Author: kannadanewsnow09

ನವದೆಹಲಿ: ಇರಾನ್, ಅಮೆರಿಕ ಮತ್ತು ಇಸ್ರೇಲ್ ನಡುವೆ ನಡೆಯುತ್ತಿರುವ ಭೀಕರ ಯುದ್ಧದ ಹಿನ್ನೆಲೆಯಲ್ಲಿ, ಪಶ್ಚಿಮ ಏಷ್ಯಾದ ಹಲವು ದೇಶಗಳಲ್ಲಿ ನಡೆಯಬೇಕಿದ್ದ ಸಿಬಿಎಸ್‌ಇ (CBSE) 10 ಮತ್ತು 12ನೇ ತರಗತಿಗಳ ಬೋರ್ಡ್ ಪರೀಕ್ಷೆಗಳನ್ನು ಮತ್ತೊಮ್ಮೆ ಮುಂದೂಡಲಾಗಿದೆ. ಮಂಗಳವಾರ (ಮಾರ್ಚ್ 3) ಹೊರಡಿಸಲಾದ ಅಧಿಕೃತ ಸುತ್ತೋಲೆಯ ಪ್ರಕಾರ, ಮಾರ್ಚ್ 5 (ಗುರುವಾರ) ಮತ್ತು ಮಾರ್ಚ್ 6ರಂದು (ಶುಕ್ರವಾರ) ನಡೆಯಬೇಕಿದ್ದ ಪರೀಕ್ಷೆಗಳನ್ನು ರದ್ದುಗೊಳಿಸಲಾಗಿದ್ದು, ಹೊಸ ದಿನಾಂಕಗಳನ್ನು ಶೀಘ್ರದಲ್ಲೇ ಪ್ರಕಟಿಸಲಾಗುವುದು ಎಂದು ಮಂಡಳಿ ತಿಳಿಸಿದೆ. ಬಾಧಿತ ದೇಶಗಳು: ಇರಾನ್, ಕುವೈತ್, ಓಮನ್, ಕತಾರ್, ಸೌದಿ ಅರೇಬಿಯಾ, ಬಹ್ರೇನ್ ಮತ್ತು ಯುನೈಟೆಡ್ ಅರಬ್ ಎಮಿರೇಟ್ಸ್ (UAE) ಸೇರಿದಂತೆ ಏಳು ದೇಶಗಳ ಸುಮಾರು 150ಕ್ಕೂ ಹೆಚ್ಚು ಸಿಬಿಎಸ್‌ಇ ಮಾನ್ಯತೆ ಪಡೆದ ಶಾಲೆಗಳಲ್ಲಿ ಪರೀಕ್ಷೆಗಳನ್ನು ಮುಂದೂಡಲಾಗಿದೆ. ಎರಡನೇ ಬಾರಿ ಮುಂದೂಡಿಕೆ: ಈ ಪರೀಕ್ಷೆಗಳು ಮೂಲತಃ ಮಾರ್ಚ್ 2ರಂದು ನಡೆಯಬೇಕಿತ್ತು. ಆದರೆ ಯುದ್ಧದ ಉದ್ವಿಗ್ನತೆಯಿಂದಾಗಿ ಎರಡು ದಿನಗಳ ಹಿಂದೆಯಷ್ಟೇ ಪೋಸ್ಟ್‌ಪೋನ್ ಮಾಡಲಾಗಿತ್ತು. ಈಗ ಪರಿಸ್ಥಿತಿ ಮತ್ತಷ್ಟು ಹದಗೆಟ್ಟಿರುವುದರಿಂದ ಎರಡನೇ ಬಾರಿ ಮುಂದೂಡಲಾಗಿದೆ. ಮುಂದಿನ…

Read More

ಕೋಲಾರ: ಮನುಷ್ಯನ ಶ್ರೇಷ್ಠತೆಯ ವ್ಯಸನಕ್ಕೆ ತಮ್ಮ ಅನುಭಾವದ ಮೂಲಕ ಮದ್ದು ಅರೆದವರು ಕೈವಾರ ತಾತಯ್ಯ ಅವರು, ಅದ್ಯಾತ್ಮ‌ ಅಂದರೆ ಚರ್ಮಶುದ್ಧಿ ಅಲ್ಲ: ಅಂತರಂಗದ ಶುದ್ದಿ ಎಂದು ಬದುಕಿ‌ ತೋರಿಸಿದವರು ಎಂದು ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್ ಅವರು ಅಭಿಪ್ರಾಯಪಟ್ಟರು. ಕೈವಾರ ತಾತಯ್ಯ ಅವರ 300ನೇ ಜಯಂತಿ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಮಾತನಾಡಿದರು.‌ ಜಾತಿ, ಧರ್ಮ, ಲಿಂಗ ಹಣ, ಅಂತಸ್ತು ಎಲ್ಲದರ ಶ್ರೇಷ್ಠತೆಯ ವ್ಯಸನವನ್ನು ನಿವಾಳಿಸಿದ ಕೈವಾರದ ಶ್ರೀ ಯೋಗಿ ನಾರೇಯಣ ಯತೀಂದ್ರರು “ತಾತಯ್ಯ” ಅಂತಲೇ ಜನ‌ಮಾನಸದಲ್ಲಿ ನೆಲೆಯಾಗಿದ್ದಾರೆ. ಅಧ್ಯಾತ್ಮ ಎಂದರೆ ಬಹಳ ಕಠಿಣ, ಎಲ್ಲರ ಪಾಲಿನ ಪ್ರಸಾದ ಅಲ್ಲ ಎನ್ನುವ ಶ್ರೇಷ್ಠತೆಯನ್ನು ಅಳಿಸಿ, “ಕಠಿಣವಾದ ಅಧ್ಯಾತ್ಮದ ಸಾರವನ್ನು ಸರಳ ಭಾಷೆಯಲ್ಲಿ ಸಮಾಜದ ಕಟ್ಟ ಕಡೆಯವರಿಗೂ ತಲುಪಿಸಿದ ಸಂತ‌ ಶ್ರೇಷ್ಠರು ತಾತಯ್ಯ ಎಂದರು. ಕರ್ನಾಟಕದ ಶ್ರೇಷ್ಠ ಸಂತರು ದಾರ್ಶನಿಕರು ಮತ್ತು ಸಮಾಜ ಸುಧಾರಕರಲ್ಲಿ ಒಬ್ಬರಾದ ತಾತಯ್ಯ ತೆಲುಗು ಮತ್ತು ಕನ್ನಡ ಎರಡೂ ಭಾಷೆಗಳಲ್ಲಿ ತಮ್ಮ ಅನುಭಾವವನ್ನೇ ತತ್ವಪದಗಳನ್ನಾಗಿ ರಚಿಸಿ ಹಾಡಿದರು. ಜನಸಾಮಾನ್ಯರಿಗೆ ಅಧ್ಯಾತ್ಮದ ದಾರಿಯನ್ನು ತೋರಿಸಿದ…

Read More

ವಾಷಿಂಗ್ಟನ್/ಟೆಹ್ರಾನ್: ಮಧ್ಯಪ್ರಾಚ್ಯದಲ್ಲಿ ಯುದ್ಧದ ಕಿಚ್ಚು ಮತ್ತಷ್ಟು ತೀವ್ರಗೊಂಡಿದೆ. ಇರಾನ್ ವಿರುದ್ಧ ಅಮೆರಿಕ ಮತ್ತು ಇಸ್ರೇಲ್ ಜಂಟಿಯಾಗಿ ಹೂಡಿರುವ ಸಮರವು ‘ಆಪರೇಷನ್ ಎಪಿಕ್ ಫ್ಯೂರಿ’ ಹೆಸರಿನಲ್ಲಿ ಭೀಕರ ಸ್ವರೂಪ ಪಡೆದುಕೊಂಡಿದೆ. ಇತ್ತೀಚೆಗಷ್ಟೇ ಇರಾನ್‌ನ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ ಅವರ ಹತ್ಯೆಯ ಬೆನ್ನಲ್ಲೇ ಉಭಯ ದೇಶಗಳ ನಡುವಿನ ಸಂಘರ್ಷ ತುತ್ತತುದಿಗೆ ತಲುಪಿದ್ದು, ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಕಾರ್ಯಾಚರಣೆ ಇನ್ನೂ ಕೆಲವು ವಾರಗಳ ಕಾಲ ಮುಂದುವರಿಯಲಿದೆ ಎಂಬ ಸೂಚನೆ ನೀಡಿದ್ದಾರೆ. ರಾಯಭಾರ ಕಚೇರಿ ಧ್ವಂಸ ಇರಾನ್ ತನ್ನ ನಾಯಕನ ಹತ್ಯೆಗೆ ಪ್ರತೀಕಾರ ತೀರಿಸಿಕೊಳ್ಳುವುದಾಗಿ ಶಪಥ ಮಾಡಿದ್ದು, ಮಂಗಳವಾರ ರಿಯಾದ್‌ನಲ್ಲಿರುವ ಅಮೆರಿಕದ ರಾಯಭಾರ ಕಚೇರಿಯ ಮೇಲೆ ಕ್ಷಿಪಣಿ ದಾಳಿ ನಡೆಸಿ ಅದನ್ನು ಧ್ವಂಸಗೊಳಿಸಿದೆ. ಅಮೆರಿಕನ್ ಸೈನಿಕರ ಸಾವಿಗೆ ಇರಾನ್ ಬೆಲೆ ತೆರಬೇಕಾಗುತ್ತದೆ ಎಂದು ಟ್ರಂಪ್ ಎಚ್ಚರಿಸಿದ್ದಾರೆ. ಇರಾನ್ ಪರಮಾಣು ಅಸ್ತ್ರಗಳನ್ನು ಹೊಂದಬಾರದು ಎಂಬುದು ಈ ದಾಳಿಯ ಮುಖ್ಯ ಉದ್ದೇಶ ಎಂದು ಅಮೆರಿಕ ಪ್ರತಿಪಾದಿಸಿದೆ. ಯುದ್ಧದಿಂದ ಸಾವು-ನೋವು ಗುರಿಗಳು: ಅಮೆರಿಕ ಸೇನೆಯು ಇರಾನ್‌ನ…

Read More

ಶಿವಮೊಗ್ಗ: ದೇಶಸೇವೆಯ ಕನಸು ಹೊತ್ತಿರುವ ಶಿವಮೊಗ್ಗ ಜಿಲ್ಲೆಯ ಯುವಕ-ಯುವತಿಯರಿಗಾಗಿ ಅಗ್ನಿಪಥ್ ಯೋಜನೆಯಡಿ ಸೇನೆಗೆ ಸೇರುವ ಕುರಿತು ಸಮಗ್ರ ಮಾಹಿತಿ ನೀಡುವ ವಿಶೇಷ ಕಾರ್ಯಾಗಾರವನ್ನು ಹಮ್ಮಿಕೊಳ್ಳಲಾಗಿದೆ. ಮಂಗಳೂರಿನ ಸೇನಾ ನೇಮಕಾತಿ ಕಚೇರಿಯ ಅಧಿಕಾರಿಗಳ ಮಾರ್ಗದರ್ಶನದಲ್ಲಿ ಈ ಕಾರ್ಯಕ್ರಮ ನಡೆಯಲಿದ್ದು, ಸೇನೆಯಲ್ಲಿರುವ ಸವಲತ್ತುಗಳು ಮತ್ತು ನೇಮಕಾತಿ ಪ್ರಕ್ರಿಯೆಯ ಬಗ್ಗೆ ಸಂಪೂರ್ಣ ಮಾಹಿತಿ ನೀಡಲಾಗುತ್ತದೆ. ಕಾರ್ಯಕ್ರಮದ ವಿವರಗಳು: ಎಲ್ಲಿ ತರಬೇತಿ ಕಾರ್ಯಾಗಾರ ಆಯೋಜನೆ? * ಮಾರ್ಚ್ 06 | ಬೆಳಿಗ್ಗೆ 10:30 | ಶ್ರೀ ಜಗದ್ಗುರು ಪಂಚಾಚಾರ್ಯ ಐ.ಟಿ.ಐ ಕಾಲೇಜು, ಬೈಪಾಸ್ ರಸ್ತೆ, ಶಿವಮೊಗ್ಗ | ಮಾಜಿ ಸೈನಿಕರ ಸಂಘ * ಮಾರ್ಚ್ 06 | ಮಧ್ಯಾಹ್ನ 02:00 | ಎಲ್.ಬಿ.ಎಸ್. ಕಾಲೇಜ್, ಸಾಗರ | ಮಾಜಿ ಸೈನಿಕರ ಕಲ್ಯಾಣ ಟ್ರಸ್ಟ್ * ಅಗ್ನಿಪಥ್ ಯೋಜನೆ: ಸೇನೆಗೆ ಸೇರಲು ಇರುವ ಅರ್ಹತೆ ಮತ್ತು ಅವಕಾಶಗಳ ಕುರಿತು ತಜ್ಞರಿಂದ ಉಪನ್ಯಾಸ. * ನೇಮಕಾತಿ ಪ್ರಕ್ರಿಯೆ: ಶೀಘ್ರದಲ್ಲಿಯೇ ಆರಂಭವಾಗಲಿರುವ ಹೊಸ ನೇಮಕಾತಿ ಪ್ರಕ್ರಿಯೆಯ ಕುರಿತು ವಿವರಣೆ. * ಉಚಿತ…

Read More

ಸಾಗರ: ಶಿವಮೊಗ್ಗ ಜಿಲ್ಲೆಯ ಪ್ರಮುಖ ವಾಣಿಜ್ಯ ನಗರಿ ಸಾಗರದ ನಗರಸಭೆಯಲ್ಲಿ ಇಂದು ಸಂಭ್ರಮದ ವಾತಾವರಣ ಮನೆಮಾಡಿತ್ತು. ಸಾಗರ ನಗರಸಭೆಯ ಪೌರಾಯುಕ್ತರಾದ ಹೆಚ್.ಕೆ. ನಾಗಪ್ಪ ಅವರ 58ನೇ ವರ್ಷದ ಹುಟ್ಟುಹಬ್ಬವನ್ನು ಪೌರ ಸೇವಾ ನೌಕರರ ಸಂಘದ ವತಿಯಿಂದ ಅತ್ಯಂತ ಅರ್ಥಪೂರ್ಣವಾಗಿ ಆಚರಿಸಲಾಯಿತು. ನೌಕರರ ಸಂಘದಿಂದ ಅದ್ದೂರಿ ಶುಭಾಶಯ ನಗರಸಭೆಯ ಪೌರ ಸೇವಾ ಸಂಘದ ಕಚೇರಿಯಲ್ಲಿ ಆಯೋಜಿಸಲಾಗಿದ್ದ ಈ ಸರಳ ಸುಂದರ ಸಮಾರಂಭದಲ್ಲಿ, ನೌಕರರು ಒಗ್ಗೂಡಿ ಕೇಕ್ ಕತ್ತರಿಸುವ ಮೂಲಕ ತಮ್ಮ ನೆಚ್ಚಿನ ಅಧಿಕಾರಿಗೆ ಜನ್ಮದಿನದ ಶುಭಾಶಯಗಳನ್ನು ಕೋರಿದರು. ಕೇವಲ ಒಬ್ಬ ಅಧಿಕಾರಿಯಾಗಿ ಮಾತ್ರವಲ್ಲದೆ, ನೌಕರರೊಂದಿಗೆ ಉತ್ತಮ ಬಾಂಧವ್ಯ ಹೊಂದಿರುವ ನಾಗಪ್ಪ ಅವರಿಗೆ ಸಂಘದ ಪದಾಧಿಕಾರಿಗಳು ಹೂಗುಚ್ಛ ನೀಡಿ ಗೌರವಿಸಿದರು. ಬಸವರಾಜ ಹೊರಟ್ಟಿ ಅವರ ಕಥೆಗಳ ಮೂಲಕ ಬದುಕಿನ ಪಾಠ ಹುಟ್ಟುಹಬ್ಬದ ಸಂಭ್ರಮದ ನಡುವೆಯೂ ಪೌರಾಯುಕ್ತ ಹೆಚ್.ಕೆ. ನಾಗಪ್ಪ ಅವರು ನೌಕರರಿಗೆ ಪ್ರಸ್ತುತ ಕಾಲಘಟ್ಟದ ಬಗ್ಗೆ ಮಾರ್ಮಿಕವಾಗಿ ಅರಿವು ಮೂಡಿಸಿದರು. ಈ ಸಂದರ್ಭದಲ್ಲಿ ಅವರು ಕರ್ನಾಟಕ ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅವರು…

Read More

ದುಬೈ/ಮಸ್ಕತ್: ಜಗತ್ತಿನ ಅತ್ಯಂತ ಪ್ರಮುಖ ತೈಲ ಸಾಗಾಣಿಕಾ ಮಾರ್ಗವಾದ ಹಾರ್ಮುಜ್ ಜಲಸಂಧಿಯು ಪ್ರಸ್ತುತ ಭೀಕರ ‘ಡಿಜಿಟಲ್ ಬ್ಲಾಕೌಟ್’ಗೆ ಸಾಕ್ಷಿಯಾಗಿದೆ. ಅತ್ಯಾಧುನಿಕ ಎಲೆಕ್ಟ್ರಾನಿಕ್ ಯುದ್ಧತಂತ್ರದ ಭಾಗವಾಗಿ ನಡೆಯುತ್ತಿರುವ ಜಿಪಿಎಸ್ (GPS) ಜಾಮಿಂಗ್‌ನಿಂದಾಗಿ ನೂರಾರು ತೈಲ ಟ್ಯಾಂಕರ್‌ಗಳು ಸಮುದ್ರದ ಮಧ್ಯೆ ದಿಕ್ಕುತೋಚದೆ ನಿಂತಿದ್ದು, ಜಾಗತಿಕ ತೈಲ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗುವ ಭೀತಿ ಎದುರಾಗಿದೆ. ಏನಿದು ಬಿಕ್ಕಟ್ಟು? ಕಾರ್ಯಾಚರಣೆಯ ಹಿನ್ನೆಲೆ: ಫೆಬ್ರವರಿ 28 ರಂದು ಇರಾನ್ ಮೇಲೆ ಅಮೆರಿಕ ಮತ್ತು ಇಸ್ರೇಲ್ ಮಿಲಿಟರಿ ಪಡೆಗಳು ಜಂಟಿಯಾಗಿ ನಡೆಸಿದ ‘ಆಪರೇಷನ್ ಎಪಿಕ್ ಫ್ಯೂರಿ’ ದಾಳಿಯ ನಂತರ ಈ ಪ್ರದೇಶವು ಎಲೆಕ್ಟ್ರಾನಿಕ್ ಯುದ್ಧಭೂಮಿಯಾಗಿ ಮಾರ್ಪಟ್ಟಿದೆ. ಜಾಗತಿಕ ತೈಲ ಪೂರೈಕೆಯ ಶೇ. 20 ರಷ್ಟು ಭಾಗವನ್ನು ನಿರ್ವಹಿಸುವ ಈ ಜಲಮಾರ್ಗದಲ್ಲಿ ಈಗ ಹಡಗುಗಳ ಸಂಚಾರ ಸಂಪೂರ್ಣ ಹಳಿ ತಪ್ಪಿದೆ. ಜಾಮಿಂಗ್ ಮತ್ತು ವಂಚನೆ (Spoofing): ಹಡಗುಗಳ ಸಂಚರಣಾ ವ್ಯವಸ್ಥೆಯನ್ನು (Navigation) ಹದಗೆಡಿಸಲು ಎರಡು ರೀತಿಯ ತಂತ್ರಗಳನ್ನು ಬಳಸಲಾಗುತ್ತಿದೆ: ಜಾಮಿಂಗ್: ಉಪಗ್ರಹ ಸಂಕೇತಗಳನ್ನು ಪ್ರಬಲ ರೇಡಿಯೊ ಶಬ್ದದ ಮೂಲಕ ಅಡಚಣೆ ಮಾಡುವುದು.…

Read More

ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗವು (KPSC) ಗೆಜೆಟೆಡ್‌ ಪ್ರೊಬೇಷನರಿ ಗ್ರೂಪ್‌ ‘ಎ’ ಮತ್ತು ಗ್ರೂಪ್‌ ‘ಬಿ’ ವೃಂದದ ಒಟ್ಟು 384 ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಮುಖ್ಯ ಪರೀಕ್ಷೆಯ ಫಲಿತಾಂಶವನ್ನು ಸೋಮವಾರ ಪ್ರಕಟಿಸಿದೆ. ಅರ್ಹತೆ ಪಡೆದ ಅಭ್ಯರ್ಥಿಗಳನ್ನು 1:3 ಅನುಪಾತದ ಆಧಾರದ ಮೇಲೆ ವ್ಯಕ್ತಿತ್ವ ಪರೀಕ್ಷೆಗೆ (ಸಂದರ್ಶನ) ಆಯ್ಕೆ ಮಾಡಲಾಗಿದೆ. ಈ ನೇಮಕಾತಿ ಪ್ರಕ್ರಿಯೆಯ ಮುಖ್ಯ ಪರೀಕ್ಷೆಯು 2025ರ ಮೇ 3, 5, 7 ಮತ್ತು 9ರಂದು ರಾಜ್ಯದಾದ್ಯಂತ ಯಶಸ್ವಿಯಾಗಿ ನಡೆದಿತ್ತು. ದೀರ್ಘಕಾಲದ ಕಾಯುವಿಕೆಯ ನಂತರ ಆಯೋಗವು ಇದೀಗ ಸಂದರ್ಶನಕ್ಕೆ ಅರ್ಹರಾದವರ ಪಟ್ಟಿಯನ್ನು ಬಿಡುಗಡೆ ಮಾಡಿದ್ದು, ಅಭ್ಯರ್ಥಿಗಳಲ್ಲಿ ಸಂಚಲನ ಮೂಡಿಸಿದೆ. ಕೋರ್ಟ್ ಮೆಟ್ಟಿಲೇರಿದ್ದ ಅಭ್ಯರ್ಥಿಗಳಿಗೂ ಯಶಸ್ಸು: ಈ ಬಾರಿ ನೇಮಕಾತಿಯಲ್ಲಿ ಒಂದು ವಿಶೇಷ ಬೆಳವಣಿಗೆ ಕಂಡುಬಂದಿದೆ. ಡಿ. 29ರಂದು ನಡೆದಿದ್ದ ಪೂರ್ವಭಾವಿ ಪರೀಕ್ಷೆಯಲ್ಲಿ ಪ್ರಶ್ನೆ ಮತ್ತು ಉತ್ತರಗಳ ಭಾಷಾಂತರದ ಲೋಪದಿಂದಾಗಿ (ಇಂಗ್ಲಿಷ್‌ನಿಂದ ಕನ್ನಡಕ್ಕೆ) ಅನೇಕ ಅಭ್ಯರ್ಥಿಗಳು ಅನ್ಯಾಯವಾಗಿದೆ ಎಂದು ಹೈಕೋರ್ಟ್ ಮತ್ತು ಕೆಎಟಿ (KAT) ಮೆಟ್ಟಿಲೇರಿದ್ದರು. ನ್ಯಾಯಾಲಯದ ಷರತ್ತುಬದ್ಧ ಅನುಮತಿಯೊಂದಿಗೆ ಮುಖ್ಯ ಪರೀಕ್ಷೆ…

Read More

ಶಿವಮೊಗ್ಗ : ರಾಜ್ಯದಲ್ಲಿ 56 ಸಾವಿರ ಹುದ್ದೆಯನ್ನು ಭರ್ತಿ ಮಾಡುತ್ತಿರುವುದು ಐತಿಹಾಸಿಕ ನಿರ್ಧಾರ. ದೇಶದ ಯಾವ ರಾಜ್ಯದಲ್ಲೂ ಇಷ್ಟು ದೊಡ್ಡ ಪ್ರಮಾಣದ ನೇಮಕಾತಿ ನಡೆದಿಲ್ಲ ಎಂದು ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ತಿಳಿಸಿದರು. ಸೋಮವಾರದಂದು ತಮ್ಮ ಹುಟ್ಟು ಹಬ್ಬದ ನಿಮಿತ್ತ ಶಿವಮೊಗ್ಗ ಜಿಲ್ಲೆಯ ಸಾಗರದ ಜೋಸೆಫ್ ನಗರದಲ್ಲಿರುವ ಮಾಜಿ ಸಚಿವ ಕಾಗೋಡು ತಿಮ್ಮಪ್ಪ ಅವರ ಮನೆಗೆ ಭೇಟಿ ನೀಡಿ ಪತ್ರಕರ್ತರ ಜೊತೆ ಮಾತನಾಡಿದ ಅವರು, ಮೀಸಲಾತಿ ನಿಗಧಿಪಡಿಸದೆ ನೇಮಕಾತಿ ಮಾಡಿಕೊಂಡರೆ ಕೆಲವು ವರ್ಗಗಳಿಗೆ ಅನ್ಯಾಯವಾಗುತ್ತದೆ ಎಂದು ಹೇಳಿದರು. ಧಾರವಾಡದಲ್ಲಿ ಉದ್ಯೋಗಾಕಾಂಕ್ಷಿಗಳು ಪ್ರತಿಭಟನೆ ಮಾಡಿದ್ದಾರೆ. ನಮ್ಮ ಇಲಾಖೆಯಲ್ಲಿ ಹೆಚ್ಚು ಜನರು ಉದ್ಯೋಗಾಕಾಂಕ್ಷಿಗಳಿದ್ದಾರೆ. ವಿರೋಧ ಪಕ್ಷದ ನಾಯಕ ಅಶೋಕ್ ಪುಗಸಟ್ಟೆ ಭಾಷಣ ಮಾಡುತ್ತಾರೆ. 2 ಲಕ್ಷ ಉದ್ಯೋಗ ಭರ್ತಿ ಮಾಡಬೇಕು ಎಂದು ಹೇಳಿಕೆ ನೀಡುತ್ತಾರೆ. ಅವರೇನು ಕತ್ತೆ ಕಾಯುತ್ತಿದ್ದರಾ, ಮೂರು ಜನ ಉಪಮುಖ್ಯಮಂತ್ರಿಗಳು ಹಿಂದಿನ ಸರ್ಕಾರದಲ್ಲಿ ಇದ್ದರು. ಏನು ಸೆಗಣಿ ತಿನ್ನುತ್ತಿದ್ದರಾ ಎಂದು ಪ್ರಶ್ನಿಸಿದ ಸಚಿವರು, 56ಸಾವಿರ ಜನರನ್ನು ಏಕಕಾಲಕ್ಕೆ ಭರ್ತಿ ಮಾಡುತ್ತಿರುವುದು…

Read More

ಬೆಂಗಳೂರು: ಸೋಮವಾರದಂದು ಸರ್ಕಾರಿ ವೈಧ್ಯಾಧಿಕಾರಿಗಳ ಸಂಘದ ಪ್ರಮುಖರೊಂದಿಗೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಸಭೆ ನಡೆಸಿ, ಬೇಡಿಕೆ ಈಡೇರಿಕೆ ಬಗ್ಗೆ ಚರ್ಚೆ ನಡೆಸಿದರು. ಆದರೇ ಈ ಸಭೆಯಲ್ಲಿ ಮಾತುಕತೆ ವಿಫಲವಾಗಿದ್ದು, ನಿಗದಿಯಂತೆ ಮಾರ್ಚ್.11ರಂದು ಮುಷ್ಕರ ನಡಸಲಾಗುತ್ತಿದೆ ಎಂಬುದಾಗಿ ಸರ್ಕಾರಿ ವೈದ್ಯಾಧಿಕಾರಿಗಳ ಸಂಘ ಸ್ಪಷ್ಟ ಪಡಿಸಿದೆ. ಈ ಬಗ್ಗೆ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಹಂಚಿಕೊಂಡಿರುವಂತ ಕರ್ನಾಟಕ ಸರ್ಕಾರಿ ವೈದ್ಯಾಧಿಕಾರಿಗಳ ಸಂಘವು, ಸೋಮವಾರದಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ವೈದ್ಯರು, ಅಧಿಕಾರಿ ನೌಕರರ ಪ್ರಮುಖ ಬೇಡಿಕೆಗಳ ಬಗ್ಗೆ ಚರ್ಚಿಸಲು ಸಚಿವ ದಿನೇಶ್ ಗುಂಡೂರಾವ್ ಅವರ ಅಧ್ಯಕ್ಷತೆಯಲ್ಲಿ ವಿಕಾಸಸೌಧದಲ್ಲಿ ಸಭೆ ನಡೆಯಿತು ಎಂದಿದೆ. ಸೋಮವಾರದಂದು ನಡೆದ ಸಭೆಯಲ್ಲಿ ಆರೋಗ್ಯ ಇಲಾಖೆಯ ಸರ್ಕಾರಿ ವೈದ್ಯರು, ನೌಕರರ ಪ್ರಮುಖ ಬೇಡಿಕೆಗಳಿಗೆ ಸಂಬಂಧಿಸಿದಂತೆ ಸುದೀರ್ಘವಾದಂತ ಚರ್ಚೆ ನಡೆಸಲಾಯಿತು. ಆದರೇ ಸಚಿವರು ಹಾಗೂ ಇಲಾಖೆಯ ಉನ್ನತ ಮಟ್ಟದ ಅಧಿಕಾರಿಗಳು ನಮ್ಮ ಬೇಡಿಕೆಗಳನ್ನು ಈಡೇರಿಸುವ ಸ್ಪಷ್ಟವಾದಂತ ಭರವಸೆಯನ್ನು ನೀಡಿರುವುದಿಲ್ಲ ಎಂದು ಹೇಳಿದೆ. ಈ ಹಿನ್ನಲೆಯಲ್ಲಿ ನಮ್ಮ ಸಂಘವು ಈ ಹಿಂದೆ ಕೈಗೊಂಡ…

Read More

ಬೆಂಗಳೂರು: ಇ-ಸ್ವತ್ತು 2.0 ತಂತ್ರಾಂಶದಡಿ ಇದುವರೆಗೆ ರಾಜ್ಯದಲ್ಲಿ 1,14,907 ಅರ್ಜಿಗಳನ್ನು ಅನುಮೋದಿಸಿ ವಿಲೇವಾರಿ ಮಾಡಲಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಹಾಗೂ ಮಾಹಿತಿ ಮತ್ತು ಜೈವಿಕ ತಂತ್ರಜ್ಞಾನ ಸಚಿವ ಪ್ರಿಯಾಂಕ್‌ ಖರ್ಗೆ ತಿಳಿಸಿದ್ದಾರೆ. ಸಾರ್ವಜನಿಕರಿಂದ ಇದುವರೆಗೆ ಒಟ್ಟು 1,38,470 ಅರ್ಜಿಗಳು ಸ್ವೀಕೃತವಾಗಿದ್ದು, 23,563 ಅರ್ಜಿಗಳು ಅನುಮೋದನೆಗಾಗಿ ಬಾಕಿ ಉಳಿದಿವೆ ಎಂದೂ ಸಚಿವರು ಮಾಹಿತಿ ನೀಡಿದ್ದಾರೆ. ವಿಕಾಸಸೌಧದ ತಮ್ಮ ಕಚೇರಿ ಸಭಾಂಗಣದಲ್ಲಿ ಸಚಿವರು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಇಲಾಖೆಯ ಅಧಿಕಾರಿಗಳ ಸಭೆ ನಡೆಸಿ ಪಂಚಾಯತ್‌ ರಾಜ್‌ ಇಲಾಖೆಯ ವಿವಿಧ ಕಾರ್ಯಕ್ರಮಗಳನ್ನು ಪರಿಶೀಲಿಸಿದರು. ಇ-ಸ್ವತ್ತು 2.0 ತಂತ್ರಾಂಶದ ಸಿಟಿಜನ್‌ ಇಂಟರ್‌ಫೇಸ್‌ (Citizen interface) ಮೂಲಕ ಅರ್ಜಿಗಳನ್ನು ಸಲ್ಲಿಸುವ ಸಂದರ್ಭದಲ್ಲಿ ಮತ್ತು ಅರ್ಜಿಗಳನ್ನು ಅನುಮೋದನೆ ಮಾಡುವ ಸಮಯದಲ್ಲಿ ಕೆಲವು ತಾಂತ್ರಿಕ ಸಮಸ್ಯೆಗಳು ಎದುರಾಗುತ್ತಿರುವುದು ಸರ್ಕಾರದ ಗಮನಕ್ಕೆ ಬಂದ ಹಿನ್ನೆಲೆಯಲ್ಲಿ ಇ-ಸ್ವತ್ತು ತಂತ್ರಾಂಶವನ್ನು ನಿರ್ವಹಿಸುತ್ತಿರುವ ಕೇಂದ್ರ ಸರ್ಕಾರದ ಎನ್‌ಐಸಿ (NIC) ಸಂಸ್ಥೆ ಮೂಲಕ ಉದ್ಭವಿಸಿರುವ ಇ-ಸ್ವತ್ತು 2.0 ತಂತ್ರಾಂಶದ ಸಮಸ್ಯೆಗಳನ್ನು ತ್ವರಿತವಾಗಿ ಬಗೆಹರಿಸಲು ಮತ್ತು ಉಳಿದ…

Read More