Subscribe to Updates
Get the latest creative news from FooBar about art, design and business.
Author: kannadanewsnow09
ಬೆಂಗಳೂರು: ಬಿಗ್ ಬಾಸ್ ಮಾಜಿ ಸ್ಪರ್ಧಿ ರಜತ್ ಗೆ ಮತ್ತೊಂದು ಸಂಕಷ್ಟ ಎದುರಾಗಿದೆ. ಬೆದರಿಕೆ ಮತ್ತು ನಿಂದನೆ ಆರೋಪದ ಸಂಬಂಧ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ಸಾಮಾಜಿಕ ಕಾರ್ಯದರ್ತ ಗಿರೀಶ್ ಕುಮಾರ್ ಎಂಬುವರು ಕೆ ಆರ್ ಪುರಂ ಪೊಲೀಸ್ ಠಾಣೆಗೆ ತೆರಳಿ ಬಿಗ್ ಬಾಸ್ ಮಾಡಿ ಸ್ಪರ್ಧಿ ರಜತ್ ವಿರುದ್ಧ ಪೋನ್ ಕರೆ ಮುಖಾಂತರ ಬೆದರಿಕೆ ಹಾಕಿರೋದಾಗಿ ಆರೋಪಿಸಿ ದೂರು ನೀಡಿದ್ದರು. ಡಾಗ್ ಸತೀಶ್ ಸ್ನೇಹ ಬಿಡಬೇಕೆಂದು ಬೆದರಿಕೆಯನ್ನು ಒಡ್ಡಲಾಗಿದೆ ಎಂಬುದಾಗಿ ದೂರು ನೀಡಿದ್ದರು. ದೂರುದಾರ ಗಿರೀಶ್ ಕುಮಾರ್ ಗೆ ಕಾರಿನ ಪೋಟೋ ಕಳುಹಿಸಿ ರಜತ್ ಬೆದರಿಕೆ ಹಾಕಿದ್ದರು. ಸರ್ ಇದು ರಜತ್ ಬುಜ್ಜಿ, ಕಾಲ್ ಮಾಡುತ್ತಿದ್ದೇನೆ. ವಾಪಾಸ್ ಕಾಲ್ ಮಾಡ್ತೀರಾ ಇಲ್ಲ, ನಾವೇ ಒಳಗೆ ನುಗ್ಬೇಕಾ ಎಂಬುದಾಗಿ ಮೊಬೈಲ್ ಗೆ ಮೆಸೇಜ್ ಹಾಕಿ ಬೆದರಿಕೆ ಹಾಕಲಾಗಿದೆ ಎಂಬುದಾಗಿ ದೂರಿನಲ್ಲಿ ಉಲ್ಲೇಖಿಸಿದ್ದಾರೆ. ಈ ದೂರು ಆಧರಿಸಿ ಕೆ ಆರ್ ಪುರಂ ಪೊಲೀಸ್ ಠಾಣೆಯಲ್ಲಿ ಮಾಜಿ ಬಿಗ್ ಬಾಸ್ ಸ್ಪರ್ಧಿ ರಜತ್ ವಿರುದ್ಧ…
ಬೆಂಗಳೂರು: ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತ (BMRCL) ಸಾರ್ವಜನಿಕರಿಗೆ ತಿಳಿಸುವುದೇನೆಂದರೆ, ಹಸಿರು ಮಾರ್ಗದ ಆರ್.ವಿ. ರಸ್ತೆ ಮತ್ತು ಜಯನಗರ ಮೆಟ್ರೋ ನಿಲ್ದಾಣಗಳ ನಡುವಿನ ಒಂದು ಭಾಗದಲ್ಲಿ ಮೆಟ್ರೋ ರೈಲು ಸಂಚಾರದ ವೇಗದ ಮೇಲೆ ತಾತ್ಕಾಲಿಕ ನಿರ್ಬಂಧವನ್ನು ವಿಧಿಸಲಾಗಿದೆ. ಮೆಟ್ರೋ ಮಾರ್ಗದ ದೀರ್ಘಕಾಲೀನ ಸುರಕ್ಷತೆ ಮತ್ತು ವಿಶ್ವಾಸಾರ್ಹತೆಯನ್ನು ಕಾಪಾಡಿಕೊಳುವುವ ಉದ್ದೇಶದಿಂದ ಸಪೋರ್ಟ್ ಬೇರಿಂಗ್ ಗಳನ್ನು ಬದಲಾಯಿಸುವ ನಿರ್ವಹಣಾ ಕಾಮಗಾರಿಗಳನ್ನು ನಡೆಸುವ ನಿಟ್ಟಿನಲ್ಲಿ ಈ ಮುನ್ನೆಚ್ಚರಿಕಾ ಕ್ರಮವನ್ನು ಕೈಗೊಳ್ಳಲಾಗಿದೆ. ನಮ್ಮ ಮೆಟ್ರೋದ ಮಾನದಂಡದ ಸುರಕ್ಷತಾ ನಿಯಮಾವಳಿಗಳ ಪ್ರಕಾರ, ಯಾವುದೇ ತಾಂತ್ರಿಕ ಅಂಶಗಳನ್ನು ಗಮನೀಯವಾಗಿ ಪರಿಶೀಲಿಸುವ ಸಂದರ್ಭಗಳಲ್ಲಿ ಕಾರ್ಯಚರಣೆಯ ಸುರಕ್ಷತಾ ದೃಷ್ಟಿಯಿಂದ ರೈಲುಗಳ ವೇಗವನ್ನು ತಾತ್ಕಾಲಿಕವಾಗಿ ನಿಯಂತ್ರಿಸಲಾಗುತ್ತದೆ. ಹಸಿರು ಮಾರ್ಗದ ರೈಲು ಸೇವೆಗಳು ವೇಳಾಪಟ್ಟಿಯಂತೆ ಮುಂದುವರಿಯುತ್ತಿದ್ದು, ಅರ್.ವಿ ರಸ್ತೆ ಮತ್ತು ಜಯನಗರ ನಿಲ್ದಾಣಗಳ ನಡುವೆ ಪ್ರಯಾಣಿಸುವ ಪ್ರಯಾಣಿಕರಿಗೆ ಸ್ವಲ್ಪ ಹೆಚ್ಚುವರಿ ಪ್ರಯಾಣ ಸಮಯ ಅನುಭವವಾಗುವ ಸಾಧ್ಯತೆ ಇದೆ. ಪ್ರಯಾಣಿಕರ ಸುರಕ್ಷತೆಯೇ ಅತ್ಯುನ್ನತ ಆದ್ಯತೆಯಾಗಿದ್ದು, ಇಂತಹ ಕ್ರಮಗಳನ್ನು ಮೆಟ್ರೋ ರೈಲು ಸುರಕ್ಷತಾ ನಿಯಮಾವಳಿಗಳ ಅನುಸಾರವಾಗಿ ಕೈಗೊಳ್ಳಲಾಗುತ್ತದೆ ಎಂಬುದನ್ನು…
ಸಾಲ ಮಾಡಿದವರು ಸಂಕಷ್ಟ ಪಡುವ ಅಗತ್ಯವಿಲ್ಲ. ಕಷ್ಟಕ್ಕೆ ಕೈ ಕೊಡುವ ವ್ಯಕ್ತಿಯೂ ಹೌದು. ಆ ಸಾಲ ಕೊಡುವವರೂ ಮನುಷ್ಯರೇ. ಹಾಗಾಗಿ ಯಾವುದೇ ಸಂದರ್ಭದಲ್ಲೂ ಮನುಷ್ಯರು ಪ್ರಾಣಿಗಳಂತೆ ವರ್ತಿಸಬಾರದು. ಸಾಲಗಾರರೂ ಸಾಲಗಾರರ ಪರಿಸ್ಥಿತಿಯನ್ನು ಅರ್ಥಮಾಡಿಕೊಳ್ಳಬೇಕು. ನಮ್ಮ ಸ್ವಂತ ಸಂಬಂಧಗಳಾಗಲಿ ಅಥವಾ ಸ್ನೇಹಿತರಾಗಲಿ, ಸಾಲವನ್ನು ನೀಡುವಾಗ ಒಬ್ಬರು ಒಳ್ಳೆಯವರಾಗಿ ಕಾಣುತ್ತಾರೆ. ನಮ್ಮ ಕಷ್ಟಕ್ಕೆ ಅದೇ ಸಾಲವನ್ನು ವಾಪಸ್ ಕೇಳಿದಾಗ ನಾವು ಕೆಟ್ಟವರಾಗುತ್ತೇವೆ. ಇದು ಸ್ವಾಭಾವಿಕವಾಗಿ ನಡೆಯಬಹುದಾದ ಸಂಗತಿ. ನಮ್ಮ ಕಷ್ಟದ ಸಮಯ ಅರಿತು ಸರಿಯಾದ ಸಮಯಕ್ಕೆ ಸಹಾಯ ಮಾಡಿದ ಆ ಒಳ್ಳೆಯ ಮನಸ್ಸಿಗಾದರೂ ನಾವು ಹೇಳಿದ ಸಮಯಕ್ಕೆ ಸಾಲ ತೀರಿಸಬೇಕು. ಹಣ ವಾಪಸ್ ಸಿಗದಿದ್ದಾಗ ಫೋನ್ ಎತ್ತದೆ ಓಡಿ ಹೋಗಬೇಡಿ. ಶ್ರೀ ಸಿಗಂದೂರು ಚೌಡೇಶ್ವರಿ ಜ್ಯೋತಿಷ್ಯ ಪೀಠ ನಂ 1ಕೇರಳ ಕೊಳ್ಳೇಗಾಲದ ಮಹಾ ಮಾಂತ್ರಿಕ ಜ್ಯೋತಿಷ್ಯರು ವಿದ್ವಾನ್ ವಿದ್ಯಾಧರ್ ತಂತ್ರಿ ನಂ:- 9686268564 ನಂ 1ವಶೀಕರಣ ಸ್ಪೆಷಲಿಸ್ಟ್ ಒಂದು ಕರೆಯಲ್ಲಿ ಪರಿಹಾರ ತಿಳಿಸುತ್ತಾರೆ ತಾವು ಎಷ್ಟೋ ಜ್ಯೋತಿಷ್ಯರಲ್ಲಿ ಕೇಳಿಯು ಪರಿಹಾರ ಸಿಗದೇ ಮನನೊಂದಿದ್ದರೆ ಪರಿಹಾರ ನಿಮ್ಮ ಸಮಸ್ಯೆಗಳಾದ…
ಬೆಂಗಳೂರು: ಭಾರತೀಯ ಸಂಸ್ಕೃತಿ ಮತ್ತು ಅಡುಗೆ ಮನೆಯಲ್ಲಿ ಅರಿಶಿಣಕ್ಕೆ (Turmeric) ಅತ್ಯಂತ ಪವಿತ್ರ ಹಾಗೂ ಪ್ರಮುಖ ಸ್ಥಾನವಿದೆ. ಕೇವಲ ಬಣ್ಣಕ್ಕಾಗಿ ಬಳಸುವ ಪದಾರ್ಥ ಇದಲ್ಲ; ಬದಲಿಗೆ ಸಾವಿರಾರು ವರ್ಷಗಳಿಂದ ಆಯುರ್ವೇದದಲ್ಲಿ ಇದನ್ನು ‘ಮಹೌಷಧ’ ಎಂದು ಕರೆಯಲಾಗಿದೆ. ಇತ್ತೀಚಿನ ದಿನಗಳಲ್ಲಿ ಪಾಶ್ಚಾತ್ಯ ಜಗತ್ತು ಕೂಡ ಅರಿಶಿಣದ ಮಹತ್ವವನ್ನು ಅರಿತು ‘ಗೋಲ್ಡನ್ ಮಿಲ್ಕ್’ (Golden Milk) ಹೆಸರಿನಲ್ಲಿ ಇದನ್ನು ಅಪ್ಪಿಕೊಳ್ಳುತ್ತಿದೆ. ಅರಿಶಿಣದಲ್ಲಿರುವ ‘ಕುರ್ಕ್ಯುಮಿನ್’ (Curcumin) ಎಂಬ ಅಂಶವು ಅದಕ್ಕೆ ಔಷಧೀಯ ಗುಣಗಳನ್ನು ನೀಡುತ್ತದೆ. ಈ ಲೇಖನದಲ್ಲಿ ಅರಿಶಿಣದ ಹತ್ತು ಹಲವು ಲಾಭಗಳ ಬಗ್ಗೆ ವಿವರವಾಗಿ ತಿಳಿಯೋಣ. 1. ರೋಗನಿರೋಧಕ ಶಕ್ತಿಯ ವರ್ಧಕ (Immunity Booster) ನಮ್ಮ ದೇಹದ ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುವಲ್ಲಿ ಅರಿಶಿಣದ ಪಾತ್ರ ದೊಡ್ಡದು. ಇದರಲ್ಲಿರುವ ಆಂಟಿ-ವೈರಲ್ ಮತ್ತು ಆಂಟಿ-ಬ್ಯಾಕ್ಟೀರಿಯಲ್ ಗುಣಗಳು ಸಣ್ಣಪುಟ್ಟ ಜ್ವರ, ನೆಗಡಿ ಮತ್ತು ಕೆಮ್ಮಿನ ವಿರುದ್ಧ ಹೋರಾಡಲು ಸಹಾಯ ಮಾಡುತ್ತವೆ. ಪ್ರತಿದಿನ ರಾತ್ರಿ ಮಲಗುವ ಮುನ್ನ ಹಾಲಿಗೆ ಚಿಟಿಕೆ ಅರಿಶಿಣ ಬೆರೆಸಿ ಕುಡಿಯುವುದರಿಂದ ಕಾಲೋಚಿತ ಕಾಯಿಲೆಗಳಿಂದ ದೂರವಿರಬಹುದು. 2.…
ಬೆಂಗಳೂರು: ಅಡುಗೆ ಮನೆಯಲ್ಲಿ ಈರುಳ್ಳಿ ಇಲ್ಲದ ಅಡುಗೆಯನ್ನು ಊಹಿಸಿಕೊಳ್ಳುವುದು ಕಷ್ಟ. ಕೇವಲ ರುಚಿಗಷ್ಟೇ ಅಲ್ಲದೆ, ಈರುಳ್ಳಿ ತನ್ನಲ್ಲಿರುವ ಅದ್ಭುತ ಔಷಧೀಯ ಗುಣಗಳಿಂದಾಗಿ ಆರೋಗ್ಯದ ದೃಷ್ಟಿಯಿಂದಲೂ ಅತ್ಯಂತ ಪ್ರಮುಖ ಸ್ಥಾನ ಪಡೆದಿದೆ. ಮುಖ್ಯವಾಗಿ ಹಸಿ ಈರುಳ್ಳಿಯನ್ನು ಸೇವಿಸುವುದರಿಂದ ದೇಹಕ್ಕೆ ಸಿಗುವ ಪ್ರಯೋಜನಗಳು ಅಪಾರ ಎಂದು ತಜ್ಞರು ತಿಳಿಸಿದ್ದಾರೆ. ಪ್ರಮುಖ ಆರೋಗ್ಯ ಪ್ರಯೋಜನಗಳು: ರೋಗ ನಿರೋಧಕ ಶಕ್ತಿ ವರ್ಧನೆ: ಈರುಳ್ಳಿಯಲ್ಲಿ ವಿಟಮಿನ್ ‘ಸಿ’ ಹೇರಳವಾಗಿದ್ದು, ಇದು ದೇಹದ ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ. ಚಳಿಗಾಲದಲ್ಲಿ ಕಾಡುವ ವೈರಸ್ ಮತ್ತು ಸೋಂಕುಗಳ ವಿರುದ್ಧ ಹೋರಾಡಲು ಇದು ಸಹಕಾರಿ. ಮಧುಮೇಹ ನಿಯಂತ್ರಣ: ಈರುಳ್ಳಿಯು ಕಡಿಮೆ ಗ್ಲೈಸೆಮಿಕ್ ಇಂಡೆಕ್ಸ್ ಹೊಂದಿದೆ. ಇದು ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ಇದ್ದಕ್ಕಿದ್ದಂತೆ ಏರಿಕೆಯಾಗದಂತೆ ತಡೆಯುವ ಮೂಲಕ ಮಧುಮೇಹಿಗಳಿಗೆ ವರದಾನವಾಗಿದೆ. ಹೃದಯದ ಆರೋಗ್ಯ: ಈರುಳ್ಳಿಯಲ್ಲಿರುವ ನಾರಿನಂಶ ಮತ್ತು ಆ್ಯಂಟಿ ಆಕ್ಸಿಡೆಂಟ್ಗಳು ಕೆಟ್ಟ ಕೊಲೆಸ್ಟ್ರಾಲ್ ಮಟ್ಟವನ್ನು ತಗ್ಗಿಸುತ್ತವೆ. ಇದರಿಂದ ರಕ್ತದೊತ್ತಡ ನಿಯಂತ್ರಣಕ್ಕೆ ಬಂದು ಹೃದಯಾಘಾತದ ಅಪಾಯ ಕಡಿಮೆಯಾಗುತ್ತದೆ. ಜೀರ್ಣಕ್ರಿಯೆಗೆ ಸಹಕಾರಿ: ಇದರಲ್ಲಿರುವ ನಾರಿನಂಶವು ಜೀರ್ಣಕ್ರಿಯೆಯನ್ನು ಸರಾಗಗೊಳಿಸಿ…
ಬೆಂಗಳೂರು: ಪ್ರಾಚೀನ ಭಾರತದ ಮಹಾನ್ ತಂತ್ರಜ್ಞ, ಅರ್ಥಶಾಸ್ತ್ರಜ್ಞ ಮತ್ತು ಮೌರ್ಯ ಸಾಮ್ರಾಜ್ಯದ ಸ್ಥಾಪಕ ಆಚಾರ್ಯ ಚಾಣಕ್ಯರು ನೀಡಿದ ‘ಚಾಣಕ್ಯ ನೀತಿ’ ಇಂದಿಗೂ ಸಾರ್ವಕಾಲಿಕ ಪ್ರಸ್ತುತತೆಯನ್ನು ಹೊಂದಿದೆ. ಮನುಷ್ಯ ತನ್ನ ಜೀವನದಲ್ಲಿ ಯಶಸ್ಸು ಗಳಿಸಲು ಮತ್ತು ಸಂಕಷ್ಟಗಳಿಂದ ಪಾರಾಗಲು ಚಾಣಕ್ಯರು ಹತ್ತು ಹಲವು ಜೀವನ ಪಾಠಗಳನ್ನು ಬೋಧಿಸಿದ್ದಾರೆ. ಯಶಸ್ಸಿನ ರಹಸ್ಯಗಳು: ಚಾಣಕ್ಯರ ಪ್ರಕಾರ, ಯಶಸ್ಸು ಗಳಿಸಲು ಕಠಿಣ ಪರಿಶ್ರಮ ಮತ್ತು ನಿರಂತರ ಕಲಿಕೆ ಅತ್ಯಗತ್ಯ. “ಜ್ಞಾನವು ಜಗತ್ತಿನ ಅತ್ಯಂತ ದೊಡ್ಡ ಸಂಪತ್ತು, ಅದನ್ನು ಯಾರೂ ಕಸಿದುಕೊಳ್ಳಲು ಸಾಧ್ಯವಿಲ್ಲ” ಎಂಬುದು ಅವರ ದೃಢ ನಂಬಿಕೆಯಾಗಿತ್ತು. ಸಮಯದ ಮಹತ್ವವನ್ನು ಅರಿತು, ಶಿಸ್ತಿನಿಂದ ಕೆಲಸ ಮಾಡುವವರು ಮಾತ್ರ ಉನ್ನತ ಸ್ಥಾನಕ್ಕೇರಬಲ್ಲರು ಎಂದು ಅವರು ವಿವರಿಸಿದ್ದಾರೆ. ಜೀವನದಲ್ಲಿ ಪಾಲಿಸಬೇಕಾದ ಎಚ್ಚರಿಕೆಗಳು: ಗೌಪ್ಯತೆ ಕಾಪಾಡಿ: ನಿಮ್ಮ ದೌರ್ಬಲ್ಯಗಳು ಮತ್ತು ಭವಿಷ್ಯದ ಯೋಜನೆಗಳನ್ನು ಎಂದಿಗೂ ಇತರರ ಮುಂದೆ ಬಹಿರಂಗಪಡಿಸಬಾರದು; ಇಲ್ಲವಾದಲ್ಲಿ ಶತ್ರುಗಳು ಇದರ ಲಾಭ ಪಡೆಯಬಹುದು. ಮೌನದ ಮಹತ್ವ: ಕೆಲವೊಂದು ನಿರ್ದಿಷ್ಟ ಸಂದರ್ಭಗಳಲ್ಲಿ ಮಾತನಾಡುವುದಕ್ಕಿಂತ ಮೌನವಾಗಿರುವುದೇ ಲೇಸು ಎಂದು ಅವರು ತಿಳಿಸಿದ್ದಾರೆ.…
ಬೆಂಗಳೂರು; 2026-27 ನೇ ಆಯವ್ಯಯದಲ್ಲಿ ರಾಜ್ಯದ ಜನರ ಭರವಸೆಗಳನ್ನು ಈಡೇರಿಸುವ ಜೊತೆಗೆ ವಿತ್ತೀಯ ಶಿಸ್ತನ್ನೂ ಪಾಲಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಗೃಹ ಕಛೇರಿ ಕೃಷ್ಣಾದಲ್ಲಿ 2026 – 2027ನೇ ಸಾಲಿನ ಬಜೆಟ್ ಕುರಿತಾಗಿ ಮಾಧ್ಯಮಗೋಷ್ಠಿ ನೆಡೆಸಿ ಮಾತನಾಡಿದರು. 2017 ರಲ್ಲಿ ಜಿಎಸ್ ಟಿ ಜಾರಿಗೆ ಬಂದಿದ್ದು, 8 ವರ್ಷಗಳ ನಂತರ ದರ ತರ್ಕಬದ್ಧಗೊಳಿಸಿದರು. ಇದರಿಂದ ಶೇ.10 ರಷ್ಟಿದ್ದ ರಾಜ್ಯದ ತೆರಿಗೆ ಸಂಗ್ರಹಣೆ, ಈಗ ಶೇ. 4 ಕ್ಕೆ ಇಳಿದಿದೆ. ಕೆಲವು ರಾಜ್ಯಗಳು ಕೇಂದ್ರದ ಈ ನಿರ್ಧಾರದಿಂದ ದರಪರಿಷ್ಕರಣೆಯಿಂದ ತೊಂದರೆಗೊಳಗಾಗಿದ್ದು, ಇದುವರೆಗೂ ಚೇತರಿಸಿಕೊಂಡಿಲ್ಲ. ಜಿಎಸ್ ಟಿ ಸಂಗ್ರಹಣೆಯಲ್ಲಿ ಮಹಾರಾಷ್ಟ್ರ ನಂತರ ಕರ್ನಾಟಕ ಎರಡನೇ ಸ್ಥಾನದಲ್ಲಿದೆ. ಕೇಂದ್ರದ ಈ ಹೊಸ ನೀತಿಯಿಂದ ಸುಮಾರು ರಾಜ್ಯಕ್ಕೆ ಸುಮಾರು 10 ಸಾವಿರ ಕೋಟಿಯಷ್ಟು ನಷ್ಟವಾಗಿದೆ. ಮುಂದಿನ ವರ್ಷ 15000 ಕೋಟಿ ಯಷ್ಟು ನಷ್ಟವಾಗಲಿದೆ. ಕೇಂದ್ರ ಸರ್ಕಾರದ ಅಸಹಕಾರ ಮತ್ತು ಮಲತಾಯಿ ಧೋರಣೆ ತೋರುತ್ತಿದೆ. ನಮ್ಮ ಬಜೆಟ್ನಲ್ಲಿ ಹೆಚ್ಚು ವಿತ್ತೀಯ ಶಿಸ್ತಿನ ಉಲ್ಲಂಘನೆಯಾಗಿಲ್ಲ ಎಂದು…
ಬೆಂಗಳೂರು: ದೇಶಾದ್ಯಂತ ಅನುಷ್ಠಾನಗೊಳ್ಳುತ್ತಿರುವ ‘ಮಿಷನ್ ಏಡ್ಸ್ ಸುರಕ್ಷಾ’ ಯೋಜನೆಯ ಭಾಗವಾಗಿ, ರಾಷ್ಟ್ರೀಯ ಏಡ್ಸ್ ನಿಯಂತ್ರಣ ಸಂಸ್ಥೆಯು (NACO) ಬೆಂಗಳೂರಿನಲ್ಲಿ ನಾಳೆ ‘ಸುರಕ್ಷಾ ಸಂಕಲ್ಪ ಕಾರ್ಯಗಾರ’ವನ್ನು ಆಯೋಜಿಸಿದೆ. ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯದ ಹೆಚ್ಚುವರಿ ಕಾರ್ಯದರ್ಶಿ ಹಾಗೂ NACO ಮಹಾನಿರ್ದೇಶಕರಾದ ಡಾ.ರಾಕೇಶ್ ಗುಪ್ತಾ ಅವರ ಅಧ್ಯಕ್ಷತೆಯಲ್ಲಿ ಕಾರ್ಯಗಾರ ಆಯೋಜಿಸಲಾಗಿದೆ. ಪ್ರಮುಖ ಉದ್ದೇಶಗಳು: 1ನೇ ಡಿಸೆಂಬರ್ 2027 ರ ವೇಳೆಗೆ ಎಚ್ಐವಿ ಸಾಂಕ್ರಾಮಿಕದ ಮೇಲೆ ಸಂಪೂರ್ಣ ನಿಯಂತ್ರಣ ಸಾಧಿಸುವುದು ಮತ್ತು 2030ರ ವೇಳೆಗೆ ಏಡ್ಸ್ ಅನ್ನು ಸಾರ್ವಜನಿಕ ಆರೋಗ್ಯದ ಭೀತಿಯಿಂದ ಮುಕ್ತಗೊಳಿಸುವ ವಿಶ್ವಸಂಸ್ಥೆಯ ಗುರಿಯನ್ನು ತಲುಪಲು ಭಾರತವು ಹೊಂದಿರುವ ಅಂತಾರಾಷ್ಟ್ರೀಯ ಬದ್ಧತೆಯ ಗುರಿ ಸಾಧಿಸುವ ನಿಟ್ಟಿನಲ್ಲಿ ಈ ಕಾರ್ಯಗಾರವು ಅತ್ಯಂತ ನಿರ್ಣಾಯಕವಾಗಿದೆ. ದೇಶಾದ್ಯಂತ ಆಯೋಜಿಸಲಾಗುತ್ತಿರುವ 12 ಪ್ರಾದೇಶಿಕ ಕಾರ್ಯಾಗಾರಗಳ ಪೈಕಿ ಬೆಂಗಳೂರಿನ ಆಯೋಜಿಸುತ್ತಿರುವ ಈ ಕಾರ್ಯಕ್ರಮವು ಸರಣಿಯ ಭಾಗವಾಗಿದೆ. ಜಿಲ್ಲಾ ಮಟ್ಟದಲ್ಲಿ ಹೊಣೆಗಾರಿಕೆಯನ್ನು ಹೆಚ್ಚಿಸುವುದು ಮತ್ತು ವಿವಿಧ ಇಲಾಖೆಗಳ ನಡುವೆ ಸಮನ್ವಯತೆಯನ್ನು ಬಲಪಡಿಸುವುದು ಇದರ ಕಾರ್ಯಗಾರದ ಉದ್ದೇಶವಾಗಿದೆ. ಈ ಯೋಜನೆಯಡಿ ದೇಶದ 18 ರಾಜ್ಯಗಳ 219 ಜಿಲ್ಲೆಗಳನ್ನು ಆದ್ಯತೆಯ ಜಿಲ್ಲೆಗಳನ್ನಾಗಿ ಗುರುತಿಸಲಾಗಿದ್ದು, ಕ್ಷಿಪ್ರ ಕ್ರಮಕ್ಕಾಗಿ ಗುರುತಿಸಲಾಗಿದೆ. ಕರ್ನಾಟಕದ ಹಿನ್ನಲೆ: ಕರ್ನಾಟಕದಲ್ಲಿ ಪ್ರಸ್ತುತ ವಯಸ್ಕರಲ್ಲಿ ಎಚ್ಐವಿ ಹರಡುವಿಕೆಯ ಪ್ರಮಾಣ ಶೇಕಡ 0.44 ರಷ್ಟಿದ್ದು, ಅಂದಾಜು 2,91,348 ಜನರು ಎಚ್ಐವಿಯೊಂದಿಗೆ ಜೀವಿಸುತ್ತಿದ್ದಾರೆ ಎಂದು ಅಂದಾಜಿಸಲಾಗಿದೆ. ಸೋಂಕಿನ ಹರಡುವಿಕೆ ಮತ್ತು ಸಾಂದ್ರತೆಯ ಆಧಾರದ ಮೇಲೆ ರಾಜ್ಯದ 27 ಜಿಲ್ಲೆಗಳನ್ನು ಆದ್ಯತೆಯ ಜಿಲ್ಲೆಗಳೆಂದು ಗುರುತಿಸಲಾಗಿದೆ. ಈ ಜಿಲ್ಲೆಗಳಲ್ಲಿ ಬೆಂಗಳೂರು ನಗರ, ಬೆಳಗಾವಿ, ಬಳ್ಳಾರಿ, ಬಾಗಲಕೋಟೆ,…
ಆಂಧ್ರಪ್ರದೇಶ: 13 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳನ್ನು ಅದರ ಸಂಭಾವ್ಯ ನಕಾರಾತ್ಮಕ ಪರಿಣಾಮಗಳಿಂದ ರಕ್ಷಿಸಲು ಆಂಧ್ರಪ್ರದೇಶ ಸರ್ಕಾರವು 13 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಸಾಮಾಜಿಕ ಮಾಧ್ಯಮ ಪ್ರವೇಶವನ್ನು ನಿರ್ಬಂಧಿಸುವ ಕ್ರಮಗಳನ್ನು ಪರಿಚಯಿಸಲು ಯೋಜಿಸುತ್ತಿದೆ ಎಂದು ಮುಖ್ಯಮಂತ್ರಿ ಎನ್. ಚಂದ್ರಬಾಬು ನಾಯ್ಡು ಶುಕ್ರವಾರ (ಮಾರ್ಚ್ 6, 2026) ಹೇಳಿದ್ದಾರೆ. ವಿಧಾನಸಭೆಯಲ್ಲಿ ಮಾತನಾಡಿದ ಮುಖ್ಯಮಂತ್ರಿ, ಐಟಿ ಮತ್ತು ಶಿಕ್ಷಣ ಸಚಿವ ನಾರಾ ಲೋಕೇಶ್ ಅವರು ಸೂಚಿಸಿದ ಪ್ರಸ್ತಾವನೆಯು ಪ್ರಸ್ತುತ ಪರಿಗಣನೆಯಲ್ಲಿದೆ ಮತ್ತು ನಿರ್ಬಂಧವನ್ನು ಜಾರಿಗೆ ತರುವ ಕಾರ್ಯಕ್ರಮವನ್ನು ಮುಂದಿನ 90 ದಿನಗಳಲ್ಲಿ ರೂಪಿಸುವ ಸಾಧ್ಯತೆಯಿದೆ ಎಂದು ಹೇಳಿದರು. 13–16 ವಯಸ್ಸಿನ ಮಕ್ಕಳಿಗೆ ಸರ್ಕಾರವು ಸಂಭಾವ್ಯ ನಿಯಮಗಳನ್ನು ಸಹ ಪರಿಶೀಲಿಸುತ್ತಿದೆ ಮತ್ತು ವ್ಯಾಪಕ ಸಮಾಲೋಚನೆ ಮತ್ತು ಒಮ್ಮತದ ನಂತರ ಅಂತಿಮ ನಿರ್ಧಾರವನ್ನು ತೆಗೆದುಕೊಳ್ಳುತ್ತದೆ ಎಂದು ಅವರು ಹೇಳಿದರು. ಅತಿಯಾದ ಸಾಮಾಜಿಕ ಮಾಧ್ಯಮ ಬಳಕೆಯ ಹಾನಿಕಾರಕ ಪರಿಣಾಮಗಳಿಂದ ಮಕ್ಕಳನ್ನು ರಕ್ಷಿಸಲು ಮತ್ತು ಅವರ ಒಟ್ಟಾರೆ ಯೋಗಕ್ಷೇಮವನ್ನು ಖಚಿತಪಡಿಸಿಕೊಳ್ಳಲು ಸರ್ಕಾರ ಬದ್ಧವಾಗಿದೆ ಎಂದು ಶ್ರೀ ನಾಯ್ಡು ಒತ್ತಿ ಹೇಳಿದರು.…
ಶಿವಮೊಗ್ಗ: ರಾಜ್ಯ ಸರ್ಕಾರದ ವಿವಿಧ ಇಲಾಖೆಗಳ ಸೇವೆಗಳು ಒಂದೇ ಸೂರಿನಡಿ ಒದಗಿಸಲು ನಗರ ಸ್ಥಳೀಯ ಸಂಸ್ಥೆಗಳಲ್ಲಿ ಕರ್ನಾಟಕ ಒನ್ ಫ್ರಾಂಚೈಸಿ ಕೇಂದ್ರಗಳನ್ನು ಸ್ಥಾಪಿಸಲಾಗಿದೆ. ಈ ಮೂಲಕ ನಗರ ಭಾಗದ ಜನರಿಗೆ ತಮ್ಮ ಸಮೀಪದಲ್ಲಿ ಸರ್ಕಾರದ ಹಲವು ಸೇವೆಗಳು ತಮ್ಮ ಮನೆ ಬಾಗಿಲಿಗೆ ತಲುಪುತ್ತಿವೆ. ಈ ನಿಟ್ಟಿನಲ್ಲಿ ರಾಜ್ಯ ಸರ್ಕಾರದ ನೂತನ ಯೋಜನೆಗಳನ್ನು ಸೇವಾ ಸಿಂಧು ಪೋರ್ಟಲ್ ಮೂಲಕ ಅನುಷ್ಠಾನಗೊಳಿಸುತ್ತಿದ್ದು, ಶಿವಮೊಗ್ಗ ಜಿಲ್ಲೆಯಲ್ಲಿ ಖಾಲಿ ಇರುವ ಗ್ರಾಮ ಪಂಚಾಯಿತಿ ಹಾಗೂ ಕೆಲವು ಪಂಚಾಯ್ತಿಗಳನ್ನು ಗ್ರೇಡ್ -2 ರಿಂದ ಗ್ರೇಡ್-1ಕ್ಕೆ ಮೇಲ್ದರ್ಜೆಗೇರಿಸಲಾಗಿದೆ. ಅಂತಹ ಪಂಚಾಯಿತಿಗಳಿಗೆ ಗ್ರಾಮ ಒನ್ ಕೇಂದ್ರಗಳನ್ನು ಸ್ಥಾಪಿಸಲು ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತಿ ಇರುವ ಅಭ್ಯರ್ಥಿಗಳು https://sevasindhuservices.karnataka.gov.in/ ರ ಮೂಲಕ ಮಾ. 15 ರೊಳಗಾಗಿ ಅರ್ಜಿ ಸಲ್ಲಿಸುವಂತೆ ಶಿವಮೊಗ್ಗ ಜಿಲ್ಲಾ ಅಪರ ಜಿಲ್ಲಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ. https://kannadanewsnow.com/kannada/state-government-orders-educational-assistance-to-children-of-deceased-construction-workers/ https://kannadanewsnow.com/kannada/cm-siddaramaiah-sets-another-record-presents-budget-while-standing-for-3-hours-and-30-minutes/














