Author: kannadanewsnow09

ಬೆಂಗಳೂರು: ಭಾರತ ಸರ್ಕಾರದ ಅತ್ಯಂತ ಯಶಸ್ವಿ ಉಳಿತಾಯ ಯೋಜನೆಗಳಲ್ಲಿ ಒಂದಾದ ‘ಸುಕನ್ಯಾ ಸಮೃದ್ಧಿ ಯೋಜನೆ’ (Sukanya Samriddhi Yojana) ಇಂದು ಮಧ್ಯಮ ವರ್ಗದ ಪೋಷಕರಿಗೆ ವರದಾನವಾಗಿ ಪರಿಣಮಿಸಿದೆ. ‘ಬೇಟಿ ಬಚಾವೋ, ಬೇಟಿ ಪಢಾವೋ’ ಅಭಿಯಾನದ ಅಡಿಯಲ್ಲಿ ಜಾರಿಗೆ ಬಂದ ಈ ಯೋಜನೆಯು ಹೆಣ್ಣು ಮಕ್ಕಳ ಶಿಕ್ಷಣ ಮತ್ತು ವಿವಾಹದ ಆರ್ಥಿಕ ಹೊರೆಯನ್ನು ಕಡಿಮೆ ಮಾಡುವ ಗುರಿಯನ್ನು ಹೊಂದಿದೆ. ಯಾರು ಖಾತೆ ತೆರೆಯಬಹುದು? ಈ ಯೋಜನೆಯಡಿ, 10 ವರ್ಷದೊಳಗಿನ ಹೆಣ್ಣು ಮಗುವಿನ ಹೆಸರಿನಲ್ಲಿ ಪೋಷಕರು ಅಥವಾ ಕಾನೂನುಬದ್ಧ ಪಾಲಕರು ಖಾತೆಯನ್ನು ತೆರೆಯಬಹುದು. ಒಂದು ಕುಟುಂಬದಲ್ಲಿ ಗರಿಷ್ಠ ಇಬ್ಬರು ಹೆಣ್ಣು ಮಕ್ಕಳಿಗೆ ಮಾತ್ರ ಈ ಸೌಲಭ್ಯ ಲಭ್ಯವಿರುತ್ತದೆ (ಅವಳಿ ಮಕ್ಕಳಾಗಿದ್ದಲ್ಲಿ ಮೂವರಿಗೂ ಅವಕಾಶವಿದೆ). ಯಾವುದೇ ಅಂಚೆ ಕಚೇರಿ ಅಥವಾ ಅಧಿಕೃತ ಬ್ಯಾಂಕ್‌ಗಳಲ್ಲಿ ಈ ಖಾತೆಯನ್ನು ಸುಲಭವಾಗಿ ಆರಂಭಿಸಬಹುದು. ಹೂಡಿಕೆಯ ಮಿತಿ ಮತ್ತು ಅವಧಿ ಕನಿಷ್ಠ ಹೂಡಿಕೆ: ವರ್ಷಕ್ಕೆ ಕೇವಲ 250 ರೂಪಾಯಿ ಪಾವತಿಸುವ ಮೂಲಕ ಖಾತೆಯನ್ನು ಸಕ್ರಿಯವಾಗಿಡಬಹುದು. ಗರಿಷ್ಠ ಹೂಡಿಕೆ: ಒಂದು ಹಣಕಾಸು ವರ್ಷದಲ್ಲಿ…

Read More

ಬೆಂಗಳೂರು: ಪ್ರತಿವರ್ಷದಂತೆ ಈ ಬಾರಿಯೂ ಸಾಮಾನ್ಯ ಜನರ ಜೇಬಿಗೆ ಕತ್ತರಿ ಬೀಳುವ ಲಕ್ಷಣಗಳು ಕಾಣಿಸುತ್ತಿವೆ. ರಾಜ್ಯದಾದ್ಯಂತ ಇರುವ ಖಾಸಗಿ ಶಾಲೆಗಳು 2026-27ನೇ ಶೈಕ್ಷಣಿಕ ಸಾಲಿನಿಂದ ಅನ್ವಯವಾಗುವಂತೆ ಶಾಲಾ ಶುಲ್ಕವನ್ನು ಹೆಚ್ಚಿಸಲು ನಿರ್ಧರಿಸಿವೆ. ಶುಲ್ಕ ಹೆಚ್ಚಳಕ್ಕೆ ಕಾರಣಗಳೇನು? ಖಾಸಗಿ ಶಾಲೆಗಳ ಒಕ್ಕೂಟದ ಪ್ರಕಾರ, ದಿನಬಳಕೆ ವಸ್ತುಗಳ ಬೆಲೆ ಏರಿಕೆ, ಶಾಲಾ ವಾಹನಗಳ ಇಂಧನ ವೆಚ್ಚ ಮತ್ತು ಶಿಕ್ಷಕರ ವೇತನದ ಹೊರೆ ಹೆಚ್ಚಾಗಿರುವುದರಿಂದ ಆರ್ಥಿಕ ಸಂಕಷ್ಟ ಎದುರಾಗಿದೆ. ಈ ಹಿನ್ನೆಲೆಯಲ್ಲಿ ಶಾಲಾ ಆಡಳಿತ ಮಂಡಳಿಗಳು ಅನಿವಾರ್ಯವಾಗಿ ಶುಲ್ಕ ಹೆಚ್ಚಳದ ಹಾದಿ ಹಿಡಿದಿವೆ ಎನ್ನಲಾಗಿದೆ. ಎಷ್ಟು ಏರಿಕೆಯಾಗಲಿದೆ? ಹೆಚ್ಚಳದ ಪ್ರಮಾಣ: ಒಕ್ಕೂಟದ ಮಾಹಿತಿ ಪ್ರಕಾರ ಈ ವರ್ಷ ಶೇ. 5 ರಿಂದ ಶೇ. 15 ರಷ್ಟು ಶುಲ್ಕ ಹೆಚ್ಚಿಸಲು ಚಿಂತನೆ ನಡೆಸಲಾಗಿದೆ. ಮಿತಿ: ಯಾವುದೇ ಕಾರಣಕ್ಕೂ ಶೇ. 15ಕ್ಕಿಂತ ಹೆಚ್ಚು ಶುಲ್ಕವನ್ನು ಏರಿಕೆ ಮಾಡಬಾರದು ಎಂದು ಖಾಸಗಿ ಶಾಲೆಗಳ ಒಕ್ಕೂಟವು ತನ್ನ ಸದಸ್ಯ ಶಾಲೆಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದೆ. ಶಾಲೆಯ ನಿರ್ಧಾರ: ಯಾವ ಶಾಲೆ ಎಷ್ಟು…

Read More

ಶಿವಮೊಗ್ಗ: ಮಹಿಳೆಗೆ ಕೆಲಸ ಕೊಡಿಸುವುದಾಗಿ 3 ಲಕ್ಷ ಪಡೆದು, ವಂಚಿಸಿದಂತ ಆರೋಪದ ಹಿನ್ನಲೆಯಲ್ಲಿ ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ಕಾರ್ಯದರ್ಶಿ ನಾಜಿಮಾ ಹಾಗೂ ವೈ ತಿಮ್ಮರಾಜು ಅವರನ್ನು ಪಕ್ಷದಿಂದ 6 ವರ್ಷಗಳ ಕಾಲ ಉಚ್ಚಾಟಿಸಲಾಗಿದೆ. ಗುತ್ತಿಗೆ ಆಧಾರದಲ್ಲಿ ಅಸ್ಮಾ ಬಾನು ಎಂಬುವರಿಂದ ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ಕಾರ್ಯದರ್ಶಿಯಾಗಿದ್ದಂತ ನಾಜಿಮಾ ಹಾಗೂ ವೈ.ತಿಮ್ಮರಾಜು ಅವರು ಕೆಲಸ ಕೊಡಿಸುವುದಾಗಿ 3 ಲಕ್ಷ ಹಣ ಪಡೆದಿದ್ದರು. ಈ ವೇಳೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಹೆಸರನ್ನು, ಪರಿಷತ್ ಸದಸ್ಯರ ಹೆಸರನ್ನು ದುರುಪಯೋಗ ಮಾಡಿಕೊಂಡಿದ್ದಾಗಿ ಆರೋಪಿಸಿ ಅಸ್ಮಾ ಬಾನು ಶಿವಮೊಗ್ಗದ ದೊಡ್ಡಪೇಟೆ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಈ ದೂರು ಆಧರಿಸಿ ನಾಜಿಯಾ, ವೈ.ತಿಮ್ಮರಾಜು ವಿರುದ್ಧ ಪ್ರಕರಣ ಕೂಡ ದಾಖಲಾಗಿತ್ತು. ಈ ಹಿನ್ನಲೆಯಲ್ಲಿ ಕಾಂಗ್ರೆಸ್ ಪಕ್ಷ ಮುಜುಗರ ಉಂಟಾಗಿತ್ತು. ಈ ಹಿನ್ನಲೆಯಲ್ಲಿ ಶಿವಮೊಗ್ಗ ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಶ್ವೇತಾ ಬಂಡಿ ಅವರು ನಾಜಿಮಾ ಅವರನ್ನು ಪಕ್ಷದಿಂದ ಉಚ್ಚಾಟಿಸಿವಂತೆ ಜಿಲ್ಲಾಧ್ಯಕ್ಷರಿಗೆ ಪತ್ರ ಬರೆದಿದ್ದರು. ಈ ಹಿನ್ನಲೆಯಲ್ಲಿ ನಾಜಿಮಾ…

Read More

ಬೆಂಗಳೂರು : ಸರ್ವಜ್ಞನಗರ ವಿಧಾನಸಭಾ ಕ್ಷೇತ್ರದಲ್ಲಿ ಭವಿಷ್ಯದ ದೃಷ್ಟಿಯಿಂದ ಮೂಲ ಸೌಕರ್ಯ ಯೋಜನೆಗಳನ್ನು ಅನುಷ್ಠಾನಗೊಳಿಸಲಾಗುತ್ತಿದ್ದು, ಮುಂದಿನ ದಿನಗಳಲ್ಲಿ ಮಾದರಿ ಕ್ಷೇತ್ರವಾಗಿ ಹೊರಹೊಮ್ಮಲಿದೆ ಎಂದು ಇಂಧನ ಸಚಿವರೂ ಆಗಿರುವ ಕ್ಷೇತ್ರದ ಶಾಸಕ ಕೆ.ಜೆ.ಜಾರ್ಜ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ನಾಗವಾರ ವ್ಯಾಪ್ತಿಯಲ್ಲಿ ಬುಧವಾರ ಕ್ಷೇತ್ರ ಪರ್ಯಟನೆ ನಡೆಸಿ ಮೂಲಸೌಕರ್ಯ ಅಭಿವೃದ್ದಿ ಕಾಮಗಾರಿಗಳನ್ನು ಪರಿಶೀಲನೆ ನಡೆಸಿದ ಸಚಿವರು ಮಾತನಾಡಿ, “ನಮ್ಮ ಸರ್ಕಾರದ ಯೋಜನೆಗಳು ಕ್ಷೇತ್ರದ ಜನತೆಗೆ ಮೂಲಸೌಕರ್ಯ ಒದಗಿಸುವ ಜತೆಗೆ ಭವಿಷ್ಯದಲ್ಲಿ ಸಮಗ್ರ ಅಭಿವೃದ್ದಿಯ ಚಿಂತನೆಯಿಂದ ಕೂಡಿದೆ,” ಎಂದು ತಿಳಿಸಿದರು. “ವೈಟ್‌ಟಾಪಿಂಗ್ ರಸ್ತೆಗಳು ಗುಣಮಟ್ಟದ ರಸ್ತೆಗಳಾಗಿದ್ದು ವಾಹನ ಸವಾರರಿಗೆ ಸುರಕ್ಷತೆ ಒದಗಿಸಲಿದೆ. ರಸ್ತೆಗಳು ದಕ್ಷತೆಯಿಂದ ಇರಲಿದ್ದು, ಗುಂಡಿ ಸಮಸ್ಯೆಗಳಿಗೆ ತಿಲಾಂಜಲಿ ಹಾಡಲಿವೆ. ಬಡಾವಣೆಗಳು ಅಭಿವೃದ್ದಿಯಾದಂತೆ ಒಳಚರಂಡಿ ತ್ಯಾಜ್ಯ ನೀರಿನ ಒತ್ತಡ ಹೆಚ್ಚಾಗುತ್ತಿದ್ದು ಸಮಸ್ಯೆ ನಿವಾರಿಸಲು ಕ್ರಮ ಕೈಗೊಳ್ಳಲಾಗುತ್ತಿದೆ. ಮಳೆಗಾಲದಲ್ಲಿ ಎದುರಾಗಲಿರುವ ಸಮಸ್ಯೆಗಳನ್ನು ನಿವಾರಿಸಲು ಇಂಟಿಗ್ರೇಟೆಡ್ ಸೀವೇಜ್ ಪಂಪಿಂಗ್ ಸಿಸ್ಟಮ್ (ಐಎಸ್‌ಪಿಎಸ್‌) ಎಂಬ ಆಧುನಿಕ ತಂತ್ರಜ್ಞಾನ ಹಾಗೂ ವ್ಯವಸ್ಥಿತ ಟ್ಯಾಂಕ್ ನಿರ್ಮಾಣ ಮಾಡುತ್ತಿದ್ದೇವೆ. ಇದು ಭವಿಷ್ಯದಲ್ಲಿ ತ್ಯಾಜ್ಯ ನೀರು…

Read More

ಬೆಂಗಳೂರು: ಎಂಜಿನಿಯರಿಂಗ್ ಸೇರಿದಂತೆ ಇತರ ವೃತ್ತಿಪರ ಕೋರ್ಸ್ ಗಳ ಪ್ರವೇಶಕ್ಕೆ ಅರ್ಜಿ ಸಲ್ಲಿಸಿರುವ ಹಾಗೂ ನೋಂದಣಿ ಮಾಡಿಕೊಂಡಿರುವ ಅಭ್ಯರ್ಥಿಗಳಿಗೆ ಶುಲ್ಕ ಪಾವತಿಸಲು ಮಾರ್ಚ್ 7ರವರೆಗೆ ದಿನಾಂಕ ವಿಸ್ತರಿಸಲಾಗಿದೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಆಡಳಿತಾಧಿಕಾರಿ ಇಸ್ಲಾವುದ್ದೀನ್ ಗದ್ಯಾಳ ಅವರು ತಿಳಿಸಿದ್ದಾರೆ. ಇದುವರೆಗೆ ಒಟ್ಟು 3.47 ಲಕ್ಷ ಅಭ್ಯರ್ಥಿಗಳು ನೋಂದಣಿ ಮಾಡಿಕೊಂಡಿದ್ದು, ಈ ಪೈಕಿ 3.36 ಲಕ್ಷ ಮಂದಿ ನಿಗದಿತ ಶುಲ್ಕ ಪಾವತಿ ಮಾಡಿದ್ದಾರೆ‌. ಇನ್ನೂ 9 ಸಾವಿರ ಮಂದಿ ಶುಲ್ಕ ಪಾವತಿಸಬೇಕಿದ್ದು, ಅವರಿಗೆ ಅನುಕೂಲ ಆಗಲೆಂದು ದಿನಾಂಕ ವಿಸ್ತರಿಸಲಾಗಿದೆ ಎಂದು ಅವರು ವಿವರಿಸಿದ್ದಾರೆ. ನೇಮಕಾತಿ: ಅಂಕಪಟ್ಟಿ ಪ್ರಕಟ ಕಲ್ಯಾಣ ಕರ್ನಾಟಕ ವೃಂದದ ವಿವಿಧ ಹುದ್ದೆಗಳಿಗೆ ಫೆ.21 ಮತ್ತು 22ರಂದು ಸ್ಪರ್ಧಾತ್ಮಕ ಪರೀಕ್ಷೆ ನಡೆದಿದ್ದು, ಅವುಗಳ ಅಂತಿಮ ಕೀ ಉತ್ತರ ಹಾಗೂ ಅಭ್ಯರ್ಥಿಗಳು ಗಳಿಸಿದ ಅಂಕಗಳ ತಾತ್ಕಾಲಿಕ ಪಟ್ಟಿ ಯನ್ನು ವೆಬ್ ಸೈಟ್ ನಲ್ಲಿ ಪ್ರಕಟಿಸಲಾಗಿದೆ ಎಂದು ಗದ್ಯಾಳ ಅವರು ತಿಳಿಸಿದ್ದಾರೆ. ಅಂಕ ಪಟ್ಟಿಗೆ ಆಕ್ಷೇಪಣೆಗಳು ಇದ್ದಲ್ಲಿ ಮಾ.6ರಂದು ಬೆಳಿಗ್ಗೆ 11 ಗಂಟೆ ಒಳಗೆ…

Read More

ಬೆಂಗಳೂರು: ಮೀಸಲಾತಿ ಮತ್ತು ಒಳಮೀಸಲಾತಿ ಜಾರಿಯಲ್ಲಿ ರಾಜ್ಯದ ಕಾಂಗ್ರೆಸ್ ಸರ್ಕಾರಕ್ಕೆ ಬದ್ಧತೆಯೇ ಇಲ್ಲ. ಘೋಷಣೆ ಮಾಡುವಾಗ ಗೊಂದಲ ಸೃಷ್ಟಿಸಿ ಅನ್ಯಾಯ ಮಾಡಿದೆ ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರು ಆರೋಪಿಸಿದರು. ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ “ಜಗನ್ನಾಥ ಭವನ”ದಲ್ಲಿ ಇಂದು ಅವರು ಮಾಧ್ಯಮಗಳ ಜೊತೆ ಮಾತನಾಡಿದರು. ಮೀಸಲಾತಿ ಮತ್ತು ಒಳಮೀಸಲಾತಿಯಲ್ಲಿ ರಾಜ್ಯದ ಕಾಂಗ್ರೆಸ್ ಸರ್ಕಾರ ಕಳ್ಳಾಟ ಆಡುತ್ತಿದೆ. ಯಾರಾದರೂ ಕೋರ್ಟಿಗೆ ಹೋಗಲಿ, ಪ್ರಶ್ನೆ ಮಾಡಲಿ, ಹೇಗಾದರೂ ನಿಂತು ಹೋಗಲಿ ಎಂಬ ಮನಸ್ಥಿತಿಯಲ್ಲಿ ಕಾಂಗ್ರೆಸ್ ಸರ್ಕಾರ ಇದ್ದಂತಿದೆ. ಇದರ ವಿರುದ್ಧ ಜನರ ಆಕ್ರೋಶ ಇದೆ. ಅದನ್ನು ಆಂದೋಲನವಾಗಿ ಪರಿವರ್ತಿಸುತ್ತೇವೆ. ಇಡೀ ರಾಜ್ಯದಲ್ಲಿ ದೊಡ್ಡ ಹೋರಾಟ ಆರಂಭವಾಗಲಿದೆ. ಇದರ ರೂಪರೇಷೆ ಚರ್ಚೆ ಮಾಡುತ್ತೇವೆ ಎಂದು ಹೇಳಿದರು. ಬಸವರಾಜ ಬೊಮ್ಮಾಯಿ ಅವರು ಮುಖ್ಯಮಂತ್ರಿಗಳಾಗಿದ್ದ ವೇಳೆ ಪರಿಶಿಷ್ಟ ಜಾತಿ ಮತ್ತು ವರ್ಗಗಳು ಹೋರಾಟ ಮಾಡುತ್ತಿರುವುದನ್ನು ಗಮನಿಸಿ, ಪರಿಶಿಷ್ಟ ಜಾತಿಗೆ ಶೇ15 ರಿಂದ 17ಕ್ಕೆ, ವರ್ಗಗಳಿಗೆ ಶೇ 3 ರಿಂದ 7 ಕ್ಕೆ ಅಂದರೆ ಎರಡೂ…

Read More

ಚಿಕ್ಕಮಗಳೂರು: ಸರ್ಕಾರಿ ಕಚೇರಿಗಳಲ್ಲಿ ಭ್ರಷ್ಟಾಚಾರದ ಬೇರುಗಳು ಎಷ್ಟು ಆಳವಾಗಿ ಇಳಿದಿವೆ ಹಾಗೂ ಸಾಮಾನ್ಯ ಜನರು ತಮ್ಮ ಹಕ್ಕುಗಳನ್ನು ಪಡೆಯಲು ಎಷ್ಟು ಪರದಾಡಬೇಕಾಗಿದೆ ಎಂಬುದಕ್ಕೆ ಚಿಕ್ಕಮಗಳೂರು ಜಿಲ್ಲೆಯಲ್ಲಿ ನಡೆದ ಈ ಘಟನೆಯೇ ತಾಜಾ ಉದಾಹರಣೆ. ಸಾಮಾನ್ಯ ಜನರ ಕೆಲಸ ಮಾಡಿಕೊಡಲು ಯಾವುದೇ ಮುಲಾಜಿಲ್ಲದೆ ಲಂಚದ ಹಣಕ್ಕೆ ಬೇಡಿಕೆಯಿಡುವ ಭ್ರಷ್ಟ ಅಧಿಕಾರಿಗಳಿಗೆ ಇದೀಗ ಲೋಕಾಯುಕ್ತರು ಬಿಸಿ ಮುಟ್ಟಿಸಿದ್ದಾರೆ. ಜಿಲ್ಲೆಯ ಕಡೂರು ತಾಲೂಕಿನ ತಂಗ್ಲಿ ಗ್ರಾಮ ಪಂಚಾಯಿತಿಯ ಪಂಚಾಯತ್ ಅಭಿವೃದ್ಧಿ ಅಧಿಕಾರಿ (PDO) ನಂಜುಂಡಮ್ಮ ಅವರು ರೈತನೊಬ್ಬನಿಂದ 5,000 ರೂಪಾಯಿ ಲಂಚ ಸ್ವೀಕರಿಸುತ್ತಿದ್ದ ವೇಳೆ ರೆಡ್‌ಹ್ಯಾಂಡ್ ಆಗಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ನಿವೇಶನ ದೃಢೀಕರಣಕ್ಕೆ ಶುರುವಾಯ್ತು ಲಂಚದ ಬೇಡಿಕೆ ಗ್ರಾಮ ಪಂಚಾಯಿತಿ ಮಟ್ಟದ ಆಡಳಿತ ವ್ಯವಸ್ಥೆ ಜನಸಾಮಾನ್ಯರ ಅತಿ ಸಮೀಪದ ಆಶಾಕಿರಣವಾಗಬೇಕು. ಆದರೆ ಅಲ್ಲಿನ ಕೆಲ ಅಧಿಕಾರಿಗಳು ಲಂಚವಿಲ್ಲದೆ ಕಡತಗಳನ್ನು ಮುಟ್ಟುವುದೇ ಇಲ್ಲ. ಕಡೂರು ತಾಲೂಕಿನ ಸರಸ್ವತಿಪುರದ ನಿವಾಸಿ ತಿಮ್ಮಶೆಟ್ಟಿ ಎಂಬುವವರು ತಮ್ಮ ಸ್ವಂತ ಸೈಟ್‌ಗೆ (ನಿವೇಶನ) ಸಂಬಂಧಿಸಿದಂತೆ ಅತ್ಯಗತ್ಯವಾಗಿ ಬೇಕಾಗಿದ್ದ ದೃಢೀಕರಣ ಪತ್ರ (Site…

Read More

ಪಾಟ್ನಾ: ಬಿಹಾರ ರಾಜಕಾರಣದಲ್ಲಿ ಭಾರಿ ಸಂಚಲನ ಮೂಡಿಸುವಂತಹ ಮಹತ್ವದ ಬದಲಾವಣೆಯೊಂದು ಅಂತಿಮ ಹಂತಕ್ಕೆ ತಲುಪಿದೆ. ಸತತ ಹಲವು ವರ್ಷಗಳಿಂದ ಬಿಹಾರದ ಮುಖ್ಯಮಂತ್ರಿಯಾಗಿ ಅಧಿಕಾರ ನಡೆಸುತ್ತಿರುವ ನಿತೀಶ್ ಕುಮಾರ್ ಅವರು ಶೀಘ್ರದಲ್ಲೇ ರಾಜ್ಯ ರಾಜಕಾರಣದಿಂದ ರಾಷ್ಟ್ರ ರಾಜಕಾರಣಕ್ಕೆ ಅಂದರೆ ರಾಜ್ಯಸಭೆಗೆ ತೆರಳಲು ಸಿದ್ಧತೆ ನಡೆಸಿದ್ದಾರೆ ಎಂದು ಮೂಲಗಳು ತಿಳಿಸಿವೆ. ಜನತಾ ದಳ ಯುನೈಟೆಡ್ (JDU) ಮೂಲಗಳ ಪ್ರಕಾರ, ನಿತೀಶ್ ಕುಮಾರ್ ಅವರ ರಾಜ್ಯಸಭಾ ನಾಮನಿರ್ದೇಶನದ ಪ್ರಕ್ರಿಯೆ ಬಹುತೇಕ ಪೂರ್ಣಗೊಂಡಿದೆ. ನಾಮಪತ್ರಗಳು ಈಗಾಗಲೇ ಸಿದ್ಧವಾಗಿದ್ದು, ಕೇವಲ ಮುಖ್ಯಮಂತ್ರಿಗಳ ಸಹಿ ಮಾತ್ರ ಬಾಕಿ ಇದೆ. ಇದೇ ಮಾರ್ಚ್ 5 ರಂದು ಅವರು ಅಧಿಕೃತವಾಗಿ ನಾಮಪತ್ರ ಸಲ್ಲಿಸುವ ಸಾಧ್ಯತೆಯಿದೆ. ಮಾರ್ಚ್ 1 ರಂದು 75ನೇ ವರ್ಷಕ್ಕೆ ಕಾಲಿಟ್ಟ ಬೆನ್ನಲ್ಲೇ ಈ ನಿರ್ಧಾರ ಹೊರಬಿದ್ದಿರುವುದು ಕುತೂಹಲ ಮೂಡಿಸಿದೆ. ಮಾರ್ಚ್ 16 ರ ನಂತರ ರಾಜೀನಾಮೆ? ರಾಜ್ಯಸಭಾ ಚುನಾವಣೆ ಮಾರ್ಚ್ 16 ರಂದು ನಡೆಯಲಿದ್ದು, ಅಲ್ಲಿಯವರೆಗೆ ನಿತೀಶ್ ಕುಮಾರ್ ಮುಖ್ಯಮಂತ್ರಿಯಾಗಿ ಮುಂದುವರಿಯಲಿದ್ದಾರೆ. ಚುನಾವಣೆ ಪ್ರಕ್ರಿಯೆ ಮುಗಿದ ನಂತರ ಅವರು ಸಿಎಂ…

Read More

ಒಂದು ಮಂತ್ರ ಸಾಕು ಸಾಲ ತೀರುತ್ತೆ. ಈ ಮಂತ್ರ ಹೇಳಿದರೆ ಮೂವತ್ತು ದಿನಗಳಲ್ಲಿ ಸಾಲ ತೀರುತ್ತೆ ಅನ್ನೋ ಕುತೂಹಲಕಾರಿ ಮತ್ತು ರಹಸ್ಯ ಮಾಹಿತಿಯನ್ನು ಇಲ್ಲಿ ನಾವು ನಿಮಗೆ ತಿಳಿಸಿಕೊಡುತ್ತೇವೆ. ಕಾಲಭೈರವ ಅಂದ್ರೆ ಶಿವನ ಸ್ವರೂಪ. 64 ಭೈರವ ರೂಪದಲ್ಲಿ ಕಾಲಭೈರವನೇ ಪ್ರಮುಖವಾದವನು. ಕಾಲ ಅಂದ್ರೆ ಸಮಯವನ್ನು ಸೂಚಿಸುವವನು ಎಂದರ್ಥ.  ಶ್ರೀ ಸಿಗಂಧೂರು ಚೌಡೇಶ್ವರಿ ದೇವಿಯನ್ನು ಆರಾಧನೆ ಮಾಡುವ ದೈವಜ್ಞ ವಿದ್ವಾನ್ ವಿದ್ಯಾಧರ್ ತಂತ್ರಿ ದೈವಜ್ಞ ಪ್ರಧಾನ ತಾಂತ್ರಿಕ್ ಹಾಗೂ ಮಾಂತ್ರಿಕರು 9686268564 ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದು ಏಷ್ಟೇ ಪೂಜೆ ಪ್ರಯತ್ನ ಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..?ನಿಮ್ಮ ಯಾವುದೇಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ 2 ದಿನಗಳಲ್ಲಿ ಪರಿಹಾರ ಶತಸಿದ್ಧ ಧನವಶ, ಜನವಶ, ಶತ್ರುನಾಶ, ಸ್ತ್ರೀ– ಪುರುಷ ವಶೀಕರಣ, ದಿಗ್ಭಂಧನ, ಸ್ತಂಭನ, ವುಚ್ಛಾಟನೆಯಂತಹ ಸಮಸ್ಯೆಗಳಿಗೆ ವಿಶೇಷ ಪರಿಹಾರ ತಿಳಿಸುತ್ತಾರೆ…

Read More

ಬೆಂಗಳೂರು: ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ ವಿರುದ್ಧ ಪರಿಷತ್ ಸದಸ್ಯ ಹಾಗೂ ಕೆಪಿಸಿಸಿ ಮಾಧ್ಯಮ ವಿಭಾಗದ ಅಧ್ಯಕ್ಷ ರಮೇಶ್ ಬಾಬು ಹಿಗ್ಗಾಮುಗ್ಗಾ ವಾಗ್ಧಾಳಿ ನಡೆಸಿದ್ದಾರೆ. ಇಂದು ಕೆಪಿಸಿಸಿ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದಂತ ಅವರು, ಪ್ರಜಾಭತ್ವದ ವ್ಯವಸ್ಥೆಯಲ್ಲಿ ವಿಧಾನಮಂಡಲದ ವಿರೋಧ ಪಕ್ಷದ ನಾಯಕರಿಗೆ ಸಂವಿಧಾನದ ಅಡಿಯಲ್ಲಿ ವಿಶೇಷ ಸ್ಥಾನಮಾನಗಳನ್ನು ನೀಡಲಾಗಿದೆ. ಕರ್ನಾಟಕ ವಿಧಾನಮಂಡಲದ ಇಬ್ಬರೂ ವಿರೋಧ ಪಕ್ಷದ ನಾಯಕರು ಅತ್ಯಂತ ವೈಫಲ್ಯದ ನಾಯಕರಾಗಿದ್ದು, ರಾಜ್ಯದ ಸಮಸ್ಯೆಗಳು ಮತ್ತು ಆಡಳಿತದ ಮೇಲೆ ಬೆಳಕು ಚೆಲ್ಲುವ ಬದಲು  ಪದೇ ಪದೇ ತಮ್ಮ ವೈಫಲ್ಯಗಳನ್ನು ಸಾಬೀತು ಪಡಿಸಿಕೊಳ್ಳುತ್ತಿದ್ದಾರೆ. ವಿಧಾನ ಪರಿಷತ್ತಿನ ವಿರೋಧ ಪಕ್ಷದ ನಾಯಕರಾದ ಛಲವಾದಿ ನಾರಾಯಣಸ್ವಾಮಿ ರವರು 28-01-2026 ರಂದು  ಸದನದಲ್ಲಿ ನಿಯಮಾವಳಿ ಪುಸ್ತಕ ಹರಿಯುವುದರ ಮೂಲಕ  ಇತಿಹಾಸ ಬರೆದಿರುತ್ತಾರೆ. ಈಗ ಬಜೆಟ್ ಪುಸ್ತಕಕ್ಕೆ ಬೆಂಕಿ ಇಡುವುದಾಗಿ ಹೇಳುವುದರ ಮೂಲಕ ತಮ್ಮ ಬಟ್ಟೆಗೆ ತಾವೇ ಮಸಿ ಬಳಿದುಕೊಂಡಿರುತ್ತಾರೆ ಎಂಬುದಾಗಿ ಗುಡುಗಿದರು. ಕಾಂಗ್ರೆಸ್ ಪಕ್ಷದಿಂದ ಎಲ್ಲ ರೀತಿಯ ಬಳುವಳಿಗಳನ್ನು ಪಡೆದುಕೊಂಡು ಮಲ್ಲಿಕಾರ್ಜುನ ಖರ್ಗೆ ರವರ…

Read More