Subscribe to Updates
Get the latest creative news from FooBar about art, design and business.
Author: kannadanewsnow09
ನವದೆಹಲಿ: ಭಾರತೀಯ ಯುವ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಉದಯ್ ಭಾನು ಚಿಬ್ ಅವರ ಬಂಧನವನ್ನು ಖಂಡಿಸಿ ರಾಷ್ಟ್ರ ರಾಜಧಾನಿಯಲ್ಲಿ ಬೃಹತ್ ಪ್ರತಿಭಟನೆ ನಡೆದಿದ್ದು, ಕರ್ನಾಟಕ ಪ್ರದೇಶ ಯುವ ಕಾಂಗ್ರೆಸ್ ಅಧ್ಯಕ್ಷ ಎಚ್.ಎಸ್. ಮಂಜುನಾಥ್ ಗೌಡ ಅವರ ನೇತೃತ್ವದಲ್ಲಿ ರಾಜ್ಯದ ನೂರಾರು ಕಾರ್ಯಕರ್ತರು ದೆಹಲಿಗೆ ತೆರಳಿ ಈ ಹೋರಾಟದಲ್ಲಿ ಪಾಲ್ಗೊಂಡಿದ್ದರು. ಫೆಬ್ರವರಿ 20 ರಂದು ದೆಹಲಿಯ ಭಾರತ್ ಮಂಟಪದಲ್ಲಿ ನಡೆದ ‘ಇಂಡಿಯಾ ಎಐ ಇಂಪ್ಯಾಕ್ಟ್ ಸಮ್ಮಿಟ್’ ವೇಳೆ ಯುವ ಕಾಂಗ್ರೆಸ್ ಕಾರ್ಯಕರ್ತರು ಅರೆನಗ್ನ ಪ್ರತಿಭಟನೆ ನಡೆಸಿದ್ದರು. ಈ ಘಟನೆಯ ಹಿಂದೆ ಉದಯ್ ಭಾನು ಚಿಬ್ ಅವರ ಕೈವಾಡವಿದೆ ಎಂದು ಆರೋಪಿಸಿ ದೆಹಲಿ ಪೊಲೀಸರು ಅವರನ್ನು ಬಂಧಿಸಿದ್ದರು. ಇದನ್ನು “ಕೇಂದ್ರ ಸರ್ಕಾರದ ರಾಜಕೀಯ ಸೇಡಿನ ನಡೆ” ಎಂದು ಟೀಕಿಸಿದ ಮಂಜುನಾಥ್ ಗೌಡ ಮತ್ತು ಕಾರ್ಯಕರ್ತರ ತಂಡ, ದೆಹಲಿಯ ಬೀದಿಗಳಲ್ಲಿ ತೀವ್ರ ಆಕ್ರೋಶ ವ್ಯಕ್ತಪಡಿಸಿತು. ಫೆಬ್ರವರಿ 23 ಮತ್ತು 24 ರಂದು ನಡೆದ ಈ ಉಗ್ರರೂಪದ ಹೋರಾಟದಲ್ಲಿ ಕಾರ್ಯಕರ್ತರು ರೈಲು ಹಳಿಗಳ ಮೇಲೆ ನಿಂತು ‘ರೈಲು…
ಬೆಂಗಳೂರು: ರಾಷ್ಟ್ರ ರಾಜಧಾನಿ ದೆಹಲಿಯಂತೆ ಬೆಂಗಳೂರು ಸಹ ಮತ್ತೊಂದು ಗ್ಯಾಸ್ ಛೇಂಬರ್ ಆಗದಂತೆ ಕ್ರಮ ವಹಿಸಲು ಶೀಘ್ರವೇ ನಗರದ ಎಲ್ಲ 28 ಶಾಸಕರೊಂದಿಗೆ ಸಭೆ ನಡೆಸಲಾಗುವುದು ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ತಿಳಿಸಿದ್ದಾರೆ. ರಾಜಾಜಿನಗರ ಶಾಸಕ ಸುರೇಶ್ ಕುಮಾರ್ ಅವರ ಕೋರಿಕೆಯ ಮೇರೆಗೆ ಅವರೊಂದಿಗೆ ಇಂದು ಉನ್ನತಾಧಿಕಾರಿಗಳ ಸಭೆ ನಡೆಸಿದ ಸಚಿವರು, ಬೆಂಗಳೂರು ನಗರದಲ್ಲಿ ವಾಯು ಮಾಲಿನ್ಯ, ಜಲ ಮಾಲಿನ್ಯ ಮತ್ತು ಶಬ್ದ ಮಾಲಿನ್ಯ ಹೆಚ್ಚಾಗುತ್ತಿದ್ದು ಇದರ ನಿಯಂತ್ರಣಕ್ಕೆ ಪಕ್ಷಾತೀತವಾಗಿ ಎಲ್ಲ ಜನಪ್ರತಿನಿಧಿಗಳ ಸಹಕಾರದ ಅಗತ್ಯವಿದೆ ಎಂದು ಪ್ರತಿಪಾದಿಸಿದರು. ಸುರೇಶ್ ಕುಮಾರ್ ವಿಷಯ ಪ್ರಸ್ತಾಪಿಸಿ ಬೆಂಗಳೂರು ನಗರದಲ್ಲಿ ರಸ್ತೆಯಲ್ಲಿನ ಧೂಳಿನಿಂದಾಗಿ ವಾಯು ಗುಣಮಟ್ಟ ಕ್ಷೀಣಿಸುತ್ತಿದ್ದು, ಮಕ್ಕಳಲ್ಲಿ ಉಸಿರಾಟದ ಸಮಸ್ಯೆ ಹೆಚ್ಚುತ್ತಿದೆ. ಈ ನಿಟ್ಟಿನಲ್ಲಿ ವೈದ್ಯರು ಬೆಂಗಳೂರು ಹೊರ ವಲಯಕ್ಕೆ ಹೋಗುವಂತೆ ಸಲಹೆ ನೀಡುತ್ತಿದ್ದಾರೆ. ವಾಯು ಗುಣಮಟ್ಟ ಕಾಪಾಡಲು ತುರ್ತು ಕ್ರಮ ಕೈಗೊಳ್ಳಬೇಕು ಎಂದರು. ಸ್ಥಳೀಯ ಸಂಸ್ಥೆಗೆ ನೋಟಿಸ್ ನೀಡಲು ಸೂಚನೆ: ಇದಕ್ಕೆ ಸ್ಪಂದಿಸಿದ ಪರಿಸರ…
ಬೆಂಗಳೂರು: “ಪ್ರಕೃತಿಯ ಅದ್ಭುತ ಕೊಡುಗೆ” ಎಂದೇ ಕರೆಯಲ್ಪಡುವ ಪಪ್ಪಾಯಿ ಹಣ್ಣು ಆರೋಗ್ಯದ ದೃಷ್ಟಿಯಿಂದ ಅತ್ಯಂತ ಅಮೂಲ್ಯವಾದುದು. ಸುಲಭವಾಗಿ ಸಿಗುವ ಮತ್ತು ಅಗ್ಗದ ಬೆಲೆಯ ಈ ಹಣ್ಣಿನಲ್ಲಿ ಅಡಗಿರುವ ಔಷಧೀಯ ಗುಣಗಳು ಹತ್ತಾರು. ಕೇವಲ ರುಚಿಗಷ್ಟೇ ಅಲ್ಲದೆ, ದೇಹದ ಒಟ್ಟಾರೆ ಆರೋಗ್ಯ ಸುಧಾರಿಸಲು ಪಪ್ಪಾಯಿ ಹೇಗೆ ಸಹಕಾರಿ ಎಂಬ ಮಾಹಿತಿ ಇಲ್ಲಿದೆ. 1. ಜೀರ್ಣಕ್ರಿಯೆಯ ಮಿತ್ರ ಪಪ್ಪಾಯಿಯಲ್ಲಿರುವ ‘ಪಪೈನ್’ ಎಂಬ ಕಿಣ್ವವು ಪ್ರೋಟೀನ್ಗಳನ್ನು ಸುಲಭವಾಗಿ ಜೀರ್ಣಿಸಿಕೊಳ್ಳಲು ಸಹಾಯ ಮಾಡುತ್ತದೆ. ಮಲಬದ್ಧತೆ ಸಮಸ್ಯೆಯಿಂದ ಬಳಲುವವರಿಗೆ ಪಪ್ಪಾಯಿ ಹಣ್ಣು ಒಂದು ನೈಸರ್ಗಿಕ ಮದ್ದಾಗಿದೆ. ಇದು ಹೊಟ್ಟೆಯ ಉರಿಯನ್ನು ಕಡಿಮೆ ಮಾಡಿ ಕರುಳಿನ ಆರೋಗ್ಯವನ್ನು ಕಾಪಾಡುತ್ತದೆ. 2. ರೋಗನಿರೋಧಕ ಶಕ್ತಿ ಹೆಚ್ಚಳ ಪಪ್ಪಾಯಿಯಲ್ಲಿ ವಿಟಮಿನ್ ಸಿ (Vitamin C) ಹೇರಳವಾಗಿದೆ. ಇದು ದೇಹದ ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸಿ, ಶೀತ, ಕೆಮ್ಮು ಮತ್ತು ಇತರ ಸೋಂಕುಗಳ ವಿರುದ್ಧ ಹೋರಾಡುವ ಸಾಮರ್ಥ್ಯವನ್ನು ನೀಡುತ್ತದೆ. ದೈನಂದಿನ ಆಹಾರದಲ್ಲಿ ಪಪ್ಪಾಯಿ ಬಳಸುವುದರಿಂದ ದೇಹವು ಸದೃಢವಾಗುತ್ತದೆ. 3. ಕಣ್ಣಿನ ಆರೋಗ್ಯಕ್ಕೆ ಸಹಕಾರಿ ಪಪ್ಪಾಯಿಯಲ್ಲಿ ವಿಟಮಿನ್…
ಕೆಎನ್ಎನ್ ಡಿಜಿಟಲ್ ಡೆಸ್ಕ್: ಸಾಮಾನ್ಯವಾಗಿ ನಾವು ಪಪ್ಪಾಯಿ ಹಣ್ಣನ್ನು ತಿಂದ ನಂತರ ಅದರ ಬೀಜಗಳನ್ನು ಕಸಕ್ಕೆ ಎಸೆಯುತ್ತೇವೆ. ಆದರೆ, ಆ ಕಪ್ಪು ಬೀಜಗಳಲ್ಲಿ ಅಡಗಿರುವ ಆರೋಗ್ಯದ ರಹಸ್ಯ ತಿಳಿದರೆ ನೀವು ಖಂಡಿತ ಆಶ್ಚರ್ಯಪಡುತ್ತೀರಿ. ಪಪ್ಪಾಯಿ ಬೀಜಗಳು ಕೇವಲ ತ್ಯಾಜ್ಯವಲ್ಲ, ಅವು ದೇಹದ ಅನೇಕ ಕಾಯಿಲೆಗಳಿಗೆ ಮದ್ದಾಗಬಲ್ಲ ಅದ್ಭುತ ಶಕ್ತಿಯನ್ನು ಹೊಂದಿವೆ ಎಂದು ಆರೋಗ್ಯ ತಜ್ಞರು ಹೇಳುತ್ತಾರೆ. ಪಪ್ಪಾಯಿ ಬೀಜಗಳಿಂದ ಸಿಗುವ ಪ್ರಮುಖ ಪ್ರಯೋಜನಗಳು ಇಲ್ಲಿವೆ: 1. ಜೀರ್ಣಕ್ರಿಯೆಗೆ ರಾಮಬಾಣ ಪಪ್ಪಾಯಿ ಬೀಜಗಳಲ್ಲಿ ‘ಪಪೈನ್’ ಎಂಬ ಕಿಣ್ವ ಸಮೃದ್ಧವಾಗಿದೆ. ಇದು ನಾವು ಸೇವಿಸುವ ಕಠಿಣ ಪ್ರೋಟೀನ್ಗಳನ್ನು ಸುಲಭವಾಗಿ ಒಡೆಯಲು ಸಹಾಯ ಮಾಡುತ್ತದೆ. ಅಜೀರ್ಣ ಮತ್ತು ಜೀರ್ಣಕ್ರಿಯೆಗೆ ಸಂಬಂಧಿಸಿದ ಸಮಸ್ಯೆ ಇರುವವರಿಗೆ ಈ ಬೀಜಗಳು ಅತ್ಯುತ್ತಮ ಪರಿಹಾರ ನೀಡುತ್ತವೆ. 2. ರೋಗನಿರೋಧಕ ಶಕ್ತಿ ಹೆಚ್ಚಳ (Antioxidants) ಈ ಬೀಜಗಳಲ್ಲಿ ಫ್ಲೇವನಾಯ್ಡ್ ಮತ್ತು ಫೀನಾಲಿಕ್ ಸಂಯುಕ್ತಗಳಂತಹ ಉತ್ಕರ್ಷಣ ನಿರೋಧಕಗಳು ಹೆಚ್ಚಾಗಿವೆ. ಇವು ದೇಹದಲ್ಲಿರುವ ಹಾನಿಕಾರಕ ಸ್ವತಂತ್ರ ರಾಡಿಕಲ್ಗಳನ್ನು ತಟಸ್ಥಗೊಳಿಸಿ, ನಮ್ಮನ್ನು ರೋಗಗಳಿಂದ ಮುಕ್ತವಾಗಿಡಲು ಮತ್ತು ರೋಗನಿರೋಧಕ…
ಬೆಂಗಳೂರು: ರಾಜ್ಯ ಸರ್ಕಾರದಿಂದ ಕೃಷಿಯೇತರ ಉದ್ದೇಶಕ್ಕೆ ಭೂಪರಿವರ್ತನೆಗೊಂಡಿರುವ ಪಹಣಗಳಲ್ಲಿ ಖಾತಾ ಬದಲಾವಣೆಗೆ ಅವಕಾಶ ಕಲ್ಪಿಸಿ ಆದೇಶಿಸಿದೆ. ಆ ಮೂಲಕ ಕೃಷಿಯೇತರ ಉದ್ದೇಶಕ್ಕಾಗಿ ಭೂ ಪರಿವರ್ತನೆಗೊಂಡು ಪಹಣಗಳಲ್ಲಿ ಖಾತೆ ಬದಲಾವಣೆ ನಿರೀಕ್ಷೆಯಲ್ಲಿದ್ದವರಿಗೆ ಗುಡ್ ನ್ಯೂಸ್ ನೀಡಿದೆ. ಈ ಸಂಬಂಧ ರಾಜ್ಯ ಸರ್ಕಾರ ಆದೇಶ ಹೊರಡಿಸಿದ್ದು, ಕೃಷಿ ಜಮೀನಿನ ಪಹಣಿಗಳನ್ನು ಭೂಮಿ ತಂತ್ರಾಂಶದ ಮೂಲಕ ನಿರ್ವಹಣೆ ಮಾಡಲಾಗುತ್ತಿದೆ. ಒಂದು ಸರ್ವೆ ನಂಬರಿನಲ್ಲಿ ಕೃಷಿ ಉದ್ದೇಶದಿಂದ ಕೃಷಿಯೇತರ ಉದ್ದೇಶಕ್ಕೆ ಭೂಪರಿವರ್ತನೆಯಾದ ನಂತರ ಸದರಿ ಪಹಣಿಯಲ್ಲಿ NA. (ಕೃಷಿಯೇತರ) ಎಂದು ಭೂಮಿ ತಂತ್ರಾಂಶದ ಮೂಲಕ ಫ್ಲಾಗ್ ಮಾಡಲಾಗುತ್ತಿದೆ. ಸದರಿ ಕೃಷಿಯೇತರ ಪಹಣಿಗಳಲ್ಲಿ ನೋಂದಣಿ ಪ್ರಕ್ರಿಯೆ ನಡೆಯದಂತೆ ಉಲ್ಲೇಖ(1) ರ ಪತ್ರದ ರೀತ್ಯಾ ನಿರ್ಬಂಧ ಅಳವಡಿಸಲಾಗಿರುವುದು ಗಮನಾರ್ಹ ಸಂಗತಿ ಎಂದಿದೆ. ಮುಂದುವರೆದು ಆಸ್ತಿ ಗುರುತಿನ ಸಂಖ್ಯೆ ಮತ್ತು ಭೂಮಿ ಪಹಣಿ ಆಧಾರದ ಮೇಲೆ ನಿಯಮಬಾಹಿರವಾಗಿ ಎರಡೂ ಕಡೆ ಕ್ರಯದ ವಹಿವಾಟು ನಡೆಯುತ್ತಿರುವುದರಿಂದ ಬಹುದಾವಾ ಪ್ರಕರಣಗಳು ಹೆಚ್ಚಾಗುವ ಸಂಭವವಿರುವುದನ್ನು ಮನಗಂಡು ಭೂಪರಿವರ್ತಿತ ಪಹಣಿ ಮತ್ತು ಇ-ಖಾತಾ ಎರಡೂ ದಾಖಲೆಗಳ ಆಧಾರದ…
ಬೆಂಗಳೂರು : ಕರ್ನಾಟಕ ಕುರಿ ಮತ್ತು ಉಣ್ಣೆ ಅಭಿವೃದ್ಧಿ ನಿಗಮವು ವಿಶೇಷ ಘಟಕ ಯೋಜನೆ ಮತ್ತು ಗಿರಿಜನ ಉಪಯೋಜನೆಯಡಿ ಕುರಿ/ಮೇಕೆ ಘಟಕ ಸ್ಥಾಪಿಸಲು ಸಹಾಯಧನಕ್ಕಾಗಿ ಆಸಕ್ತರಿಂದ ಅರ್ಜಿ ಆಹ್ವಾನಿಸಿದೆ. ಅರ್ಜಿದಾರರು ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡದ ಕೂಲಿ ಕಾರ್ಮಿಕರು, ಕೃಷಿ ಕಾರ್ಮಿಕರು ಮತ್ತು ಪಶು ಸಂಗೋಪನೆಯಲ್ಲಿ ತೊಡಗಿರುವ 18 ರಿಂದ 60 ವರ್ಷದೊಳಗಿನವರಾಗಿದ್ದು, ಜಾತಿ ಪ್ರಮಾಣ ಹೊಂದಿರಬೇಕು ಮತ್ತು ಫ್ರೂಟ್ಸ್ ತಂತ್ರಾಂಶದಲ್ಲಿ ನೋಂದಾಯಿಸಿಕೊAಡಿರಬೇಕು. ಮಹಿಳೆಯರಿಗೆ ಶೇ. 33.3 ರಷ್ಟು ಮತ್ತು ವಿಶೇಷಚೇತನರಿಗೆ ಶೆ. 3 ರಷ್ಟು ಮೀಸಲಾತಿ ಕಲ್ಪಿಸಲಾಗಿದೆ. ಆಸಕ್ತರು ನಿಗದಿತ ನಮೂನೆ ಅರ್ಜಿಯನ್ನು ಜಿಲ್ಲೆಯ ಎಲ್ಲಾ ತಾಲೂಕು ಪಶು ಆಸ್ಪತ್ರೆ ಅಥವಾ ಕರ್ನಾಟಕ ಕುರಿ ಮತ್ತು ಉಣ್ಣೆ ಅಭಿವೃದ್ಧಿ ನಿಗಮದ ಸಹಾಯಕ ನಿರ್ದೇಶಕರ ಕಚೇರಿಯಿಂದ ಪಡೆದು, ಭರ್ತಿ ಮಾಡಿದ ಅರ್ಜಿಯೊಂದಿಗೆ ಸೂಕ್ತ ದಾಖಲೆಗಳನ್ನು ಲಗತ್ತಿಸಿ ಮಾ. 10 ರೊಳಗಾಗಿ ಜಿಲ್ಲಾ ಅನುಷ್ಠಾನಾಧಿಕಾರಗಳ ಕಚೇರಿಗೆ ಸಲ್ಲಿಸುವಂತೆ ನಿಗಮದ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ. ಹೆಚ್ಚಿನ ಮಾಹಿತಿಗಾಗಿ ಕರ್ನಾಟಕ ಕುರಿ ಮತ್ತು ಉಣ್ಣೆ ಅಭಿವೃದ್ಧಿ…
ಬೆಂಗಳೂರು: ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ವ್ಯಾಪ್ತಿಯ ವಸತಿ ಶಾಲೆಗಳ 6ನೇ ತರಗತಿ ಪ್ರವೇಶಾತಿಗೆ (KRIES-2026ಕ್ಕೆ) ಅರ್ಜಿ ಸಲ್ಲಿಸಿರುವ ಪರಿಶಿಷ್ಟ ಜಾತಿ ಅಭ್ಯರ್ಥಿಗಳು ಅರ್ಜಿ ಸಲ್ಲಿಸಿದ ಶಾಲೆಗಳಿಗೆ ಭೇಟಿ ನೀಡಿ ಪ್ರವರ್ಗ-ಎ, ಪ್ರವರ್ಗ-ಬಿ ಮತ್ತು ಪ್ರವರ್ಗ-ಸಿ ಎಂದು ವರ್ಗೀಕರಿಸಿದ ಪ್ರಮಾಣ ಪತ್ರದ ಆರ್.ಡಿ. ಸಂಖ್ಯೆಯನ್ನು ಕೆಇಎ ಪೋರ್ಟಲ್ ನಲ್ಲಿ ನಮೂದಿಸಲು ಮಾರ್ಚ್ 30ರವರೆಗೆ ಅವಕಾಶ ನೀಡಲಾಗಿದೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ತಿಳಿಸಿದೆ. ವಿದ್ಯಾರ್ಥಿಗಳು ಸಂಬಂಧಿಸಿದ ತಹಶೀಲ್ದಾರರಿಂದ ಪಡೆದ ವರ್ಗೀಕರಿಸಿದ ಪ್ರಮಾಣ ಪತ್ರದ ಆರ್.ಡಿ.ಸಂಖ್ಯೆ ನಮೂದಿಸುವುದನ್ನು ಒಳಮೀಸಲಾತಿ ಆದೇಶಾನುಸಾರ ಕಡ್ಡಾಯಗೊಳಿಸಲಾಗಿದೆ ಎಂದು ಪ್ರಾಧಿಕಾರದ ಆಡಳಿತಾಧಿಕಾರಿ ಇಸ್ಲಾವುದ್ದೀನ್ ಗದ್ಯಾಳ ಅವರು ಗುರುವಾರ ಪ್ರಕಟಣೆಯಲ್ಲಿ ಹೇಳಿದ್ದಾರೆ. https://kannadanewsnow.com/kannada/is-dandruff-a-problem-skip-the-chemicals-theres-a-home-remedy-for-pearl-like-hair/
ಕೆಎನ್ಎನ್ ಡಿಜಿಟಲ್ ಡೆಸ್ಕ್: ಇತ್ತೀಚಿನ ದಿನಗಳಲ್ಲಿ ಬದಲಾದ ಹವಾಮಾನ, ಹೆಚ್ಚುತ್ತಿರುವ ಧೂಳು ಮತ್ತು ಆಹಾರ ಪದ್ಧತಿಯಿಂದಾಗಿ ಹೆಚ್ಚಿನ ಜನರು ತಲೆಹೊಟ್ಟು (Dandruff) ಸಮಸ್ಯೆಯಿಂದ ಬಳಲುತ್ತಿದ್ದಾರೆ. ಅದರಲ್ಲೂ ವಿಶೇಷವಾಗಿ ಯುವಜನತೆಯಲ್ಲಿ ಈ ಸಮಸ್ಯೆ ಆತ್ಮವಿಶ್ವಾಸವನ್ನು ಕುಗ್ಗಿಸುವಂತೆ ಮಾಡಿದೆ. ಮಾರುಕಟ್ಟೆಯಲ್ಲಿ ಲಭ್ಯವಿರುವ ರಾಸಾಯನಿಕಯುಕ್ತ ಶಾಂಪೂಗಳಿಗಿಂತ ಮನೆಯಲ್ಲಿ ಸಿಗುವ ಪದಾರ್ಥಗಳೇ ಇದಕ್ಕೆ ರಾಮಬಾಣ. ತಲೆಹೊಟ್ಟು ನಿವಾರಣೆಗೆ ಇಲ್ಲಿವೆ ಕೆಲವು ಸುಲಭ ಮನೆಮದ್ದುಗಳು: 1. ನಿಂಬೆ ರಸದ ಚಮತ್ಕಾರ ನಿಂಬೆ ರಸವು ಸಿಟ್ರಿಕ್ ಆಮ್ಲದ ಸಮೃದ್ಧ ಮೂಲವಾಗಿದ್ದು, ಇದು ತಲೆಹೊಟ್ಟಿನ ವಿರುದ್ಧ ಪರಿಣಾಮಕಾರಿಯಾಗಿ ಹೋರಾಡುತ್ತದೆ. ಇದರಲ್ಲಿರುವ ಆಂಟಿಮೈಕ್ರೊಬಿಯಲ್ ಗುಣಗಳು ಹೊಟ್ಟಿಗೆ ಕಾರಣವಾಗುವ ಶಿಲೀಂಧ್ರವನ್ನು (Fungus) ಬುಡದಿಂದಲೇ ನಿವಾರಿಸುತ್ತದೆ. 2. ಟೀ ಟ್ರೀ ಆಯಿಲ್ ಮತ್ತು ತೆಂಗಿನ ಎಣ್ಣೆ ಆಂಟಿಫಂಗಲ್ ಗುಣಗಳನ್ನು ಹೊಂದಿರುವ ಟೀ ಟ್ರೀ ಆಯಿಲ್ ಅನ್ನು ತೆಂಗಿನ ಎಣ್ಣೆಯೊಂದಿಗೆ ಬೆರೆಸಿ ನೆತ್ತಿಗೆ ಮಸಾಜ್ ಮಾಡುವುದರಿಂದ ತುರಿಕೆ ಕಡಿಮೆಯಾಗುತ್ತದೆ. ತೆಂಗಿನ ಎಣ್ಣೆಯು ನೈಸರ್ಗಿಕ ಮಾಯಿಶ್ಚರೈಸರ್ ಆಗಿ ಕೆಲಸ ಮಾಡಿ ನೆತ್ತಿಯ ಶುಷ್ಕತೆಯನ್ನು ತಡೆಯುತ್ತದೆ. 3. ಅಡುಗೆ ಸೋಡಾ…
ಬೆಂಗಳೂರು: ರಾಜ್ಯದಲ್ಲಿ ಕಳೆದ 6 ವರ್ಷಗಳಲ್ಲಿ 14,878 ಮಕ್ಕಳನ್ನು ಅಪಹರಣ ಮಾಡಿರುವಂತ ಶಾಕಿಂಗ್ ಮಾಹಿತಿಯು ವರದಿಯಿಂದ ಬಹಿರಂಗಗೊಂಡಿದೆ. ಈ ಬಗ್ಗೆ ರಾಜ್ಯದ ಸರ್ಕಾರಿ ಅಂಕಿ ಅಂಶಗಳಿಂದ ಮಾಹಿತಿ ಬಹಿರಂಗಗೊಂಡಿದ್ದು, ರಾಜ್ಯದಲ್ಲಿ 10 ಸಾವಿರಕ್ಕೂ ಹೆಚ್ಚು ಮಕ್ಕಳು ಅಪಹರಣಗೊಂಡಿದ್ದಾರೆ. ಬೆಂಗಳೂರು ನಗರ ಒಂದರಲ್ಲೇ 4,849 ಮಕ್ಕಳು ಕಿಡ್ನ್ಯಾಪ್ ಮಾಡಿದ್ದಾರೆ. ಹಿಂದಿನ ಬಿಜೆಪಿ ಅವಧಿಯಲ್ಲೂ ಸಾವಿರಾರು ಮಕ್ಕಳ ಅಪಹರಣ ಉಂಟಾಗಿದೆ ಎಂಬುದಾಗಿ ತಿಳಿದು ಬಂದಿದೆ. ಇತ್ತೀಚೆಗೆ ಬೆಂಗಳೂರಲ್ಲಿ ಮಾಸ್ಕ್ ಮ್ಯಾನ್ ಓಡಾಟ ಹೆಚ್ಚಿರುವ ಹಿನ್ನಲೆ ಸಿಲಿಕಾನ್ ಸಿಟಿ ಪೋಷಕರಿಗೆ ಬೆಚ್ಚಿ ಬೀಳಿಸುವಂತ ಸುದ್ದಿ ಬಹಿರಂಗಗೊಂಡಿದೆ. ರಾಜ್ಯದಲ್ಲಿ ಕಳೆದ 6 ವರ್ಷಗಳಲ್ಲಿ 14,878 ಮಕ್ಕಳು ಅಪಹರಣವಾಗಿದ್ದಾವೆ. 2020-25ರ ಜುಲೈ ತನಕ 14,878 ಮಕ್ಕಳನ್ನು ಅಪಹರಿಸಲಾಗಿದೆ. ಕಿಡ್ನ್ಯಾಪ್ ಆದ ಕೆಲ ಮಕ್ಕಳು ಏನಾದವು ಅನ್ನೋದೇ ನಿಗೂಢವಾಗಿದೆ. ಕಣ್ಮರೆಯಾದ ಕೆಲ ಮಕ್ಕಳ ಬಗ್ಗೆ ಯಾವುದೇ ಮಾಹಿತಿಯೇ ಈವರೆಗೂ ಸಿಕ್ಕಿಲ್ಲ. 10,792 ಅಪ್ರಾಪ್ತರು ಕಿಡ್ನ್ಯಾಪ್ ಆಗಿದ್ದರೇ, 4,086 ಬಾಲಕರ ಅಪರಣವಾಗಿದೆ. ಅಪಹಣಕ್ಕೊಳಗಾದಂತ 10,792 ಅಪ್ರಾಪ್ತೆಯರಲ್ಲಿ 9,789 ಮಂದಿ ಮಾತ್ರವೇ ಪತ್ತೆಯಾಗಿದ್ದಾರೆ.…
ಕೆಎನ್ಎನ್ ಡಿಜಿಟಲ್ ಡೆಸ್ಕ್: “ಮುಖಕ್ಕೆ ಕನ್ನಡಿ ಹಲ್ಲು” ಎಂಬ ಮಾತಿದೆ. ಸುಂದರವಾದ ಮುಖಕ್ಕೆ ಶುಭ್ರವಾದ ಬಿಳಿ ಹಲ್ಲುಗಳು ಆಭರಣದಂತೆ ಶೋಭಿಸುತ್ತವೆ. ಆದರೆ ಇಂದಿನ ಬದಲಾದ ಜೀವನಶೈಲಿ, ಆಹಾರ ಪದ್ಧತಿ ಅಥವಾ ಸರಿಯಾದ ನಿರ್ವಹಣೆಯ ಕೊರತೆಯಿಂದಾಗಿ ಅನೇಕರು ಹಲ್ಲು ಹಳದಿ ಅಥವಾ ಕಂದು ಬಣ್ಣಕ್ಕೆ ತಿರುಗುವ ಸಮಸ್ಯೆಯನ್ನು ಎದುರಿಸುತ್ತಿದ್ದಾರೆ. ಇದರಿಂದ ಸಾರ್ವಜನಿಕ ಸ್ಥಳಗಳಲ್ಲಿ ನಗಲು ಮುಜುಗರ ಅನುಭವಿಸುವಂತಾಗುತ್ತದೆ. ಆದರೆ ಚಿಂತಿಸುವ ಅಗತ್ಯವಿಲ್ಲ! ದುಬಾರಿ ಚಿಕಿತ್ಸೆಗಳ ಬದಲು ನಮ್ಮ ಅಡುಗೆ ಮನೆಯಲ್ಲಿರುವ ವಸ್ತುಗಳನ್ನು ಬಳಸಿಕೊಂಡೇ ಹಲ್ಲುಗಳನ್ನು ಶ್ವೇತವರ್ಣಕ್ಕೆ ತಿರುಗಿಸಬಹುದು. ಆ ನೈಸರ್ಗಿಕ ಮನೆಮದ್ದುಗಳು ಇಲ್ಲಿವೆ: 1. ಕೊಬ್ಬರಿ ಎಣ್ಣೆಯ ಮ್ಯಾಜಿಕ್ (Oil Pulling) ಹಲ್ಲುಗಳ ಆರೋಗ್ಯ ಕಾಪಾಡಲು ಕೊಬ್ಬರಿ ಎಣ್ಣೆ ಅತ್ಯುತ್ತಮ. ಒಂದು ಚಮಚ ಕೊಬ್ಬರಿ ಎಣ್ಣೆಯನ್ನು ಬಾಯಿಯಲ್ಲಿ ಹಾಕಿಕೊಂಡು ಸುಮಾರು 5 ನಿಮಿಷಗಳ ಕಾಲ ಮುಕ್ಕಳಿಸಬೇಕು. ಅಥವಾ ಟೂತ್ಬ್ರಷ್ ಮೇಲೆ ಒಂದೆರಡು ಹನಿ ಎಣ್ಣೆ ಹಾಕಿ ಹಲ್ಲುಜ್ಜುವುದರಿಂದಲೂ ಹಳದಿ ಬಣ್ಣ ಮಾಯವಾಗಿ ಹಲ್ಲುಗಳು ಶುಭ್ರವಾಗುತ್ತವೆ. 2. ಲಿಂಬೆ ಹಣ್ಣಿನ ಶಕ್ತಿ ಲಿಂಬೆ ಹಣ್ಣಿನಲ್ಲಿರುವ…














