖಲಾಗಿದ್ದವು. ಆದರೆ ಸರ್ಕಾರ ಗೂಂಡಾಗಳಿಗೆ…

Read More

ಶಿವಮೊಗ್ಗ: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನೇತೃತ್ವದ ನೂತನ ಸಚಿವ ಸಂಪುಟದಲ್ಲಿ ಸಾಗರ ವಿಧಾನಸಭಾ ಕ್ಷೇತ್ರದ ಶಾಸಕರಾದ ಗೋಪಾಲಕೃಷ್ಣ ಬೇಳೂರು ಅವರಿಗೆ ಸಚಿವ ಸ್ಥಾನ ನೀಡಬೇಕು ಎಂದು ಕಾಂಗ್ರೆಸ್ ಮುಖಂಡ ಅಶೋಕ್ ಬೇಳೂರು ಹೈಕಮಾಂಡ್ ಹಾಗೂ ರಾಜ್ಯ ನಾಯಕತ್ವವನ್ನು ಒತ್ತಾಯಿಸಿದ್ದಾರೆ. ಅರ್ಹ ನಾಯಕತ್ವ ಮತ್ತು ಜನಸೇವೆಗೆ ಮನ್ನಣೆ ಈ ಕುರಿತು ಅಧಿಕೃತ ಪ್ರಕಟಣೆ ಹೊರಡಿಸಿರುವ ಅಶೋಕ್ ಬೇಳೂರು ಅವರು, ಗೋಪಾಲಕೃಷ್ಣ ಬೇಳೂರು ಅವರು ಸುದೀರ್ಘ ಕಾಲದಿಂದ ಪಕ್ಷ ಸಂಘಟನೆ, ಜನಸೇವೆ ಹಾಗೂ ಸಾಗರ ಕ್ಷೇತ್ರದ ಸರ್ವತೋಮುಖ ಅಭಿವೃದ್ಧಿಗೆ ಮಹತ್ವದ ಕೊಡುಗೆ ನೀಡುತ್ತಾ ಬಂದಿದ್ದಾರೆ. ತಳಮಟ್ಟದಿಂದ ಜನಪರ ಕೆಲಸ ಮಾಡುತ್ತಾ ಬಂದಿರುವ ಅವರು ಸಚಿವ ಸ್ಥಾನವನ್ನು ಅಲಂಕರಿಸಲು ಎಲ್ಲಾ ರೀತಿಯಿಂದಲೂ ಸಂಪೂರ್ಣ ಅರ್ಹರಾಗಿದ್ದಾರೆ ಎಂದು ತಿಳಿಸಿದ್ದಾರೆ. ಮಲೆನಾಡು ಭಾಗದ ಪ್ರಾತಿನಿಧ್ಯಕ್ಕೆ ಒತ್ತಾಯ ಸಚಿವ ಸಂಪುಟ ರಚನೆಯ ಸಂದರ್ಭದಲ್ಲಿ ಮಲೆನಾಡು ಭಾಗದ ಜನರ ಆಶೋತ್ತರಗಳಿಗೆ ಮತ್ತು ಪ್ರಾದೇಶಿಕ ಸಮತೋಲನಕ್ಕೆ ಸ್ಪಂದಿಸುವುದು ಅತ್ಯಂತ ಅಗತ್ಯವಾಗಿದೆ. ಈ ನಿಟ್ಟಿನಲ್ಲಿ ಮಲೆನಾಡಿಗೆ ಸಚಿವ ಸಂಪುಟದಲ್ಲಿ ಸಮರ್ಪಕ ಪ್ರಾತಿನಿಧ್ಯ ನೀಡಬೇಕಾಗಿದ್ದು, ಗೋಪಾಲಕೃಷ್ಣ…

Read More

ಜೈಪುರ: ರಾಜಸ್ಥಾನದ ಬಿಕಾನೇರ್ ಜಿಲ್ಲೆಯಲ್ಲಿ ಶನಿವಾರ ಮಧ್ಯಾಹ್ನ ಭೀಕರ ಧೂಳಿನ ಬಿರುಗಾಳಿ (Dust Storm) ಅಪ್ಪಳಿಸಿದೆ. ಇಡೀ ನಗರವನ್ನು ದಟ್ಟವಾದ ಧೂಳಿನ ಮೋಡಗಳು ಆವರಿಸಿಕೊಂಡಿದ್ದು, ಕ್ಷಣಾರ್ಧದಲ್ಲಿ ಹಗಲು ಹೊತ್ತೇ ಸಂಪೂರ್ಣ ಕತ್ತಲೆಯಾಗಿ ಮಾರ್ಪಟ್ಟಿದೆ. ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ವಿಡಿಯೋಗಳಲ್ಲಿ, ಬೃಹತ್ ಮರಳಿನ ಗೋಡೆಯೊಂದು ಇಡೀ ನಗರವನ್ನು ನುಂಗಲು ಬರುತ್ತಿರುವಂತೆ ಕಾಣುತ್ತಿದ್ದು, ಈ ದೃಶ್ಯಗಳು ಜನರಲ್ಲಿ ತೀವ್ರ ಭೀತಿ ಹುಟ್ಟಿಸುವಂತಿವೆ. ಧೂಳಿನ ತೀವ್ರತೆಗೆ ಪ್ರಮುಖ ರಸ್ತೆಗಳಲ್ಲಿ ದೃಷ್ಟಿಗೋಚರತೆ (Visibility) ಸಂಪೂರ್ಣ ಕುಸಿದಿದ್ದು, ವಾಹನ ಸವಾರರು ತೀವ್ರ ಪರದಾಡಿದರು. ದಟ್ಟವಾದ ಹಳದಿ-ಕಂದು ಬಣ್ಣದ ಧೂಳು ನಗರವನ್ನು ಆವರಿಸಿದ್ದರಿಂದ ಅಪಘಾತದ ಭಯದಿಂದ ಜನರು ವಾಹನಗಳನ್ನು ರಸ್ತೆ ಬದಿಯಲ್ಲೇ ನಿಲ್ಲಿಸಿ, ಸುರಕ್ಷಿತ ಸ್ಥಳಗಳತ್ತ ಧಾವಿಸಿದರು. ಮಾರುಕಟ್ಟೆಗಳು ಬಂದ್, ವಿದ್ಯುತ್ ಸಂಪರ್ಕ ಕಡಿತ ಬಿರುಗಾಳಿಯ ಗಾಳಿ ತೀವ್ರಗೊಳ್ಳುತ್ತಿದ್ದಂತೆ ನಗರದ ಪ್ರಮುಖ ಮಾರುಕಟ್ಟೆಗಳಲ್ಲಿ ಗೊಂದಲದ ವಾತಾವರಣ ನಿರ್ಮಾಣವಾಗಿತ್ತು. ವ್ಯಾಪಾರಿಗಳು ಅವಸರದಲ್ಲಿ ಅಂಗಡಿಗಳ ಶಟರ್‌ಗಳನ್ನು ಎಳೆದರೆ, ಸಾರ್ವಜನಿಕರು ಧೂಳಿನಿಂದ ರಕ್ಷಣೆ ಪಡೆಯಲು ಇಕ್ಕಟ್ಟಾದ ಜಾಗಗಳಲ್ಲಿ ಆಶ್ರಯ ಪಡೆದರು. ಬಿರುಗಾಳಿಯ ರೌದ್ರಾವತಾರಕ್ಕೆ ನಗರದ…

Read More

ಬೆಂಗಳೂರು: ಕರ್ನಾಟಕದ ರಾಜಕೀಯ ಬೆಳವಣಿಗೆಗಳಿಗೆ ಅಧಿಕೃತ ಮುದ್ರೆ ಬಿದ್ದಿದ್ದು, ನೂತನ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಲು ಡಿ.ಕೆ. ಶಿವಕುಮಾರ್ ಅವರಿಗೆ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ಅವರು ಅಧಿಕೃತವಾಗಿ ಆಹ್ವಾನ ನೀಡಿದ್ದಾರೆ. ನೊಣವಿನಕೆರೆಯ ಅಜ್ಜಯ್ಯ ನೀಡಿದ್ದಂತ ಮುಹೂರ್ತದಲ್ಲೇ ಡಿಕೆ ಶಿವಕುಮಾರ್ ಅವರು ಜೂನ್.3ರಂದು ಸಂಜೆ 4.05 ಗಂಟೆಗೆ ಕರ್ನಾಟಕದ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕರಾಗಿ ಆಯ್ಕೆಯಾದ ಬೆನ್ನಲ್ಲೇ ಡಿ.ಕೆ. ಶಿವಕುಮಾರ್ ಅವರು ಮೇ 30ರ ಇಂದು ಸಲ್ಲಿಸಿದ್ದ ಸರ್ಕಾರ ರಚನೆಯ ಹಕ್ಕು ಮಂಡನೆ ಪತ್ರವನ್ನು ಪುರಸ್ಕರಿಸಿ ರಾಜ್ಯಪಾಲರು ಈ ಆದೇಶ ಹೊರಡಿಸಿದ್ದಾರೆ. ರಾಜ್ಯಪಾಲರ ಅಧಿಕೃತ ಪತ್ರದಲ್ಲೇನಿದೆ? ರಾಜ್ಯಪಾಲರ ಕಾರ್ಯಾಲಯದಿಂದ (ಪತ್ರ ಸಂಖ್ಯೆ: NO GS 57 GOB 2026) ಹೊರಬಿದ್ದಿರುವ ಅಧಿಕೃತ ಪ್ರಕಟಣೆಯಲ್ಲಿ, “ಮೇ 30, 2026 ರಂದು ನೀವು ಸರ್ಕಾರ ರಚಿಸಲು ಹಕ್ಕು ಮಂಡಿಸಿ ಸಲ್ಲಿಸಿದ ಪತ್ರ ನನಗೆ ತಲುಪಿದೆ. ಕರ್ನಾಟಕದ ಮುಖ್ಯಮಂತ್ರಿಯಾಗಿ ಹಾಗೂ ನಿಮ್ಮ ಸಚಿವ ಸಂಪುಟದ ಸದಸ್ಯರಾಗಿ ಪ್ರಮಾಣ ವಚನ ಸ್ವೀಕರಿಸಲು ನಾನು ನಿಮಗೆ…

Read More