Subscribe to Updates
Get the latest creative news from FooBar about art, design and business.
Author: ವಸಂತ ಬಿ ಈಶ್ವರಗೆರೆ
ವಸಂತ ಬಿ ಈಶ್ವರಗೆರೆ (Vasantha B Eshwaragere) ಅವರು ಕರ್ನಾಟಕದ ಪತ್ರಕರ್ತರು ಮತ್ತು ಕವಿ. ಉದಯ ನ್ಯೂಸ್, ಟಿವಿ5 ಕನ್ನಡ ಸೇರಿದಂತೆ ವಿವಿಧ ಸುದ್ದಿ ಮಾಧ್ಯಮಗಳಲ್ಲಿ ಸುಮಾರು 15 ವರ್ಷಗಳ ಅನುಭವವನ್ನು ಹೊಂದಿದ್ದಾರೆ. ಪ್ರಸ್ತುತ ಅವರು Kannada News Now ಡಿಜಿಡಿಲ್ ಮಾಧ್ಯಮದಲ್ಲಿ ಸಂಪಾದಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಇವರು ತಾಜಾ ಸುದ್ದಿ, ಸಾಹಿತ್ಯ, ಸಾಮಾಜಿಕ ವರದಿಗಾರಿಕೆ, ನ್ಯಾಯಾಂಗ ಸಂಬಂಧಿತ ವರದಿ ಮತ್ತು ಶಿಕ್ಷಣ ಕ್ಷೇತ್ರಕ್ಕೆ ಸಂಬಂಧಿಸಿದ ಸುದ್ದಿಗಳ ವರದಿಯಲ್ಲಿ ಸಕ್ರಿಯರಾಗಿದ್ದಾರೆ. ಗುಡವಿ ಪಕ್ಷಿಧಾಮದಂತಹ ಪ್ರವಾಸಿ ತಾಣಗಳ ಕುರಿತು ಲೇಖನಗಳನ್ನು ಬರೆದಿದ್ದಾರೆ.
ಮೈಸೂರು: ಜಿಲ್ಲೆಯ ಟಿ. ನರಸೀಪುರ ತಾಲೂಕಿನಲ್ಲಿ ಕೃಷಿ ಇಲಾಖೆ ಅಧಿಕಾರಿಗಳು ಹಾಗೂ ಪೊಲೀಸರು ಭಾರಿ ಜಂಟಿ ಕಾರ್ಯಾಚರಣೆ ನಡೆಸಿದ್ದು, ಅಕ್ರಮವಾಗಿ ಸಂಗ್ರಹಿಸಿಡಲಾಗಿದ್ದ ಸುಮಾರು 600 ಚೀಲ ಯೂರಿಯಾ ರಸಗೊಬ್ಬರವನ್ನು ಜಪ್ತಿ ಮಾಡಿದ್ದಾರೆ. ರೈತರಿಗೆ ಸಕಾಲದಲ್ಲಿ ಸಿಗಬೇಕಾದ ಸಬ್ಸಿಡಿ ಯುಕ್ತ ಯೂರಿಯಾ ಗೊಬ್ಬರವನ್ನು ಕಾಳಸಂತೆಯಲ್ಲಿ ಮಾರಾಟ ಮಾಡಲು ಅಥವಾ ದುರುದ್ದೇಶಕ್ಕೆ ಬಳಸಲು ಅಕ್ರಮವಾಗಿ ಗೋದಾಮಿನಲ್ಲಿ ಬಚ್ಚಿಡಲಾಗಿತ್ತು ಎಂಬ ಖಚಿತ ಮಾಹಿತಿ ಅಧಿಕಾರಿಗಳಿಗೆ ಲಭ್ಯವಾಗಿತ್ತು. ಈ ಮಾಹಿತಿಯ ಮೇರೆಗೆ ತಕ್ಷಣವೇ ಕಾರ್ಯಪ್ರವೃತ್ತರಾದ ಕೃಷಿ ಇಲಾಖೆಯ ಜಾಗೃತ ದಳ ಹಾಗೂ ಸ್ಥಳೀಯ ಪೊಲೀಸರು ಜಂಟಿಯಾಗಿ ದಾಳಿ ನಡೆಸಿದ್ದಾರೆ. ದಾಳಿಯ ಸಂದರ್ಭದಲ್ಲಿ ಯಾವುದೇ ಅಧಿಕೃತ ದಾಖಲೆಗಳಿಲ್ಲದೆ ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದ 600 ಚೀಲ ಯೂರಿಯಾವನ್ನು ವಶಪಡಿಸಿಕೊಳ್ಳಲಾಗಿದ್ದು, ಗೋದಾಮನ್ನು ಸೀಜ್ ಮಾಡಲಾಗಿದೆ. ಸರ್ಕಾರದ ನಿಯಮಗಳನ್ನು ಉಲ್ಲಂಘಿಸಿ, ಕೃತಕ ಅಭಾವ ಸೃಷ್ಟಿಸಲು ಯತ್ನಿಸುತ್ತಿದ್ದ ಆರೋಪಿಗಳ ವಿರುದ್ಧ ತನಿಖೆ ತೀವ್ರಗೊಂಡಿದ್ದು, ಸ್ಥಳೀಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ರೈತರ ಹಿತ ಕಾಯಲು ಇಲಾಖೆ ಬದ್ಧವಾಗಿದ್ದು, ಗೊಬ್ಬರ ಕಾಳಸಂತೆ ದಂಧೆಯಲ್ಲಿ ತೊಡಗುವವರ ವಿರುದ್ಧ ಕಠಿಣ…
ಬೆಂಗಳೂರು: ಕರ್ನಾಟಕದ ಮಾಜಿ ವೇಗದ ಬೌಲರ್ ಎಸ್.ಎಲ್. ಅಕ್ಷಯ್ ಭಾನುವಾರ ಹೃದಯಾಘಾತದಿಂದ ನಿಧನರಾಗಿದ್ದಾರೆ. ಅವರಿಗೆ 39 ವರ್ಷ ವಯಸ್ಸಾಗಿತ್ತು. 2014-15ರ ಸೀಸನ್ನಲ್ಲಿ ರಣಜಿ ಟ್ರೋಫಿ ಗೆದ್ದ ಕರ್ನಾಟಕ ತಂಡದ ಸದಸ್ಯರಾಗಿದ್ದ ಅಕ್ಷಯ್, ಇಲ್ಲಿ ಕೆಎಸ್ಸಿಎ (KSCA) ಮೂರನೇ ಡಿವಿಷನ್ ಪಂದ್ಯವೊಂದರಲ್ಲಿ ಸ್ಯಾಫೈರ್ ಸಿಸಿ ಪರ ಆಡುತ್ತಿದ್ದರು. ಪಂದ್ಯದ ವೇಳೆ ನಾಲ್ಕು ಓವರ್ಗಳನ್ನು ಬೌಲಿಂಗ್ ಮಾಡಿದ ನಂತರ ಅವರು ಅಸ್ವಸ್ಥತೆಯ ಬಗ್ಗೆ ದೂರಿದರು. ಕೂಡಲೇ ಅವರನ್ನು ಹತ್ತಿರದ ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ, ಅವರು ಈಗಾಗಲೇ ಮೃತಪಟ್ಟಿದ್ದಾರೆ ಎಂದು ವೈದ್ಯರು ಘೋಷಿಸಿದರು. “ಅಕ್ಷಯ್ ಅವರು ಪ್ರಥಮ ದರ್ಜೆ ಕ್ರಿಕೆಟ್ನಲ್ಲಿ ಕರ್ನಾಟಕವನ್ನು ಅತ್ಯಂತ ಹೆಮ್ಮೆಯಿಂದ ಪ್ರತಿನಿಧಿಸಿದ್ದರು. ತಮ್ಮ ಆಟದ ದಿನಗಳ ನಂತರವೂ ಕ್ರಿಕೆಟ್ ಮೇಲಿನ ಅಪಾರ ಪ್ರೀತಿ ಮತ್ತು ಸಮರ್ಪಣಾ ಭಾವದಿಂದ ಕ್ರೀಡೆಗೆ ಸೇವೆ ಸಲ್ಲಿಸುವುದನ್ನು ಮುಂದುವರಿಸಿದ್ದರು. ಜೂನಿಯರ್ ಮಟ್ಟದ ತರಬೇತುದಾರರಾಗಿ (ಕೋಚ್) ಯುವ ಕ್ರಿಕೆಟಿಗರನ್ನು ತಿದ್ದಿ ತೀಡುವಲ್ಲಿ ಮತ್ತು ಅವರಿಗೆ ಮಾರ್ಗದರ್ಶನ ನೀಡುವಲ್ಲಿ ಅವರು ಪ್ರಮುಖ ಪಾತ್ರ ವಹಿಸಿದ್ದರು. ರಾಜ್ಯದ ಕ್ರಿಕೆಟ್ ಪ್ರತಿಭೆಗಳ ಬೆಳವಣಿಗೆಯ ಮೇಲೆ…
ಬೆಂಗಳೂರು: ಭಾರತೀಯ ಪ್ಯಾರಾಲಿಂಪಿಕ್ಸ್ ಸಮಿತಿ(ಪಿಸಿಐ) ಆಯೋಜಿಸುವ 8ನೇ ಆವೃತ್ತಿಯ ಭಾರತೀಯ ಓಪನ್ ಪ್ಯಾರಾ ಅಥ್ಲೆಟಿಕ್ಸ್ ಅಂತಾರಾಷ್ಟ್ರೀಯ್ ಚಾಂಪಿಯನ್ಶಿಪ್ ಮೇ 26ರಿಂದ 28ರ ವರೆಗೆ ಬೆಂಗಳೂರಿನಲ್ಲಿ ನಡೆಯಲಿದೆ. ನಗರದ ಕಂಠೀರವ ಕ್ರೀಡಾಂಗಣದಲ್ಲಿ 3 ದಿನಗಳ ಕಾಲ ನಡೆಯಲಿರುವ ಚಾಂಪಿಯನ್ಶಿಪ್ನಲ್ಲಿ ಭಾರತ ಸೇರಿ ಒಟ್ಟು 5 ರಾಷ್ಟ್ರಗಳ ಕ್ರೀಡಾಪಟುಗಳು ಪಾಲ್ಗೊಳ್ಳಲಿದ್ದಾರೆ. ಭಾನುವಾರ ನಗರದ ಖಾಸಗಿ ಹೋಟೆಲ್ನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಭಾರತೀಯ ಪ್ಯಾರಾಲಿಂಪಿಕ್ಸ್ ಸಮಿತಿ ಅಧ್ಯಕ್ಷ ದೇವೆಂದ್ರ ಝಝಾರಿಯಾ ಅವರು ಚಾಂಪಿಯನ್ಶಿಪ್ ಬಗ್ಗೆ ಮಾಹಿತಿ ನೀಡಿದರು. ಈ ಚಾಂಪಿಯನ್ಶಿಪ್, ಅಕ್ಟೋಬರ್ 18ರಿಂದ 24ರ ವರೆಗೆ ಜಪಾನ್ನಲ್ಲಿ ನಡೆಯಲಿರುವ 5ನೇ ಆವೃತ್ತಿಯ ಏಷ್ಯನ್ ಪ್ಯಾರಾ ಗೇಮ್ಸ್ಗೆ ಆಯ್ಕೆ ಟ್ರಯಲ್ಸ್ ಆಗಿರಲಿದೆ ಎಂದು ಅವರು ತಿಳಿಸಿದರು. ಚಾಂಪಿಯನ್ಶಿಪ್ನಲ್ಲಿ ಭಾರತದ 341 ಕ್ರೀಡಾಪಟುಗಳು ಪಾಲ್ಗೊಳ್ಳಲಿದ್ದಾರೆ. ಪ್ಯಾರಾಲಿಂಪಿಕ್ಸ್, ವಿಶ್ವ ಪ್ಯಾರಾ ಅಥ್ಲೆಟಿಕ್ಸ್ ಚಾಂಪಿಯನ್ಶಿಪ್, ಏಷ್ಯನ್ ಪ್ಯಾರಾ ಗೇಮ್ಸ್ ಪದಕ ವಿಜೇತರು ಕೂಟದಲ್ಲಿ ಭಾಗವಹಿಸಲಿದ್ದಾರೆ. ಎರಡು ಬಾರಿ ಪ್ಯಾರಾಲಿಂಪಿಕ್ಸ್ ಹಾಗೂ ಮೂರು ಬಾರಿ ವಿಶ್ವ ಅಥ್ಲೆಟಿಕ್ಸ್ ಚಾಂಪಿಯನ್ಶಿಪ್ ಚಿನ್ನ ವಿಜೇತ ಜಾವೆಲಿನ್ ಪಟು…
ಬೆಂಗಳೂರು: ಕರ್ನಾಟಕ ರಾಜ್ಯಕ್ಕೆ ಹೆಮ್ಮೆಯ ಕ್ಷಣವೊಂದರಲ್ಲಿ, ದೇಶಕ್ಕೆ ಸಲ್ಲಿಸಿದ ಅಸಾಧಾರಣ ಸೇವೆಯನ್ನು ಗುರುತಿಸಿ ಮೂವರು ಪ್ರಸಿದ್ಧ ವ್ಯಕ್ತಿಗಳನ್ನು ಪ್ರತಿಷ್ಠಿತ ಪದ್ಮ ಪ್ರಶಸ್ತಿಗಳಿಗೆ ನಾಮನಿರ್ದೇಶನ ಮಾಡಲಾಗಿದೆ. ಕಲಾ ಕ್ಷೇತ್ರದಲ್ಲಿ ಶತಾವಧಾನಿ ಡಾ. ಆರ್. ಗಣೇಶ್ ಅವರಿಗೆ ಪದ್ಮಭೂಷಣ ಪ್ರಶಸ್ತಿಯನ್ನು ಘೋಷಿಸಲಾಗಿದ್ದರೆ, ಸಮಾಜ ಸೇವೆಗೆ ನೀಡಿದ ಕೊಡುಗೆಗಾಗಿ ಅಂಕೇಗೌಡ ಎಮ್ ಮತ್ತು ಡಾ. ಎಸ್. ಜಿ. ಸುಶೀಲಮ್ಮ ಇಬ್ಬರಿಗೂ ಪದ್ಮಶ್ರೀ ಪ್ರಶಸ್ತಿ ನೀಡಿ ಗೌರವಿಸಲಾಗಿದೆ. ಈ ಪ್ರಶಸ್ತಿಗಳು ಶಾಸ್ತ್ರೀಯ ಕಲೆಗಳ ಸಂರಕ್ಷಣೆ, ಬೃಹತ್ ಸಾಹಿತ್ಯಿಕ ರಕ್ಷಣೆ ಮತ್ತು ತಳಮಟ್ಟದ ಮಾನವೀಯ ಕಲ್ಯಾಣವನ್ನು ಒಳಗೊಂಡ ಅವರ ಜೀವಮಾನದ ಸಾಧನೆಯನ್ನು ಆಚರಿಸುತ್ತವೆ. ಭಾರತೀಯ ಶಾಸ್ತ್ರೀಯ ಕಲೆ ಹಾಗೂ ಅವಧಾನ ಕ್ಷೇತ್ರದ ಧ್ರುವತಾರೆ ಲೇಖನಿ ಅಥವಾ ಕಾಗದದ ಯಾವುದೇ ಸಹಾಯವಿಲ್ಲದೆ, ತಕ್ಷಣದಲ್ಲೇ ವಿವಿಧ ಕಾವ್ಯಾತ್ಮಕ ಸವಾಲುಗಳನ್ನು ಎದುರಿಸುವ ಭಾರತದ ವಿಶಿಷ್ಟ ಹಾಗೂ ಸಾಂಪ್ರದಾಯಿಕ ಕಲೆಯಾದ ‘ಅವಧಾನ’ ಕ್ಷೇತ್ರದಲ್ಲಿ ಜಾಗತಿಕ ಮಟ್ಟದಲ್ಲಿ ಗುರುತಿಸಿಕೊಂಡಿರುವ ಮಹಾನ್ ವಿದ್ವಾಂಸ ಶತಾವಧಾನಿ ಡಾ. ಆರ್. ಗಣೇಶ್ ಅವರು ಭಾರತೀಯ ಸಾಂಸ್ಕೃತಿಕ ಪರಂಪರೆಗೆ ಅಪಾರ ಕೊಡುಗೆ ನೀಡಿದ್ದಾರೆ. ಸೃಜನಶೀಲತೆ, ಪಾಂಡಿತ್ಯ, ಏಕಕಾಲದಲ್ಲಿ ಹಲವು ಕಾರ್ಯಗಳನ್ನು ನಿರ್ವಹಿಸುವ ತೀಕ್ಷ್ಣತೆ…
ಬೆಂಗಳೂರು: ಜಗತ್ತಿನಲ್ಲಿ ಹೆಣ್ಣಿಗಾಗಿ, ಹೊನ್ನಿಗಾಗಿ ಹಲವು ಕ್ರಾಂತಿ ನಡೆದಿದೆ. ಆದರೆ ಸರ್ವರ ಸಮಾನತೆಗಾಗಿ, ಸಮ ಸಮಾಜದ ನಿರ್ಮಾಣಕ್ಕಾಗಿ ಮೊದಲಿಗೆ ಕ್ರಾಂತಿ ನಡೆದಿರುವುದು ಕರ್ನಾಟಕದಲ್ಲಿ ಮಾತ್ರ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಅಭಿಪ್ರಾಯಪಟ್ಟಿದ್ದಾರೆ. ವೀರಶೈವ ಲಿಂಗಾಯತ ಮಹಾಸಭಾದ ಬೊಮ್ಮನಹಳ್ಳಿ ವಿಧಾನಸಭಾ ಘಟಕದ ವತಿಯಿಂದ ಆಯೋಜಿಸಲಾಗಿದ್ದ ಜಗದ್ಗುರು ರೇಣುಕಾಚಾರ್ಯರ ಯುಗಮಾನೋತ್ಸವ ಮತ್ತು ಬಸವ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಶ್ರೇಣಿರಹಿತ, ಲಿಂಗಭೇದರಹಿತ, ಸಮ ಸಮಾಜದ ನಿರ್ಮಾಣಕ್ಕಾಗಿ ಬಸವಾದಿ ಪ್ರಮಥರು ಕಲ್ಯಾಣ ಕ್ರಾಂತಿಯನ್ನೇ ಮಾಡಿದರು ಎಂದರು. ಶರಣರು ಸಕಲ ಜೀವಾತ್ಮರಿಕೆ ಲೇಸನ್ನೇ ಬಯಸಿದರು. ಜಾತಿಯತೆ, ಮೇಲು ಕೀಳು ಎಂಬ ಭಾವನೆ, ಅಸ್ಪೃಶ್ಯತೆ, ಕಂದಾಚಾರ, ಮೌಢ್ಯ ತುಂಬಿದ್ದ ಸಮಾಜದಲ್ಲಿ ವೈಚಾರಿಕ ಮನೋಭಾವ ಮೂಡಿಸಲು, ಸೋದರತ್ವ, ಸಹಬಾಳ್ವೆಯ ಭವ್ಯ, ದಿವ್ಯ ಸಮಾಜ ಕಟ್ಟಲು ಯತ್ನಿಸಿದರು ಎಂದರು. ಮಾನವಧರ್ಮಕ್ಕೆ ಜಯವಾಗಲಿ ಧರ್ಮದಿಂದಲೇ ವಿಶ್ವಕ್ಕೆ ಶಾಂತಿ ಎಂದು ರೇಣುಕಾದಿ ಆಚಾರ್ಯರು ಪ್ರತಿಪಾದಿಸಿದರೆ, ದಯವೇ ಧರ್ಮದ ಮೂಲವಯ್ಯ ಎಂದು ಬಸವಣ್ಣನವರು ಹೇಳಿದ್ದಾರೆ. ನಮ್ಮೆಲ್ಲರಲ್ಲೂ ನಾವೆಲ್ಲಾ ಒಂದೇ…
ಸ್ಯಾನ್ ಫ್ರಾನ್ಸಿಸ್ಕೋ: ಕೃತಕ ಬುದ್ಧಿಮತ್ತೆ (AI) ತಂತ್ರಜ್ಞಾನ ಲೋಕದಲ್ಲಿ ದಿನಕ್ಕೊಂದು ಹೊಸ ಆವಿಷ್ಕಾರಗಳು ನಡೆಯುತ್ತಿವೆ. ಆದರೆ, ಮನುಷ್ಯನೇ ಸೃಷ್ಟಿಸಿದ ಈ ತಂತ್ರಜ್ಞಾನ, ಭವಿಷ್ಯದಲ್ಲಿ ಮನುಷ್ಯನಿಗಿಂತಲೂ ಹೆಚ್ಚು ಬುದ್ಧಿವಂತವಾಗಿ ಅವನ ನಿಯಂತ್ರಣವನ್ನೇ ಮೀರಿ ಹೋದರೆ ಏನಾಗಬಹುದು? ಇಂತಹದ್ದೊಂದು ಗಂಭೀರ ಮತ್ತು ಅಪಾಯಕಾರಿ ಪ್ರಶ್ನೆಗೆ ಉತ್ತರ ಹುಡುಕಲು ಹಾಗೂ ಎಐ ವ್ಯವಸ್ಥೆಯನ್ನು ಹತೋಟಿಯಲ್ಲಿಡಲು ವಿಶ್ವಪ್ರಸಿದ್ಧ ‘ಓಪನ್ಎಐ’ (OpenAI) ಸಂಸ್ಥೆಯು ಭರ್ಜರಿ ಸಂಬಳದ ಉದ್ಯೋಗಾವಕಾಶವೊಂದನ್ನು ಪ್ರಕಟಿಸಿದೆ. ಚಾಟ್ಜಿಪಿಟಿ (ChatGPT) ಸೃಷ್ಟಿಸಿ ಜಗತ್ತಿನಾದ್ಯಂತ ಸಂಚಲನ ಮೂಡಿಸಿರುವ ಓಪನ್ಎಐ ಸಂಸ್ಥೆಯು, ಈ ವಿಶೇಷ ಸಂಶೋಧನಾ ಹುದ್ದೆಗೆ ವಾರ್ಷಿಕವಾಗಿ ಗರಿಷ್ಠ $445,000 (ಅಂದರೆ ಭಾರತೀಯ ರೂಪಾಯಿ ಮೌಲ್ಯದಲ್ಲಿ ಸುಮಾರು ₹3.7 ಕೋಟಿ) ಸಂಬಳ ನೀಡುವುದಾಗಿ ಘೋಷಿಸಿದೆ. ಏನಿದು ಉದ್ಯೋಗದ ಸ್ವರೂಪ? ‘ಬಿಸಿನೆಸ್ ಇನ್ಸೈಡರ್’ ವರದಿಯ ಪ್ರಕಾರ, ಈ ಹುದ್ದೆಯು ಓಪನ್ಎಐ ಸಂಸ್ಥೆಯ ‘ಪ್ರಿಪೇರ್ಡ್ನೆಸ್ ಸೇಫ್ಟಿ ಟೀಮ್’ (Preparedness Safety Team) ಅಡಿಯಲ್ಲಿ ಬರಲಿದ್ದು, ಇದು ಅತ್ಯಂತ ಶಕ್ತಿಶಾಲಿ ಎಐ ವ್ಯವಸ್ಥೆಗಳಿಂದ ಭವಿಷ್ಯದಲ್ಲಿ ಎದುರಾಗಬಹುದಾದ ದೀರ್ಘಕಾಲೀನ ಅಪಾಯಗಳ ಬಗ್ಗೆ ಅಧ್ಯಯನ ನಡೆಸುತ್ತದೆ.…
ನವದೆಹಲಿ: ಕಳೆದ ವರ್ಷದ ನವೆಂಬರ್ನಲ್ಲಿ ನವದೆಹಲಿಯ ಕೆಂಪುಕೋಟೆ (Red Fort) ಬಳಿ ಸಂಭವಿಸಿದ ಬಾಂಬ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ತನಿಖಾ ಸಂಸ್ಥೆ (NIA) ಭೀಕರ ಸತ್ಯವನ್ನೊಂದನ್ನು ಬಯಲಿಗೆಳೆದಿದೆ. ಈ ಕೃತ್ಯದ ಹಿಂದಿದ್ದ ಉಗ್ರರು “ಭಯೋತ್ಪಾದನಾ ಎಂಜಿನಿಯರಿಂಗ್” (Terror Engineering) ಗಾಗಿ ಕೃತಕ ಬುದ್ಧಿಮತ್ತೆ (AI) ತಂತ್ರಜ್ಞಾನ ಹಾಗೂ ಚಾಟ್ಜಿಪಿಟಿ (ChatGPT) ಅನ್ನು ದುರ್ಬಳಕೆ ಮಾಡಿಕೊಂಡಿದ್ದರು ಎಂದು ಎನ್ಐಎ ಸಲ್ಲಿಸಿರುವ ದೋಷಾರೋಪ ಪಟ್ಟಿಯಲ್ಲಿ ಉಲ್ಲೇಖಿಸಲಾಗಿದೆ. ಸುದ್ದಿ ಸಂಸ್ಥೆ ಪಿಟಿಐ (PTI) ಪರಿಶೀಲಿಸಿರುವ 7,500 ಪುಟಗಳ ಈ ಬೃಹತ್ ಚಾರ್ಜ್ಶೀಟ್ನಲ್ಲಿ, ಉಗ್ರರು ರಾಕೆಟ್ ಆಧಾರಿತ ಐಇಡಿ (Rocket IED) ತಯಾರಿಸಿ, ಅದನ್ನು ಜಮ್ಮು ಮತ್ತು ಕಾಶ್ಮೀರದ ಅನಂತನಾಗ್ ಜಿಲ್ಲೆಯ ಖಾಜಿಗುಂಡ್ ಅರಣ್ಯದಲ್ಲಿ ಪರೀಕ್ಷಿಸಿದ್ದರು ಎಂಬ ಆಘಾತಕಾರಿ ವಿಷಯ ಬೆಳಕಿಗೆ ಬಂದಿದೆ. ಬಾಂಬ್ ತಯಾರಿಕೆಯಲ್ಲಿ ಉಗ್ರರು “ಲ್ಯಾಬೊರೇಟರಿ ದರ್ಜೆಯ” ಅತ್ಯಾಧುನಿಕ ವಿಧಾನವನ್ನು ಬಳಸಿದ್ದರು ಎನ್ನಲಾಗಿದೆ. ಹರಿಯಾಣ ವಿವಿಯಲ್ಲಿದ್ದ ತಾಂತ್ರಿಕ ನೆರವುಗಾರ! ಪ್ರಕರಣದ ಪ್ರಮುಖ ಆರೋಪಿಗಳಲ್ಲೊಬ್ಬನಾದ ಜಾಸಿರ್ ಬಿಲಾಲ್ ವಾನಿ ಎಂಬಾತ, ಈ ಪಿತೂರಿಗೆ ತಾಂತ್ರಿಕ…
ಧಾರವಾಡ: ಬಿಸಿಲಿನ ಬೇಗೆಯಿಂದ ಕಂಗಾಲಾಗಿದ್ದ ರಾಜ್ಯದ ಜನತೆಗೆ ಹವಾಮಾನ ಇಲಾಖೆ ಹಾಗೂ ಧಾರವಾಡ ಕೃಷಿ ವಿಶ್ವವಿದ್ಯಾಲಯ ಸಿಹಿ ಸುದ್ದಿ ನೀಡಿದೆ. ಮುಂದಿನ ಮೂರು ದಿನಗಳಲ್ಲಿ ಮುಂಗಾರು ಮಳೆ ಕೇರಳಕ್ಕೆ ತಲುಪುವ ಸಾಧ್ಯತೆಯಿದ್ದು, ಜೂನ್ 1 ರ ವೇಳೆಗೆ ಕರ್ನಾಟಕ ರಾಜ್ಯಕ್ಕೆ ಮುಂಗಾರು ಮಾರುತಗಳು ಅಧಿಕೃತವಾಗಿ ಎಂಟ್ರಿ ಕೊಡಲಿವೆ ಎಂದು ವರದಿ ಮುನ್ಸೂಚನೆ ನೀಡಿದೆ. ಉತ್ತರ ಕರ್ನಾಟಕದಲ್ಲಿ ವರುಣನ ಅಬ್ಬರ: ಕಳೆದ ರಾತ್ರಿಯಿಂದಲೇ ಉತ್ತರ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರಿ ಮಳೆ ಆರಂಭವಾಗಿದ್ದು, ಇಂದಿನಿಂದ (ಮೇ 24) ಮುಂದಿನ ಮೂರು ದಿನಗಳ ಕಾಲ ರಾಜ್ಯದ ಉತ್ತರ ಭಾಗದಲ್ಲಿ ಗುಡುಗು, ಮಿಂಚು ಹಾಗೂ ಗಾಳಿ ಸಹಿತ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಬಂಗಾಳ ಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತದ ಹಿನ್ನೆಲೆಯಲ್ಲಿ ಬಾಗಲಕೋಟೆ, ಗದಗ ಮತ್ತು ಧಾರವಾಡ ಜಿಲ್ಲೆಗಳಲ್ಲಿ ಆಲಿಕಲ್ಲು ಮಳೆಯಾಗುವ ಮುನ್ಸೂಚನೆ ನೀಡಲಾಗಿದ್ದು, ಹಳದಿ ಅಲರ್ಟ್ ಘೋಷಿಸಲಾಗಿದೆ. ರೈತರಿಗೆ ಹವಾಮಾನ ಇಲಾಖೆ ಎಚ್ಚರಿಕೆ: ಮುಂಗಾರು ಪೂರ್ವ ಮಳೆ ಚುರುಕಾಗಿರುವುದರಿಂದ ಕೃಷಿ ಚಟುವಟಿಕೆಗಳಲ್ಲಿ ತೊಡಗಿರುವ…
ಬೆಂಗಳೂರು: ದೇಶದ ಅತ್ಯುನ್ನತ ನ್ಯಾಯಾಲಯವಾದ ಸುಪ್ರೀಂ ಕೋರ್ಟ್ ಹೆಸರಲ್ಲೇ ನಕಲಿ ಆದೇಶ ಪತ್ರ ಸೃಷ್ಟಿಸಿ, ಜೈಲಧಿಕಾರಿಗಳ ಕಣ್ಣಿಗೆ ಮಣ್ಣೆರಚಿ ಜೈಲಿನಿಂದ ರಾಜಾರೋಷವಾಗಿ ಬಿಡುಗಡೆಯಾಗಿದ್ದ ಖತರ್ನಾಕ್ ಕೈದಿಯೊಬ್ಬನ ಮಹಾ ವಂಚನೆ ಬರೋಬ್ಬರಿ ಎಂಟು ವರ್ಷಗಳ ಬಳಿಕ ಬೆಳಕಿಗೆ ಬಂದಿದೆ. ಈ ಸಿನಿಮಾ ಶೈಲಿಯ ವಂಚನೆಗೆ ಸಂಬಂಧಿಸಿದಂತೆ ಬೆಂಗಳೂರಿನ ಪರಪ್ಪನ ಅಗ್ರಹಾರ ಪೊಲೀಸ್ ಠಾಣೆಯಲ್ಲಿ ದಾಖಲೆ ಫೋರ್ಜರಿ (ನಕಲು) ಮತ್ತು ವಂಚನೆ ಕಾಯ್ದೆಯಡಿ ಎಫ್ಐಆರ್ ದಾಖಲಾಗಿದೆ. ಪ್ರಕರಣದ ಹಿನ್ನೆಲೆ: 2001ರಲ್ಲಿ ತಮಿಳುನಾಡು ಮೂಲದ ಶಂಕರ್ ಆರ್ಮುಗಮ್ ಮತ್ತು ಆತನ ಗ್ಯಾಂಗ್, ಹಣಕ್ಕಾಗಿ ವ್ಯಕ್ತಿಯೊಬ್ಬನನ್ನು ಕಿಡ್ನಾಪ್ ಮಾಡಿತ್ತು. ಈ ಪ್ರಕರಣದ ಸುದೀರ್ಘ ವಿಚಾರಣೆ ನಡೆಸಿದ ಬೆಂಗಳೂರಿನ ಫಾಸ್ಟ್ ಟ್ರ್ಯಾಕ್ ಕೋರ್ಟ್, ಶಂಕರ್ನನ್ನು ಅಪರಾಧಿ ಎಂದು ಘೋಷಿಸಿತ್ತು. ಹಣಕ್ಕಾಗಿ ಅಪಹರಣ (ಸೆಕ್ಷನ್ 364A) ಮತ್ತು ಅಪರಾಧಿಕ ಸಂಚು (ಸೆಕ್ಷನ್ 120B) ಅಡಿಯಲ್ಲಿ ನ್ಯಾಯಾಲಯವು ಈತನಿಗೆ ಜೀವಾವಧಿ ಶಿಕ್ಷೆ ವಿಧಿಸಿ ತೀರ್ಪು ನೀಡಿತ್ತು. ಕೋರ್ಟ್ ಆದೇಶದಂತೆ ಆರೋಪಿ ಶಂಕರ್ನನ್ನು ಬೆಂಗಳೂರಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹಕ್ಕೆ ಕಳುಹಿಸಲಾಗಿತ್ತು. ಸಿನಿಮಾ…
ಬೆಂಗಳೂರು: ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ಸಮೀಪದ ತಟ್ಟೆಹಕ್ಕಲು ಕಡಲ ತೀರದಲ್ಲಿ ಸಂಭವಿಸಿದ ಭೀಕರ ಜಲದುರಂತಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತೀವ್ರ ಕಳಕಳಿ ಮತ್ತು ಸಂತಾಪ ವ್ಯಕ್ತಪಡಿಸಿದ್ದಾರೆ. ಘಟನೆಯಲ್ಲಿ ಮೃತಪಟ್ಟವರ ಕುಟುಂಬಕ್ಕೆ ರಾಜ್ಯ ಸರ್ಕಾರದಿಂದ ಮಾನವೀಯ ನೆಲೆಯಲ್ಲಿ ತಲಾ 5 ಲಕ್ಷ ರೂಪಾಯಿ ಪರಿಹಾರ ನೀಡುವುದಾಗಿ ಅವರು ಘೋಷಿಸಿದ್ದಾರೆ. ಈ ಕುರಿತು ತಮ್ಮ ಸಾಮಾಜಿಕ ಮಾಧ್ಯಮ ಖಾತೆ ‘ಎಕ್ಸ್’ನಲ್ಲಿ ಪೋಸ್ಟ್ ಮಾಡಿರುವ ಮುಖ್ಯಮಂತ್ರಿಗಳು, ಕಡಲ ತೀರದಲ್ಲಿ ಕಪ್ಪೆಚಿಪ್ಪು ತರಲು ಹೋಗಿದ್ದ ಒಂದೇ ಕುಟುಂಬದ ಎಂಟು ಮಂದಿ ನೀರಿನಲ್ಲಿ ಮುಳುಗಿ ಸಾವಿಗೀಡಾದ ಸುದ್ದಿ ತಿಳಿದು ತಮಗೆ ತೀವ್ರ ಸಂಕಟವಾಗಿದೆ ಎಂದು ಹೇಳಿದ್ದಾರೆ. ಇದೊಂದು ಅತ್ಯಂತ ದುರದೃಷ್ಟಕರ ಮತ್ತು ನೋವಿನ ಘಟನೆ ಎಂದು ಬೇಸರ ವ್ಯಕ್ತಪಡಿಸಿರುವ ಅವರು, ಮೃತರ ಆತ್ಮಕ್ಕೆ ಚಿರಶಾಂತಿ ಸಿಗಲಿ ಎಂದು ಪ್ರಾರ್ಥಿಸಿದ್ದಾರೆ. ಕಾಣೆಯಾದವರಿಗಾಗಿ ಮುಂದುವರಿದ ಹುಡುಕಾಟ ದುರಂತದ ಭೀಕರತೆಯನ್ನು ಉಲ್ಲೇಖಿಸಿರುವ ಮುಖ್ಯಮಂತ್ರಿಗಳು, “ಇನ್ನೂ ಕೆಲವರು ಈ ದುರ್ಘಟನೆಯಲ್ಲಿ ಕಾಣೆಯಾಗಿರುವ ಮಾಹಿತಿಯಿದ್ದು, ಅವರಿಗಾಗಿ ತೀವ್ರ ಹುಡುಕಾಟ ನಡೆಸಲಾಗುತ್ತಿದೆ. ಕಾಣೆಯಾದವರು ಬದುಕಿಬಂದು ತಮ್ಮವರನ್ನು…














