Author: kannadanewsnow09

ಲವಂಗದಿಂದ ಈ ಪರಿಹಾರವನ್ನು ಮಾಡಿಕೊಳ್ಳಿ ಮೂರು ಶುಕ್ರ ವಾರ ಗಳ ಕಾಲ ಈ ಪರಿಹಾರವನ್ನು ನೀವು ಪಾಲಿಸಿಕೊಂಡು ಬಂದಿದೆ ಅದರೆ ನಿಮ್ಮ ಜೀವನದಲ್ಲಿ ಎದುರಾಗುತ್ತ ಇರುವಂತಹ ಹಣಕಾಸಿಗೆ ಸಂಬಂಧಪಟ್ಟ ವಿಚಾರಗಳು ಬೇಗ ಪರಿಹರವಾಗುತ್ತದೆ. ಪಂಡಿತ್  ವಿದ್ಯಾಧರ್ ನಕ್ಷತ್ರಿ ಪ್ರಧಾನ ಅರ್ಚಕರು ಹಾಗೂ ಮಾಂತ್ರಿಕರು 9686268564 ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತುಪ್ರಶ್ನೆಗಳಿಗೆ ಉತ್ತರಿಸಬಹುದು ಏಷ್ಟೇ ಪೂಜೆ ಪ್ರಯತ್ನಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..?ನಿಮ್ಮ ಯಾವುದೇ ಘೋರ ನಿಗೂಢ ಗುಪ್ತಸಮಸ್ಯೆಗಳಿಗೆ 2 ದಿನಗಳಲ್ಲಿ ಪರಿಹಾರ ಶತಸಿದ್ಧ, ದಿಗ್ಭಂಧನ, ಸ್ತಂಭನ, ವುಚ್ಛಾಟನೆಯಂತಹ ಸಮಸ್ಯೆಗಳಿಗೆ ಶ್ರೀ ಕ್ಷೇತ್ರ ಕಟೀಲು ರಕ್ತೇಶ್ವರೀ ದೇವಿಯ ವಿಶೇಷ ಪೂಜಾದೈವಿಕ ವಿಧಿವಿಧಾನದಿಂದ ಪರಿಹಾರ ತಿಳಿಸುತ್ತಾರೆ ಶ್ರೀ ವಿದ್ಯಾಧರ್ ನಕ್ಷತ್ರಿ ಪ್ರಧಾನ್ ತಾಂತ್ರಿಕ್ 9686268564 ಅದು ಹೇಗೆ ಅಂತೀರಾ ಈ ಲವಂಗಕ್ಕೆ ಬಹಳ ವಿಶೇಷವಾದ ಶಕ್ತಿ ಇದೆ ಹಾಗೂ ದುಷ್ಟಶಕ್ತಿಯನ್ನು ದೂರ ಮಾಡುವಂತಹ…

Read More

ಬೆಂಗಳೂರು: ಜಗತ್ತಿನಾದ್ಯಂತ ಈಗ ‘ಗರ್ಭಕಂಠ ಕ್ಯಾನ್ಸರ್’ ಗುಮ್ಮಾ ಎಲ್ಲರನ್ನೂ ಕಾಡುತ್ತಿದೆ. ಈ ‘ಕ್ಯಾನ್ಸರ್ ಬಗ್ಗೆ ಆತಂಕ ಬೇಡ ಜಾಗೃತಿ ಮುಖ್ಯ’ ಎಂಬ ಕಾರ್ಯಕ್ರಮವನ್ನು ಖ್ಯಾತ ವೈದ್ಯೆ ಡಾ.ಪದ್ಮಿನಿ ಪ್ರಸಾದ್ ನೇತೃತ್ವದಲ್ಲಿ ರಾಜ್ಯಾದ್ಯಂತ ನಡೆಸಲಾಗುತ್ತಿದೆ. ಖ್ಯಾತ ಸ್ತ್ರೀರೋಗ ತಜ್ಞರೂ ಆಗಿರುವ ಡಾ.ಪದ್ಮಿನಿ ಪ್ರಸಾದ್, ಕಳೆದ ಹಲವು ದಶಕಗಳಿಂದ ಮಹಿಳೆಯರ ಅರೋಗ್ಯ ಕುರಿತಂತೆ ಜನಪ್ರಿಯ ಕಾರ್ಯಕ್ರಮಗಳನ್ನು ನಡೆಸುತ್ತಾ ಬಂದಿದ್ದಾರೆ. ಅದರ ಜೊತೆಯಲ್ಲೇ ಇದೀಗ ‘ಗರ್ಭಕಂಠ ಕ್ಯಾನ್ಸರ್’ ವಿಚಾರದಲ್ಲಿ ಕೈಗೊಂಡಿರುವ ಅಭಿಯಾನ ಗಮನಸೆಳೆದಿದೆ. ತಮ್ಮ ನೇತೃತ್ವದ ‘ಭರವಾಸೆ ಚಾರಿಟೇಬಲ್ ಫೌಂಡೇಶನ್’ ವತಿಯಿಂದ ಈ ಅಭಿಯಾನವನ್ನು ಡಾ.ಪದ್ಮಿನಿ ಪ್ರಸಾದ್ ನಡೆಸುತ್ತಿದ್ದಾರೆ. ಪ್ರತಿಷ್ಠಿತ ಜೀವಿಕಾ ಹೆಲ್ತ್‌ಕೇರ್ ಸಹಯೋಗದೊಂದಿಗೆ ಈ ಅಭಿಯಾನ ನಡೆಸಲಾಗುತ್ತಿದ್ದು, ರಾಜ್ಯಾದ್ಯಂತ ಸಾವಿರಾರು ಮಹಿಳೆಯರ ಪಾಲಿಗೆ ಈ ಕಾರ್ಯಕ್ರಮವು ಸಂಜೀವಿನಿಯಂತಾಗಿದೆ. ೧೨ ವರ್ಷ ಮೇಲ್ಪಟ್ಟ ಮಹಿಳೆಯರಿಗೆ ಉಚಿತವಾಗಿ ಲಸಿಕೆ ನೀಡಲಾಗುತ್ತಿದೆ. ಜೊತೆಗೆ ಮಹಿಳೆಯರ ಅರೋಗ್ಯ ತಪಾಸಣೆ ನಡೆಸಲಾಗುತ್ತಿದೆ. ಜೊತೆಗೆ ಕ್ಯಾನ್ಸರ್ ಶೋಧ ಸಂಬಂಧಿಸಿದಂತೆ ರಕ್ತ ಪರೀಕ್ಷೆಯನ್ನು ನಡೆಸಲಾಗುತ್ತಿದೆ. ಬೆಂಗಳೂರಿನ ಶಾಲಾ-ಕಾಲೇಜುಗಳಲ್ಲಿ ಯಶಸ್ವೀ ಕಾರ್ಯಕ್ರಮ: ರಾಜಧಾನಿ ಬೆಂಗಳೂರಿನ ಶಾಲಾ-ಕಾಲೇಜುಗಳಲ್ಲಿ…

Read More

ಬೆಂಗಳೂರು : ಕೇಂದ್ರ ಸರ್ಕಾರ ವಾಣಿಜ್ಯ ಬಳಕೆಯ ಎಲ್.ಪಿ ಜಿ ಸಿಲಿಂಡರ್ ಗೆ 115ರೂ. ಗಳನ್ನು ಹಾಗೂ ಮನೆ ಬಳಕೆಯ ಸಿಲಿಂಡರ್ ಗೆ 60 ರೂ ಹೆಚ್ಚಳ ಮಾಡಿದೆ. ಇದು ಬಹಳ ಹೆಚ್ಚಾಗಿದೆ ಎನ್ನುವುದು ಎಲ್ಲರ ಅಭಿಪ್ರಾಯ. ಅವರು ಮಾಡುತ್ತಿರುವುದು ಸರಿಯಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಮಾಧ್ಯಮದವರೊಂದಿಗೆ ಮಾತನಾಡಿದರು. ಸಿಲಿಂಡರ್ ಸರಬರಾಜಿನ ಕುರಿತು ಆತಂಕವಿರುವುದು ಬೇರೆ ವಿಷಯ ಆದರೆ ಎಲ್ ಪಿ ಜಿ ದರ ಹೆಚ್ಚಳವಾಗಿದೆ ಎನ್ನುವುದು ಬೇರೆ ವಿಷಯ ಎಂದು ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದರು. https://kannadanewsnow.com/kannada/from-now-on-it-will-be-mandatory-for-police-officers-to-have-mla-mlc-mp-numbers-state-government-orders/ https://kannadanewsnow.com/kannada/opd-services-to-be-closed-in-karnataka-government-hospitals-from-march-11-patients-fear-hardship/

Read More

ನವದೆಹಲಿ: ಕರ್ನಾಟಕದಲ್ಲಿ ನೀರಾವರಿ ಯೋಜನೆಗಳನ್ನು ಸಕಾಲಕ್ಕೆ ಕಾರ್ಯಗತ ಮಾಡಲಾಗದೇ ರಾಜ್ಯ ಕಾಂಗ್ರೆಸ್‌ ಸರಕಾರವು ಕೇಂದ್ರ ಸರಕಾರವನ್ನು ಅನಗತ್ಯವಾಗಿ ದೂರುತ್ತಿದೆ. ಸುಖಾಸುಮ್ಮನೆ ಅಪಪ್ರಚಾರ ಮಾಡುತ್ತಿದೆ ಎಂದು ಮಾಜಿ ಪ್ರಧಾನಿಗಳಾದ ಹೆಚ್.ಡಿ. ದೇವೇಗೌಡರು ದೂರಿದರು. ರಾಜ್ಯಸಭೆಯಲ್ಲಿ ಸೋಮವಾರ ಬಜೆಟ್‌ ಅಧಿವೇಶನದ ಮೇಲಿನ ಚರ್ಚೆಯಲ್ಲಿ ಭಾಗವಹಿಸಿ ಈ ಬಗ್ಗೆ ಮಾತನಾಡಿದ ಅವರು; ಎತ್ತಿನಹೊಳೆ, ಮೇಕೆದಾಟು ಯೋಜನೆಗಳ ವಿಳಂಬಕ್ಕೆ ರಾಜ್ಯ ಸರಕಾರವೇ ಕಾರಣ. ಅದನ್ನು ಮರೆಮಾಚಿಕೊಳ್ಳಲು ಕೇಂದ್ರವನ್ನು ದೂರುತ್ತಿದೆ. ಕರ್ನಾಟಕದಲ್ಲಿ ಆಡಳಿತಾರೂಢ ಕಾಂಗ್ರೆಸ್‌ ಸರ್ಕಾರದ ನಿರ್ಲಕ್ಷದಿಂದ ಆಮೆಗತಿಯಲ್ಲಿ ಸಾಗಿರುವ ಎತ್ತಿನಹೊಳೆ ಯೋಜನೆ ವಿಚಾರವನ್ನು ಕಟುವಾಗಿ ಪ್ರಸ್ತಾಪಿಸಿದರು. ಎತ್ತಿನಹೊಳೆ ಯೋಜನೆ ಕಾರ್ಯಗತ ಮಾಡುವಲ್ಲಿ ರಾಜ್ಯ ಕಾಂಗ್ರೆಸ್‌ ಸರಕಾರ ಅನೇಕ ತಪ್ಪುಗಳನ್ನು ಮಾಡಿದೆ. ಪರಿಸರಕ್ಕೆ ಧಕ್ಕೆ ತಂದಿದೆ ಹಾಗೂ ಅನೇಕ ಕಾನೂನು, ನಿಯಮಗಳನ್ನು ಉಲ್ಲಂಘನೆ ಮಾಡಿದೆ ಎಂದು ಆರೋಪ ಮಾಡಿದ ಮಾಜಿ ಪ್ರಧಾನಿಗಳು; ಬಿಜೆಪಿ ಸರಕಾರದ ಅವಧಿಯಲ್ಲಿ ಈ ಯೋಜನೆಗೆ ಶಂಕುಸ್ಥಾಪನೆ ಮಾಡಲಾಗಿತ್ತು. ಆಗ ಜಗದೀಶ್‌ ಶೆಟ್ಟರ್‌ ಅವರು ರಾಜ್ಯದ ಮುಖ್ಯಮಂತ್ರಿ ಆಗಿದ್ದರು, ಆಗ ಆ ಯೋಜನೆಯ ಅಂದಾಜು ವೆಚ್ಚ 4,೦೦೦…

Read More

ಬೆಂಗಳೂರು: ರಾಜ್ಯದ ಎಲ್ಲಾ ಹಂತದ ಪೊಲೀಸ್ ಅಧಿಕಾರಿಗಳು ಇನ್ಮುಂದೆ ಜನಪ್ರತಿನಿಧಿಗಳ ಕರೆಗಳನ್ನು ಕಡ್ಡಾಯವಾಗಿ ಸ್ವೀಕರಿಸಬೇಕು ಹಾಗೂ ಅವರ ಸಮಸ್ಯೆಗಳಿಗೆ ಸ್ಪಂದಿಸಬೇಕು ಎಂದು ಪೊಲೀಸ್ ಮಹಾನಿರ್ದೇಶಕರು (DGP) ಕಟ್ಟುನಿಟ್ಟಿನ ಆದೇಶ ಹೊರಡಿಸಿದ್ದಾರೆ. ಇತ್ತೀಚೆಗೆ ನಡೆದ ಬೆಳವಣಿಗೆಗಳ ಹಿನ್ನೆಲೆಯಲ್ಲಿ, ಪೊಲೀಸ್ ಇಲಾಖೆಯು ಈ ಮಹತ್ವದ ಸುತ್ತೋಲೆಯನ್ನು ಹೊರಡಿಸಿದೆ. ಇದರ ಪ್ರಮುಖ ಅಂಶಗಳು ಈ ಕೆಳಗಿನಂತಿವೆ: ಸುತ್ತೋಲೆಯಲ್ಲಿ ಏನಿದೆ ? ಸಂಪರ್ಕ ಸಂಖ್ಯೆ ಇಟ್ಟುಕೊಳ್ಳುವುದು ಕಡ್ಡಾಯ: ಎಲ್ಲಾ ಹಿರಿಯ ಅಧಿಕಾರಿಗಳು ತಮ್ಮ ವ್ಯಾಪ್ತಿಯ ವಿಧಾನಸಭಾ ಸದಸ್ಯರು (MLA), ವಿಧಾನ ಪರಿಷತ್ ಸದಸ್ಯರು (MLC), ಲೋಕಸಭಾ ಸದಸ್ಯರು (MP) ಮತ್ತು ರಾಜ್ಯಸಭಾ ಸದಸ್ಯರ ಅಧಿಕೃತ ದೂರವಾಣಿ ಸಂಖ್ಯೆಗಳನ್ನು ಕಡ್ಡಾಯವಾಗಿ ತಮ್ಮ ಬಳಿ ಇಟ್ಟುಕೊಂಡಿರಬೇಕು. ಕರೆ ಸ್ವೀಕರಿಸಲು ಸೂಚನೆ: ಜನಪ್ರತಿನಿಧಿಗಳು ಕರೆ ಮಾಡಿದಾಗ ಅಧಿಕಾರಿಗಳು ತಕ್ಷಣ ಸ್ಪಂದಿಸಬೇಕು. ಒಂದು ವೇಳೆ ಕರ್ತವ್ಯದ ನಿಮಿತ್ತ ಅಥವಾ ತುರ್ತು ಕೆಲಸದ ನಡುವೆ ಕರೆ ಸ್ವೀಕರಿಸಲು ಸಾಧ್ಯವಾಗದಿದ್ದರೆ, ಆ ಕೆಲಸ ಮುಗಿದ ತಕ್ಷಣವೇ ಅವರಿಗೆ ಮರಳಿ ಕರೆ (Call Back) ಮಾಡುವುದು ಕಡ್ಡಾಯ.…

Read More

ತುಮಕೂರು: ರಾಜ್ಯದಲ್ಲಿ ಒಳಮೀಸಲಾತಿ ಹೋರಾಟ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದ್ದು, ಸರ್ಕಾರಕ್ಕೆ ಈಗ ಪ್ರಶಸ್ತಿ ವಾಪಸಾತಿಯ ಬಿಸಿ ತಟ್ಟಲಾರಂಭಿಸಿದೆ. ಒಳಮೀಸಲಾತಿ ಅನುಷ್ಠಾನಕ್ಕೆ ತರದಿದ್ದಲ್ಲಿ ತಮಗೆ ನೀಡಲಾದ *‘ಬಾಬು ಜಗಜೀವನ ರಾಮ್ ರಾಜ್ಯ ಪ್ರಶಸ್ತಿ’*ಯನ್ನು ಸರ್ಕಾರಕ್ಕೆ ಹಿಂತಿರುಗಿಸುವುದಾಗಿ ಕರ್ನಾಟಕ ದಲಿತ ಸಂಘರ್ಷ ಸಮಿತಿಯ (ಡಿಎಸ್ಎಸ್) ತುಮಕೂರು ಜಿಲ್ಲಾ ಸಂಚಾಲಕ ಕುಂದೂರು ತಿಮ್ಮಯ್ಯ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಬಹಿರಂಗ ಪತ್ರ ಬರೆದಿದ್ದಾರೆ. ಪತ್ರದಲ್ಲಿ ಏನಿದೆ?: ಕುಂದೂರು ತಿಮ್ಮಯ್ಯ ಅವರ ಸಾಮಾಜಿಕ ಸೇವೆಯನ್ನು ಗುರುತಿಸಿ ಕರ್ನಾಟಕ ಸರ್ಕಾರ 2023ನೇ ಸಾಲಿನಲ್ಲಿ ಈ ಗೌರವವನ್ನು ನೀಡಿತ್ತು. ಆದರೆ, ಸರ್ಕಾರದ ಇತ್ತೀಚಿನ ಧೋರಣೆಯಿಂದ ಬೇಸತ್ತಿರುವ ಅವರು ತಮ್ಮ ಪತ್ರದಲ್ಲಿ ಈ ಕೆಳಗಿನ ಆಕ್ರೋಶಗಳನ್ನು ಹೊರಹಾಕಿದ್ದಾರೆ: ಭರವಸೆ ಈಡೇರದ ನೋವು: “ಪ್ರಶಸ್ತಿ ನೀಡುವ ಸಂದರ್ಭದಲ್ಲಿ ತಾವು ಸಾಮಾಜಿಕ ನ್ಯಾಯಕ್ಕೆ ಬದ್ಧರಾಗಿರುವುದಾಗಿ ಮತ್ತು ಒಳಮೀಸಲಾತಿ ಜಾರಿಗೊಳಿಸುವುದಾಗಿ ನೀಡಿದ್ದ ಭರವಸೆ ಇಂದಿಗೂ ಕಿವಿಯಲ್ಲಿ ಮೊಳಗುತ್ತಿದೆ. ಆದರೆ ಸುಪ್ರೀಂ ಕೋರ್ಟ್ ತೀರ್ಪು ಮತ್ತು ನಾಗಮೋಹನ್ ದಾಸ್ ಸಮಿತಿ ವರದಿ ಬಂದ ನಂತರವೂ ಸರ್ಕಾರ ಕಾಲಹರಣ…

Read More

ಬೆಂಗಳೂರು: ರಾಜ್ಯ ಸರ್ಕಾರದಿಂದ ಈಗಾಗಲೇ ದ್ವಿತೀಯ ಪಿಯುಸಿ ಉತ್ತೀರ್ಣಕ್ಕೆ ಶೇಕಡಾ ಪ್ರಮಾಣವನ್ನು ನಿಗದಿ ಪಡಿಸಲಾಗಿದೆ. ಇದೀಗ ಮುಂದುವರೆದು ಪ್ರಥಮ ಪಿಯುಸಿಗೂ ಉತ್ತೀರ್ಣತಾ ಪ್ರಮಾಣವನ್ನು ನಿಗದಿ ಪಡಿಸಿದೆ. ಇನ್ಮುಂದೆ ಶೇ.33ರಷ್ಟು ಅಂಕ ಬಂದ್ರು ಪ್ರಥಮ ಪಿಯುಸಿಯಲ್ಲಿ ಪಾಸ್ ಎಂಬುದಾಗಿ ಅಧಿಕೃತ ಆದೇಶದಲ್ಲಿ ತಿಳಿಸಲಾಗಿದೆ. ಈ ಕುರಿತಂತೆ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ನಡವಳಿಯನ್ನು ಹೊರಡಿಸಿದ್ದು, ನಿರ್ದೇಶಕರು (ಪದವಿಪೂರ್ವ), ಶಾಲಾ ಶಿಕ್ಷಣ ಇಲಾಖೆ, ಬೆಂಗಳೂರು, ಇವರು ಓದಲಾದ (1)ರ ಅಧಿಸೂಚನೆಯನ್ವಯ ಕರ್ನಾಟಕ ಪದವಿ ಪೂರ್ವ ಪರೀಕ್ಷೆ (ಮೌಲ್ಯಮಾಪನ ವಿಧಾನ) ನಿಯಮಗಳು, 2025ನ್ನು ಜಾರಿಗೆ ತರುವುದರ ಮೂಲಕ ದ್ವಿತೀಯ ಪಿಯುಸಿ ಪರೀಕ್ಷೆಯ ಉತ್ತೀರ್ಣತಾ ಮಟ್ಟವನ್ನು ಪರಿಮಾಣಾತ್ಮಕವಾಗಿ ಹೆಚ್ಚಿಸುವ ದೃಷ್ಟಿಯಿಂದ ಹಾಲಿ ಇರುವ ನಿಯಮಕ್ಕೆ ತಿದ್ದುಪಡಿ ತಂದು ಉತ್ತೀರ್ಣತಾ ಪುಮಾಣವನ್ನು ಪ್ರತಿಶತ 33 ನಿಗದಿಪಡಿಸಿ ಅಧಿಸೂಚನೆ ಹೊರಡಿಸಿರುವುದು ಗಮನಾರ್ಹವಾಗಿದ್ದು, ಪದವಿ ಪೂರ್ವ ಶಿಕ್ಷಣವು ಎರಡು ವರ್ಷಗಳ ಸಂಯುಕ್ತ ಕೋರ್ಸ್ ಆಗಿರುವುದರಿಂದ, ಪ್ರಥಮ ಪಿಯುಸಿ ಮತ್ತು ದ್ವಿತೀಯ ಪಿಯುಸಿ ಎರಡೂ ತರಗತಿಗಳು ಪರಸ್ಪರ…

Read More

ಬೆಂಗಳೂರು: ಭಾರತ ಹಾಗೂ ಜಪಾನ್‌ ನಡುವೆ ಮೊಬಿಲಿಟಿ ಅವಕಾಶಗಳನ್ನು ಹೆಚ್ಚಿಸುವ ನಿಟ್ಟಿನಲ್ಲಿ ನಗರದ ತಾಜ್‌ವೆಸ್ಟೆಂಡ್‌ ಹೋಟೆಲ್‌ನಲ್ಲಿ ನಡೆದ ಜಪಾನ್-ಇಂಡಿಯಾ ಮೊಬಿಲಿಟಿ ಶೃಂಗಸಭೆ 2026, ಯಲ್ಲಿ ಭಾರತ ಮತ್ತು ಜಪಾನ್‌ನ ನೀತಿ ನಿರೂಪಕರು, ಉದ್ಯಮ ನಾಯಕರು ಮತ್ತು ನಾವೀನ್ಯಕಾರರನ್ನು ಪಾಲ್ಗೊಂಡಿದ್ದರು. ಕ್ಲೀನ್ ಮೊಬಿಲಿಟಿ ತಂತ್ರಜ್ಞಾನಗಳು, ಸುಧಾರಿತ ಉತ್ಪಾದನೆ ಮತ್ತು ಡಿಜಿಟಲ್ ಸಾರಿಗೆ ವ್ಯವಸ್ಥೆಗಳಲ್ಲಿ ನಾವೀನ್ಯತೆಯನ್ನು ಹೆಚ್ಚಿಸಲು ದ್ವಿಪಕ್ಷೀಯ ಸಹಯೋಗವನ್ನು ಬಲಪಡಿಸುವತ್ತ ಶೃಂಗಸಭೆ ಗಮನಹರಿಸಿತು. ಸಭೆಯನ್ನುದ್ದೇಶಿಸಿ ಮಾತನಾಡಿದ ಕರ್ನಾಟಕ ಸರ್ಕಾರದ ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆಯ ಪ್ರಧಾನ ಕಾರ್ಯದರ್ಶಿ ಸೆಲ್ವಕುಮಾರ್, ಜಾಗತಿಕ ಚಲನಶೀಲತೆ ಉದ್ಯಮವು ಒಂದು ಶತಮಾನದಲ್ಲಿ ಅತ್ಯಂತ ಮಹತ್ವದ ರೂಪಾಂತರಗಳಲ್ಲಿ ಒಂದಾಗಿದೆ. ಆಂತರಿಕ ದಹನಕಾರಿ ಎಂಜಿನ್‌ಗಳಿಂದ ವಿದ್ಯುದ್ದೀಕರಣಕ್ಕೆ, ಯಾಂತ್ರಿಕ ವಾಹನಗಳಿಂದ ಸಾಫ್ಟ್‌ವೇರ್-ವ್ಯಾಖ್ಯಾನಿತ ಚಲನಶೀಲತೆಗೆ ಮತ್ತು ಪಳೆಯುಳಿಕೆ ಇಂಧನಗಳಿಂದ ವೈವಿಧ್ಯಮಯ ಶುದ್ಧ ಇಂಧನ ಮಾರ್ಗಗಳಿಗೆ ಬದಲಾವಣೆಯನ್ನು ನೋಡುತ್ತಿದ್ದೇವೆ. ಭಾರತ-ಜಪಾನ್ ಪಾಲುದಾರಿಕೆಯು ಭಾರತದ ಕೈಗಾರಿಕಾ ಅಭಿವೃದ್ಧಿಯಲ್ಲಿ, ವಿಶೇಷವಾಗಿ ಆಟೋಮೋಟಿವ್ ವಲಯದಲ್ಲಿ ಪರಿವರ್ತನಾತ್ಮಕ ಪಾತ್ರವನ್ನು ವಹಿಸಿದೆ ಎಂದು ಸೆಲ್ವಕುಮಾರ್ ಹೇಳಿದರು. ಟೊಯೋಟಾ, ಸುಜುಕಿ, ಹೋಂಡಾ, ನಿಸ್ಸಾನ್, ಡೆನ್ಸೊ…

Read More

ಬೆಂಗಳೂರು: ಬಿಎಂಆರ್‌ಸಿಎಲ್ ವತಿಯಿಂದ ರಾಷ್ಟ್ರೀಯ ವಿದ್ಯಾಲಯ ರಸ್ತೆ–ಬೊಮ್ಮಸಂದ್ರ (ಯೆಲ್ಲೋ ಲೈನ್) ಮಾರ್ಗದಲ್ಲಿ 11ನೇ ಆಗಸ್ಟ್ 2025ರಿಂದ ಮೆಟ್ರೋ ರೈಲು ಕಾರ್ಯಾಚರಣೆಯನ್ನು ಪ್ರಾರಂಭಿಸಿತು. ಈ ಮಾರ್ಗದಲ್ಲಿ ಕ್ರಮೇಣ ರೈಲುಗಳ ಸಂಖ್ಯೆಯನ್ನು ಹೆಚ್ಚಿಸಿರುವುದರಿಂದ ಮೆಟ್ರೋ ಪ್ರಯಾಣಿಕರ ಸಂಖ್ಯೆಯೂ ಹೆಚ್ಚಾಗಿದೆ. ಮೆಟ್ರೋ ಪ್ರಯಾಣಿಕರಿಗೆ ಸುಗಮವಾದ ಮೊದಲ ಹಾಗೂ ಕೊನೆಯ ಮೈಲು ಸಂಪರ್ಕ (First/Last Mile Connectivity) ಒದಗಿಸುವ ಉದ್ದೇಶದಿಂದ Bangalore Metro Rail Corporation Limited (ಬಿಎಂಆರ್‌ಸಿಎಲ್) ಮತ್ತು Bangalore Metropolitan Transport Corporation (ಬಿಎಂಟಿಸಿ) ಸಂಯುಕ್ತವಾಗಿ ಕ್ರಮ ಕೈಗೊಂಡಿವೆ. ಈ ಫೀಡರ್ ಬಸ್ ಸೇವೆಗಳು ಹೊಸ ರಸ್ತೆ, ಸಿಂಗಸಂದ್ರ ಹಾಗೂ ಕುಡ್ಲು ಗೇಟ್ ಮೆಟ್ರೋ ನಿಲ್ದಾಣಗಳನ್ನು ಸುತ್ತಮುತ್ತಲಿನ ವಸತಿ ಮತ್ತು ವಾಣಿಜ್ಯ ಪ್ರದೇಶಗಳೊಂದಿಗೆ ಸಂಪರ್ಕಿಸಲಿದ್ದು, ಜನಸಂದಣಿಯನ್ನು ಕಡಿಮೆ ಮಾಡಲು ಹಾಗೂ ಮೆಟ್ರೋ ಪ್ರಯಾಣವನ್ನು ಇನ್ನಷ್ಟು ಸುಲಭ ಮತ್ತು ಅನುಕೂಲಕರವಾಗಿಸಲು ಸಹಾಯ ಮಾಡಲಿದೆ. ಆರಂಭಿಸಲಾದ ಫೀಡರ್ ಬಸ್ ಸೇವೆಗಳ ವಿವರ:   ಹೊಸ ರಸ್ತೆ ಮೆಟ್ರೋ ನಿಲ್ದಾಣ – ಹೊಸ ರಸ್ತೆ ಮೆಟ್ರೋ ನಿಲ್ದಾಣ (ರಿಂಗ್ ರೂಟ್)…

Read More

ಜೆರುಸಲೇಂ: ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ ಮತ್ತಷ್ಟು ಏರಿಕೆಯಾಗಿದ್ದು, ಇರಾನ್ ಕಳುಹಿಸಿದ್ದ ಮಾನವರಹಿತ ವಿಮಾನವನ್ನು (UAV) ಇಸ್ರೇಲ್ ಯಶಸ್ವಿಯಾಗಿ ಹೊಡೆದುರುಳಿಸಿದೆ. ತನ್ನ ವಾಯುಪ್ರದೇಶವನ್ನು ಉಲ್ಲಂಘಿಸಿ ನುಗ್ಗುತ್ತಿದ್ದ ಇರಾನ್‌ನ ಈ ಡ್ರೋನ್ ಅನ್ನು ಆಕಾಶದಲ್ಲೇ ತಡೆಹಿಡಿದ ಇಸ್ರೇಲ್ ರಕ್ಷಣಾ ಪಡೆ, ಕ್ಷಣಾರ್ಧದಲ್ಲಿ ಅದನ್ನು ನಾಶಪಡಿಸಿದೆ. ವಿಡಿಯೋ ಬಿಡುಗಡೆ ಮಾಡಿದ ಇಸ್ರೇಲ್: ಇರಾನ್‌ನ ಯುಎವಿಯನ್ನು ಹೊಡೆದುರುಳಿಸಿದ ರೋಚಕ ದೃಶ್ಯದ ವಿಡಿಯೋವನ್ನು ಇಸ್ರೇಲ್ ಅಧಿಕೃತವಾಗಿ ಬಿಡುಗಡೆ ಮಾಡಿದೆ. ಈ ವಿಡಿಯೋದಲ್ಲಿ ಇಸ್ರೇಲಿ ಕ್ಷಿಪಣಿ ಅಥವಾ ಯುದ್ಧವಿಮಾನವು ಇರಾನ್‌ನ ಡ್ರೋನ್ ಅನ್ನು ಗುರಿಯಾಗಿಸಿಕೊಂಡು ಸ್ಫೋಟಿಸುತ್ತಿರುವುದು ಸ್ಪಷ್ಟವಾಗಿ ಕಂಡುಬಂದಿದೆ. ತನ್ನ ಗಡಿ ಭದ್ರತೆಯ ವಿಷಯದಲ್ಲಿ ಯಾವುದೇ ರಾಜಿ ಇಲ್ಲ ಎಂಬ ಸಂದೇಶವನ್ನು ಇಸ್ರೇಲ್ ಈ ಮೂಲಕ ಜಗತ್ತಿಗೆ ರವಾನಿಸಿದೆ. https://twitter.com/modgovae/status/2030664175811199400 ಹೆಚ್ಚಿದ ಆತಂಕ: ಇಸ್ರೇಲ್ ಮತ್ತು ಇರಾನ್ ನಡುವೆ ಈಗಾಗಲೇ ಯುದ್ಧದ ಕಾರ್ಮೋಡ ಕವಿದಿದ್ದು, ಈ ವಿದ್ಯಮಾನವು ಉರಿಯುವ ಬೆಂಕಿಗೆ ತುಪ್ಪ ಸುರಿದಂತಾಗಿದೆ. ಇರಾನ್‌ನ ಈ ನುಸುಳುವಿಕೆ ಪ್ರಯತ್ನಕ್ಕೆ ಇಸ್ರೇಲ್ ಪ್ರಬಲ ತಿರುಗೇಟು ನೀಡಿದ್ದು, ಈ ಘಟನೆಯ ನಂತರ ಎರಡೂ ರಾಷ್ಟ್ರಗಳ…

Read More