Subscribe to Updates
Get the latest creative news from FooBar about art, design and business.
Author: kannadanewsnow09
ಬೆಂಗಳೂರು: ಬರುವ ಡಿಸೆಂಬರ್ ವೇಳೆಗೆ 41, 849 ಕೆರೆಗಳ ಒತ್ತುವರಿ ತೆರವುಗೊಳಿಸಿ ನೀರು ತುಂಬಿಸುವ ಕೆಲಸ ಮಾಡುವ ಮೂಲಕ ಅಂತರ್ಜಲ ವೃದ್ಧಿಗೆ ವಿಶೇಷ ಆದ್ಯತೆ ನೀಡಲಾಗುವುದು ಎಂದು ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವರಾದ ಎನ್ ಎಸ್ ಭೋಸರಾಜು ಹೇಳಿದ್ದಾರೆ. ವಿಧಾನಸೌಧದ ಬಾಂಕ್ವೆಟ್ ಹಾಲ್ ನಲ್ಲಿ “ನೀರಿದ್ದರೆ ನಾಳೆ – ವಾಟರ್ ಇಸ್ ಫ್ಯೂಚರ್: ಯೋಜನೆಯ ಉದ್ಘಾಟನಾ ಕಾರ್ಯಕ್ರಮದಲ್ಲಿ ಮಾತನಾಡಿದ ಸಚಿವರು, ರಾಜ್ಯದಲ್ಲಿ 35 ಸಾವಿರಕ್ಕೂ ಅಧಿಕ ಕೆರೆಗಳ ಒತ್ತುವರಿ ತೆರವುಗೊಳಿಸಲಾಗಿದ್ದು, ಈ ನಿಟ್ಟಿನಲ್ಲಿ ಪ್ರತಿ ತಿಂಗಳು ಪ್ರಗತಿ ಪರಿಶೀಲನೆ ಮಾಡಲಾಗುತ್ತಿದೆ. ಎಚ್.ಎನ್. ವ್ಯಾಲಿ, ಕೆ.ಸಿ. ವ್ಯಾಲಿ ಭಾಗದಲ್ಲಿ ಕೆರೆಗಳಿಗೆ ನೀರು ತುಂಬಿಸಿದ ಪರಿಣಾಮ ಅಂತರ್ಜಲ ವೃದ್ಧಿಯಾಗಿದೆ. ಇದೀಗ ಪ್ರತಿ ವರ್ಷ 1018 ಕೆರೆಗಳಿಗೆ ನೀರು ತುಂಬಿಸುತ್ತಿದ್ದು, 25 ಲಕ್ಷ ಎಕರೆಗೆ ಸಣ್ಣ ನೀರಾವರಿ ಇಲಾಖೆಯಿಂದ ನೀರು ಪೂರೈಸಲಾಗುತ್ತಿದೆ. ಜೊತೆಗೆ ಎಲ್ಲಾ ಕೆರೆಗಳನ್ನು ಸೊಸೈಟಿಗಳ ಮೂಲಕ ಪುನರುಜ್ಜೀವನಗೊಳಿಸಲಾಗಿದೆ. ಅಂತರ್ಜಲ ಸುಧಾರಣೆಗೆ ಒತ್ತು ನೀಡುತ್ತಿದ್ದೇವೆ ಎಂದರು. ಅಂತರ್ಜಲ ಇಲಾಖೆ ಮೂಲಕ ರಾಜ್ಯದ 2714…
ಕೊಳ್ಳೇಗಾಲ: ಮೈಸೂರಲ್ಲಿ 9 ವರ್ಷದ ಬಾಲಕಿ ಕೊಲೆ ಪ್ರಕರಣದ ಶಂಕಿತ ಆರೋಪಿಯನ್ನು ಕೊಳ್ಳೇಗಾಲದಲ್ಲಿ ಪೊಲೀಸರು ವಶಕ್ಕೆ ಪಡೆದಿದ್ದಾರೆ. 9 ವರ್ಷದ ಬಾಲಕಿಯನ್ನು ಕೊಲೆ ಮಾಡಿದ್ದ ಬಳಿಕ ಮೈಸೂರಿನಿಂದ ಕೊಳ್ಳೇಗಾಲಕ್ಕೆ ಆರೋಪಿ ಕಾರ್ತಿಕ್ ಹೋಗಿದ್ದನು. ಸಿಸಿಟಿವಿ ದೃಶ್ಯ ಆಧರಿಸಿ ವಶಕ್ಕೆ ಪೊಲೀಸರು ಪಡೆದಿದ್ದಾರೆ. ಮೈಸೂರಿನ ಸಿದ್ದಲಿಂಗಪುರ ನಿವಾಸಿ ಕಾರ್ತಿಕ್ ಬಂಧಿತ ಆರೋಪಿಯಾಗಿದ್ದಾನೆ. ಮಂಡ್ಯದಲ್ಲಿ ಮಹಿಳೆ ಮೇಲೆ ಅತ್ಯಾಚಾರಕ್ಕೆ ಆರೋಪಿ ಕಾರ್ತಿಕ್ ಯತ್ನಿಸಿದ್ದನು. ಅತ್ಯಾಚಾರಕ್ಕೆ ಯತ್ನಿಸಿ ಆರೋಪಿ ಕಾರ್ತಿಕ್ ಸಿಕ್ಕಿಬಿದ್ದಿದ್ದನು. ಎರಡು ವರ್ಷ ಜೈಲು ಶಿಕ್ಷೆ ಅನುಭವಿಸಿ ಹೊರಬಂದಿದ್ದನು. ಶಂಕಿತ ಆರೋಪಿ ಕಾರ್ತಿಕ್ ಮದ್ಯವ್ಯಸನಿಯಾಗಿದ್ದನು. https://kannadanewsnow.com/kannada/https-kannadanewsnow-com-kannada-applications-invited-for-the-post-of-teacher-under-mission-vatsalya-scheme/ https://kannadanewsnow.com/kannada/four-accused-arrested-in-sbi-bank-robbery-case-in-vijayapura/
ಬೆಂಗಳೂರು: ನಗರದಲ್ಲಿ ರೆಸ್ಟೋರೆಂಟ್ ನಲ್ಲಿ ಹೊತ್ತಿಕೊಂಡ ಬೆಂಕಿಯೊಂದು ಪಕ್ಕದ ಸ್ಪಾಗೂ ತಗುಲಿದ ಪರಿಣಾಮ ಇಬ್ಬರು ಯುವಕ-ಯುವತಿಯರು ಸಜೀವ ದಹನವಾಗಿರುವಂತ ಭೀಕರ ಅಗ್ನಿ ಅವಘಡ ಸಂಭವಿಸಿದೆ. ಬೆಂಗಳೂರಿನ ಯಲಹಂಕದ ಕಿಚನ್ ಫ್ಯಾಮಿಲಿ ರೆಸ್ಟೋರೆಂಟ್ ಕಟ್ಟಡದಲ್ಲಿರುವಂತ ಲಾಡ್ಜ್ ನಲ್ಲಿ ಭೀಕರ ಅಗ್ನಿ ಅವಘಡ ಸಂಭವಿಸಿದೆ. ಈ ಅಗ್ನಿ ಅವಘಡದ ವೇಳೆಯಲ್ಲಿ ಸಮೀಪದ ಬಿಲ್ಡಿಂಗ್ ನಲ್ಲಿನ ಸ್ಪಾನಲ್ಲಿ ಯುವತಿ ಕೆಲಸ ಮಾಡುತ್ತಿದ್ದರು. ರೆಸ್ಟೋರೆಂಟ್ ನ ಬೆಂಕಿ ಪಕ್ಕದ ಬಿಲ್ಡಿಂಗ್ ಗೂ ವ್ಯಾಪಿಸಿದ ಹಿನ್ನಲೆಯಲ್ಲಿ ಯುವಕ-ಯುವತಿಯರು ಸಜೀವ ದಹನವಾಗಿದ್ದಾರೆ. ಈ ಬಗ್ಗೆ ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ. https://kannadanewsnow.com/kannada/applications-invited-for-the-post-of-teacher-under-mission-vatsalya-scheme/ https://kannadanewsnow.com/kannada/four-accused-arrested-in-sbi-bank-robbery-case-in-vijayapura/ https://kannadanewsnow.com/kannada/cabinet-approves-construction-of-tech-park-on-blueberry-hills-road-in-mangalore-minister-priyank-kharge/
ಬೆಂಗಳೂರು: ರಾಜ್ಯದ ಎಲ್ಲ ಕೈಗಾರಿಕೆಗಳೂ ಸುಸ್ಥಿರ ಅಭಿವೃದ್ಧಿಯ ಚಿಂತನೆ ಮಾಡಬೇಕು. ತಮ್ಮ ಕೈಗಾರಿಕಾ ಪ್ರದೇಶ ಮತ್ತು ಸುತ್ತಮುತ್ತಲ ಗ್ರಾಮ, ಪಟ್ಟಣದಲ್ಲೂ ಹಸಿರು ವಲಯ ಸಂರಕ್ಷಣೆಗೆ ಶ್ರಮಿಸಬೇಕು ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ತಿಳಿಸಿದ್ದಾರೆ. ವಿಕಾಸಸೌಧದ ತಮ್ಮ ಕಚೇರಿಯಲ್ಲಿಂದು ಟಯೋಟಾ ಕಿರ್ಲೋಸ್ಕರ್ ಮೋಟರ್ಸ್ ಸಂಸ್ಥೆಯ ಸುಸ್ಥಿರ ವರದಿ 2025 ಬಿಡುಗಡೆ ಮಾಡಿ ಮಾತನಾಡಿದ ಅವರು, ಹಸಿರಿದ್ದರೆ ಉಸಿರು, ಬನವಿದ್ದರೆ ಭವಿಷ್ಯ ಎಂಬುದನ್ನು ಎಲ್ಲರೂ ಅರಿತಾಗ ಮಾತ್ರ ಈ ಭೂಗ್ರಹವನ್ನು ಸಂರಕ್ಷಿಸಲು ಸಾಧ್ಯ ಎಂದರು. ಇಂದು ಇಡೀ ವಿಶ್ವ ಜಾಗತಿಕ ತಾಪಮಾನ ಏರಿಕೆ ಮತ್ತು ಹವಾಮಾನ ವೈಪರೀತ್ಯದ ಪರಿಣಾಮಗಳನ್ನು ಎದುರಿಸುತ್ತಿದ್ದು, ವೃಕ್ಷ ಸಂರಕ್ಷಣೆ ಮತ್ತು ಸಂವರ್ಧನೆಯೊಂದೇ ಪರಿಹಾರವಾಗಿದೆ. ಈ ನಿಟ್ಟಿನಲ್ಲಿ ರಾಜ್ಯದ ಎಲ್ಲ ಕೈಗಾರಿಕೆಗಳೂ ತಮ್ಮ ಕೈಗಾರಿಕಾ ಆವರಣದಲ್ಲಿ ಹೆಚ್ಚು ಹೆಚ್ಚು ಮರ ಗಿಡ ಬೆಳೆಸಬೇಕು, ರಸ್ತೆ ಬದಿ ಮರಗಳನ್ನು ನೆಟ್ಟು ಸಂರಕ್ಷಿಸಬೇಕು. ಸಾಧ್ಯವಾದಷ್ಟು ಹಸಿರು ಕಟ್ಟಡ ನಿರ್ಮಿಸಿ, ನವೀಕರಿಸಬಹುದಾದ ಇಂಧನ ಬಳಕೆ ಮಾಡಬೇಕು, ನೀರನ್ನು ಮಿತವಾಗಿ…
ಬೆಂಗಳೂರು: ಮಂಗಳೂರಿನ ದೇರೆಬೈಲ್ನ ಬ್ಲೂಬೆರಿ ಹಿಲ್ಸ್ ರಸ್ತೆಯಲ್ಲಿರುವ 3.285 ಎಕರೆ ಭೂಮಿಯನ್ನು ವಾಣಿಜ್ಯ ಕಛೇರಿ ಟೆಕ್ ಪಾರ್ಕ್ ಉದ್ದೇಶಕ್ಕಾಗಿ ಪಿಪಿಪಿ ಮಾದರಿಂಯಲ್ಲಿ ಅಭಿವೃದ್ಧಿ ಪಡಿಸಲು ಇಂದು ನಡೆದ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ಮತ್ತು ತಂತ್ರಜ್ಞಾನ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ತಾಲ್ಲೂಕಿನ ದೇರೆಬೈಲ್ನ ಬ್ಲೂಬರ್ರಿ ಹಿಲ್ಸ್ ರಸ್ತೆಯ ಸರ್ವೇ ನಂಬರ್ 129 ಮತ್ತು 113 ರಲ್ಲಿನ 3.285 ಎಕರೆ ಭೂಮಿಯನ್ನು ವಾಣಿಜ್ಯ ಕಚೇ ರಿ ಟೆಕ್ ಪಾರ್ಕ್ ಆಗಿ ಸಾರ್ವಜನಿಕ ಖಾಸಗಿ ಸಹಭಾಗಿತ್ವ (ಪಿಪಿಪಿ) ಮಾದರಿಯಡಿಯಲ್ಲಿ ವಿನ್ಯಾಸ, ನಿರ್ಮಾಣ, ಹಣಕಾಸು, ಕಾರ್ಯಾಚರ ಣೆ ಮತ್ತು ವರ್ಗಾವಣೆ (ಡಿಬಿಎಫ್ಒಟಿ) ಆಧಾರದ ಮೇಲೆ ಅಭಿವೃದ್ಧಿಪಡಿಸಲು ಸಚಿವ ಸಂಪುಟ ನಿರ್ಣಯಿಸಿದೆ ಎಂದೂ ಸಚಿವರು ಮಾಹಿತಿ ನೀಡಿದ್ದಾರೆ. ಸಚಿವ ಪ್ರಿಯಾಂಕ್ ಖರ್ಗೆ ಅವರು ಕಳೆದ ತಿಂಗಳು 24ರಂದು ಮಂಗಳೂರಿಗೆ ಭೇಟಿ ನೀಡಿದ್ದ ಸಂದರ್ಭದಲ್ಲಿ ಮಂಗಳೂರಿನಲ್ಲಿ ಟೆಕ್ ಪಾರ್ಕ್ ನಿರ್ಮಾಣಕ್ಕೆ ಅನುಮತಿ…
ವಿಜಯಪುರ: ಜಿಲ್ಲೆಯ ಚಡಚಣದಲ್ಲಿನ ಎಸ್ ಬಿ ಐ ಶಾಖೆಯಲ್ಲಿ ದರೋಡೆ ನಡೆಸಲಾಗಿತ್ತು. ಈ ಪ್ರಕರಣದಲ್ಲಿ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ವಿಜಯಪುರ ಜಿಲ್ಲೆಯ ಚಡಚಣ ಶಾಖೆಯ ಎಸ್ ಬಿ ಐ ಬ್ಯಾಂಕ್ ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಬಿಹಾರ ರಾಜ್ಯದ ರಾಕೇಶ್ ಕುಮಾರ್ ಸಹಾನಿ, ರಾಜಕುಮಾರ ಪಾಸ್ವಾನ, ರಕ್ಷಕ ಕುಮಾರ್ ಮಾತೋ ಎಂಬ ಮೂವರು ಆರೋಪಿಗಳನ್ನು ಎಡೆಮುರಿ ಕಟ್ಟಿ ಬಂಧಿಸಿದ್ದಾರೆ. ಬಂಧಿತ ಆರೋಪಿಗಳೆಲ್ಲರೂ 21 ರಿಂದ 22 ವರ್ಷ ವಯಸ್ಸಿನ ಯುವಕರಾಗಿದ್ದಾರೆ. ಈಗ ಬಂಧಿಸಿರುವಂತ ಮೂವರು ಆರೋಪಿಗಳು ಪ್ರಕರಣದ ಆರೋಪಿಗಳಿಗೆ ಅಕ್ರಮವಾಗಿ ಪಿಸ್ತೂಲ್ ಪೂರೈಸಿದ್ದಲ್ಲದೇ, ಕೃತ್ಯಕ್ಕೆ ಸಹಕಾರ ನೀಡಿದ್ದರು. ಬಂಧಿತ ಮತ್ತೋರ್ವ ಆರೋಪಿ ಮಹಾರಾಷ್ಟ್ರ ಮೂಲದವನಾಗಿದ್ದು, ಆತನ ಹೆಸರು ಬಹಿರಂಗ ಪಡಿಸಿಲ್ಲ. ಆರೋಪಿಗಳ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. https://kannadanewsnow.com/kannada/applications-invited-for-the-post-of-teacher-under-mission-vatsalya-scheme/ https://kannadanewsnow.com/kannada/lokayukta-traps-deputy-tehsildar-computer-operator-while-accepting-bribe-of-rs-2000/
ಶಿವಮೊಗ್ಗ : ಜಿಲ್ಲಾ ಮಕ್ಕಳ ರಕ್ಷಣಾ ಘಟಕದಡಿಯಲ್ಲಿ ಬರುವ ಸರ್ಕಾರಿ ಮಕ್ಕಳ ಪಾಲನಾ ಸಂಸ್ಥೆಗಳಾದ ಸರ್ಕಾರಿ ಬಾಲಕರ/ಬಾಲಕಿಯರ ಬಾಲ ಮಂದಿರ ಹಾಗೂ ಸರ್ಕಾರಿ ವೀಕ್ಷಣಾಲಯಗಳ ಮಕ್ಕಳಿಗೆ ಮಿಷನ್ ವಾತ್ಸಲ್ಯ ಯೋಜನೆಯಡಿ ಸಮಾಜ ವಿಜ್ಞಾನ/ ಆಂಗ್ಲ, ಗಣಿತ / ವಿಜ್ಞಾನ ಮತ್ತು ಸಂಗೀತ/ಕ್ರಾಫ್ಟ್, ಯೋಜ/ದೈಹಿಕ ಶಿಕ್ಷಕರನ್ನು ಮಾಸಿಕ ರೂ. 10,000/- ದಂತೆ ಗೌರವಧನ ಅಧಾರದ ಮೇಲೆ ನೇಮಕಾತಿ ಮಾಡಿಕೊಳ್ಳುತ್ತಿದ್ದು, ಶಿವಮೊಗ್ಗ ನಗರ ವ್ಯಾಪ್ತಿಯಲ್ಲಿನ ಅರ್ಹ ಆಸಕ್ತರಿಂದ ಅರ್ಜಿ ಆಹ್ವಾನಿಸಿದೆ. ಆಸಕ್ತರು ನಿಗದಿತ ನಮೂನೆ ಅರ್ಜಿಯನ್ನು ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿಗಳ ಕಚೇರಿ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ, 100ಅಡಿ ರಸ್ತೆ, ಆಲ್ಕೋಳ, ಶಿವಮೊಗ್ಗ ಇವರಿಂದ ಪಡೆದು, ಭರ್ತಿ ಮಾಡಿದ ಅರ್ಜಿಯನ್ನು ಅ.15ರೊಳಗಾಗಿ ಸಲ್ಲಿಸುವಂತೆ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ. ಹೆಚ್ಚಿನ ಮಾಹಿತಿಗಾಗಿ ಕಚೇರಿ ದೂ.ಸಂ.: 08182-295709 ನ್ನು ಸಂಪರ್ಕಿಸುವುದು. https://kannadanewsnow.com/kannada/the-state-also-needs-classification-in-st-reservations-adivasi-leaders-urge-the-government/ https://kannadanewsnow.com/kannada/lokayukta-traps-deputy-tehsildar-computer-operator-while-accepting-bribe-of-rs-2000/
ಹಾವೇರಿ: 2,000 ಲಂಚ ಸ್ವೀಕರಿಸುವಾಗ ಉಪ ತಹಶೀಲ್ದಾರ್, ಕಂಪ್ಯೂಟರ್ ಆಪರೇಟರ್ ಲೋಕಾಯುಕ್ತ ಬಲೆಗೆ ಬಿದ್ದಿರುವಂತ ಘಟನೆ ಹಾವೇರಿಯ ಹಾನಗಲ್ ನಲ್ಲಿ ನಡೆದಿದೆ. ಹಾವೇರಿ ಜಿಲ್ಲೆಯ ಹಾನಗಲ್ ತಾಲ್ಲೂಕಿನ ಬೊಮ್ಮನಹಳ್ಳಿ ಕಚೇರಿಯಲ್ಲಿ ಲಂಚ ಸ್ವೀಕರಿಸುತ್ತಿದ್ದಾಗಲೇ ಉಪ ತಹಶೀಲ್ದಾರ್ ನಾಗರಾಜ್ ಸೂರ್ಯವಂಶಿ, ಕಂಪ್ಯೂಟರ್ ಆಪರೇಟರ್ ಕಿರಣ್ ಮುದಕಣ್ಣನವರ್ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ವಂಶವೃಕ್ಷ ಪ್ರಮಾಣ ಪತ್ರ ನೀಡಲು 15,000 ಲಂಚಕ್ಕೆ ಬೇಡಿಕೆಯನ್ನು ಇಟ್ಟಿದ್ದರು. ಈ ಹಣದಲ್ಲಿ ಇಂದು 2,000 ಲಂಚದ ಹಣವನ್ನು ಮುಂಗಡವಾಗಿ ಪಡೆಯುತ್ತಿದ್ದಾಗ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿ ಇಬ್ಬರನ್ನು ರೆಡ್ ಹ್ಯಾಂಡ್ ಹಿಡಿದಿದ್ದಾರೆ. https://kannadanewsnow.com/kannada/to-increase-childrens-mental-strength-participate-in-sports-along-with-studies-mla-gopalakrishna-belur/ https://kannadanewsnow.com/kannada/tag-to-reduce-salt-consumption-in-the-state-stop-salt-campaign-from-rajiv-gandhi-university-of-health-sciences/
ಬೆಂಗಳೂರು: ಸಾಂಕ್ರಾಮಿಕವಲ್ಲದ ರೋಗಗಳನ್ನು ತಡೆಗಟ್ಟುವ ನಿಟ್ಟಿನಲ್ಲಿ ಉಪ್ಪು ಬಳಿಕೆ ಕಡಿಮೆ ಮಾಡಲು “ಹಾಲ್ಟ್ – ಸಾಲ್ಟ್ ” ಜಾಗೃತ ಅಭಿಯಾನ ಕೈಗೊಳ್ಳುವುದು. ವರ್ಷದಲ್ಲಿ ಒಂದು ತಿಂಗಳ ಉಪ್ಪು ಕಡಿಮೆ ಬಳಕೆ ಅಭಿಯಾನ ಕೈಗೊಳ್ಳುವುದು. ಜನರು ತಮ್ಮ ದೈನಂದಿನ ಬದುಕಿನಲ್ಲಿ ಉಪ್ಪು ಕಡಿಮೆ ಬಳಕೆ ಮಾಡುವ ನಿಟ್ಟಿನಲ್ಲಿ ಕೈಗೊಳ್ಳಬಹುದಾದ ಯೋಜನೆ ರೂಪಿಸಿ ಸರ್ಕಾರಕ್ಕೆ ಸಲ್ಲಿಸಿ ಕಾರ್ಯಗತಗೊಳಿಸಲು ಶ್ರಮಿಸುವುದು. ಸಾಂಕ್ರಾಮಿಕ ವಲ್ಲದ ರೋಗಗಳಾದ ಹೃದಯಾಘಾತ, ಲಕ್ವಾ, ಬಹು ಅಂಗಾಂಗ ವೈಫಲ್ಯಗಳಿಗೆ ಕಾರಣವಾಗಿರುವ ಅಧಿಕ ಉಪ್ಪು ಸೇವನೆ ಕಡಿಮೆ ಮಾಡಲು ರಾಜೀವ್ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವ ವಿದ್ಯಾಲಯ ಮತ್ತು ರೀಸಾಲ್ವ್ ಟು ಸೇವ್ ಲೀವ್ಸ್ ಇಂಡಿಯಾ ನೇತೃತ್ವದಲ್ಲಿ ಗುರುವಾರ ತಾಂತ್ರಿಕ ಸಲಹಾ ಸಮಿತಿ ರಚಿಸಲಾಯಿತು. ರಾಜೀವ್ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವ ವಿದ್ಯಾಲಯದ ಉಪ ಕುಲಪತಿ ಡಾ. ಭಗವಾನ್ ಬಿ.ಸಿ ಅವರ ಅಧ್ಯಕ್ಷತೆಯಲ್ಲಿ ತಾಂತ್ರಿಕ ಸಲಹಾ ಸಮಿತಿ ಮೊದಲ ಸಭೆ ನಡೆಯಿತು. ರಾಜೀವ್ಗಾಂಧಿ ಅರೋಗ್ಯ ವಿಜ್ಞಾನಗಳ ವಿಶ್ವ ವಿದ್ಯಾಲಯದ ಉಪ ಕುಲಪತಿ ಡಾ. ಭಗವಾನ್ ಬಿ.ಸಿ ಮಾತನಾಡಿ,…
ಬೆಂಗಳೂರು : 2024 ಆಗಸ್ಟ್ 1 ರಂದು ಬಂದ ಒಳಮೀಸಲಾತಿ ಕುರಿತಾದ ಐತಿಹಾಸಿಕ ತೀರ್ಪು ಪರಿಶಿಷ್ಟ ಜಾತಿಯೊಂದಿಗೆ ಪರಿಶಿಷ್ಟ ಪಂಗಡದಲ್ಲಿಯೂ ವರ್ಗೀಕರಣ ಆಗಬೇಕೆಂದು ಹೇಳಿತ್ತು . ಆದರೆ ಕರ್ನಾಟಕ ಸರ್ಕಾರ ಪರಿಶಿಷ್ಟ ಜಾತಿಗಳಿಗೆ ಮಾತ್ರ ಒಳಮೀಸಲಾತಿ ಜಾರಿ ಪ್ರಕ್ರಿಯೆ ನೆಡೆಸಿದೆ . ಪರಿಶಿಷ್ಟ ಪಂಗಡಗಳಿಗೂ ಒಳಮೀಸಲಾತಿ ವಿಸ್ತರಿಸಲು ಆಗತ್ಯ ಕ್ರಮ ಕೈಗೊಳ್ಳಬೇಕೆಂದು ಬೆಂಗಳೂರಿನ ಶಾಸಕರ ಭವನದಲ್ಲಿ ನೆಡೆದ ಆದಿವಾಸಿ ನಾಯಕರ ಸಭೆ ಆಗ್ರಹಿಸಿದೆ. ಸಭೆಯ ತರುವಾಯ ಆದಿವಾಸಿ ನಾಯಕರು ಸಮಾಜ ಕಲ್ಯಾಣ ಸಚಿವರಾದ ಡಾ ಹೆಚ್ ಸಿ ಮಹದೇವಪ್ಪ , ಕಾನೂನು ಸಚಿವರಾದ ಹೆಚ್ ಕೆ ಪಾಟೀಲ್ ಹಾಗು ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರನ್ನು ಭೇಟಿಯಾಗಿ ಅಹವಾಲು ಸಲ್ಲಿಸಲಾಯಿತು . ಪರಿಶಿಷ್ಟ ಜಾತಿಗಳಿಗಿಂತ ಪರಿಶಿಷ್ಟ ಪಂಗಡದಲ್ಲಿ ಮೀಸಲಾತಿ ಜಾರಿಯಲ್ಲಿ ಸಮಸ್ಯೆ ಇದೆ . ಸಣ್ಣ ಬುಡಕಟ್ಟುಗಳು , ಸೂಕ್ಷ್ಮ ಬುಡಕಟ್ಟುಗಳು , ದುರ್ಬಲ ಬುಡಕಟ್ಟುಗಳು ಮತ್ತು ಪ್ರಬಲ ಸಮುದಾಯಗಳು ಒಂದೇ ತಟ್ಟೆಯಲ್ಲಿ ಉಣ್ಣುವಂತಾಗಿದೆ . ಹೀಗಾಗಿ ಸರ್ಕಾರದ ಮೀಸಲಾತಿ…