Author: kannadanewsnow09

ಪಾದಚಾರಿ ಮಾರ್ಗದಲ್ಲಿ ವಾಸಿಸುವ ವ್ಯಕ್ತಿಯಿಂದ ಹಿಡಿದು ಬಂಗಲೆಯಲ್ಲಿ ವಾಸಿಸುವ ಶ್ರೀಮಂತ ಉದ್ಯಮಿಯವರೆಗೆ ಎಲ್ಲರಿಗೂ ಸಾಲದ ಸಮಸ್ಯೆ ಇದೆ. ಆ ಸಾಲದ ಸಮಸ್ಯೆಯು ಪ್ರಮಾಣದಲ್ಲಿ ಬದಲಾಗುತ್ತದೆ ಆದರೆ ಪ್ರತಿಯೊಬ್ಬರಿಗೂ ಒಂದಲ್ಲ ಒಂದು ರೂಪದಲ್ಲಿ ಉಳಿಯುತ್ತದೆ. ಕೆಲವು ಜನರು ಪಾವತಿಸದ ಸಾಲಕ್ಕೆ ಬಡ್ಡಿಯನ್ನು ಪಾವತಿಸುವ ಮೂಲಕ ಬಳಲುತ್ತಿದ್ದಾರೆ. ಈ ಸಂಧರ್ಭದಲ್ಲಿ ಎಂತಹ ಸಾಲದ ಹೊರೆಯಿದ್ದರೂ ಆ ಋಣ ತೀರಿಸಲು ನಾವು ಮಾಡಬಹುದಾದ ಉಪಾಯವೇ ಇಳನೇರ್ ದೀಪಂ. ಈ ಆಧ್ಯಾತ್ಮಿಕ ಪೋಸ್ಟ್‌ನಲ್ಲಿ, ಎಳನೀರನ್ನು ಬಳಸಿ ದೀಪವನ್ನು ಹೇಗೆ ಬೆಳಗಿಸಬೇಕು ಎಂದು ನಾವು ನೋಡಲಿದ್ದೇವೆ . ಶ್ರೀ ಸಿಗಂದೂರು ಚೌಡೇಶ್ವರಿ ಜ್ಯೋತಿಷ್ಯ ಪೀಠ ನಂ 1ಕೇರಳ ಕೊಳ್ಳೇಗಾಲದ ಮಹಾ ಮಾಂತ್ರಿಕ ಜ್ಯೋತಿಷ್ಯರು ವಿದ್ವಾನ್ ವಿದ್ಯಾಧರ್ ತಂತ್ರಿ ನಂ:- 9686268564 ನಂ 1ವಶೀಕರಣ ಸ್ಪೆಷಲಿಸ್ಟ್ ಒಂದು ಕರೆಯಲ್ಲಿ ಪರಿಹಾರ ತಿಳಿಸುತ್ತಾರೆ ತಾವು ಎಷ್ಟೋ ಜ್ಯೋತಿಷ್ಯರಲ್ಲಿ ಕೇಳಿಯು ಪರಿಹಾರ ಸಿಗದೇ ಮನನೊಂದಿದ್ದರೆ ಪರಿಹಾರ ನಿಮ್ಮ ಸಮಸ್ಯೆಗಳಾದ ಅತ್ತೆ-ಸೊಸೆ ಕಿರಿಕಿರಿ, ಪ್ರೀತಿಯಲ್ಲಿ ನಂಬಿ ಮೋಸ, ಇಷ್ಟ ಪಟ್ಟವರು ನಿಮ್ಮಂತೆ ಆಗಲು, ಗಂಡ ಹೆಂಡತಿ ಕಿರಿಕಿರಿ,…

Read More

ಬೆಂಗಳೂರು: ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ ವಾಹನಗಳಲ್ಲಿ ಸಂಚರಿಸುವ ಪ್ರಯಾಣಿಕರು ಟಿಕೇಟನ್ನು ಪಡೆಯದೆ ಅನಧಿಕೃತವಾಗಿ ಪ್ರಯಾಣ ಮಾಡುವವರನ್ನು ಮತ್ತು ಸಂಸ್ಥೆಯ  ಸಾರಿಗೆ ಆದಾಯದ ಸೋರಿಕೆಯನ್ನು ತಡೆಗಟ್ಟುವ ನಿಟ್ಟಿನಲ್ಲಿ, ನಗರದಾದ್ಯಂತ ಸಂಚರಿಸುವ ವಾಹನಗಳನ್ನು ನಮ್ಮ ಸಂಸ್ಥೆಯ  ತನಿಖಾ ತಂಡಗಳು ಡಿಸೆಂಬರ್‌ -2025 ರ ಮಾಹೆಯಲ್ಲಿ ಒಟ್ಟು 18‌,409 ಟ್ರಿಪ್‌ಗಳನ್ನು ತಪಾಸಿಸಿ 2801 ಟಿಕೇಟ್ ರಹಿತ ಪ್ರಯಾಣಿಕರನ್ನು ಪತ್ತೆ ಹಚ್ಚಿ, ಅವರಿಂದ ಒಟ್ಟು ರೂ. 6,34,865/- ದಂಡ ವಸೂಲಿ ಮಾಡಿ ಸಂಸ್ಥೆಯ  ನಿರ್ವಾಹಕರ ವಿರುದ್ಧ 1748 ಪ್ರಕರಣಗಳನ್ನು ದಾಖಲಿಸಿರುತ್ತಾರೆ. ಮಹಿಳಾ ಪ್ರಯಾಣಿಕರಿಗೆಂದೇ ಮೀಸಲಾಗಿರುವ ಆಸನಗಳಲ್ಲಿ ಕುಳಿತು ಪ್ರಯಾಣಿಸಿರುವ 250 ಪುರುಷ  ಪ್ರಯಾಣಿಕರಿಂದ  ಒಟ್ಟು ರೂ. 25,000/- ಅನ್ನು ಮೋಟಾರು ವಾಹನ ಕಾಯ್ದೆ 1988ರ ಕಾಲಂ 177 ಮತ್ತು 94 ರ ಪ್ರಕಾರ ದಂಡ ವಿಧಿಸಲಾಗಿರುತ್ತದೆ. ಒಟ್ಟಾರೆಯಾಗಿ ಡಿಸೆಂಬರ್‌ -2025 ರ ಮಾಹೆಯಲ್ಲಿ 3051 ಪ್ರಯಾಣಿಕರಿಂದ ಒಟ್ಟು ರೂ 6,59,865/-  ದಂಡವನ್ನು ವಸೂಲಿ ಮಾಡಲಾಗಿದೆ. ಪ್ರಯಾಣಿಕರು ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯ ವಾಹನಗಳಲ್ಲಿ ಪ್ರಯಾಣಿಸುವಾಗ ಅಧಿಕೃತ…

Read More

ಕೇರಳ: ಶಿಡ್ಲಘಟ್ಟ ಪೌರಾಯುಕ್ತೆ ಅಮೃತಾ ಗೌಡ ಅವರಿಗೆ ಧಮ್ಕಿ, ಬೆದರಿಕೆ, ಅವಾಚ್ಯ ಶಬ್ದಗಳಿಂದ ನಿಂದಿಸಿದಂತ ಕಾಂಗ್ರೆಸ್ ಮುಖಂಡ ರಾಜೀವ್ ಗೌಡ ಅವರನ್ನು ಕೇರಳದ ಗಡಿಯಲ್ಲಿ ಕೊನೆಗೂ ಪೊಲೀಸರು ಬಂಧಿಸಿದ್ದಾರೆ. ಚಿಕ್ಕಬಳ್ಳಾಪುರದ ಶಿಡ್ಲಘಟ್ಟ ಪೌರಾಯುಕ್ತೆ ಅಮೃತಾ ಗೌಡ ಅವರಿಗೆ ಬ್ಯಾನರ್ ತೆರವು ಸಂಬಂಧ ಕೈ ಮುಖಂಡ ರಾಜೀವ್ ಗೌಡ ಅವಾಚ್ಯ ಶಬ್ದಗಳಿಂದ ನಿಂದಿಸಿ, ಧಮ್ಕಿ ಹಾಕಿದ್ದರು. ಈ ಸಂಬಂಧ ಅವರ ವಿರುದ್ದ ಪೌರಾಯುಕ್ತೆ ದೂರು ನೀಡಿದ್ದರಿಂದ ಎಫ್ಐಆರ್ ದಾಖಲಾಗಿತ್ತು. ದೂರಿನ ಬಳಿಕ ತಲೆಮರೆಸಿಕೊಂಡಿದ್ದಂತ ರಾಜೀವ್ ಗೌಡ ಅವರನ್ನು ಕೊನೆಗೂ ಕೇರಳ ಗಡಿಯಲ್ಲಿ ಪೊಲೀಸರು ಬಂಧಿಸಿರುವುದಾಗಿ ತಿಳಿದು ಬಂದಿದೆ. ಈ ಬಗ್ಗೆ ಹೆಚ್ಚಿನ ಮಾಹಿತಿ ತಿಳಿದು ಬರಬೇಕಿದೆ. ಅಂದಹಾಗೇ ರಾಜೀವ್ ಗೌಡ ವಿರುದ್ಧ ಪೊಲೀಸರು ಲುಕ್ಔಟ್ ನೋಟಿಸ್ ಜಾರಿಗೊಳಿಸಿದ್ದರು. ಇದೀಗ ಕೇರಳ ಗಡಿಯಲ್ಲಿ ರಾಜೀವ್ ಗೌಡ ಬಂಧಿಸಿ ಚಿಕ್ಕಬಳ್ಳಾಪುರಕ್ಕೆ ಪೊಲೀಸರು ಕರೆತರುತ್ತಿದ್ದಾರೆ.

Read More

ಕೇರಳ: ಶಿಡ್ಲಘಟ್ಟ ಪೌರಾಯುಕ್ತೆ ಅಮೃತಾ ಗೌಡ ಅವರಿಗೆ ಧಮ್ಕಿ, ಬೆದರಿಕೆ, ಅವಾಚ್ಯ ಶಬ್ದಗಳಿಂದ ನಿಂದಿಸಿದಂತ ಕಾಂಗ್ರೆಸ್ ಮುಖಂಡ ರಾಜೀವ್ ಗೌಡ ಅವರನ್ನು ಕೇರಳದ ಗಡಿಯಲ್ಲಿ ಕೊನೆಗೂ ಪೊಲೀಸರು ಬಂಧಿಸಿದ್ದಾರೆ. ಚಿಕ್ಕಬಳ್ಳಾಪುರದ ಶಿಡ್ಲಘಟ್ಟ ಪೌರಾಯುಕ್ತೆ ಅಮೃತಾ ಗೌಡ ಅವರಿಗೆ ಬ್ಯಾನರ್ ತೆರವು ಸಂಬಂಧ ಕೈ ಮುಖಂಡ ರಾಜೀವ್ ಗೌಡ ಅವಾಚ್ಯ ಶಬ್ದಗಳಿಂದ ನಿಂದಿಸಿ, ಧಮ್ಕಿ ಹಾಕಿದ್ದರು. ಈ ಸಂಬಂಧ ಅವರ ವಿರುದ್ದ ಪೌರಾಯುಕ್ತೆ ದೂರು ನೀಡಿದ್ದರಿಂದ ಎಫ್ಐಆರ್ ದಾಖಲಾಗಿತ್ತು. ದೂರಿನ ಬಳಿಕ ತಲೆಮರೆಸಿಕೊಂಡಿದ್ದಂತ ರಾಜೀವ್ ಗೌಡ ಅವರನ್ನು ಕೊನೆಗೂ ಕೇರಳ ಗಡಿಯಲ್ಲಿ ಪೊಲೀಸರು ಬಂಧಿಸಿರುವುದಾಗಿ ತಿಳಿದು ಬಂದಿದೆ. ಈ ಬಗ್ಗೆ ಹೆಚ್ಚಿನ ಮಾಹಿತಿ ತಿಳಿದು ಬರಬೇಕಿದೆ. https://kannadanewsnow.com/kannada/another-robbery-in-the-state-gold-shop-robbed-at-gunpoint-in-vijayapura/ https://kannadanewsnow.com/kannada/congress-party-to-occupy-lok-bhavan-tomorrow-protest-led-by-cm-dcm/

Read More

ಮೈಸೂರು: ನೈರುತ್ಯ ರೈಲ್ವೆ ಮೈಸೂರು ವಿಭಾಗವು 77ನೇ ಗಣರಾಜ್ಯೋತ್ಸವವನ್ನು ಮೈಸೂರು ರೈಲ್ವೆ ಕ್ರೀಡಾಂಗಣದಲ್ಲಿ ಅತ್ಯಂತ ಹೆಮ್ಮೆಯೊಂದಿಗೆ ಮತ್ತು ಉತ್ಸಾಹದಿಂದ ಆಚರಿಸಿತು. ಮೈಸೂರು ವಿಭಾಗದ ವಿಭಾಗೀಯ ರೈಲ್ವೆ ವ್ಯವಸ್ಥಾಪಕರಾದ ಮುದಿತ್ ಮಿತ್ತಲ್ ಅವರು ರಾಷ್ಟ್ರಧ್ವಜಾರೋಹಣ ನೆರವೇರಿಸಿ ಸಭೆಯನ್ನುದ್ದೇಶಿಸಿ ಮಾತನಾಡಿದರು. ಈ ಕಾರ್ಯಕ್ರಮದಲ್ಲಿ ಅಧಿಕಾರಿಗಳು, ಸಿಬ್ಬಂದಿ ಹಾಗೂ ಅವರ ಕುಟುಂಬ ಸದಸ್ಯರು ಉತ್ಸಾಹದಿಂದ ಭಾಗವಹಿಸಿದ್ದು, ದೇಶಭಕ್ತಿಯ ವಾತಾವರಣ ತುಂಬಿಕೊಂಡಿತ್ತು. ತಮ್ಮ ಭಾಷಣದಲ್ಲಿ ಡಿಆರ್‌ಎಂ ಅವರು ಮಹಾ ವ್ಯವಸ್ಥಾಪಕರ ಮಟ್ಟದಲ್ಲಿ ಅತಿ ವಿಶಿಷ್ಟ ಸೇವಾ ಪುರಸ್ಕಾರ ಪಡೆದ ಸಿಬ್ಬಂದಿಯನ್ನು ಅಭಿನಂದಿಸಿದರು ಹಾಗೂ ಎಲ್ಲ ಸಿಬ್ಬಂದಿಯ ಸಮೂಹ ಪ್ರಯತ್ನವನ್ನು ಶ್ಲಾಘಿಸಿದರು. ರೈಲುಗಳ ಸಮಯಪಾಲನೆ ಶೇಕಡಾ 89ರಿಂದ 91.68ಕ್ಕೆ ಸುಧಾರಣೆಗೊಂಡಿದೆ ಎಂದು ತಿಳಿಸಿದರು. ಸರಕು ಸಾಗಣೆ ಕ್ಷೇತ್ರದಲ್ಲಿ ಕಳೆದ ವರ್ಷದ ಸಾಧನೆಗಿಂತ ಸುಮಾರು 2% ಹೆಚ್ಚಳ ಕಂಡುಬಂದಿದ್ದು, ದೀರ್ಘ ಮಾರ್ಗದ ಲಾಭದಿಂದಾಗಿ ಆದಾಯವು 9% ಹೆಚ್ಚಾಗಿದೆ ಎಂದು ಹೇಳಿದರು. ಚಿಕ್ಕಜಾಜೂರು–ರಾಯದುರ್ಗ ವಿಭಾಗವನ್ನು 25 ಟನ್ ಆಕ್ಸಲ್ ಲೋಡ್‌ಗೆ ನವೀಕರಿಸಿರುವುದು ಒಂದೇ ರೇಕಿನಲ್ಲಿ ಹೆಚ್ಚು ಸರಕು ಸಾಗಣೆಗೆ ಸಹಕಾರಿಯಾಗಿದೆ ಎಂದು ವಿವರಿಸಿದರು.…

Read More

ಮಂಡ್ಯ: ಮಂಡ್ಯ ಜಿಲ್ಲೆಯ ವ್ಯಾಪ್ತಿಯ ಗ್ರಾಮ ಪಂಚಾಯತ್ ಗಳಲ್ಲಿ ದಿನಾಂಕ:31-10-2017ಕ್ಕೂ ಪೂರ್ವದಲ್ಲಿ ಗ್ರಾಮ ಪಂಚಾಯತ್ ನಿಂದ ನೇಮಕಗೊಂಡು ನೀರುಗಂಟಿ, ಸ್ವಚ್ಛತಗಾರ, ಅಟೆಂಡರ್ ಹುದ್ದೆಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ 590 ಸಿಬ್ಬಂದಿಗಳಿಗೆ ಅನುಮೋದನೆ ನೀಡಲಾಗಿದ್ದು, ಸದರಿ ಸಿಬ್ಬಂದಿಗಳಿಗೆ ಸರ್ ಎಂ. ವಿಶ್ವೇಶ್ವರಯ್ಯ ಕ್ರೀಡಾಂಗಣದಲ್ಲಿ ನಡೆದ ಗಣರಾಜ್ಯೋತ್ಸವ ಸಮಾರಂಭದಲ್ಲಿ ಕೃಷಿ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಚಲುವರಾಯಸ್ವಾಮಿ ಆದೇಶ ಪ್ರತಿ ವಿತರಿಸಿದರು. ಸರ್ಕಾರದ ನಿರ್ದೇಶನದಂತೆ ಗ್ರಾಮ ಪಂಚಾಯತ್ ನ ಅರ್ಹ ಸಿಬ್ಬಂದಿಗಳಿಗೆ ಅನುಮೋದನೆ ನೀಡುವಂತೆ ಸಿಇಓ ಅವರಿಗೆ ಸೂಚಿಸಲಾಗಿತ್ತು. ಸಿಇಓ ಮತ್ತು ಅವರ ತಂಡ ಅತ್ಯಂತ ಪಾರದರ್ಶಕವಾಗಿ ಅನುಮೋದನೆ ಪ್ರಕ್ರಿಯೆ ಪೂರ್ಣಗೊಳಿಸಿದೆ ಎಂದು ತಿಳಿಸಿದರು. ಸರ್ಕಾರದ ಆದೇಶ ಸಂಖ್ಯೆ:ಕೆ.ಪಿ.ಆರ್.ಸಿ/ಜಿಪಿಎ/450/2023, ದಿನಾಂಕ:18-11-2023ರಂತೆ ನೌಕರರ ಅನುಮೋದನೆ ಪ್ರಕ್ರಿಯೆ ಕೈಗೊಳ್ಳಲು ಹಾಗೂ ಅನುಮೋದನೆ ಪ್ರಕ್ರಿಯೆಯನ್ನು ಅತ್ಯಂತ ಪಾರದರ್ಶಕವಾಗಿ ನಡೆಸಲು ಒಟ್ಟು ನಾಲ್ಕು ಹಂತಗಳಲ್ಲಿ ನೌಕರರ ದಾಖಲಾತಿಗಳ ಪರಿಶೀಲನಾ ಕಾರ್ಯವನ್ನು ಹಮ್ಮಿಕೊಳ್ಳಲಾಗಿತ್ತು, ಈ ಪ್ರಕ್ರಿಯೆ ಗೆ ಸಹಕರಿಸಿದ ಜಿಲ್ಲೆಯ ಎಲ್ಲಾ ಶಾಸಕರು ಮತ್ತು ಆಡಳಿತ ವರ್ಗಕ್ಕೆ ಸಿಇಓ ಅವರು ಅಭಿನಂದನೆ…

Read More

ಬೆಂಗಳೂರು; ಕೇಂದ್ರ ಸರ್ಕಾರದ ವಿರುದ್ಧ ಕಾಂಗ್ರೆಸ್ ಜಿ ರಾಮ್ ಜಿ ಸಮರವನ್ನೇ ಸಾರಿದೆ. ಇದೇ ಕಾರಣಕ್ಕೆ ನಾಳೆ ಕಾಂಗ್ರೆಸ್ ಪಕ್ಷದಿಂದ ಲೋಕಭವನ ಚಲೋ ಹಮ್ಮಿಕೊಳ್ಳಲಾಗಿದೆ. ಮುಖ್ಯಮಂತ್ರಿ ಸಿದ್ಧರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಗುತ್ತಿದೆ. ಕಾಂಗ್ರೆಸ್ ಪಕ್ಷದಿಂದ ಜಿ ರಾಮ್ ಜಿ ವಿರುದ್ಧ ಸಮರ ಮುಂದುವರೆದಿದೆ. ನಾಳೆ ಲೋಕಭವನ ಮುತ್ತಿಗೆ ಹಾಕಲು ಪ್ಲ್ಯಾನ್ ಮಾಡಲಾಗಿದೆ. ಇತ್ತ ಕಾಂಗ್ರೆಸ್ ವಿರುದ್ಧ ನಾಳೆ ಬಿಜೆಪಿ, ಜೆಡಿಎಸ್ ಕೂಡ ಪ್ರತಿಭಟನೆ ನಡೆಸಲಿದೆ ಎನ್ನಲಾಗಿದೆ. ಈ ಎಲ್ಲಾ ಕಾರಣದಿಂದಾಗಿ ಮುಂಜಾಗ್ರತಾ ಕ್ರಮವಾಗಿ ಪೊಲೀಸರು ಬಿಗಿ ಪೊಲೀಸ್ ಬಂದೋಬಸ್ತ್ ಅನ್ನು ಲೋಕಭವನದ ಬಳಿಯಲ್ಲಿ ಕೈಗೊಳ್ಳಲಿದ್ದಾರೆ ಎಂಬುದಾಗಿ ತಿಳಿದು ಬಂದಿದೆ. ನಾಳೆ ಕಾಂಗ್ರೆಸ್ ಜಿ ರಾಮ್ ಜಿ ವಿರುದ್ಧ ಪ್ರತಿಭಟನೆ, ಕೈ ಪಕ್ಷದ ವಿರುದ್ಧ ಬಿಜೆಪಿ, ಜೆಡಿಎಸ್ ರಣ ಕಹಳೆ ಯಾವ ಹಂತಕ್ಕೆ ಮುಟ್ಟಲಿದೆ ಎಂಬುದನ್ನು ಕಾದು ನೋಡಬೇಕಿದೆ. https://kannadanewsnow.com/kannada/does-eating-garlic-in-the-morning-really-lower-cholesterol-read-what-the-science-says/ https://kannadanewsnow.com/kannada/three-tourists-rescued-from-drowning-in-gokarna-beach/

Read More

ಹೆಚ್ಚಿನ ಕೊಲೆಸ್ಟ್ರಾಲ್ ಇರುವವರು ತಮ್ಮ ಜೀವನಶೈಲಿಯ ಬಗ್ಗೆ ಬಹಳ ಜಾಗರೂಕರಾಗಿರಬೇಕು. ಏಕೆಂದರೆ ಅದನ್ನು ಕಡಿಮೆ ಮಾಡದಿದ್ದರೆ ಹೃದಯಾಘಾತ ಸೇರಿದಂತೆ ವಿವಿಧ ಹೃದಯ ಸಮಸ್ಯೆಗಳಿಗೆ ಕಾರಣವಾಗಬಹುದು. ವೈದ್ಯರ ಪ್ರಕಾರ, ಔಷಧಿಗಳನ್ನು ತೆಗೆದುಕೊಳ್ಳುವುದರ ಜೊತೆಗೆ, ಕೊಲೆಸ್ಟ್ರಾಲ್ ಮಟ್ಟವನ್ನು ಕಡಿಮೆ ಮಾಡಲು ಹಲವಾರು ನೈಸರ್ಗಿಕ ಮಾರ್ಗಗಳಿವೆ, ಅವುಗಳಲ್ಲಿ ಕೆಲವು ತರಕಾರಿಗಳನ್ನು ತಿನ್ನುವುದು ಸೇರಿವೆ. ಅವುಗಳಲ್ಲಿ ಒಂದು ಬೆಳ್ಳುಳ್ಳಿ. ಹಾಗಾದ್ರೆ ಬೆಳಗ್ಗೆ ಬೆಳ್ಳುಳ್ಳಿ ತಿಂದ್ರೆ ನಿಜವಾಗಿಯೂ ಕೊಲೆಸ್ಟ್ರಾಲ್ ಕಡಿಮೆ ಮಾಡುತ್ತಾ? ವಿಜ್ಞಾನ ಹೇಳೋದೇನು ಅಂತ ಮುಂದೆ ಓದಿ. ಬೆಳ್ಳುಳ್ಳಿ ಆಲಿಸಿನ್ ಎಂದು ಕರೆಯಲ್ಪಡುವ ಜೈವಿಕ ಸಕ್ರಿಯ ಸಂಯುಕ್ತದಿಂದ ತುಂಬಿರುತ್ತದೆ, ಇದು ಈ ಪರಿಣಾಮಕ್ಕೆ ಕೊಡುಗೆ ನೀಡುತ್ತದೆ ಎಂದು ಭಾವಿಸಲಾಗಿದೆ. ಅಲ್ಲದೆ, ನಿಮ್ಮ ಅನಗತ್ಯ ಕೆಟ್ಟ ಕೊಲೆಸ್ಟ್ರಾಲ್ ಅನ್ನು ಕಡಿಮೆ ಮಾಡುವುದರ ಜೊತೆಗೆ, ಬೆಳ್ಳುಳ್ಳಿ ಇತರ ಪ್ರಯೋಜನಗಳನ್ನು ಸಹ ಹೊಂದಿದೆ, ಇದರಲ್ಲಿ ಸುಧಾರಿತ ರೋಗನಿರೋಧಕ ಮಟ್ಟಗಳು, ಕಡಿಮೆ ರಕ್ತದೊತ್ತಡ ಮತ್ತು ಹೆಚ್ಚಿನ ಉತ್ಕರ್ಷಣ ನಿರೋಧಕ ಗುಣಲಕ್ಷಣಗಳು ಸೇರಿವೆ. ಬೆಳ್ಳುಳ್ಳಿ ಕೆಟ್ಟ ಕೊಲೆಸ್ಟ್ರಾಲ್ ಅನ್ನು ಹೇಗೆ ಕಡಿಮೆ ಮಾಡುತ್ತದೆ? ಬೆಳ್ಳುಳ್ಳಿಯ…

Read More

ಉತ್ತರ ಕನ್ನಡ: ಜಿಲ್ಲೆಯ ಗೋಕರ್ಣ ಕಡಲ ಕಿನಾರೆಯಲ್ಲಿ ಮುಳುಗುತ್ತಿದ್ದಂತ ಮೂವರು ಪ್ರವಾಸಿಗರನ್ನು ಲೈಫ್ ಗಾರ್ಡ್ ಸಿಬ್ಬಂದಿಗಳು ರಕ್ಷಣೆ ಮಾಡುವಲ್ಲಿ ಯಶಸ್ವಿಯಾಗಿದ್ದಾರೆ. ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲ್ಲೂಕಿನ ಗೋಕರ್ಣ ಸಮುದ್ರದಲ್ಲಿ ಮುಳುಗುತ್ತಿದ್ದಂತ ಚಿತ್ರದುರ್ಗ ಮೂಲದ ಮನು(23), ಶಿವು(36) ಹಾಗೂ ಕಿರಣ್(26) ಎಂಬುವರನ್ನು ರಕ್ಷಣೆ ಮಾಡಲಾಗಿದೆ. ಚಿತ್ರದುರ್ಗದಿಂದ ಗೋಕರ್ಣಕ್ಕೆ 21 ಜನರು ಪ್ರವಾಸಕ್ಕೆ ತೆರಳಿದ್ದರು. ಲೈಫ್ ಗಾರ್ಡ್ ಸಿಬ್ಬಂದಿ ಎಚ್ಚರಿಕೆ ನೀಡಿದ್ದರೂ ಸಮುದ್ರಕ್ಕೆ ಇಳಿದಿದ್ದರು. ಅಲೆಗಳ ಅಬ್ಬರಕ್ಕೆ ಕೊಚ್ಚಿ ಹೋಗುತ್ತಿದ್ದ ಮೂವರು ಪ್ರವಾಸಿಗರನ್ನು ಲೈಫ್ ಗಾರ್ಡ್ ಸಿಬ್ಬಂದಿ ರಕ್ಷಣೆ ಮಾಡಿದ್ದಾರೆ. https://kannadanewsnow.com/kannada/government-grants-for-school-and-assembly-hall-at-marikamba-temple-in-sagar-mla-gopalakrishna-belur/ https://kannadanewsnow.com/kannada/gift-from-the-state-government-to-the-lakkundi-rithi-family-site-cash-appointment-letter-handed-over/

Read More

ಗದಗ: ಜಿಲ್ಲೆಯ ಲಕ್ಕುಂಡಿಯಲ್ಲಿ ನಿಧಿ ಸಿಕ್ಕಿದ್ದನ್ನು ಸರ್ಕಾರಕ್ಕೆ ನೀಡಿದಂತ ರಿತ್ತಿ ಕುಟುಂಬಕ್ಕೆ ಸರ್ಕಾರ ಬಂಫರ್ ಗಿಫ್ಟ್ ನೀಡಿದೆ. ಮನೆ ನಿರ್ಮಾಣಕ್ಕೆ ನಿವೇಶನ, ಜೊತೆಗೆ 5 ಲಕ್ಷ ನಗದು ಹಾಗೂ ಕಸ್ತೂರೆವ್ವಗೆ ಹೊರಗುತ್ತಿಗೆ ಆಧಾರದಲ್ಲಿ ಕೆಲಸ ನೀಡಿದೆ. ಇಂದು ಸಚಿವ ಹೆಚ್.ಕೆ ಪಾಟೀಲ್ ಅವರು ರಿತ್ತಿ ಕುಟುಂಬಕ್ಕೆ 30X40 ಅಳತೆಯ ನಿವೇಶನ, ಮನೆ ನಿರ್ಮಾಣಕ್ಕೆ 5 ಲಕ್ಷ ನಗದನ್ನು ನೀಡಿದರು. ಇದಲ್ಲದೇ ಕಸ್ತೂರೆವ್ವಗೆ ಹೊರಗುತ್ತಿಗೆ ಆಧಾರದಲ್ಲಿ ಕೆಲಸದ ಆದೇಶ ಪತ್ರವನ್ನು ನೀಡಿದರು. ರತ್ತಿ ಕುಟುಂಬವು ಮನೆ ನಿರ್ಮಾಣಕ್ಕಾಗಿ ಪಾಯ ತೆಗೆಯುತ್ತಿದ್ದಂತ ಸಂದರ್ಭದಲ್ಲಿ ಪುರಾತನ ಬಂಗಾರದ ಮಡಿಕೆ ದೊರೆತಿತ್ತು. ಅದನ್ನು ಸರ್ಕಾರಕ್ಕೆ ಒಪ್ಪಿಸಿದ್ದರು. ಅದೇ ಜಾಗದಲ್ಲಿ ಉತ್ಖನನಗೆ ಪುರಾತತ್ವ ಇಲಾಖೆ ನಿರ್ಧರಿಸಿತ್ತು. ಹೀಗಾಗಿ ಪರ್ಯಾಯ ನಿವೇಶನ ನೀಡುವಂತೆ ಸರ್ಕಾರಕ್ಕೆ ಕುಟುಂಬ ಮನವಿ ಮಾಡಿತ್ತು. ಈ ಹಿನ್ನಲೆಯಲ್ಲಿ ರಿತ್ತಿ ಕುಟುಂಬಕ್ಕೆ ಸಚಿವ ಹೆಚ್.ಕೆ ಪಾಟೀಲ್ ಅವರು ಇಂದು ಕಾರ್ಯಕ್ರಮವೊಂದರಲ್ಲಿ ಸನ್ಮಾನಿಸಿ, ನಿವೇಶನ ಹಂಚಿಕೆ ಪತ್ರ, ರಿತ್ತಿ ಕುಟುಂಬದ ಕಸ್ತೂರೆವ್ವಗೆ ಹೊರಗುತ್ತಿಗೆ ಆಧಾರದಲ್ಲಿ ನೇಮಕಾತಿ ಪತ್ರ ಹಾಗೂ…

Read More