Subscribe to Updates
Get the latest creative news from FooBar about art, design and business.
Author: ವಸಂತ ಬಿ ಈಶ್ವರಗೆರೆ
ವಸಂತ ಬಿ ಈಶ್ವರಗೆರೆ (Vasantha B Eshwaragere) ಅವರು ಕರ್ನಾಟಕದ ಪತ್ರಕರ್ತರು ಮತ್ತು ಕವಿ. ಉದಯ ನ್ಯೂಸ್, ಟಿವಿ5 ಕನ್ನಡ ಸೇರಿದಂತೆ ವಿವಿಧ ಸುದ್ದಿ ಮಾಧ್ಯಮಗಳಲ್ಲಿ ಸುಮಾರು 15 ವರ್ಷಗಳ ಅನುಭವವನ್ನು ಹೊಂದಿದ್ದಾರೆ. ಪ್ರಸ್ತುತ ಅವರು Kannada News Now ಡಿಜಿಡಿಲ್ ಮಾಧ್ಯಮದಲ್ಲಿ ಸಂಪಾದಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಇವರು ತಾಜಾ ಸುದ್ದಿ, ಸಾಹಿತ್ಯ, ಸಾಮಾಜಿಕ ವರದಿಗಾರಿಕೆ, ನ್ಯಾಯಾಂಗ ಸಂಬಂಧಿತ ವರದಿ ಮತ್ತು ಶಿಕ್ಷಣ ಕ್ಷೇತ್ರಕ್ಕೆ ಸಂಬಂಧಿಸಿದ ಸುದ್ದಿಗಳ ವರದಿಯಲ್ಲಿ ಸಕ್ರಿಯರಾಗಿದ್ದಾರೆ. ಗುಡವಿ ಪಕ್ಷಿಧಾಮದಂತಹ ಪ್ರವಾಸಿ ತಾಣಗಳ ಕುರಿತು ಲೇಖನಗಳನ್ನು ಬರೆದಿದ್ದಾರೆ.
ಕಿಡ್ನಿ (ಮೂತ್ರಪಿಂಡ) ಸಮಸ್ಯೆಯು ಆರಂಭಿಕ ಹಂತದಲ್ಲಿ ಯಾವುದೇ ಪ್ರಮುಖ ರೋಗಲಕ್ಷಣಗಳನ್ನು ತೋರಿಸದೆ ನಿಶ್ಯಬ್ದವಾಗಿ ಆವರಿಸಿಕೊಳ್ಳುವ ಕಾಯಿಲೆಯಾಗಿದೆ. ಈ ಹಿನ್ನೆಲೆಯಲ್ಲಿ ವೈದ್ಯರು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲು ಕರೆ ನೀಡಿದ್ದು, ಕಿಡ್ನಿ ಆರೋಗ್ಯದ ಕುರಿತು ಸಿದ್ಧಪಡಿಸಲಾದ ವಿಶೇಷ ಲೇಖನ ಇಲ್ಲಿದೆ: ಮಾನವನ ದೇಹದಲ್ಲಿ ಕಸ ಗುಡಿಸುವ ಅತ್ಯಂತ ಪ್ರಮುಖ ಕೆಲಸವನ್ನು ಮೂತ್ರಪಿಂಡಗಳು (ಕಿಡ್ನಿಗಳು) ಮಾಡುತ್ತವೆ. ರಕ್ತವನ್ನು ಶುದ್ಧೀಕರಿಸಿ, ವಿಷಕಾರಿ ಅಂಶಗಳನ್ನು ಮೂತ್ರದ ಮೂಲಕ ಹೊರಹಾಕುವ ಈ ಅಂಗಗಳು ಸರಿಯಾಗಿ ಕೆಲಸ ಮಾಡದಿದ್ದರೆ ಇಡೀ ದೇಹದ ವ್ಯವಸ್ಥೆಯೇ ಹದಗೆಡುತ್ತದೆ. ಆದರೆ, ಕಿಡ್ನಿ ಕಾಯಿಲೆಯ ಅತ್ಯಂತ ಅಪಾಯಕಾರಿ ವಿಷಯವೆಂದರೆ, ಇದು ಆರಂಭಿಕ ಹಂತದಲ್ಲಿ ಯಾವುದೇ ರೀತಿಯ ಮುನ್ಸೂಚನೆ ಅಥವಾ ಎದ್ದು ಕಾಣುವ ರೋಗಲಕ್ಷಣಗಳನ್ನು ತೋರಿಸುವುದಿಲ್ಲ. ಇದೇ ಕಾರಣಕ್ಕೆ ವೈದ್ಯರು ಇದನ್ನು ‘ಸೈಲೆಂಟ್ ಕಿಲ್ಲರ್’ ಎಂದು ಕರೆಯುತ್ತಾರೆ ಮತ್ತು ಇದರ ಬಗ್ಗೆ ಹೆಚ್ಚಿನ ಜಾಗೃತಿ ಹೊಂದುವಂತೆ ಸಾರ್ವಜನಿಕರಿಗೆ ಕರೆ ನೀಡಿದ್ದಾರೆ. ಆರಂಭಿಕ ಲಕ್ಷಣಗಳು ಏಕೆ ಕಾಣಿಸುವುದಿಲ್ಲ? ನಮ್ಮ ಕಿಡ್ನಿಗಳು ಎಷ್ಟು ದಕ್ಷವಾಗಿವೆ ಎಂದರೆ, ಅವುಗಳ ಕಾರ್ಯಕ್ಷಮತೆ ಶೇಕಡಾ 50…
ಬೆಂಗಳೂರು: ವಿಧಾನಸೌಧದಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನೇತೃತ್ವದಲ್ಲಿ ನಡೆದ ಮಹತ್ವದ ಸಭೆಯ ಮಧ್ಯೆಯೇ ಹಿರಿಯ ಸಚಿವ ರಾಮಲಿಂಗಾರೆಡ್ಡಿ ಅವರು ತೀವ್ರ ಆಕ್ರೋಶ ವ್ಯಕ್ತಪಡಿಸಿ, ಸಭೆಯಿಂದ ಹೊರನಡೆದಿರುವ ಹಠಾತ್ ಬೆಳವಣಿಗೆ ನಡೆದಿದೆ. ಸಭೆಯಲ್ಲಿ ಸಚಿವ ಸಂಪುಟದ ಜವಾಬ್ದಾರಿ ಹಂಚಿಕೆ ಅಥವಾ ಇಲಾಖಾ ವಿಷಯಗಳ ಚರ್ಚೆಯ ಸಂದರ್ಭದಲ್ಲಿ ಮುಖ್ಯಮಂತ್ರಿಗಳ ಪ್ರಸ್ತಾಪಕ್ಕೆ ಸಚಿವ ರಾಮಲಿಂಗಾರೆಡ್ಡಿ ಅವರು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ ಎನ್ನಲಾಗಿದೆ. “ನಾನು ಬೆಂಗಳೂರಿನವನು, ಬೆಂಗಳೂರೇ ಬೇಕು” ಎಂದು ಆಕ್ರೋಶ ಸಭೆಯಲ್ಲಿ ಜಲಸಂಪನ್ಮೂಲ ಇಲಾಖೆಗೆ ಸಂಬಂಧಿಸಿದ ವಿಷಯ ಮುನ್ನೆಲೆಗೆ ಬಂದಾಗ ಸಿಟ್ಟಿಗೆದ್ದ ರಾಮಲಿಂಗಾರೆಡ್ಡಿ ಅವರು, “ಜಲಸಂಪನ್ಮೂಲಕ್ಕೂ ನನಗೂ ಏನು ಸಂಬಂಧ? ನಾನು ಬೆಂಗಳೂರಿನವನು, ನನಗೆ ಬೆಂಗಳೂರೇ ಬೇಕು” ಎಂದು ನೇರವಾಗಿಯೇ ತಮ್ಮ ಅಸಮಾಧಾನ ಹೊರಹಾಕಿದ್ದಾರೆ. ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಸಮಾಧಾನದ ಮಾತುಗಳಿಗೆ ಒಪ್ಪದ ಅವರು, ಸಭೆಯ ನಡುವೆಯೇ ಎದ್ದು ಹೊರನಡೆದಿದ್ದಾರೆ. ಶಾಸಕನಾಗಿ ಇರುತ್ತೇನೆ ಸಾಕು ಎಂದ ಸಚಿವರು! ಮುಖ್ಯಮಂತ್ರಿಗಳ ನಿಲುವಿಗೆ ತೀವ್ರ ವಿರೋಧ ವ್ಯಕ್ತಪಡಿಸಿದ ಸಚಿವರು, “ನನಗೆ ಬೇರೆ ಇಲಾಖೆ ಬೇಡ, ನಾನು ಕೇವಲ…
ಬೆಂಗಳೂರು: ಸಾಗರ ಕ್ಷೇತ್ರದ ಶಾಸಕರಾದ ಗೋಪಾಲಕೃಷ್ಣ ಬೇಳೂರು ಅವರು ಇಂದು ಬೆಂಗಳೂರಿನಲ್ಲಿ ಕೆಪಿಸಿಸಿ ಅಧ್ಯಕ್ಷ ಬಿ.ಕೆ ಹರಿಪ್ರಸಾದ್, ನೂತನ ಸಚಿವ ಸತೀಶ್ ಜಾರಕಿಹೊಳಿ ಅವರನ್ನು ಭೇಟಿ ಮಾಡಿ ಅಭಿನಂದನೆ ಸಲ್ಲಿಸಿದರು. ರಾಜ್ಯ ಸಚಿವ ಸಂಪುಟಕ್ಕೆ ನೂತನ ಸಚಿವರಾಗಿ ಸೇರ್ಪಡೆಗೊಂಡು ಪ್ರಮಾಣ ವಚನ ಸ್ವೀಕರಿಸಿದ ಸತೀಶ್ ಜಾರಕಿಹೊಳಿ ಅವರನ್ನು ಶಾಸಕ ಗೋಪಾಲಕೃಷ್ಣ ಬೇಳೂರು ಅವರು ಭೇಟಿಯಾಗಿ, ಪುಷ್ಪಗುಚ್ಛ ನೀಡಿ ಹೃತ್ಪೂರ್ವಕ ಅಭಿನಂದನೆಗಳನ್ನು ಸಲ್ಲಿಸಿದರು. ಕೆಪಿಸಿಸಿ ನೂತನ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ಭೇಟಿ ಇದೇ ಸಂದರ್ಭದಲ್ಲಿ ಶಾಸಕ ಗೋಪಾಲಕೃಷ್ಣ ಬೇಳೂರು ಅವರು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ (KPCC) ನೂತನ ಅಧ್ಯಕ್ಷರಾಗಿ ನೇಮಕಗೊಂಡಿರುವ ಹಿರಿಯ ನಾಯಕ ಬಿ.ಕೆ. ಹರಿಪ್ರಸಾದ್ ಅವರನ್ನು ಸಹ ಭೇಟಿ ಮಾಡಿದರು. ಪಕ್ಷದ ಈ ಮಹತ್ವದ ಜವಾಬ್ದಾರಿ ವಹಿಸಿಕೊಂಡಿರುವ ನೂತನ ಅಧ್ಯಕ್ಷರಿಗೆ ಶಾಸಕರು ಆತ್ಮೀಯವಾಗಿ ಅಭಿನಂದನೆಗಳನ್ನು ತಿಳಿಸಿದರು. ಕಾಂಗ್ರೆಸ್ ಪಕ್ಷ ಮತ್ತಷ್ಟು ಬಲಿಷ್ಠವಾಗಲಿ ಎಂದು ಶುಭ ಹಾರೈಕೆ ನೂತನ ಅಧ್ಯಕ್ಷರನ್ನು ಭೇಟಿ ಮಾಡಿದ ಬಳಿಕ ಮಾತನಾಡಿದ ಶಾಸಕರು, ಬಿ.ಕೆ. ಹರಿಪ್ರಸಾದ್ ಅವರ…
ಬೆಂಗಳೂರು: ಕರ್ನಾಟಕ ರಾಜಕಾರಣದಲ್ಲಿ ತಮ್ಮದೇ ಆದ ವಿಶಿಷ್ಟ ಛಾಪು ಮೂಡಿಸಿರುವ ಕನಕಪುರದ ಸರದಾರ, ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೂ ಚಿತ್ರರಂಗಕ್ಕೂ ದಶಕಗಳ ಕಾಲದ ಅತ್ಯಂತ ಗಟ್ಟಿಯಾದ ನಂಟಿದೆ. ಇಂದು ಬಹುಕೋಟಿ ವೆಚ್ಚದ ಅತ್ಯಾಧುನಿಕ ಮಲ್ಟಿಪ್ಲೆಕ್ಸ್ ಥಿಯೇಟರ್ ಹಾಗೂ ಮಾಲ್ಗಳ ಒಡೆಯನಾಗಿರುವ ಡಿ.ಕೆ. ಶಿವಕುಮಾರ್ ಅವರ ಈ ಸುದೀರ್ಘ ಯಶೋಗಾಥೆಯ ಹಿಂದೆ ಚಿತ್ರರಂಗದ ಮೇಲಿದ್ದ ಅಪ್ರತಿಮ ಪ್ರೀತಿಯ ಇತಿಹಾಸವಿದೆ. ಸಿನಿಮಾ ಟೆಂಟ್ನಿಂದ ಆರಂಭವಾದ ಜರ್ನಿ ಡಿ.ಕೆ. ಶಿವಕುಮಾರ್ ಅವರು ತಮ್ಮ ಯೌವನದ ದಿನಗಳಲ್ಲಿ ಸಿನಿಮಾ ರಂಗದತ್ತ ಆಕರ್ಷಿತರಾಗಿದ್ದರು. ಆರಂಭದ ದಿನಗಳಲ್ಲಿ ಅವರು ಇಂದಿರಾಗಾಂಧಿ ಹೆಸರಿನಲ್ಲಿ ಸಿನಿಮಾ ಟೆಂಟ್ಗಳನ್ನು ನಡೆಸುತ್ತಿದ್ದರು. ಅಲ್ಲಿಂದ ಶುರುವಾದ ಅವರ ಸಿನಿಮಾ ಪ್ರೀತಿ ಕೇವಲ ಪ್ರದರ್ಶನಕ್ಕಷ್ಟೇ ಸೀಮಿತವಾಗದೆ, ಕನ್ನಡ ಚಿತ್ರರಂಗದಲ್ಲಿ ವಿತರಕರಾಗಿ ಹಾಗೂ ಪ್ರದರ್ಶಕರಾಗಿಯೂ ಕೆಲಸ ಮಾಡುವಂತೆ ಮಾಡಿತು. ಗಾಂಧಿನಗರದ ಚಿತ್ರರಂಗದ ಚಟುವಟಿಕೆಗಳೊಂದಿಗೆ ಅವರು ನಿಕಟ ಸಂಪರ್ಕ ಹೊಂದಿದ್ದರು. ಫಿಲ್ಮ್ ಚೇಂಬರ್ ಸದಸ್ಯತ್ವ ಮತ್ತು ಅಣ್ಣಾವ್ರ ಮೇಲಿನ ಅಭಿಮಾನ ಡಿ.ಕೆ. ಶಿವಕುಮಾರ್ ಅವರಿಗೆ ಸ್ಯಾಂಡಲ್ವುಡ್ ಮೇಲಿರುವ ನಂಟಿಗೆ ಮತ್ತೊಂದು ಸಾಕ್ಷಿ…
ನವದೆಹಲಿ: ಬ್ಯಾಂಕಿಂಗ್ ಕ್ಷೇತ್ರದಲ್ಲಿ ವೃತ್ತಿಜೀವನವನ್ನು ಆರಂಭಿಸಲು ಬಯಸುವ ಪದವೀಧರರಿಗೆ ಭಾರತೀಯ ಸ್ಟೇಟ್ ಬ್ಯಾಂಕ್ (SBI) ಭರ್ಜರಿ ಅವಕಾಶವೊಂದನ್ನು ನೀಡಿದೆ. ದೇಶಾದ್ಯಂತ ಖಾಲಿ ಇರುವ ಒಟ್ಟು 7,150 ಅಪ್ರೆಂಟಿಸ್ ಹುದ್ದೆಗಳ ಭರ್ತಿಗಾಗಿ ಎಸ್ಬಿಐ ನೇಮಕಾತಿ ಪ್ರಕ್ರಿಯೆಯನ್ನು ಆರಂಭಿಸಿದ್ದು, ಅರ್ಜಿ ಸಲ್ಲಿಸಲು ಜೂನ್ 8, 2026 ಕೊನೆಯ ದಿನವಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಆನ್ಲೈನ್ ಮೂಲಕ ಅಧಿಕೃತ ವೆಬ್ಸೈಟ್ನಲ್ಲಿ ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳಬಹುದು. ಹುದ್ದೆಗಳ ವಿವರ ಮತ್ತು ಸ್ಟೈಫಂಡ್: ಒಟ್ಟು ಹುದ್ದೆಗಳು: 7,150 ಕರ್ನಾಟಕದಲ್ಲಿರುವ ಹುದ್ದೆಗಳು: 276 (ಸ್ಥಳೀಯ ಭಾಷೆ ಕನ್ನಡ ಕಡ್ಡಾಯ) ತರಬೇತಿ ಅವಧಿ: 1 ವರ್ಷ ಮಾಸಿಕ ಸ್ಟೈಫಂಡ್: ಆಯ್ಕೆಯಾದ ಅಭ್ಯರ್ಥಿಗಳಿಗೆ ಪ್ರತಿ ತಿಂಗಳು 15,000 ರೂ. ಗೌರವಧನ (ಸ್ಟೈಫಂಡ್) ನೀಡಲಾಗುತ್ತದೆ. ಜೊತೆಗೆ ಯಶಸ್ವಿಯಾಗಿ ತರಬೇತಿ ಮುಗಿಸಿದವರಿಗೆ ಎಸ್ಬಿಐನಿಂದ ಅಧಿಕೃತ ಅನುಭವ ಪ್ರಮಾಣಪತ್ರ ಸಿಗಲಿದ್ದು, ಇದು ಮುಂದಿನ ಬ್ಯಾಂಕ್ ಕ್ಲರ್ಕ್ ಪರೀಕ್ಷೆಗಳಿಗೆ ಸಹಕಾರಿಯಾಗಲಿದೆ. ಅರ್ಹತಾ ಮಾನದಂಡಗಳು: ಶೈಕ್ಷಣಿಕ ಅರ್ಹತೆ: ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಯಾವುದೇ ವಿಭಾಗದಲ್ಲಿ ಪದವಿ (Graduation) ಪಡೆದಿರುವ…
ತುಮಕೂರು: ಜಿಲ್ಲೆಯ ಚಿಕ್ಕನಾಯಕನಹಳ್ಳಿ ತಾಲ್ಲೂಕಿನ ಹುಳಿಯಾರು ಗ್ರಾಮದ ಬಳಿ ಎರಡು ಕಾರುಗಳ ನಡುವೆ ಸಂಭವಿಸಿದ ಭೀಕರ ಮುಖಾಮುಖಿ ಡಿಕ್ಕಿಯಲ್ಲಿ ಒಂದೇ ಕುಟುಂಬದ ಮೂವರು ಸ್ಥಳದಲ್ಲೇ ದಾರುಣವಾಗಿ ಸಾವನ್ನಪ್ಪಿರುವ ಘಟನೆ ನಡೆದಿದೆ. ಅಪಘಾತದಲ್ಲಿ ಇಬ್ಬರು ಮಕ್ಕಳು ಸೇರಿದಂತೆ ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಓಮ್ನಿ ಕಾರಿಗೆ ಎದುರಿನಿಂದ ಬಂದ ಕಾರು ಡಿಕ್ಕಿ ಹಿರಿಯೂರಿನಿಂದ ಹುಳಿಯಾರು ಕಡೆಗೆ ಬರುತ್ತಿದ್ದ ಓಮ್ನಿ ಕಾರಿಗೆ ಎದುರಿನಿಂದ ಅತಿ ವೇಗವಾಗಿ ಬಂದ ಮತ್ತೊಂದು ಕಾರು ಮುಖಾಮುಖಿ ಡಿಕ್ಕಿ ಹೊಡೆದಿದೆ. ಡಿಕ್ಕಿಯಾದ ರಭಸಕ್ಕೆ ಓಮ್ನಿ ಕಾರು ರಸ್ತೆ ಪಕ್ಕಕ್ಕೆ ಪಲ್ಟಿಯಾಗಿದೆ. ಅಪಘಾತದ ತೀವ್ರತೆಗೆ ಓಮ್ನಿ ಕಾರಿನಲ್ಲಿದ್ದ ವೃದ್ಧ ದಂಪತಿ ಸೇರಿದಂತೆ ಒಂದೇ ಕುಟುಂಬದ ಮೂವರು ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ. ಮೃತಪಟ್ಟವರು ಮೂಲತಃ ಆಂಧ್ರಪ್ರದೇಶದವರು ಎಂದು ಪ್ರಾಥಮಿಕ ಮಾಹಿತಿಯಿಂದ ತಿಳಿದುಬಂದಿದೆ. ಇಬ್ಬರು ಮಕ್ಕಳಿಗೆ ಗಂಭೀರ ಗಾಯ: ಆಸ್ಪತ್ರೆಗೆ ದಾಖಲು ಈ ಭೀಕರ ದುರಂತದಲ್ಲಿ ಕಾರಿನಲ್ಲಿದ್ದ ಇಬ್ಬರು ಮಕ್ಕಳು ಸೇರಿದಂತೆ ಮೂವರಿಗೆ ಗಂಭೀರ ಗಾಯಗಳಾಗಿದ್ದು, ತಕ್ಷಣವೇ ಅವರನ್ನು ಚಿಕಿತ್ಸೆಗಾಗಿ ತುಮಕೂರು ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ.…
ಬೆಂಗಳೂರು : ಮುಖ್ಯಮಂತ್ರಿಗಳಾದ ಡಿ.ಕೆ. ಶಿವಕುಮಾರ್ ಅವರ ‘ಬ್ರ್ಯಾಂಡ್ ಬೆಂಗಳೂರು’ ದೃಷ್ಟಿಕೋನವನ್ನು ಸಾಕಾರಗೊಳಿಸುವ ಹಾಗೂ ಬೆಂಗಳೂರು ನಗರದ ಭವಿಷ್ಯದ ಸವಾಲುಗಳನ್ನು ಎದುರಿಸಬಲ್ಲ ಮತ್ತು ಸುಸ್ಥಿರ ನಗರಾಭಿವೃದ್ಧಿಗೆ ಪೂರಕವಾದ ವ್ಯವಸ್ಥೆಯನ್ನು ನಿರ್ಮಿಸುವ ನಿಟ್ಟಿನಲ್ಲಿ ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯು (BWSSB) ಮಹತ್ವಾಕಾಂಕ್ಷಿ ‘ಬೆಂಗಳೂರು ಗ್ಲೋಬಲ್ ವಾಟರ್ ಇನ್ನೋವೇಷನ್ ನೆಟ್ವರ್ಕ್’ (BGWIN – ಬಿ-ಗ್ವಿನ್) ಜಾಲ ಸ್ಥಾಪನೆಗೆ ಚಿಂತನೆ ನಡೆಸುತ್ತಿದೆ. ಜಾಗತಿಕ ಮಟ್ಟದ ಅತ್ಯಾಧುನಿಕ ವೇದಿಕೆಯಾಗಿ ರೂಪಿತಗೊಳ್ಳಲಿರುವ ಈ ‘ಬಿ-ಗ್ವಿನ್’, ಜಲ ಮತ್ತು ಒಳಚರಂಡಿ ವಲಯದ ಸವಾಲುಗಳನ್ನು ಎದುರಿಸಲು ವಿಶ್ವದ ಜಲ ನಿರ್ವಹಣಾ ಸಂಸ್ಥೆಗಳು, ಸರ್ಕಾರಿ ಸಂಸ್ಥೆಗಳು, ಶೈಕ್ಷಣಿಕ ಮತ್ತು ಸಂಶೋಧನಾ ಸಂಸ್ಥೆಗಳು, ಕೈಗಾರಿಕಾ ನಾಯಕರು, ಸ್ಟಾರ್ಟ್-ಅಪ್ಗಳು, ಇನ್ಕ್ಯುಬೇಟರ್ಗಳು ಹಾಗೂ ನಾಗರಿಕ ಸಮಾಜವನ್ನು ಒಂದೇ ಸೂರಿನಡಿ ತರುವ ಪ್ರಮುಖ ಕೇಂದ್ರೀಕೃತ ವೇದಿಕೆಯಾಗಿ ಕಾರ್ಯನಿರ್ವಹಿಸಲಿದೆ. ಬೆಂಗಳೂರನ್ನು ಜಾಗತಿಕವಾಗಿ ಮನ್ನಣೆ ಪಡೆದ ಜಲ ನಾವೀನ್ಯತೆಯ ಕೇಂದ್ರವನ್ನಾಗಿ ಮತ್ತು ಜಲ ಭದ್ರತೆಯ ಮಾದರಿ ನಗರವಾಗಿ ಪರಿವರ್ತಿಸುವುದು ಈ ಉಪಕ್ರಮದ ದೀರ್ಘಕಾಲದ ದೃಷ್ಟಿಕೋನವಾಗಿದೆ. ಹೊಸ ತಂತ್ರಜ್ಞಾನಗಳ ಅಳವಡಿಕೆಯನ್ನು…
ಶಿವಮೊಗ್ಗ: ಮಲೆನಾಡಿನ ಹೆಬ್ಬಾಗಿಲು ಸಾಗರ ನಗರದಲ್ಲಿ ಹಣ್ಣುಗಳ ರಾಜ ಮಾವು ಹಾಗೂ ಮಲೆನಾಡಿನ ಹೆಮ್ಮೆ ಹಲಸಿನ ಹಣ್ಣಿನ ವಿವಿಧ ತಳಿಗಳು ಮತ್ತು ವಿಶಿಷ್ಟ ಖಾದ್ಯಗಳ ಜಾಗತಿಕ ಸವಿಯನ್ನು ಪರಿಚಯಿಸಲು ಅದ್ಧೂರಿ ಮೇಳವೊಂದು ಸಜ್ಜಾಗಿದೆ. ಲಯನ್ಸ್ ಕ್ಲಬ್ ಸಾಗರ (ಮಾದರಿ ಕ್ಲಬ್) ವಲಯ 1, ಪ್ರಾಂತ 8, ಜಿಲ್ಲೆ 317 ಸಿ ವತಿಯಿಂದ ‘ರಾಜರತ್ನ ಇವೆಂಟ್ಸ್’ ಹಾಗೂ ‘ಜನಸ್ನೇಹಿ ಇವೆಂಟ್ಸ್’ ಸಹಯೋಗದೊಂದಿಗೆ ಈ ವಿಶಿಷ್ಟ “ಹಲಸು ಮತ್ತು ಮಾವು ಮೇಳ”ವನ್ನು ನಾಳೆಯಿಂದ ಮೂರು ದಿನಗಳ ಕಾಲ ಆಯೋಜಿಸಲಾಗಿದೆ. ಜೂನ್ 5ರ ನಾಳೆಯಿಂದ ಜೂನ್.7ರವರೆಗೆ ಅಂದರೆ, ಶುಕ್ರವಾರ, ಶನಿವಾರ ಮತ್ತು ಭಾನುವಾರದಂದು ಸಾಗರದ ಶ್ರೀ ರಾಘವೇಶ್ವರ ಭವನದಲ್ಲಿ ಈ ಮೇಳ ನಡೆಯಲಿದ್ದು, ಸಾರ್ವಜನಿಕರಿಗೆ ಉಚಿತ ಪ್ರವೇಶವಿರುತ್ತದೆ. ಬೆಳಿಗ್ಗೆ 10:00 ಗಂಟೆಯಿಂದ ರಾತ್ರಿ 9:30 ರವರೆಗೆ ಸಾರ್ವಜನಿಕರು ಮೇಳಕ್ಕೆ ಭೇಟಿ ನೀಡಿ ವಿವಿಧ ಉತ್ಪನ್ನಗಳ ಸವಿಯನ್ನು ಸವಿಯಬಹುದಾಗಿದೆ. ವೈವಿಧ್ಯಮಯ ಮೇಳಗಳ ಸಂಗಮ ಈ ಬಾರಿಯ ಪ್ರದರ್ಶನವು ಕೇವಲ ಹಣ್ಣುಗಳಿಗಷ್ಟೇ ಸೀಮಿತವಾಗಿರದೆ, ಗ್ರಾಹಕರನ್ನು ಕೈಬೀಸಿ ಕರೆಯುವ ಹಲವು…
ಬೆಂಗಳೂರು : ಒಳ್ಳೆಯ ಆಡಳಿತ ನೀಡುವುದಾಗಿ ರಾಜ್ಯದ ಜನತೆಗೆ ಭರವಸೆ ನೀಡಿದ್ದೇವೆ. ಸರ್ಕಾರದ ಯೋಜನೆಗಳು ನಿಗದಿತ ಸಮಯದೊಳಗೆ ಜನರಿಗೆ ತಲುಪಲು ಜವಬ್ದಾರಿ ಮತ್ತು ಪಾರದರ್ಶಕವಾಗಿ ಕೆಲಸ ಮಾಡಬೇಕು ಎಂದು ಉಪ ಮುಖ್ಯಮಂತ್ರಿ ಡಾ. ಜಿ.ಪರಮೇಶ್ವರ ಅವರು ಹೇಳಿದರು. ವಿಧಾನಸೌಧ ಸಮ್ಮೇಳನ ಸಭಾಂಗಣದಲ್ಲಿ ಹಿರಿಯ ಅಧಿಕಾರಿಗಳೊಂದಿಗೆ ನಡೆದ ಸಭೆಯಲ್ಲಿ ಮುಖ್ಯಮಂತ್ರಿಗಳೊಂದಿಗೆ ಪಾಲ್ಗೊಂಡು, ಅಧಿಕಾರಿಗಳನ್ನು ಉದ್ದೇಶಿಸಿ ಮಾತನಾಡಿದರು. ಕಳೆದ ಮೂರು ವರ್ಷಗಳಲ್ಲಿ ಎಲ್ಲ ಅಧಿಕಾರಿಗಳು ಬದ್ಧತೆಯಿಂದ ಕೆಲಸ ಮಾಡಿ, ಸರ್ಕಾರಕ್ಕೆ ಒಳ್ಳೆಯ ಹೆಸರು ತಂದಿದ್ದೀರಿ. ಅನೇಕ ಭರವಸೆಗಳನ್ನು ಈಡೇರಿಸಲಾಗಿದೆ. ನೂತನ ಮುಖ್ಯಮಂತ್ರಿಗಳ ನೇತೃತ್ವದ ಸರ್ಕಾರವೂ ಅಪಾರ ನಿರೀಕ್ಷೆ ಇಟ್ಟುಕೊಂಡಿದ್ದಾರೆ. ಜನಸಮುದಾಯಕ್ಕೆ ಹತ್ತಿರವಾಗಿ ಕೆಲಸ ಮಾಡಬೇಕು. ನಿಮ್ಮ ಸೇವೆ ಜನಸಮುದಾಯಕ್ಕೆ ಅನುಕೂಲವಾಗಬೇಕು ಎಂದು ಅವರು ಹೇಳಿದರು. ಯುವ ಸಮುದಾಯ ಸೂಕ್ಷ್ಮವಾಗಿ ನೋಡುತ್ತಿದೆ. ಯುವಕರ ಆಪೇಕ್ಷೆಯಂತೆ ಆಡಳಿತ ನೀಡಬೇಕು ಎಂಬುದು ಸರ್ಕಾರದ ದೃಷ್ಟಿಕೋನವಾಗಿದೆ. ಬರೀ ಭರವಸೆಗಳನ್ನು ಪೂರ್ಣಗೊಳಿಸುವುದಷ್ಟೆ ಅಲ್ಲ. ರಾಜ್ಯದ ಅಭಿವೃದ್ಧಿಗೆ ದೃಷ್ಟಿಕೋನ ನೀಡಬೇಕಿದೆ. ಕರ್ನಾಟಕ ಪ್ರಗತಿಪರ ರಾಜ್ಯ. ಎಲ್ಲರೂ ಕರ್ನಾಟಕದತ್ತ ಗಮನ ಹರಿಸುತ್ತಾರೆ. ಇದನ್ನು ನಾವು…
ಬೆಂಗಳೂರು: ನಮ್ಮ ಸರ್ಕಾರದಲ್ಲಿ ಜಾತಿ, ಧರ್ಮ ಸೇರಿದಂತೆ ಯಾವುದೇ ರೀತಿಯ ಬಾಹ್ಯ ಪ್ರಭಾವಗಳಿಗೆ ಆಸ್ಪದವಿಲ್ಲ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಅಧಿಕಾರಿಗಳಿಗೆ ಖಡಕ್ ಸೂಚನೆ ನೀಡಿದ್ದಾರೆ. ಅಧಿಕಾರಿಗಳು ತಮ್ಮ ಆತ್ಮಸಾಕ್ಷಿಗೆ ಅನುಗುಣವಾಗಿ, ಯಾವುದೇ ಒತ್ತಡಗಳಿಗೆ ಮಣಿಯದೆ ಪಾರದರ್ಶಕವಾಗಿ ಕೆಲಸ ಮಾಡಬೇಕು ಎಂದು ಅವರು ತಿಳಿಸಿದ್ದಾರೆ. ಉನ್ನತಾಧಿಕಾರಿಗಳ ಮಹತ್ವದ ಸಭೆಯ ಬಳಿಕ ನಡೆಸಿದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಆಡಳಿತ ಯಂತ್ರಕ್ಕೆ ಚುರುಕು ಮುಟ್ಟಿಸುವ ಹಲವು ಪ್ರಮುಖ ನಿರ್ಧಾರಗಳನ್ನು ಪ್ರಕಟಿಸಿದರು. ಅಧಿಕಾರಿಗಳಿಗೆ 15 ದಿನಗಳ ಗಡುವು ಮತ್ತು ದಕ್ಷತೆಯ ನಿರೀಕ್ಷೆ ಸರ್ಕಾರದಲ್ಲಿ ಯಾವುದೇ ಜಾತಿ, ಧರ್ಮ ಅಥವಾ ರಾಜಕೀಯ ಪ್ರಭಾವಗಳು ನಡೆಯುವುದಿಲ್ಲ ಎಂದು ಸ್ಪಷ್ಟಪಡಿಸಿದ ಮುಖ್ಯಮಂತ್ರಿಗಳು, ಅರ್ಹತೆ ಮತ್ತು ಪಾರದರ್ಶಕತೆಗೆ ಮಾತ್ರ ಮೊದಲ ಆದ್ಯತೆ ನೀಡಲಾಗುವುದು ಎಂದರು. ಇಲಾಖೆಗಳ ಪ್ರಗತಿ ಮತ್ತು ಮುಂದಿನ ಕಾರ್ಯಯೋಜನೆಗಳ ಕುರಿತು ಮುಂದಿನ 15 ದಿನಗಳ ಒಳಗಾಗಿ ಕಡ್ಡಾಯವಾಗಿ ‘ಆಕ್ಷನ್ ಕಾರ್ಡ್’ ಸಿದ್ಧಪಡಿಸುವಂತೆ ಅಧಿಕಾರಿಗಳಿಗೆ ಗಡುವು ವಿಧಿಸಲಾಗಿದೆ. ಅಧಿಕಾರಿಗಳು ಯಾರದೇ ಒತ್ತಡಕ್ಕೆ ಒಳಗಾಗದೆ, ಸಾರ್ವಜನಿಕರ ಹಿತದೃಷ್ಟಿಯಿಂದ ಮುಕ್ತವಾಗಿ ಮತ್ತು…













