Author: kannadanewsnow09

ಕೊಪ್ಪಳ: ರಾಜ್ಯದಲ್ಲಿ ಮತ್ತೊಂದು ಮರ್ಯಾದ ಹತ್ಯೆ ಯತ್ನ ಪ್ರಕರಣ ಬೆಳಕಿಗೆ ಬಂದಿದೆ. ಅದೃಷ್ಟವಶಾತ್ ನಾಲ್ಕು ತಿಂಗಳ ಗರ್ಭಿಣಿ ಪ್ರಾಣಾಪಾಯದಿಂದ ಪಾರಾಗಿರುವಂತ ಘಟನೆ ಕೊಪ್ಪಳದಲ್ಲಿ ನಡೆದಿದೆ. ಕೊಪ್ಪಳ ತಾಲ್ಲೂಕಿನ ಹಂದ್ರಾಳದಲ್ಲಿ ಮರ್ಯಾದಾ ಹತ್ಯೆಗೆ ಯತ್ನ ನಡೆದಿದೆ. ಕೊಡಲಿಯಿಂದ ಕೊಚ್ಚಿ ಕೊಲೆಗೈಯೋದಕ್ಕೆ 4 ತಿಂಗಳ ಗರ್ಭಿಣಿಯಾಗಿದ್ದಂತ ತಂಗಿಯನ್ನೇ ಸ್ವಂತ ಅಣ್ಣ ಯತ್ನಿಸಿರುವಂತ ಘಟನೆ ನಡೆದಿದೆ. 4 ತಿಂಗಳ ಗರ್ಭಿಣಿಯಾಗಿದ್ದಂತ ಮೀನಾಕ್ಷಿಯನ್ನು ಕೊಡಲಿಯಿಂದ ಕೊಚ್ಚಿ ಕೊಲೆಗೈಯೋದಕ್ಕೆ ಅಣ್ಣ ಮಂಜುನಾಥ್ ಯತ್ನಿಸಿದ್ದಾನೆ. ಮೀನಾಕ್ಷಿ ಪತಿ ಉದಯ ಸಹೋದರ ಮದುವೆಗೆ ಬಂದಾಗ ಈ ಕೃತ್ಯ ಎಸಗಲಾಗಿದೆ. 2 ವರ್ಷದ ಹಿಂದೆ ಎಸ್ ಟಿ ಯುವಕನನ್ನು ಪ್ರೀತಿಸಿ ಮೀನಾಕ್ಷಿ ಮದುವೆಯಾಗಿದ್ದಳು. ಹಂದ್ರಾಳ ಗ್ರಾಮದ ಉದಯ ಅನ್ನೋ ಯುವಕನನ್ನು ಪ್ರೀತಿಸಿ ಕುರುಬರ ಸಮುದಾಯದ ಮೀನಾಕ್ಷಿ ಮದುವೆಯಾಗಿದ್ದಳು. ಕೊಪ್ಪಳ ಜಿಲ್ಲೆಯ ಕುಕನೂರು ತಾಲ್ಲೂಕಿನ ಚಿತ್ತಾಪೂರ ನಿವಾಸಿ ಮೀನಾಕ್ಷಿ ಹಾಗೂ ಹಂದ್ರಾಳ ಗ್ರಾಮದ ಉದಯ್ ಪ್ರೀತಿಸಿ ಮದುವೆಯಾಗಿದ್ದರು. ಇಂದು ಉದಯ್ ಸಹೋದರನ ಮದುವೆಗೆ ಆಗಮಿಸಿದ್ದಂತ ಮೀನಾಕ್ಷಿ ಅಣ್ಣ ಮಂಜುನಾಥ್ ಕಾದು ಕೊಡಲಿಯಿಂದ ಕೊಚ್ಚಿ ಕೊಲೆಗೈಯ್ಯೋದಕ್ಕೆ…

Read More

ಶಿವಮೊಗ್ಗ: ಸನಾತನ ಧರ್ಮದಲ್ಲಿ ದೇವರು ಹಲವಾರುಗಳಿದ್ದರೂ ಜಾತತ್ಯೀತ ಭಾವನೆಗೆ ಬೆಲೆ ನೀಡಲಾಗಿದೆ. ಹಿಂದೂ ಧರ್ಮದ‌ ಬಗ್ಗೆ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ದೇಶದಾದ್ಯಂತ ಒಂದು ಲಕ್ಷಕ್ಕೂ ಹೆಚ್ಚು ಹಿಂದೂ ಸಮ್ಮೇಳನಗಳು ಯಶಸ್ವಿಯಾಗಿ ನಡೆಸಲಾಗಿದೆ ಎಂದು ಸಂಸದ ಬಿ.ವೈ.ರಾಘವೇಂದ್ರ ಹೇಳಿದರು. ಇಂದು ಶಿವಮೊಗ್ಗ ಜಿಲ್ಲೆಯ ಸೊರಬ ತಾಲ್ಲೂಕಿನ ಚಂದ್ರಗುತ್ತಿ ಗ್ರಾಮದಲ್ಲಿ ಹಮ್ಮಿಕೊಂಡಿದ್ದ ಹಿಂದೂ ಸಮಾಜೋತ್ಸವ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದಂತ ಅವರು, ಅಖಂಡ ಭಾರತದ ನೆಲದಲ್ಲಿ ಹುಟ್ಟಿ ಗಾಳಿ,ಬೆಳಕು, ನೀರು ಸೇವಿಸುವ ಪ್ರತಿಯೊಬ್ಬರೂ ಹಿಂದೂಗಳಾಗಿದ್ದಾರೆ. ಜಗತ್ತಿನಲ್ಲಿ ನಂಬಿಕೆ,ಆಚರಣೆ,ಶ್ರದ್ಧೆಯ ಮೂಲಕ ತನ್ನ ಶ್ರೇಷ್ಠತೆಯನ್ನು ಹೊಂದಿರುವ ಯಾವುದಾದರೂ ಧರ್ಮವಿದ್ದರೆ ಅದು ಹಿಂದೂ ಧರ್ಮ ಮಾತ್ರ. ಇಂತಹ ಪರಧರ್ಮ ಪ್ರೇಮವನ್ನು ಹೊಂದಿರುವ ನಮ್ಮ ಹಿಂದೂ ಧರ್ಮವನ್ನು ಉಳಿಸಿ ಬೆಳೆಸುವ ನಿಟ್ಟಿನಲ್ಲಿ ಮುಂದಾಗಬೇಕಿದೆ ಎಂದು ತಿಳಿಸಿದರು. ದೇಶವ್ಯಾಪಿ ಹಿಂದೂ ಧರ್ಮದ ಸಾರ,ತತ್ವವನ್ನು ಸಾರಲು ಹೊರಟಿರುವ ರಾಷ್ಟ್ರೀಯ ಸ್ವಯಂಸೇವಕ ಸಂಘದ ಅಸ್ತಿತ್ವಕ್ಕೆ ಬಂದು ನೂರು ವರ್ಷಗಳು ಪೂರೈಸಿದ್ದು, ಸಂಘದ ಚಟುವಟಿಕೆಗಳ ಬಗ್ಗೆ ಸಂಭ್ರಮಪಡಬೇಕು. ಜಾತಿ,ಉಪಜಾತಿಗಳನ್ನು ಮರೆತು ನಾವೆಲ್ಲರೂ ಹಿಂದೂಗಳು ಎನ್ನುವ ಭಾವನೆ ನಮಗೆ ಅಗತ್ಯವಾಗಿದೆ.…

Read More

ಬೆಂಗಳೂರು: ನಾಳೆಯಿಂದ ಸಾರಿಗೆ ನೌಕರರು ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಬೆಂಗಳೂರು ಚಲೋ ಪ್ರತಿಭಟನೆಗೆ ಕರೆ ನೀಡಿದ್ದರು. ಈ ಹೊತ್ತಿನಲ್ಲೇ ನಾಲ್ಕು ಸಾರಿಗೆ ನಿಗಮಗಳ ಸಿಬ್ಬಂದಿ ವೇತನ ಪರಿಷ್ಕರಣೆಗೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಗ್ರೀನ್ ಸಿಗ್ನಲ್ ನೀಡಿದ್ದಾರೆ. ಇಂದು ಈ ಸಂಬಂಧ ಸಾರಿಗೆ ಇಲಾಖೆಯ ಉನ್ನತ ಮಟ್ಟದ ಅಧಿಕಾರಿಗಳ ಜೊತೆಗೆ ಸಭೆ ನಡೆಸಿದರು. ಸಾರಿಗೆ ಸಚಿವರು, ಆರ್ಥಿಕ ಇಲಾಖೆಯ ಅಧಿಕಾರಿಗಳು ಈ ಸಭೆಯಲ್ಲಿ ಭಾಗಿಯಾಗಿದ್ದರು. ವೇತರ ಪರಿಷ್ಕರಣೆ ಬಗ್ಗೆ ಚರ್ಚೆ ಮುಂದುವರೆದಿದ್ದು, ಇಂದು ರಾತ್ರಿಯೇ ಸಾರಿಗೆ ಸಿಬ್ಬಂದಿಗಳಿಗೆ ಸಿಹಿಸುದ್ದಿ ನೀಡೋ ಸಾಧ್ಯತೆ ಇದೆ. https://kannadanewsnow.com/kannada/neha-hiremath-brutal-murder-case-high-court-orders-completion-of-trial-within-6-months/ https://kannadanewsnow.com/kannada/there-are-no-rules-for-marriage-hall-authorities-to-verify-the-age-records-of-the-bride-and-groom-high-court/

Read More

ಧಾರವಾಡ: ಕೆಎಲ್ಇ ವಿವಿ ಆವರಣದಲ್ಲಿ ನೇಹಾ ಹಿರೇಮಠ ಬರ್ಬರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ 6 ತಿಂಗಳ ಒಳಗಾಗಿ ವಿಚಾರಣೆ ಪೂರ್ಣಗೊಳಿಸುವಂತೆ ಧಾರವಾಡ ಹೈಕೋರ್ಟ್ ವಿಭಾಗೀಯ ಪೀಠವು ಸೂಚಿಸಿದೆ. ಈ ಸಂಬಂಧ ಪ್ರಕರಣದ ಅರ್ಜಿಯೊಂದರ ವಿಚಾರಣೆ ನಡೆಸಿದಂತ ಧಾರವಾಡ ಹೈಕೋರ್ಟ್ ಪೀಠವು, ಕೇಸ್ ವಿಚಾರಣೆಗೆ ನೀಡಿದ್ದಂತ ತಡೆಯಾಜ್ಞೆಯನ್ನು ತೆರವುಗೊಳಿಸಿದೆ. ಅಲ್ಲದೇ 6 ತಿಂಗಳ ಒಳಗಾಗಿ ವಿಚಾರಣೆ ಪೂರ್ಣಗೊಳಿಸುವಂತೆ ಸೂಚಿಸಿದೆ. ಆರೋಪಿ ಫಯಾಜ್ ಖುದ್ದು ಹಾಜರಾತಿಯಲ್ಲಿ ವಿಚಾರಣೆ ನಡೆಯುತ್ತಿಲ್ಲ. ವೀಡಿಯೋ ಕಾನ್ಫೆರೆನ್ಸ್ ಮೂಲಕ ವಿಚಾರಣೆ ನಡೆಸುತ್ತಿರುವುದರಿಂದ ತೊಂದರೆಯಾಗಿದೆ. ಈ ವಿಚಾರವಾಗಿ ಹೈಕೋರ್ಟ್ ಗೆ ಫಯಾಜ್ ಪರ ವಕೀಲರು ಮೊರೆ ಹೋಗಿದ್ದರು. ಕೇಸ್ ವಿಚಾರಣೆಗೆ ತಡೆ ನೀಡುವಂತೆಯೂ ಆರೋಪಿ ಫಯಾಸ್ ಪರ ವಕೀಲರು ಕೋರಿದ್ದರು. ಆರೋಪಿ ಫಯಾಜ್ ಪರ ಮನವಿಯನ್ನು ಧಾರವಾಡ ಹೈಕೋರ್ಟ್ ಪೀಠವು ಪುರಸ್ಕರಿಸಿ, ತಡೆಯಾಜ್ಞೆಯನ್ನು ನೀಡಿತ್ತು. ಇಂತಹ ತಡೆಯಾಜ್ಞೆಯನ್ನು ತೆರವುಗೊಳಿಸುವಂತೆ ನೇಹಾ ಕುಟುಂಬದ ಪರ ವಕೀಲರು ನ್ಯಾಯಪೀಠಕ್ಕೆ ಮನವಿ ಸಲ್ಲಿಸಿದ್ದರು. ವಾದ ಪ್ರತಿವಾದ ಆಲಿಸಿ ತೀರ್ಪುನ್ನು ಧಾರವಾಡ ಹೈಕೋರ್ಟ್ ಕಾಯ್ದಿರಿಸಿತ್ತು. ಇಂದು ಕಾಯ್ದಿರಿಸಿದ್ದ…

Read More

ಬೆಳಗಾವಿ: ಅಕ್ಕಪಡೆ ಮಹಿಳೆಯರ ಶಕ್ತಿ, ಮಹಿಳೆಯರ ಸ್ವಾಭಿಮಾನದ ಪ್ರತೀಕ, ಶೀಘ್ರವೇ ತಾಲೂಕು ಮಟ್ಟಕ್ಕೂ ವಿಸ್ತರಿಸಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್‌ ಹೇಳಿದರು. ಬೆಳಗಾವಿ ನಗರದ ಹೃದಯ ಭಾಗ ಕಿತ್ತೂರು ಚೆನ್ನಮ್ಮ ಸರ್ಕಲ್‌ನಲ್ಲಿ ಅಕ್ಕಪಡೆಗೆ ಚಾಲನೆ ನೀಡಿ ಮಾತನಾಡಿದ ಸಚಿವರು, ಸದ್ಯಕ್ಕೆ ಪ್ರಾಯೋಗಿಕವಾಗಿ ಕೆಲವು ಸ್ಥಳಗಳಲ್ಲಿ ಅಕ್ಕಪಡೆ ಆರಂಭಿಸಿದ್ದು, ಇದಕ್ಕೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ. ಮುಂಬರುವ ಬಜೆಟ್‌ನಲ್ಲಿ ಅಂಗೀಕಾರ ಪಡೆದು ತಾಲೂಕು ಮಟ್ಟಕ್ಕೂ ಅಕ್ಕಪಡೆ ವಿಸ್ತರಿಸಲಾಗುವುದು ಎಂದರು. ಅಕ್ಕಪಡೆ ಎಂದರೆ ಮಹಿಳೆಯರಿಗೆ ಹಾಗೂ ಮಕ್ಕಳ ಪಾಲಿಗೆ ಭರವಸೆ ಇದ್ದಂತೆ. ಜಿಲ್ಲೆಯಾದ್ಯಂತ ಮಹಿಳೆಯರು, ಮಕ್ಕಳು ಸುರಕ್ಷಿತವಾಗಿರಬೇಕು ಎಂಬ ಉದ್ದೇಶದಿಂದ ಅನೇಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಇದೀಗ ಅದರ ಮುಂದುವರಿದ ಭಾಗವಾಗಿ ಅಕ್ಕಪಡೆಯನ್ನು ರಚಿಸಲಾಗಿದೆ ಎಂದು ಸಚಿವರು ಹೇಳಿದರು. ಅಕ್ಕಪಡೆ ಸಿಬ್ಬಂದಿ ಸಾರ್ವಜನಿಕ ಸ್ಥಳಗಳಾದ ಮಾಲ್‌, ಜಾತ್ರಾ ಮಹೋತ್ಸವ, ಲೇಡಿಸ್‌ ಹಾಸ್ಟೆಲ್‌ಗಳು, ಕಾಲೇಜುಗಳು, ಸಮುದಾಯ ಭವನ ಸೇರಿದಂತೆ ಜನನಿಬೀಡ ಪ್ರದೇಶಗಳಿಗೆ ಭೇಟಿ ಕೊಡಲಿದ್ದಾರೆ. ಅಕ್ಕಪಡೆಯ ಉದ್ದೇಶ ಸಫಲವಾಗಬೇಕು ಎಂದರೆ ನಾಗರಿಕ…

Read More

ಕಲಬುರ್ಗಿ: ಶೌಚಾಲಯದ ಗುಂಡಿ ಸ್ವಚ್ಛಗೊಳಿಸಲು ಇಳಿದಿದ್ದಂತ ಇಬ್ಬರು ಉಸಿರುಗಟ್ಟಿ ಧಾರುಣವಾಗಿ ಸಾವನ್ನಪ್ಪಿರುವಂತ ಘಟನೆ ಕಲಬುರ್ಗಿಯಲ್ಲಿ ನಡೆದಿದೆ. ಕಲಬುರ್ಗಿಯ ಹೀರಾಪುರ ಬಡವಾಣೆಯ ಮನೆಯೊಂದರ ಶೌಚಾಲಯದ ಗುಂಡಿಯನ್ನು ಸ್ವಚ್ಛಗೊಳಿಸುವ ವೇಳೆಯಲ್ಲಿ ಈ ದುರಂತ ಸಂಭವಿಸಿದೆ. ಮನೆ ಮಾಲೀಕ ಶಿವಕುಮಾರ(52) ಹಾಗೂ ರತನ್(60) ಎಂಬುವರು ಸಾವನ್ನಪ್ಪಿದ್ದಾರೆ. ತಮ್ಮ ಮನೆಯ ಶೌಚಾಲಯದ ಗುಂಡಿ ಕಟ್ಟಿಕೊಂಡಿದ್ದರಿಂದಾಗಿ ಸ್ವಚ್ಛಗೊಳಿಸೋದಕ್ಕೆ ಇಳಿದಿದ್ದರು. ಈ ವೇಳೆ ಉಸಿರುಗಟ್ಟಿ ಸಾವನ್ನಪ್ಪಿದ್ದಾರೆ. https://kannadanewsnow.com/kannada/siddaramaiah-is-a-poor-chief-minister-mlas-foreign-tour-despite-government-being-bankrupt-r-ashok/ https://kannadanewsnow.com/kannada/there-are-no-rules-for-marriage-hall-authorities-to-verify-the-age-records-of-the-bride-and-groom-high-court/

Read More

ಬೆಂಗಳೂರು: ಕಾಂಗ್ರೆಸ್‌ ಸರ್ಕಾರ ಹಣವಿಲ್ಲದೆ ಪಾಪರ್‌ ಆಗಿದೆ. ಸಿದ್ದರಾಮಯ್ಯ ಪಾಪರ್‌ ಮುಖ್ಯಮಂತ್ರಿಯಾಗಿದ್ದಾರೆ. ಆದರೂ ಶಾಸಕರು ಫಾರಿನ್‌ ಟೂರ್‌ ಮಾಡುತ್ತಿದ್ದಾರೆ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ಆಕ್ರೋಶ ಹೊರಹಾಕಿದರು. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಕೋವಿಡ್‌ ಸಮಯದಲ್ಲಿ ತಂದೆ ತಾಯಿಯನ್ನು ಕಳೆದುಕೊಂಡ ಅನಾಥ ಮಕ್ಕಳನ್ನು ಸಲಹಲು ಕೇಂದ್ರ ಹಾಗೂ ರಾಜ್ಯದ ಸರ್ಕಾರದ ಸಹಯೋಗದಲ್ಲಿ ತಂದ ಯೋಜನೆಯಡಿ 26,334 ಮಕ್ಕಳಿದ್ದಾರೆ. ಪ್ರತಿ ತಿಂಗಳು ರಾಜ್ಯ ಸರ್ಕಾರದಿಂದ ಸಿಗುವ 4,000 ರೂ.ನಿಂದ ಮಕ್ಕಳು ಊಟ ಮಾಡುತ್ತಾರೆ. ಅಂದರೆ ಒಬ್ಬರಿಗೆ 10-15 ರೂ. ಸಿಗುತ್ತದೆ. ಕೊಪ್ಪಳದಲ್ಲಿ 2,220, ಬಳ್ಳಾರಿಯಲ್ಲಿ 1059, ಧಾರವಾಡದಲ್ಲಿ 2650 ಮಕ್ಕಳಿದ್ದಾರೆ. ಕಾಂಗ್ರೆಸ್‌ ಶಾಸಕರಿಗೆ ಅನ್ನ ಜಾಸ್ತಿಯಾಗಿ ಫಾರಿನ್‌ ಟೂರ್‌ ಮಾಡುತ್ತಿದ್ದಾರೆ. ಆದರೆ ಈ ಬಡ ಮಕ್ಕಳಿಗೆ 7 ತಿಂಗಳಿಂದ ಒಟ್ಟು 75 ಕೋಟಿ ರೂ. ನೀಡಿಲ್ಲ. ಬಡ ಮಕ್ಕಳು ಉಪವಾಸದಿಂದ ಸಾಯುವ ಸ್ಥಿತಿ ಬಂದಿದೆ. ಗೃಹಲಕ್ಷ್ಮಿ ಯೋಜನೆಯ 5,000 ಕೋಟಿ ರೂ.ಗೆ, ಅನ್ನಭಾಗ್ಯದ 750 ಕೋಟಿ ರೂ. ಗೆ ನಾಮ ಹಾಕಿದ್ದಾರೆ. ಈಗ ಅನಾಥ ಮಕ್ಕಳ ಹಣವನ್ನೂ…

Read More

ಬೆಂಗಳೂರು : ಮೇಳ ಕೇಂದ್ರ ಕಾರ್ಮಿಕ ಮತ್ತು ಉದ್ಯೋಗ ಸಚಿವಾಲಯ, ಕೇಂದ್ರ ಉದ್ಯೋಗ ಮಹಾನಿರ್ದೇಶನಾಲಯ ಹಾಗೂ ವಿಕಲಚೇತನರ ರಾಷ್ಟ್ರೀಯ ವೃತ್ತಿ ಸೇವಾ ಕೇಂದ್ರದ ವತಿಯಿಂದ ಫೆಬ್ರವರಿ 19 ರಂದು ಬೆಳಿಗ್ಗೆ 10 ರಿಂದ ಮಧ್ಯಾಹ್ನ 2 ಗಂಟೆಯವರೆಗೆ ವಿಕಲಚೇತನರ ರಾಷ್ಟ್ರೀಯ ವೃತ್ತಿ ಸೇವಾ ಕೇಂದ್ರ ನಂ.17, 1ನೇ ಕ್ರಾಸ್, 1ನೇ ಹಂತ, ಪೀಣ್ಯ, ಪೊಲೀಸ್ ಸ್ಟೇಷನ್ ಹಿಂಭಾಗ, ಬೆಂಗಳೂರು ಇಲ್ಲಿ ನಿರುದ್ಯೋಗಿ ವಿಶೇಷಚೇತನ ಯುವಕ – ಯುವತಿಯರಿಗೆ ಉದ್ಯೋಗ ಮೇಳವನ್ನು ಆಯೋಜಿಸಿದೆ. ಈ ಉದ್ಯೋಗಮೇಳದಲ್ಲಿ ಪ್ರತಿಷ್ಠಿತ ಲಾಡ್ವಾ ಸಲ್ಯೂಷನ್ಸ್ ಕಂಪನಿಯ ಉದ್ಯೋಗದಾತರು ಪಾಲ್ಗೊಳ್ಳುತ್ತಿದ್ದು, ಇಲ್ಲಿ ಖಾಲಿಯಿರುವ ಹುದ್ದೆಗಳಿಗೆ ನೇಮಕಾತಿಯನ್ನು ಮಾಡಿಕೊಳ್ಳಲಿದ್ದಾರೆ. ಉದ್ಯೋಗಮೇಳಕ್ಕೆ ಪ್ರವೇಶ ಉಚಿತವಾಗಿದ್ದು, ಅಂದೇ ಸ್ಥಳದಲ್ಲಿ ನೋಂದಣಿ ಮಾಡಿಕೊಳ್ಳುವುದು. ಆಸಕ್ತ ಅಭ್ಯರ್ಥಿಗಳು ತಪ್ಪದೇ ತಮ್ಮ ವೈಯುಕ್ತಿಕ ವಿವರಗಳನ್ನೊಳಗೊಂಡ ಪತ್ರ ಹಾಗೂ ಅಗತ್ಯ ದಾಖಲೆಗಳೊಂದಿಗೆ ಹಾಜರಾಗಬಹುದು ಎಂದು ವಿಕಲಚೇತನರ ರಾಷ್ಟ್ರೀಯ ವೃತ್ತಿ ಸೇವಾ ಕೇಂದ್ರದ ಮುಖ್ಯಸ್ಥರಾದ ಶಿವಶಾಂತವೀರ್ ದಿವಾಕರ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. https://kannadanewsnow.com/kannada/government-post-recruitment-relaxation-of-5-years-state-government-official-order/ https://kannadanewsnow.com/kannada/there-are-no-rules-for-marriage-hall-authorities-to-verify-the-age-records-of-the-bride-and-groom-high-court/

Read More

ಬೆಂಗಳೂರು: ಕೆ ಎಸ್ ಆರ್ ಟಿ ಸಿ ಕಾರ್ಮಿಕರ 38 ತಿಂಗಳ ವೇತನ ಹಿಂಬಾಕಿ ಪಾವತಿ ಹಾಗೂ ವೇತನ ಪರಿಷ್ಕರಣೆ ಜಾರಿಗೆ ತಕ್ಷಣ ಕ್ರಮ ಕೈಗೊಳ್ಳುವಂತೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರಿಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಪತ್ರ ಬರೆದು ಆಗ್ರಹಿಸಿದ್ದಾರೆ. ಇಂದು ಸಿಎಂ ಸಿದ್ಧರಾಮಯ್ಯ ಅವರಿಗೆ ಪತ್ರ ಬರೆದಿರುವಂತ ಅವರು, ರಾಜ್ಯದ ಸಾರಿಗೆ ನಿಗಮಗಳಲ್ಲಿ ದುಡಿಯುತ್ತಿರುವ ಸಾವಿರಾರು ಕಾರ್ಮಿಕರು ಕಳೆದ 38 ತಿಂಗಳಿಂದ ತಮ್ಮ ನ್ಯಾಯಸಮ್ಮತ ವೇತನ ಹಿಂಬಾಕಿ ಪಡೆಯದೆ ಸಂಕಷ್ಟದ ಜೀವನ ನಡೆಸುತ್ತಿರುವುದು ಅತ್ಯಂತ ವಿಷಾದನೀಯ ಸಂಗತಿಯಾಗಿದೆ. 01.01.2024800 ಜಾರಿಗೆ ಬರಬೇಕಾಗಿದ್ದ ವೇತನ ಪರಿಷ್ಕರಣೆಯನ್ನೂ ಉದ್ದೇಶಪೂರ್ವಕವಾಗಿ ವಿಳಂಬಗೊಳಿಸುತ್ತಿರುವುದು ಕಾರ್ಮಿಕ ವಿರೋಧಿ ಧೋರಣೆಯ ಸ್ಪಷ್ಟ ಉದಾಹರಣೆಯಾಗಿದೆ ಎಂದಿದ್ದಾರೆ. ಈ ಹಿನ್ನೆಲೆಯಲ್ಲಿ, ಕರ್ನಾಟಕ ರಸ್ತೆ ಸಾರಿಗೆ ಮದ್ದೂರ್ ಸಂಘ ಒಕ್ಕೂಟ (ರಿ) ಕೈಗೊಂಡಿರುವ “ಅಸಹಕಾರ ಚಳವಳಿ” ಸಂಪೂರ್ಣ ನ್ಯಾಯಸಮ್ಮತವಾಗಿದ್ದು, ಅವರ ಹೋರಾಟಕ್ಕೆ ಭಾರತೀಯ ಜನತಾ ಪಕ್ಷ ತನ್ನ ಪೂರ್ಣ ಬೆಂಬಲವನ್ನು ಘೋಷಿಸುತ್ತದೆ. ರಾಜ್ಯ ಸರ್ಕಾರವು ಕಾರ್ಮಿಕರ ನ್ಯಾಯಯುತ ಬೇಡಿಕೆಗಳನ್ನು ನಿರ್ಲಕ್ಷಿಸುತ್ತಿರುವುದು ಕೇವಲ ಆಡಳಿತ ವೈಫಲ್ಯವಲ್ಲ,…

Read More

ಶಿವಮೊಗ್ಗ: ಕೇಂದ್ರ ಸಚಿವ ಕುಮಾರಸ್ವಾಮಿ ಮಾರ್ಗದರ್ಶನದಲ್ಲಿ ಪಕ್ಷ ಸಂಘಟಿಸಲು ಪಣ ತೊಟ್ಟಿದ್ದು, ಶೀಘ್ರದಲ್ಲೇ ಜೆಡಿಎಸ್ ರಾಜ್ಯ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಅವರನ್ನು ಸೊರಬಕ್ಕೆ ಕರೆತರುವ ಮೂಲಕ ತಾಲ್ಲೂಕಿನಲ್ಲಿ ಯುವಕರನ್ನು ಮತ್ತಷ್ಟು ಪಕ್ಷಕ್ಕೆ ಸೆಳೆಯಲು ಕಾರ್ಯತಂತ್ರ ರೂಪಿಸಲಾಗುವುದು ಎಂದು ಜೆಡಿಎಸ್ ಹಿರಿಯ ಮುಖಂಡ ಬಾಸೂರು ಚಂದ್ರೇಗೌಡ ಹೇಳಿದರು. ಇಂದು ಶಿವಮೊಗ್ಗ ಜಿಲ್ಲೆಯ ಸೊರಬ ಪಟ್ಟಣದಲ್ಲಿ ಜೆಡಿಎಸ್ ಮುಖಂಡರ‌ ಸಭೆಯಲ್ಲಿ ಮಾತನಾಡಿದ‌ ಅವರು, ಸಾಮಾಜಿಕ ಜವಾಬ್ದಾರಿ ಮರೆತ ರಾಜಕೀಯ ಕ್ಷೇತ್ರದಲ್ಲಿ ರಾಜಕಾರಣವು ಇಂದು ವ್ಯಾಪಾರವಾಗಿ ಬದಲಾಗಿದೆ. ಕಳೆದ 40 ವರ್ಷಗಳಿಂದ ಜನರಿಗಾಗಿ ಹೋರಾಟ ಮಾಡುತ್ತಲೇ ಬಂದಿದ್ದೇವೆ. ನಮ್ಮಲ್ಲಿ ಆರ್ಥಿಕ ಶಕ್ತಿ ಇಲ್ಲದಿದ್ದರೂ ಜನರ ಪರವಾಗಿ ಕೆಲಸ ಮಾಡಿದ್ದೇವೆ. ಪಕ್ಷದ ಹಿರಿಯ ಮುಖಂಡರು ಭಿನ್ನಮತ ಮರೆತು ಒಗ್ಗೂಡಿ ಪಕ್ಷ ಸಂಘಟಿಸಬೇಕಿದೆ ಎಂದು ತಿಳಿಸಿದರು. ಜೆಡಿಎಸ್ ತಾಲೂಕು ಘಟಕದ ಅಧ್ಯಕ್ಷ ಗಣಪತಿ ಮಾತನಾಡಿ, ಟಿ.ಎನ್.ರಾಮಕೃಷ್ಣ ಅವರು ಶಿವಮೊಗ್ಗ ಜಿಲ್ಲಾಧ್ಯಕ್ಷರಾಗಿ ಆಯ್ಕೆಯಾಗಿದ್ದು, ತಾಲ್ಲೂಕು ಜೆಡಿಎಸ್ ವತಿಯಿಂದ ಅಭಿನಂದನೆ ಸಲ್ಲಿಸಲು‌ ತೀರ್ಮಾನಿಸಲಾಗಿದೆ ಎಂದರು. ಮುಂಬರುವ ಜಿಲ್ಲಾ, ತಾಲೂಕು,…

Read More