Subscribe to Updates
Get the latest creative news from FooBar about art, design and business.
Author: kannadanewsnow09
ಬೆಂಗಳೂರು: ಕಲಬುರಗಿಯ ರಾಜ್ಯ ಕೀಟನಾಶಕ ಪರೀಕ್ಷಾ ಪ್ರಯೋಗಾಲಯವು (SPTL) ISO/IEC 17025 ಅಡಿಯಲ್ಲಿ NABL ( ರಾಷ್ಟ್ರೀಯ ಮಾನ್ಯತೆ ಮಂಡಳಿ)ಮಾನ್ಯತೆಯನ್ನು ಸಾಧಿಸಿದ್ದು. ಇದು ಕಲ್ಯಾಣ ಕರ್ನಾಟಕ ಪ್ರದೇಶದಲ್ಲಿ ಕೃಷಿ ಗುಣಮಟ್ಟದ ಭರವಸೆಯನ್ನು ಬಲಪಡಿಸುವಲ್ಲಿ ಮಹತ್ವದ ಮೈಲಿಗಲ್ಲಾಗಿದೆ ಎಂದು ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವರೂ ಆಗಿರುವ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ಮತ್ತು ಜೈವಿಕ ತಂತ್ರಜ್ಞಾನ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ. ಏಪ್ರಿಲ್ 1997 ರಲ್ಲಿ ಕೀಟನಾಶಕ ಕಾಯ್ದೆ, 1968 ರ ಅಡಿಯಲ್ಲಿ ಸ್ಥಾಪನೆಯಾದ ಕಲಬುರಗಿಯ ಪ್ರಯೋಗಾಲಯವು ಕಲಬುರಗಿ, ಯಾದಗಿರಿ, ಬೀದರ್ ಮತ್ತು ವಿಜಯಪುರ ಜಿಲ್ಲೆಗಳಾದ್ಯಂತ ರೈತರಿಗೆ ಸೇವೆ ಸಲ್ಲಿಸುತ್ತದೆ, ವಾರ್ಷಿಕ 1,280 ಕೀಟನಾಶಕ ಮಾದರಿಗಳ ಪರೀಕ್ಷಾ ಸಾಮರ್ಥ್ಯವನ್ನು ಹೊಂದಿದೆ ಎಂದು ತಿಳಿಸಿರುವ ಸಚಿವರು, ದೀರ್ಘಕಾಲದಿಂದ ರೈತರ ಸೇವೆಯಲ್ಲಿ ನಿರತವಾಗಿರುವ ಈ ಸಂಸ್ಥೆ ರಾಷ್ಟ್ರೀಯ ಮಾನ್ಯತೆ ಮಂಡಳಿಯಿಂದ ಮನ್ನಣೆ ಪಡೆದಿರುವುದು ತಮಗೆ ಸಂತಸ ತಂದಿದೆ ಎಂದಿದ್ದಾರೆ. ಪರೀಕ್ಷೆ ಮತ್ತು ಮಾಪನಾಂಕ ನಿರ್ಣಯ ಪ್ರಯೋಗಾಲಯಗಳ ರಾಷ್ಟ್ರೀಯ ಮಾನ್ಯತೆ ಮಂಡಳಿಯಾದ NABL, ಭಾರತದ ಗುಣಮಟ್ಟ…
ಶ್ರೀಹರಿಯ ಈ 10 ಮಂತ್ರಗಳನ್ನು ನಿಯಮಿತವಾಗಿ ಪಠಿಸಿದರೆ 24 ಗಂಟೆಯಲ್ಲಿ ಇದರ ಪರಿಣಾಮಕಾರಿ ಪ್ರಭಾವದಿಂದ ಜೀವನವೇ ಬದಲಾಗುತ್ತದೆ..! ಭಗವಾನ್ ವಿಷ್ಣುವಿನ ಈ 10 ಮಂತ್ರಗಳನ್ನು ಯಾರು ನಿಯಮಿತವಾಗಿ ಪಠಿಸುತ್ತಾರೋ ಅವರು ತೊಂದರೆಗಳಿಂದ ಮುಕ್ತಿ ಹೊಂದಿ, ಸಂಪತ್ತು ಮತ್ತು ಅದೃಷ್ಟವನ್ನು ಪಡೆದುಕೊಳ್ಳುತ್ತಾರೆ. ಶ್ರೀಹರಿಯ ಆ 10 ಶಕ್ತಿಶಾಲಿ ಮಂತ್ರಗಳಾವುವು ಗೊತ್ತೇ..? ಗುರು ಮತ್ತು ಗುರುವಾರದ ಅಧಿಪತಿಯನ್ನು ಭಗವಾನ್ ಮಹಾವಿಷ್ಣು ಎಂದು ಹೇಳಲಾಗುತ್ತದೆ. ಗುರುವಾರ ಭಗವಾನ್ ವಿಷ್ಣುವಿಗೆ ಸಮರ್ಪಿತವಾಗಿದೆ. ವ್ಯಕ್ತಿಯ ಜಾತಕದಲ್ಲಿ ಗುರುದೋಷವಿದ್ದರೆ ಗುರುವಾರದಂದು ಶ್ರೀ ಹರಿ ನಾರಾಯಣ ಮತ್ತು ಬೃಹಸ್ಪತಿ ದೇವರನ್ನು ಪೂಜಿಸುವ ಸಂಪ್ರದಾಯ ಮತ್ತು ಪದ್ಧತಿಯಿದೆ. ಈ ದಿನ ಉಪವಾಸ ವ್ರತವನ್ನು ಮಾಡುವುದರಿಂದ ವ್ಯಕ್ತಿಯ ಜೀವನದ ಎಲ್ಲಾ ಸಮಸ್ಯೆಗಳು ದೂರವಾಗುತ್ತವೆ. ಅಲ್ಲದೇ, ಮನೆಯಲ್ಲಿ ಹಣದ ಕೊರತೆ ಕೂಡ ಇರುವುದಿಲ್ಲ. ಈ ದಿನ ಭಗವಾನ್ ವಿಷ್ಣುವಿನ ಪೂಜೆಯ ಜೊತೆಗೆ ಲಕ್ಷ್ಮೀ ದೇವಿಯನ್ನು ಪೂಜಿಸುವುದು ಕೂಡ ಶ್ರೇಯಸ್ಕರವಾಗಿರುತ್ತದೆ. ಶ್ರೀ ಸಿಗಂದೂರು ಚೌಡೇಶ್ವರಿ ಜ್ಯೋತಿಷ್ಯ ಪೀಠ ಸಿಂಗದೂರು ಚೌಡಮ್ಮನವರ ಉಪಾಸಕರು ನಂ 1ಕೇರಳ ಕೊಳ್ಳೇಗಾಲದ ಮಹಾ…
ದಕ್ಷಿಣ ಆಫ್ರಿಕಾ: ಪೂರ್ವ ಕ್ವಾಜುಲು-ನಟಾಲ್ ಪ್ರಾಂತ್ಯದಲ್ಲಿ ಗುರುವಾರ ಮಿನಿಬಸ್ ಟ್ಯಾಕ್ಸಿ ಮತ್ತು ಟ್ರಕ್ ನಡುವೆ ಸಂಭವಿಸಿದ ಡಿಕ್ಕಿಯಲ್ಲಿ ಕನಿಷ್ಠ 11 ಜನರು ಸಾವನ್ನಪ್ಪಿದ್ದಾರೆ ಎಂದು ಸ್ಥಳೀಯ ಅಧಿಕಾರಿಗಳು ಮತ್ತು ತುರ್ತು ಸೇವೆಗಳು ತಿಳಿಸಿವೆ. ಹಲವಾರು ಸಾವುಗಳು ಮತ್ತು ಗಾಯಗಳಿಗೆ ಕಾರಣವಾದ ಈ ಅಪಘಾತವು ದೇಶದಲ್ಲಿ ಶಾಲಾ ಮಕ್ಕಳನ್ನು ಒಳಗೊಂಡ ಮತ್ತೊಂದು ಮಾರಕ ಅಪಘಾತದ ಒಂದು ವಾರದ ನಂತರ ಸಂಭವಿಸಿದೆ. ಪ್ರಾಂತೀಯ ಸಾರಿಗೆ ಇಲಾಖೆಯ ಅಧಿಕಾರಿ ಸಿಬೊನಿಸೊ ಡುಮಾ ಹೇಳಿಕೆಯಲ್ಲಿ, ಶಾಲಾ ಮಗು ಸೇರಿದಂತೆ 11 ಜನರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ ಎಂದು ತಿಳಿಸಿದ್ದಾರೆ, ಆದರೆ ಅದು ಪ್ರಾಥಮಿಕ ಮಾಹಿತಿಯ ಪ್ರಕಾರ. ಖಾಸಗಿ ಪ್ಯಾರಾಮೆಡಿಕ್ ಸೇವೆ ALS ಪ್ಯಾರಾಮೆಡಿಕ್ಸ್ನ ವಕ್ತಾರ ಗ್ಯಾರಿತ್ ಜೇಮಿಸನ್, ಅವಶೇಷಗಳಡಿ ಸಿಲುಕಿದ್ದ ಮಿನಿಬಸ್ನ ಚಾಲಕ ಸೇರಿದಂತೆ 11 ಜನರು ಸಾವನ್ನಪ್ಪಿದ್ದಾರೆ ಮತ್ತು ಹಲವಾರು ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ತಿಳಿಸಿದ್ದಾರೆ. ವಾರದ ಆರಂಭದಲ್ಲಿ ಜೋಹಾನ್ಸ್ಬರ್ಗ್ನ ನೈಋತ್ಯದಲ್ಲಿ ಮಿನಿಬಸ್ ಟ್ಯಾಕ್ಸಿ ಮತ್ತು ಟ್ರಕ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ 14 ಶಾಲಾ…
ರಾಯಚೂರು: ಜಿಲ್ಲೆಯಲ್ಲಿ ರಾಜ್ಯದಲ್ಲೇ ಬೆಚ್ಚಿ ಬೀಳಿಸೋ ಕೃತ್ಯವೊಂದು ನಡೆದಿದೆ. ತನ್ನ ಪುತ್ರನ ಪತ್ನಿ, ಗರ್ಭಿಣಿ ಸೊಸೆಯನ್ನೇ ಮಾವನೊಬ್ಬ ಚಾಕುವಿನಿಂದ ಕತ್ತು ಸೀಳಿ ಬರ್ಬರವಾಗಿ ಕೊಲೆಗೈದಿರುವಂತ ಘಟನೆ ನಡೆದಿದೆ. ರಾಯಚೂರು ಜಿಲ್ಲೆಯ ಸಿರಿವಾರ ತಾಲ್ಲೂಕಿನ ಕವಿತಾಳ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದಂತ ಘಟನೆಯೊಂದು ತಡವಾಗಿ ಬೆಳಕಿಗೆ ಬಂದಿದೆ. ನಾಲ್ಕು ತಿಂಗಳ ಗರ್ಭಿಣಿ ರೇಖಾ(25) ಎಂಬಾಕೆಯೇ ಮಾವನಿಂದ ಕೊಲೆಯಾದವರಾಗಿದ್ದಾರೆ. ರೇಖಾ ಎರಡು ದಿನಗಳ ಹಿಂದೆ ತವರಿಗೆ ಹೋಗಿದ್ದಳು. ಆ ಬಳಿಕ ಗಂಡನ ಮನೆಗೆ ವಾಪಾಸ್ ಆಗಿದ್ದಾಗ ಮನೆಯಲ್ಲಿ ಯಾರು ಇರಲಿಲ್ಲ. ಕೆಲಸಕ್ಕೆ ಯಾರು ಮನೆಯಲ್ಲಿ ಇಲ್ಲ. ಕೆಲಸ ಮಾಡೋರು ಯಾರು. ನಾನು ಗರ್ಭಿಣಿ ಬೇರೆ. ಕೆಲಸ ಮಾಡೋದಕ್ಕೆ ಕಷ್ಟ. ವೈದ್ಯರು ಬೇಡವೆಂದು ತಿಳಿಸಿದ್ದಾರೆ ಎಂದಿದ್ದಾಳೆ. ಇದೇ ವಿಚಾರಕ್ಕೆ ಮಾವನೊಂದಿಗೆ ಗಲಾಟೆಯಾಗಿದೆ. ಗಲಾಟೆ ತಾರಕಕ್ಕೇರಿದಂತ ಸಂದರ್ಭದಲ್ಲಿ ಗರ್ಭಿಣಿ ಸೊಸೆಯ ಮೇಲೆ ಮಾವ ಮಾರಣಾಂತಿಕವಾಗಿಯೂ ಹಲ್ಲೆ ಮಾಡಿದ್ದಾರೆ. ಮಾವನ ರೌದ್ರಾವತಾರವನ್ನು ಕಂಡಂತ ಗರ್ಭಿಣಿ ರೇಖಾ ಮನೆಯಿಂದ ಹೊರ ಬಂದು ಅಕ್ಕಪಕ್ಕದವರ ಸಹಾಯಕ್ಕೆ ಕೂಗಿದ್ದಾಳೆ. ಅಲ್ಲಿಗೆ ಬಂದಂತ ರೇಖಾ…
ಬೆಂಗಳೂರು: ರಾಜ್ಯ ಸರ್ಕಾರಿ ನೌಕರರಿಗೆ ಖಾದಿ ಪಟ್ಟೆ ಬಳಕೆ ಕಡ್ಡಾಯಗೊಳಿಸಲಾಗಿದೆ. ಇನ್ಮುಂದೆ ತಿಂಗಳ ಮೊದಲ ಶನಿವಾರ ಖಾದಿ ಬಟ್ಟೆ ಧರಿಸಲು ಇಂದಿನ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ನೇತೃತ್ವದ ಸಭೆಯಲ್ಲಿ ನಿರ್ಧಾರ ಕೈಗೊಳ್ಳಲಾಗಿದೆ. ಇಂದು ಈ ಸಂಬಂಧ ಸಿಎಸ್ ಶಾಲಿನಿ ರಜನೀಶ್ ಹಾಗೂ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿಎಸ್ ಷಡಕ್ಷರಿ ಸೇರಿದಂತೆ ಇತರೆ ಅಧಿಕಾರಿಗಳ ನೇತೃತ್ವದಲ್ಲಿ ಸಭೆ ನಡೆಸಲಾಯಿತು. ಈ ಸಭೆಯಲ್ಲಿ ಪ್ರತಿ ತಿಂಗಳ ಮೊದಲ ಶನಿವಾರ ಖಾದಿ ಬಟ್ಟೆ ಧರಿಸಲು ನಿರ್ಧರಿಸಲಾಗಿದೆ. ಸರ್ಕಾರಿ ಸ್ವಾಮ್ಯದ ಖಾದಿ ಗ್ರಾಮೋದ್ಯೋಗ ಮಳಿಗೆಯಲ್ಲಿ ಖಾದಿ ಬಟ್ಟೆ ಖರೀದಿಸಿ. ಖಾದಿ ಗ್ರಾಮೋದ್ಯೋಗ ಮಂಡಳಿ ರಿಯಾಯಿತಿ ನೀಡಬೇಕು. ಈಗ ನೀಡುತ್ತಿರುವ ರಿಯಾಯಿತಿಗಿಂತ ಶೇ.5 ಹೆಚ್ಚುವರಿ ನೀಡಬೇಕು. ಪುರುಷ ನೌಕರರು ಖಾದಿ ಬಟ್ಟೆಯ ಪ್ಯಾಂಟ್, ಶರ್ಟ್, ಓವರ್ ಕೋಟ್ ಹಾಕಬೇಕು. ಮಹಿಳೆಯರು ರೇಷ್ಮೆ ಸೀರೆ, ಚೂಡಿದಾರ ಧರಿಸುವಂತೆ ಸೂಚಿಸಲಾಗಿದೆ. ಏಪ್ರಿಲ್.24ರಂದು ಈ ಯೋಜನೆಗೆ ಸರ್ಕಾರ ಚಾಲನೆ ನೀಡಲಿದೆ. ಆ ಬಳಿಕ ಪ್ರತಿ ತಿಂಗಳ ಮೊದಲ ಶನಿವಾರದಂದು ರಾಜ್ಯ…
ಬೆಂಗಳೂರು: ರಾಜ್ಯದಲ್ಲಿ ವಿಶೇಷ ವಿಧಾನಮಂಡಲದ ಅಧಿವೇಶನ ನಡೆಯುತ್ತಿದೆ. ಇಂತಹ ವಿಶೇಷ ವಿಧಾನಮಂಡಲದ ಜಂಟಿ ಅಧಿವೇಶನವನ್ನು ಫೆಬ್ರವರಿ.4ರವರೆಗೆ ವಿಸ್ತರಿಸಲಾಗಿದೆ. ಇಂದು ವಿಧಾನಸೌಧದಲ್ಲಿ ವಿಧಾನಸಭೆ ಕಾರ್ಯಕಲಾಪ ಸಲಹಾ ಸಮಿತಿಯ ಸಭೆ ನಡೆಯಿತು. ವಿಧಾನಸಭೆ ಸ್ಪೀಕರ್ ಯು.ಟಿ ಖಾದರ್, ಸಿಎಂ ಸಿದ್ಧರಾಮಯ್ಯ, ಸಂಸದೀಯ ವ್ಯವಹಾರ ಸಚಿವ ಹೆಚ್.ಕೆ ಪಾಟೀಲ್, ವಿಪಕ್ಷ ನಾಯಕ ಆರ್.ಅಶೋಕ್, ಸಚಿವ ಕೆ.ಜೆ ಜಾರ್ಜ್ ಸೇರಿ ಹಲವು ಪ್ರಮುಖರು ಭಾಗಿಯಾಗಿದ್ದರು. ಇಂದಿನ ವಿಧಾನಸಭೆ ಕಾರ್ಯಕಲಾಪ ಸಲಹಾ ಸಮಿತಿಯ ಸಭೆಯಲ್ಲಿ ವಿಧಾನಮಂಡಲ ಜಂಟಿ ಅಧಿವೇಶನ ವಿಸ್ತರಣೆಗೆ ನಿರ್ಧಾರ ಕೈಗೊಳ್ಳಲಾಗಿದೆ. ಫೆಬ್ರವರಿ.4ರವರೆಗೆ ವಿಧಾನಮಂಡಲದ ಜಂಟಿ ಅಧಿವೇಶನ ವಿಸ್ತರಣೆಗೆ ನಿರ್ಧರಿಸಲಾಗಿದೆ.
ಬೆಂಗಳೂರು: ಸಚಿವ ಸ್ಥಾನಕ್ಕೆ ಕೆ.ಜೆ ಜಾರ್ಜ್ ರಾಜೀನಾಮೆ ನೀಡಿಲ್ಲ. ರಾಜೀನಾಮೆ ವಿಚಾರಕ್ಕೆ ಜಾರ್ಜ್ ಸ್ಪಷ್ಟನೆ ನೀಡಿದ್ದಾರೆ. ಸಚಿವ ಕೆ.ಜೆ ಜಾರ್ಜ್ ರಾಜೀನಾಮೆ ಎಂಬುದು ಸುಳ್ಳು ಎಂಬುದಾಗಿ ಮುಖ್ಯಮಂತ್ರಿ ಸಿದ್ಧರಾಮಯ್ಯ ವಿಧಾನಸಭೆಯಲ್ಲೇ ಸ್ಪಷ್ಟ ಪಡಿಸಿದ್ದಾರೆ. ಇಂದು ವಿಧಾನಸಭೆ ಕಲಾಪದಲ್ಲಿ ಸಚಿವ ಸ್ಥಾನಕ್ಕೆ ಕೆ.ಜೆ ಜಾರ್ಜ್ ರಾಜೀನಾಮೆ ವಿಚಾರವಾಗಿ ಪ್ರಸ್ತಾಪಿಸಿ ಮಾತನಾಡಿದಂತ ಅವರು ಈ ಹೇಳಿಕೆಯನ್ನು ನೀಡಿದರು. BREAKING: ನಾನು ರಾಜೀನಾಮೆ ಬಗ್ಗೆ ಮಾತನ್ನೇ ಆಡಿಲ್ಲ: ಸಚಿವ ಕೆ.ಜೆ ಜಾರ್ಜ್ ಸ್ಪಷ್ಟನೆ ಬೆಂಗಳೂರು: ನಾನು ಅಸಮಾಧಾನ ಹೊರಹಾಕಿ, ರಾಜೀನಾಮೆಯ ಮಾತನಾಡಿದ್ದೇನೆ ಎಂಬುದು ಸುಳ್ಳು. ಇದು ಮಾಧ್ಯಮಗಳ ಸೃಷ್ಠಿಯಾಗಿದೆ. ನಾನು ಎಲ್ಲಿಯೂ ರಾಜೀನಾಮೆ ಮಾತನ್ನೇ ಆಡಿಲ್ಲ ಎಂಬುದಾಗಿ ಇಂಧನ ಸಚಿವ ಕೆ.ಜೆ ಜಾರ್ಜ್ ಸ್ಪಷ್ಟ ಪಡಿಸಿದ್ದಾರೆ. ಇಂದು ವಿಧಾನಸಭೆಯಲ್ಲೇ ಸದನಕ್ಕೆ ಉತ್ತರಿಸಿದಂತ ಅವರು, ನನ್ನ ಸಹಕಾರ, ಸಹಮತ ಮುಖ್ಯಮಂತ್ರಿ ಸಿದ್ಧರಾಮಯ್ಯಗೆ ಯಾವತ್ತೂ ಇದ್ದೇ ಇರುತ್ತದೆ. ಅದರಲ್ಲಿ ಎರಡು ಮಾತೇ ಇಲ್ಲ. ಇಂದು, ಮುಂದು, ಎಂದೆಂದಿಗೂ ಇರಲಿದೆ ಎಂಬುದಾಗಿ ತಿಳಿಸಿದರು. ಈ ಮೊದಲು ಬೆಳಗ್ಗೆ ಒಂದು, ಮಧ್ಯಾಹ್ನ,…
ಬೆಂಗಳೂರು: ನಾನು ಅಸಮಾಧಾನ ಹೊರಹಾಕಿ, ರಾಜೀನಾಮೆಯ ಮಾತನಾಡಿದ್ದೇನೆ ಎಂಬುದು ಸುಳ್ಳು. ಇದು ಮಾಧ್ಯಮಗಳ ಸೃಷ್ಠಿಯಾಗಿದೆ. ನಾನು ಎಲ್ಲಿಯೂ ರಾಜೀನಾಮೆ ಮಾತನ್ನೇ ಆಡಿಲ್ಲ ಎಂಬುದಾಗಿ ಇಂಧನ ಸಚಿವ ಕೆ.ಜೆ ಜಾರ್ಜ್ ಸ್ಪಷ್ಟ ಪಡಿಸಿದ್ದಾರೆ. ಇಂದು ವಿಧಾನಸಭೆಯಲ್ಲೇ ಸದನಕ್ಕೆ ಉತ್ತರಿಸಿದಂತ ಅವರು, ನನ್ನ ಸಹಕಾರ, ಸಹಮತ ಮುಖ್ಯಮಂತ್ರಿ ಸಿದ್ಧರಾಮಯ್ಯಗೆ ಯಾವತ್ತೂ ಇದ್ದೇ ಇರುತ್ತದೆ. ಅದರಲ್ಲಿ ಎರಡು ಮಾತೇ ಇಲ್ಲ. ಇಂದು, ಮುಂದು, ಎಂದೆಂದಿಗೂ ಇರಲಿದೆ ಎಂಬುದಾಗಿ ತಿಳಿಸಿದರು. ಈ ಮೊದಲು ಬೆಳಗ್ಗೆ ಒಂದು, ಮಧ್ಯಾಹ್ನ, ರಾತ್ರಿಯೊಂದು ನ್ಯೂಸ್ ಬರ್ತಾ ಇತ್ತು. ಈಗ ಕ್ಷಣ ಕ್ಷಣದ ನ್ಯೂಸ್ ಕೊಡೋದೇ ಆಗಿದೆ. ಅವರಿಗೆ ಬ್ರೇಕಿಂಗ್ ಬೇಕು. ಹಾಗಂತ ನಾನು ಅವರನ್ನು ದೂರುತ್ತಿಲ್ಲ. ಯಾವುದೇ ಮಾಧ್ಯಮಗಳಿಗೆ ನಾನು ರಾಜೀನಾಮೆ ಬಗ್ಗೆ ಹೇಳಿಕೆ ನೀಡಿಲ್ಲ. ಎಲ್ಲಿಯೂ ಪ್ರಸ್ತಾಪಿಸಿಯೂ ಇಲ್ಲ. ಇದೆಲ್ಲ ಮಾಧ್ಯಮಗಳ ಸೃಷ್ಠಿಯಾಗಿದೆ ಎಂಬುದಾಗಿ ಸ್ಪಷ್ಟ ಪಡಿಸಿದರು. https://kannadanewsnow.com/kannada/state-government-employees-to-wear-khadi-on-first-saturday-of-every-month-state-government/
ಬೆಂಗಳೂರು: ರಾಜ್ಯದ ಸರ್ಕಾರಿ ನೌಕರರು ಇನ್ಮುಂದೆ ಪ್ರತಿ ತಿಂಗಳ ಮೊದಲ ಶನಿವಾರದಂದು ಖಾದಿ ಬಟ್ಟೆಯನ್ನು ಧರಿಸೋದು ಕಡ್ಡಾಯಗೊಳಿಸಿ ಸಿಎಸ್ ನೇತೃತ್ವದ ಸಭೆಯಲ್ಲಿ ನಿರ್ಧರಿಸಲಾಗಿದೆ. ಇಂದು ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರ ನೇತೃತ್ವದಲ್ಲಿ ನೌಕರರ ಸಂಘದ ಅಧ್ಯಕ್ಷ ಸಿಎಸ್ ಷಡಕ್ಷರಿ ಭಾಗಿಯಾಗಿದ್ದಂತ ಸಭೆಯಲ್ಲಿ ಈ ತೀರ್ಮಾನವನ್ನು ಕೈಗೊಳ್ಳಲಾಗಿದೆ. ಪ್ರತಿ ತಿಂಗಳ ಮೊದಲ ಶನಿವಾರದಂದು ರಾಜ್ಯ ಸರ್ಕಾರಿ ನೌಕರರು ತಪ್ಪದೇ ಖಾದಿ ಬಟ್ಟೆಯನ್ನು ಧರಿಸುವುದು ಕಡ್ಡಾಯಗೊಳಿಸುವಂತ ನಿರ್ಧಾರವನ್ನು ಇಂದಿನ ಸಿಎಸ್ ನೇತೃತ್ವದ ಸಭೆಯಲ್ಲಿ ಕೈಗೊಳ್ಳಲಾಗಿದೆ. ಪುರುಷರು ಖಾದಿ ಪ್ಯಾಂಟ್, ಶರ್ಟ್ ಧರಿಸಬೇಕು. ಓವರ್ ಕೋಟ್ ಹಾಕಬೇಕು. ಮಹಿಳೆಯರು ಖಾದಿ ಸಿಲ್ಕ್ ಸೀರೆ, ಚೂಡಿದಾರ ಧರಿಸಬೇಕು ಎಂಬುದಾಗಿ ಸೂಚಿಸಲು ನಿರ್ಧರಿಸಲಾಗಿದೆ. ಶೀಘ್ರವೇ ಈ ಸಂಬಂಧ ಆದೇಶ ಹೊರ ಬೀಳಲಿದೆ.
ಶಿವಮೊಗ್ಗ: ಫೆಬ್ರವರಿ 3 ರಿಂದ 11ರವರೆಗೆ ಒಂಬತ್ತು ದಿನಗಳ ಕಾಲ ಇತಿಹಾಸ ಪ್ರಸಿದ್ಧ ಸಾಗರ ಶ್ರ್ರೀ ಮಾರಿಕಾಂಬ ಜಾತ್ರೆಯು ನಡೆಯಲಿದೆ. ಈ ಹಿನ್ನಲೆಯಲ್ಲಿ ಇಂದು ಕುಸ್ತಿ ಪಂದ್ಯಾವಳಿಗೆ ಅಂಕಣ ಸಿದ್ಧತೆಗೆ ಶ್ರೀ ಮಾರಿಕಾಂಬ ದೇವಿ ನ್ಯಾಸ ಪ್ರತಿಷ್ಠಾನದ ಅಧ್ಯಕ್ಷ ಕೆ.ಎನ್ ನಾಗೇಂದ್ರ, ಪ್ರಧಾನ ಕಾರ್ಯದರ್ಶಿ ಬಿ.ಗಿರಿಧರ್ ರಾವ್, ಕುಸ್ತಿ ಸಮಿತಿಯ ಸಂಚಾಲಕ ಅಶೋಕ, ಸಹ ಸಂಚಾಲಕ ಶಶಿಕಾಂತ್ ಎಂ.ಎಸ್ ಚಾಲನೆ ನೀಡಿದರು. ಇಂದು ಸಾಗರದ ನೆಹರು ಮೈದಾನದಲ್ಲಿ ಫೆಬ್ರವರಿ 6ರಿಂದ 8ರವರೆಗೆ ನಡೆಯಲಿರುವ ಶ್ರೀ ಮಾರಿಕಾಂಬ ಜಾತ್ರೆಯ ಪ್ರಯುಕ್ತದ ಹಿನ್ನಲೆಯಲ್ಲಿ ಕುಸ್ತಿ ಪಂದ್ಯಾವಳಿಯ ಪೂರ್ವ ಭಾವಿ ಅಂಕಣ ಸಿದ್ಧತೆಗೆ ಚಾಲನೆ ನೀಡಲಾಯಿತು. ಈ ಬಳಿಕ ಮಾತನಾಡಿ ಶ್ರೀ ಮಾರಿಕಾಂಬ ದೇವಿ ನ್ಯಾಸ ಪ್ರತಿಷ್ಠಾನದ ಅಧ್ಯಕ್ಷ ಕೆ.ಎನ್ ನಾಗೇಂದ್ರ ಅವರು, ಫೆಬ್ರವರಿ 6ರಿಂದ ಮೂರು ದಿನಗಳ ಕಾಲ ಮಾರಿ ಜಾತ್ರೆ ಪ್ರಯುಕ್ತ ಕುಸ್ತಿ ಪಂದ್ಯ ಏರ್ಪಡಿಸಲಾಗಿದೆ. ತಾಯಿಯ ಆಶೀರ್ವಾದದಿಂದ ಒಳ್ಳೆಯ ರೀತಿಯಲ್ಲಿ ನಡೆಯಲಿ ಎಂಬುದಾಗಿ ಆಶಿಸಿದರು. ಪ್ರಧಾನ ಕಾರ್ಯದರ್ಶಿ ಗಿರಿಧರ್ ರಾವ್ ಮಾತನಾಡಿ…














