Subscribe to Updates
Get the latest creative news from FooBar about art, design and business.
Author: kannadanewsnow09
ಬೆಂಗಳೂರು: ರಾಜ್ಯ ಸರ್ಕಾರದಿಂದ ಎಲ್ಲಾ ಬಿ-ಖಾತಾಗಳಿಗೆ ಎ-ಖಾತಾ ಭಾಗ್ಯ ಕರುಣಿಸುವಂತ ನಿರ್ಧಾರವನ್ನು ಕೈಗೊಂಡಿದೆ. ಆ ಮೂಲಕ ಆಸ್ತಿ ಮಾಲೀಕರಿಗೆ ಗುಡ್ ನ್ಯೂಸ್ ನೀಡಲಾಗಿತ್ತು. ಹಾಗಾದ್ರೇ ಬಿ-ಖಾತಾ ಹೊಂದಿರುವ ಆಸ್ತಿಗಳಿಗೆ ಎ-ಖಾತಾ ಭಾಗ್ಯದ ಬಗ್ಗೆ ಜನರು ತಿಳಿಯಲೇಬೇಕಾದಂತ ವಿಚಾರಗಳೇನು ಅಂತ ಮುಂದೆ ಓದಿ.. ಜೊತೆಗೆ ವೀಡಿಯೋದಲ್ಲಿ ವಿವರವಾದ ಮಾಹಿತಿ ಇದೆ ನೋಡಿ. ನಿಮ್ಮ ಪ್ರಾಪರ್ಟಿ ಇನ್ನೂ ಬಿ-ಖಾತಾದಲ್ಲಿದೆ ಎಂಬ ಆತಂಕ ಕಾಡುತ್ತಿದೆಯೇ? ಚಿಂತೆ ಬಿಡಿ, ಕಷ್ಟಪಟ್ಟು ದುಡಿದು ಗಳಿಸಿದ ಆಸ್ತಿಗೆ ಸಂಬಂಧಿಸಿದ ಆತಂಕಗಳನ್ನು ಹೋಗಲಾಡಿಸಲು ರಾಜ್ಯ ಸರ್ಕಾರ ಹೊಸ ಆದೇಶವನ್ನು ಹೊರಡಿಸಿದ್ದು, ಸೂಕ್ತ ದಾಖಲೆಗಳನ್ನು ಹೊಂದಿದ್ದರೆ ಬಿ-ಖಾತಾವನ್ನು ಎ-ಖಾತಾಗೆ ಪರಿವರ್ತಿಸಿಕೊಳ್ಳಬಹುದಾಗಿದೆ. ಬಿ-ಖಾತಾದಿಂದ ಎ-ಖಾತಾ ಪಡೆಯಲು ಇವುಗಳು ಕಡ್ಡಾಯ ಬಿ-ಖಾತಾದಿಂದ ಎ-ಖಾತಾ ಪಡೆಯಲು ಸಾರ್ವಜನಿಕ ರಸ್ತೆ ಸಂಪರ್ಕ ಕಡ್ಡಾಯಲಾಗಿದೆ. ನಿವೇಶನ, ಮನೆಯಿರುವ ಜಾಗಕ್ಕೆ ಸಾರ್ವಜನಿಕ ರಸ್ತೆಯಿರಬೇಕು. ಒಂದು ವೇಳೆ ಓಡಾಡುವ ರಸ್ತೆ ಖಾಸಗಿಯಾಗಿದ್ದರೇ, ಅದನ್ನು ಮೊದಲು ಸಾರ್ವಜನಿಕ ರಸ್ತೆಯಂದು ಘೋಷಿಸಿಕೊಳ್ಳಬೇಕಾಗಿದೆ. ಎ-ಖಾತಾ ಪಡೆಯಲು ಭೂಪರಿವರ್ತನೆ ಅತ್ಯಗತ್ಯವಾಗಿದೆ. ಕರ್ನಾಟಕ ಭೂಕಂದಾಯ ಕಾಯ್ದೆ 1964ರ ಕಲಂ 95ರ…
ಬೆಂಗಳೂರು: ಅಂತರ ನಿಗಮ ವರ್ಗಾವಣೆ ನಿರೀಕ್ಷೆಯಲ್ಲಿದ್ದಂತ ಕೆ ಎಸ್ ಆರ್ ಟಿ ಸಿ ನೌಕರರಿಗೆ ಗುಡ್ ನ್ಯೂಸ್ ನೀಡಲಾಗಿದೆ. ಮತ್ತೆ ಅಂತರ ನಿಗಮ ವರ್ಗಾವಣೆಗೆ ಅರ್ಜಿ ಸಲ್ಲಿಕೆಗೆ ಅವಧಿ ವಿಸ್ತರಿಸಲಾಗಿದೆ. ಈ ಕುರಿತಂತೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯು ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದು, ದರ್ಜ-3 ಮೇಲ್ವಿಚಾರಕೇತರ ಮತ್ತು ದರ್ಜೆ-4 ನೌಕರರ 2026ನೇ ಸಾಲಿನ ಅಂತರ ನಿಗಮ ವರ್ಗಾವಣೆ ಪ್ರಕ್ರಿಯೆ ದಿನಾಂಕ 01-01-2026ರ ಬೆಳಗ್ಗೆ 11 ಗಂಟೆಯಿಂದ ಪ್ರಾರಂಭವಾಗಿದೆ ಎಂದಿದೆ. ದಿನಾಂಕ 31-01-2026ರ ಸಂಜೆ 5.30ರವರೆಗೆ ಅಂತರ ನಿಗಮ ವರ್ಗಾವಣೆಗೆ ಅವಕಾಶ ನೀಡಲಾಗಿತ್ತು. ಆದರೇ ಅನೇಕರು ವರ್ಗಾವಣೆ ದಿನಾಂಕ ವಿಸ್ತರಣೆಗೆ ಕೋರಿದ್ದರ ಹಿನ್ನಲೆಯಲ್ಲಿ ಅಂತರ ನಿಗಮ ಸಾಮಾನ್ಯ ಮತ್ತು ಪರಸ್ಪರ ವರ್ಗಾವಣೆಗೆ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಲು ದಿನಾಂಕ 28-02-2026ರ ಸಂಜೆ 5.30ರವರೆಗೆ ಅವಧಿಯನ್ನು ವಿಸ್ತರಿಸಿರುವುದಾಗಿ ಕೆ ಎಸ್ ಆರ್ ಟಿ ಸಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ.
ಬೆಂಗಳೂರು: ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತ (ಬಿಎಂಆರ್ಸಿಎಲ್) ಮೆಟ್ರೋ ರೈಲುಗಳಲ್ಲಿ ಪ್ರಯಾಣಿಕರ ಜವಾಬ್ದಾರಿಯುತ ವರ್ತನೆ ಹಾಗೂ ಪ್ರಯಾಣದಲ್ಲಿ ಪಾಲಿಸಬೇಕಾದ ನಿಯಮಗಳನ್ನು ಬಲಪಡಿಸುವ ಉದ್ದೇಶದಿಂದ ವಿಶೇಷ ಜಾಗೃತಿ ಅಭಿಯಾನವನ್ನು ಕೈಗೊಂಡಿದೆ. ಮೆಟ್ರೋ ರೈಲುಗಳು ಸಾರ್ವಜನಿಕರ ಸಂಚಾರಕ್ಕಿದ್ದು, ಸುರಕ್ಷಿತ, ಆರಾಮದಾಯಕ ಮತ್ತು ಸುಖಕರ ಪ್ರಯಾಣಕ್ಕಾಗಿ ಎಲ್ಲಾ ಪ್ರಯಾಣಿಕರ ಸಹಭಾಗಿತ್ವ ಅಗತ್ಯವಿದೆ. ಮೆಟ್ರೋ ರೈಲುಗಳಲ್ಲಿ ಹೆಡ್ ಫೋನ್ ಇಲ್ಲದೆ ಸಂಗೀತ ಕೇಳುವುದು, ಆಹಾರ ಸೇವಿಸುವುದು ಅಥವಾ ತಂಬಾಕು ಸೇವನೆ ಮಾಡುವುದು ಸಹ ಪ್ರಯಾಣಿಕರಿಗೆ ತೊಂದರೆಯನ್ನು ಉಂಟುಮಾಡುತ್ತದೆ. ಅದೇ ರೀತಿ, ಹಿರಿಯ ನಾಗರಿಕರಿಗೆ, ಗರ್ಭಿಣಿ ಮಹಿಳೆಯರಿಗೆ, ಅಂಗವಿಕಲರಿಗೆ ಮತ್ತು ಅಗತ್ಯವಿರುವವರಿಗೆ ಮೀಸಲು ಆಸನಗಳನ್ನು ಬಿಟ್ಟುಕೊಡುವುದು ಎಲ್ಲರ ಕರ್ತವ್ಯವಾಗಿದೆ. ಈ ವಿಷಯಗಳನ್ನು ಗಮನದಲ್ಲಿಟ್ಟುಕೊಂಡು, ಬಿಎಂಆರ್ಸಿಎಲ್ ವಿಶೇಷ ಜಾಗೃತಿ ಅಭಿಯಾನವನ್ನು, ಇಬ್ಬರು ಗೃಹ ರಕ್ಷಕರನ್ನೊಳಗೊಂಡ (ಹೋಮ್ ಗಾರ್ಡ್ಗಳು) ವಿಶೇಷ ತಂಡಗಳನ್ನು ಮೆಟ್ರೋ ರೈಲುಗಳಲ್ಲಿ ನಿಯೋಜಿಸಿ, ಪ್ರಯಾಣಿಕರಿಗೆ ತಿಳುವಳಿಕೆ ನೀಡುವ ಹಾಗೂ ಜಾಗೃತಿ ಮೂಡಿಸುವ ಕಾರ್ಯ ನಡೆಸಲಾಗಿದೆ. ಒಂದು ವರ್ಷದ ಈ ಅಭಿಯಾನದ ವಿಶ್ಲೇಷಣೆಯಲ್ಲಿ ಕೆಳಕಂಡ ಅಂಶಗಳು ಕಂಡುಬಂದಿವೆ: 57,538 ಪ್ರಯಾಣಿಕರು,…
ಬೆಂಗಳೂರು: ರಾಜ್ಯ ಸರ್ಕಾರದಿಂದ ಡಯಾಲಿಸಿಸ್ ರೋಗಿಗಳಿಗೆ ಬಿಗ್ ಶಾಕ್ ಎನ್ನುವಂತೆ, ಇನ್ ಹೌಸ್ ಮಾದರಿಯ ಡಯಾಲಿಸಿಸ್ ಸೇವೆಗಳ ಪ್ರತಿ ಡಯಾಲಿಸಿಸ್ ದರವನ್ನು ಹೆಚ್ಚಳ ಮಾಡಿ ಆದೇಶಿಸಿದೆ. ಈ ಕುರಿತಂತೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ನಡವಳಿಯನ್ನು ಹೊರಡಿಸಿದ್ದು, ದಿನಾಂಕ:17.09.2024ರ ಸಚಿವ ಸಂಪುಟದ ತೀರ್ಮಾನದಂತೆ ಪ್ರಧಾನಮಂತ್ರಿ ರಾಷ್ಟ್ರೀಯ ಡಯಾಲಿಸಿಸ್ ಕಾರ್ಯಕ್ರಮದಡಿಯಲ್ಲಿ ವಿಭಾಗವನ್ನು ಒಳಗೊಂಡಂತೆ ಪಿ.ಪಿ.ಪಿ. ಮಾದರಿಗೆ ಒಳಪಡದ ಎಲ್ಲಾ ಸರ್ಕಾರಿ ಆಸ್ಪತ್ರೆಗಳು ಸ್ವಯಂ ಚಾಲನೆಯ ಆಧಾರದ ಮೇಲೆ ಡಯಾಲಿಸಿಸ್ ಸೇವೆಯನ್ನು ಒದಗಿಸಲು, ಡಯಾಲಿಸಿಸ್ ಸೇವೆಯನ್ನು SAST ಸಂಸ್ಥೆಯ ಮುಖಾಂತರ ಅನುಷ್ಠಾನಗೊಳಿಸಲು ಹಾಗೂ PHH ಕಾರ್ಡ್ದಾರರಿಗೆ ಉಚಿತವಾಗಿ ಮತ್ತು PHH ಕಾರ್ಡ್ ದಾರರಲ್ಲದ ಫಲಾನುಭವಿಗಳಿಗೆ ಸಬ್ಸಿಡಿ ದರದಲ್ಲಿ ನೀಡಲಾಗಿದ್ದು, ಪ್ರತಿ ಡಯಾಲಿಸಿಸ್ ಸೈಕಲ್ ಕಾರ್ಯಾಚರಣೆಯ ವೆಚ್ಚವನ್ನು ರೂ. 1000/- ದಂತೆ ಮರುಪಾವತಿಗೆ ನಿಗದಿಪಡಿಸಲಾಗಿರುತ್ತದೆ ಎಂದಿದ್ದಾರೆ. ಅಭಿಯಾನ ನಿರ್ದೇಶಕರು, ರಾಷ್ಟ್ರೀಯ ಆರೋಗ್ಯ ಅಭಿಯಾನ, ರವರ ಏಕಕಡತದಲ್ಲಿ ಕಲ್ಬುರ್ಗಿ ವಿಭಾಗದ 46 ಆರೋಗ್ಯ ಕೇಂದ್ರಗಳಲ್ಲಿ 25 ಆರೋಗ್ಯ ಕೇಂದ್ರಗಳು M/s DCDC…
ಚಂಡೀಗಢ: ಕಾಂಗ್ರೆಸ್ ನಾಯಕಿ ನವಜೋತ್ ಕೌರ್ ಸಿಧು ಶನಿವಾರ ಪಕ್ಷವನ್ನು ತೊರೆದಿದ್ದಾಗಿ ಹೇಳಿದ್ದು, ಪಕ್ಷದ ಪಂಜಾಬ್ ಘಟಕದ ಮುಖ್ಯಸ್ಥ ಅಮರಿಂದರ್ ಸಿಂಗ್ ರಾಜಾ ವಾರಿಂಗ್ ಅವರನ್ನು ಇದುವರೆಗಿನ ಅತ್ಯಂತ ಅಸಮರ್ಥ, ಭ್ರಷ್ಟ ಅಧ್ಯಕ್ಷ ಎಂದು ಕರೆದಿದ್ದಾರೆ ಎಂದು ಆರೋಪಿಸಿದ್ದಾರೆ. ಮುಖ್ಯಮಂತ್ರಿ ಕುರ್ಚಿಗೆ 500 ಕೋಟಿ ರೂ ಎಂಬ ಹೇಳಿಕೆಯೊಂದಿಗೆ ರಾಜಕೀಯ ವಿವಾದಕ್ಕೆ ಕಾರಣವಾದ ನಂತರ, ಕಳೆದ ತಿಂಗಳು ಕೌರ್ ಅವರನ್ನು ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ ಅಮಾನತುಗೊಳಿಸಲಾಗಿತ್ತು. ಕೌರ್ ಪಂಜಾಬ್ನ ಮಾಜಿ ಕಾಂಗ್ರೆಸ್ ಮುಖ್ಯಸ್ಥ ಮತ್ತು ಮಾಜಿ ಕ್ರಿಕೆಟಿಗ ನವಜೋತ್ ಸಿಂಗ್ ಸಿಧು ಅವರ ಪತ್ನಿ. ಪಂಜಾಬ್ನಲ್ಲಿ ಆಡಳಿತಾರೂಢ ಆಮ್ ಆದ್ಮಿ ಪಕ್ಷ (ಎಎಪಿ) ಜೊತೆಗಿನ ಒಪ್ಪಂದದ ಮೂಲಕ ವಾರಿಂಗ್ ಪಕ್ಷವನ್ನು ಸಣ್ಣ ಲಾಭಕ್ಕಾಗಿ ಮಾರಾಟ ಮಾಡಿದ್ದಾರೆ ಎಂದು ಮಾಜಿ ಶಾಸಕಿ ಆರೋಪಿಸಿದ್ದಾರೆ. ರಾಜಾ ವಾರಿಂಗ್, ಇದುವರೆಗಿನ ಅತ್ಯಂತ ಅಸಮರ್ಥ, ಭ್ರಷ್ಟ ಅಧ್ಯಕ್ಷ. ಕಾಂಗ್ರೆಸ್ ಅನ್ನು ನಾಶಮಾಡಲು ಸಿಎಂ ಜೊತೆ ಪಾಲುದಾರಿಕೆ ಮಾಡಿಕೊಳ್ಳುವ ಮೂಲಕ ನೀವು ಜೈಲಿನಿಂದ ನಿಮ್ಮನ್ನು ರಕ್ಷಿಸಿಕೊಂಡಿದ್ದೀರಿ. ಎಎಪಿ…
ಬಳ್ಳಾರಿ : ಪೋಕ್ಸೋ ಘಟನೆ ನಡೆದ ಸಂದರ್ಭದಲ್ಲಿ ಪ್ರಕರಣ ದಾಖಲಿಸುವುದು ಕಡ್ಡಾಯವಾಗಿದ್ದು, ವಿಳಂಬ ತೋರಿದಲ್ಲಿ ಸಂಬಂಧಿಸಿದವರ ಮೇಲೆ ಕ್ರಮ ಜರುಗಿಸಲು ಕಾನೂನಿನಡಿ ಅವಕಾಶವಿದೆ ಎಂದು ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಅಧ್ಯಕ್ಷ ಶಶಿಧರ್ ಕೊಸಂಬೆ ಅವರು ತಿಳಿಸಿದರು. ನಗರದ ಜಿಲ್ಲಾ ಪಂಚಾಯತ್ ನ ಹಳೆಯ ನಜೀರ್ ಸಾಬ್ ಸಭಾಂಗಣದಲ್ಲಿ ವಿವಿಧ ಇಲಾಖೆಯ ಅಧಿಕಾರಿಗಳೊಂದಿಗೆ ಶನಿವಾರ ಏರ್ಪಡಿಸಿದ್ದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯದ ಬಗ್ಗೆ ಮಾಹಿತಿ ತಿಳಿದಿರುವ ಯಾರೇ ವ್ಯಕ್ತಿ, ಪೋಷಕರು ಅಥವಾ ಶಾಲಾ ಸಿಬ್ಬಂದಿ ಕೂಡಲೇ ಪೊಲೀಸ್ ಠಾಣೆ ಅಥವಾ ಮಕ್ಕಳ ರಕ್ಷಣಾ ಘಟಕಕ್ಕೆ ವರದಿ ಮಾಡುವುದು ಕಡ್ಡಾಯವಾಗಿದೆ ಎಂದರು. ಮಕ್ಕಳ ರಕ್ಷಣಾ ನೀತಿ 2016 ಕಾಯ್ದೆ ಅನುಷ್ಠಾನಗೊಳಿಸಿ: ಜಿಲ್ಲೆಯ ಎಲ್ಲಾ ಶಾಲೆಗಳು, ವಸತಿ ನಿಲಯಗಳ ಮಕ್ಕಳಿಗೆ ಯಾವುದೇ ರೀತಿಯ ಹಿಂಸೆ, ದೌರ್ಜನ್ಯ, ಶೋಷಣೆಯಿಂದ ರಕ್ಷಣೆ ಒದಗಿಸುವ ಮೂಲಕ ಸುರಕ್ಷಿತ ವಾತಾವರಣ ಕಲ್ಪಿಸಬೇಕು. ಪ್ರತಿಯೊಂದು ಶಾಲೆ ಮತ್ತು ವಸತಿ ನಿಲಯಗಳಲ್ಲಿ ಮಕ್ಕಳ…
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಮತ್ತು ಲೈಂಗಿಕ ಅಪರಾಧಿ ಜೆಫ್ರಿ ಎಪ್ಸ್ಟೀನ್ ನಡುವಿನ ಸಂಬಂಧದ ಕುರಿತು ಕಾಂಗ್ರೆಸ್ ಪಕ್ಷವು ಹುಟ್ಟುಹಾಕಿದ ರಾಜಕೀಯ ವಿವಾದಕ್ಕೆ ವಿದೇಶಾಂಗ ಸಚಿವಾಲಯ (MEA) ಶನಿವಾರ ಪ್ರತಿಕ್ರಿಯಿಸಿದೆ. ವಿದೇಶಾಂಗ ಸಚಿವಾಲಯವು ಹೇಳಿಕೆಯಲ್ಲಿ ಹೀಗೆ ಹೇಳಿದೆ. ಎಪ್ಸ್ಟೀನ್ ಫೈಲ್ಗಳಿಂದ ಬಂದಿರುವ ಇಮೇಲ್ ಸಂದೇಶವು ಪ್ರಧಾನಿ ಮತ್ತು ಅವರ ಇಸ್ರೇಲ್ ಭೇಟಿಯನ್ನು ಉಲ್ಲೇಖಿಸುತ್ತದೆ ಎಂಬ ವರದಿಗಳನ್ನು ನಾವು ನೋಡಿದ್ದೇವೆ. ಜುಲೈ 2017 ರಲ್ಲಿ ಪ್ರಧಾನಿಯವರ ಇಸ್ರೇಲ್ ಅಧಿಕೃತ ಭೇಟಿಯ ಸಂಗತಿಯನ್ನು ಮೀರಿ, ಇಮೇಲ್ನಲ್ಲಿರುವ ಉಳಿದ ಪ್ರಸ್ತಾಪಗಳು ಶಿಕ್ಷೆಗೊಳಗಾದ ಅಪರಾಧಿಯೊಬ್ಬರ ಕಸದ ಆಲೋಚನೆಗಳಿಗಿಂತ ಹೆಚ್ಚೇನೂ ಅಲ್ಲ, ಇದನ್ನು ಅತ್ಯಂತ ತಿರಸ್ಕಾರದಿಂದ ವಜಾಗೊಳಿಸಲು ಅರ್ಹವಾಗಿದೆ ಎಂದಿದೆ. https://twitter.com/MEAIndia/status/2017598414733840649 ಅಮೆರಿಕದ ನ್ಯಾಯಾಂಗ ಇಲಾಖೆಯಿಂದ ಬಂದದ್ದು ಎನ್ನಲಾದ ದಾಖಲೆಗಳನ್ನು ಕಾಂಗ್ರೆಸ್ ಎತ್ತಿ ತೋರಿಸಿತ್ತು. ಪ್ರಧಾನ ಮಂತ್ರಿಯವರು ಇಸ್ರೇಲ್ಗೆ ಅಧಿಕೃತ ಭೇಟಿ ನೀಡಿದ ಸಂದರ್ಭದಲ್ಲಿ ಎಪ್ಸ್ಟೀನ್ ಅವರ ಮಾರ್ಗದರ್ಶನವನ್ನು ಅನುಸರಿಸಿದ್ದರು, ಅಮೆರಿಕದ ಅಧ್ಯಕ್ಷರನ್ನು ಮೆಚ್ಚಿಸಲು ಎಂದು ಹೇಳಲಾಗಿತ್ತು.
ಬಳ್ಳಾರಿ : ಸಾಮಾಜಿಕ ಜಾಲತಾಣ ಹಾಗೂ ಮೊಬೈಲ್ ವ್ಯಸನದಿಂದ ಮಕ್ಕಳ ಭವಿಷ್ಯಕ್ಕೆ ದೊಡ್ಡ ಕಂಟಕವಾಗಿ ಪರಿಣಮಿಸಿವೆ ಎಂದು ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಅಧ್ಯಕ್ಷ ಶಶಿಧರ್ ಕೋಸಂಬೆ ಅವರು ಹೇಳಿದರು. ಶನಿವಾರ ನಗರದ ಜಿಲ್ಲಾ ಪಂಚಾಯಿತಿಯ ಹಳೆಯ ಅಬ್ದುಲ್ ನಜೀರ್ ಸಾಬ್ ಸಭಾಂಗಣದಲ್ಲಿ ಆಯೋಜಿಸಿದ್ದ ಶಾಲಾ ಮಕ್ಕಳು, ಪೋಷಕರು ಹಾಗೂ ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿ ಸದಸ್ಯರ ಅಹವಾಲು ಸ್ವೀಕಾರ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ರಾಜ್ಯದ ಆಯ್ದ 5 ಜಿಲ್ಲೆಗಳಲ್ಲಿ ನಡೆಸಿದ ಸಮೀಕ್ಷೆಯ ಪ್ರಕಾರ ಶೇ.42ರಷ್ಟು ಮಕ್ಕಳು ಸಾಮಾಜಿಕ ಜಾಲತಾಣಗಳ ಬಳಕೆಯಿಂದ ಮಾನಸಿಕ ಒತ್ತಡಕ್ಕೆ ಒಳಗಾಗಿದ್ದಾರೆ ಎಂದು ಕಳವಳ ವ್ಯಕ್ತಪಡಿಸಿದರು. ಮಕ್ಕಳು ದಿನಕ್ಕೆ 6ರಿಂದ 7 ಗಂಟೆಗಳ ಕಾಲ ಮೊಬೈಲ್ನಲ್ಲಿ ಕಳೆಯುತ್ತಿರುವುದು ಅವರ ಮೆದುಳಿನ ಬೆಳವಣಿಗೆಯ ಮೇಲೆ ದುಷ್ಪರಿಣಾಮ ಬೀರಲಿದೆ. ಪೋಷಕರು ಮಕ್ಕಳೊಂದಿಗೆ ಆಪ್ತವಾಗಿ ಕಾಲ ಕಳೆಯುವ ಮೂಲಕ ಅವರನ್ನು ಈ ವ್ಯಸನದಿಂದ ದೂರವಿಡಬಹುದು ಎಂದು ಕಿವಿಮಾತು ಹೇಳಿದರು. 1989ರ ವಿಶ್ವಸಂಸ್ಥೆಯ ಮಕ್ಕಳ ಹಕ್ಕುಗಳ ಒಡಂಬಡಿಕೆಗೆ ಭಾರತ…
ಧಾರವಾಡ : ಮಾಹಿತಿ ಹಕ್ಕು ಅಧಿನಿಯಮ 2005 ರ ಅನುಷ್ಠಾನದಿಂದ ಆಡಳಿತದಲ್ಲಿ ಹಾಗೂ ಸಾರ್ವಜನಿಕ ಸೇವೆಯಲ್ಲಿ ಬದಲಾವಣೆಯನ್ನು ಕಾಣುತ್ತಿದ್ದೇವೆ. ಆಡಳಿತದಲ್ಲಿ ಪಾರದರ್ಶಕತೆ ಕಾಪಾಡುವಲ್ಲಿ ಮತ್ತು ಜನಸ್ನೇಹಿ ಆಡಳಿತ ನೀಡುವಲ್ಲಿ ಆರ್.ಟಿ.ಐ ಕಾಯ್ದೆ ಪರಿಣಾಮಕಾರಿಯಾಗಿದೆ. ಕಾಯ್ದೆಯ ಸದುಪಯೋಗ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಅರ್ಜಿಗಳ ವಿಲೇವಾರಿಗೆ ಆಧ್ಯತೆ ನೀಡಿ, ನಿರ್ಲಕ್ಷ್ಯ ಬೇಡ. ಇದೊಂದು ಜನರಿಗೆ ಸರ್ಕಾರ ಕೊಟ್ಟಿರುವ ಪ್ರಮುಖ ಹಾಗೂ ಪ್ರಬಲ ಕಾಯ್ದೆಯಾಗಿದೆ. ಬ್ಲಾಕ್ ಮೇಲರ್ಗಳ ಸೃಷ್ಟಿಗೆ ಅವಕಾಶ ಕೊಡದೇ ಮಾಹಿತಿ ನೀಡಿ ಎಂದು ಕರ್ನಾಟಕ ರಾಜ್ಯ ಮಾಹಿತಿ ಆಯೋಗದ ಆಯುಕ್ತರಾದ ರುದ್ರಣ್ಣ ಹರ್ತಿಕೋಟೆ, ರಾಜಶೇಖರ ಎಸ್., ಪ್ರಕಾಶ ನಾರಾಯಣ ಚನ್ನಾಳ್ ಅವರು ಅಭಿಪ್ರಾಯಪಟ್ಟರು. ಅವರು ಇಂದು (ಜ.31) ಬೆಳಿಗ್ಗೆ ಜಿಲ್ಲಾ ಪಂಚಾಯತ ಸಭಾಂಗಣದಲ್ಲಿ ಕರ್ನಾಟಕ ರಾಜ್ಯ ಮಾಹಿತಿ ಆಯೋಗವು ಧಾರವಾಡ ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯತ ಸಹಯೋಗದಲ್ಲಿ ವಿವಿಧ ಇಲಾಖೆಗಳ ಸಾರ್ವಜನಿಕ ಮಾಹಿತಿ ಅಧಿಕಾರಿಗಳಿಗೆ ಹಾಗೂ ಪ್ರಥಮ ಮೇಲ್ಮನವಿ ಅಧಿಕಾರಿಗಳಿಗೆ ಆಯೋಜಿಸಿದ್ದ ಮಾಹಿತಿ ಹಕ್ಕು ಅಧಿನಿಯಮ-2005 ರ ಕಾರ್ಯಾಗಾರ ಮತ್ತು ಅಧಿಕಾರಿಗಳೊಂದಿಗೆ ಸಂವಾದ…
ಚಿತ್ರದುರ್ಗ: ವಿದ್ಯಾಭ್ಯಾಸ ಮುಗಿಸಿ, ವಿದ್ಯಾರ್ಹತೆಗೆ ತಕ್ಕಂತೆ ಕೆಲಸ ಹುಡುಕಿ ದುಡಿಮೆಯ ಜೀವನ ಪ್ರಾರಂಭಿಸುವ ನಿರೀಕ್ಷೆಯಲ್ಲಿರುವ ಉದ್ಯೋಗಾಕಾಂಕ್ಷಿಗಳಿಗೆ ಸೂಕ್ತ ವೇದಿಕೆ ಕಲ್ಪಿಸಿ ಕೊಡುವ ನಿಟ್ಟಿನಲ್ಲಿ ಇದೇ ಫೆಬ್ರವರಿ 01 ರಂದು ಚಿತ್ರದುರ್ಗ ನಗರದ ಸರ್ಕಾರಿ ಕಲಾ ಕಾಲೇಜು ಆವರಣದಲ್ಲಿ ಬೃಹತ್ ಉದ್ಯೋಗ ಮೇಳಕ್ಕೆ ವೇದಿಕೆ ಸಜ್ಜುಗೊಂಡಿದೆ. ನಿರುದ್ಯೋಗಿ ಯುವಕ ಯುವತಿಯರಿಗೆ ಉದ್ಯೋಗಾವಕಾಶ ಕಲ್ಪಿಸುವ ನಿಟ್ಟಿನಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕೌಶಲ್ಯಾಭಿವೃದ್ಧಿ ಮತ್ತು ಜೀವನೋಪಾಯ ಇಲಾಖೆಯ ಸಂಯುಕ್ತಾಶ್ರಯದಲ್ಲಿ ಹಮ್ಮಿಕೊಂಡಿರುವ ಬೃಹತ್ ಉದ್ಯೋಗ ಮೇಳವು ಯುವ ಜನತೆಗೆ ಸುವರ್ಣಾವಕಾಶವಾಗಿದೆ. ನಗರದ ಸರ್ಕಾರಿ ಕಲಾ ಕಾಲೇಜು ಆವರಣದಲ್ಲಿ ಉದ್ಯೋಗ ಮೇಳವನ್ನು ಅಚ್ಚುಕಟ್ಟಾಗಿ ಆಯೋಜಿಸಲು ಸಕಲ ಸಿದ್ಧತೆಗಳು ಅಂತಿಮ ಹಂತ ತಲುಪಿದ್ದು, ವಿವಿಧ ಕಂಪನಿಗಳು ಅಭ್ಯರ್ಥಿಗಳ ಸಂದರ್ಶನ ಇತ್ಯಾದಿ ನಡೆಸಲು ಅನುಕೂಲವಾಗುವಂತೆ ಕೊಠಡಿಗಳನ್ನು ಸಜ್ಜುಗೊಳಿಸಲಾಗಿದೆ. ಅಭ್ಯರ್ಥಿಗಳಿಗೆ ಗೊಂದಲವಾಗದಂತೆ ಮಾಹಿತಿ ನೀಡುವ ಸಲುವಾಗಿ ಕೌಂಟರ್ಗಳನ್ನು ಸ್ಥಾಪಿಸಲಾಗಿದೆ. 100ಕ್ಕೂ ಹೆಚ್ಚು ಕಂಪನಿಗಳು ಭಾಗಿ: ಐಟಿ, ಬಿಟಿ, ಮೆಕ್ಯಾನಿಕಲ್, ಆಟೋಮೊಬೈಲ್ ಸೇರಿದಂತೆ ವಿವಿಧ ಕ್ಷೇತ್ರಗಳ ಸುಮಾರು 100ಕ್ಕೂ ಹೆಚ್ಚು ಕಂಪನಿಗಳು ಉದ್ಯೋಗ…













