Subscribe to Updates
Get the latest creative news from FooBar about art, design and business.
Author: kannadanewsnow09
ಮಧ್ಯಪ್ರದೇಶ: ರಾಜ್ಯದ ಇಂದೋರ್ ನಲ್ಲಿ ಶಾಕಿಂಗ್ ಕೃತ್ಯ ಎನ್ನುವಂತೆ, ಇದು ನೀವು ಕಂಡು ಕೇಳರಿಯದ ಭಯಾನಕ ಮರ್ಡರ್ ಒಂದು ನಡೆಯಿದೆ. ಸೆಕ್ಸ್ ಗೆ ಒಪ್ಪದಂತ ಗೆಳತಿಯನ್ನು ಕೊಂದಿರುವಂತ ಎಂಬಿಎ ವಿದ್ಯಾರ್ಥಿ, ಆಕೆಯ ಶವದೊಂದಿಗೆ ಲೈಂಗಿಕ ಕ್ರಿಯೆ ನಡೆಸಿರುವಂತ ಘಟನೆಯೊಂದು ಮಧ್ಯಪ್ರದೇಶದ ಇಂದೋರ್ ನಲ್ಲಿ ನಡೆದಿದೆ. ಮಧ್ಯಪ್ರದೇಶದ ಇಂಧೋರ್ ನಲ್ಲಿ, ತನ್ನ ಪ್ರೇಯಸಿಯನ್ನು ಕೊಲೆಗೈದು, ಆ ಬಳಿಕ ಅತ್ಯಾಚಾರ ಮತ್ತು ಕ್ಷುದ್ರಪೂಜೆಯನ್ನು ಎಂಬಿಎ ವಿದ್ಯಾರ್ಥಿಯೊಬ್ಬ ಮಾಡಿದ್ದಾನೆ. ಲೈಂಗಿಕ ಕ್ರಿಯೆಗೆ ಒಪ್ಪದಿದ್ದಕ್ಕೆ ಪ್ರೇಯಸಿಯನ್ನು ಎಂಬಿಎ ವಿದ್ಯಾರ್ಥಿ ಕೊಂದಿರುವುದಾಗಿ ತಿಳಿದು ಬಂದಿದೆ. ಎಂಬಿಎ ವಿದ್ಯಾರ್ಥಿ ಪಿಯೂಷ್ ಎಂಬಾತನಿಂದ ಈ ರಾಕ್ಷಸಿ ಕೃತ್ಯವನ್ನು ಎಸಗಲಾಗಿದೆ. ಕೊಲೆಗೈದ ಬಳಿಯ ಮದ್ಯ ಖರೀದಿಸಿ ತಂದಿರುವಂತ ಆರೋಪಿ ಪಿಯೂಷ್, ಶವದ ಪಕ್ಕದಲ್ಲೇ ಮಧ್ಯ ಸೇವನೆ ಮಾಡಿ, ಆ ಬಳಿಕ ಶವದ ಜೊತೆಗೆ ಲೈಂಗಿಕ ಕ್ರಿಯೆ ನಡೆಸಿರೋದಾಗಿ ಹೇಳಲಾಗುತ್ತಿದೆ. ಪ್ರೇಯಸಿಯನ್ನು ಕೊಂದ ಬಳಿಕ ಯೂಟ್ಯೂಬ್ ನೋಡಿ ಕ್ಷುದ್ರ ಪೂಜೆಯನ್ನು ಪಿಯೂಷ್ ಮಾಡಿದ್ದಾನೆ ಎಂಬುದು ಪೊಲೀಸರ ತನಿಖೆಯಲ್ಲಿ ಸ್ಪೋಟಕ ಮಾಹಿತಿ ಬೆಳಕಿಗೆ ಬಂದಿದೆ. ಊದು…
ಬೆಂಗಳೂರು: ಕಾಂಗ್ರೆಸ್ ಸರಕಾರವು ಬಡವರಿಗೆ ಮನೆ ಕೊಡಬೇಕು; ಭೂರಹಿತರಿಗೆ ಭೂಮಿ ಕೊಡಬೇಕಿತ್ತು. ಆದರೆ, ಈ ಕೆಲಸವನ್ನು ಮಾಡುತ್ತಿಲ್ಲ. ತಾನೇ ಭೂಮಿ ಕಬಳಿಸುವ ಕೆಲಸ ಮಾಡುತ್ತಿದೆ ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರು ಆರೋಪಿಸಿದ್ದಾರೆ. ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಅವರು ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದರು. ಭೂಕಬಳಿಕೆಯಲ್ಲಿ ಸರಕಾರವೇ ನಿರತವಾಗಿದೆ. ಸರಕಾರವು ತಾಲ್ಲೂಕು, ಜಿಲ್ಲೆ, ಮಂಡಲ, ಪಂಚಾಯಿತಿ- ಹೀಗೆ ಎಲ್ಲ ಕಡೆ ನಿವೇಶನ ಪಡೆಯಲು ಅದಕ್ಕೆ ಅಧಿಕಾರ ಇಲ್ಲ. ಕಾನೂನು ಉಲ್ಲಂಘಿಸಿ ಅದು ಕಾಂಗ್ರೆಸ್ ಪಕ್ಷದ ಕಚೇರಿ ನಿರ್ಮಾಣಕ್ಕೆ ಲೀಸ್ಗೆ ಮುಧೋಳದಲ್ಲಿ ನಿವೇಶನ ಪಡೆಯಲು ಮುಂದಾಗಿತ್ತು. ಆದರೆ, ಇಲಾಖೆಯು ಅದನ್ನು ತಿರಸ್ಕರಿಸಿತ್ತು ಎಂದು ಗಮನ ಸೆಳೆದರು. ಚಿಕ್ಕಬಳ್ಳಾಪುರದಲ್ಲಿ ಒಂದು ಸಿಎ ನಿವೇಶನವನ್ನು ಕಾಂಗ್ರೆಸ್ ಪಕ್ಷದ ಕಚೇರಿ ನಿರ್ಮಾಣಕ್ಕೆ ಪಡೆಯಲು ಮುಂದಾಗಿತ್ತು. 3,404 ಚದರ ಮೀಟರ್ನ 4 ಕೋಟಿ 8 ಲಕ್ಷ 51,120 ರೂ. ಬೆಲೆಯ ನಿವೇಶನ ಇದಾಗಿದೆ. ಇದನ್ನು ಅವರು ತಮಗೆ ಪಡೆದುಕೊಂಡಿದ್ದಾರೆ. ಅವರದೇ ಪೆನ್, ಅವರದೇ…
ಬೆಂಗಳೂರು: ದ್ವಿತೀಯ ಪಿಯುಸಿ ಪರೀಕ್ಷೆ-1 ದಿನಾಂಕ 28-02-2026ರಿಂದ ಆರಂಭಗೊಂಡು, 17-03-2026ರವರೆಗೆ ನಡೆಯಲಿದೆ. ಎಸ್ ಎಸ್ ಎಲ್ ಸಿ ಪರೀಕ್ಷೆ-1ರದ್ದು ದಿನಾಂಕ 18-03-2026ರಿಂದ ಆರಂಭಗೊಂಡು, 02-04-2026ಕ್ಕೆ ಮುಕ್ತಾಯಗೊಳ್ಳಲಿದೆ. ಈ ಪರೀಕ್ಷೆಗಳ ಫಲಿತಾಂಶ ಏಪ್ರಿಲ್ ನಲ್ಲಿ ಪ್ರಕಟಗೊಳ್ಳಲಿದೆ ಎಂಬುದಾಗಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ. ಇಂದು ಸುದ್ದಿಗೋಷ್ಠಿಯಲ್ಲಿ ಮಾಹಿತಿ ಹಂಚಿಕೊಂಡಂತ ಅವರು, ದ್ವಿತೀಯ ಪಿಯುಸಿ ಪರೀಕ್ಷೆ-1ಕ್ಕೆ 7,10,363 ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿದ್ದಾರೆ. ಎಸ್ ಎಸ್ ಎಲ್ ಸಿ ಪರೀಕ್ಷೆ-1ಕ್ಕೆ 9,02,889 ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿದ್ದಾರೆ ಎಂಬುದಾಗಿ ತಿಳಿಸಿದ್ದಾರೆ. ದ್ವಿತೀಯ ಪಿಯುಸಿ ಪರೀಕ್ಷೆ-1 1,217 ಪರೀಕ್ಷಾ ಕೇಂದ್ರಗಳಲ್ಲಿ ನಡೆದರೇ, ಎಸ್ ಎಸ್ ಎಲ್ ಸಿ ಪರೀಕ್ಷೆ-1 2,871 ಕೇಂದ್ರಗಳಲ್ಲಿ ನಡೆಯಲಿದೆ. ಇಂತಹ ಪರೀಕ್ಷೆಯ ಬಳಿಕ ದ್ವಿತೀಯ ಪಿಯುಸಿ ಪರೀಕ್ಷೆ-1ರ ಫಲಿತಾಂಶವನ್ನು ಪ್ರಕಟಿಸುವ ಸಂಭಾವ್ಯ ದಿನಾಂಕವು 07-04-2026 ಆಗಿದೆ. ಎಸ್ ಎಸ್ ಎಲ್ ಸಿ ಪರೀಕ್ಷೆ-1ರ ಫಲಿತಾಂಶವನ್ನು ದಿನಾಂಕ 24-04-2026ರಂದು ಪ್ರಕಟವಾಗುವ ಸಾಧ್ಯತೆ ಇದೆ ಎಂಬುದಾಗಿ ತಿಳಿಸಿದ್ದಾರೆ. ಇನ್ನೂ ದ್ವಿತೀಯ ಪಿಯುಸಿ ಪರೀಕ್ಷೆ-2 ದಿನಾಂಕ…
ಬೆಂಗಳೂರು: ಕರ್ನಾಟಕ ಎಸ್ ಎಸ್ ಎಲ್ ಸಿ ಹಾಗೂ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ-1ರ ಅಂತಿಮ ವೇಳಾಪಟ್ಟಿಯನ್ನು ಪ್ರಕಟಿಸಲಾಗಿದೆ. ದ್ವಿತೀಯ ಪಿಯುಸಿ ಪರೀಕ್ಷೆಯು ದಿನಾಂಕ 28-02-2026ರಿಂದ 17-03-2026ರವರೆಗೆ ನಡೆದರೇ, ಎಸ್ ಎಸ್ ಎಲ್ ಸಿ ಪರೀಕ್ಷೆ-1 ದಿನಾಂಕ 18-03-2026 ರಿಂದ 02-04-2026ರವರೆಗೆ ನಡೆಯಲಿದೆ. ಹೀಗಿದೆ ದ್ವಿತೀಯ ಪಿಯುಸಿ ಪರೀಕ್ಷೆಯ ಮೊದಲ ವೇಳಾಪಟ್ಟಿ: ಫೆಬ್ರವರಿ 28: ಕನ್ನಡ, ಅರೇಬಿಕ್ ಮಾರ್ಚ್ 2: ಭೂಗೋಳಶಾಸ್ತ್ರ, ಸಂಖ್ಯಾಶಾಸ್ತ್ರ, ಮನಃಶಾಸ್ತ್ರ ಮಾರ್ಚ್ 3: ಇಂಗ್ಲಿಷ್ ಮಾರ್ಚ್ 4: ತಮಿಳು, ತೆಲುಗು, ಮಲಯಾಳಂ, ಮರಾಠಿ, ಉರ್ದು, ಸಂಸ್ಕೃತ, ಫ್ರೆಂಚ್ ಮಾರ್ಚ್ 5: ಇತಿಹಾಸ ಮಾರ್ಚ್ 6: ಭೌತಶಾಸ್ತ್ರ ಮಾರ್ಚ್ 7: ಐಚ್ಛಿಕ ಕನ್ನಡ, ವ್ಯವಹಾರ ಅಧ್ಯಯನ, ಭೂಗರ್ಭಶಾಸ್ತ್ರ ಮಾರ್ಚ್ 9: ರಸಾಯನಶಾಸ್ತ್ರ, ಶಿಕ್ಷಣಶಾಸ್ತ್ರ, ಮೂಲ ಗಣಿತ ಮಾರ್ಚ್ 10: ಅರ್ಥಶಾಸ್ತ್ರ ಮಾರ್ಚ್ 11: ತರ್ಕಶಾಸ್ತ್ರ, ವಿದ್ಯುನ್ಮಾನಶಾಸ್ತ್ರ, ಗೃಹ ವಿಜ್ಞಾನ ಮಾರ್ಚ್ 12: ಹಿಂದಿ ಮಾರ್ಚ್ 13: ರಾಜ್ಯಶಾಸ್ತ್ರ ಮಾರ್ಚ್ 14: ಲೆಕ್ಕಶಾಸ್ತ್ರ, ಗಣಿತ ಮಾರ್ಚ್ 16: ಸಮಾಜಶಾಸ್ತ್ರ, ಜೀವಶಾಸ್ತ್ರ, ಗಣಕ…
ಬೆಂಗಳೂರು: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಗೆ ಕರ್ನಾಟಕ ಹೈಕೋರ್ಟ್ ಬಿಗ್ ರಿಲೀಫ್ ನೀಡಿದೆ. ಬಿಜೆಪಿ ವಿರುದ್ಧ ಅಪಪ್ರಚಾರದ ಪ್ರಕರಣವನ್ನು ರದ್ದುಗೊಳಿಸುವ ಮೂಲಕ, ರಿಲೀಫ್ ನೀಡಿದೆ. ವಿಧಾನಸಭೆ ಚುನಾವಣೆ ವೇಳೆಯಲ್ಲಿ ಬಿಜೆಪಿ ವಿರುದ್ಧ ಅಪಪ್ರಚಾರಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಅವರ ವಿರುದ್ಧ ಪ್ರಕರಣ ದಾಖಲಾಗಿತ್ತು. ಈ ಪ್ರಕರಣ ರದ್ದುಗೊಳಿಸುವಂತೆ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಯನ್ನು ವಿಚಾರಣೆ ನಡೆಸಿದಂತ ಹೈಕೋರ್ಟ್, ಅವರ ವಿರುದ್ಧದ ಖಾಸಗಿ ದೂರನ್ನು ರದ್ದುಪಡಿಸಿದೆ. ಅಂದಹಾಗೇ ವಿಧಾನಸಭೆ ಚುನಾವಣೆ ಸಂದರ್ಭದಲ್ಲಿ ಬಿಜೆಪಿ ಸರ್ಕಾರದ ವಿರುದ್ಧ ಕಾಂಗ್ರೆಸ್ ಪಕ್ಷ ಬಿಡುಗಡೆ ಮಾಡಿದ್ದಂತ ಕರಪ್ಷನ್ ರೇಟ್ ಕಾರ್ಡ್ ಜಾಹೀರಾತು ಸಂಬಂಧ ಬಿಜೆಪಿ ಪರವಾಗಿ ಕೇಶವಪ್ರಸಾದ್ ಎಂಬುವರು ಖಾಸಗಿ ದೂರು ಸಲ್ಲಿಸಿದ್ದರು. ಈ ಪ್ರಕರಣ ರದ್ದುಪಡಿಸುವಂತೆ ಹೈಕೋರ್ಟ್ ಮೆಟ್ಟಿಲೇರಿದ್ದರು. ಹೀಗಾಗಿ ಅರ್ಜಿಯನ್ನು ವಿಚಾರಣೆ ನಡೆಸಿ ಪ್ರಕರಣ ರದ್ದುಪಡಿಸಿದೆ. https://kannadanewsnow.com/kannada/good-news-for-nandini-milk-drinkers-100-safe-kmf-refutes-false-claims/
ಬೆಂಗಳೂರು: ನಂದಿನಿ ಉತ್ಪನ್ನಗಳನ್ನು ಭಾರತೀಯ ಆಹಾರ ಸುರಕ್ಷತಾ ಮತ್ತು ಮಾನದಂಡ ಪ್ರಾಧಿಕಾರದ ಎಲ್ಲಾ ಸುರಕ್ಷತಾ ಮಾನದಂಡಗಳನ್ನು ಪಾಲಿಸಿ ತಯಾರಿಸಲಾಗುತ್ತಿದೆ. ನಂದಿನಿ ಹಾಲು ಶೇ.100% ಸುರಕ್ಷಿತವಾಗಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ಮಾಡಿದಂತ ಆರೋಪಗಳು ಸುಳ್ಳು ಎಂಬುದಾಗಿ ಕರ್ನಾಟಕ ಹಾಲು ಮಹಾಮಂಡಳಿ(KMF) ಸ್ಪಷ್ಟಪಡಿಸಿದೆ. ಈ ಕುರಿತಂತೆ ಸಾರ್ವಜನಿಕ ಪತ್ರಿಕಾ ಪ್ರಕಟಣೆ ಹೊರಡಿಸಿದ್ದು, ನಂದಿನಿ ಬ್ರಾಂಡ್ನ ಕೆಲವು ಉತ್ಪನ್ನಗಳ ಕುರಿತು ಸಾಮಾಜಿಕ ಜಾಲತಾಣಗಳ ಮೂಲಕ ಆಧಾರರಹಿತ ಆರೋಪಗಳನ್ನು ಮಾಡಲಾಗುತ್ತಿರುವುದು ನಮ್ಮ ಗಮನಕ್ಕೆ ಬಂದಿದೆ. ನಂದಿನಿ ಉತ್ಪನ್ನಗಳನ್ನು ಸೇವನೆಗೆ ಅಸುರಕ್ಷಿತವೆಂದು ತಪ್ಪಾಗಿ ಪ್ರಚಾರ ಮಾಡಲಾಗುತ್ತಿದ್ದು, ಬಾಲ್ಯದಿಂದಲೇ ನಂದಿನಿ ಬ್ರಾಂಡ್ನೊಂದಿಗೆ ಬೆಳೆದಿರುವ ಕೋಟ್ಯಾಂತರ ಗ್ರಾಹಕರಲ್ಲಿ ಅನಗತ್ಯ ಗೊಂದಲ ಉಂಟುಮಾಡಲಾಗಿದೆ ಎಂದು ತಿಳಿಸಿದೆ. ಕರ್ನಾಟಕ ಹಾಲು ಮಹಾಮಂಡಳಿಯು (KMF) ಕಾನೂನುಬದ್ಧ ಸಂಸ್ಥೆಗಳು ಹಾಗೂ ಭಾರತೀಯ ಆಹಾರ ಸುರಕ್ಷತಾ ಮತ್ತು ಮಾನದಂಡ ಪ್ರಾಧಿಕಾರ (FSSAI) ನಿಗದಿಪಡಿಸಿರುವ ಎಲ್ಲಾ ಸುರಕ್ಷತಾ ಮಾನದಂಡಗಳು ಮತ್ತು ಅನುಮೋದಿತ ವಿಧಾನಗಳನ್ನು ಕಟ್ಟುನಿಟ್ಟಾಗಿ ಅನುಸರಿಸುತ್ತಿದೆ. ನಂದಿನಿ ಹಾಲು ಹಾಗೂ ಹಾಲು ಉತ್ಪನ್ನಗಳೆಲ್ಲವೂ ಸೇವನೆಗೆ ಸಂಪೂರ್ಣ ಸುರಕ್ಷಿತವಾಗಿದ್ದು, ಗ್ರಾಹಕರು ಆತಂಕಪಡಬೇಕಾಗಿಲ್ಲವೆಂದು ಕರ್ನಾಟಕ…
ಮಹಾತ್ತೋಭಾರ ಸುಬ್ರಹ್ಮಣ್ಯೇಶ್ವರ ದೇವಸ್ಥಾನವು ಆದಿ ಶಂಕರರ ಕಾಲದಿಂದ ಸ್ಥಾನಿಕ ಸ್ಮಾರ್ತ ಮೊರೋಜ(ಮೋರ-ಮೈಯೂರ ಓಜಜಾಚಾರ್ಯ) ಮನೆತನದ ಆಡಳಿಕೆ ಒಳಪಟ್ಟಿದ್ದ ದೇವಾಲಯವಾಗಿದೆ. ಹಿಂದೆ ಸ್ಮಾರ್ತ ಬ್ರಾಹ್ಮಣರಿಂದ ಪೂಜೆಗೊಳ್ಳುತ್ತಿದ್ದ ಸುಬ್ರಹ್ಮಣ್ಯ ಈಗ ಮಾಧ್ವ ಬ್ರಾಹ್ಮಣರ ಪೂಜಾಧೀನದಲ್ಲಿ ಈ ದೇವಾಲಯವಿದೆ ಸದ್ಯ ಈಗ ಕರ್ನಾಟಕ ಸರಕಾರದ ಮುಜರಾಯಿ (ಧಾರ್ಮಿಕ ದತ್ತಿ) ಇಲಾಖೆಗೆ ಒಳಪಟ್ಟಿದೆ. ಸುಬ್ರಹ್ಮಣ್ಯ ಗ್ರಾಮವು ಸುಳ್ಯ ತಾಲೂಕುದಕ್ಷಿಣ ಕನ್ನಡ ಜಿಲ್ಲೆಯಲ್ಲಿದೆ. ಶ್ರೀ ಸಿಗಂದೂರು ಚೌಡೇಶ್ವರಿ ಜ್ಯೋತಿಷ್ಯ ಪೀಠ ಸಿಂಗದೂರು ಚೌಡಮ್ಮನವರ ಉಪಾಸಕರು ನಂ 1ಕೇರಳ ಕೊಳ್ಳೇಗಾಲದ ಮಹಾ ಮಾಂತ್ರಿಕ ಜ್ಯೋತಿಷ್ಯರು ವಿದ್ವಾನ್ ವಿದ್ಯಾಧರ್ ತಂತ್ರಿ ನಂ:- 9686268564 ನಂ 1ವಶೀಕರಣ ಸ್ಪೆಷಲಿಸ್ಟ್ ಒಂದು ಕರೆಯಲ್ಲಿ ಪರಿಹಾರ ತಿಳಿಸುತ್ತಾರೆ ತಾವು ಎಷ್ಟೋ ಜ್ಯೋತಿಷ್ಯರಲ್ಲಿ ಕೇಳಿಯು ಪರಿಹಾರ ಸಿಗದೇ ಮನನೊಂದಿದ್ದರೆ ಪರಿಹಾರ ಇಲ್ಲಿ ಶತಸಿದ್ಧ ನಿಮ್ಮ ಸಮಸ್ಯೆಗಳಾದ ಅತ್ತೆ-ಸೊಸೆ ಕಿರಿಕಿರಿ, ಪ್ರೀತಿಯಲ್ಲಿ ನಂಬಿ ಮೋಸ, ಇಷ್ಟ ಪಟ್ಟವರು ನಿಮ್ಮಂತೆ ಆಗಲು, ಗಂಡ ಹೆಂಡತಿ ಕಿರಿಕಿರಿ, ಮದುವೆಯಲ್ಲಿ ಅಡೆತಡೆ, ಸಂತಾನ ಸಮಸ್ಯೆ, ಮಕ್ಕಳು ಹೇಳಿದ ಮಾತು ಕೇಳದಿದ್ದರೆ, ವಿದ್ಯಾಭ್ಯಾಸದಲ್ಲಿ ಕಿರಿಕಿರಿ,…
ಬೆಂಗಳೂರು: ರಾಜ್ಯದ 108 ಆರೋಗ್ಯ ಕವಚ ಸೇವೆಯಡಿಯಲ್ಲಿ ನೇಮಕಗೊಳ್ಳಲಿರುವ ಇಎಂಟಿ ಮತ್ತು ಪೈಲೆಟ್ ಗಳಿಗೆ ಮೂಲ ವೇತನವನ್ನು ಚಾಲ್ತಿಯಲ್ಲಿರುವ ಕನಿಷ್ಠ ವೇತನ ದರದಲ್ಲಿ ಹಾಗೂ ಹಿಂದಿನ ಸೇವಾ ಅನುಭವಗಾಗಿ ಅನುಭವ ಬೋನಸ್ ಅನ್ನು ಹಾಗೂ ಕಾರ್ಯಕ್ಷಮತೆ ಆಧಾರಿತ ಪ್ರೋತ್ಸಾಹ ಧನವನ್ನು ನೀಡೋದಕ್ಕೆ ಸರ್ಕಾರ ಅನುಮೋದನೆ ನೀಡಿದೆ. ಈ ಕುರಿತಂತೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಅವರು ನಡವಳಿಯನ್ನು ಹೊರಡಿಸಿದ್ದು, ಆಯವ್ಯಯ ಭಾಷಣ ಕಂಡಿಕೆಯಲ್ಲಿ ರಾಜ್ಯದಲ್ಲಿ 108 ಆಂಬುಲೆನ್ಸ್ ಸೇವೆಯನ್ನು ಉತ್ತಮಗೊಳಿಸುವ ಉದ್ದೇಶದಿಂದ, ಈ ಸೇವೆಯನ್ನು ನಿಯಂತ್ರಣ ಮಾಡುವ ಕಮಾಂಡ್ ಕಂಟ್ರೋಲ್ ಕೇಂದ್ರವನ್ನು ಆರೋಗ್ಯ ಇಲಾಖೆಯ ಅಧೀನಕ್ಕೆ ಒಳಪಡಿಸುವ ಮೂಲಕ ‘ಆರೋಗ್ಯ ಕವಚ’ ಸೇವೆಯನ್ನು ಬಲಪಡಿಸಲಾಗುವುದು ಎಂದು ಘೋಷಿಸಲಾಗಿರುತ್ತದೆ ಎಂದಿದ್ದಾರೆ. 2025-26ನೇ ಸಾಲಿನ ಆಯವ್ಯಯ ಘೋಷಣೆಯನ್ನು ಅನುಷ್ಠಾನಗೊಳಿಸಲು ರಾಜ್ಯದಲ್ಲಿ 108-ಆರೋಗ್ಯ ಕವಚ ಸೇವೆಯನ್ನು ಒಡಂಬಡಿಕೆಯ ಪಾಲುದಾರರಾದ GVK-EMRI ಸಂಸ್ಥೆ (ಪ್ರಸ್ತುತ EMRI GHS) ಸಂಸ್ಥೆಯಿಂದ ಹಿಂಪಡೆದು, ಈ ಸೇವೆಗಳನ್ನು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ನಿರ್ವಹಿಸಲು…
‘ನಂದಿನಿ ಉತ್ಪನ್ನ’ಗಳನ್ನು ‘FSSAI’ ಎಲ್ಲಾ ಸುರಕ್ಷತಾ ಮಾನದಂಡ ಪಾಲಿಸಿ ತಯಾರಿಕೆ: KMF ಸ್ಪಷ್ಟನೆ | Nandini Products
ಬೆಂಗಳೂರು: ನಂದಿನಿ ಉತ್ಪನ್ನಗಳನ್ನು ಭಾರತೀಯ ಆಹಾರ ಸುರಕ್ಷತಾ ಮತ್ತು ಮಾನದಂಡ ಪ್ರಾಧಿಕಾರದ ಎಲ್ಲಾ ಸುರಕ್ಷತಾ ಮಾನದಂಡಗಳನ್ನು ಪಾಲಿಸಿ ತಯಾರಿಸಲಾಗುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ಮಾಡಿದಂತ ಆರೋಪಗಳು ಸುಳ್ಳು ಎಂಬುದಾಗಿ ಕರ್ನಾಟಕ ಹಾಲು ಮಹಾಮಂಡಳಿ(KMF) ಸ್ಪಷ್ಟಪಡಿಸಿದೆ. ಈ ಕುರಿತಂತೆ ಸಾರ್ವಜನಿಕ ಪತ್ರಿಕಾ ಪ್ರಕಟಣೆ ಹೊರಡಿಸಿದ್ದು, ನಂದಿನಿ ಬ್ರಾಂಡ್ನ ಕೆಲವು ಉತ್ಪನ್ನಗಳ ಕುರಿತು ಸಾಮಾಜಿಕ ಜಾಲತಾಣಗಳ ಮೂಲಕ ಆಧಾರರಹಿತ ಆರೋಪಗಳನ್ನು ಮಾಡಲಾಗುತ್ತಿರುವುದು ನಮ್ಮ ಗಮನಕ್ಕೆ ಬಂದಿದೆ. ನಂದಿನಿ ಉತ್ಪನ್ನಗಳನ್ನು ಸೇವನೆಗೆ ಅಸುರಕ್ಷಿತವೆಂದು ತಪ್ಪಾಗಿ ಪ್ರಚಾರ ಮಾಡಲಾಗುತ್ತಿದ್ದು, ಬಾಲ್ಯದಿಂದಲೇ ನಂದಿನಿ ಬ್ರಾಂಡ್ನೊಂದಿಗೆ ಬೆಳೆದಿರುವ ಕೋಟ್ಯಾಂತರ ಗ್ರಾಹಕರಲ್ಲಿ ಅನಗತ್ಯ ಗೊಂದಲ ಉಂಟುಮಾಡಲಾಗಿದೆ ಎಂದು ತಿಳಿಸಿದೆ. ಕರ್ನಾಟಕ ಹಾಲು ಮಹಾಮಂಡಳಿಯು (KMF) ಕಾನೂನುಬದ್ಧ ಸಂಸ್ಥೆಗಳು ಹಾಗೂ ಭಾರತೀಯ ಆಹಾರ ಸುರಕ್ಷತಾ ಮತ್ತು ಮಾನದಂಡ ಪ್ರಾಧಿಕಾರ (FSSAI) ನಿಗದಿಪಡಿಸಿರುವ ಎಲ್ಲಾ ಸುರಕ್ಷತಾ ಮಾನದಂಡಗಳು ಮತ್ತು ಅನುಮೋದಿತ ವಿಧಾನಗಳನ್ನು ಕಟ್ಟುನಿಟ್ಟಾಗಿ ಅನುಸರಿಸುತ್ತಿದೆ. ನಂದಿನಿ ಹಾಲು ಹಾಗೂ ಹಾಲು ಉತ್ಪನ್ನಗಳೆಲ್ಲವೂ ಸೇವನೆಗೆ ಸಂಪೂರ್ಣ ಸುರಕ್ಷಿತವಾಗಿದ್ದು, ಗ್ರಾಹಕರು ಆತಂಕಪಡಬೇಕಾಗಿಲ್ಲವೆಂದು ಕರ್ನಾಟಕ ಹಾಲು ಮಹಾಮಂಡಳಿಯು ಭರವಸೆಯನ್ನು ನೀಡುತ್ತದೆ…
ಶಿವಮೊಗ್ಗ: ಭಾರತದ ಸ್ವಾತಂತ್ರ್ಯ ಸಂಗ್ರಾಮದ ಇತಿಹಾಸದಲ್ಲಿ, ಬ್ರಿಟಿಷರ ವಿರುದ್ಧ ಮೊದಲ ಬಾರಿಗೆ ಸ್ವತಂತ್ರ ಹಳ್ಳಿ ಎಂದು ಘೋಷಿಸಿಕೊಂಡು ಇತಿಹಾಸ ಸೃಷ್ಟಿಸಿದ ಶಿವಮೊಗ್ಗ ಜಿಲ್ಲೆಯ ಈಸೂರು ದಂಗೆಯ ಕೊನೆಯ ಕೊಂಡಿ ಕಳಚಿದೆ. ಹಿರಿಯ ಸ್ವಾತಂತ್ರ್ಯ ಹೋರಾಟಗಾರರಾದ ಟಿ.ಕೆ. ದೇವೇಂದ್ರಪ್ಪ (99) ಅವರು ವಯೋಸಹಜ ಕಾಯಿಲೆಯಿಂದ ನಿಧನರಾಗಿದ್ದಾರೆ. ಶಿಕಾರಿಪುರ ತಾಲ್ಲೂಕಿನ ತಿಮ್ಲಾಪುರ ಗ್ರಾಮದ ನಿವಾಸಿಯಾಗಿದ್ದ ದೇವೇಂದ್ರಪ್ಪ ಅವರು, 1942ರ ಕ್ವಿಟ್ ಇಂಡಿಯಾ ಚಳುವಳಿಯ ಸಂದರ್ಭದಲ್ಲಿ ನಡೆದ ಐತಿಹಾಸಿಕ ಈಸೂರು ಹೋರಾಟದಲ್ಲಿ ಸಕ್ರಿಯವಾಗಿ ಭಾಗವಹಿಸಿದ್ದರು. ಈಸೂರು ದಂಗೆಯು ಕೇವಲ ಒಂದು ಸ್ಥಳೀಯ ಘಟನೆಯಾಗಿರಲಿಲ್ಲ, ಬದಲಿಗೆ ಬ್ರಿಟಿಷ್ ಆಡಳಿತದ ವಿರುದ್ಧ ಭಾರತೀಯರ ಅಚಲ ಸಂಕಲ್ಪ ಮತ್ತು ಪ್ರತಿರೋಧದ ಸಂಕೇತವಾಗಿತ್ತು. ಏಸೂರು ಕೊಟ್ಟರೂ ಈಸೂರು ಬಿಡೆವು ಎಂಬ ವೀರ ಘೋಷಣೆಯು ಅಂದಿನ ಹೋರಾಟಗಾರರ ಧೈರ್ಯ ಮತ್ತು ದೇಶಪ್ರೇಮಕ್ಕೆ ಸಾಕ್ಷಿಯಾಗಿದೆ. ಈ ಘೋಷಣೆಯು ಬ್ರಿಟಿಷ್ ಅಧಿಕಾರಿಗಳನ್ನು ಊರ ಹೊರಗೆ ಹಾಕುವಲ್ಲಿ ಪ್ರಮುಖ ಪಾತ್ರ ವಹಿಸಿತು. ದೇವೇಂದ್ರಪ್ಪ ಅವರು ಈ ಚಳುವಳಿಯಲ್ಲಿ ಹುಚ್ಚರಾಯಪ್ಪ ಅವರಿಗೆ ಸಾಥ್ ನೀಡಿದ್ದರು. ಅವರ ಹೋರಾಟದ ಹಾದಿಯಲ್ಲಿ…














