Author: kannadanewsnow09

ನವದೆಹಲಿ: ಆಲ್‌ರೌಂಡರ್ ಕೃಷ್ಣಪ್ಪ ಗೌತಮ್ ಸೋಮವಾರ ವೃತ್ತಿಪರ ಕ್ರಿಕೆಟ್‌ನಿಂದ ನಿವೃತ್ತಿ ಘೋಷಿಸಿದರು. ಕರ್ನಾಟಕದ ಆಟಗಾರ ಸಾಮಾಜಿಕ ಮಾಧ್ಯಮದ ಮೂಲಕ ತಮ್ಮ ಅಭಿಮಾನಿಗಳೊಂದಿಗೆ ತಮ್ಮ ನಿರ್ಧಾರವನ್ನು ಹಂಚಿಕೊಂಡರು. 37 ವರ್ಷದ ಗೌತಮ್ 14 ವರ್ಷಗಳ ಸುದೀರ್ಘ ಮತ್ತು ಯಶಸ್ವಿ ವೃತ್ತಿಜೀವನವನ್ನು ಕೊನೆಗೊಳಿಸಿದರು. ಅಂತರರಾಷ್ಟ್ರೀಯ ಕ್ರಿಕೆಟ್ ಪಯಣ ಗೌತಮ್ ಜುಲೈ 2021 ರಲ್ಲಿ ಶ್ರೀಲಂಕಾ ವಿರುದ್ಧ ಅಂತಾರಾಷ್ಟ್ರೀಯ ಏಕದಿನ ಪಂದ್ಯಕ್ಕೆ ಪಾದಾರ್ಪಣೆ ಮಾಡಿದರು. ಭಾರತೀಯ ತಂಡದಲ್ಲಿ ಅವರಿಗೆ ಹೆಚ್ಚಿನ ಅವಕಾಶಗಳು ಸಿಗದಿದ್ದರೂ, ಅವರು ನಿರಂತರವಾಗಿ ದೇಶೀಯ ಕ್ರಿಕೆಟ್‌ನಲ್ಲಿ ಪ್ರಾಬಲ್ಯ ಸಾಧಿಸಿದರು. ಬಹು ಐಪಿಎಲ್ ತಂಡಗಳನ್ನು ಪ್ರತಿನಿಧಿಸಿದ್ದರು ಗೌತಮ್ ಚೆನ್ನೈ ಸೂಪರ್ ಕಿಂಗ್ಸ್, ರಾಜಸ್ಥಾನ ರಾಯಲ್ಸ್, ಪಂಜಾಬ್ ಕಿಂಗ್ಸ್ ಮತ್ತು ಲಕ್ನೋ ಸೂಪರ್ ಜೈಂಟ್ಸ್ ಪರ ಆಡಿದ್ದರು. 2018 ರಲ್ಲಿ ರಾಜಸ್ಥಾನ ರಾಯಲ್ಸ್ ಪರ ಕೆಲವು ಪ್ರಭಾವಶಾಲಿ ಇನ್ನಿಂಗ್ಸ್ ಗಳನ್ನು ಆಡಿದರು. ಆಲ್‌ರೌಂಡ್ ದಾಖಲೆ ಹೀಗಿದೆ ಕರ್ನಾಟಕ ಪ್ರೀಮಿಯರ್ ಲೀಗ್‌ನಲ್ಲಿ, ಗೌತಮ್ ಕ್ರಿಕೆಟ್ ಇತಿಹಾಸದಲ್ಲಿ ಅತ್ಯುತ್ತಮ ಆಲ್‌ರೌಂಡ್ ಪ್ರದರ್ಶನಗಳಲ್ಲಿ ಒಂದಾಗಿದ್ದು, ಒಂದೇ ಪಂದ್ಯದಲ್ಲಿ 134 ರನ್…

Read More

ಬೆಂಗಳೂರು : “ಹುಟ್ಟಿದ ಸೂರ್ಯ ಮುಳುಗಲೇ ಬೇಕು. ಮಹಾತ್ಮ ಗಾಂಧಿ ಅವರ ಹೆಸರನ್ನು ತೆಗೆಯುವುದರ ಮೂಲಕ ಕೇಂದ್ರ ಬಿಜೆಪಿ ಸರ್ಕಾರದ ಕೊನೆಯ ದಿನಗಳು ಪ್ರಾರಂಭವಾಗಿದೆ” ಎಂದು ಡಿಸಿಎಂ‌ ಡಿ.ಕೆ.ಶಿವಕುಮಾರ್ ಅವರು ಹೇಳಿದರು. ಕ್ವೀನ್ಸ್ ರಸ್ತೆಯ ಕೆಪಿಸಿಸಿ ಕಚೇರಿಯಲ್ಲಿ ಸೋಮವಾರ ನಡೆದ ಮಾಧ್ಯಮಗೋಷ್ಟಿಯನ್ನು ಉದ್ದೇಶಿಸಿ ಮಾತನಾಡಿದರು.‌ “ಆರ್ಟಿಕಲ್ 21 ರ ಮೂಲಕ ಸಾಂವಿಧಾನಿಕವಾಗಿ ಕಾಂಗ್ರೆಸ್ ಪಕ್ಷ ನೀಡಿದ ಮಹಾತ್ಮಗಾಂಧಿ ಉದ್ಯೋಗ ಖಾತ್ರಿ ಕಾರ್ಯಕ್ರಮವನ್ನು ಬಿಜೆಪಿ ಮುಟ್ಟುವ ಧೈರ್ಯ ಮಾಡುತ್ತದೆ ಎಂದುಕೊಂಡಿರಲಿಲ್ಲ. ಆದರೆ ಈಗ ಮನರೇಗಾ ಹೆಸರನ್ನು ಬದಲಾವಣೆ ಮಾಡಲು ಹೊರಟಿರುವುದು ನೋಡಿದರೆ ಬಿಜೆಪಿಯ ಅಂತ್ಯ ಪ್ರಾರಂಭವಾಗಿದೆ ಎಂದು ನನಗೆ ಅನಿಸುತ್ತಿದೆ” ಎಂದರು. “ಬಡವರಿಗೆ ಕೊಟ್ಟ ಕಾರ್ಯಕ್ರಮದ ಕುತ್ತಿಗೆ ಹಿಸುಕುವ ಕೆಲಸ ಮಾಡಲಾಗುತ್ತಿದೆ. ದೇಶದ ಬಡಜನತೆಗೆ ಎಸಗುತ್ತಿರುವ ದ್ರೋಹವಿದು. ಇದಕ್ಕಿಂತ ದೊಡ್ಡ ಅವಮಾನವಿಲ್ಲ” ಎಂದು ಕಿಡಿಕಾರಿದರು. “ಮುಂಬರುವ 27 ರಂದು ಪಕ್ಷದ ಕಾರ್ಯಕಾರಿಣಿ‌ ಸಭೆಯಲ್ಲಿ ಮುಂದಿನ ಹೋರಾಟದ ಬಗ್ಗೆ ತೀರ್ಮಾನ ಮಾಡಲಾಗುತ್ತದೆ. ಹೆಸರು ಬದಲಾವಣೆ ಹಿಂಪಡೆಯುವ ತನಕ ಪಂಚಾಯಿತಿಯಿಂದ ಪಾರ್ಲಿಮೆಂಟ್ ತನಕ ಹೋರಾಟ ರೂಪಿಸಲಾಗುವುದು” ಎಂದರು.…

Read More

ನವದೆಹಲಿ: ಭಾರತದ ಮಾಜಿ ಆಲ್‌ರೌಂಡರ್ ಕೃಷ್ಣಪ್ಪ ಗೌತಮ್ ತಮ್ಮ ವೃತ್ತಿಪರ ಕ್ರಿಕೆಟ್ ವೃತ್ತಿಜೀವನಕ್ಕೆ ನಿವೃತ್ತಿ ಘೋಷಿಸಿದ್ದು, ಸೋಮವಾರ ಎಲ್ಲಾ ಸ್ವರೂಪಗಳಿಂದ ನಿವೃತ್ತಿ ಘೋಷಿಸಿದ್ದಾರೆ. 37 ವರ್ಷದ ಅವರು ಕೆಎಸ್‌ಸಿಎ ಮೀಡಿಯಾ ಲೌಂಜ್‌ನಲ್ಲಿ ನಡೆದ ವಿಶೇಷ ಪತ್ರಿಕಾಗೋಷ್ಠಿಯಲ್ಲಿ ಈ ಸುದ್ದಿಯನ್ನು ಹಂಚಿಕೊಂಡರು. ಕರ್ನಾಟಕ ರಾಜ್ಯ ಕ್ರಿಕೆಟ್ ಅಸೋಸಿಯೇಷನ್ ​​ಅಧ್ಯಕ್ಷ ವೆಂಕಟೇಶ್ ಪ್ರಸಾದ್, ಉಪಾಧ್ಯಕ್ಷ ಸುಜಿತ್ ಸೋಮಸುಂದರ್ ಮತ್ತು ಕಾರ್ಯದರ್ಶಿ ಸಂತೋಷ್ ಮೆನನ್ ಹಾಜರಿದ್ದರು. ಗೌತಮ್ ಅಂತರರಾಷ್ಟ್ರೀಯ ಮಟ್ಟದಲ್ಲಿ ಭಾರತಕ್ಕಾಗಿ ಒಮ್ಮೆ ಮಾತ್ರ ಕಾಣಿಸಿಕೊಂಡರು, ಜುಲೈ 23, 2021 ರಂದು ಶ್ರೀಲಂಕಾ ವಿರುದ್ಧದ ಏಕೈಕ ಏಕದಿನ ಪಂದ್ಯವನ್ನು ಆಡಿದರು. ಅವರ ಏಕೈಕ ಅಂತರರಾಷ್ಟ್ರೀಯ ವಿಕೆಟ್ ಆ ಪಂದ್ಯದಲ್ಲಿ ಬಂದಿತು, ಅವರು ವಿಕೆಟ್ ಕೀಪರ್ ಮಿನೋಡ್ ಭಾನುಕ ಅವರನ್ನು ಔಟ್ ಮಾಡಿದಾಗ. ಐಪಿಎಲ್ 2021 ರ ಹರಾಜಿನಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡವು 9.25 ಕೋಟಿ ರೂಪಾಯಿಗಳಿಗೆ ಖರೀದಿ ಮಾಡಿದ ನಂತರ, ಅವರು ಅತ್ಯಂತ ದುಬಾರಿ ಭಾರತೀಯ ಆಟಗಾರ ಎಂಬ ಹೆಗ್ಗಳಿಕೆಗೆ ಪಾತ್ರರಾದಾಗ ಅವರು ಇಂಡಿಯನ್…

Read More

ಬೆಂಗಳೂರು: “ಬೆಂಗಳೂರಿನಲ್ಲಿ ಮೆಟ್ರೋ ಮಾರ್ಗ ಹೆಚ್ಚಳ ಮಾಡಿ ಸಂಚಾರ ದಟ್ಟಣೆ ನಿಯಂತ್ರಣಕ್ಕೆ ನಮ್ಮ ಸರ್ಕಾರ ಮುಂದಾಗಿದೆ. 2027ರ ಡಿಸೆಂಬರ್ ವೇಳೆಗೆ ಬೆಂಗಳೂರು ನಗರದಲ್ಲಿ 175 ಕಿ.ಮೀ ಉದ್ದದಷ್ಟು ಮೆಟ್ರೋ ಮಾರ್ಗ ಕಾರ್ಯಾರಂಭವಾಗಲಿದೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು. ಬಿಎಂಆರ್ ಸಿಎಲ್ ಕಚೇರಿಯಲ್ಲಿ ಮೆಟ್ರೋ ಕಾಮಗಾರಿಗಳ ಕುರಿತು ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಬಳಿಕ ಬೆಂಗಳೂರು ನಗರಾಭಿವೃದ್ಧಿ ಸಚಿವರೂ ಆಗಿರುವ ಶಿವಕುಮಾರ್ ಅವರು ಮಾಧ್ಯಮಗೋಷ್ಠಿ ಉದ್ದೇಶಿಸಿ ಮಾತನಾಡಿದರು. “ಪ್ರಸ್ತುತ 96 ಕಿ.ಮೀ ಉದ್ದದ ಮೆಟ್ರೋ ಮಾರ್ಗ ಕಾರ್ಯನಿರ್ವಹಿಸುತ್ತಿದೆ. ನಮ್ಮ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಹಳದಿ ಮಾರ್ಗ ಚಾಲನೆ ಮಾಡಲಾಗಿದ್ದು, 24 ಕಿ.ಮೀ ಉದ್ದದ ಮೆಟ್ರೋ ಸಂಚಾರ ಆರಂಭ ಮಾಡಲಾಗಿದೆ. 1 ಲಕ್ಷ ಜನ ಈ ಮಾರ್ಗದಲ್ಲಿ ಸಂಚಾರ ಮಾಡುತ್ತಿದ್ದು, ಈ ಮಾರ್ಗದಲ್ಲಿ 30% ದಟ್ಟಣೆ ಕಡಿಮೆಯಾಗಿದೆ ಎಂದು ಸಂಚಾರಿ ಪೊಲೀಸರು ತಿಳಿಸಿದ್ದಾರೆ” ಎಂದು ತಿಳಿಸಿದರು. “ಮುಂದಿನ ವರ್ಷ (2026ರಲ್ಲಿ) 41 ಕಿ.ಮೀ ಉದ್ದದ ಮಾರ್ಗ ಕಾರ್ಯಾರಂಭ ಮಾಡಲಾಗುವುದು. 2027ರ ಡಿಸೆಂಬರ್ ವೇಳೆಗೆ…

Read More

ಚಿತ್ರದುರ್ಗ: ರಾಜ್ಯದಲ್ಲಿ ಗ್ರಾಮೀಣ ಭಾಗದ ಜನರಿಗೂ ಗುಣಮಟ್ಟದ ಚಿಕಿತ್ಸೆ ಸಿಗುವಂತ ಕೆಲಸವನ್ನು ಸರ್ಕಾರ ಮಾಡುತ್ತಿರುವುದಾಗಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದರು. ಇಂದು ಚಿತ್ರದುರ್ಗ ಜಿಲ್ಲೆಯ ಚಿಕ್ಕಜಾಜೂರಿನಲ್ಲಿ ಸಮುದಾಯ ಆರೋಗ್ಯ ಕೇಂದ್ರ ಮತ್ತು ಸಿಬ್ಬಂದಿ ವಸತಿ ಗೃಹ ಉದ್ಘಾಟನೆ ಮಾಡಿ ಮಾತನಾಡಿದ ಅವರು, ಸುಸಜ್ಜಿತ ಕಟ್ಟಡ ನಿರ್ಮಿಸಿ 30 ಹಾಸಿಗೆ ಸಾಮರ್ಥ್ಯದ, ಅಧುನಿಕ ಸೌಲಭ್ಯ ಹೊಂದಿರುವ ಆಸ್ಪತ್ರೆ ಉದ್ಘಾಟನೆಗೊಂಡಿದೆ. ಈ ಭಾಗದ ಜನರು ಇದರ ಉಪಯೋಗ ಪಡೆದು ಕೊಳ್ಳಬೇಕು. ಗ್ರಾಮೀಣ ಪ್ರದೇಶದಲ್ಲಿ ಗುಣಮಟ್ಟದ ಅರೋಗ್ಯ ಸೌಲಭ್ಯಗಳು ಸರಿಯಾಗಿ ಸಿಗಬೇಕು. ಸರಿಯಾದ ರೀತಿಯಲ್ಲಿ ತಪಾಸಣೆ, ಅಗತ್ಯ ಇರುವವರಿಗೆ ಸರಿಯಾದ ಚಿಕಿತ್ಸೆ ನೀಡುವುದು ಇಂದಿನ ಅಗತ್ಯವಾಗಿದೆ. ಅದನ್ನೂ ಆರೋಗ್ಯ ಇಲಾಖೆ ವಿವಿಧ ಯೋಜನೆಗಳ ಮೂಲಕ ಮಾಡುತ್ತಿದೆ. ಸ್ವಾತಂತ್ರ್ಯ ಬಂದಾಗ ನಮ್ಮ ದೇಶದ ಜನರ ಸರಾಸರಿ ಆಯುಷ್ಯ 32-33 ವರ್ಷ ಇತ್ತು. ಈಗ ಅದು 70 ವರ್ಷಕ್ಕೆ ಏರಿಕೆಯಾಗಿದೆ. ಇದರಿಂದ ಆರೋಗ್ಯ ಕ್ಷೇತ್ರ ತನ್ನ ವ್ಯಾಪ್ತಿ,ಯೋಜನೆಗಳನ್ನು ವಿಸ್ತರಸಿಕೊಳ್ಳಬೇಕಾಗುತ್ತದೆ ಎಂದರು. ಸರ್ಕಾರಿ ಆಸ್ಪತ್ರೆಗಳಲ್ಲಿಯೂ…

Read More

ಶಿವಮೊಗ್ಗ: ಡಿ.25ರಿಂದ 27ರವರೆಗೆ ಅಯ್ಯಪ್ಪಸ್ವಾಮಿ ದೀಪೋತ್ಸವ ಕಾರ್ಯಕ್ರಮ ನಡೆಯಲಿದೆ. ಸಾಗರದ ಅಯ್ಯಪ್ಪಸ್ವಾಮಿ ದೀಪೋತ್ಸವ ಅಂಗವಾಗಿ ಮೊದಲ ಬಾರಿಗೆ ಡಿ. 25 ರಿಂದ ಲಕ್ಷ ದೀಪೋತ್ಸವ ಕಾರ್ಯಕ್ರಮ ನಡೆಯಲಿದೆ. ಅಯ್ಯಪ್ಪಸ್ವಾಮಿ ದೇವಸ್ಥಾನ ಟ್ರಸ್ಟ್ ಅಧ್ಯಕ್ಷ ಆರ್. ಚಂದ್ರು ತಿಳಿಸಿದರು. ಇಂದು ಶಿವಮೊಗ್ಗ ಜಿಲ್ಲೆಯ ಸಾಗರ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಭವನದಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಡಿ. 25ರಂದು ಬೆಳಿಗ್ಗೆ 8 ಗಂಟೆಗೆ ಪಿ.ಆರ್.ರವೀಂದ್ರನ್ ಅವರು ಧ್ವಜಾರೋಹಣ ನೆರವೇರಿಸುವ ಮೂಲಕ ಚಾಲನೆ ನೀಡಲಿದ್ದಾರೆ ಎಂದರು. ಸoಜೆ 5.30ಕ್ಕೆ ಮಾಲೆಧರಿಸಿದ ಸ್ವಾಮಿಗಳಿಂದ ಅಯ್ಯಪ್ಪಸ್ವಾಮಿ ದೇವಸ್ಥಾನದಿಂದ ನಡೆಯುವ ರಾಜಬೀದಿ ಮೆರವಣಿಗೆಗೆ ಮಾಜಿ ಸಚಿವ ಕಾಗೋಡು ತಿಮ್ಮಪ್ಪ ಚಾಲನೆ ನೀಡಲಿದ್ದು, ರಾಜು ಗುರುಸ್ವಾಮಿ ನೇತೃತ್ವ ವಹಿಸಲಿದ್ದಾರೆ. ಸಂಜೆ 6ಕ್ಕೆ ಮುರುಘಾಮಠದ ಡಾ. ಮಲ್ಲಿಕಾರ್ಜುನ ಮುರುಘ ರಾಜೇಂದ್ರ ಸ್ವಾಮಿಗಳು ಲಕ್ಷ ದೀಪೋತ್ಸವಕ್ಕೆ ಚಾಲನೆ ನೀಡಲಿದ್ದಾರೆ. ಮಹಾಗಣಪತಿ ದೇವಸ್ಥಾನ ಸಮಿತಿ ಅಧ್ಯಕ್ಷ ಟಿ.ವಿ.ಪಾಂಡುರoಗ ಉಪಸ್ಥಿತರಿರುವರು ಎಂದು ಹೇಳಿದರು. ಡಿ.26ರಂದು ಸಂಜೆ ೫ಕ್ಕೆ ಅಯ್ಯಪ್ಪಸ್ವಾಮಿ ದೇವಾಲಯ ನವ ನಿರ್ಮಾಣ ಕಾರ್ಯಯೋಜನೆ ಉದ್ಘಾಟನೆ ನಡೆಯಲಿದ್ದು…

Read More

ಬೆಂಗಳೂರು: ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತವು ಹಳದಿ ಮಾರ್ಗದಲ್ಲಿ 6ನೇ ಮೆಟ್ರೋ ರೈಲನ್ನು 23ನೇ ಡಿಸೆಂಬರ್ 2025ರಿಂದ (ಮಂಗಳವಾರ) ಪ್ರಯಾಣಿಕರ ಸೇವೆಗೆ ಪ್ರಾರಂಭಿಸಲಾಗುತ್ತಿದೆ. ಈ ರೈಲಿನ ಸೇರ್ಪಡೆಯೊಂದಿಗೆ, ಸೋಮವಾರದಿಂದ ಶನಿವಾರದವರೆಗೆ ಜನದಟ್ಟನೆಯ ಅವಧಿಯಲ್ಲಿ ಮೆಟ್ರೋ ಸೇವೆಗಳು ಪ್ರಸ್ತುತ ಇರುವ 15 ನಿಮಿಷಗಳ ಅಂತರದ ಬದಲು 13 ನಿಮಿಷಗಳ ಅವಧಿಯಲ್ಲಿ ಸಂಚರಿಸಲಿವೆ. ಭಾನುವಾರಗಳಂದು ಪೀಕ್ ಅವಧಿಯ ಸೇವಾ ಅವಧಿ 15 ನಿಮಿಷಗಳಾಗಿಯೇ ಮುಂದುವರಿಯಲಿದೆ. ಆರ್.ವಿ. ರಸ್ತೆ ಹಾಗೂ ಬೊಮ್ಮಸಂದ್ರ ನಿಲ್ದಾಣಗಳ ಎರಡೂ ಟರ್ಮಿನಲ್‌ಗಳಿಂದ ಮೊದಲ ಹಾಗೂ ಕೊನೆಯ ರೈಲುಗಳ ಸಮಯದಲ್ಲಿ ಯಾವುದೇ ಬದಲಾವಣೆ ಇರುವುದಿಲ್ಲ. ಪ್ರಯಾಣಿಕರು ಮೇಲ್ಕಂಡ ಬದಲಾವಣೆಗಳನ್ನು ಗಮನಿಸಿ, ಮೆಟ್ರೋ ಸೇವೆಗಯನ್ನು ಸದುಪಯೋಗಪಡಿಸಿಕೊಳ್ಳುವಂತೆ ಕೋರಲಾಗಿದೆ. https://kannadanewsnow.com/kannada/sagara-government-pre-graduate-college-golden-jubilee-celebrations-tomorrow-mlas-review-preparations/ https://kannadanewsnow.com/kannada/big-news-rbis-big-shock-for-those-taking-loans-against-gold-from-now-on-60-loan-for-10-grams-of-gold/

Read More

ಶಿವಮೊಗ್ಗ : ಸಾಗರದ ಸರ್ಕಾರಿ ಪದವಿಪೂರ್ವ ಕಾಲೇಜಿನ ಸುವರ್ಣ ಮಹೋತ್ಸವದಲ್ಲಿ ಎಲ್ಲರೂ ಪಾಲ್ಗೊಂಡು ಇದೊಂದು ಅವಿಸ್ಮರಣೀಯ ಕಾರ್ಯವಾಗಿಸಿ ಎಂದು ಶಾಸಕ ಹಾಗೂ ಅರಣ್ಯ ಕೈಗಾರಿಕಾ ನಿಗಮದ ಅಧ್ಯಕ್ಷ ಗೋಪಾಲಕೃಷ್ಣ ಬೇಳೂರು ತಿಳಿಸಿದರು. ಇಂದು ಶಿವಮೊಗ್ಗ ಜಿಲ್ಲೆಯ ಸಾಗರದ ನೆಹರೂ ಮೈದಾನದಲ್ಲಿ ಡಿ.23ರ ನಾಳೆ, 24ರ ನಾಡಿದ್ದು ನಡೆಯಲಿರುವ ಸರ್ಕಾರಿ ಪದವಿಪೂರ್ವ ಕಾಲೇಜಿನ ಸುವರ್ಣ ಮಹೋತ್ಸವ ಕಾರ್ಯಕ್ರಮದ ಪೂರ್ವಸಿದ್ದತೆಯನ್ನು ಪರಿಶೀಲನೆ ನಡೆಸಿದ ಬಳಿಕ ಮಾತನಾಡಿದಂತ ಅವರು, ಸುವರ್ಣ ಮಹೋತ್ಸವ ಹಿನ್ನೆಲೆಯಲ್ಲಿ ಪೂರ್ಣ ಕಟ್ಟಡಕ್ಕೆ ಸುಣ್ಣಬಣ್ಣ ಮಾಡಲಾಗಿದ್ದು ಖಾಸಗಿ ಕಾಲೇಜಿಗಿಂತ ಸುಂದರವಾಗಿ ಕಾಲೇಜು ಕಂಗೊಳಿಸುತ್ತಿದೆ. ಕಾಲೇಜಿಗೆ ಹೆಚ್ಚುವರಿ 5 ಕೊಠಡಿಗಳನ್ನು 95 ಲಕ್ಷ ರೂ. ವೆಚ್ಚದಲ್ಲಿ ನಿರ್ಮಿಸಲಾಗಿದೆ. ಶೌಚಾಲಯದ ಜೊತೆಗೆ ಸಣ್ಣಪುಟ್ಟ ರಿಪೇರಿ ಕೆಲಸವನ್ನು ನಿರ್ವಹಿಸಿದೆ. ಒಟ್ಟಾರೆ ರಾಜ್ಯ ಹೊರರಾಜ್ಯಗಳಿಂದ ಹಳೇಯ ವಿದ್ಯಾರ್ಥಿಗಳು ಎರಡು ದಿನಗಳ ಸುವರ್ಣ ಮಹೋತ್ಸವ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದು ತಾವು ಓದಿದ ಕಾಲೇಜಿನ ಬಗ್ಗೆ ಅವರಿಗೆ ಗೌರವ ಭಾವನೆ ಮೂಡಬೇಕು. ಅಂತಹ ವಾತಾವರಣ ಸೃಷ್ಟಿಸಿದೆ ಎಂದು ಹೇಳಿದರು. ನಾನು ಈ ಕಾಲೇಜಿನ…

Read More

ಬೆಂಗಳೂರು: ಎಐಸಿಸಿ ಅಧ್ಯಕ್ಷರ ಅಸ್ಪಷ್ಟ ಹೇಳಿಕೆಯ ಬಳಿಕ ರಾಜ್ಯ ಕಾಂಗ್ರೆಸ್ಸಿನಲ್ಲಿ ನಾಯಕತ್ವ ವಿಚಾರ ಮತ್ತಷ್ಟು ತಾರಕಕ್ಕೆ ಹೋಗಲಿದೆ. ರಾಜ್ಯದಲ್ಲಿ ಅಭಿವೃದ್ಧಿ ಕುಂಠಿತವಾಗಲಿದೆ ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರು ತಿಳಿಸಿದ್ದಾರೆ. ಮಾಧ್ಯಮಗಳ ಜೊತೆ ಇಂದು ಮಾತನಾಡಿದ ಅವರು, ಪ್ರಶ್ನೆಗೆ ಉತ್ತರಿಸಿದರು. ಈ ಸರಕಾರ ರಾಜ್ಯವನ್ನು ಈಗಾಗಲೇ ಸರ್ವನಾಶದ ಅಂಚಿಗೆ ತೆಗೆದುಕೊಂಡು ಹೋಗಿದೆ. ಕೇವಲ ಲೂಟಿ ಮಾಡುವುದನ್ನು ಇವತ್ತು ಸಚಿವರು ಮಾಡುತ್ತಿದ್ದಾರೆ. ಒಬ್ಬರು ಭೂಕಳ್ಳತನ ಮಾಡುತ್ತಿದ್ದರೆ, ಮತ್ತೊಬ್ಬರು ಗ್ಯಾರಂಟಿ ಕಳ್ಳತನ ಮಾಡುತ್ತಿದ್ದಾರೆ ಎಂದು ಆರೋಪಿಸಿದರು. ಅನೇಕ ಸಚಿವರು ಲೂಟಿ ಕೆಲಸದಲ್ಲಿ ತೊಡಗಿದ್ದಾರೆ ಎಂದು ದೂರಿದರು. ರಾಜ್ಯ ಪ್ರವಾಸ ಮಾಡುವ ಪರಿಸ್ಥಿತಿಯಲ್ಲಿ ಸಚಿವರು ಇಲ್ಲ. ಅವರವರ ಸ್ವಂತ ಉಸ್ತುವಾರಿ ಜಿಲ್ಲೆಗೂ ಪಿಕ್ನಿಕ್‍ನಂತೆ ಪ್ರವಾಸ ಹೋಗುತ್ತಾರೆಯೇ ಹೊರತು ಅಲ್ಲಿ ಯಾರೂ ವಾಸವಿಲ್ಲ. ಜನರು ಇವರ ಕೆಲಸ ನೋಡಿ ಕುಪಿತರಾಗಿದ್ದಾರೆ. ಈ ಸರಕಾರವು ಜನವಿರೋಧಿಯಾಗಿ ಕೆಲಸ ಮಾಡುತ್ತಿದೆ ಎಂದು ಟೀಕಿಸಿದರು. ಇಂಥ ಜನವಿರೋಧಿ ವಿಚಾರಗಳನ್ನು ಬಿಜೆಪಿ, ಜನರ ಮುಂದೆ ಎಳೆಎಳೆಯಾಗಿ ಬಿಚ್ಚಿಡಲಿದೆ ಎಂದು ತಿಳಿಸಿದರು.…

Read More

ಮಂಡ್ಯ : ಜಿಲ್ಲೆಯಲ್ಲಿ ಕೃಷಿ ಮತ್ತು ಹೈನುಗಾರಿಕೆಯೇ ಪ್ರಮುಖ ವೃತ್ತಿಯಾಗಿದ್ದು, ಹಲವಾರು ಕುಟುಂಬಗಳು ಹೈನುಗಾರಿಕೆಯ ಮೂಲಕ ಬದುಕು ಕಟ್ಟಿಕೊಂಡಿದ್ದಾರೆ. ಹೀಗಾಗಿ, ರಾಸುಗಳ ಆರೋಗ್ಯದ ದೃಷ್ಟಿಯಿಂದ ಕ್ಷೇತ್ರದಲ್ಲಿ ಪಶು ಆಸ್ಪತ್ರೆಗಳನ್ನು ಹೆಚ್ಚಾಗಿ ನಿರ್ಮಾಣ ಮಾಡಲಾಗುತ್ತಿದೆ ಎಂದು ಶಾಸಕ ಕೆ.ಎಂ.ಉದಯ್ ಸೋಮವಾರ ಹೇಳಿದರು. ಮದ್ದೂರು ತಾಲೂಕಿನ ವಳಗೆರೆಹಳ್ಳಿಯಲ್ಲಿ ನೂತನ ಪಶು ಆಸ್ಪತ್ರೆಯ ನೂತನ ಕಟ್ಟಡ ಕಾಮಗಾರಿಗೆ ಚಾಲನೆ ನೀಡಿ ಅವರು ಮಾತನಾಡಿದರು. ಜಿಲ್ಲೆಯಲ್ಲಿ ಕೃಷಿ ಮತ್ತು ಹೈನುಗಾರಿಕೆಯೇ ಪ್ರಮುಖವಾಗಿದೆ. ಹಲವು ಕುಟುಂಬಗಳ ನಿರ್ವಹಣೆಗೆ ಹೈನುಗಾರಿಕೆಯಿಂದಲೇ ಆರ್ಥಿಕಾಭಿವೃದ್ದಿ ಸಾಧ್ಯವಾಗುತ್ತಿದೆ. ಹೀಗಾಗಿ, ರಾಸುಗಳಿಗೆ ತೊಂದರೆಯಾದಲ್ಲಿ ಕುಟುಂಬದ ಆಧಾರವೇ ಕಳಚಿ ಬಿದ್ದಾಂತಾಗುತ್ತದೆ. ಈ ಹಿನ್ನೆಲೆಯಲ್ಲಿ ಗ್ರಾಮಸ್ಥರ ಸತತ ಪ್ರಯತ್ನ ಮಾಡಿದ್ದರ ಫಲವಾಗಿ ಬೇರೆ ಗ್ರಾಮಕ್ಕೆ ಮಂಜೂರಾಗಿದ್ದ ಆಸ್ಪತ್ರೆಯನ್ನು ವಳಗೆರೆಹಳ್ಳಿ ಗ್ರಾಮದಲ್ಲಿ ನೂತನ ಪಶು ಆಸ್ಪತ್ರೆಯ ಕಟ್ಟಡವನ್ನು ನಿರ್ಮಾಣ ಮಾಡಲಾಗುತ್ತಿದೆ ಎಂದು ತಿಳಿಸಿದರು. ಇದರಿಂದ ವಳಗೆರೆಹಳ್ಳಿ, ಸೊಳ್ಳೆಪುರ, ರಾಂಪುರ ಹಾಗೂ ಸುತ್ತಮುತ್ತಲ ಗ್ರಾಮಗಳ ರೈತರಿಗೆ ಅನುಕೂಲವಾಗುತ್ತದೆ. ವೈದ್ಯಕೀಯ ಸೇವೆ ರಾಸುಗಳಿಗೆ ತ್ವರಿತವಾಗಿ ದೊರೆಯುವಂತಾಗಲು ಉಪಯುಕ್ತವಾಗಿದೆ ಎಂದರು. ವಳಗೆರೆಹಳ್ಳಿ, ಸೊಳ್ಳೆಪುರ ಹಾಗೂ…

Read More