Subscribe to Updates
Get the latest creative news from FooBar about art, design and business.
Author: kannadanewsnow09
ಬಾಂಗ್ಲಾ: ಬಾಂಗ್ಲಾದೇಶದ ನರಸಿಂಗ್ಡಿ ಜಿಲ್ಲೆಯಲ್ಲಿ 23 ವರ್ಷದ ಹಿಂದೂ ವ್ಯಕ್ತಿಯೊಬ್ಬ ಗ್ಯಾರೇಜ್ ಒಳಗೆ ಸುಟ್ಟು ಕರಕಲಾಗಿದ್ದು, ಇದು ಪೂರ್ವನಿಯೋಜಿತ ಹತ್ಯೆಯ ಆರೋಪಗಳನ್ನು ಮತ್ತು ದೇಶದಲ್ಲಿ ಅಲ್ಪಸಂಖ್ಯಾತರ ಸುರಕ್ಷತೆಯ ಬಗ್ಗೆ ಹೊಸ ಕಳವಳಗಳನ್ನು ಹುಟ್ಟುಹಾಕಿದೆ. ಚಂಚಲ್ ಚಂದ್ರ ಭೌಮಿಕ್ ಎಂದು ಗುರುತಿಸಲ್ಪಟ್ಟ ಬಲಿಪಶು ಹಲವಾರು ವರ್ಷಗಳಿಂದ ಗ್ಯಾರೇಜ್ನಲ್ಲಿ ಕೆಲಸ ಮಾಡುತ್ತಿದ್ದರು. ಅವರು ಮೂಲತಃ ಕುಮಿಲ್ಲಾ ಜಿಲ್ಲೆಯ ಲಕ್ಷ್ಮಿಪುರ ಗ್ರಾಮದವರಾಗಿದ್ದು, ಕೆಲಸಕ್ಕಾಗಿ ನರಸಿಂಗ್ಡಿಯಲ್ಲಿ ವಾಸಿಸುತ್ತಿದ್ದರು. ಚಂಚಲ್ ಅವರ ಕುಟುಂಬದ ಮಧ್ಯಮ ಮಗ ಮತ್ತು ಅದರ ಏಕೈಕ ಜೀವನಾಧಾರ. ನರಸಿಂಗ್ಡಿ ಪೊಲೀಸ್ ಲೈನ್ಸ್ ಪಕ್ಕದಲ್ಲಿರುವ ಮಸೀದಿ ಮಾರುಕಟ್ಟೆ ಪ್ರದೇಶದ ಬಳಿ ಈ ಘಟನೆ ನಡೆದಿದೆ. ಪ್ರತ್ಯಕ್ಷದರ್ಶಿಗಳು ಮತ್ತು ಸ್ಥಳೀಯ ಮೂಲಗಳ ಪ್ರಕಾರ, ಶುಕ್ರವಾರ ತಡರಾತ್ರಿ ಚಂಚಲ್ ಗ್ಯಾರೇಜ್ ಒಳಗೆ ಮಲಗಿದ್ದಾಗ ದಾಳಿ ನಡೆದಿದೆ. ದುಷ್ಕರ್ಮಿಗಳು ಅಂಗಡಿಯ ಶಟರ್ ಮೇಲೆ ಹೊರಗಿನಿಂದ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ದಾರೆ, ಇದರಿಂದಾಗಿ ಬೆಂಕಿ ವೇಗವಾಗಿ ಒಳಗೆ ಹರಡಿತು. ಘಟನೆಗೆ ಸಂಬಂಧಿಸಿದ ವೀಡಿಯೊದಲ್ಲಿ ಅಂಗಡಿಯ ಹೊರಗೆ ವ್ಯಕ್ತಿಯೊಬ್ಬರು ಬೆಂಕಿ ಹಚ್ಚುವುದನ್ನು ತೋರಿಸಲಾಗಿದೆ,…
ಬೆಂಗಳೂರು: ಬಿಜೆಪಿ ಮುಖಂಡ ವಿಕಾಸ್ ಪುತ್ತೂರುಗೆ ದ್ವೇಷ ಭಾಷಣ ಮಸೂದೆಯ ಅಡಿಯಲ್ಲಿ ಪೊಲೀಸರು ನೋಟಿಸ್ ನೀಡಿದ್ದು ತಪ್ಪು ಎಂಬುದಾಗಿ ಗೃಹ ಸಚಿವ ಡಾ.ಜಿ ಪರಮೇಶ್ವರ್ ತಿಳಿಸಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ಬಿಜೆಪಿ ಮುಖಂಡ ವಿಕಾಸ್ ಪುತ್ತೂರುಗೆ ದ್ವೇಷ ಭಾಷಣ ಮಸೂದೆಯಡಿ ಪೊಲೀಸರು ನೋಟಿಸ್ ನೀಡಿದ ಬಗ್ಗೆ ಮಾಹಿತಿ ತರಿಸಿಕೊಳ್ಳುತ್ತೇನೆ ಎಂದರು. ರಾಜ್ಯಪಾಲರು ಇನ್ನೂ ಮಸೂದೆಗೆ ಸಹಿಯನ್ನೇ ಹಾಕಿಲ್ಲ. ಭಾರತೀಯ ನ್ಯಾಯ ಸಂಹಿತೆಯ ಅಡಿಯಲ್ಲಿನ ವಿವಿಧ ಸೆಕ್ಷನ್ ಗಳಡಿ ನೋಟಿಸ್ ನೀಡಬಹುದು. ದ್ವೇಷ ಭಾಷಣದ ಮಸೂದೆ ಕಾನೂನು ಆಗದೇ ಇರುವ ಕಾರಣ ಆ ಮಸೂದೆಯ ಅಡಿಯಲ್ಲಿ ಪೊಲೀಸರು ನೋಟಿಸ್ ನೀಡಿದ್ದು ತಪ್ಪು. ಯಾಕೆ ಆ ರೀತಿಯಾಗಿ ಮಾಡಿದ್ದಾರೆ ಎನ್ನುವುದು ನೋಡಬೇಕೆಂದರು. https://kannadanewsnow.com/kannada/investors-are-ready-to-invest-about-rs-11-lakh-crore-in-the-state-dcm-d-k-shivakumar/
ದಾವೂಸ್: ರಾಜ್ಯದಲ್ಲಿ ಸುಮಾರು 11 ಲಕ್ಷ ಕೋಟಿ ರೂ. ಹೂಡಿಕೆಗೆ ಹೂಡಿಕೆದಾರರು ಸಿದ್ಧರಾಗಿದ್ದಾರೆ. ಈ ಎಲ್ಲಾ ಪ್ರಯತ್ನಗಳ ಮೂಲಕ ರಾಜ್ಯಕ್ಕೆ ಹೊಸ ರೂಪ ನೀಡುವುದು ನಮ್ಮ ಉದ್ದೇಶವಾಗಿದೆ ಎಂಬುದಾಗಿ ಡಿಸಿಎಂ ಡಿ.ಕೆ ಶಿವಕುಮಾರ್ ಹೇಳಿದ್ದಾರೆ. ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವಂತ ಅವರು, ದಾವೋಸ್ನ ವಿಶ್ವ ಆರ್ಥಿಕ ಸಮ್ಮೇಳನದಲ್ಲಿ ಚರ್ಚೆಯಾದ ಹೂಡಿಕೆ, ವ್ಯವಹಾರ, ಆಡಳಿತ ನೀತಿ ಸೇರಿದಂತೆ ಹಲವು ವಿಷಯಗಳ ಕುರಿತು, ಬಿಡಿಎ ಅಧ್ಯಕ್ಷರಾದ ಹ್ಯಾರಿಸ್ ಹಾಗೂ ಅಪರ ಮುಖ್ಯ ಕಾರ್ಯದರ್ಶಿ ತುಷಾರ್ ಗಿರಿನಾಥ್ ಅವರೊಂದಿಗೆ ಸುದ್ದಿಗೋಷ್ಠಿ ನಡೆಸಿ ಮಾಧ್ಯಮದವರಿಗೆ ಮಾಹಿತಿ ನೀಡಿದೆ ಎಂದಿದ್ದಾರೆ. ವಿಶ್ವ ಆರ್ಥಿಕ ಸಮ್ಮೇಳನದಲ್ಲಿ ಭಾಗವಹಿಸಿದ್ದು ನನಗೆ ಹೊಸ ಹಾಗೂ ಮಹತ್ವದ ಅನುಭವವಾಗಿತ್ತು. ದೇಶ–ರಾಜ್ಯಗಳನ್ನು ಪ್ರತಿನಿಧಿಸುವ ಈ ವೇದಿಕೆಯಲ್ಲಿ ಕರ್ನಾಟಕಕ್ಕೂ ಸ್ಥಾನ ದೊರೆತಿತ್ತು. ಭಾರತದಿಂದ 10 ರಾಜ್ಯಗಳ ಮುಖ್ಯಮಂತ್ರಿಗಳು ಹಾಗೂ 65ಕ್ಕೂ ಹೆಚ್ಚು ದೇಶಗಳ ಮುಖ್ಯಸ್ಥರು, ಅಮೆರಿಕ ಅಧ್ಯಕ್ಷ ಡೋನಾಲ್ಡ್ ಟ್ರಂಪ್ ಸೇರಿದಂತೆ ಅನೇಕ ಉದ್ಯಮಿಗಳು ಭಾಗವಹಿಸಿದ್ದರು ಎಂದರು. ಸಮ್ಮೇಳನದಲ್ಲಿ 100ಕ್ಕೂ ಹೆಚ್ಚು ಸಭೆಗಳು, ಚರ್ಚೆಗಳು ನಡೆದಿದ್ದು, ರಾಷ್ಟ್ರೀಯ…
ಬೆಂಗಳೂರು: ಕೇವಲ ರಾಜಕಾರಣಕ್ಕಾಗಿ ಮತ್ತು ತಮ್ಮ ವೈಫಲ್ಯವನ್ನು ಮುಚ್ಚಿಕೊಳ್ಳಲು ರಾಜ್ಯ ಸರ್ಕಾರ ಕೇಂದ್ರ ಸರಕಾರದ ವಿರುದ್ದ ಆರೋಪ ಮಾಡುತ್ತಿರುವುದು ರಾಜ್ಯಪಾಲರಿಗೆ ತೋರಿರುವ ಅಗೌರವ. ಅದು ಸಂವಿಧಾನಕ್ಕೆ ಮಾಡಿರುವ ಅಪಚಾರ ಎಂಬುದಾಗಿ ಸಂಸದ ಬಸವರಾಜ ಬೊಮ್ಮಾಯಿ ಕಿಡಿಕಾರಿದ್ದಾರೆ. ಈ ಬಗ್ಗೆ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವಂತ ಅವರು, ಹಿಂದಿನ ರಾಜ್ಯಪಾಲರು ಮೊದಲ ಪುಟ ಕೊನೆ ಪುಟ ಓದದೆ ಇರುವ ಅನೇಕ ಉದಾಹರಣೆಗಳಿವೆ. ರಾಜ್ಯಪಾಲರ ವಿರುದ್ದ ಅವಾಚ್ಯ ಶಬ್ದ ಬಳಕೆ ಮಾಡಿರುವುದು ಸಂವಿಧಾನಕ್ಕೆ ಹಾಗೂ ಸಂವಿಧಾನಿಕ ಹುದ್ದೆಯಲ್ಲಿರುವ ರಾಜ್ಯಪಾಲರಿಗೆ ಮಾಡಿರುವ ಅವಮಾನ. ಅವರ ಮೇಲೆ ಕಾನೂನಾತ್ಮಕ ಕ್ರಮ ತೆಗೆದುಕೊಳ್ಳುತ್ತಿರುವುದು ಅತ್ಯಂತ ಖಂಡನೀಯ ಎಂದಿದ್ದಾರೆ. ಅತ್ಯಂತ ಹಿರಿಯ ಶಾಸಕರಾದ ಬಿ.ಕೆ. ಹರಿಪ್ರಸಾದ ಅವರ ವರ್ತನೆ. ಕಾಂಗ್ರೆಸ್ ಪಕ್ಷದ ಮನಸ್ಥಿತಿಯನ್ನು ತೋರಿಸುತ್ತದೆ. ಅವರ ವಿರುದ್ದ ಕ್ರಮ ಜರುಗಿರಸುವುದು ಅತ್ಯಂತ ಅವಶ್ಯಕತೆ ಇದೆ. ಈ ಹಿಂದೆ ಹಂಸರಾಜ ಭಾರದ್ವಾಜ್ ಅವರು ರಾಜ್ಯಪಾಲರಾಗಿದ್ದಾಗ ಹಲವಾರು ವಿಚಾರಗಳಲ್ಲಿ ತಮ್ಮ ಮಿತಿ ಮೀರಿ, ಕಾನೂನು ಮೀರಿ ವರ್ತನೆ ಮಾಡಿರುವ ಉದಾಹರಣೆ ಸಾಕಷ್ಟು ಇವೆ.…
ಬೆಂಗಳೂರು: ರಾಜ್ಯದಲ್ಲಿ ನಡೆದಿದ್ದಂತ ಎಂಜಿನಿಯರಿಂಗ್ ಸೀಟ್ ಬ್ಲಾಕಿಂಗ್ ಕೇಸ್, ಪಿಎಸ್ಐ ನೇಮಕಾತಿ ಹಗರಣ ಸಂಬಂಧ ಜಾರಿ ನಿರ್ದೇಶನಾಲಯದಿಂದ ಬರೋಬ್ಬರಿ 21 ಕೋಟಿ ಮೌಲ್ಯದ ಆಸ್ತಿ ಪಾಸ್ತಿಯನ್ನು ಜಪ್ತಿ ಮಾಡಿದ್ದಾರೆ. ಈ ಕುರಿತಂತೆ ಪತ್ರಿಕಾ ಪ್ರಕಟಣೆಯಲ್ಲಿ ಇಡಿ ಅಧಿಕಾರಿಗಳು ನೀಡಿದ್ದು, ಅಮೃತ್ ಪಾಲ್ ಮತ್ತು ಇತರರ (ಪಿಎಸ್ಐ ನೇಮಕಾತಿ ಹಗರಣ) ಪ್ರಕರಣದಲ್ಲಿ 2002 ರ ಹಣ ಅಕ್ರಮ ವರ್ಗಾವಣೆ ತಡೆ ಕಾಯ್ದೆ (ಪಿಎಂಎಲ್ಎ) ನಿಬಂಧನೆಗಳ ಅಡಿಯಲ್ಲಿ, ಬೆಂಗಳೂರು ವಲಯ ಕಚೇರಿಯ ಜಾರಿ ನಿರ್ದೇಶನಾಲಯ (ಇಡಿ) 23.01.2026 ರಂದು ರೂ. 1.53 ಕೋಟಿ ಮೌಲ್ಯದ ಸ್ಥಿರ ಆಸ್ತಿಗಳನ್ನು ತಾತ್ಕಾಲಿಕವಾಗಿ ಮುಟ್ಟುಗೋಲು ಹಾಕಿಕೊಂಡಿದೆ. ಅಮೃತ್ ಪಾಲ್ (ಎಡಿಜಿಪಿ) ಮತ್ತು ಶ್ರೀಧರ್ ಎಚ್ (ಹೆಡ್ ಕಾನ್ಸ್ಟೇಬಲ್) ಅವರಿಗೆ ಸೇರಿದ ವಸತಿ ಆಸ್ತಿಗಳನ್ನು ಮುಟ್ಟುಗೋಲು ಹಾಕಿಕೊಂಡ ಆಸ್ತಿಗಳಲ್ಲಿ ಸೇರಿವೆ ಎಂದಿದೆ. 2021-22 ರಲ್ಲಿ ಕರ್ನಾಟಕದಲ್ಲಿ ಪೊಲೀಸ್ ಸಬ್-ಇನ್ಸ್ಪೆಕ್ಟರ್ಗಳ ನೇಮಕಾತಿಯಲ್ಲಿ ಅಕ್ರಮಗಳಿಗಾಗಿ ವಿವಿಧ ಪೊಲೀಸ್ ಅಧಿಕಾರಿಗಳು ಮತ್ತು ಅಭ್ಯರ್ಥಿಗಳ ವಿರುದ್ಧ ಬೆಂಗಳೂರಿನ ಹೈಗ್ರೌಂಡ್ಸ್ ಪೊಲೀಸ್ ಠಾಣೆ, ಸಿಐಡಿ, ದಾಖಲಿಸಿದ ಎಫ್ಐಆರ್ ಆಧಾರದ…
ರಾಮನಗರ: ಜಿಲ್ಲೆಯಲ್ಲಿ ಈಜುಕೊಳದಲ್ಲೇ ಮಹಿಳೆಯೊಬ್ಬರು ಅನುಮಾನಸ್ಪದ ರೀತಿಯಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. ಮಹಿಳೆಯನ್ನು ಪತಿಯೇ ಕೊಲೆ ಮಾಡಿರುವಂತ ಆರೋಪ ಕೇಳಿ ಬಂದಿದೆ. ರಾಮನಗರ ಜಿಲ್ಲೆಯ ಕನಕಪುರ ತಾಲ್ಲೂಕಿನ ಬಚ್ಚೇಗೌಡಪಾಳ್ಯದಲ್ಲಿ ಸ್ವಿಮ್ಮಿಗ್ ಪೂಲ್ ನಲ್ಲಿ ಅನುಮಾನಾಸ್ಪದ ರೀತಿಯಲ್ಲಿ ಪ್ರತಿಭಾ(29) ಎನ್ನುವಂತ ಮಹಿಳೆಯ ಶವ ಪತ್ತೆಯಾಗಿದೆ. ಪ್ರತಿಮಾ ಹಾಗೂ ಪತಿ ಬಾಬು ಇಬ್ಬರು ಬಚ್ಚೇಗೌಡನಪಾಳ್ಯದ ಹೊರವಲಯದ ತೋಟದಲ್ಲಿ ವಾಸವಾಗಿದ್ದರು. ಮೃತ ಪತ್ನಿ ಪ್ರತಿಮಾ ಬಾಬು ಅವರಿಗೆ ಎರಡನೇ ಪತ್ನಿಯಾಗಿದ್ದರು. ಇಬ್ಬರು ಮಕ್ಕಳಿದ್ದಾರೆ. ಕೌಟುಂಬಿಕ ಕಲಹದಿಂದ ಜಗಳ ಉಂಟಾಗಿ, ಪತಿ ಬಾಬುವೇ ಪತ್ನಿ ಪ್ರತಿಮಾ ಕೊಲೆ ಮಾಡಿ ಈಜುಕೊಳದಲ್ಲಿ ಶವ ಎಸೆದಿರೋದಾಗಿ ಕುಟುಂಬಸ್ಥರು ಆರೋಪಿಸಿದ್ದಾರೆ. ವಿಷಯ ತಿಳಿದು ಸ್ಥಳಕ್ಕೆ ಕೋಡಿಹಳ್ಳಿ ಠಾಣೆಯ ಪೊಲೀಸರು ಆಗಮಿಸಿ, ಪರಿಶೀಲನೆ ನಡೆಸಿ, ಪ್ರತಿಭಾ ಅವರ ಪತಿ ಬಾಬು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಪ್ರತಿಭಾ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದೆ. https://kannadanewsnow.com/kannada/shock-for-motorists-travelling-on-one-way-road-in-bengaluru-11498-cases-registered/
ಬೆಂಗಳೂರು: ನಗರದಲ್ಲಿ ಒನ್ ವೇ ರಸ್ತೆಯಲ್ಲಿ ಸಂಚರಿಸಿದಂತ ವಾಹನ ಸವಾರರಿಗೆ ಸಂಚಾರ ಪೊಲೀಸರು ಶಾಕ್ ನೀಡಿದ್ದಾರೆ. ಬರೋಬ್ಬರಿ 11,498 ಪ್ರಕರಣಗಳನ್ನು ದಾಖಲಿಸಿದ್ದಾರೆ. ಈ ಕುರಿತಂತೆ ಬೆಂಗಳೂರು ಸಂಚಾರ ಪೊಲೀಸರು ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದು, ಬೆಂಗಳೂರು ನಗರ ರಸ್ತೆ ಅಪಘಾತಗಳನ್ನು ತಡೆಗಟ್ಟುವ ಸಲುವಾಗಿ ಏಕಮುಖ ರಸ್ತೆಗಳಲ್ಲಿ ವಿರುದ್ಧವಾಗಿ ವಾಹನಗಳನ್ನು ಚಲಾಯಿಸುವ ಚಾಲಕರು, ಸವಾರರ ವಿರುದ್ಧ ದಿನಾಂಕ 21-01-2026ರಿಂದ ವಿಶೇಷ ಕಾರ್ಯಾಚರಣೆಯನ್ನು ನಗರದಾದ್ಯಂತ ಹಮ್ಮಿಕೊಳ್ಳಲಾಗಿದೆ ಎಂದಿದೆ. ಸಂಚಾರ ಪೊಲೀಸರ ವಿಶೇಷ ಕಾರ್ಯಾಚರಣೆಯಲ್ಲಿ ದಿನಾಂಕ 21-01-2026ರಿಂದ 24-01-2026ರವರೆಗೆ ಒಟ್ಟು 11,498 ಪ್ರಕರಣಗಳನ್ನು ದಾಖಲು ಮಾಡಲಾಗಿದೆ. ಸಾರ್ವಜನಿಕ ಸುರಕ್ಷತಾ ಸಂಚಾರವನ್ನು ಗಮನದಲ್ಲಿಟ್ಟುಕೊಂಡು ಈ ವಿಶೇಷ ಕಾರ್ಯಾಚರಣೆಯನ್ನು ನಿರಂತರವಾಗಿ ಮುಂದುವರೆಸಲಾಗುವುದು ಎಂಬುದಾಗಿ ತಿಳಿಸಿದೆ.
ಬೆಂಗಳೂರು: ರಾಜ್ಯ ಸರ್ಕಾರದಿಂದ ವಿಧಾನ ಪರಿಷತ್ ಸದಸ್ಯರಿಗೆ ಭಂಪರ್ ಗಿಫ್ಟ್ ನೀಡಲಾಗಿದೆ. ಬರೋಬ್ಬರಿ 299 ಕೋಟಿ ಅನುದಾನವನ್ನು ಬಿಡುಗಡೆ ಮಾಡಿ ಸರ್ಕಾರ ಆದೇಶಿಸಿದೆ. ಈ ಕುರಿತಂತೆ ಯೋಜನೆ, ಕಾರ್ಯಕ್ರಮ ಸಂಯೋಜನೆ ಮತ್ತು ಸಾಂಖ್ಯಿಕ ಇಲಾಖೆಯ ಜಂಟಿ ನಿರ್ದೇಶಕರು ಹಾಗೂ ಪದನಿಮಿತ್ತ ಸರ್ಕಾರದ ಉಪ ಕಾರ್ಯದರ್ಶಿಯವು ನಡವಳಿಯನ್ನು ಹೊರಡಿಸಿದ್ದಾರೆ. ಅದರಲ್ಲಿ ಯೋಜನೆ, ಕಾರ್ಯಕ್ರಮ ಸಂಯೋಜನೆ ಮತ್ತು ಸಾಂಖ್ಯಿಕ ಇಲಾಖೆಯ ಅಧೀನದಲ್ಲಿ ಬರುವ ವಿವಿಧ ಇಲಾಖೆ/ಸಂಸ್ಥೆ/ಮಂಡಳಿ/ಪ್ರಾಧಿಕಾರಗಳಿಗೆ ಸಂಬಂಧಿಸಿದಂತೆ ಯೋಜನಾ ಕಾರ್ಯಕ್ರಮಗಳನ್ನು 2025-26ನೇ ಸಾಲಿಗೆ ಮುಂದುವರೆಸಲಾಗಿದೆ ಹಾಗೂ ಪುಸಕ್ತ ಸಾಲಿನ ಆಯವ್ಯಯದಲ್ಲಿ ಕರ್ನಾಟಕ ಶಾಸಕರ ಸ್ಥಳೀಯ ಪುದೇಶಾಭಿವೃದ್ಧಿ ಯೋಜನೆಯಡಿ ಒಟ್ಟು ರೂ.60225.17 ಲಕ್ಷಗಳನ್ನು ಈ ಕೆಳಕಂಡಂತೆ ಒದಗಿಸಲಾಗಿದೆ ಎಂದಿದ್ದಾರೆ. ಕರ್ನಾಟಕ ಶಾಸಕರ ಸ್ಥಳೀಯ ಪುದೇಶಾಭಿವೃದ್ಧಿ ಯೋಜನೆಯ ಮಾರ್ಗಸೂಚಿ ಕಂಡಿಕೆ 4.7 ರನ್ವಯ ಜಿಲ್ಲಾ ಮಟ್ಟದಲ್ಲಿ ಕಾರ್ಯನಿರ್ವಹಿಸುತ್ತಿರುವ ಸಿಬ್ಬಂದಿಗಳಿಗೆ ಲೆಕ್ಕ ಶೀರ್ಷಿಕೆ 2575-60-265-0-02- 034 (ಗುತ್ತಿಗೆ/ಹೊರಗುತ್ತಿಗೆ) ರಡಿ 2025-26ನೇ ಸಾಲಿನಲ್ಲಿ ಒದಗಿಸಿರುವ ಅನುದಾನದ ಪೈಕಿ ರೂ.6.71 ಲಕ್ಷಗಳನ್ನು, 2024-25ನೇ ಸಾಲಿನಲ್ಲಿ ಕಾರ್ಯನಿರತ ಸಿಬ್ಬಂದಿಗಳ ವೇತನಕ್ಕೆ ಕೊರತೆಯಾಗಿದ್ದ ಅನುದಾನವನ್ನು…
ಹುಬ್ಬಳ್ಳಿ : ರಾಜ್ಯದ ಕಾಂಗ್ರೆಸ್ ಸರ್ಕಾರ ಜಾರಿ ಮಾಡಿದ ಪಂಚ ಗ್ಯಾರಂಟಿಗಳು ಇಡೀ ವಿಶ್ವದಲ್ಲೇ ಮಾದರಿಯಾಗಿವೆ. ಈ ಗ್ಯಾರಂಟಿಗಳಿಗೆ ವರ್ಷಕ್ಕೆ ಅರವತ್ತು ಸಾವಿರ ಕೋಟಿ ವ್ಯಯಿಸಲಾಗುತ್ತಿದೆ. ಐದು ವರ್ಷಕ್ಕೆ ಮೂರು ಲಕ್ಷ ಕೋಟಿ ವೆಚ್ಚ ಮಾಡಲಾಗುತ್ತಿದೆ ಎಂದು ಕಾರ್ಮಿಕ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ್ ಎಸ್ ಲಾಡ್ ಅವರು ಹೇಳಿದರು. ವಸತಿ ಇಲಾಖೆ ಹಾಗೂ ಕರ್ನಾಟಕ ರಾಜ್ಯ ಗೃಹಮಂಡಳಿ ವತಿಯಿಂದ ಹುಬ್ಬಳ್ಳಿಯಲ್ಲಿ ಆಯೋಜಿಸಿದ್ದ ಸಮಾರಂಭದಲ್ಲಿ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಗೃಹ ಮಂಡಳಿ ನಿರ್ಮಿಸಿರುವ 42,345 ಮನೆಗಳು ಹಾಗೂ ಕೊಳಗೇರಿ ಅಭಿವೃದ್ಧಿ ಮಂಡಳಿಯ 46,000 ಮನೆಗಳ ವಿತರಣೆ ಸಮಾರಂಭದಲ್ಲಿ ಅವರು ಮಾತನಾಡಿದರು. ದೇಶದ ಸಾಕಷ್ಟು ರಾಜ್ಯದಲ್ಲಿ ಬಿಜೆಪಿ ಅಧಿಕಾರದಲ್ಲಿ ಇದೆ. ಆದರೆ ಅವರು ಯಾರೂ ನಮ್ಮ ಸರ್ಕಾರ ನೀಡಿರುವ ಗ್ಯಾರಂಟಿಗಳನ್ನು ಜಾರಿ ಮಾಡಿಲ್ಲ. ರಾಜ್ಯದಲ್ಲಿ ಸಿದ್ದರಾಮಯ್ಯ ಅವರ ನೇತೃತ್ವದ ಕಾಂಗ್ರೆಸ್ ಸರ್ಕಾರ ಇಂತಹ ಮಹತ್ವದ ಅಭೂತಪೂರ್ವ ಗ್ಯಾರಂಟಿಗಳನ್ನು ಜಾರಿ ಮಾಡಿ ಮಾದರಿಯಾಗಿದೆ ಎಂದು ಬಣ್ಣಿಸಿದರು. ಶಕ್ತಿ ಯೋಜನೆಯಲ್ಲಿ 500 ಕೋಟಿ ಮಹಿಳೆಯರು…
ಬೆಂಗಳೂರು: ರಾಜ್ಯದ ಜೈಲಿನಲ್ಲಿರುವಂತ ವಿಚಾರಣಾಧೀನ ಆರೋಪಿಗಳಿಗೆ ಒದಗಿಸುವಂತ ಸೌಕರ್ಯಗಳ ಕುರಿತಂತೆ ಮಹತ್ವದ ಆದೇಶವನ್ನು ಕಾರಾಗೃಹ ಸುಧಾರಣಾ ಸೇವೆಯ ಡಿಜಿಪಿ ಅಲೋಕ್ ಕುಮಾರ್ ಹೊರಡಿಸಿದ್ದಾರೆ. ಅದರಲ್ಲಿ ನಟ ದರ್ಶನ್ ಅವರಿಗೆ ಹೆಚ್ಚುವರಿ ಬ್ಲಾಂಕೆಟ್ ಸೌಲಭ್ಯಕ್ಕೆ ಬ್ರೇಕ್ ಹಾಕಲಾಗಿದೆ. ರಾಜ್ಯ ಕಾರಾಗೃಹ ಡಿಜಿಪಿ ಅಲೋಕ್ ಕುಮಾರ್ ಹೊರಡಿಸಿರುಂತ ಆದೇಶದಲ್ಲಿ ಬೆಂಗಳೂರು: ರಾಜ್ಯದ ಜೈಲಿನಲ್ಲಿರುವಂತ ವಿಚಾರಣಾಧೀನ ಆರೋಪಿಗಳಿಗೆ ಒದಗಿಸುವಂತ ಸೌಕರ್ಯಗಳ ಕುರಿತಂತೆ ಮಹತ್ವದ ಆದೇಶವನ್ನು ಕಾರಾಗೃಹ ಸುಧಾರಣಾ ಸೇವೆಯ ಡಿಜಿಪಿ ಅಲೋಕ್ ಕುಮಾರ್ ಹೊರಡಿಸಿದ್ದಾರೆ. ಅದರಲ್ಲಿ ನಟ ದರ್ಶನ್ ಅವರಿಗೆ ಹೆಚ್ಚುವರಿ ಬ್ಲಾಂಕೆಟ್ ಸೌಲಭ್ಯಕ್ಕೆ ಬ್ರೇಕ್ ಹಾಕಲಾಗಿದೆ. ರಾಜ್ಯ ಕಾರಾಗೃಹ ಡಿಜಿಪಿ ಅಲೋಕ್ ಕುಮಾರ್ ಹೊರಡಿಸಿರುಂತ ಆದೇಶದಲ್ಲಿ ವಿಚಾರಣಾಧೀನ ಆರೋಪಿಗೆ ಜೈಲಿನಲ್ಲಿ ಕೊಡುವೆ ಬ್ಲಾಂಕೆಟ್ ಬಳಸಬೇಕು. ಹೆಚ್ಚುವರಿಯಾಗಿ ಒಂದು ಬ್ಲಾಂಕೆಟ್ ನೀಡಲಾಗುತ್ತದೆ. ಅದರ ಹೊರತಾಗಿ ಯಾವುದೇ ಹಾಸಿಗೆ ಸೌಲಭ್ಯ ಇರೋದಿಲ್ಲ ಎಂಬುದಾಗಿ ತಿಳಿಸಿದ್ದಾರೆ. ಇನ್ನೂ ಕೈದಿಗಳಿಗೆ ಆಹಾರ, ಬಟ್ಟೆ, ಹಾಸಿಗೆ ಸರಬರಾಜು ನಿಯಂತ್ರಣಕ್ಕೆ ಸೂಚಿಸಲಾಗಿದೆ. ಜೈಲಿನ ನಿಯಮಾವಳಿ ಪ್ರಕಾರ ಆಹಾರ, ಬಟ್ಟೆ, ಹಾಸಿಗೆ ನೀಡಲಾಗುತ್ತದೆ. ಸಂದರ್ಶನ ವೇಳೆ…














