Author: kannadanewsnow09

ಬೆಂಗಳೂರು: ನಗರದಲ್ಲಿ ಆಪ್ ಆಧಾರಿತ ಆಟೋಗಳು ಸಂಚರಿಸುತ್ತಿವೆ. ಈ ಆಪ್ ಆಧಾರಿತ ಆಟೋ ಚಾಲಕರಿಂದ ಪ್ರಯಾಣಿಕರಿಂದ ದುಬಾರಿ ದರವನ್ನು ವಸೂಲಿ ಮಾಡುತ್ತಿರುವುದು ಸಾರಿಗೆ ಮತ್ತು ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ಅವರ ಗಮನಕ್ಕೆ ಬಂದಿದೆ. ಹೀಗಾಗಿ ಆಪ್ ಆಧಾರಿತ ಆಟೋಗಳಾಗಲಿ, ಇನ್ನಾವುದೇ ಮಾದರಿಯ ಆಟೋಗಳಾಗಲಿ ದರಕ್ಕಿಂತ ಹೆಚ್ಚು ವಸೂಲಿ ಮಾಡಿದರೇ ಮುಲಾಜಿಲ್ಲದೇ ಕ್ರಮ ಕೈಗೊಳ್ಳುವಂತೆ ಖಡಕ್ ಆದೇಶ ಮಾಡಿದ್ದಾರೆ. ಈ ಸಂಬಂಧ ಸಾರಿಗೆ ಮತ್ತು ಸುರಕ್ಷತ ಇಲಾಖೆಯ ಆಯುಕ್ತರಿಗೆ ಪತ್ರ ಬರೆದಿರುವಂತ ಸಚಿವ ರಾಮಲಿಂಗಾರೆಡ್ಡಿ ಅವರು, ಬೆಂಗಳೂರು ನಗರದಲ್ಲಿ ಸರ್ಕಾರ ನಿಗದಿ ಮಾಡಿರುವ ದರಕ್ಕಿಂತ ಹೆಚ್ಚು ದರ ವಸೂಲಿ ಮಾಡುತ್ತಿರುವ ಆಪ್ (APP) ಆಧಾರಿತ ಆಟೋಗಳಾಗಲಿ ಅಥವಾ ಇನ್ನಾವುದೇ ಮಾದರಿಯ ಆಟೋಗಳಾಗಲಿ ಅಂತಹವರ ಮೇಲೆ ನಿರ್ದಾಕ್ಷಿಣ್ಯವಾಗಿ ಕ್ರಮ ಜರುಗಿಸಬೇಕು ಅಂತ ಖಡಕ್ ಸೂಚನೆ ನೀಡಿದ್ದಾರೆ. ಪ್ರಯಾಣಿಕರಿಂದ ನಿಗದಿಕ್ಕಿಂತ ದರಕ್ಕಿಂತ ಹೆಚ್ಚಿನ ದರ ಬೇಡಿಕೆ, ಹೆಚ್ಚಿನ ದರ ನೀಡದಿದ್ದಲ್ಲಿ ಪಯಾಣವನ್ನು ರದ್ದುಗೊಳಿಸುವುದು ಹಾಗೂ ಅತೀ ಹೆಚ್ಚಿನ ದರ ವಸೂಲು ಮಾಡುತ್ತಿರುವ ಪುಕರಣಗಳ ಬಗ್ಗೆ ದೂರು…

Read More

ನವದೆಹಲಿ: ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ 11 ಜನರ ಪ್ರಾಣವನ್ನು ಬಲಿ ತೆಗೆದುಕೊಂಡು, ಇತರ ಅನೇಕರು ಗಾಯಗೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಐಪಿಎಸ್ ಅಧಿಕಾರಿಗಳಾದ ದಯಾನಂದ, ವಿಕಾಸ್ ಕುಮಾರ್ ಮತ್ತು ಶೇಖರ್ ಅವರನ್ನು ಅಮಾನತುಗೊಳಿಸಲು ಕೇಂದ್ರ ಸರ್ಕಾರ ಅನುಮೋದನೆ ನೀಡಿದೆ. ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) 2025 ರಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ತಂಡದ ವಿಜಯೋತ್ಸವದ ಸಂದರ್ಭದಲ್ಲಿ ಜನಸಂದಣಿಯನ್ನು ನಿಯಂತ್ರಿಸುವಲ್ಲಿ ಕರ್ತವ್ಯ ಲೋಪ ಎಸಗಿದ ಆರೋಪದ ಮೇಲೆ ಕರ್ನಾಟಕ ಸರ್ಕಾರ ಅಧಿಕಾರಿಗಳ ವಿರುದ್ಧ ಶಿಸ್ತು ಕ್ರಮ ಕೈಗೊಂಡ ನಂತರ ಈ ಅನುಮೋದನೆ ಬಂದಿದೆ. ಕರ್ನಾಟಕ ಸರ್ಕಾರವು ಈ ಅಮಾನತು ವರದಿಯನ್ನು ಈ ಹಿಂದೆ ಕೇಂದ್ರಕ್ಕೆ ಸಲ್ಲಿಸಿತ್ತು. ಈಗ ಅದು ಔಪಚಾರಿಕವಾಗಿ ಈ ಕ್ರಮವನ್ನು ಅನುಮೋದಿಸಿದೆ. ಕೇಂದ್ರವು ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆಗೆ (ಡಿಪಿಎಆರ್) ತನ್ನ ಅನುಮೋದನೆಯನ್ನು ತಿಳಿಸಿದೆ. ಇದರಿಂದಾಗಿ ರಾಜ್ಯದ ಕ್ರಮವನ್ನು ಬಲಪಡಿಸಲಾಗಿದೆ. ಮುಖ್ಯಮಂತ್ರಿಗಳ ಕಚೇರಿ (ಸಿಎಂಒ) ಪ್ರಕಾರ, ಶಿಸ್ತು ಪ್ರಕ್ರಿಯೆಯನ್ನು ಮತ್ತಷ್ಟು ಮುಂದುವರಿಸುವ ಮೂಲಕ ಅಧಿಕಾರಿಗಳ ವಿರುದ್ಧ 30 ದಿನಗಳಲ್ಲಿ…

Read More

ಅಹಮದಾಬಾದ್: ವಿಮಾನದಲ್ಲಿ 241 ಜನರನ್ನು ಬಲಿ ತೆಗೆದುಕೊಂಡ ಭೀಕರ ವಿಮಾನ ಅಪಘಾತದ ಸುಮಾರು ಎರಡು ವಾರಗಳ ನಂತರ, ಕೊನೆಯ ಗುರುತಿಸಲಾಗದ ಶವದ ಡಿಎನ್ಎ ಹೊಂದಾಣಿಕೆಯಾಗಿದೆ. ಸಾವನ್ನಪ್ಪಿದವರ ಮೃತದೇಹವನ್ನು ಶನಿವಾರ ಕುಟುಂಬಕ್ಕೆ ಹಸ್ತಾಂತರಿಸಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ. ವಿಮಾನ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಈಗ 260 ಕ್ಕೆ ತಲುಪಿದೆ. ಮೃತರನ್ನು ಕಚ್ ಜಿಲ್ಲೆಯ ಭುಜ್‌ನ ದಹಿಂಸಾರಾ ಗ್ರಾಮದ ನಿವಾಸಿ ಅನಿಲ್ ಲಾಲ್ಜಿ ಖಿಮಾನಿ ಎಂದು ಗುರುತಿಸಲಾಗಿದೆ. ಏತನ್ಮಧ್ಯೆ, ಕೊಲ್ಲಲ್ಪಟ್ಟ ಪ್ರಯಾಣಿಕರಲ್ಲಿ ಖಿಮಾನಿ ಕುಟುಂಬವು ಎರಡು ದಿನಗಳ ಹಿಂದೆಯೇ ಸಾಂಕೇತಿಕ ಅಂತ್ಯಕ್ರಿಯೆಗಳನ್ನು ನಡೆಸಿತ್ತು. ವಿಮಾನ ಅಪಘಾತದಲ್ಲಿ ಮೃತಪಟ್ಟ 241 ಜನರನ್ನು ಖಿಮಾನಿ ಗುರುತಿನೊಂದಿಗೆ ಗುರುತಿಸಲಾಗಿದೆ ಎಂದು ಸಿವಿಲ್ ಆಸ್ಪತ್ರೆಯ ಹಿರಿಯ ಅಧಿಕಾರಿಯೊಬ್ಬರು ದೃಢಪಡಿಸಿದ್ದಾರೆ. ಇದರೊಂದಿಗೆ ವಿಮಾನದಲ್ಲಿದ್ದ 241 ಜನರು ಮತ್ತು ನೆಲದ ಮೇಲೆ 19 ಜನರು ಸೇರಿದಂತೆ ಒಟ್ಟು 260 ಜನರು ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ. ಇದು ದುರಂತದ ಅಂತಿಮ ಅಂಕಿ ಅಂಶವಾಗಿದೆ ಎಂದು ಹೇಳಲಾಗುತ್ತದೆ. ಜೂನ್ 12 ರಂದು 32 ವರ್ಷದ ಖಿಮಾನಿ…

Read More

ಬೆಂಗಳೂರು: ವಿಜ್ರಂಭಣೆ ರಭಸದಲ್ಲಿ ದಸರಾದ ಚಾರಿತ್ರಿಕ‌ ಮಹತ್ವ ಮರೆಯಾಗಬಾರದು. ಅನಗತ್ಯವಾಗಿ ಹಣ ಖರ್ಚು ಮಾಡುವುದು ವೈಭವ ಅಲ್ಲ. ಜನರ, ಪ್ರವಾಸಿಗರ ಸುರಕ್ಷತೆ ಮತ್ತು ಅನುಕೂಲಕ್ಕೆ ಪ್ರಥಮ ಆದ್ಯತೆ ಇರಲಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೂಚನೆ ನೀಡಿದರು. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಇಂದು ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ನಾಡಹಬ್ಬ ಮೈಸೂರು ದಸರಾ-2025 ಆಚರಣೆ ಕುರಿತು ನಡೆದ ಉನ್ನತ ಮಟ್ಟದ ಸಮಿತಿ ಸಭೆಯಲ್ಲಿ ಸೂಚನೆಗಳನ್ನು ನೀಡಿದರು. ಸರ್ಕಾರದ ಸಾಧನೆಗಳು, ನಾವು ಪ್ರತೀ ಇಲಾಖೆಯಲ್ಲೂ ಜಾರಿ ಮಾಡಿರುವ ಜನಪರ ಕಾರ್ಯಕ್ರಮಗಳು ಜನರಿಗೆ ಸಮರ್ಪಕವಾಗಿ ಮನವರಿಕೆ ಆಗುವ ರೀತಿಯಲ್ಲಿ ಯೋಜನೆ ರೂಪಿಸಬೇಕು. ಈ ಬಾರಿ ರಾಜ್ಯದಾದ್ಯಂತ ಮಳೆ ಬೆಳೆ ಉತ್ತಮವಾಗಿದ್ದು, ನದಿ, ಕೆರೆಗಳು ತುಂಬಿದ್ದು, ವೈಭವದಿಂದ ದಸರಾ ಆಚರಿಸಲಾಗುವುದು. • ಸೆಪ್ಟಂಬರ್‌ 22ರಂದು ದಸರಾ ಹಬ್ಬಕ್ಕೆ ಚಾಲನೆ ದೊರೆಯಲಿದ್ದು, ಅಕ್ಟೋಬರ್‌ 2ರಂದು ವಿಜಯದಶಮಿ, ಜಂಬೂ ಸವಾರಿ ನಡೆಯಲಿದೆ. ದಸರಾ ಈ ಬಾರಿ 10ದಿನಗಳ ಬದಲು 11ದಿನಗಳ ಕಾಲ ನಡೆಯಲಿದೆ. • ದಸರಾಕ್ಕೆ ತನ್ನದೇ ಆದ…

Read More

ಬೆಂಗಳೂರು: ನಗರದಲ್ಲಿ ಬಿಎಂಟಿಸಿ ಬಸ್ಸಿನಲ್ಲಿ ಟಿಕೆಟ್ ಇಲ್ಲದೇ ಪ್ರಯಾಣಿಸಿದಂತ ಪ್ರಯಾಣಿಕರಿಗೆ ಬಿಗ್ ಶಾಕ್ ನೀಡಲಾಗಿದೆ. ಬರೋಬ್ಬರಿ 5,706 ಮಂದಿಯಿಂದ 12.64 ಲಕ್ಷ ದಂಡವನ್ನು ವಸೂಲಿ ಮಾಡಲಾಗಿದೆ. ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ ವಾಹನಗಳಲ್ಲಿ ಸಂಚರಿಸುವ ಪ್ರಯಾಣಿಕರು ಟಿಕೇಟನ್ನು ಪಡೆಯದೆ ಅನಧಿಕೃತವಾಗಿ ಪ್ರಯಾಣ ಮಾಡುವವರನ್ನು ಮತ್ತು ಸಂಸ್ಥೆಯ  ಸಾರಿಗೆ ಆದಾಯದ ಸೋರಿಕೆಯನ್ನು ತಡೆಗಟ್ಟುವ ನಿಟ್ಟಿನಲ್ಲಿ, ನಗರದಾದ್ಯಂತ ಸಂಚರಿಸುವ ವಾಹನಗಳನ್ನು ನಮ್ಮ ಸಂಸ್ಥೆಯ  ತನಿಖಾ ತಂಡಗಳು ಏಪ್ರಿಲ್‌ ಹಾಗೂ ಮೇ-2025 ರ ಮಾಹೆಯಲ್ಲಿ ಒಟ್ಟು 38,116 ಟ್ರಿಪ್‌ಗಳನ್ನು ತಪಾಸಿಸಿ 5,706 ಟಿಕೇಟ್ ರಹಿತ ಪ್ರಯಾಣಿಕರನ್ನು ಪತ್ತೆ ಹಚ್ಚಿ, ಅವರಿಂದ ಒಟ್ಟು ರೂ. 12,64,051/- ದಂಡ ವಸೂಲಿ ಮಾಡಿ ಸಂಸ್ಥೆಯ  ನಿರ್ವಾಹಕರ ವಿರುದ್ಧ 3500 ಪ್ರಕರಣಗಳನ್ನು ದಾಖಲಿಸಿರುತ್ತಾರೆ. ಮಹಿಳಾ ಪ್ರಯಾಣಿಕರಿಗೆಂದೇ ಮೀಸಲಾಗಿರುವ ಆಸನಗಳಲ್ಲಿ ಕುಳಿತು ಪ್ರಯಾಣಿಸಿರುವ 652 ಪುರುಷ  ಪ್ರಯಾಣಿಕರಿಂದ  ಒಟ್ಟು ರೂ. 65,200/- ಅನ್ನು ಮೋಟಾರು ವಾಹನ ಕಾಯ್ದೆ 1988ರ ಕಾಲಂ 177 ಮತ್ತು 94 ರ ಪ್ರಕಾರ ದಂಡ ವಿಧಿಸಲಾಗಿರುತ್ತದೆ. ಒಟ್ಟಾರೆಯಾಗಿ ಏಪ್ರಿಲ್‌…

Read More

ಬೆಂಗಳೂರು: ಮಲೈ ಮಹದೇಶ್ವರ ವನ್ಯಜೀವಿ ಅಭಯಾರಣ್ಯದಲ್ಲಿ ಐದು ಹುಲಿಗಳು ಸಾವನ್ನಪ್ಪಿದ್ದವು. ಇವುಗಳಲ್ಲಿ ತಾಯಿ ಮತ್ತು ನಾಲ್ಕು ಮರಿಗಳು ಸೇರಿದ್ದಾವೆ. ಈ ಪ್ರಕರಣದ ತನಿಖೆಗಾಗಿ ಕೇಂದ್ರವು ವಿಶೇಷ ತನಿಖಾ ತಂಡವನ್ನು (Special Investigation Team-SIT) ರಚಿಸಿದೆ. ಈ ಘಟನೆಯ ಕುರಿತು ಅರಣ್ಯ ಇಲಾಖೆಯ ಸ್ವಂತ ಉನ್ನತ ಮಟ್ಟದ ತನಿಖೆಗೆ ಇದು ಹೊಂದಿಕೆಯಾಗಿದೆ. ಜೂನ್ 26 ರಂದು ಗುರುವಾರ ಲಭ್ಯವಾದ ಕಚೇರಿ ಜ್ಞಾಪಕ ಪತ್ರದಲ್ಲಿ, ಪರಿಸರ, ಅರಣ್ಯ ಮತ್ತು ಹವಾಮಾನ ಬದಲಾವಣೆ ಸಚಿವಾಲಯವು ಇಬ್ಬರು ಸದಸ್ಯರ SIT ಅನ್ನು ರಚಿಸಿದೆ ಮತ್ತು ರಾಜ್ಯ ಸರ್ಕಾರವು ಉನ್ನತ ಮಟ್ಟದ ಸಮಿತಿಗೆ ನೀಡಿದ ಗಡುವಿನಂತೆಯೇ ಗಡುವನ್ನು ನೀಡಿದೆ ಎಂದು ಹೇಳಿದೆ. ಇಬ್ಬರು ಸದಸ್ಯರು: ಬೆಂಗಳೂರಿನಲ್ಲಿರುವ ರಾಷ್ಟ್ರೀಯ ಹುಲಿ ಸಂರಕ್ಷಣಾ ಪ್ರಾಧಿಕಾರದ ಪ್ರಾದೇಶಿಕ ಬ್ಯೂರೋದ ಸಹಾಯಕ ಇನ್ಸ್‌ಪೆಕ್ಟರ್ ಜನರಲ್ ಹರಿಣಿ ವಿ ಮತ್ತು ವನ್ಯಜೀವಿ ಅಪರಾಧ ನಿಯಂತ್ರಣ ಬ್ಯೂರೋದ ದಕ್ಷಿಣ ಪ್ರದೇಶದ ಅರಣ್ಯಗಳ ಸಹಾಯಕ ಇನ್ಸ್‌ಪೆಕ್ಟರ್ ಜನರಲ್ ತೆನ್ಮೋಳಿ ವಿ. ತಂಡ (ಎಸ್‌ಐಟಿ) ಈ ವಿಷಯದ ಬಗ್ಗೆ ವಿವರವಾದ…

Read More

ಬೆಂಗಳೂರು: ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗದ ಆದೇಶದಂತೆ ಬೆಸ್ಕಾಂ ವ್ಯಾಪ್ತಿಯ ಗ್ರಾಮಾಂತರ ಪ್ರದೇಶಗಳಲ್ಲಿ 2025ರ ಜುಲೈ 1 ರಿಂದ ಹೊಸ ಮತ್ತು ತಾತ್ಕಾಲಿಕ ವಿದ್ಯುತ್ ಸಂಪರ್ಕ ಪಡೆಯುವ ಗ್ರಾಹಕರು ಸ್ಮಾರ್ಟ್ ಮೀಟರ್ ಅಳವಡಿಸೋದು ಕಡ್ಡಾಯಗೊಳಿಸಲಾಗಿದೆ. ಈ ಮೂಲಕ ಬೆಸ್ಕಾಂ ವ್ಯಾಪ್ತಿಯ ಗ್ರಾಮೀಣ ಜನತೆಗೆ ಸ್ಮಾರ್ಟ್ ಮೀಟರ್ ಹಾಕಿಸಿಕೊಳ್ಳೋ ಶಾಕ್ ನೀಡಲಾಗಿದೆ. ಗ್ರಾಮೀಣ ಪ್ರದೇಶಗಳಲ್ಲಿ ಹೊಸ ಹಾಗೂ ತಾತ್ಕಾಲಿಕ ವಿದ್ಯುತ್ ಸಂಪರ್ಕಗಳಿಗೆ ಸ್ಮಾರ್ಟ್ ಮೀಟರ್ ಅಳವಡಿಕೆ ಕಡ್ಡಾಯಗೊಳಿಸಿ ಬೆಸ್ಕಾಂ ಆದೇಶ ಹೊರಡಿಸಿದೆ. ಬೆಸ್ಕಾಂ ವ್ಯಾಪ್ತಿಯ ಬೆಂಗಳೂರು ನಗರ ಸೇರಿದಂತೆ ಎಲ್ಲಾ ನಗರ ಪ್ರದೇಶಗಳಲ್ಲಿ 2025ರ ಫೆಬ್ರವರಿ 15ರಿಂದ ಸ್ಮಾರ್ಟ್ ಮೀಟರ್ ಅಳವಡಿಕೆ ಆರಂಭಗೊಂಡಿದ್ದು, ಈಗ ಬೆಸ್ಕಾಂ ವ್ಯಾಪ್ತಿಯ ಗ್ರಾಮೀಣ ಪ್ರದೇಶಗಳಿಗು ಕೂಡಾ ಯೋಜನೆ ವಿಸ್ತರಿಸಲಾಗಿದೆ. ಹೊಸ ಹಾಗೂ ತಾತ್ಕಾಲಿಕ ವಿದ್ಯುತ್ ಸಂಪರ್ಕಗಳಿಗೆ ಗ್ರಾಹಕರು ಅರ್ಜಿ ಸಲ್ಲಿಸಿ, ಬೆಸ್ಕಾಂನ ನೋಂದಾಯಿತ ಮಳಿಗೆಗಳಿಂದ ಸ್ಮಾರ್ಟ್ ಮೀಟರ್‌ಗಳನ್ನು ಖರೀದಿಸಿ ವಿದ್ಯುತ್ ಸಂಪರ್ಕ ಪಡೆಯಬಹುದು ಎಂದು ಬೆಸ್ಕಾಂ ಪ್ರಕಟಣೆ ತಿಳಿಸಿದೆ. ಸ್ಮಾರ್ಟ್ ಮೀಟರ್ ಅಳವಡಿಕೆ ಕುರಿತು 2024ರ ಮಾರ್ಚ್…

Read More

ಬೆಂಗಳೂರು: ರಾಜ್ಯದ ಜನತೆಗೆ ಮತ್ತೊಂದು ಶಾಕ್ ಅನ್ನು ಎಸ್ಕಾಂ ಕಂಪನಿಗಳು ನೀಡಿವೆ. ಜುಲೈ.1ರಿಂದ ಹೊಸ ವಿದ್ಯುತ್ ಸಂಪರ್ಕಕ್ಕೆ ಸ್ಮಾರ್ಟ್ ಮೀಟರ್ ಕಡ್ಡಾಯಗೊಳಿಸಲಾಗಿದೆ. ಹೀಗಾಗಿ ಹೊಸದಾಗಿ ವಿದ್ಯುತ್ ಸಂಪರ್ಕ ಪಡೆಯೋರು ಸಾವಿರಾರು ರೂಪಾಯಿ ಪಾವತಿಸಬೇಕಿದೆ. ಈ ಬಗ್ಗೆ ಎಸ್ಕಾಂಗಳಿಂದ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಲಾಗಿದ್ದು, ಬೆಸ್ಕಾಂ, ಹೆಸ್ಕಾಂ, ಮೆಸ್ಕಾಂ, ಸೆಸ್ಕಾಂ, ಜೆಸ್ಕಾಂನ ವಿದ್ಯುತ್ ಸರಬರಾಜು ನಿಗಮ ವ್ಯಾಪ್ತಿಯಲ್ಲಿ ಹೊಸ ವಿದ್ಯುತ್ ಸಂಪರ್ಕ ಪಡೆಯುವ ಗ್ರಾಹಕರಿಗೆ ಸ್ಮಾರ್ಟ್ ಮೀಟರ್ ಅಳವಡಿಸುವುದು ಜುಲೈ.1, 2025ರಿಂದ ಕಡ್ಡಾಯವಾಗಿರುತ್ತದೆ. ಆದರೇ ಹೆಚ್.ಡಿ ಹೊರತು ಪಡಿಸಿ ಎಂದು ತಿಳಿಸಿವೆ. ಇದು ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣಾ ಆಯೋಗದ ಆದೇಶವಾಗಿದೆ. ಅದನ್ನು ರಾಜ್ಯಾಧ್ಯಂತ ಎಸ್ಕಾಂಗಳು ಜಾರಿಗೊಳಿಸುತ್ತಿವೆ. ನಿಗದಿಪಡಿಸಿರುವಂತ ದರದಲ್ಲಿ ರೀಟೇಲ್ ಔಟ್ ಲೆಟ್ ಗಳಲ್ಲಿ ಸ್ಮಾರ್ಟ್ ಮೀಟರ್ ಗಳನ್ನು ಖರೀದಿಸಿ, ವಿದ್ಯುತ್ ಸಂಪರ್ಕ ಪಡೆಯುವಂತೆ ಮನವಿ ಮಾಡಿವೆ. ಸ್ಮಾರ್ಟ್‌ ಮೀಟರ್‌ ವೈಶಿಷ್ಟ್ಯ ಹಳೆಯ ಮಾದರಿಯ ಮೀಟರ್‌ಗಳಿಗಿಂತ ವಿಶಿಷ್ಟವಾಗಿರುವ ಸ್ಮಾರ್ಟ್‌ ಮೀಟರ್‌ಗಳು ಜಿಪಿಆರ್‌ಎಸ್‌/ಆರ್ ಎಫ್ ಆಧಾರಿತ ಸಂವಹನ ಡೇಟಾ ಸಂಗ್ರಹಣೆಗೆ ಸರ್ವರ್ ಹಾಗೂ ಕ್ಲೌಡ್…

Read More

ಶಿವಮೊಗ್ಗ: ಜಿಲ್ಲೆಯ ಸಾಗರ ನಗರದಲ್ಲಿಂದು ಪ್ರಾಂತ ಅಡಿಕೆ ಬೆಳೆಗಾರರ ಸಂಘದಿಂದ ನಡೆಸಲಾಗಿದ್ದಂತ ಅಡಿಕೆ ಬೆಳೆಗಾರರ ಸಮಾವೇಶದ ಹಾಗೂ ಅಡಿಕೆ ಬೆಳೆಗಾರರಿಗೆ ಮಾಹಿತಿ ನೀಡುವಂತ ಐವತ್ತರ ಈ ಹೊತ್ತು ಸ್ಮರಣ ಸಂಚಿಕೆಯನ್ನು ಮಾಜಿ ಗೃಹ ಸಚಿವ, ತೀರ್ಥಹಳ್ಳಿಯ ಶಾಸಕ ಅರಗ ಜ್ಞಾನೇಂದ್ರ ಬಿಡುಗಡೆ ಮಾಡಿದರು. ಈ ಬಳಿಕ ಮಾತನಾಡಿದಂತ ಅವರು, ಮಲೆನಾಡಿನ ಜೀವನಾಡಿ ಅಡಿಕೆಯಾಗಿರುವಂತ ಪಾರಂಪರಿಕ ಅಡಿಕೆ ಬೆಳೆಗಾರರು ನಿರಂತರವಾಗಿ ಸಂಕಷ್ಟ ಮತ್ತು ಸವಾಲುಗಳನ್ನು ಎದುರಿಸುತ್ತಿದೆ. ಅವುಗಳಿಗೆ ಪರಿಹಾರ ಕಂಡುಕೊಳ್ಳಬೇಕಾದರೇ ಸಂಘಟಿತರಾಗಬೇಕು. ಆಗ ಮಾತ್ರ ಸಮಸ್ಯೆಗೆ ಪರಿಹಾರ. ಇಲ್ಲವಾದರೇ ಇಲ್ಲ ಎಂಬುದಾಗಿ ಹೇಳಿದರು. ನಮ್ಮ ಮುಂದೆ ಅಡಿಕೆ ಹಾನಿಕಾರವಲ್ಲ ಎಂಬುದನ್ನು ಸಾಭೀತು ಪಡಿಸಬೇಕಾದಂತ ಸವಾಲುಗಳಿವೆ. ಸುಪ್ರೀಂ ಕೋರ್ಟ್ ನಲ್ಲಿ ಈ ಬಗ್ಗೆ ತೂಗುಗತ್ತಿ ಇದೆ. ನಿರಂತರವಾಗಿ ಸಮಸ್ಯೆಗಳ ವಿರುದ್ಧ ಅಡಿಕೆ ಬೆಳೆಗಾರರು ಹೋರಾಟ ಮಾಡಲು ಮಹಾ ಮಂಡಲವನ್ನು ರಚಿಸಲಾಗಿದೆ. ಎಲ್ಲಾ ಸಂಘಟನೆಗಳು ಇದಕ್ಕೆ ಸದಸ್ಯರಾಗಬೇಕು. ನಾವು ಈಗಾಗಲೇ ಈ ಮಹಾ ಮಂಡಲಕ್ಕೆ 1 ಕೋಟಿ ನಿಧಿ ಸಂಗ್ರಹಿಸಿದ್ದೇವೆ ಎಂದರು. ಅಡಿಕೆ ಬೆಳೆಗೆ ಎಲೆಚುಕ್ಕಿ ರೋಗ,…

Read More

ಹುಬ್ಬಳ್ಳಿ: ಹಾಟ್ ಆಕ್ಸಲ್ ತಾಂತ್ರಿಕ ಸಮಸ್ಯೆಯಿಂದಾಗಿ ವಂದೇ ಭಾರತ್ ಎಕ್ಸ್‌ಪ್ರೆಸ್ (ರೈಲು ಸಂಖ್ಯೆ 20662) ಸ್ಥಗಿತಗೊಂಡಿದೆ. ಬೆಂಕಿ ಕಾಣಿಸಿಕೊಂಡಿತ್ತು. ಇದರ ಹೊರತಾಗಿ ವಂದೇ ಭಾರತ್ ಎಕ್ಸ್ ಪ್ರೆಸ್ ರೈಲಿನಲ್ಲಿ ಯಾವುದೇ ದೊಡ್ಡ ಅನಾಹುತ ಆಗಿಲ್ಲ. ಪ್ರಯಾಣಿಕರಿಗೆ ಸುರಕ್ಷಿತವಾಗಿ ಸೌಲಭ್ಯ ಒದಗಿಸಲಾಗಿದೆ ಎಂಬುದಾಗಿ ನೈರುತ್ಯ ರೈಲ್ವೆಯಿಂದ ಸ್ಪಷ್ಟ ಪಡಿಸಲಾಗಿದೆ. ಈ ಕುರಿತಂತೆ ಪತ್ರಿಕಾ ಪ್ರಕಟಣೆಯಲ್ಲಿ ಹುಬ್ಬಳ್ಳಿಯ ನೈರುತ್ಯ ರೈಲ್ವೆ ವಿಭಾಗದ ಮುಖ್ಯ ಸಾರ್ವಜನಿಕ ಸಂಪರ್ಕ ಅಧಿಕಾರಿ ಡಾ.ಮಂಜುನಾಥ ಕನಮಡಿ ಅವರು ಮಾಹಿತಿ ಹಂಚಿಕೊಂಡಿದ್ದು, ಇಂದು ಮಧ್ಯಾಹ್ನ 3:30 ರ ಸುಮಾರಿಗೆ ಅಮರಾವತಿ ಕಾಲೋನಿ ಬಳಿ ಜಾಗೃತ ಎಲ್‌ಸಿ ಗೇಟ್‌ಕೀಪರ್ ಸಿ 4 ಕೋಚ್‌ನಲ್ಲಿ ಹಾಟ್ ಆಕ್ಸಲ್ ಪತ್ತೆಯಾದ ನಂತರ ರೈಲು ಸಂಖ್ಯೆ 20662 ಧಾರವಾಡ – ಕೆಎಸ್‌ಆರ್ ಬೆಂಗಳೂರು ವಂದೇ ಭಾರತ್ ಎಕ್ಸ್‌ಪ್ರೆಸ್ ಅನ್ನು ದಾವಣಗೆರೆ ನಿಲ್ದಾಣದಲ್ಲಿ ನಿಲ್ಲಿಸಲಾಯಿತು ಎಂದಿದ್ದಾರೆ. ಸುರಕ್ಷತಾ ಕ್ರಮವಾಗಿ, ದಾವಣಗೆರೆಯಲ್ಲಿ ರೈಲನ್ನು ತಕ್ಷಣವೇ ನಿಲ್ಲಿಸಿ ಸಂಪೂರ್ಣವಾಗಿ ಪರಿಶೀಲಿಸಲಾಯಿತು. ಪ್ರಯಾಣಿಕರಿಗೆ ಅನಾನುಕೂಲತೆಯನ್ನು ಕಡಿಮೆ ಮಾಡಲು, ತ್ವರಿತ ಪರ್ಯಾಯ ವ್ಯವಸ್ಥೆಗಳನ್ನು ಮಾಡಲಾಯಿತು…

Read More