Author: kannadanewsnow09

ನವದೆಹಲಿ: ಇಂದಿನಿಂದ ಅಮೆಜಾನ್ ಗಮನಾರ್ಹ ಸುತ್ತಿನ ಉದ್ಯೋಗ ಕಡಿತವನ್ನು ಪ್ರಾರಂಭಿಸಲಿದೆ ಎಂದು ವರದಿಯಾಗಿದೆ, ಇದು 16,000 ಕ್ಕೂ ಹೆಚ್ಚು ಉದ್ಯೋಗಿಗಳ ಮೇಲೆ ಪರಿಣಾಮ ಬೀರುತ್ತದೆ. ಆನ್‌ಲೈನ್‌ನಲ್ಲಿ, ರೆಡ್ಡಿಟ್ ಮತ್ತು ಇತರ ಪ್ಲಾಟ್‌ಫಾರ್ಮ್‌ಗಳಲ್ಲಿ ಹಲವಾರು ವರದಿಗಳ ಪ್ರಕಾರ, ಭಾರತವು ಈ ಕಡಿತದ ಭಾರೀ ಹೊರೆಯನ್ನು ಭರಿಸಲಿದೆ, ಪ್ರಮುಖ ಸ್ಥಳಗಳಲ್ಲಿ ಸಾವಿರಾರು ಉದ್ಯೋಗಗಳು ಅಪಾಯದಲ್ಲಿವೆ. ಹಿಂದಿನ ಸುತ್ತುಗಳಿಗೆ ಹೋಲಿಸಿದರೆ ತೀವ್ರಗೊಂಡ ಪರಿಣಾಮಗಳ ವರದಿಗಳ ನಡುವೆ ದೇಶದಲ್ಲಿ ಸುಮಾರು 1,20,000 ಉದ್ಯೋಗಿಗಳು ಅನಿಶ್ಚಿತತೆಯನ್ನು ಎದುರಿಸುತ್ತಿದ್ದಾರೆ. ಈ ಕ್ರಮವು 2026 ರ ಮಧ್ಯಭಾಗದ ವೇಳೆಗೆ 30,000 ಕ್ಕೂ ಹೆಚ್ಚು ಕಾರ್ಪೊರೇಟ್ ಹುದ್ದೆಗಳನ್ನು ತೆಗೆದುಹಾಕುವ ವಿಶಾಲವಾದ ಪುನರ್ರಚನೆ ಯೋಜನೆಯ ಭಾಗವಾಗಿದೆ, ಇದರಲ್ಲಿ ಅಕ್ಟೋಬರ್ 2025 ರಲ್ಲಿ ಕಡಿತಗೊಳಿಸಲಾದ 14,000 ಪಾತ್ರಗಳು ಸೇರಿವೆ. 2026 ರಲ್ಲಿ ಅಮೆಜಾನ್ ವಜಾಗಳು: ಭಾರತದಲ್ಲಿ ಬಾಧಿತ ಕಚೇರಿಗಳು ರೆಡ್ಡಿಟ್‌ನಂತಹ ವೇದಿಕೆಗಳು ಅಮೆಜಾನ್‌ನ ಸಾಮೂಹಿಕ ವಜಾಗೊಳಿಸುವ ಯೋಜನೆಗಳನ್ನು ಚರ್ಚಿಸುವ ಉದ್ಯೋಗಿಗಳಿಂದ ತುಂಬಿವೆ. ಬಹು ಆನ್‌ಲೈನ್ ಚರ್ಚೆಗಳ ಪ್ರಕಾರ, ಚೆನ್ನೈ, ಬೆಂಗಳೂರು ಮತ್ತು ಹೈದರಾಬಾದ್‌ನಲ್ಲಿರುವ ಕಚೇರಿಗಳು ಪ್ರಮುಖ…

Read More

ಮಂಗಳೂರು: ಶಿಡ್ಲಘಟ್ಟ ನಗರಸಭೆ ಪೌರಾಯುಕ್ತೆ ಅಮೃತಾಗೌಡಗೆ ಧಮ್ಕಿ ಹಾಕಿದ ಪ್ರಕರಣದಲ್ಲಿ ರಾಜೀವ್ ಗೌಡ ಬಂಧಿಸಲಾಗಿದೆ. ಈ ಬೆನ್ನಲ್ಲೇ ಅವರು ತಲೆ ಮರೆಸಿಕೊಳ್ಳೋದಕ್ಕೆ ಸಹಾಯ ಮಾಡಿದ ಆರೋಪದಡಿ ಮಂಗಳೂರಿನ ಉದ್ಯಮಿಯೊಬ್ಬರನ್ನು ಪೊಲೀಸರು ಬಂಧಿಸಿದ್ದಾರೆ. ಮಂಗಳೂರಿನಲ್ಲಿ ಕಾಂಗ್ರೆಸ್ ಮುಖಂಡ ರಾಜೀವ್ ಗೌಡ ಅವರಿಗೆ ತಲೆ ಮರೆಸಿಕೊಳ್ಳೋದಕ್ಕೆ ಸಹಾಯ ಮಾಡಿದ ಆರೋಪದಡಿ ಉದ್ಯಮಿ ಮೈಕಲ್ ಜೊಸೇಫ್ ರೆಗೋ ಅವರನ್ನು ಬಂಧಿಸಲಾಗಿದೆ. ಪಚ್ಚನಾಡಿ ಬಳಿಯ ಈತನಿಗೆ ಸೇರಿದ್ದ ಜೆ.ಕೆ ಫಾರ್ಮ್ ಹೌಸ್ ನಲ್ಲಿ ರಾಜೀವ್ ಗೌಡ ಅವರನ್ನು ತಲೆಮರೆಸಿಕೊಳ್ಳೋದಕ್ಕೆ ನೆರವಾಗಿದ್ದರು. ಇದಲ್ಲದೇ ಮಂಗಳೂರಿನ ರೈಲ್ವೆ ಜಂಕ್ಷನ್ ನಲ್ಲಿಯೇ ತಮ್ಮ ಕಾರು ಬಿಟ್ಟು ಮೈಕಲ್ ಕಾರಿನಲ್ಲಿ ಕೇರಳಕ್ಕೆ ತೆರಳಿದ್ದರು. ಹೀಗಾಗಿ ಇಬ್ಬರನ್ನು ಕೇರಳದಲ್ಲಿ ಪೊಲೀಸರು ಬಂಧಿಸಿದ್ದಾರೆ. https://kannadanewsnow.com/kannada/gram-panchayat-offices-in-the-state-will-be-named-after-mahatma-gandhi-dcm-d-k-shivakumar-announces/

Read More

ಬೆಂಗಳೂರು : “ರಾಜ್ಯದಲ್ಲಿರುವ ಸುಮಾರು 6 ಸಾವಿರ ಪಂಚಾಯ್ತಿ ಕಚೇರಿಗಳಿಗೆ ಮಹಾತ್ಮ ಗಾಂಧಿ ಅವರ ಹೆಸರಿಡಲಾಗುವುದು. ಇದು ಕಾಂಗ್ರೆಸ್ ಪಕ್ಷದ ತೀರ್ಮಾನ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು. ಸ್ವಾತಂತ್ರ್ಯ ಉದ್ಯಾನದಲ್ಲಿ ಮಂಗಳವಾರ ನಡೆದ ರಾಜಭವನ ಚಲೋ ಮಹಾತ್ಮ ಗಾಂಧಿ ನರೇಗಾ ಬಚಾವ್ ಸಂಗ್ರಾಮ ಪ್ರತಿಭಟನೆ ಕಾರ್ಯಕ್ರಮದಲ್ಲಿ ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಶಿವಕುಮಾರ್ ಅವರು ಮಾತನಾಡಿದರು. “ಕೆಪಿಸಿಸಿ ಉಪಾಧ್ಯಕ್ಷರಾದ ಉಗ್ರಪ್ಪ ಹಾಗೂ ಕೆಪಿಸಿಸಿ ಪದಾಧಿಕಾರಿಗಳು ಈ ವಿಚಾರವಾಗಿ ನಮಗೆ ಪತ್ರ ಬರೆದಿದ್ದಾರೆ. ಈ ಬಗ್ಗೆ ಮುಖ್ಯಮಂತ್ರಿಯವರಿಗೆ ಮನವಿ ಮಾಡಲಾಗಿದೆ. ಆ ಮೂಲಕ ಮಹಾತ್ಮ ಗಾಂಧಿ ಅವರ ಹೆಸರನ್ನು ಶಾಶ್ವತವಾಗಿ ಉಳಿಸಿಕೊಳ್ಳುವ ಕೆಲಸ ಮಾಡಲಾಗುವುದು. ಹಳ್ಳಿಗೊಂದು ಶಾಲೆ, ಸಹಕಾರ ಸಂಘ, ಪಂಚಾಯ್ತಿ ಇರಬೇಕು ಎಂಬುದು ಗಾಂಧೀಜಿ ಅವರ ಸಂಕಲ್ಪ” ಎಂದು ತಿಳಿಸಿದರು. “ಬಡ ಜನರ ಉದ್ಯೋಗದ ಹಕ್ಕಿನ ಪರವಾಗಿ ನಾವು ಹೋರಾಟ ಮಾಡುತ್ತಿದ್ದೇವೆ. ಉದ್ಯೋಗ ಇಲ್ಲದವರಿಗೆ ಉದ್ಯೋಗ ನೀಡಿದ್ದು, ಸೋನಿಯಾ ಗಾಂಧಿ ಅವರ ನೇತೃತ್ವದ ಮನಮೋಹನ್ ಸಿಂಗ್ ಅವರ ಸರ್ಕಾರ. ನಮ್ಮ ಉದ್ಯೋಗ…

Read More

ಬೆಂಗಳೂರು: ಕಮಿಷನ್, ಭ್ರಷ್ಟಾಚಾರ, ಲೂಟಿ, ದುಂಡಾವರ್ತಿ ಸರಕಾರವು ಇವತ್ತು ರಾಜ್ಯವನ್ನಾಳುತ್ತಿದೆ ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರು ಟೀಕಿಸಿದ್ದಾರೆ. ವಿಧಾನಸೌಧದ ಮಹಾತ್ಮ ಗಾಂಧೀಜಿ ಪ್ರತಿಮೆ ಬಳಿ ಇಂದು ಪ್ರತಿಭಟನೆ ವೇಳೆ ಮಾತನಾಡಿದ ಅವರು, ಈ ಆರೋಪವನ್ನು ನಾವು ಹೇಳುತ್ತಿಲ್ಲ; ರಾಜ್ಯದ ಜನರು ಮಾತನಾಡುತ್ತಿದ್ದಾರೆ ಎಂದು ತಿಳಿಸಿದರು. ನಮಗೆ ಕೆಲವು ಸ್ನೇಹಿತರು ಕಾಂಗ್ರೆಸ್ಸಿನಲ್ಲಿದ್ದಾರೆ. ಅವರಿಗೂ ಈ ಸರಕಾರದ ವರ್ತನೆ ಬೇಸರ ತರಿಸಿದೆ. ಫೋನ್ ಮಾಡಿದರೆ, ‘ಬಿಡಬೇಡ್ರಿ ಈ ನನ್ಮಕ್ಕಳನ್ನು’ ಎನ್ನುತ್ತಾರೆ ಎಂದು ಹೇಳಿದರು. ಈ ಸರಕಾರ ಮಾಡುವ ತಪ್ಪುಗಳನ್ನು ಜನರ ಗಮನಕ್ಕೆ ತರಲೇಬೇಕಾಗಿದೆ. ಅದನ್ನು ನಾವಿವತ್ತು ಪ್ರತಿಭಟನೆ ಮೂಲಕ ಮಾಡುತ್ತಿದ್ದೇವೆ ಎಂದು ವಿವರಿಸಿದರು. ಅಬಕಾರಿ ಸಚಿವರು 4 ಸಾವಿರ ಕೋಟಿ ಲೂಟಿ ಮಾಡಿದ್ದಾರೆಂದು ನಾವು ಹೇಳಿದ್ದೇವೆ. ನಾವು ಹೇಳಿದ್ದು ತಪ್ಪಾಗಿ ಹೋಯ್ತು. ಅದು 6 ಸಾವಿರ ಕೋಟಿ ಎಂದು ಅಬಕಾರಿ ಗುತ್ತಿಗೆದಾರರ ಸಂಘದ ಅಧ್ಯಕ್ಷರೇ ನೇರಾನೇರವಾಗಿ ಹೇಳಿದ್ದಾರೆ ಎಂದು ಗಮನ ಸೆಳೆದರು. ನಿನ್ನೆ ಮಾನ್ಯ ರಾಜ್ಯಪಾಲರಿಗೂ ಮನವಿ ನೀಡಿದ್ದಾರೆ. ಅಂದ…

Read More

ಬೆಂಗಳೂರು: ಮಹಾತ್ಮ ಗಾಂಧಿಯವರ ಕನಸಿನ ಗ್ರಾಮ ಸ್ವರಾಜ್ ಕನಸಿಗೆ ಅಂದಿನ ಪ್ರಧಾನಿ ರಾಜೀವ್ ಗಾಂಧಿ ಅವರು ಕಾಯಕಲ್ಪ ಕೊಟ್ಟಿದ್ದರೆ ಇಂದಿನ ಸರ್ಕಾರ ಮಹಾತ್ಮಗಾಂಧಿ ಕನಸಿಗೆ ಪೆಟ್ಟು ನೀಡಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಟೀಕಿಸಿದರು. ಫ್ರೀಡಂ ಪಾರ್ಕ್ ನಲ್ಲಿ ಕೆ.ಪಿ.ಸಿ.ಸಿ ವತಿಯಿಂದ ಮಂಗಳವಾರ ನಡೆದ ” ನರೇಗಾ ಬಚಾವ್ ಸಂಗ್ರಾಮ್” ಆಂದೋಲನದ ಅಡಿಯಲ್ಲಿ ಬೃಹತ್‌ ಪ್ರತಿಭಟನೆ ಹಾಗೂ ರಾಜಭವನ್ ಚಲೋ ಕಾರ್ಯಕ್ರಮದಲ್ಲಿ ಮಾತನಾಡಿದ ಸಚಿವರು, ಕಾಂಗ್ರೆಸ್ ನೇತೃತ್ವದ ಕೇಂದ್ರ ಸರ್ಕಾರಗಳು ಗ್ರಾಮ ಪಂಚಾಯತಿಗೆ ಶಕ್ತಿ ನೀಡಿದ್ದವು, ಆದರೆ ಇಂದು ಅದನ್ನು ಕಸಿದುಕೊಳ್ಳಲಾಗುತ್ತಿದೆ ಎಂದರು. ಭಾರತ ಹಳ್ಳಿಗಳ ದೇಶ, ಹಳ್ಳಿಗಳು ಅಭಿವೃದ್ಧಿ ಆದರೆ ದೇಶ ಅಭಿವೃದ್ಧಿಯಾದಂತೆ ಎಂದು ಮಹಾತ್ಮಗಾಂಧಿ ಹೇಳುತ್ತಿದ್ದರು. ಈ ಮಾತನ್ನು ಸಕಾರಗೊಳಿಸಿದ್ದು ರಾಜೀವ್ ಗಾಂಧಿ, ಇದಕ್ಕೆ ಗ್ರಾಮ ಪಂಚಾಯತಿಗಳಿಗೆ ಹೆಚ್ಚು ಅಧಿಕಾರ ನೀಡಿದರು. ಗ್ರಾಮ ಮಟ್ಟದಲ್ಲಿ ಆಡಳಿತ ನಡೆಯಬೇಕು ಎಂಬುದು ಅವರ ಉದ್ದೇಶವಾಗಿತ್ತು ಎಂದು‌ ಹೇಳಿದರು. ಮನರೇಗಾ ಬರುವುದಕ್ಕೂ ಮೊದಲು ಗ್ರಾಮ ಪಂಚಾಯತಿಗಳನ್ನು…

Read More

ಜಪಾನ್: ಜಪಾನಿನಲ್ಲಿರುವ ಅನಿವಾಸಿ ಕನ್ನಡಿಗರಾದ ಡಾ. ಶ್ರೀಹರಿ ಚಂದ್ರಘಾಟಗಿಯವರ ಮಾಲೀಕತ್ವದ ಇಕೋ ಸೈಕಲ್ ಕಾರ್ಪೊರೇಷನ್ ಸಂಸ್ಥೆಯು ಕಳೆದ ಮೂರು ತಿಂಗಳಿನಲ್ಲಿ ಎರಡನೇ ಬಾರಿಗೆ ಜಪಾನಿನ ಪ್ರತಿಷ್ಠಿತ ಪ್ರಶಸ್ತಿಗೆ ಭಾಜನವಾಗಿದೆ. ಕಳೆದ ಮೂರು ತಿಂಗಳ ಹಿಂದೆ ಇಕೋ ಸೈಕಲ್ ಕಾರ್ಪೊರೇಷನ್ ಗೆ ಜಪಾನ್ ಸರ್ಕಾರದ ಸೂಪರ್ ಮ್ಯಾನುಫ್ಯಾಕ್ಚರ್ಸ್ ಪ್ರಶಸ್ತಿ ಬಂದಿದ್ದರೆ, ಈ ಬಾರಿ ಪ್ರತಿಷ್ಠಿತ ಗುಡ್ ಕಂಪನಿ ಪ್ರಶಸ್ತಿಗೆ ಇದು ಆಯ್ಕೆಯಾಗಿರುವುದು ವಿಶೇಷ. ವಿಜ್ಞಾನ ತಂತ್ರಜ್ಞಾನದಲ್ಲಿ ಅತ್ಯಂತ ಮುಂದಿರುವ ಜಪಾನಿನಲ್ಲಿ ಉತ್ತರ ಕನ್ನಡದ ಸಿದ್ದಾಪುರ ತಾಲೂಕಿನ ಶ್ರೀಹರಿ ಚಂದ್ರಘಾಟಿಗಿಯವರು, ಇಕೋ ಸೈಕಲ್ ಕಾರ್ಪೊರೇಷನ್ ಸಂಸ್ಥೆಯನ್ನು ಹುಟ್ಟುಹಾಕಿ, ತನ್ಮೂಲಕ ಕೈಗಾರಿಕಾ ಮಾಲಿನ್ಯ ಮುಕ್ತಗೊಳಿಸುವ ವಿವಿಧ ತಂತ್ರಜ್ಞಾನಗಳನ್ನು ಅಭಿವೃದ್ಧಿಪಡಿಸಿ, ಹಲವು ಪ್ರತಿಷ್ಠಿತ ಕಂಪನಿಗಳಿಗೆ ಅನನ್ಯ ಸೇವೆ ಸಲ್ಲಿಸುತ್ತಿದ್ದಾರೆ. 1967 ರಲ್ಲಿ ಸ್ಥಾಪಿತವಾದ ಜಪಾನಿನ ಗುಡ್ ಕಂಪನಿ ಪ್ರಶಸ್ತಿಯನ್ನು ಅಲ್ಲಿಯ ಸಣ್ಣ ಮತ್ತು ಮಧ್ಯಮ ಉದ್ಯಮಿಗಳ ಸಂಶೋಧನಾ ಸಂಸ್ಥೆಯ ವತಿಯಿಂದ ಪ್ರದಾನ ಮಾಡಲಿದ್ದು, ಸಮಾಜಮುಖಿ ಸೇವೆಗಳಲ್ಲಿ ಅಸಾಧಾರಣ ಸಾಧನೆ ತೋರಿದ ಮತ್ತು ಆರ್ಥಿಕವಾಗಿಯೂ ಪ್ರಗತಿ ಸಾಧಿಸಿದ ಸಣ್ಣ…

Read More

ತಿರುವನಂತಪುರ: ಸೆಕ್ಸ್ ಗೆ ಅಡ್ಡಿಯಾಗುತ್ತಿದ್ದಾನೆ ಎನ್ನುವ ಕಾರಣಕ್ಕಾಗಿ ತನ್ನ 1 ವರ್ಷದ ಮಗನನ್ನೇ ಕೊಂದು ಹಾಕಿರುವಂತ ಘಟನೆ ತಿರುವನಂತಪುರಂನ ನೆಯ್ಯಟ್ಟಿಂಕರದಲ್ಲಿ ನಡೆದಿದೆ. ಕಳೆದ ಜನವರಿ.16ರಂದು ಐಕಾರವಿಳಕ್ಕಂನ ಕವಲಕುಲಂನಲ್ಲಿ ಬಾಡಿಗೆಗಿದ್ದ ಶಿಜಿಲ್ ಮತ್ತು ಕೃಷ್ಣಪ್ರಿಯಾ ದಂಪತಿಗಳು ತಮ್ಮ 1 ವರ್ಷದ ಮಗ ಇಹಾನ್(ಅಪ್ಪು) ನನ್ನು ಆಸ್ಪತ್ರೆಗೆ ಕರೆದೊಯ್ದಿದ್ದರು. ಆತ ಬಿಸ್ಕೆಟ್, ದ್ರಾಕ್ಷಿ ತಿಂದಿದ್ದರಿಂದ ಕುಸಿದು ಬಿದ್ದು ಅಸ್ಪಸ್ಥನಾಗಿದ್ದಾನೆ ಎಂಬುದಾಗಿ ಹೇಳಿದ್ದರು. ಪುಟಾಣಿ ಮಗುವನ್ನು ಆಸ್ಪತ್ರೆಯ ವೈದ್ಯರು ಐಸಿಯುನಲ್ಲಿ ದಾಖಲಿಸಿಕೊಂಡು ಚಿಕಿತ್ಸೆ ನೀಡಿದ್ದರು. ಈ ವೇಳೆಯಲ್ಲಿ ಪುಟ್ಟ ಮಗುವಿನ ಹೊಟ್ಟೆಯ ಭಾಗದಲ್ಲಿ ಗಾಯವಾಗಿದ್ದು ಹಲವು ಅನುಮಾನಗಳಿಗೆ ಕಾರಣವಾಗಿತ್ತು. ಅಲ್ಲದೇ ಮಗುವಿನ ಚಿಕಿತ್ಸೆ ಫಲಿಸದೇ ಸಾವನ್ನಪ್ಪಿತ್ತು. ಹೀಗಾಗಿ ಪೊಲೀಸರಿಗೆ ಮಾಹಿತಿ ನೀಡಿದ್ದರು. ಪ್ರಾಥಮಿಕ ವಿಚಾರಣೆ ಬಳಿಕ ದಂಪತಿಗಳನ್ನು ಮನೆಗೆ ಪೊಲೀಸರು ಕಳುಹಿಸಿದ್ದರು. ಮರಣೋತ್ತರ ಪರೀಕ್ಷಾ ವರದಿ ಬಂದ ಬಳಿಕ ವಿಚಾರಣೆಗೆ ಪತ್ನಿ ಬಂದಾಗ ಆಕೆ ಹೇಳಿಕೆಯು ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿತ್ತು. ಅಲ್ಲದೇ 2ನೇ ಬಾರಿ ವಿಚಾರಣೆಗೆ ಹಾಜರಾದಂತ ಸಂದರ್ಭದಲ್ಲಿ ಮಗು ಅಸ್ವಸ್ಥಗೊಂಡಿದ್ದು, ಸಾವನ್ನಪ್ಪಿದ್ದರ ಹಿಂದಿನ…

Read More

ವಿಜಯಪುರ: ಕೆಲ ದಿನಗಳ ಹಿಂದಷ್ಟೇ 400 ಕೋಟಿ ಹಣ ದರೋಡೆ, ಅದಕ್ಕೂ ಮೊದಲು ಎಟಿಎಂಗೆ ತುಂಬಲು ಕೊಂಡೊಯ್ಯುತ್ತಿದ್ದ ಹಣ ದರೋಡೆ ಪ್ರಕರಣಗಳು ರಾಜ್ಯದಲ್ಲಿ ವರದಿಯಾಗಿದ್ದವು. ಈ ಬೆನ್ನಲ್ಲೇ ರಾಜ್ಯದಲ್ಲಿ ಮತ್ತೊಂದು ರಾಬರಿ ನಡೆದಿದೆ. ವಿಜಯಪುರದಲ್ಲಿ ಕಂಟ್ರಿ ಪಿಸ್ತೂಲ್ ತೋರಿಸಿ ಚಿನ್ನದ ಅಂಗಡಿ ದರೋಡೆ ಮಾಡಲಾಗಿದೆ. ವಿಜಯಪುರ ಜಿಲ್ಲೆಯ ಚಡಚಣ ತಾಲ್ಲೂಕಿನ ಹಲಸಂಗಿಯಲ್ಲಿ ಚಿನ್ನದ ಅಂಗಡಿಗೆ ನುಗ್ಗಿದಂತ ಹೆಲ್ಮೆಟ್ ಧರಿಸಿದ್ದಂತ ದರೋಡೆ ಕೋರರು, ಮಹಾರುದ್ರ ಕಂಚಗಾರ ಅವರ ಅಂಗಡಿಯನ್ನು ದೋಚಿದ್ದಾರೆ. ಚಿನ್ನದ ಅಂಗಡಿಗೆ ತೆರಳಿದ್ದಂತ ವೃದ್ಧೆಯನ್ನು ಪಿಸ್ತೂಲ್ ತೋರಿಸಿ ಹೆದರಿಸಿ ಕಳುಹಿಸಿದ್ದಾರೆ. ಗಾಳಿಯಲ್ಲಿ 2 ಸುತ್ತು ಗುಂಡನ್ನು ದರೋಡೆಕೋರರು ಹಾರಿಸಿದಾಗ, ಆತ್ಮಲಿಂಗ ಹೂಗಾರ ಎಂಬುವರ ಕಾಲಿಗೆ ತಾಗಿ ಗಾಯ ಕೂಡ ಆಗಿದೆ. ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಸ್ಥಳಕ್ಕೆ ವಿಜಯಪುರ ಎಸ್ಪಿ ಲಕ್ಷ್ಮಣ್ ನಿಂಬರಗಿ, ಎಎಸ್ಪಿ ರಾಮನಗೌಡ ಹಟ್ಟಿ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

Read More

ಬೆಂಗಳೂರು: ಕರ್ನಾಟಕ ರಣಜಿ ಕ್ರಿಕೆಟ್ ತಂಡದ ನಾಯಕ ಸ್ಥಾನದಿಂದ ಮಯಾಂಕ್ ಅಗರ್ವಾಲ್ ಅವರನ್ನು ವಜಾಗೊಳಿಸಲಾಗಿದೆ. ಕಳಪೆ ಪ್ರದರ್ಶನದ ಹಿನ್ನಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ ಎನ್ನಲಾಗುತ್ತಿದೆ. ಪ್ರಸ್ತುತ ವರ್ಷ ಕರ್ನಾಟಕ ತಂಡ ಕಳಪೆ ಪ್ರದರ್ಶನವನ್ನು ರಣಜಿ ಕ್ರಿಕೆಟ್ ನಲ್ಲಿ ತೋರಿತ್ತು. ಈ ಹಿನ್ನಲೆಯಲ್ಲಿ ತಂಡದ ನಾಯಕ ಸ್ಥಾನದಿಂದ ಮಯಾಂಕ್ ಅಗರ್ ವಾಲ್ ಅವರನ್ನು ವಜಾಗೊಳಿಸಿರೋದಾಗಿ ಹೇಳಲಾಗುತ್ತಿದೆ. ಮಧ್ಯಪ್ರದೇಶದ ವಿರುದ್ಧ ಹೀನಾಯ ಸೋಲಿನ ನಂತ್ರ ಕೆ ಎಸ್ ಸಿ ಎ ಈ ನಿರ್ಧಾರವನ್ನು ಕೈಗೊಂಡಿದೆ. ಕರ್ನಾಟಕ ರಣಜಿ ತಂಡದ ನೂತನ ನಾಯಕನಾಗಿ ದೇವದತ್ ಪಡಿಕ್ಕಲ್ ನೇಮಕ ಮಾಡಲಾಗಿದೆ. ಬ್ಯಾಟಿಂಗ್ ನಲ್ಲೂ ಮಯಾಂಕ್ ಅಗರ್ ವಾಲ್ ಕಳಪೆ ಪ್ರದರ್ಶನ ಹಿನ್ನಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ. ಕರ್ನಾಟಕ ರಣಜಿ ತಂಡದ ಆಟಗಾರನಾಗಿ ಮಯಾಂಕ್ ಮುಂದುವರೆಯಲಿದ್ದಾರೆ.

Read More

ಬೆಂಗಳೂರು: ರಾಜ್ಯದಲ್ಲಿ ಮುಂಗಾರು ಮಳೆ ಆರಂಭಕ್ಕೂ ಮುನ್ನವೇ ಮಳೆಗಾಲದಲ್ಲಿ ವಿದ್ಯುತ್ ಸಮಸ್ಯೆ ಉಂಟಾದಾಗ ಅದನ್ನು ಪರಿಹರಿಸೋದಕ್ಕಾಗಿ ಬೆಸ್ಕಾಂನಿಂದ ತನ್ನ ಗ್ರಾಹಕರಿಗಾಗಿ ವಾಟ್ಸಾಪ್ ನಂಬರ್ ಬಿಡುಗಡೆ ಮಾಡಲಾಗಿದೆ. ಬೆಸ್ಕಾಂ ವ್ಯಾಪ್ತಿಯಲ್ಲಿ ಕಳೆದ ಮೂರು ದಿನಗಳಿಂದ ಸುರಿದ ಗಾಳಿ-ಮಳೆಗೆ ವಿದ್ಯುತ್‌ ಕಂಬಗಳು ಮುರಿದು, ವಿದ್ಯುತ್‌ ಮೂಲ ಸೌಕರ್ಯಗಳು ಹಾನಿಗೊಳಗಾಗಿವೆ. ಹೀಗಾಗಿ ಬೆಸ್ಕಾಂ ಸಹಾಯವಾಣಿ 1912ಗೆ ದೂರುಗಳು ಹರಿದು ಬಂದಿದ್ದು, ಕರೆಗಳ ಒತ್ತಡದಿಂದಾಗಿ ಗ್ರಾಹಕರಿಗೆ 1912 ಸಂಪರ್ಕ ಸಾಧ್ಯವಾಗುತ್ತಿಲ್ಲ ಎಂದಿದೆ. ಮಳೆಗಾಲದಲ್ಲಿ ಗ್ರಾಹಕರ ವಿದ್ಯುತ್‌ ಸಮಸ್ಯೆಗಳನ್ನು ತ್ವರಿತವಾಗಿ ಪರಿಹರಿಸಲು ಬೆಸ್ಕಾಂ ವ್ಯಾಪ್ತಿಯ 8 ಜಿಲ್ಲೆಗಳ ಗ್ರಾಹಕರಿಗೆ ಈ ಕೆಳಕಂಡ ಪಯಾರ್ಯ ವಾಟ್ಸ್‌ ಆಪ್‌ ಸಂಖ್ಯೆಗಳನ್ನು ನೀಡಲಾಗಿದೆ. ವಾಟ್ಸ್‌ಪ್‌ ಸಂಖ್ಯೆಗಳಿಗೆ ಗ್ರಾಹಕರು ಸಂದೇಶ ಹಾಗೂ ಛಾಯಚಿತ್ರಗಳನ್ನು ತಮ್ಮ ವಿಳಾಸದೊಂದಿಗೆ ಕಳುಹಿಸಿ ತಮ್ಮ ವಿದ್ಯುತ್‌ ಸಂಬಂಧಿತ ಸಮಸ್ಯೆಗಳಿಗೆ ಪರಿಹಾರ ಪಡೆಯಬಹುದಾಗಿದೆ. ಜೊತೆಗೆ ಎಸ್‌ ಎಂಎಸ್ ಗಳನ್ನು ಕಳುಹಿಸಲು ಬೆಸ್ಕಾಂ ಬೆಂಗಳೂರು ಮಹಾನಗರ ವ್ಯಾಪ್ತಿಯ ಗ್ರಾಹಕರಿಗೆ 12 ಮೊಬೈಲ್‌ ಸಂಖ್ಯೆಗಳನ್ನು ಕೂಡ ಒದಗಿಸಲಾಗಿದೆ ಎಂದು ತಿಳಿಸಿದೆ. ಹೀಗಿದೆ ಜಿಲ್ಲಾವಾರು ವಾಟ್ಸ್‌…

Read More