Subscribe to Updates
Get the latest creative news from FooBar about art, design and business.
Author: kannadanewsnow09
ಬೆಂಗಳೂರು: ಮಾಜಿ ಸಚಿವ ಹೆಚ್.ಡಿ ರೇವಣ್ಣಗೆ ಕೋರ್ಟ್ ಬಿಗ್ ರಿಲೀಫ್ ನೀಡಿದೆ. ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಅವರ ವಿರುದ್ಧ ದಾಖಲಾಗಿದ್ದಂತ ಪ್ರಕರಣವನ್ನು ಕೈಬಿಟ್ಟಿದೆ. ಅಲ್ಲದೇ ಕೇಸ್ ರದ್ದುಗೊಳಿಸಿ, ಬಿಗ್ ರಿಲೀಫ್ ನೀಡಿದೆ.. ಈ ಕುರಿತಂತೆ ಬೆಂಗಳೂರಿನ 42ನೇ ಎಸಿಜೆಎಂ ಕೋರ್ಟ್ ವಿಚಾರಣೆ ನಡೆಸಿ, ಇಂದು ಆದೇಶ ಪ್ರಕಟಿಸಿದೆ. ಈ ಪ್ರಕರಣದಲ್ಲಿ ವಿಳಂಬವಾಗಿ ದೂರು ದಾಖಲಾಗಿದೆ ಎಂಬ ಕಾರಣ ನೀಡಿ, ಕೋರ್ಟ್ ಮಾಜಿ ಸಚಿವ ಹೆಚ್.ಡಿ ರೇವಣ್ಣ ವಿರುದ್ಧ ಹೊಳೆನರಸೀಪುರದ ಸಂತ್ರಸ್ತೆ ಸಲ್ಲಿಸಿದ್ದಂತ ಪ್ರಕರಣವನ್ನು ರದ್ದುಗೊಳಿಸಿದೆ. ಅಂದಹಾಗೆ ಮಹಿಳೆ ನೀಡಿದ್ದಂತ ದೂರಿನ ಹಿನ್ನಲೆಯಲ್ಲಿ ಹೊಳೆನರಸೀಪುರ ಪೊಲೀಸ್ ಠಾಣೆಯಲ್ಲಿ ಮಾಜಿ ಸಚಿವ ಹೆಚ್ ಡಿ ರೇವಣ್ಣ ವಿರುದ್ಧ ಐಪಿಸಿ ಸೆಕ್ಷನ್ 354ಎ ಅಡಿಯಲ್ಲಿ ಕೇಸ್ ದಾಖಲಾಗಿತ್ತು. ಎಸ್ಐಟಿ ಅಧಿಕಾರಿಗಳು ಇದರ ತನಿಖೆ ನಡೆಸುತ್ತಿದ್ದರು. ಈ ಮಧ್ಯೆ ಪ್ರಕರಣದಿಂದ ತಮ್ಮನ್ನು ಕೈ ಬಿಡುವಂತೆ ಕೋರ್ಟ್ ಗೆ ಮನವಿ ಮಾಡಿದ್ದರು. ಈ ಪ್ರಕರಣ ಸಂಬಂಧ ವಾದ-ಪ್ರತಿವಾದವನ್ನು ಆಲಿಸಿದಂತ ಕೋರ್ಟ್, ಪ್ರಕರಣದ ವಿಚಾರಣೆಯೂ ಕೂಡ ತಡವಾಗಿದೆ ಎಂಬ ಕಾರಣ…
ಮಕ್ಕಳಿಗೆ ಕೆಂಪು ನೀರಿನ ದೃಷ್ಟಿ ತೆಗೆಯುವುದು ಎಂಬುದು ನಮ್ಮ ಹಳೆಯ ಸಂಪ್ರದಾಯದ ನಂಬಿಕೆ. ಇದನ್ನು ಮಾಡುವುದಕ್ಕೆ ಹೇಳುವ ಕಾರಣಗಳು. ಕೆಂಪು ನೀರಿನ ದೃಷ್ಟಿ ಏಕೆ ತೆಗೆಯುತ್ತಾರೆ? ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ವಿದ್ವಾನ್ ವಿದ್ಯಾಧರ್ ತಂತ್ರಿ ಜ್ಯೋತಿಷ್ಯರ ಮೊಬೈಲ್ ಸಂಖ್ಯೆ 9686268564 ಇವರು ಚೌಡಿ ಉಪಾಸನಾ ಮತ್ತು ಕೇರಳದ ವಿಶಿಷ್ಟ ಅನುಷ್ಠಾನ ಪೂಜೆಗಳಿಂದ ತಮ್ಮಲ್ಲಿ ಉಲ್ಬಣಿಸುವ ಸಕಲ ಸಮಸ್ಯೆಗಳಿಗೆ ಪರಿಹಾರ ಮತ್ತು ಮಾರ್ಗದರ್ಶನ ತಿಳಿಸಿಕೊಡುತ್ತಾರೆ. ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಜಾತಕ ನಿರೂಪಣೆ ಮಾಡುತ್ತಾರೆ. ನಿಮ್ಮ ಸಮಸ್ಯೆಗಳಾದ ಆರೋಗ್ಯ, ಸಂತಾನ, ಸಾಲದ ಬಾಧೆ, ಪ್ರೀತಿಯಲ್ಲಿ ನಂಬಿ ಮೋಸ, ವಿವಾಹ, ಉದ್ಯೋಗದಲ್ಲಿ ತೊಂದರೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ, ದೃಷ್ಟಿ ದೋಷ, ಮನೆಯಲ್ಲಿ ದಟ್ಟದರಿದ್ರ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬದ ಕಷ್ಟ, ಹಣಕಾಸಿನ ಅಡಚಣೆ, ಪ್ರೇಮ ವೈಫಲ್ಯ ಹಾಗೂ ಸ್ತ್ರೀ…
ಬೆಂಗಳೂರು: ಕನ್ನಡದ ಖ್ಯಾತ ಸಿರಿಯಲ್ ನಟಿ ನಂದಿನಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಆ ಮೂಲಕ ಜೀವ ಹೂವಾಗಿದೆ, ಸಂಘರ್ಷ, ನೀನಾದೆ ನಾ ಧಾರವಾಹಿ ನಟಿ ಇನ್ನಿಲ್ಲವಾಗಿದ್ದಾರೆ. ಕೊಟ್ಟೂರಿನ ನಂದಿನಿ ಸಿಎಂ ಅವರು ಧಾರವಾಹಿಗಳ ಮೂಲಕ ತಮ್ಮನ್ನು ಗುರುತಿಸಿಕೊಂಡಿದ್ದ ನಟಿ. ಕನ್ನಡದ ಜೀವ ಹೂವಾಗಿದೆ. ಸಂಘರ್ಷ, ಮಧುಮಗಳು, ನೀನಾದೆ ನಾ ಧಾರವಾಹಿಗಳಲ್ಲಿ ಅವರು ಪೋಷಕ ನಟಿಯಾಗಿ ಕಾಣಿಸಿಕೊಂಡಿದ್ದರು. ಕನ್ನಡವಲ್ಲದೇ ತಮಿಳು, ತೆಲುಗಿನಲ್ಲಿಯೂ ಧಾರವಾಹಿಯಲ್ಲಿ ಕಾಣಿಸಿಕೊಂಡಿದ್ದಂತ ನಟಿ ನಂದಿನಿ ಆಗಿದ್ದಾರೆ. ಗೌರಿ ಧಾರವಾಹಿಯಲ್ಲಿ ವಿಷ ಕುಡಿಯುವ ದೃಶ್ಯದಲ್ಲಿ ಕಾಣಿಸಿಕೊಂಡಿದ್ದಂತ ನಂದಿನಿ, ಇದೀಗ ರಿಯಲ್ ಲೈಫ್ ನಲ್ಲಿಯೂ ಆತ್ಮಹತ್ಯೆಗೆ ಶರಣಾಗಿದ್ದಾರೆ ಎನ್ನಲಾಗಿದೆ. https://kannadanewsnow.com/kannada/ncb-entry-just-as-bengaluru-police-were-preparing-to-bust-a-drug-ring-this-is-how-the-operation-went/ https://kannadanewsnow.com/kannada/harihar-power-outage-in-these-areas-of-honnali-tomorrow/
ಬೆಂಗಳೂರು: ಹೊಸ ವರ್ಷದ ಸಂಭ್ರಮದ ಸಂದರ್ಭದಲ್ಲಿ ಮೆಟ್ರೋ ಸೇವೆ ವಿಸ್ತರಣೆ ಮಾಡಲಾಗಿದೆ. ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತವು ಹೊಸ ವರ್ಷದ ಸಂಭ್ರಮ–2026ರ ಅಂಗವಾಗಿ ಸಾರ್ವಜನಿಕರಿಗೆ ಸುರಕ್ಷಿತ ಹಾಗೂ ಸುಗಮ ಪ್ರಯಾಣವನ್ನು ಒದಗಿಸುವ ಉದ್ದೇಶದಿಂದ ನೇರಳೆ, ಹಸಿರು ಹಾಗೂ ಹಳದಿ ಮಾರ್ಗಗಳಲ್ಲಿ ಮೆಟ್ರೋ ರೈಲು ಸೇವೆಗಳನ್ನು ವಿಸ್ತರಿಸಲಾಗುತ್ತಿದೆ. ಕೊನೆಯ ರೈಲುಗಳು ಹೊರಡುವ ಸಮಯ: 31 ಡಿಸೆಂಬರ್ 2025ರ ಮಧ್ಯರಾತ್ರಿಯ ನಂತರ, ಅಂದರೆ 1ನೇ ಜನವರಿ 2026ರಂದು ಟರ್ಮಿನಲ್ ನಿಲ್ದಾಣಗಳಿಂದ ಹೊರಡುವ ಕೊನೆಯ ಮೆಟ್ರೋ ರೈಲುಗಳ ಸಮಯ ಈ ಕೆಳಕಂಡಂತಿದೆ: ನೇರಳೆ ಮಾರ್ಗ: ವೈಟ್ಫೀಲ್ಡ್ ನಿಂದ ಚಲ್ಲಘಟ್ಟದ ವರೆಗೆ: ಬೆಳಗಿನಜಾವ 1:45ಗಂಟೆಗೆ ಚಲ್ಲಘಟ್ಟ ದಿಂದ ವೈಟ್ಫೀಲ್ಡ್ ವರೆಗೆ: ಬೆಳಗಿನಜಾವ 2:00ಗಂಟೆಗೆ ಹಸಿರು ಮಾರ್ಗ: ಮಾದಾವರ ದಿಂದ ರೇಷ್ಮೆ ಸಂಸ್ಥೆಯ ವರೆಗೆ: ಬೆಳಗಿನಜಾವ 2:00ಗಂಟೆಗೆ ರೇಷ್ಮೆ ಸಂಸ್ಥೆ ಯಿಂದ ಮಾದಾವರದ ವರೆಗೆ: ಬೆಳಗಿನಜಾವ 2:00ಗಂಟೆಗೆ ಹಳದಿ ಮಾರ್ಗ: ಆ.ರ್ವಿ ರಸ್ತೆ ಯಿಂದ ಬೊಮ್ಮಸಂದ್ರದ ವರೆಗೆ: ಬೆಳಗಿನಜಾವ 3:10ಗಂಟೆಗೆ ಬೊಮ್ಮಸಂದ್ರ ದಿಂದ ಆರ್ವಿ ರಸ್ತೆಯ…
ಬೆಂಗಳೂರು: ರಾಜಧಾನಿ ಬೆಂಗಳೂರು ಹೊರವಲಯದಲ್ಲಿ ಪತ್ತೆಯಾಗಿರುವ ಡ್ರಗ್ ಫ್ಯಾಕ್ಟರಿ ಇದೀಗ ದೇಶಾದ್ಯಂತ ಭಾರೀ ಸುದ್ದಿಗೆ ಗ್ರಾಸವಾಗಿದೆ. ಮಹಾರಾಷ್ಟ್ರದಲ್ಲಿನ ಡ್ರಗ್ ದಂಧೆ ಕರ್ನಾಟದತ್ತ ತನ್ನ ಕಬಂಧ ಬಾಹುವನ್ನು ಚಾಚಿರುವ ಬಗ್ಗೆ ಸುಳಿವರಿತ ಬೆಂಗಳೂರು ಪೊಲೀಸರೇ ಭಾರೀ ಕಾರ್ಯಾಚರಣೆಗೆ ತಯಾರಿ ನಡೆಸಿದ್ದರು. ಆ ಹೊತ್ತಿಗೆ ಮಹಾರಾಷ್ಟ್ರ ANTF ಮತ್ತು ಎನ್ಸಿಬಿ ಅಧಿಕಾರಿಗಳು ಬೆಂಗಳೂರು ಪೊಲೀಸರ ಜೊತೆ ಚರ್ಚಿಸಿದರು. ಅದಾಗಲೇ ತಾವು ದಾಳಿಗೆ ತಯಾರಿ ನಡೆಸಿದ್ದ ಬಗ್ಗೆ ಮಾಹಿತಿ ನೀಡಿದ ಬೆಂಗಳೂರು ಪೊಲೀಸರ ಜೊತೆ ಎನ್ಸಿಬಿ ಅಧಿಕಾರಿ ಸಾಥ್ ನೀಡಿದರು. ಈ ಮೂಲಕ ಬೆಂಗಳೂರು ಪೊಲೀಸರ ನೇತೃತ್ವದಲ್ಲೇ ನಡೆದ ಭರ್ಜರಿ ಕಾರ್ಯಾಚರಣೆಯಲ್ಲಿ ಬೃಹತ್ ಡ್ರಗ್ ಜಾಲ ಪತ್ತೆಯಾಗಿದೆ. ಕೇಂದ್ರ ಗುಪ್ತ ದಳದ ಮಾಹಿತಿ ಪ್ರಕಾರ, ಬಾಗಲೂರು ಮತ್ತು ಕೊತ್ತನೂರು ಠಾಣೆಗಳ ಗಡಿ ಭಾಗದಲ್ಲಿ ಡ್ರಗ್ ಹೊಂದಿಸಿಕೊಂಡು ಅದನ್ನು ವಿತರಿಸುವ ಸಂಚು ಈ ಮಾಫಿಯಾದಿಂದ ನಡೆಯುತ್ತಿತ್ತು. ಬೆಂಗಳೂರು ಪೊಲೀಸರ ಕಣ್ಣುತಪ್ಪಿಸಿ ಈ ದಂಧೆ ನಡೆಸುತ್ತಿದ್ದ ಮಾಫಿಯಾ ತಮ್ಮ ನೆಲೆಯನ್ನು ರಾಜ್ಯದಿಂದ ರಾಜ್ಯಕ್ಕೆ ಬದಲಾಯಿಸುತ್ತಿತ್ತು. ಇತ್ತೀಚೆಗಷ್ಟೇ ಬೆಂಗಳೂರು ಹೊರವಲಯದಲ್ಲಿ…
ಬೆಂಗಳೂರು: ಹೊಸ ವರ್ಷ-2026 ಆಚರಣೆ ಪ್ರಯುಕ್ತ ಆಸ್ಪತ್ರೆಗಳಲ್ಲಿ ಕೊಠಡಿ, ಆಂಬ್ಯುಲೆನ್ಸ್ ವಾಹನ ಸೌಲಭ್ಯ ಮತ್ತು ಸಾರ್ವಜನಿಕರಿಗೆ ವೈದ್ಯಕೀಯ ತುರ್ತು ಚಿಕಿತ್ಸೆ ಸೇವೆಗಳನ್ನು ಒದಗಿಸೋದಕ್ಕೆ ರಾಜ್ಯ ಸರ್ಕಾರ ಖಡಕ್ ಆದೇಶ ಮಾಡಿದೆ. ಈ ಕುರಿತಂತೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ನಿರ್ದೇಶಕರು ಆದೇಶ ಮಾಡಿದ್ದು, ದಿನಾಂಕ 31-12-2025 ರಿಂದ 01.01.2026 ರವರೆಗೆ ಹೊಸ ವರ್ಷ-2026 ಆಗಮನದ ಆಚರಣೆ ಸಮಯದಲ್ಲಿ, ಕರ್ನಾಟಕ ರಾಜ್ಯದ ವಿವಿಧ ಸ್ಥಳಗಳಲ್ಲಿ, ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಹಾಗೂ ಸಾರ್ವಜನಿಕರು ಅಸ್ವಸ್ಥಗೊಳ್ಳುವ ಮತ್ತು ವಿವಿಧ ರೀತಿಯ ಆರೋಗ್ಯ ಸಂಬಂಧಿತ ಸಮಸ್ಯೆಗಳಿಗೆ ಸಿಲುಕುವ ಸಾಧ್ಯತೆಗಳಿರುವುದರಿಂದ, ಉಲ್ಲೇಖಿತ ಪತ್ರದ ಪಕಾರ ತುರ್ತು ಕರ್ತವ್ಯಕ್ಕಾಗಿ, ಜಿಲ್ಲಾ ಮಟ್ಟದ ಎಲ್ಲಾ ಆಸ್ಪತ್ರೆಗಳಲ್ಲಿ ಪುರುಷ ಮತ್ತು ಮಹಿಳೆಯರಿಗೆ ಪ್ರತ್ಯೇಕ ಕೊಠಡಿ ವ್ಯವಸ್ಥೆ ಮಾಡಲು ತಿಳಿಸಿದ್ದಾರೆ. ಸದರಿ ಮಹಿಳೆಯರ ಪ್ರತ್ಯೇಕ ಕೊಠಡಿಗೆ ಮಹಿಳಾ ಸಿಬ್ಬಂದಿಯನ್ನು ಚಿಕಿತ್ಸೆಗೆ ನಿಯೋಜಿಸುವುದು ಹಾಗೂ ಆಂಬ್ಯುಲೆನ್ಸ್ ವಾಹನ ಸೌಲಭ್ಯ ಮತ್ತು ಅಗತ್ಯ ಔಷಧಗಳು ಲಭ್ಯವಿರುವಂತೆ ವ್ಯವಸ್ಥೆಗೊಳಿಸಿ ಸಾರ್ವಜನಿಕರಿಗೆ ವೈದ್ಯಕೀಯ ತುರ್ತು ಚಿಕಿತ್ಸೆ ಸೇವೆಗಳನ್ನು…
ದಾವಣಗೆರೆ: ಜಿಲ್ಲೆಯಲ್ಲಿನ ಡ್ರಗ್ಸ್ ಕೇಸ್ ನಲ್ಲಿ ಕಾಂಗ್ರೆಸ್ ಘಟಾನುಘಟಿಗಳ ಬಂಧನ ಮುಂದುವರೆದಿದೆ. ಇದೀಗ ಮತ್ತೊಬ್ಬ ಸಚಿವರ ಪರಮಾಪ್ತ ಪೊಲೀಸರ ಬಲೆಗೆ ಬಿದ್ದಿದ್ದಾನೆ. ಹೌದು ದಾವಣಗೆರೆ ಡ್ರಗ್ಸ್ ಕೇಸಲ್ಲಿ ಕಾಂಗ್ರೆಸ್ ನ ಘಟಾನುಘಟಿಗಳ ಬಂಧನವಾಗಿದೆ. ಮತ್ತೊಬ್ಬ ಸಚಿವರ ಪರಮಾಪ್ತನನ್ನು ದಾವಣಗೆರೆಯಲ್ಲಿ ಪೊಲೀಸರು ಬಲೆಗೆ ಕೆಡವಿದ್ದಾರೆ. ವಸತಿ ಸಚಿವ ಜಮೀರ್ ಅಹ್ಮದ್ ಖಾನ್ ಆಪ್ತ ಅನ್ವರ್ ಬಾಷಾ ಬಂಧಿಸಲಾಗಿದೆ. ಸಿಂಥೆಟಿಕ್ ಡ್ರಗ್ಸ್ ಕೇಸ್ ನಲ್ಲಿ ಈವರೆಗೆ ಒಟ್ಟು 8 ಆರೋಪಿಗಳನ್ನು ಬಂಧಿಸಿದಂತೆ ಆಗಿದೆ. ಡಿಸೆಂಬರ್.23ರಂದು ಡ್ರಗ್ಸ್ ದಂಧೆ ನಡೆಸಿದ್ದ ಗ್ಯಾಂಗ್ ಮೇಲೆ ಪೊಲೀಸರು ದಾಳಿ ನಡೆಸಿದ್ದರು. ಕಾಂಗ್ರೆಸ್ ಮುಖಂಡ ವೇದಮೂರ್ತಿ ಸೇರಿದಂತೆ ನಾಲ್ವರನ್ನು ಪೊಲೀಸರು ಬಂಧಿಸಿದ್ದರು. ಕಾಂಗ್ರೆಸ್ ಮುಖಂಡ, ದಾವಣಗೆರೆ ಉಸ್ತುವಾರಿ ಸಚಿವ ಮಲ್ಲಿಕಾರ್ಜನ್ ಆಪ್ತ. ಬಂಧಿತರಿಂದ 90 ಗ್ರಾಂ ಎಂಡಿಎಂಎ ಡ್ರಗ್ಸ್, ಸಿಂಥೆಟಿಕ್ ಡ್ರಗ್ಸ್ ಸೇರಿ ಲಕ್ಷಾಂತರ ಮೌಲ್ಯದ ಡ್ರಗ್ಸ್ ದಾವಣಗೆರೆ ಪೊಲೀಸರು ವಶಪಡಿಸಿಕೊಂಡಿದ್ದಾರೆ. https://kannadanewsnow.com/kannada/karnatakas-pride-ksrtc-wins-motoring-world-green-mobility-award-2025/ https://kannadanewsnow.com/kannada/harihar-power-outage-in-these-areas-of-honnali-tomorrow/
ಬೆಂಗಳೂರು: ಕರ್ನಾಟಕದ ಸಾರಿಗೆ ಇಲಾಖೆಗೆ ಪ್ರಶಸ್ತಿಯ ಗರಿಮೆ ಮುಡಿಗೇರಿದೆ. ಪ್ರತಿಷ್ಠಿತ ಮೋಟಾರಿಂಗ್ ವರ್ಲ್ಡ್ ಗ್ರೀನ್ ಮೊಬಿಲಿಟಿ ಅವಾರ್ಡ್ಸ್-2025 ಪ್ರಶಸ್ತಿ ಲಭಿಸಿದೆ. ದಿನಾಂಕ: 16-12-2025 ರಂದು ನವದೆಹಲಿಯಲ್ಲಿ ಮೋಟಾರಿಂಗ್ ವರ್ಲ್ಡ್ ಗ್ರೀನ್ ಮೊಬಿಲಿಟಿ ಅವಾರ್ಡ್ಸ್-2025 ನ್ನು ಮೋಟಾರಿಂಗ್ ವರ್ಲ್ಡ್ ಮ್ಯಾಗಜಿನ್ ಆಫ್ ಡೆಲ್ಲಿ ಪ್ರೆಸ್ ಗ್ರೂಪ್ ರವರು ಆಯೋಜಿಸಿದ್ದು, ಸದರಿ ಪ್ರಶಸ್ತಿ ಸಮಾರಂಭದ ಮುಖ್ಯ ಅತಿಥಿಯಾಗಿ ಕೇಂದ್ರ ಸಚಿವರಾದ ನಿತಿನ್ ಗಡ್ಕರಿ, ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಮಂತ್ರಾಲಯ, ನವದೆಹಲಿರವರು ಹಾಗೂ ಹಲವಾರು ಗಣ್ಯವ್ಯಕ್ತಿಗಳು ಭಾಗವಹಿಸಿಸಲಿದ್ದಾರೆ. ಅಂತರರಾಷ್ಟ್ರೀಯ ಮಟ್ಟದಲ್ಲಿ ಗುರುತಿಸಲ್ಪಟ್ಟ ಹವಾಮಾನ ನೀತಿ ತಜ್ಞ ಪ್ರಶಸ್ತಿಗಳನ್ನು ಆಯ್ಕೆ ಮಾಡಿದ್ದು, ಪ್ರಶಸ್ತಿ ಸಮಾರಂಭದಲ್ಲಿ ಕರ್ನಾಟಕ ರಾಜ್ಯವು ಒಟ್ಟು ನಾಲ್ಕು (4) ಪ್ರಶಸ್ತಿಗಳನ್ನು ಪಡೆದುಕೊಂಡಿರುತ್ತಾರೆ. ಪ್ರಶಸ್ತಿಗಳ ವಿವರವು ಕೆಳಕಂಡಂತಿದೆ:- 1) BEST STATE FOR TWO WHEELER EV ADOPTION (SILVER) ಕರ್ನಾಟಕ ರಾಜ್ಯವು ದ್ವಿಚಕ್ರ ವಿದ್ಯುತ್ ಚಾಲಿತ ವಾಹನಗಳ ನೋಂದಣಿ ಹಾಗೂ ವಿದ್ಯುತ್ತೀಕರಣದಲ್ಲಿ ಮೇಲುಗೈ ಸಾಧಿಸಿದ ಕಾರಣ. ಕರ್ನಾಟಕ ಸರ್ಕಾರದ ಸಾರಿಗೆ ಇಲಾಖೆಗೆ…
ಬೆಂಗಳೂರು: ಬಾಣಸವಾಡಿ ಮತ್ತು ಎಸ್.ಎಂ.ವಿ.ಟಿ. ಬೆಂಗಳೂರು ನಿಲ್ದಾಣದಲ್ಲಿ ಕಾಮಗಾರಿಯ ನಿಮಿತ್ತ ರೈಲು ಸೇವೆಯಲ್ಲಿ ಈ ಕೆಳಗಿನ ಬದಲಾವಣೆಗಳು ಜಾರಿಗೆ ಬರಲಿವೆ: ರೈಲುಗಳ ರದ್ದತಿ: * ರೈಲು ಸಂಖ್ಯೆ 06527 ಬಂಗಾರಪೇಟೆ – ಸರ್ ಎಂ ವಿಶ್ವೇಶ್ವರಯ್ಯ ಟರ್ಮಿನಲ್ ಬೆಂಗಳೂರು ಮೆಮು ಸೇವೆಯನ್ನು ದಿನಾಂಕ 03.01.2026 ಮತ್ತು ದಿನಾಂಕ 04.01.2026 ರಂದು ರದ್ದುಗೊಳಿಸಲಾಗುತ್ತದೆ. * ರೈಲು ಸಂಖ್ಯೆ 06528 ಎಸ್.ಎಂ.ವಿ.ಟಿ. ಬೆಂಗಳೂರು – ಬಂಗಾರಪೇಟೆ ಮೆಮು ಸೇವೆಯನ್ನು ದಿನಾಂಕ 04.01.2026 ಮತ್ತು ದಿನಾಂಕ 05.01.2026 ರಂದು ರದ್ದುಗೊಳಿಸಲಾಗುತ್ತದೆ * ರೈಲು ಸಂಖ್ಯೆ 66576 ತುಮಕೂರು – ಬಾಣಸವಾಡಿ ಮೆಮು ಸೇವೆಯನ್ನು ದಿನಾಂಕ 02.01.2026 ಮತ್ತು ದಿನಾಂಕ 03.01.2026 ರಂದು ರದ್ದುಗೊಳಿಸಲಾಗುತ್ತದೆ * ರೈಲು ಸಂಖ್ಯೆ 66575 ಬಾಣಸವಾಡಿ – ತುಮಕೂರು ಮೆಮು ಸೇವೆಯನ್ನು ದಿನಾಂಕ 03.01.2026 ಮತ್ತು ದಿನಾಂಕ 05.01.2026 ರಂದು ರದ್ದುಗೊಳಿಸಲಾಗುತ್ತದೆ * ರೈಲು ಸಂಖ್ಯೆ 66563 ಯಶವಂತಪುರ – ಹೊಸೂರು ಮೆಮು, ರೈಲು ಸಂಖ್ಯೆ 66564 ಹೊಸೂರು- ಯಶವಂತಪುರ ಮೆಮು,…
ದಾವಣಗೆರೆ: ಜಿಲ್ಲೆಯ ಹೊನ್ನಾಳಿ ತಾಲ್ಲೂಕು ವ್ಯಾಪ್ತಿಯಲ್ಲಿ ನಾಳೆ ತುರ್ತು ವಿದ್ಯುತ್ ನಿರ್ವಹಣಾ ಕಾರ್ಯವನ್ನು ಕೈಗೊಳ್ಳುತ್ತಿರುವುದರಿಂದ ಕೆಲ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ ಎಂಬುದಾಗಿ ಬೆಸ್ಕಾಂ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ. ಈ ಕುರಿತಂತೆ ಹೊನ್ನಾಳಿಯ ಬೆಸ್ಕಾಂ ಎಇಇ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದು, 220 ಕೆವಿ ವಿದ್ಯುತ್ ಸ್ವೀಕರಣಾ ಕೇಂದ್ರ ಹೊನ್ನಾಳಿಯಲ್ಲಿರುವ 66 ಕೆ.ವಿ. ಶಕ್ತಿ ಪರಿವರ್ತಕ, 66 ಕೆವಿ ಸಿಟಿ 66ಕೆ.ವಿ. ಬ್ರೇಕರ್, 11 ಕೆ.ವಿ. ಬ್ರೇಕರ್ಗಳ ಮತ್ತು ಇನ್ನಿತರ ಉಪಕರಣಗಳ ತೈ-ಮಾಸಿಕ ನಿರ್ವಹಣೆ ಕೆಲಸಗಳಿಗೆ, ಹಾಟ್ ಸ್ಪಾಟ್ ಗಳನ್ನು ಸರಿಪಡಿಸಲು ಮತ್ತು ಕೇಂದ್ರದ ಡಿಸಿ ಗೌಂಡಿಂಗ್ ಅನ್ನು ಸರಿಪಡಿಸಲು ದಿನಾಂಕ: 30/12/2025 ರಂದು – ಬೆಳಿಗ್ಗೆ 10:30 ರಿಂದ ಸಂಜೆ 05:30 ರವರೆಗೆ 220 ೦ಕೆ.ವಿ ವಿದ್ಯುತ್ ಸ್ವೀಕರಣಾ ಕೇಂದ್ರ ಹೊನ್ನಾಳಿಯಲ್ಲಿನ ಎಲ್ಲಾ ಮಾರ್ಗದಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ ಎಂಬುದಾಗಿ ತಿಳಿಸಿದೆ. ಸದರಿ ವಿದ್ಯುತ್ ಸ್ವೀಕರಣಾ ಕೇಂದ್ರದಲ್ಲಿ ಕೈ-ಮಾಸಿಕ ನಿರ್ವಹಣೆಗಾಗಿ ಮಾರ್ಗಮುಕ್ತತೆ ಪಡೆಯಲು ಬೆ.ವಿ. ಕಂಪನಿ ಅವರಿಂದ ಅನುಮೋದನೆ…














