Subscribe to Updates
Get the latest creative news from FooBar about art, design and business.
Author: kannadanewsnow09
ಕೇರಳ: ಶಿಡ್ಲಘಟ್ಟ ಪೌರಾಯುಕ್ತೆ ಅಮೃತಾ ಗೌಡ ಅವರಿಗೆ ಧಮ್ಕಿ, ಬೆದರಿಕೆ, ಅವಾಚ್ಯ ಶಬ್ದಗಳಿಂದ ನಿಂದಿಸಿದಂತ ಕಾಂಗ್ರೆಸ್ ಮುಖಂಡ ರಾಜೀವ್ ಗೌಡ ಅವರನ್ನು ಕೇರಳದ ಗಡಿಯಲ್ಲಿ ಕೊನೆಗೂ ಪೊಲೀಸರು ಬಂಧಿಸಿದ್ದಾರೆ. ಚಿಕ್ಕಬಳ್ಳಾಪುರದ ಶಿಡ್ಲಘಟ್ಟ ಪೌರಾಯುಕ್ತೆ ಅಮೃತಾ ಗೌಡ ಅವರಿಗೆ ಬ್ಯಾನರ್ ತೆರವು ಸಂಬಂಧ ಕೈ ಮುಖಂಡ ರಾಜೀವ್ ಗೌಡ ಅವಾಚ್ಯ ಶಬ್ದಗಳಿಂದ ನಿಂದಿಸಿ, ಧಮ್ಕಿ ಹಾಕಿದ್ದರು. ಈ ಸಂಬಂಧ ಅವರ ವಿರುದ್ದ ಪೌರಾಯುಕ್ತೆ ದೂರು ನೀಡಿದ್ದರಿಂದ ಎಫ್ಐಆರ್ ದಾಖಲಾಗಿತ್ತು. ದೂರಿನ ಬಳಿಕ ತಲೆಮರೆಸಿಕೊಂಡಿದ್ದಂತ ರಾಜೀವ್ ಗೌಡ ಅವರನ್ನು ಕೊನೆಗೂ ಕೇರಳ ಗಡಿಯಲ್ಲಿ ಪೊಲೀಸರು ಬಂಧಿಸಿರುವುದಾಗಿ ತಿಳಿದು ಬಂದಿದೆ. ಈ ಬಗ್ಗೆ ಹೆಚ್ಚಿನ ಮಾಹಿತಿ ತಿಳಿದು ಬರಬೇಕಿದೆ. ಅಂದಹಾಗೇ ರಾಜೀವ್ ಗೌಡ ವಿರುದ್ಧ ಪೊಲೀಸರು ಲುಕ್ಔಟ್ ನೋಟಿಸ್ ಜಾರಿಗೊಳಿಸಿದ್ದರು. ಇದೀಗ ಕೇರಳ ಗಡಿಯಲ್ಲಿ ರಾಜೀವ್ ಗೌಡ ಬಂಧಿಸಿ ಚಿಕ್ಕಬಳ್ಳಾಪುರಕ್ಕೆ ಪೊಲೀಸರು ಕರೆತರುತ್ತಿದ್ದಾರೆ.
ಕೇರಳ: ಶಿಡ್ಲಘಟ್ಟ ಪೌರಾಯುಕ್ತೆ ಅಮೃತಾ ಗೌಡ ಅವರಿಗೆ ಧಮ್ಕಿ, ಬೆದರಿಕೆ, ಅವಾಚ್ಯ ಶಬ್ದಗಳಿಂದ ನಿಂದಿಸಿದಂತ ಕಾಂಗ್ರೆಸ್ ಮುಖಂಡ ರಾಜೀವ್ ಗೌಡ ಅವರನ್ನು ಕೇರಳದ ಗಡಿಯಲ್ಲಿ ಕೊನೆಗೂ ಪೊಲೀಸರು ಬಂಧಿಸಿದ್ದಾರೆ. ಚಿಕ್ಕಬಳ್ಳಾಪುರದ ಶಿಡ್ಲಘಟ್ಟ ಪೌರಾಯುಕ್ತೆ ಅಮೃತಾ ಗೌಡ ಅವರಿಗೆ ಬ್ಯಾನರ್ ತೆರವು ಸಂಬಂಧ ಕೈ ಮುಖಂಡ ರಾಜೀವ್ ಗೌಡ ಅವಾಚ್ಯ ಶಬ್ದಗಳಿಂದ ನಿಂದಿಸಿ, ಧಮ್ಕಿ ಹಾಕಿದ್ದರು. ಈ ಸಂಬಂಧ ಅವರ ವಿರುದ್ದ ಪೌರಾಯುಕ್ತೆ ದೂರು ನೀಡಿದ್ದರಿಂದ ಎಫ್ಐಆರ್ ದಾಖಲಾಗಿತ್ತು. ದೂರಿನ ಬಳಿಕ ತಲೆಮರೆಸಿಕೊಂಡಿದ್ದಂತ ರಾಜೀವ್ ಗೌಡ ಅವರನ್ನು ಕೊನೆಗೂ ಕೇರಳ ಗಡಿಯಲ್ಲಿ ಪೊಲೀಸರು ಬಂಧಿಸಿರುವುದಾಗಿ ತಿಳಿದು ಬಂದಿದೆ. ಈ ಬಗ್ಗೆ ಹೆಚ್ಚಿನ ಮಾಹಿತಿ ತಿಳಿದು ಬರಬೇಕಿದೆ. https://kannadanewsnow.com/kannada/another-robbery-in-the-state-gold-shop-robbed-at-gunpoint-in-vijayapura/ https://kannadanewsnow.com/kannada/congress-party-to-occupy-lok-bhavan-tomorrow-protest-led-by-cm-dcm/
ಮೈಸೂರು: ನೈರುತ್ಯ ರೈಲ್ವೆ ಮೈಸೂರು ವಿಭಾಗವು 77ನೇ ಗಣರಾಜ್ಯೋತ್ಸವವನ್ನು ಮೈಸೂರು ರೈಲ್ವೆ ಕ್ರೀಡಾಂಗಣದಲ್ಲಿ ಅತ್ಯಂತ ಹೆಮ್ಮೆಯೊಂದಿಗೆ ಮತ್ತು ಉತ್ಸಾಹದಿಂದ ಆಚರಿಸಿತು. ಮೈಸೂರು ವಿಭಾಗದ ವಿಭಾಗೀಯ ರೈಲ್ವೆ ವ್ಯವಸ್ಥಾಪಕರಾದ ಮುದಿತ್ ಮಿತ್ತಲ್ ಅವರು ರಾಷ್ಟ್ರಧ್ವಜಾರೋಹಣ ನೆರವೇರಿಸಿ ಸಭೆಯನ್ನುದ್ದೇಶಿಸಿ ಮಾತನಾಡಿದರು. ಈ ಕಾರ್ಯಕ್ರಮದಲ್ಲಿ ಅಧಿಕಾರಿಗಳು, ಸಿಬ್ಬಂದಿ ಹಾಗೂ ಅವರ ಕುಟುಂಬ ಸದಸ್ಯರು ಉತ್ಸಾಹದಿಂದ ಭಾಗವಹಿಸಿದ್ದು, ದೇಶಭಕ್ತಿಯ ವಾತಾವರಣ ತುಂಬಿಕೊಂಡಿತ್ತು. ತಮ್ಮ ಭಾಷಣದಲ್ಲಿ ಡಿಆರ್ಎಂ ಅವರು ಮಹಾ ವ್ಯವಸ್ಥಾಪಕರ ಮಟ್ಟದಲ್ಲಿ ಅತಿ ವಿಶಿಷ್ಟ ಸೇವಾ ಪುರಸ್ಕಾರ ಪಡೆದ ಸಿಬ್ಬಂದಿಯನ್ನು ಅಭಿನಂದಿಸಿದರು ಹಾಗೂ ಎಲ್ಲ ಸಿಬ್ಬಂದಿಯ ಸಮೂಹ ಪ್ರಯತ್ನವನ್ನು ಶ್ಲಾಘಿಸಿದರು. ರೈಲುಗಳ ಸಮಯಪಾಲನೆ ಶೇಕಡಾ 89ರಿಂದ 91.68ಕ್ಕೆ ಸುಧಾರಣೆಗೊಂಡಿದೆ ಎಂದು ತಿಳಿಸಿದರು. ಸರಕು ಸಾಗಣೆ ಕ್ಷೇತ್ರದಲ್ಲಿ ಕಳೆದ ವರ್ಷದ ಸಾಧನೆಗಿಂತ ಸುಮಾರು 2% ಹೆಚ್ಚಳ ಕಂಡುಬಂದಿದ್ದು, ದೀರ್ಘ ಮಾರ್ಗದ ಲಾಭದಿಂದಾಗಿ ಆದಾಯವು 9% ಹೆಚ್ಚಾಗಿದೆ ಎಂದು ಹೇಳಿದರು. ಚಿಕ್ಕಜಾಜೂರು–ರಾಯದುರ್ಗ ವಿಭಾಗವನ್ನು 25 ಟನ್ ಆಕ್ಸಲ್ ಲೋಡ್ಗೆ ನವೀಕರಿಸಿರುವುದು ಒಂದೇ ರೇಕಿನಲ್ಲಿ ಹೆಚ್ಚು ಸರಕು ಸಾಗಣೆಗೆ ಸಹಕಾರಿಯಾಗಿದೆ ಎಂದು ವಿವರಿಸಿದರು.…
ಮಂಡ್ಯ: ಮಂಡ್ಯ ಜಿಲ್ಲೆಯ ವ್ಯಾಪ್ತಿಯ ಗ್ರಾಮ ಪಂಚಾಯತ್ ಗಳಲ್ಲಿ ದಿನಾಂಕ:31-10-2017ಕ್ಕೂ ಪೂರ್ವದಲ್ಲಿ ಗ್ರಾಮ ಪಂಚಾಯತ್ ನಿಂದ ನೇಮಕಗೊಂಡು ನೀರುಗಂಟಿ, ಸ್ವಚ್ಛತಗಾರ, ಅಟೆಂಡರ್ ಹುದ್ದೆಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ 590 ಸಿಬ್ಬಂದಿಗಳಿಗೆ ಅನುಮೋದನೆ ನೀಡಲಾಗಿದ್ದು, ಸದರಿ ಸಿಬ್ಬಂದಿಗಳಿಗೆ ಸರ್ ಎಂ. ವಿಶ್ವೇಶ್ವರಯ್ಯ ಕ್ರೀಡಾಂಗಣದಲ್ಲಿ ನಡೆದ ಗಣರಾಜ್ಯೋತ್ಸವ ಸಮಾರಂಭದಲ್ಲಿ ಕೃಷಿ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಚಲುವರಾಯಸ್ವಾಮಿ ಆದೇಶ ಪ್ರತಿ ವಿತರಿಸಿದರು. ಸರ್ಕಾರದ ನಿರ್ದೇಶನದಂತೆ ಗ್ರಾಮ ಪಂಚಾಯತ್ ನ ಅರ್ಹ ಸಿಬ್ಬಂದಿಗಳಿಗೆ ಅನುಮೋದನೆ ನೀಡುವಂತೆ ಸಿಇಓ ಅವರಿಗೆ ಸೂಚಿಸಲಾಗಿತ್ತು. ಸಿಇಓ ಮತ್ತು ಅವರ ತಂಡ ಅತ್ಯಂತ ಪಾರದರ್ಶಕವಾಗಿ ಅನುಮೋದನೆ ಪ್ರಕ್ರಿಯೆ ಪೂರ್ಣಗೊಳಿಸಿದೆ ಎಂದು ತಿಳಿಸಿದರು. ಸರ್ಕಾರದ ಆದೇಶ ಸಂಖ್ಯೆ:ಕೆ.ಪಿ.ಆರ್.ಸಿ/ಜಿಪಿಎ/450/2023, ದಿನಾಂಕ:18-11-2023ರಂತೆ ನೌಕರರ ಅನುಮೋದನೆ ಪ್ರಕ್ರಿಯೆ ಕೈಗೊಳ್ಳಲು ಹಾಗೂ ಅನುಮೋದನೆ ಪ್ರಕ್ರಿಯೆಯನ್ನು ಅತ್ಯಂತ ಪಾರದರ್ಶಕವಾಗಿ ನಡೆಸಲು ಒಟ್ಟು ನಾಲ್ಕು ಹಂತಗಳಲ್ಲಿ ನೌಕರರ ದಾಖಲಾತಿಗಳ ಪರಿಶೀಲನಾ ಕಾರ್ಯವನ್ನು ಹಮ್ಮಿಕೊಳ್ಳಲಾಗಿತ್ತು, ಈ ಪ್ರಕ್ರಿಯೆ ಗೆ ಸಹಕರಿಸಿದ ಜಿಲ್ಲೆಯ ಎಲ್ಲಾ ಶಾಸಕರು ಮತ್ತು ಆಡಳಿತ ವರ್ಗಕ್ಕೆ ಸಿಇಓ ಅವರು ಅಭಿನಂದನೆ…
ಬೆಂಗಳೂರು; ಕೇಂದ್ರ ಸರ್ಕಾರದ ವಿರುದ್ಧ ಕಾಂಗ್ರೆಸ್ ಜಿ ರಾಮ್ ಜಿ ಸಮರವನ್ನೇ ಸಾರಿದೆ. ಇದೇ ಕಾರಣಕ್ಕೆ ನಾಳೆ ಕಾಂಗ್ರೆಸ್ ಪಕ್ಷದಿಂದ ಲೋಕಭವನ ಚಲೋ ಹಮ್ಮಿಕೊಳ್ಳಲಾಗಿದೆ. ಮುಖ್ಯಮಂತ್ರಿ ಸಿದ್ಧರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಗುತ್ತಿದೆ. ಕಾಂಗ್ರೆಸ್ ಪಕ್ಷದಿಂದ ಜಿ ರಾಮ್ ಜಿ ವಿರುದ್ಧ ಸಮರ ಮುಂದುವರೆದಿದೆ. ನಾಳೆ ಲೋಕಭವನ ಮುತ್ತಿಗೆ ಹಾಕಲು ಪ್ಲ್ಯಾನ್ ಮಾಡಲಾಗಿದೆ. ಇತ್ತ ಕಾಂಗ್ರೆಸ್ ವಿರುದ್ಧ ನಾಳೆ ಬಿಜೆಪಿ, ಜೆಡಿಎಸ್ ಕೂಡ ಪ್ರತಿಭಟನೆ ನಡೆಸಲಿದೆ ಎನ್ನಲಾಗಿದೆ. ಈ ಎಲ್ಲಾ ಕಾರಣದಿಂದಾಗಿ ಮುಂಜಾಗ್ರತಾ ಕ್ರಮವಾಗಿ ಪೊಲೀಸರು ಬಿಗಿ ಪೊಲೀಸ್ ಬಂದೋಬಸ್ತ್ ಅನ್ನು ಲೋಕಭವನದ ಬಳಿಯಲ್ಲಿ ಕೈಗೊಳ್ಳಲಿದ್ದಾರೆ ಎಂಬುದಾಗಿ ತಿಳಿದು ಬಂದಿದೆ. ನಾಳೆ ಕಾಂಗ್ರೆಸ್ ಜಿ ರಾಮ್ ಜಿ ವಿರುದ್ಧ ಪ್ರತಿಭಟನೆ, ಕೈ ಪಕ್ಷದ ವಿರುದ್ಧ ಬಿಜೆಪಿ, ಜೆಡಿಎಸ್ ರಣ ಕಹಳೆ ಯಾವ ಹಂತಕ್ಕೆ ಮುಟ್ಟಲಿದೆ ಎಂಬುದನ್ನು ಕಾದು ನೋಡಬೇಕಿದೆ. https://kannadanewsnow.com/kannada/does-eating-garlic-in-the-morning-really-lower-cholesterol-read-what-the-science-says/ https://kannadanewsnow.com/kannada/three-tourists-rescued-from-drowning-in-gokarna-beach/
ಹೆಚ್ಚಿನ ಕೊಲೆಸ್ಟ್ರಾಲ್ ಇರುವವರು ತಮ್ಮ ಜೀವನಶೈಲಿಯ ಬಗ್ಗೆ ಬಹಳ ಜಾಗರೂಕರಾಗಿರಬೇಕು. ಏಕೆಂದರೆ ಅದನ್ನು ಕಡಿಮೆ ಮಾಡದಿದ್ದರೆ ಹೃದಯಾಘಾತ ಸೇರಿದಂತೆ ವಿವಿಧ ಹೃದಯ ಸಮಸ್ಯೆಗಳಿಗೆ ಕಾರಣವಾಗಬಹುದು. ವೈದ್ಯರ ಪ್ರಕಾರ, ಔಷಧಿಗಳನ್ನು ತೆಗೆದುಕೊಳ್ಳುವುದರ ಜೊತೆಗೆ, ಕೊಲೆಸ್ಟ್ರಾಲ್ ಮಟ್ಟವನ್ನು ಕಡಿಮೆ ಮಾಡಲು ಹಲವಾರು ನೈಸರ್ಗಿಕ ಮಾರ್ಗಗಳಿವೆ, ಅವುಗಳಲ್ಲಿ ಕೆಲವು ತರಕಾರಿಗಳನ್ನು ತಿನ್ನುವುದು ಸೇರಿವೆ. ಅವುಗಳಲ್ಲಿ ಒಂದು ಬೆಳ್ಳುಳ್ಳಿ. ಹಾಗಾದ್ರೆ ಬೆಳಗ್ಗೆ ಬೆಳ್ಳುಳ್ಳಿ ತಿಂದ್ರೆ ನಿಜವಾಗಿಯೂ ಕೊಲೆಸ್ಟ್ರಾಲ್ ಕಡಿಮೆ ಮಾಡುತ್ತಾ? ವಿಜ್ಞಾನ ಹೇಳೋದೇನು ಅಂತ ಮುಂದೆ ಓದಿ. ಬೆಳ್ಳುಳ್ಳಿ ಆಲಿಸಿನ್ ಎಂದು ಕರೆಯಲ್ಪಡುವ ಜೈವಿಕ ಸಕ್ರಿಯ ಸಂಯುಕ್ತದಿಂದ ತುಂಬಿರುತ್ತದೆ, ಇದು ಈ ಪರಿಣಾಮಕ್ಕೆ ಕೊಡುಗೆ ನೀಡುತ್ತದೆ ಎಂದು ಭಾವಿಸಲಾಗಿದೆ. ಅಲ್ಲದೆ, ನಿಮ್ಮ ಅನಗತ್ಯ ಕೆಟ್ಟ ಕೊಲೆಸ್ಟ್ರಾಲ್ ಅನ್ನು ಕಡಿಮೆ ಮಾಡುವುದರ ಜೊತೆಗೆ, ಬೆಳ್ಳುಳ್ಳಿ ಇತರ ಪ್ರಯೋಜನಗಳನ್ನು ಸಹ ಹೊಂದಿದೆ, ಇದರಲ್ಲಿ ಸುಧಾರಿತ ರೋಗನಿರೋಧಕ ಮಟ್ಟಗಳು, ಕಡಿಮೆ ರಕ್ತದೊತ್ತಡ ಮತ್ತು ಹೆಚ್ಚಿನ ಉತ್ಕರ್ಷಣ ನಿರೋಧಕ ಗುಣಲಕ್ಷಣಗಳು ಸೇರಿವೆ. ಬೆಳ್ಳುಳ್ಳಿ ಕೆಟ್ಟ ಕೊಲೆಸ್ಟ್ರಾಲ್ ಅನ್ನು ಹೇಗೆ ಕಡಿಮೆ ಮಾಡುತ್ತದೆ? ಬೆಳ್ಳುಳ್ಳಿಯ…
ಉತ್ತರ ಕನ್ನಡ: ಜಿಲ್ಲೆಯ ಗೋಕರ್ಣ ಕಡಲ ಕಿನಾರೆಯಲ್ಲಿ ಮುಳುಗುತ್ತಿದ್ದಂತ ಮೂವರು ಪ್ರವಾಸಿಗರನ್ನು ಲೈಫ್ ಗಾರ್ಡ್ ಸಿಬ್ಬಂದಿಗಳು ರಕ್ಷಣೆ ಮಾಡುವಲ್ಲಿ ಯಶಸ್ವಿಯಾಗಿದ್ದಾರೆ. ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲ್ಲೂಕಿನ ಗೋಕರ್ಣ ಸಮುದ್ರದಲ್ಲಿ ಮುಳುಗುತ್ತಿದ್ದಂತ ಚಿತ್ರದುರ್ಗ ಮೂಲದ ಮನು(23), ಶಿವು(36) ಹಾಗೂ ಕಿರಣ್(26) ಎಂಬುವರನ್ನು ರಕ್ಷಣೆ ಮಾಡಲಾಗಿದೆ. ಚಿತ್ರದುರ್ಗದಿಂದ ಗೋಕರ್ಣಕ್ಕೆ 21 ಜನರು ಪ್ರವಾಸಕ್ಕೆ ತೆರಳಿದ್ದರು. ಲೈಫ್ ಗಾರ್ಡ್ ಸಿಬ್ಬಂದಿ ಎಚ್ಚರಿಕೆ ನೀಡಿದ್ದರೂ ಸಮುದ್ರಕ್ಕೆ ಇಳಿದಿದ್ದರು. ಅಲೆಗಳ ಅಬ್ಬರಕ್ಕೆ ಕೊಚ್ಚಿ ಹೋಗುತ್ತಿದ್ದ ಮೂವರು ಪ್ರವಾಸಿಗರನ್ನು ಲೈಫ್ ಗಾರ್ಡ್ ಸಿಬ್ಬಂದಿ ರಕ್ಷಣೆ ಮಾಡಿದ್ದಾರೆ. https://kannadanewsnow.com/kannada/government-grants-for-school-and-assembly-hall-at-marikamba-temple-in-sagar-mla-gopalakrishna-belur/ https://kannadanewsnow.com/kannada/gift-from-the-state-government-to-the-lakkundi-rithi-family-site-cash-appointment-letter-handed-over/
ಗದಗ: ಜಿಲ್ಲೆಯ ಲಕ್ಕುಂಡಿಯಲ್ಲಿ ನಿಧಿ ಸಿಕ್ಕಿದ್ದನ್ನು ಸರ್ಕಾರಕ್ಕೆ ನೀಡಿದಂತ ರಿತ್ತಿ ಕುಟುಂಬಕ್ಕೆ ಸರ್ಕಾರ ಬಂಫರ್ ಗಿಫ್ಟ್ ನೀಡಿದೆ. ಮನೆ ನಿರ್ಮಾಣಕ್ಕೆ ನಿವೇಶನ, ಜೊತೆಗೆ 5 ಲಕ್ಷ ನಗದು ಹಾಗೂ ಕಸ್ತೂರೆವ್ವಗೆ ಹೊರಗುತ್ತಿಗೆ ಆಧಾರದಲ್ಲಿ ಕೆಲಸ ನೀಡಿದೆ. ಇಂದು ಸಚಿವ ಹೆಚ್.ಕೆ ಪಾಟೀಲ್ ಅವರು ರಿತ್ತಿ ಕುಟುಂಬಕ್ಕೆ 30X40 ಅಳತೆಯ ನಿವೇಶನ, ಮನೆ ನಿರ್ಮಾಣಕ್ಕೆ 5 ಲಕ್ಷ ನಗದನ್ನು ನೀಡಿದರು. ಇದಲ್ಲದೇ ಕಸ್ತೂರೆವ್ವಗೆ ಹೊರಗುತ್ತಿಗೆ ಆಧಾರದಲ್ಲಿ ಕೆಲಸದ ಆದೇಶ ಪತ್ರವನ್ನು ನೀಡಿದರು. ರತ್ತಿ ಕುಟುಂಬವು ಮನೆ ನಿರ್ಮಾಣಕ್ಕಾಗಿ ಪಾಯ ತೆಗೆಯುತ್ತಿದ್ದಂತ ಸಂದರ್ಭದಲ್ಲಿ ಪುರಾತನ ಬಂಗಾರದ ಮಡಿಕೆ ದೊರೆತಿತ್ತು. ಅದನ್ನು ಸರ್ಕಾರಕ್ಕೆ ಒಪ್ಪಿಸಿದ್ದರು. ಅದೇ ಜಾಗದಲ್ಲಿ ಉತ್ಖನನಗೆ ಪುರಾತತ್ವ ಇಲಾಖೆ ನಿರ್ಧರಿಸಿತ್ತು. ಹೀಗಾಗಿ ಪರ್ಯಾಯ ನಿವೇಶನ ನೀಡುವಂತೆ ಸರ್ಕಾರಕ್ಕೆ ಕುಟುಂಬ ಮನವಿ ಮಾಡಿತ್ತು. ಈ ಹಿನ್ನಲೆಯಲ್ಲಿ ರಿತ್ತಿ ಕುಟುಂಬಕ್ಕೆ ಸಚಿವ ಹೆಚ್.ಕೆ ಪಾಟೀಲ್ ಅವರು ಇಂದು ಕಾರ್ಯಕ್ರಮವೊಂದರಲ್ಲಿ ಸನ್ಮಾನಿಸಿ, ನಿವೇಶನ ಹಂಚಿಕೆ ಪತ್ರ, ರಿತ್ತಿ ಕುಟುಂಬದ ಕಸ್ತೂರೆವ್ವಗೆ ಹೊರಗುತ್ತಿಗೆ ಆಧಾರದಲ್ಲಿ ನೇಮಕಾತಿ ಪತ್ರ ಹಾಗೂ…
ಶಿವಮೊಗ್ಗ: ಸಾಗರದ ಶ್ರೀ ಮಾರಿಕಾಂಬ ದೇವಿ ನ್ಯಾಸ ಪ್ರತಿಷ್ಠಾನದಿಂದನ ನಿರ್ಮಿಸುವಂತ ಶಾಲೆ, ಸಭಾ ಭವನಕ್ಕೆ ಸಮಿತಿಯಿಂದ ಎಷ್ಟು ಆಗುತ್ತೋ ಅಷ್ಟು ಹಣದ ನೆರವಾಗಿ. ಇನ್ನುಳಿದ ಹಣವನ್ನು ಸರ್ಕಾರದಿಂದ ತಂದು ಶಾಲೆ, ಸಭಾ ಭವನವನ್ನು ಪೂರ್ಣಗೊಳಿಸುವ ಜವಾಬ್ದಾರಿ ನನ್ನದು ಎಂಬುದಾಗಿ ಶಾಸಕ ಗೋಪಾಲಕೃಷ್ಣ ಬೇಳೂರು ಭರವಸೆ ನೀಡಿದ್ದಾರೆ. ಇಂದು ಶಿವಮೊಗ್ಗ ಜಿಲ್ಲೆಯ ಸಾಗರದಲ್ಲಿ ಶ್ರೀ ಮಾರಿಕಾಂಬ ದೇವಿ ನ್ಯಾಸ ಪ್ರತಿಷ್ಠಾನದ ನೂತನ ಶಾಲೆ, ಸಭಾಭವನ ನಿರ್ಮಾಣಕ್ಕೆ ಶಂಕುಸ್ಥಾಪನೆ ನೆರವೇರಿಸಿದ ಬಳಿಕ ಮಾತನಾಡಿದಂತ ಅವರು, ಫೆಬ್ರವರಿ 3ರಿಂದ 9 ದಿನಗಳ ವರೆಗೆ ಸಾಗರದ ಪ್ರಸಿದ್ಧ ಮಾರಿಕಾಂಬ ದೇವಿ ಜಾತ್ರೆ ನೆರವೇರಲಿದೆ. ಈ ಬಾರಿ ಕಳೆದ ಬಾರಿಗಿಂದ 20 ರಿಂದ 30 ಲಕ್ಷ ಜನರು ಬರುವ ನಿರೀಕ್ಷೆಯಿದೆ ಎಂದರು. ಮಾರಿಕಾಂಬ ಜಾತ್ರೆಗೆ ಆಗಮಿಸುವಂತ ಭಕ್ತರಿಗೆ ಯಾವುದೇ ಮೂಲಭೂತ ಸೌಕರ್ಯಗಳ ಕೊರತೆ ಆಗದಂತೆ ತಾಲ್ಲೂಕು ಆಡಳಿತದಿಂದ ಸಕಲ ಸಿದ್ಧತೆ ಮಾಡಲಾಗಿದೆ. ಜಾತ್ರೆಗಾಗಿ 20 ಸಮಿತಿಯನ್ನು ರಚನೆ ಮಾಡಲಾಗಿದ್ದು, ಒಂದೊಂದು ಕಮಿಟಿಗೂ ಓರ್ವ ಸರ್ಕಾರಿ ಅಧಿಕಾರಿಯನ್ನು ನಿಯೋಜಿಸಲಾಗಿದೆ. ಜಾತ್ರೆಗೆ…
ಗದಗ: ಜಿಲ್ಲೆಯ ಲಕ್ಕುಂಡಿಯಲ್ಲಿ ನಿಧಿ ಸಿಕ್ಕಿದ್ದನ್ನು ಸರ್ಕಾರಕ್ಕೆ ನೀಡಿದಂತ ರಿತ್ತಿ ಕುಟುಂಬಕ್ಕೆ ಸರ್ಕಾರ ಬಂಫರ್ ಗಿಫ್ಟ್ ನೀಡಿದೆ. ಮನೆ ನಿರ್ಮಾಣಕ್ಕೆ ನಿವೇಶನ, ಜೊತೆಗೆ 5 ಲಕ್ಷ ನಗದು ಹಾಗೂ ಕಸ್ತೂರೆವ್ವಗೆ ಹೊರಗುತ್ತಿಗೆ ಆಧಾರದಲ್ಲಿ ಕೆಲಸ ನೀಡಿದೆ. ಇಂದು ಸಚಿವ ಹೆಚ್.ಕೆ ಪಾಟೀಲ್ ಅವರು ರಿತ್ತಿ ಕುಟುಂಬಕ್ಕೆ 30X40 ಅಳತೆಯ ನಿವೇಶನ, ಮನೆ ನಿರ್ಮಾಣಕ್ಕೆ 5 ಲಕ್ಷ ನಗದನ್ನು ನೀಡಿದರು. ಇದಲ್ಲದೇ ಕಸ್ತೂರೆವ್ವಗೆ ಹೊರಗುತ್ತಿಗೆ ಆಧಾರದಲ್ಲಿ ಕೆಲಸದ ಆದೇಶ ಪತ್ರವನ್ನು ನೀಡಿದರು.













