Subscribe to Updates
Get the latest creative news from FooBar about art, design and business.
Author: kannadanewsnow09
ಚೆನ್ನೈ: 2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶಗಳು ಹೊರಬೀಳುತ್ತಿದ್ದಂತೆ ದಕ್ಷಿಣ ಭಾರತದ ರಾಜಕೀಯದಲ್ಲಿ ಹೊಸ ಸಂಚಲನ ಮೂಡಿದೆ. ದಶಕಗಳ ಕಾಲ ಡಿಎಂಕೆ (DMK) ಜೊತೆಗಿದ್ದ ಕಾಂಗ್ರೆಸ್ ಪಕ್ಷವು, ಈ ಬಾರಿ ಆ ಮೈತ್ರಿಯನ್ನು ಕಡಿದುಕೊಂಡು ನಟ ವಿಜಯ್ ಅವರ ನೇತೃತ್ವದ ‘ತಮಿಳಗ ವೆಟ್ರಿ ಕಳಗಂ’ (TVK) ಜೊತೆ ಕೈಜೋಡಿಸಿರುವುದು ದೊಡ್ಡ ಚರ್ಚೆಗೆ ಗ್ರಾಸವಾಗಿದೆ. ಡಿಎಂಕೆ ಮೈತ್ರಿ ತ್ಯಜಿಸಲು ಕಾಂಗ್ರೆಸ್ ನೀಡಿದ ಕಾರಣಗಳೇನು? ಕಾಂಗ್ರೆಸ್ ಪಕ್ಷದ ಈ ನಿರ್ಧಾರವನ್ನು ಡಿಎಂಕೆ “ದೂರದೃಷ್ಟಿಯಿಲ್ಲದ ನಡೆ” ಎಂದು ಟೀಕಿಸಿದೆ. ಆದರೆ ಕಾಂಗ್ರೆಸ್ ಈ ನಡೆಯನ್ನು ಸಮರ್ಥಿಸಿಕೊಂಡಿದ್ದು, ಇದಕ್ಕೆ ಮುಖ್ಯವಾಗಿ ಎರಡು ಕಾರಣಗಳನ್ನು ನೀಡಿದೆ: ಬಿಜೆಪಿ ಮಿತ್ರಪಕ್ಷಗಳನ್ನು ಅಧಿಕಾರದಿಂದ ದೂರವಿಡುವುದು: ತಮಿಳುನಾಡಿನಲ್ಲಿ ಬಿಜೆಪಿಯ ಪ್ರಭಾವವನ್ನು ತಡೆಯುವುದು ಮತ್ತು ಬಿಜೆಪಿಗೆ ಪರೋಕ್ಷವಾಗಿ ಅಥವಾ ನೇರವಾಗಿ ಬೆಂಬಲ ನೀಡುವ ಶಕ್ತಿಗಳನ್ನು ಅಧಿಕಾರದಿಂದ ದೂರವಿಡುವುದು ಕಾಂಗ್ರೆಸ್ನ ಪ್ರಮುಖ ಉದ್ದೇಶವಾಗಿತ್ತು. ಟಿವಿ ಕೆ ಜೊತೆಗಿನ ಮೈತ್ರಿ ಈ ನಿಟ್ಟಿನಲ್ಲಿ ಹೆಚ್ಚು ಪರಿಣಾಮಕಾರಿ ಎಂದು ಕಾಂಗ್ರೆಸ್ ಭಾವಿಸಿದೆ. ರಾಜಕೀಯ ಅಸ್ತಿತ್ವದ ಮರುಸ್ಥಾಪನೆ: ಡಿಎಂಕೆ ಮೈತ್ರಿಯಲ್ಲಿ…
ಮೈಸೂರು: ಆರ್ಥಿಕ ಹಾಗೂ ಸಾಮಾಜಿಕ ಶಕ್ತಿಗಾಗಿ ಶಿಕ್ಷಣ ಅಗತ್ಯವಾಗಿದ್ದು, ಭೋವಿ ಜನಾಂಗದವರು ಶಿಕ್ಷಣಕ್ಕೆ ಒತ್ತು ನೀಡಬೇಕೆಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಮೈಸೂರು ಜಿಲ್ಲಾಡಳಿತದ ವತಿಯಿಂದ ಮೈಸೂರಿನ ಕಲಾಮಂದಿರದಲ್ಲಿ ಆಯೋಜಿಸಿದ್ದ ಸಿದ್ದರಾಮೇಶ್ವರ ಜಯಂತಿಯನ್ನು ಉದ್ಘಾಟಿಸಿ ಮಾತನಾಡಿದರು. ಉತ್ಪಾದಿಸಿದ ಸಂಪತ್ತಿನ ಸಮಾನ ಹಂಚಿಕೆ ಶ್ರೀ ಸಿದ್ದರಾಮೇಶ್ವರ ಜಯಂತಿಯ ಶುಭ ಕೋರಿದ ಮುಖ್ಯಮಂತ್ರಿಗಳು, ರಾಜ್ಯದಲ್ಲಿ ಸಮಸಮಾಜ ನಿರ್ಮಿಸುವ ಸಂಕಲ್ಪವನ್ನು ಸರ್ಕಾರ ಹೊಂದಿದೆ. ಉತ್ಪಾದಿಸಿದ ಸಂಪತ್ತು ಸಮಾನವಾಗಿ ಹಂಚಿಕೆಯಾಗಿಬೇಕು. ರಾಜ್ಯದ ಸರ್ವರಿಗೂ ಸಮಪಾಲು, ಸಮಬಾಳು ಸಿಗಬೇಕೆಂಬುದೇ ಸರ್ಕಾರದ ಉದ್ದೇಶ. ಸಿದ್ದರಾಮೇಶ್ವವರೂ ಸೇರಿದಂತೆ ಸಂತಮಹಾಶಯರು, ಸಮಾಜದಲ್ಲಿ ಜಾತಿವರ್ಗಗಳ ವ್ಯವಸ್ಥೆಗಳು ತೊಲಗಬೇಕು ಎಂದು ಬಯಸಿದ್ದರು. ಬಸವಾದಿ ಶರಣರು 12 ನೇ ಶತಮಾನದಲ್ಲಿ ಸಮಾನತೆಯ ಸಿದ್ಧಾಂತವನ್ನು ಬೋಧಿಸಿದ್ದರು. ಶೋಷಣೆಗೊಳಗಾದ ಹಾಗೂ ಅವಕಾಶವಂಚಿತ ಸಮುದಾಯಗಳು ಸಂಘಟಿತರಾಗುವ ಸಮ್ಮೇಳನಗಳು ಉತ್ತಮ ಕಾರ್ಯಗಳಾಗಿವೆ ಎಂದರು. ನಾನು ಸಾಮಾಜಿಕ ನ್ಯಾಯದಲ್ಲಿ ನಂಬಿಕೆಯಿರಿಸಿದ್ದೇನೆ ಬಸವಜಯಂತಿಯಂದು ನಾನು 2013 ಮೇ 13 ರಂದು ನಾನು ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡಿದೆ. ಬಸವಣ್ಣನವರು ಬೋಧಿಸಿದಂತೆ ನಾನು…
ಬೆಂಗಳೂರು: “ಅಹಮದಾಬಾದ್ ನಲ್ಲಿ ದೊಡ್ಡ ಕ್ರೀಡಾಂಗಣವಿದೆ, ಹೆಚ್ಚು ಜನ ಸೇರುತ್ತಾರೆ ಎಂಬ ಉದ್ದೇಶದಿಂದ ಐಪಿಎಲ್ ಫೈನಲ್ ಪಂದ್ಯವನ್ನು ಸ್ಥಳಾಂತರ ಮಾಡಿರಬೇಕು. ಶಾಸಕರಿಗೆ ಟಿಕೆಟ್ ವಿತರಣೆಗೂ ಅಂತಿಮ ಪಂದ್ಯ ಸ್ಥಳಾಂತರಕ್ಕೂ ಸಂಬಂಧವಿಲ್ಲ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಹೇಳಿದರು. ಸದಾಶಿವನಗರದ ನಿವಾಸದ ಬಳಿ ಮಾಧ್ಯಮಗಳ ಪ್ರಶ್ನೆಗಳಿಗೆ ಬುಧವಾರ ಪ್ರತಿಕ್ರಿಯೆ ನೀಡಿದರು. ಶಾಸಕರಿಗೆ ಐಪಿಎಲ್ ಟಿಕೆಟ್ ಬೇಡಿಕೆ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿ ನಡೆಯಬೇಕಿದ್ದ ಐಪಿಎಲ್ ಫೈನಲ್ ಪಂದ್ಯವನ್ನು ಅಹಮದಾಬಾದಿಗೆ ಸ್ಥಳಾಂತರಿಸಲಾಗಿದೆ ಎಂಬ ವಿಚಾರವಾಗಿ ಕೇಳಿದಾಗ, “ಬೇರೆ ಕಡೆ ಶೇ 50 ರಷ್ಟು ಮೀಸಲಿರುತ್ತದೆ” ಎಂದರು. ಬಿಸಿಸಿಐ ಟಿಕೆಟ್ ವಿಚಾರಕ್ಕೆ ಸ್ಥಳಾಂತರ ನಿರ್ಧಾರ ಮಾಡಿದ್ದೇವೆ ಎಂದು ಹೇಳಿಕೆ ನೀಡಿರುವ ಬಗ್ಗೆ ಕೇಳಿದಾಗ, “ಅವರು ಈ ರೀತಿ ಹೇಳಿಕೆ ನೀಡಲಿ, ನಾನು ಅದಕ್ಕೆ ಸರಿಯಾದ ಉತ್ತರ ಕೊಡುತ್ತೇನೆ” ಎಂದರು. ಪಕ್ಷದ ತೀರ್ಮಾನದ ಬಗ್ಗೆ ಮಾತನಾಡುವುದಿಲ್ಲ ದಾವಣಗೆರೆಯಲ್ಲಿ ಮುಸ್ಲಿಂ ನಾಯಕರ ಅಮಾನತನ್ನು ವಾಪಸ್ ಪಡೆಯುವ ಸಾಧ್ಯತೆ ಇದೆಯೇ ಎಂದು ಕೇಳಿದಾಗ, “ನಾನು ಈ ಬಗ್ಗೆ ಏನೂ ಮಾತನಾಡುವುದಿಲ್ಲ. ಪಕ್ಷ ಈ…
ಮಂಗಳೂರು: ಇಂಧನ ಸಚಿವರಾದ ಕೆ.ಜೆ. ಜಾರ್ಜ್ ಅವರ ನಿರ್ದೇಶನದಂತೆ, ದಕ್ಷಿಣ ಕನ್ನಡ ಹಾಗೂ ಉಡುಪಿ ಸೇರಿದಂತೆ ಕರಾವಳಿ ಭಾಗದ ಜಿಲ್ಲೆಗಳಿಗೆ ತಡೆರಹಿತ, ಉತ್ತಮ ಗುಣಮಟ್ಟದ ವಿದ್ಯುತ್ ಸೌಲಭ್ಯ ಒದಗಿಸುವ ‘ಕಡಂದಲೆ 𝟰𝟬𝟬ಕೆವಿ ವಿದ್ಯುತ್ ಉಪಕೇಂದ್ರ’ ಕಾಮಗಾರಿಯನ್ನು ಜುಲೈ 𝟭𝟱 ರ ಒಳಗಾಗಿ ಪೂರ್ಣಗೊಳಿಸಲಾಗುವುದು ಎಂದು ಕೆಪಿಟಿಸಿಎಲ್ ವ್ಯವಸ್ಥಾಪಕ ನಿರ್ದೇಶಕರಾದ ಡಾ. ರಾಮ್ ಪ್ರಸಾತ್ ಮನೋಹರ್ ತಿಳಿಸಿದ್ದಾರೆ. ಭೂವ್ಯಾಜ್ಯದ ಕಾರಣದಿಂದಾಗಿ ಕಳೆದ ಮೂರು ವರ್ಷಗಳಿಂದ ದಕ್ಷಿಣ ಕನ್ನಡ ಜಿಲ್ಲೆಯ ಮೂಡಬಿದರೆ ತಾಲ್ಲೂಕಿನ ಕಡಂದಲೆ ಗ್ರಾಮದಲ್ಲಿ 𝟰𝟬𝟬 ಕೆವಿ ಲೈನ್ ಕಾಮಗಾರಿ ಸ್ಥಗಿತಗೊಂಡಿತ್ತು. ಇಂಧನ ಸಚಿವರಾದ ಕೆ.ಜೆ. ಜಾರ್ಜ್ ಹಾಗೂ ಇಂಧನ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ಗೌರವ್ ಗುಪ್ತ ಅವರ ಸತತ ಪ್ರಯತ್ನದಿಂದಾಗಿ ಈ ಎಲ್ಲಾ ಅಡೆತಡೆಗಳನ್ನು ಯಶಸ್ವಿಯಾಗಿ ನಿವಾರಿಸಲಾಗಿದೆ. ಸಚಿವರ ನಿರ್ದೇಶನದ ಮೇರೆಗೆ ಇಂದು ಕೆಪಿಟಿಸಿಎಲ್ ವ್ಯವಸ್ಥಾಪಕ ನಿರ್ದೇಶಕ ಡಾ. ರಾಮ್ ಪ್ರಸಾತ್ ಮನೋಹರ್ ಅವರು ಕಾಮಗಾರಿ ಸ್ಥಳಕ್ಕೆ ಭೇಟಿ ನೀಡಿ ಪ್ರಗತಿ ಪರಿಶೀಲನೆ ನಡೆಸಿ ಮತನಾಡಿದರು. “ಮಂಗಳೂರು ರಾಜ್ಯದ ಪ್ರಮುಖ…
ಬೆಂಗಳೂರು: ರಾಜ್ಯ ಸರ್ಕಾರವು ಇಂದು (ಮೇ 06) ಪೊಲೀಸ್ ಇಲಾಖೆಯಲ್ಲಿ ಪ್ರಮುಖ ವರ್ಗಾವಣೆ ಪ್ರಕ್ರಿಯೆ ನಡೆಸಿದ್ದು, ಮೂವರು ಹಿರಿಯ ಐಪಿಎಸ್ ಅಧಿಕಾರಿಗಳನ್ನು ತಕ್ಷಣದಿಂದ ಜಾರಿಗೆ ಬರುವಂತೆ ನೂತನ ಹುದ್ದೆಗಳಿಗೆ ನೇಮಿಸಿ ಆದೇಶ ಹೊರಡಿಸಿದೆ. ಕರ್ನಾಟಕ ಸರ್ಕಾರದ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ (DPAR) ಈ ಕುರಿತು ಅಧಿಸೂಚನೆ ಹೊರಡಿಸಿದ್ದು, ವರ್ಗಾವಣೆಗೊಂಡ ಅಧಿಕಾರಿಗಳ ವಿವರ ಹೀಗಿದೆ: ೧. ಸಂದೀಪ್ ಪಾಟೀಲ್, ಐಪಿಎಸ್ (KN 2004): ಇಲ್ಲಿಯವರೆಗೆ ಕರ್ನಾಟಕ ರಾಜ್ಯ ಮೀಸಲು ಪೊಲೀಸ್ (KSRP) ವಿಭಾಗದ ಐಜಿಪಿ (Inspector General of Police) ಆಗಿ ಸೇವೆ ಸಲ್ಲಿಸುತ್ತಿದ್ದ ಸಂದೀಪ್ ಪಾಟೀಲ್ ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಉತ್ತರ ವಲಯದ (ಬೆಳಗಾವಿ) ಐಜಿಪಿ ಆಗಿ ವರ್ಗಾವಣೆ ಮಾಡಲಾಗಿದೆ. ಡಾ. ಚೇತನ್ ಸಿಂಗ್ ರಾಥೋರ್ ಅವರ ವರ್ಗಾವಣೆಯಿಂದ ತೆರವಾಗಿದ್ದ ಸ್ಥಾನಕ್ಕೆ ಇವರನ್ನು ನೇಮಿಸಲಾಗಿದೆ. ೨. ಡಾ. ಚೇತನ್ ಸಿಂಗ್ ರಾಥೋರ್, ಐಪಿಎಸ್ (KN 2007): ಬೆಳಗಾವಿ ಉತ್ತರ ವಲಯದ ಐಜಿಪಿ ಆಗಿದ್ದ ಇವರನ್ನು ವರ್ಗಾವಣೆ ಮಾಡಲಾಗಿದ್ದು,…
ಚೆನ್ನೈ: ತಮಿಳುನಾಡು ವಿಧಾನಸಭೆ ಚುನಾವಣೆಯಲ್ಲಿ ಅಭೂತಪೂರ್ವ ಗೆಲುವು ಸಾಧಿಸಿ ಅತಿ ದೊಡ್ಡ ಪಕ್ಷವಾಗಿ ಹೊರಹೊಮ್ಮಿರುವ ತಮಿಳಗ ವೆಟ್ರಿ ಕಳಗಂ (TVK) ಮುಖ್ಯಸ್ಥ, ನಟ ವಿಜಯ್ ಅವರು ಬುಧವಾರ ರಾಜ್ಯಪಾಲ ರಾಜೇಂದ್ರ ವಿಶ್ವನಾಥ್ ಅರ್ಲೇಕರ್ ಅವರನ್ನು ಲೋಕ ಭವನದಲ್ಲಿ ಭೇಟಿಯಾಗಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ್ದಾರೆ. 234 ಸದಸ್ಯ ಬಲದ ತಮಿಳುನಾಡು ವಿಧಾನಸಭೆಯಲ್ಲಿ ಟಿವಿಕೆ ಪಕ್ಷವು 108 ಸ್ಥಾನಗಳನ್ನು ಗೆದ್ದು ಏಕೈಕ ದೊಡ್ಡ ಪಕ್ಷವಾಗಿ ಹೊರಹೊಮ್ಮಿದೆ. ನಟ ವಿಜಯ್ ಅವರು ಸ್ಪರ್ಧಿಸಿದ್ದ ತಿರುಚಿರಾಪಳ್ಳಿ ಪೂರ್ವ ಹಾಗೂ ಪೆರಂಬೂರ್ ಎರಡೂ ಕ್ಷೇತ್ರಗಳಲ್ಲಿ ಭರ್ಜರಿ ಜಯಗಳಿಸಿ, ತಮ್ಮ ಜನಪ್ರಿಯತೆ ಕೇವಲ ಸಿನೆಮಾಗೆ ಮಾತ್ರ ಸೀಮಿತವಲ್ಲ ಎಂದು ಸಾಬೀತುಪಡಿಸಿದ್ದಾರೆ. ಈ ಕುರಿತು ಪ್ರತಿಕ್ರಿಯಿಸಿರುವ ರಾಜ್ಯಪಾಲರು, ಟಿವಿಕೆಯಿಂದ ಸರ್ಕಾರ ರಚನೆಗೆ ಅಧಿಕೃತ ಪತ್ರವನ್ನು ಸ್ವೀಕರಿಸಿರುವುದನ್ನು ಖಚಿತಪಡಿಸಿದ್ದಾರೆ. “ನನಗೆ ಟಿವಿಕೆಯಿಂದ ಪತ್ರ ಬಂದಿದೆ. ಅವರು ಬಹುಮತ ಹೊಂದಿದ್ದು, ಸರ್ಕಾರ ರಚನೆಗೆ ಆಹ್ವಾನಿಸಬೇಕೆಂದು ಕೋರಿದ್ದಾರೆ. ಅವರೊಂದಿಗೆ ಸಂಜೆ ಸಭೆ ನಿಗದಿಯಾಗಿದೆ. ರಾಜ್ಯದಲ್ಲಿ ಹೊಸ ಸರ್ಕಾರವೊಂದು ರಚನೆಯಾಗಲಿದೆ” ಎಂದು ತಿಳಿಸಿದ್ದಾರೆ. ಕಾಂಗ್ರೆಸ್ ಬೆಂಬಲ…
ಕೋಲ್ಕತ್ತಾ: ಪಶ್ಚಿಮ ಬಂಗಾಳದ ರಾಜಕೀಯ ಇತಿಹಾಸದಲ್ಲಿ ಹೊಸ ಅಧ್ಯಾಯ ಬರೆಯಲು ಬಿಜೆಪಿ ಸಜ್ಜಾಗಿದೆ. ರಾಜ್ಯದಲ್ಲಿ ಅಧಿಕಾರದ ಚುಕ್ಕಾಣಿ ಹಿಡಿಯಲಿರುವ ಕೇಸರಿ ಪಡೆ, ನೂತನ ಮುಖ್ಯಮಂತ್ರಿಯ ಪದಗ್ರಹಣ ಸಮಾರಂಭಕ್ಕೆ ದಿನಾಂಕ ಮತ್ತು ಸಮಯವನ್ನು ಅಧಿಕೃತವಾಗಿ ನಿಗದಿಪಡಿಸಿದೆ. ಸಮಾರಂಭದ ವಿವರಗಳು: ಪದಗ್ರಹಣ ದಿನಾಂಕ: ಮೇ 9, 2026 ಸಮಯ: ಬೆಳಿಗ್ಗೆ 11:00 ಗಂಟೆಗೆ ಸ್ಥಳ: ಕೋಲ್ಕತ್ತಾದ ಐತಿಹಾಸಿಕ ಬ್ರಿಗೇಡ್ ಪರೇಡ್ ಮೈದಾನ ಶಾಸಕಾಂಗ ಪಕ್ಷದ ಸಭೆ ಮತ್ತು ಪ್ರಕ್ರಿಯೆ: ನೂತನ ಮುಖ್ಯಮಂತ್ರಿಯನ್ನು ಆಯ್ಕೆ ಮಾಡಲು ಮೇ 8ರಂದು ಸಂಜೆ 4 ಗಂಟೆಗೆ ಬಿಜೆಪಿ ಶಾಸಕಾಂಗ ಪಕ್ಷದ ಮಹತ್ವದ ಸಭೆ ಕರೆಯಲಾಗಿದೆ. ಈ ಸಭೆಯಲ್ಲಿ ಹೈಕಮಾಂಡ್ ನಾಯಕರ ಸಮ್ಮುಖದಲ್ಲಿ ರಾಜ್ಯದ ಮುಂದಿನ ಮುಖ್ಯಮಂತ್ರಿ ಯಾರೆಂಬುದನ್ನು ಅಧಿಕೃತವಾಗಿ ಘೋಷಣೆ ಮಾಡಲಾಗುವುದು. ಸಭೆಯ ಬೆನ್ನಲ್ಲೇ ನಿಯೋಜಿತ ಮುಖ್ಯಮಂತ್ರಿ ಹಾಗೂ ನಾಯಕರು ರಾಜ್ಯಪಾಲರನ್ನು ಭೇಟಿಯಾಗಿ ಸರ್ಕಾರ ರಚನೆಗೆ ಹಕ್ಕು ಮಂಡಿಸಲಿದ್ದಾರೆ. ಸಿಎಂ ರೇಸ್ನಲ್ಲಿರುವ ಪ್ರಮುಖರು: ಬಂಗಾಳದ ಗದ್ದುಗೆ ಏರಲಿರುವ ನಾಯಕ ಯಾರು ಎಂಬ ಕುತೂಹಲ ಎಲ್ಲೆಡೆ ಮನೆ ಮಾಡಿದ್ದು, ಪ್ರಮುಖವಾಗಿ…
ಬೆಂಗಳೂರು: ಡಾ.ರಾಜ್ಕುಮಾರ್ ಅವರ ಸಮಾಧಿ ಜಾಗದ ಕುರಿತಾಗಿ ಶುರುವಾಗಿದ್ದ ವಿವಾದ ಇದೀಗ ಹೊಸ ತಿರುವು ಪಡೆದುಕೊಂಡಿದ್ದು, ನಟ ಚೇತನ್ ಅಹಿಂಸಾ ವಿರುದ್ಧ ಎಫ್ಐಆರ್ ದಾಖಲಾಗಿದೆ. ಚಿತ್ರರಂಗದ ಗಣ್ಯರು ಹಾಗೂ ಅಭಿಮಾನಿಗಳ ತೀವ್ರ ಆಕ್ರೋಶಕ್ಕೆ ಕಾರಣವಾಗಿದ್ದ ಈ ಪ್ರಕರಣವು ಇದೀಗ ಪೊಲೀಸ್ ಠಾಣೆಯ ಮೆಟ್ಟಿಲೇರಿದೆ. ವಿವಾದದ ಮೂಲ ಮತ್ತು ಚೇತನ್ ಪೋಸ್ಟ್ ಏಪ್ರಿಲ್ 24ರಂದು ಡಾ.ರಾಜ್ಕುಮಾರ್ ಅವರ ಹುಟ್ಟುಹಬ್ಬದ ದಿನದಂದು ನಟ ಚೇತನ್ ಅಹಿಂಸಾ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಒಂದನ್ನು ಹಂಚಿಕೊಂಡಿದ್ದರು. ಅದರಲ್ಲಿ ಅವರು, ಡಾ.ರಾಜ್ಕುಮಾರ್ ಸಮಾಧಿಗೆ 2.5 ಎಕರೆ ಜಾಗವನ್ನು ನೀಡಿರುವುದು ಸರಿಯೇ ಎಂದು ಪ್ರಶ್ನಿಸಿದ್ದರು. 21ನೇ ಶತಮಾನದಲ್ಲಿ ಭೂಮಿಯೇ ಪ್ರಮುಖ ಹೋರಾಟದ ವಿಷಯವಾಗಿದ್ದು, ಸರ್ಕಾರ ಸಾರ್ವಜನಿಕರ ಉಪಯೋಗಕ್ಕಾಗಿ ಅದನ್ನು ಬಳಸಬೇಕು. ಮತಗಳ ಲಾಭದ ಉದ್ದೇಶದಿಂದ ಈ ರೀತಿ ಭೂಮಿ ಹಂಚಿಕೆ ಮಾಡಬಾರದು ಎಂದು ಅವರು ಅಭಿಪ್ರಾಯಪಟ್ಟಿದ್ದರು. ಚೇತನ್ ಅವರ ಈ ಹೇಳಿಕೆಯು ಡಾ.ರಾಜ್ಕುಮಾರ್ ಅಭಿಮಾನಿಗಳಲ್ಲಿ ತೀವ್ರ ಅಸಮಾಧಾನವನ್ನು ಉಂಟುಮಾಡಿತ್ತು. ಪೊಲೀಸ್ ಠಾಣೆ ಮೆಟ್ಟಿಲೇರಿದ ವಿವಾದ ಚೇತನ್ ಅವರ ಪೋಸ್ಟ್ನಿಂದ ರೊಚ್ಚಿಗೆದ್ದ…
ಬೆಂಗಳೂರು: ದಾವಣಗೆರೆ ಜಿಲ್ಲೆಯ ಹರಿಹರ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಬಿ.ಪಿ. ಹರೀಶ್ ಅವರಿಗೆ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಬಂಧನ ವಾರಂಟ್ (Warrant) ಹೊರಡಿಸಿದೆ. ಪ್ರಕರಣದ ಹಿನ್ನೆಲೆ: ಶಾಸಕ ಬಿ.ಪಿ. ಹರೀಶ್ ವಿರುದ್ಧ ದಾಖಲಾಗಿದ್ದ ಜಾತಿ ನಿಂದನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಈ ಬೆಳವಣಿಗೆ ನಡೆದಿದೆ. ಈ ಹಿಂದೆ ನಡೆದಿದ್ದ ಪ್ರಕರಣವೊಂದರಲ್ಲಿ ಶಾಸಕರು ಜಾತಿ ನಿಂದನೆ ಮಾಡಿದ್ದಾರೆ ಎಂಬ ಆರೋಪದ ಮೇಲೆ ದೂರು ದಾಖಲಾಗಿತ್ತು. ಈ ಕುರಿತು ವಿಚಾರಣೆ ನಡೆಸುತ್ತಿರುವ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ವಿಚಾರಣೆಗೆ ಹಾಜರಾಗುವಂತೆ ಹಲವು ಬಾರಿ ಸೂಚನೆ ನೀಡಿತ್ತು. ವಾರಂಟ್ ಹೊರಡಿಸಲು ಕಾರಣ: ನ್ಯಾಯಾಲಯದ ಸೂಚನೆಯ ಹೊರತಾಗಿಯೂ ಶಾಸಕ ಬಿ.ಪಿ. ಹರೀಶ್ ಅವರು ವಿಚಾರಣೆಗೆ ಹಾಜರಾಗದೆ ಗೈರುಹಾಜರಾಗಿದ್ದರು. ಇದನ್ನು ಗಂಭೀರವಾಗಿ ಪರಿಗಣಿಸಿದ ನ್ಯಾಯಾಧೀಶರು, ಶಾಸಕರನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸುವಂತೆ ಬಂಧನ ವಾರಂಟ್ ಜಾರಿ ಮಾಡಿದ್ದಾರೆ. ಕಾನೂನು ಪ್ರಕ್ರಿಯೆಗಳಿಗೆ ಗೌರವ ನೀಡದ ಹಿನ್ನೆಲೆಯಲ್ಲಿ ಜನಪ್ರತಿನಿಧಿಗಳ ವಿರುದ್ಧ ಇಂತಹ ಕಠಿಣ ಕ್ರಮ ಕೈಗೊಳ್ಳಲಾಗಿದ್ದು, ಈಗ ಶಾಸಕ ಹರೀಶ್ ಅವರಿಗೆ…
ಚೆನ್ನೈ: ತಮಿಳುನಾಡಿನ ಆರು ದಶಕಗಳ ದ್ರಾವಿಡ ಪಕ್ಷಗಳ (DMK ಮತ್ತು AIADMK) ಪ್ರಾಬಲ್ಯಕ್ಕೆ ಕೊನೆಗೂ ಬ್ರೇಕ್ ಬಿದ್ದಿದೆ. ಅನಿರೀಕ್ಷಿತ ತಿರುವಿನಲ್ಲಿ ನಟ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ (TVK) ಪಕ್ಷವು ರಾಜ್ಯದ ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮುವ ಮೂಲಕ ಐತಿಹಾಸಿಕ ಜಯ ದಾಖಲಿಸಿದೆ. ಆದರೆ, ಈ ಗೆಲುವಿನ ಬೆನ್ನಲ್ಲೇ ಅಧಿಕಾರ ಹಿಡಿಯಲು ಬೇಕಾದ ಮ್ಯಾಜಿಕ್ ನಂಬರ್ ಕೊರತೆಯು ರಾಜ್ಯದಲ್ಲಿ ತೀವ್ರ ರಾಜಕೀಯ ಕುತೂಹಲಕ್ಕೆ ಕಾರಣವಾಗಿದೆ. ಸಂಖ್ಯಾ ಬಲದ ಲೆಕ್ಕಾಚಾರ: ವಿಜಯ್ ಮುಂದಿರುವ ಸವಾಲುಗಳೇನು? 234 ಸದಸ್ಯ ಬಲದ ತಮಿಳುನಾಡು ವಿಧಾನಸಭೆಯಲ್ಲಿ ಅಧಿಕಾರ ಸ್ಥಾಪಿಸಲು 118 ಸ್ಥಾನಗಳ ಅವಶ್ಯಕತೆ ಇದೆ. ಆದರೆ TVK 108 ಸ್ಥಾನಗಳನ್ನು ಗೆದ್ದಿದ್ದು, ಬಹುಮತಕ್ಕೆ ಇನ್ನು 10 ಸ್ಥಾನಗಳ ಕೊರತೆ ಎದುರಿಸುತ್ತಿದೆ. ಸಂಖ್ಯೆಗಳು ಕುಸಿಯುವ ಸಾಧ್ಯತೆ: ವಿಜಯ್ ಅವರು ಪೆರಂಬೂರ್ ಮತ್ತು ತಿರುಚ್ಚಿರಾಪಳ್ಳಿ ಪೂರ್ವ ಎರಡೂ ಕ್ಷೇತ್ರಗಳಲ್ಲಿ ಜಯಗಳಿಸಿದ್ದು, ನಿಯಮದಂತೆ ಒಂದು ಕ್ಷೇತ್ರವನ್ನು ಬಿಟ್ಟುಕೊಡಬೇಕಾಗುತ್ತದೆ. ಒಂದು ವೇಳೆ ಅವರು ತಿರುಚ್ಚಿರಾಪಳ್ಳಿ ಸ್ಥಾನ ಬಿಟ್ಟರೆ TVK ಬಲ 107ಕ್ಕೆ ಕುಸಿಯಲಿದೆ.…














