Author: kannadanewsnow09

ನವದೆಹಲಿ: ಅತ್ಯಾಚಾರ ಪ್ರಕರಣದಲ್ಲಿ ಜೈಲು ಪಾಲಾಗಿರುವಂತ ಮಾಜಿ ಸಂಸದ ಪ್ರಜ್ವಲ್ ರೇವಣ್ಣಗೆ ಮತ್ತೊಂದು ಶಾಕ್ ನೀಡಲಾಗಿದೆ. ಅತ್ಯಾಚಾರ ಕೇಸ್ ಬೇರೊಂದು ನ್ಯಾಯಾಲಯಕ್ಕೆ ವರ್ಗಾಯಿಸುವಂತೆ ಕೋರಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ತಿರಸ್ಕರಿಸಿದೆ. ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರು ಎರಡು ಅತ್ಯಾಚಾರ ಪ್ರಕರಣಗಳ ವಿಚಾರಣೆಯನ್ನು ಬೇರೊಂದು ನ್ಯಾಯಾಲಯಕ್ಕೆ ವರ್ಗಾಯಿಸುವಂತೆ ಸುಪ್ರೀಂ ಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಯನ್ನು ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್ ನೇತೃತ್ವದ ನ್ಯಾಯಪೀಠವು ವಜಾಗೊಳಿಸಿದೆ. ಈ ಮೂಲಕ ಮಾಜಿ ಸಂಸದ ಪ್ರಜ್ವಲ್ ರೇವಣ್ಣಗೆ ಮತ್ತೊಂದು ಶಾಕ್ ನೀಡಿದೆ.

Read More

ಬೆಂಗಳೂರು: ರಾಜ್ಯದಲ್ಲಿನ ಸರ್ಕಾರಿ ಪ್ರಾಯೋಜಿತ ಕಾರ್ಯಕ್ರಮಗಳಲ್ಲಿ ಸ್ಮರಣಿಕೆ ಮತ್ತು ಟ್ರೋಫಿಗಳನ್ನು ಕಡ್ಡಾಯವಾಗಿ ನಿಷೇಧಿಸಿ ಸರ್ಕಾರ ಮಹತ್ವದ ಆದೇಶ ಮಾಡಿದೆ. ಈ ಕುರಿತಂತೆ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಬಾಣದರಂಗಯ್ಯ ಎನ್.ಆರ್ ಸುತ್ತೋಲೆ ಹೊರಡಿಸಿದ್ದು, ರಾಜ್ಯ ಸರ್ಕಾರ ಮತ್ತು ಸರ್ಕಾರದ ಸ್ವಾಮ್ಯಕ್ಕೊಳಪಡುವ ಸಂಸ್ಥೆಗಳು ನಡೆಸುವ ಸಭೆ ಮತ್ತು ಸಮಾರಂಭಗಳಲ್ಲಿ ಹೂಗುಚ್ಛ, ಹಾರ, ತುರಾಯಿ, ಹಣ್ಣಿನ ಬುಟ್ಟಿ, ಶಾಲು, ನೆನಪಿನ ಕಾಣಿಕೆ ಇತ್ಯಾದಿ ಯಾವುದೇ ರೀತಿಯ ಕಾಣಿಕೆಗಳನ್ನು ನೀಡಬಾರದೆಂದು ಬದಲಾಗಿ ಕನ್ನಡ ಪುಸ್ತಕಗಳನ್ನು ನೀಡಬಹುದೆಂದು ಉಲ್ಲೇಖಿತ ಸುತ್ತೋಲೆಯಲ್ಲಿ ಸೂಚಿಸಲಾಗಿದೆ. ಸದರಿ ಸುತ್ತೋಲೆಗೆ ಹಲವು ಅಂಶಗಳನ್ನು ಸೇರ್ಪಡೆಗೊಳಿಸಬೇಕಿರುವ ಅವಶ್ಯಕತೆಯನ್ನು ಮನಗಂಡು ಈ ಸುತ್ತೋಲೆಯನ್ನು ಕೆಳಂಕಂಡಂತೆ ಸೇರಿಸಲಾಗಿದೆ ಎಂದಿದ್ದಾರೆ. ಸರ್ಕಾರಿ ಪ್ರಾಯೋಜಿತ ಅಧಿಕೃತ ಕಾರ್ಯಕ್ರಮಗಳಲ್ಲಿ ಭಾಗವಹಿಸುವ ಗಣ್ಯರಿಗೆ ಸ್ಮರಣಿಕೆ, ಟ್ರೋಫಿ ಮತ್ತು ಇನ್ನಿತರೇ ಸ್ಮರಣಾರ್ಥ ವಸ್ತುಗಳನ್ನು ನೀಡುವುದು ನಿಯಮಿತ ಅಭ್ಯಾಸವಾಗಿರುತ್ತದೆ. ಈ ಪದ್ಧತಿಯು ಆರಂಭದಲ್ಲಿ ಸದ್ಭಾವನೆ ಮತ್ತು ಮೆಚ್ಚುಗೆಯ ಸಂಕೇತದ ಉದ್ದೇಶವಾಗಿದ್ದರೂ ಸಹ ಗಣ್ಯರನ್ನು ಸನ್ಮಾನಿಸುವ ಇಂತಹ ಅಭ್ಯಾಸವು ಆರ್ಥಿಕ ಮಿತವ್ಯಯ, ಪರಿಸರ…

Read More

ಬೆಂಗಳೂರು: ಕೇಂದ್ರ ಸರ್ಕಾರವು ಸ್ಪ್ಯಾನ್ ಕರೆಗಳಿಗೆ ಬ್ರೇಕ್ ಹಾಕುವಂತ ನಿರ್ಧಾರ ಕೈಗೊಂಡಿತ್ತು. ಇದರ ಭಾಗವಾಗಿ ಟ್ರಾಯ್ಡ್ ಗೆ ಖಡಕ್ ಸೂಚನೆ ಕೂಡ ನೀಡಲಾಗಿತ್ತು. ಅದರಂತೆ ಈಗ ಸ್ಪ್ಯಾಮ್ ಕರೆಗಳಿಗೆ ಬ್ರೇಕ್ ಬಿದ್ದಿದ್ದು, ಈಗ ನಿಮಗೆ ಬರುವಂತ ಕರೆ ಯಾರದ್ದೆಂದು ಹೆಸರೇ ನಿಮ್ಮ ಪೋನಿನಲ್ಲಿ ಡಿಸ್ಪ್ಲೆ ಆಗುವಂತೆ ಆಗಿದೆ. ಹೌದು.. ಇದನ್ನು ಬರುತೇಕರು ಗಮನಿಸೇ ಇರೋದಿಲ್ಲ. ನಿಮ್ಮ ಮೊಬೈಲ್ ಕಾಂಟ್ಯಾಕ್ಟ್ ನಲ್ಲಿ ನಂಬರ್ ಸೇವ್ ಇರದ ಸಂಖ್ಯೆಗಳಿಂದ ಕರೆ ಬಂದರೇ, ಕರೆ ಮಾಡುತ್ತಿರುವಂತ ವ್ಯಕ್ತಿಯ ಹೆಸರು ಏನು ಎಂಬುದಾಗಿ ಪ್ರದರ್ಶಿಸಲ್ಪಡುತ್ತಿದೆ. ಟೆಲಿಕಾಂ ಕಂಪನಿಗಳಿಗೆ ಸಿಮ್ ಖರೀದಿಸುವಂತ ಸಂದರ್ಭದಲ್ಲಿ ಗ್ರಾಹಕರು ನೀಡಿದಂತ ದಾಖಲೆಯ ಆಧಾರದಲ್ಲಿ ಹೆಸರನ್ನು ನೋಂದಾಯಿಸಲಾಗಿರುತ್ತದೆ. ಗ್ರಾಹಕರ ದಾಖಲೆಯಲ್ಲಿ ಇರುವಂತ ಹೆಸರಿನಂತೆಯೇ ಈಗ ಅನಾಮದೇಯ ನಂಬರ್ ಗಳಿಂದ ಕರೆ ಬಂದರೂ, ಕರೆ ಮಾಡುತ್ತಿರುವಂತ ವ್ಯಕ್ತಿಯ ಹೆಸರು ಏನು ಎನ್ನುವುದನ್ನು ಮೊಬೈಲ್ ಡಿಸ್ಪ್ಲೆ ಮೇಲೆ ತೋರಿಸಲಾಗುತ್ತಿದೆ. ನಿಮ್ಮ ಮೊಬೈಲ್ ಗಳಲ್ಲಿ ನಂಬರ್ ಸೇವ್ ಮಾಡಿಕೊಳ್ಳದೇ ಇರುವಂತ ಸಂಖ್ಯೆಯಿಂದ ಕರೆ ಬಂದರೂ, ಅತ್ತಲಿಂದ ಕರೆ ಮಾಡುತ್ತಿರುವಂತ…

Read More

ಬೆಳಗಾವಿ ಸುವರ್ಣಸೌಧ: ಬಸವ ವಸತಿ ಯೋಜನೆಗೆ ಈಗ ನೀಡುತ್ತಿರುವ ಸಹಾಯಧನವು ಸಾಕಾಗುತ್ತಿಲ್ಲ ಎಂಬ ವಿಚಾರ ಸರ್ಕಾರದ ಗಮನಕ್ಕೆ ಬಂದಿದ್ದು, ಆಯ್ಕೆಯಾದ ಫಲಾನುಭವಿಗಳಿಗೆ ಕನಿಷ್ಠ 3 ರಿಂದ 4 ಲಕ್ಷ ರೂ.ವರೆಗಾದರೂ ಸಹಾಯಧನ ಕೊಡುವ ಬಗ್ಗೆ ಸರ್ಕಾರ ಚಿಂತನೆ ನಡೆಸಿದೆ ಎಂಬುದಾಗಿ ವಸತಿ ಸಚಿವ ಜಮೀರ್ ಅಹ್ಮದ್ ಖಾನ್ ತಿಳಿಸಿದ್ದಾರೆ. ಬೆಳಗಾವಿ ಚಳಿಗಾಲದ ಅಧಿವೇಶನದಲ್ಲಿ ವಿಧಾನ ಪರಿಷತ್ ಸದಸ್ಯ ಪ್ರದೀಪ್ ಶೆಟ್ಟರ್ ಅವರ ಚುಕ್ಕೆ ಗುರುತಿನ ಪ್ರಶ್ನೆಗೆ ವಸತಿ ಸಚಿವರಾದ ಜಮೀರ್ ಅಹ್ಮದ್ ಖಾನ್ ಅವರ ಉತ್ತರಿಸಿದರು. ಗ್ರಾಮೀಣ ಪ್ರದೇಶಗಳಲ್ಲಿ ಮನೆ ನಿರ್ಮಾಣ ಮಾಡಲು ಬೇಕಾಗುವ ಕಚ್ಚಾ ವಸ್ತುಗಳ ಬೆಲೆ ದುಬಾರಿಯಾಗಿದ್ದು, ಆದ್ದರಿಂದ ವಿವಿಧ ವಸತಿ ಯೋಜನೆಗಳಡಿ ಫಲಾನುಭವಿಗಳಿಗೆ ಈಗ ನೀಡಲಾಗುತ್ತಿರುವ ಸಹಾಯಧನ ಹೆಚ್ಚಿಸುವ ಪ್ರಸ್ತಾವನೆಯು ಪರಿಶೀಲನೆಯಲ್ಲಿರುತ್ತದೆ ಎಂದರು. ಈ ಸಹಾಯಧನ ಹೆಚ್ಚಳ ಸಂಬಂಧ ಈಗಾಗಲೇ ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಿದ್ದು, ಈ ಬಗ್ಗೆ ಬರುವ ಬಜೆಟ್‍ನಲ್ಲಿ ಪರಿಗಣಿಸುವ ಬಗ್ಗೆ ಪರಿಶೀಲಿಸುವುದಾಗಿ ತಿಳಿಸಿದ್ದಾರೆ. ಪ್ರಸ್ತುತ ಕೇಂದ್ರ ಸರ್ಕಾರದ ವಸತಿ ಯೋಜನೆಗಳನ್ನು ಹೊರತುಪಡಿಸಿ ಉಳಿದ ಯಾವುದೇ ವಸತಿ…

Read More

ಬೆಂಗಳೂರು: ಹೊಸ ಹೆಚ್ ಆರ್ ಪಾಲಿಸಿಯಿಂದಾಗಿ ರಾಜ್ಯದ ಆರೋಗ್ಯ ಇಲಾಖೆಯ ಎನ್ ಹೆಚ್ ಎಂ ನೌಕರರು ಆತಂಕದಲ್ಲಿ ಇದ್ದರು. ಕೆಲಸ ಕಳೆದುಕೊಳ್ಳುವಂತ ಭೀತಿ ಕೂಡ ಎದುರಾಗಿತ್ತು. ಈ ಸಂದರ್ಭದಲ್ಲೇ ಎನ್ ಹೆಚ್ ಎಂ ಸಿಬ್ಬಂದಿಗಳನ್ನು ಕೆಲಸದಿಂದ ಕೈಬಿಡದಂತೆ ಸೂಚಿಸಲಾಗುವುದು ಅಂತ ಮುಖ್ಯಮಂತ್ರಿ ಸಿದ್ಧರಾಮಯ್ಯ ಭರವಸೆ ನೀಡಿದ್ದಾರೆ. ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರನ್ನು ರಾಮದುರ್ಗ ಶಾಸಕ ಅಶೋಕ ಪಟ್ಟಣ ಅವರ ಮೂಲಕ KSHCOEA ಸಂಘವು ಭೇಟಿ ಮಾಡಲಾಗಿತ್ತು. ರಾಜ್ಯದ ಎನ್ ಹೆಚ್ ಎಂ ಸಿಬ್ಬಂದಿಗಳಿಗಾಗಿ ಜಾರಿಗೊಳಿಸಲು ಹೊರಟಿಸುವಂತ ಹೆಚ್ ಆರ್ ಪಾಲಿಸಿ, ಅದರಿಂತ ನೌಕರರಿಗೆ ಆಗುವಂತ ತೊಂದರೆಗಳ ಬಗ್ಗೆ ಸಂಘದಿಂದ ಸಿಎಂ ಸಿದ್ಧರಾಮಯ್ಯ ಅವರ ಗಮನಕ್ಕೆ ತರಲಾಯಿತು. ರಾಷ್ಟೀಯ ಆರೋಗ್ಯ ಅಭಿಯಾನದ 30 ಸಾವಿರ ಸಿಬ್ಬಂದಿಗಳನ್ನು ಕಡ್ಡಾಯ ವರ್ಗಾವಣೆ ಮತ್ತು ಮರು ನೇಮಕಾತಿ ಮಾಡುವ ಬಗ್ಗೆ ಆರೋಗ್ಯ ಇಲಾಖೆಯ ಪ್ರಧಾನ ಕಾರ್ಯದರ್ಶಿಗಳು ದಿನಾಂಕ 28.10.2025 ರಂದು ಪ್ರಸ್ತಾವನೆ ಸಲ್ಲಿಸಲು ಆದೇಶ ಹೊರಡಿಸಿದ್ದನ್ನು KSHCOEA ಸಂಘದ ರಾಜ್ಯಾಧ್ಯಕ್ಷರಾದ ಶ್ರೀಕಾಂತ್ ಸ್ವಾಮಿ ಅವರು ಮುಖ್ಯಮಂತ್ರಿಗಳ ಮುಂದೆ ಕೂಲಂಕುಶವಾಗಿ…

Read More

ಬೆಂಗಳೂರು: ಮೌಖಿಕವಾಗಿ ವಿಚಾರಣೆ ಸೇರಿದಂತೆ ಇನ್ನಿತರೆ ಕಾರಣಗಳಿಗೆ ರೌಡಿಶೀಟರ್ ಗಳನ್ನು ಪೊಲೀಸ್ ಠಾಣೆಗೆ ಕರೆಸುವುದಕ್ಕೆ ಹೈಕೋರ್ಟ್ ಬ್ರೇಕ್ ಹಾಕಿದೆ. ಆದರೇ ರೌಡಿ ಶೀಟರ್ ಗಳನ್ನು ಪೊಲೀಸ್ ಠಾಣೆಗೆ ಎಸ್ ಎಂ ಎಸ್, ವಾಟ್ಸ್ ಆಪ್ ಮೂಲಕ ಮಾಹಿತಿ ನೀಡಿ, ಕರೆಸುವುದನ್ನು ಕಡ್ಡಾಯಗೊಳಿಸಿ ಮಹತ್ವದ ಆದೇಶ ಮಾಡಿದೆ. ಹೈಕೋರ್ಟ್ ನ್ಯಾಯಮೂರ್ತಿ ಆರ್.ನಟರಾಜ್ ಅವರಿದ್ಧ ನ್ಯಾಯಪೀಠವು, ರೌಡಿಶೀಟರ್ ಗಳನ್ನು ಪೊಲೀಸ್ ಠಾಣೆಗೆ ಕರೆಸುವುದಕ್ಕೆ ಹೈಕೋರ್ಟ್ ಪ್ರಕ್ರಿಯೆ ನಿಗದಿ ಪಡಿಸಿ ಮಹತ್ವದ ಆದೇಶ ಮಾಡಿದೆ. ಎಸ್ ಎಂ ಎಸ್, ವಾಟ್ಸ್ ಆಪ್ ಮೂಲಕ ಪೊಲೀಸ್ ಠಾಣೆಗೆ ಕರೆಸಬಹುದು. ಪೊಲೀಸ್ ಠಾಣೆಗಳಿಗೆ ರೌಡಿಶೀಟರ್ ಗಳು ತಮ್ಮ ಮೊಬೈಲ್ ನಂಬರ್ ನೀಡಬೇಕು. ಮೌಖಿಕವಾಗಿ ಕರೆಯುವ ಬದಲು ಎಸ್ ಎಂ ಎಸ್, ವಾಟ್ಸ್ ಆಪ್ ಸಂದೇಶ ನೀಡಬೇಕು ಎಂಬುದಾಗಿ ಹೈಕೋರ್ಟ್ ಸೂಚಿಸಿದೆ. ಒಂದು ವೇಳೆ ಎಸ್ಎಂಎಸ್, ವಾಟ್ಸ್ ಆಪ್ ನಲ್ಲಿ ಸೂಚಿಸಿದರೂ ಪೊಲೀಸ್ ಠಾಣೆಗೆ ರೌಡಿ ಶೀಟರ್ ಗಳು ಬಾರದೇ ಇದ್ದರೇ ಮನೆಗೆ ಪೊಲೀಸರು ತೆರಳಬಹುದು. ಸರ್ಕಾರ ಕಾನೂನು ರೂಪಿಸುವವರೆಗೂ…

Read More

ಬೆಳಗಾವಿ ಸುವರ್ಣಸೌಧ: ಸಾರ್ವಜನಿಕರಿಗೆ ತೊಂದರೆಯಾಗುವಂತೆ ಮಧ್ಯವರ್ತಿಗಳ ಹಾವಳಿಗೆ ಅವಕಾಶ ನೀಡಿದರೆ ಆರ್‌ಟಿಒ ಕಚೇರಿಗಳ ಅಧಿಕಾರಿಗಳನ್ನೇ ಹೊಣೆಯಾಗಿಸಿ, ಶಿಸ್ತುಕ್ರಮಕ್ಕೆ ಗುರಿಪಡಿಸಲಾಗುವುದು ಎಂದು ಎಚ್ಚರಿಕೆ ನೀಡಿ ಕ್ರಮವಹಿಸಲಾಗುತ್ತಿದೆ. ಆರ್ ಟಿ ಓ ಕಚೇರಿಗಳಲ್ಲಿ ಬ್ರೋಕರ್ ಗಳು ಕಾಣಿಸಿಕೊಂಡರೇ ಅಧಿಕಾರಿಗಳನ್ನು ಸಸ್ಪೆಂಡ್ ಮಾಡುವುದಾಗಿ ಸಾರಿಗೆ ಮತ್ತು ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ಎಚ್ಚರಿಸಿದ್ದಾರೆ. ಬೆಳಗಾವಿ ಚಳಿಗಾಲದ ಅಧಿವೇಶನದಲ್ಲಿ ವಿಧಾನ ಪರಿಷತ್ ಸದಸ್ಯರಾದ ಡಾ.ಉಮಾಶ್ರೀ ಅವರ ಚುಕ್ಕೆ ಗುರುತಿನ ಪ್ರಶ್ನೆಗೆ ಸಾರಿಗೆ ಸಚಿವರಾದ ರಾಮಲಿಂಗಾರೆಡ್ಡಿ ಅವರ ಉತ್ತರಿಸಿದರು. ಆರ್‌ಟಿಒ ಕಚೇರಿಗಳಲ್ಲಿ ಶಿಸ್ತು ತರಲು ಅನೇಕ ಕ್ರಮವಹಿಸಲಾಗಿದೆ. ಕಚೇರಿಯಲ್ಲಿ ಸ್ವೀಕೃತವಾಗುವ ಎಲ್ಲಾ ಅರ್ಜಿ/ಸ್ವೀಕೃತಿಗಳನ್ನು ನಿಗದಿಪಡಿಸಿದ ನಮೂನೆಯಲ್ಲಿ ಕಡ್ಡಾಯವಾಗಿ ವಹಿಗಳನ್ನು ವಿಷಯ ನಿರ್ವಾಹಕರು ನಿರ್ವಹಿಸುವುದು. ಅಧೀಕ್ಷಕರುಗಳು ಪ್ರತಿ ವಾರಕ್ಕೊಮ್ಮೆ ವಹಿಗಳನ್ನು ಪರಿಶೀಲಿಸುವುದು ಹಾಗೂ ತಿಂಗಳಿಗೊಮ್ಮೆ ಮೇಜು ತಪಾಸಣೆಯನ್ನು ನಡೆಸಿ ಮೇಲಾಧಿಕಾರಿಗಳಿಗೆ ವರದಿಯನ್ನು ಸಲ್ಲಿಸುವಂತೆ ಸಾರಿಗೆ ಆಯುಕ್ತರು ಸುತ್ತೋಲೆ ಹೊರಡಿಸಿ ಸೂಚನೆ ನೀಡಿದ್ದಾರೆ. ಕಚೇರಿಗಳಲ್ಲಿ ಮಧ್ಯವರ್ತಿಗಳಿಗೆ ಯಾವುದೇ ರೀತಿಯ ಅವಕಾಶ ಕಲ್ಪಿಸದಂತೆ ಕರ್ತವ್ಯ ನಿರ್ವಹಿಸುವಂತೆ ಒಂದು ವೇಳೆ ಯಾವುದೇ ಕಚೇರಿಯಲ್ಲಿ ಮಧ್ಯವರ್ತಿಗಳು ಕಂಡುಬಂದಲ್ಲಿ…

Read More

ದಕ್ಷಿಣ ಕನ್ನಡ: ದೀಪಾವಳಿ ಕಾರ್ಯಕ್ರಮದಲ್ಲಿ ದ್ವೇಷ ಭಾಷಣ ಮಾಡಿದ್ದ ಆರೋಪದಲ್ಲಿ ದಾಖಲಾಗಿದ್ದಂತ ಕೇಸಲ್ಲಿ ಆರ್ ಎಸ್ ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ ಭಟ್ ಗೆ ನಿರೀಕ್ಷಣಾ ಜಾಮೀನು ಮಂಜೂರು ಮಾಡಲಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನ 5ನೇ ಹೆಚ್ಚುವರಿ ಸೆಷನ್ಸ್ ಕೋರ್ಟ್ ಆರ್ ಎಸ್ ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ ಭಟ್ ಸಲ್ಲಿಸಿದ್ದಂತ ಜಾಮೀನು ಅರ್ಜಿಯ ವಿಚಾರಣೆ ನಡೆಸಿತು. ಕೇಸ್ ದಾಖಲಾದ ಸಂದರ್ಭದಲ್ಲಿ ಬಲವಂತದ ಕ್ರಮ ಬೇಡವೆಂದಿತ್ತು. ನಂತರ ಪ್ರಭಾಕರ ಭಟ್ ಗೆ ಮಧ್ಯಂತರ ಜಾಮೀನು ನೀಡಿತ್ತು. ಇಂದು ಆರ್ ಎಸ್ ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ಗೆ ದ್ವೇಷ ಭಾಷಣ ಪ್ರಕರಣದಲ್ಲಿ ಪೂರ್ಣ ಪ್ರಮಾಣದ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ. ಕಲ್ಲಡ್ಕ ಪ್ರಭಾಕರ ಭಟ್ ಗೆ ಷರತ್ತು ಬದ್ಧ ನಿರೀಕ್ಷಣಾ ಜಾಮೀನನ್ನು ಪುತ್ತೂರಿನ 5ನೇ ಹೆಚ್ಚುವರಿ ಸೆಷನ್ಸ್ ಕೋರ್ಟ್ ಮಂಜೂರು ಮಾಡಿದೆ. https://kannadanewsnow.com/kannada/japan-hit-by-another-7-6-magnitude-earthquake-after-a-few-days/ https://kannadanewsnow.com/kannada/here-is-the-list-of-bills-passed-in-the-belgaum-legislative-assembly-today/

Read More

ಜಪಾನ್‌ನಲ್ಲಿ 6.5 ತೀವ್ರತೆಯ ಭೂಕಂಪ ಸಂಭವಿಸಿದ್ದು, ಇದು ಸತತ ಮೂರನೇ ದಿನವೂ ಆಗ್ನೇಯ ಏಷ್ಯಾದ ದೇಶದಲ್ಲಿ ಸಂಭವಿಸಿದ ಭೂಕಂಪವಾಗಿದೆ. ಜಪಾನಿನ ಮಾಪನದ ಪ್ರಕಾರ, ಭೂಕಂಪವು 5.9 ತೀವ್ರತೆಯದ್ದಾಗಿತ್ತು. ಇತ್ತೀಚಿನ ಭೂಕಂಪದ ನಂತರ ಯಾವುದೇ ಸುನಾಮಿ ಬೆದರಿಕೆಯನ್ನು ನೀಡಲಾಗಿಲ್ಲ. ಬುಧವಾರದ ಭೂಕಂಪವು ಮುಖ್ಯವಾಗಿ ಪೂರ್ವ ಅಮೋರಿ ಮತ್ತು ಹೊಕ್ಕೈಡೊ ಪ್ರಾಂತ್ಯಗಳಲ್ಲಿ ಕಂಡುಬಂದಿದೆ. ಭೂಕಂಪದ ಆಳ 30 ಕಿಲೋಮೀಟರ್ ಆಗಿತ್ತು. ಸೋಮವಾರ, ಜಪಾನ್‌ನಲ್ಲಿ 7.6 ತೀವ್ರತೆಯ ಭಾರಿ ಭೂಕಂಪ ಸಂಭವಿಸಿದರೆ, ಮಂಗಳವಾರ, ದೇಶದ ಹೊಂಚೋ ಪಟ್ಟಣದಲ್ಲಿ 6.7 ತೀವ್ರತೆಯ ಕಂಪನಗಳು ಅನುಭವಿಸಿವೆ. https://kannadanewsnow.com/kannada/bmtc-to-purchase-4500-electric-buses-under-central-governments-pm-e-drive-scheme/ https://kannadanewsnow.com/kannada/here-is-the-list-of-bills-passed-in-the-belgaum-legislative-assembly-today/

Read More

ಬೆಳಗಾವಿ ಸುವರ್ಣಸೌಧ: ಬಿಎಂಟಿಸಿಗೆ ಕೇಂದ್ರ ಸರ್ಕಾರದ PM e- DRIVE ಯೋಜನೆಯಡಿ 4,500 ವಿದ್ಯುತ್ ಚಾಲಿತ ಬಸ್‍ಗಳನ್ನು ಜಿಸಿಸಿ ಮಾದರಿಯಲ್ಲಿ ಒದಗಿಸಲು ಮಂಜೂರಾತಿ ನೀಡಲಾಗಿದ್ದು, ಟೆಂಡರ್ ಜಾರಿಯಲ್ಲಿದೆ ಎಂಬುದಾಗಿ ಸಾರಿಗೆ ಮತ್ತು ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ಹೇಳಿದ್ದಾರೆ. ಬೆಳಗಾವಿ ಚಳಿಗಾಲದ ಅಧಿವೇಶನದಲ್ಲಿ ವಿಧಾನ ಪರಿಷತ್ ಸದಸ್ಯ ಹೆಚ್. ಎಸ್. ಗೋಪಿನಾಥ್ ಅವರ ಚುಕ್ಕೆ ಗುರುತಿನ ಪ್ರಶ್ನೆಗೆ ಸಾರಿಗೆ ಸಚಿವರಾದ ರಾಮಲಿಂಗಾರೆಡ್ಡಿ ಅವರ ಉತ್ತರಿಸಿದ್ದಾರೆ. ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯು, ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಿಂದ 25 ಕಿ.ಮೀ.ವರೆಗೆ ಕಾರ್ಯಾಚರಣೆ ವ್ಯಾಪ್ತಿಯನ್ನು ಹೊಂದಿದ್ದು, ಬೆಂಗಳೂರು ನಗರ ಹಾಗೂ ಹೊರ ವಲಯದ ಸಾರ್ವಜನಿಕ ಪ್ರಯಾಣಿಕರಿಗೆ ಉತ್ತಮ, ಸುಲಭ, ಸುರಕ್ಷಿತ ಸಾರಿಗೆ ಸೇವೆಯನ್ನು ಒದಗಿಸಲು ನಿರಂತರವಾಗಿ ಶ್ರಮಿಸುತ್ತಿದೆ ಎಂದಿದ್ದಾರೆ. ಪ್ರತಿದಿನ ಹವಾನಿಯಂತ್ರಿತ ಸಾರಿಗೆಗಳನ್ನು ಒಳಗೊಂಡಂತೆ 1,817 ಮಾರ್ಗಗಳಲ್ಲಿ 6,274 ಅನುಸೂಚಿಗಳನ್ನು 65,934 ಸುತ್ತುವಳಿಗಳೊಂದಿಗೆ 13 ಲಕ್ಷ ಕಿ.ಮೀ.ಗಳಲ್ಲಿ ಬೆಂಗಳೂರು ನಗರ ಹಾಗೂ ಹೊರವಲಯದ ಪ್ರಯಾಣಿಕರ ದಟ್ಟಣೆ / ಅವಶ್ಯಕತೆಗನುಗುಣವಾಗಿ ಕಾರ್ಯಾಚರಣೆ ಮಾಡುತ್ತಿದ್ದು, ಸರಾಸರಿ 44…

Read More