Subscribe to Updates
Get the latest creative news from FooBar about art, design and business.
Author: kannadanewsnow09
ಬೆಂಗಳೂರು: ಮಹಾಶಿವರಾತ್ರಿ ಹಬ್ಬದ ಹಿನ್ನೆಲೆಯಲ್ಲಿ ಪ್ರಯಾಣಿಕರ ಹೆಚ್ಚುವರಿ ದಟ್ಟಣೆಯನ್ನು ನಿಯಂತ್ರಿಸಲು ನೈಋತ್ಯ ರೈಲ್ವೆಯು ಬೆಂಗಳೂರಿನ ಯಶವಂತಪುರ ಮತ್ತು ಕಲಬುರಗಿ ನಿಲ್ದಾಣಗಳ ನಡುವೆ ಒಂದು ಟ್ರಿಪ್ ವಿಶೇಷ ಎಕ್ಸ್ ಪ್ರೆಸ್ ರೈಲನ್ನು ಓಡಿಸಲು ನಿರ್ಧರಿಸಿದೆ. ಫೆಬ್ರವರಿ 13ರಂದು ರೈಲು ಸಂಖ್ಯೆ 06209 ಯಶವಂತಪುರ–ಕಲಬುರಗಿ ವಿಶೇಷ ಎಕ್ಸ್ ಪ್ರೆಸ್ ರೈಲು ಯಶವಂತಪುರದಿಂದ ರಾತ್ರಿ 10:40ಕ್ಕೆ ಹೊರಟು, ಮರುದಿನ ಬೆಳಿಗ್ಗೆ 9:15ಕ್ಕೆ ಕಲಬುರಗಿ ತಲುಪಲಿದೆ. ಹಿಂದಿರುಗುವ ಪ್ರಯಾಣದಲ್ಲಿ, ಫೆಬ್ರವರಿ 14ರಂದು ರೈಲು ಸಂಖ್ಯೆ 06210 ಕಲಬುರಗಿ-ಯಶವಂತಪುರ ವಿಶೇಷ ಎಕ್ಸ್ ಪ್ರೆಸ್ ರೈಲು ಕಲಬುರಗಿಯಿಂದ ಬೆಳಿಗ್ಗೆ 10:15ಕ್ಕೆ ಹೊರಟು, ಅದೇ ದಿನ ರಾತ್ರಿ 9:40ಕ್ಕೆ ಯಶವಂತಪುರ ತಲುಪಲಿದೆ. ಈ ವಿಶೇಷ ಎರಡೂ ಮಾರ್ಗಗಳಲ್ಲಿ ಯಲಹಂಕ, ಹಿಂದೂಪುರ, ಧರ್ಮಾವರಂ, ಅನಂತಪುರ, ಗುಂತಕಲ್, ಆದೋನಿ, ಮಂತ್ರಾಲಯಂ ರೋಡ್, ರಾಯಚೂರು, ಕೃಷ್ಣ, ಯಾದಗಿರಿ ಹಾಗೂ ಶಹಾಬಾದ್ ನಿಲ್ದಾಣಗಳಲ್ಲಿ ನಿಲುಗಡೆ ಹೊಂದಿರಲಿದೆ. ಈ ವಿಶೇಷ ರೈಲು ಒಟ್ಟು 20 ಬೋಗಿಗಳನ್ನು ಒಳಗೊಂಡಿರಲಿದೆ. ಇದರಲ್ಲಿ ಒಂದು ಪ್ರಥಮ ದರ್ಜೆ ಎಸಿ ಹಾಗೂ ಎಸಿ-2 ಟೈರ್…
ಪಶ್ಚಿಮ ಬಂಗಾಳ: ದೇಶದಲ್ಲಿ ನಿಫಾ ವೈರಸ್ ಗೆ ಮತ್ತೊಂದು ಬಲಿಯಾಗಿದೆ. ಪಶ್ಚಿಮ ಬಂಗಾಳದಲ್ಲಿ ನಿಫಾ ವೈರಸ್ ಸೋಂಕಿನಿಂದ ಬಳಲುತ್ತಿದ್ದಂತ ನರ್ಸ್ ಒಬ್ಬರು ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದಾರೆ. ಪಶ್ಚಿಮ ಬಂಗಾಳದ ಉತ್ತರ 24 ಪರಗಣ ಜಿಲ್ಲೆಯ ಬರಾಸತ್ ನಲ್ಲಿರುವಂತ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಂತ ನರ್ಸ್ ನಿಫಾ ವೈರಸ್ ನಿಂದ ಸಾವನ್ನಪ್ಪಿದ್ದಾರೆ. ನಿಫಾ ವೈರಸ್ ಸೋಂಕಿನಿಂದ ಬಳಲುತ್ತಿದ್ದಂತ 25 ವರ್ಷದ ನರ್ಸ್ ಸಾವನ್ನಪ್ಪಿದ್ದಾರೆ. ಪಶ್ಚಿಮ ಬಂಗಾಳದಲ್ಲಿ ನಿಫಾ ವೈರಸ್ ಸೋಂಕು ಇಬ್ಬರು ನರ್ಸ್ ಗಳಿಗೆ ತಗುಲಿತ್ತು. ಇಬ್ಬರ ಪೈಕಿ ಓರ್ವ ಲೇಡಿ ನರ್ಸ್ ನಿಫಾ ವೈರಸ್ ಗೆ ಬಲಿಯಾಗಿದ್ದಾರೆ. https://kannadanewsnow.com/kannada/vb-g-ram-ji-act-helpful-for-rural-development-bjp-ryta-morcha-state-secretary-ashok/ https://kannadanewsnow.com/kannada/biklu-shiva-murder-case-20th-accused-ajiths-interim-bail-revoked-court-orders-him-to-surrender/
ಬೆಂಗಳೂರು: ಬಿಜೆಪಿ ಶಾಸಕ ಭೈರತಿ ಬಸವರಾಜ ಬಂಧನಕ್ಕೆ ಸಿಐಡಿ ಪೊಲೀಸರು ಬೆಂಗಳೂರು ಏರ್ ಪೋರ್ಟ್ ನಲ್ಲಿ ಬಂಧಿಸಿದ್ದಾರೆ. ಈ ಬೆನ್ನಲ್ಲೇ ಇದೇ ಪ್ರಕರಣದಲ್ಲಿ 20ನೇ ಆರೋಪಿಯಾಗಿರುವಂತ ಅಜಿತ್ ಅವರಿಗೆ ನೀಡಿದ್ದಂತ ಮಧ್ಯಂತರ ಜಾಮೀನು ತೆರವುಗೊಳಿಸಿರುವಂತ ಕೋರ್ಟ್, ಶರಣಾಗುವಂತೆ ಆದೇಶ ಮಾಡಿದೆ. ಇಂದು ಬೆಂಗಳೂರಿನ 82ನೇ ಸಿಸಿಹೆಚ್ ನ್ಯಾಯಾಲಯದಲ್ಲಿ ಈ ಪ್ರಕರಣದ ವಿಚಾರಣೆ ನಡೆಸಲಾಯಿತು. ಬಿಕ್ಲು ಶಿವ ಕೊಲೆ ಕೇಸಲ್ಲಿ ಆರೋಪಿ ಅಜಿತ್ ಜಾಮೀನು ಅರ್ಜಿ ವಜಾಗೊಳಿಸಲಾಗಿದೆ. ಜಾಮೀನು ಅರ್ಜಿ ವಜಾಗೊಳಿಸಿ ತಕ್ಷಣ ಶರಣಾಗಲು ಸೂಚಿಸಲಾಗಿದೆ. 82ನೇ ಸಿಸಿಹೆಚ್ ನ್ಯಾಯಾಲಯ ನ್ಯಾಯಮೂರ್ತಿ ಸಂತೋಷ್ ಗಜಾನನ ಭಟ್ ಅವರು ಆದೇಶಿಸಿದ್ದಾರೆ. ಈ ಹಿನ್ನಲೆಯಲ್ಲಿ ಬಿಕ್ಲು ಶಿವ ಕೊಲೆ ಪ್ರಕರಣದಲ್ಲಿ 20ನೇ ಆರೋಪಿಯಾಗಿರುವಂತ ಅಜಿತ್ ನನ್ನು ಸಿಐಡಿ ಪೊಲೀಸರು ಬಂಧಿಸಿದ್ದಾರೆ. ವಕೀಲನೆಂಬ ಕಾರಣಕ್ಕೆ ಬಂಧಿಸಿದ್ದಾರೆಂದು ಅಜಿತ್ ವಾದಿಸಿದ್ದರು. ಹೀಗಾಗಿ ಮಧ್ಯಂತರ ಜಾಮೀನನ್ನು ಕೋರ್ಟ್ ಮಂಜೂರು ಮಾಡಿತ್ತು. ಆದರೇ ಈಗ ಮಧ್ಯಂತರ ಜಾಮೀನು ತೆರವುಗೊಳಿಸಿ, ಶರಣಾಗಲು ಸೂಚಿಸಿದೆ. https://kannadanewsnow.com/kannada/vb-g-ram-ji-act-helpful-for-rural-development-bjp-ryta-morcha-state-secretary-ashok/ https://kannadanewsnow.com/kannada/bjp-mla-bhairati-basavaraju-arrested-in-biklu-shiva-murder-case/
ಬೆಂಗಳೂರು: ರೌಡಿ ಶೀಟರ್ ಬಿಕ್ಲು ಶಿವ ಕೊಲೆ ಪ್ರಕರಣದಲ್ಲಿ ಬಿಜೆಪಿ ಶಾಸಕ ಭೈರತಿ ಬಸವರಾಜು ಅವರನ್ನು ಕೊನೆಗೂ ಸಿಐಡಿ ಪೊಲೀಸರು ಬಂಧಿಸಿದ್ದಾರೆ. ಬಿಕ್ಲು ಶಿವ ಕೊಲೆ ಪ್ರಕರಣದಲ್ಲಿ ಬಿಜೆಪಿ ಶಾಸಕ ಭೈರತಿ ಬಸವರಾಜು ಸಲ್ಲಿಸಿದ್ದಂತ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿತ್ತು. ಆ ಬಳಿಕ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದರು. ಆದರೇ ಇಂದು ಸುಪ್ರೀಂ ಕೋರ್ಟ್ ಕೂಡ ಬಿಜೆಪಿ ಶಾಸಕ ಭೈರತಿ ಬಸವರಾಜು ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿಯನ್ನು ವಜಾಗೊಳಿಸಿತ್ತು. ಹೀಗಾಗಿ ಪೊಲೀಸರಿ ಶರಣಾಗಲು ತಯಾರಿ ನಡೆಸಿದ್ದರು. ಈ ವಿಷಯ ತಿಳಿಯುತ್ತಿದ್ದಂತೆ ಸಿಐಡಿ ಪೊಲೀಸರು ಅಲರ್ಟ್ ಆಗಿದ್ದಾರೆ. ಅಹಮದಾಬಾದ್ ನಿಂದ ಬೆಂಗಳೂರಿಗೆ ಇಂಡಿಗೋ 6ಇ863 ವಿಮಾನದಲ್ಲಿ ಆಗಮಿಸುತ್ತಿರುವಂತ ವಿಷಯ ತಿಳಿದು ಬೆಂಗಳೂರಿನ ಕೆಂಪೇಗೌಡ ಏರ್ ಪೋರ್ಟ್ ನಲ್ಲಿ ಬೀಡು ಬಿಟ್ಟಿದ್ದರು. ಬಿಜೆಪಿ ಶಾಸಕ ಭೈರತಿ ಬಸವರಾಜು ಅವರು ಬೆಂಗಳೂರಿಗೆ ಬಂದು ಇಳಿಯುತ್ತಿದ್ದಂತೆ ಅವರನ್ನು ಬಂಧಿಸಿದ್ದಾರೆ. ಆ ಮೂಲಕ ಬಿಕ್ಲು ಶಿವ ಕೊಲೆ ಕೇಸಲ್ಲಿ ಬಿಜೆಪಿ ಶಾಸಕ ಭೈರತಿ ಬಸವರಾಜು ಅವರನ್ನು ಕೊನೆಗೂ ಬಂಧಿಸಿದಂತೆ ಆಗಿದೆ.…
ಮಂಡ್ಯ : ಕೇಂದ್ರ ಸರಕಾರ ಜಾರಿಗೊಳಿಸಿರುವ ವಿಬಿ-ಜಿ ರಾಮ್ ಜಿ ಎಂಬ ಹೊಸ ಕಾಯಿದೆಯು ಗ್ರಾಮೀಣಾಭಿವೃದ್ಧಿಗೆ ಸಹಕಾರಿಯಾಗಿದೆ. ಅತ್ಯಂತ ಪಾರದರ್ಶಕತೆ, ಉತ್ತಮ ಕಾರ್ಮಿಕ ನೀತಿ, ಹಳ್ಳಿಗಳ ಸರ್ವಾಂಗೀಣ ಅಭಿವೃದ್ಧಿಯ ಉದ್ದೇಶವನ್ನು ಇದು ಒಳಗೊಂಡಿದೆ ಎಂದು ಬಿಜೆಪಿ ರೈತ ಮೋರ್ಚಾ ರಾಜ್ಯ ಕಾರ್ಯದರ್ಶಿ ಅಶೋಕ್ ಹೇಳಿದರು. ಮದ್ದೂರು ನಗರದ ಬಿಜೆಪಿ ಕಚೇರಿಯಲ್ಲಿ ಬುಧವಾರ ಸಂಜೆ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಮಹಾತ್ಮ ಗಾಂಧೀಜಿಯವರ ಆಶಯಕ್ಕೆ ಪೂರಕವಾಗಿ, ಎಂಜಿ ನರೇಗಾ ಯೋಜನೆಯ ಹೆಸರನ್ನು ವಿಕಸಿತ್ ಭಾರತ್ ಗ್ಯಾರಂಟಿ ಫಾರ್ ರೋಜ್ಗಾರ್ ಎಂದು ಬದಲಿಸಲಾಗಿದೆ. ವಿಕಸಿತವಾಗುತ್ತಿರುವ ಭಾರತದ ಪ್ರಕ್ರಿಯೆಯಲ್ಲಿ ಪಂಚಾಯತ್ ರಾಜ್ ವ್ಯವಸ್ಥೆಯೂ ಸಕ್ರಿಯವಾಗಿ ಇರಬೇಕು ಮತ್ತು ಅಭಿವೃದ್ಧಿಯಾಗಬೇಕು ಎಂಬ ಉದ್ದೇಶದಿಂದ ಕೇಂದ್ರ ಸರ್ಕಾರ ಹೆಸರನ್ನು ಬದಲಾಯಿಸಿದೆ ಎಂದರು. ನರೇಗಾ ಯೋಜನೆಯಡಿ ಫಲಾನುಭವಿಗಳಿಗೆ ಪ್ರತಿ ವರ್ಷ 100 ದಿನಗಳ ಉದ್ಯೋಗ ಖಾತರಿ ಸಿಗುತ್ತಿತ್ತು. ಆದರೆ ವಿಬಿ-ಜಿ ರಾಮ್ ಜಿ ಯೋಜನೆಯಡಿ 125 ದಿನಗಳ ಖಾತರಿ ಉದ್ಯೋಗ ಸಿಗಲಿದೆ. ಗ್ರಾಮೀಣ ಮೂಲಸೌಕರ್ಯ ವ್ಯವಸ್ಥೆ ಸುಧಾರಿಸಲಿದೆ. ನೀರಾವರಿಗೆ ಕೆಲಸಗಳಿಗೆ…
ಮಂಡ್ಯ : ಇಂಧನ ಇಲಾಖೆಯನ್ನು ಹೊರಗುತ್ತಿಗೆ ಮತ್ತು ಖಾಸಗೀಕರಣಗೊಳಿಸಲು ಮುಂದಾಗಿರುವ ಕೇಂದ್ರ ಸರ್ಕಾರದ ನಡೆಯನ್ನು ಖಂಡಿಸಿ ಕರ್ನಾಟಕ ವಿದ್ಯುತ್ ಪ್ರಸರಣ ನೌಕರರ ಸಂಘದ – 659 ಮತ್ತು ನೌಕರರ ಒಕ್ಕೂಟ ಗುರುವಾರ ಮದ್ದೂರು ಚೆಸ್ಕಾಂ ಕಛೇರಿಯ ಆವರಣದಲ್ಲಿ ಪ್ರತಿಭಟನೆ ನಡೆಸಿದರು. ಮದ್ದೂರು ನಗರದ ಚೆಸ್ಕಾಂ ಕಛೇರಿಯ ಆವರಣದಲ್ಲಿ ಕೇಂದ್ರ ಸರ್ಕಾರದ ವಿದ್ಯುತ್ ಖಾಸಗಿಕರಣ ಹಾಗೂ ಹೊರಗುತ್ತಿಗೆಯನ್ನು ವಿರೋಧಿಸಿ ಅಧಿಕಾರಿಗಳು, ನೌಕರರು ಘೋಷಣೆಗಳನ್ನು ಕೂಗಿ ಆಕ್ರೋಶ ಹೊರ ಹಾಕಿದರು. ಚೆಸ್ಕಾಂ ಕಛೇರಿಯ ಕಾರ್ಯ ನಿರ್ವಾಹಕ ಅಧಿಕಾರಿ ಕೆ.ಎನ್.ಶಿವಕುಮಾರ್ ಮಾತನಾಡಿ, ಕೇಂದ್ರ ಸರ್ಕಾರ ವಿದ್ಯುತ್ ಇಲಾಖೆಯನ್ನು ಖಾಸಗೀಕರಣ ಮಾಡುತ್ತಿರುವುದರಿಂದ ಮುಂದಿನ ದಿನದಲ್ಲಿ ಪ್ರತಿಯೊಬ್ಬರಿಗೂ ತೊಂದರೆಯಾಗಲಿದೆ. ಸಾರ್ವಜನಿಕ ವಲಯದ ಸಂಸ್ಥೆಗಳನ್ನು ಖಾಸಗಿಯವರಿಗೆ ನೀಡುವುದರಿಂದ ಗ್ರಾಹಕರು ಮತ್ತು ಕಾರ್ಮಿಕರ ಹಿತಾಸಕ್ತಿಗೆ ಧಕ್ಕೆಯಾಗಲಿದೆ ಎಂದು ಕಳವಳ ವ್ಯಕ್ತಪಡಿಸಿದರು. ಕಳೆದ ವರ್ಷವೇ ಕೇಂದ್ರ ಸರ್ಕಾರ ಅಧಿವೇಶನದಲ್ಲಿ ಬಿಲ್ ಪಾಸ್ ಮಾಡಲು ಮುಂದಾಗಿತ್ತು. ಆಗ ದೇಶದ ವಿವಿಧ ಎಸ್ಕಾಂ ಗಳು ತೀವ್ರ ಸ್ವರೂಪದ ಪ್ರತಿಭಟನೆ ನಡೆಸಿದ ಹಿನ್ನೆಲೆಯಲ್ಲಿ ಕೈ ಬಿಡಲಾಗಿತ್ತು. ಆದರೆ,…
ನವದೆಹಲಿ: ಈಗಾಗಲೇ ಸಾರಿಗೆ ಬಸ್ಸುಗಳಲ್ಲಿ ಜೋರಾಗಿ ಮೊಬೈಲ್ ಪೋನ್ ನಿಂದ ಹಾಡು ಹಾಕೋದು ನಿಷೇಧಿಸಲಾಗಿದೆ. ನಿಯಮ ಮೀರಿದವರಿಗೆ ಕಾನೂನಿನ ಪ್ರಯೋಗಕ್ಕೂ ಸೂಚಿಸಲಾಗಿದೆ. ಈ ಬೆನ್ನಲ್ಲೇ ಇದೀಗ ವಿಮಾನದಲ್ಲೂ ಈ ರೂಲ್ಸ್ ಜಾರಿಗೊಳ್ಳುತ್ತಿದೆ. ಇನ್ಮುಂದೆ ವಿಮಾನಗಳಲ್ಲಿ ಜೋರಾಗಿ ಹಾಡು ಹಾಕಿದ್ರೆ ದಂಡ ವಿಧಿಸಲಾಗುತ್ತದೆ ಎಂಬುದಾಗಿ ಕೇಂದ್ರ ಸರ್ಕಾರ ತಿಳಿಸಿದೆ. ವಿಮಾನದೊಳಗೆ ಮೊಬೈಲ್ ಫೋನ್ ಅಥವಾ ಇತರ ಎಲೆಕ್ಟ್ರಾನಿಕ್ ಸಾಧನಗಳನ್ನು ಬಳಸಿಕೊಂಡು ಇಯರ್ಫೋನ್ಗಳನ್ನು ಬಳಸದೆ ಜೋರಾಗಿ ಸಂಗೀತ ನುಡಿಸುವ ಪ್ರಯಾಣಿಕರು ವಿಮಾನಯಾನ ನಿಯಮಗಳ ಅಡಿಯಲ್ಲಿ ಅಶಿಸ್ತಿನ ನಡವಳಿಕೆಗೆ ಸಮನಾಗಿದ್ದರೆ ದಂಡದ ಕ್ರಮವನ್ನು ಎದುರಿಸಬೇಕಾಗುತ್ತದೆ ಎಂದು ಕೇಂದ್ರ ಸರ್ಕಾರ ಗುರುವಾರ ಹೇಳಿದೆ. ನಾಮಕ್ಕಲ್ ಸಂಸದ ಮಾಥೇಶ್ವರನ್ ಅವರ ಲೋಕಸಭೆಯಲ್ಲಿ ಪ್ರಶ್ನೆಗೆ ಉತ್ತರಿಸಿದ ನಾಗರಿಕ ವಿಮಾನಯಾನ ರಾಜ್ಯ ಸಚಿವ ಮುರಳೀಧರ್ ಮೊಹೋಲ್, ನಾಗರಿಕ ವಿಮಾನಯಾನ ನಿರ್ದೇಶನಾಲಯ (ಡಿಜಿಸಿಎ) ಅಶಿಸ್ತಿನ ಪ್ರಯಾಣಿಕರೊಂದಿಗೆ ವ್ಯವಹರಿಸಲು ನಾಗರಿಕ ವಿಮಾನಯಾನ ಅಗತ್ಯತೆಗಳನ್ನು (ಸಿಎಆರ್) ಈಗಾಗಲೇ ಹೊರಡಿಸಿದೆ ಎಂದು ಹೇಳಿದರು. 1937 ರ ವಿಮಾನ ನಿಯಮಗಳ ನಿಯಮಗಳು 22, 23 ಮತ್ತು 29 ರ…
ಬೆಂಗಳೂರು: ರಾಷ್ಟ್ರೀಯ ಹೆದ್ದಾರಿ–206ರಲ್ಲಿನ ಲೆವೆಲ್ ಕ್ರಾಸಿಂಗ್ ಸಂಖ್ಯೆ 128 ಮತ್ತು 2ರ ಬದಲಿಗೆ ರಸ್ತೆ ಮೇಲ್ಸೇತುವೆ ನಿರ್ಮಿಸುವ ಕಾಮಗಾರಿ ಹಿನ್ನೆಲೆಯಲ್ಲಿ ಬಿರೂರು–ತಾಳಗುಪ್ಪ ಹಾಗೂ ಅರಸೀಕೆರೆ–ಚಿಕ್ಕಜಾಜೂರು ನಡುವೆ ರೈಲ್ವೆ ‘ಲೈನ್ ಬ್ಲಾಕ್’ ಇರುವುದರಿಂದ. ಈ ಕೆಳಗಿನ ರೈಲುಗಳ ಸಂಚಾರದಲ್ಲಿ ಬದಲಾವಣೆ ಮಾಡಲಾಗಿದೆ. ರೈಲುಗಳ ಸಂಚಾರ ರದ್ದು: ತುಮಕೂರು–ಶಿವಮೊಗ್ಗ ಟೌನ್ ಎಕ್ಸ್ಪ್ರೆಸ್ (16567) ಫೆಬ್ರವರಿ 16, 19, 23, 24 ಹಾಗೂ ಮಾರ್ಚ್ 2 ರಿಂದ 5ರವರೆಗೆ ಸಂಚರಿಸುವುದಿಲ್ಲ. ಇದರ ವಿರುದ್ಧ ದಿಕ್ಕಿನ ಶಿವಮೊಗ್ಗ ಟೌನ್–ತುಮಕೂರು ಎಕ್ಸ್ಪ್ರೆಸ್ (16568) ರೈಲು ಫೆಬ್ರವರಿ 17, 20, 24, 25 ಹಾಗೂ ಮಾರ್ಚ್ 3 ರಿಂದ 6ರವರೆಗೆ ರದ್ದಾಗಲಿದೆ. ಹುಬ್ಬಳ್ಳಿ–ಅರಸೀಕೆರೆ ಎಕ್ಸ್ಪ್ರೆಸ್ (16214) ಫೆ. 23, 24 ಹಾಗೂ ಅರಸೀಕೆರೆ–ಹುಬ್ಬಳ್ಳಿ ಎಕ್ಸ್ಪ್ರೆಸ್ (16213) ಫೆ. 24, 25 ರಂದು ರದ್ದಾಗಿವೆ. ಕೆಎಸ್ಆರ್ ಬೆಂಗಳೂರು–ಶಿವಮೊಗ್ಗ-ಕೆಎಸ್ಆರ್ ಬೆಂಗಳೂರು ಜನಶತಾಬ್ದಿ ಎಕ್ಸ್ಪ್ರೆಸ್ (12089/12090) ರೈಲುಗಳು ಫೆಬ್ರವರಿ 24 ಮತ್ತು 25 ರಂದು ರದ್ದಾಗಿವೆ. ತಡವಾಗಿ ಹೊರಡುವ ರೈಲುಗಳು: ಶಿವಮೊಗ್ಗ–ಕೆಎಸ್ಆರ್ ಬೆಂಗಳೂರು ಎಕ್ಸ್ಪ್ರೆಸ್ (12090)…
ಬೆಂಗಳೂರು: ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಇಲಾಖೆಯು ಮಹತ್ತ್ವದ ಸುಧಾರಣಾ ಕ್ರಮದಲ್ಲಿ ಕೈಗಾರಿಕಾ ನಿವೇಶನಗಳಲ್ಲಿ ಮಹಡಿ ವಿಸ್ತೀರ್ಣ ಅನುಪಾತ (ಎಫ್ಎಆರ್= ಫ್ಲೋರ್ ಏರಿಯಾ ರೇಶಿಯೋ)ವನ್ನು ಕೈಗಾರಿಕಾ ಸ್ನೇಹಿಯಾಗಿ ಮಾರ್ಪಡಿಸಿದೆ. ಈ ಸಂಬಂಧ ಅಧಿಕೃತ ಆದೇಶ ಹೊರಡಿಸಲಾಗಿದೆ. ಸರಕಾರದ ಈ ಕ್ರಮದಿಂದ ಕೆಐಎಡಿಬಿ ಅಭಿವೃದ್ಧಿಪಡಿಸಿರುವ ಕೈಗಾರಿಕಾ ಪ್ರದೇಶಗಳ ಪರಿಸರದಲ್ಲಿ ಉದ್ಯಮ ಮತ್ತು ವಸತಿ ಉದ್ದೇಶದ ರಿಯಲ್ ಎಸ್ಟೇಟ್ ಚಟುವಟಿಕೆಗಳು ಗರಿಗೆದರಲಿವೆ ಎಂದು ಬೃಹತ್ ಕೈಗಾರಿಕಾ ಸಚಿವ ಎಂ ಬಿ ಪಾಟೀಲ ತಿಳಿಸಿದ್ದಾರೆ. ಈ ಬಗ್ಗೆ ಮಾಹಿತಿ ನೀಡಿರುವ ಅವರು, `ಇದುವರೆಗೂ ಕೈಗಾರಿಕಾ ನಿವೇಶನಗಳಲ್ಲಿ ಶೇಕಡ 65ರಷ್ಟು ಭೂಮಿಯನ್ನು ಮಾತ್ರ ಉದ್ಯಮದ ಕಟ್ಟಡ ನಿರ್ಮಾಣಕ್ಕೆ ಬಳಸಿಕೊಳ್ಳಲು ಅವಕಾಶವಿತ್ತು. ಈಗ ಇದನ್ನು ಶೇಕಡ 75ಕ್ಕೆ ಹೆಚ್ಚಿಸಿದ್ದೇವೆ. ಸರಕಾರದ ಈ ಕ್ರಮ ಚಾರಿತ್ರಿಕವಾಗಿದ್ದು, ಕೈಗಾರಿಕೆಗಳಿಗೋಸ್ಕರ ಹೆಚ್ಚು ಹೆಚ್ಚು ಜಮೀನು/ಭೂಮಿಯನ್ನು ಸ್ವಾಧೀನ ಪಡಿಸಿಕೊಳ್ಳುವುದು ತಪ್ಪಲಿದೆ. ಇದರ ಫಲವಾಗಿ, ಉದ್ಯಮಿಗಳು ತಮ್ಮ ಕೈಗಾರಿಕೆಗಳನ್ನು ಸ್ಥಾಪಿಸಲು ಬೇಕಾದ ಭೂಮಿಗೆಂದೇ ವಿಪರೀತ ಹಣ ಹಾಕಬೇಕಾಗಿದ್ದ ಹೊರೆ ಇಳಿಯಲಿದೆ. ಇನ್ನೊಂದೆಡೆಯಲ್ಲಿ ರೈತರ ಜಮೀನು ಕೂಡ ಹೆಚ್ಚಾಗಿ…
ದಕ್ಷಿಣ ಕನ್ನಡ: ಶಾಲಾ ಮಕ್ಕಳನ್ನು ಪ್ರವಾಸಕ್ಕೆ ಸರ್ಕಾರಿ ಸಾರಿಗೆ ಬಸ್ಸುಗಳಲ್ಲೇ ಕರೆದೊಯ್ಯಬೇಕು ಎಂಬುದು ನಿಯಮ. ಈ ನಿಯಮವನ್ನೇ ಮೀರಿದಂತ ಶಾಲೆಯೊಂದು, ಟಿಪ್ಪರ್ ನಲ್ಲಿ ವಿದ್ಯಾರ್ಥಿಗಳನ್ನು ಪ್ರವಾಸಕ್ಕೆ ಕರೆದೊಯ್ದಿದ್ದು ವಿವಾದಕ್ಕೆ ಕಾರಣವಾಗಿತ್ತು. ಈ ಹಿನ್ನಲೆಯಲ್ಲಿ ಪ್ರಭಾರ ಮುಖ್ಯ ಶಿಕ್ಷಕನನ್ನು ಅಮಾನತುಗೊಳಿಸಿ ಶಿಕ್ಷಣ ಇಲಾಖೆ ಆದೇಶಿಸಿದೆ. ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲ್ಲೂಕಿನ ಬಳೆಂಜ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳನ್ನು ಟಿಪ್ಪರ್ ಮೂಲಕ ಪ್ರವಾಸಕ್ಕೆ ಕರೆದೊಯ್ದಿದ್ದು ಆಕ್ರೋಶಕ್ಕೆ ಕಾರಣವಾಗಿತ್ತು. ಈ ಬಗ್ಗೆ ವೀಡಿಯೋ, ಪೋಟೋಗಳು ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಕೂಡ ಆಗಿದ್ದವು. ಈ ಹಿನ್ನಲೆಯಲ್ಲಿ ಬಳೆಂಜ ಪ್ರಾಥಮಿಕ ಶಾಲೆಯ ಪ್ರಭಾರ ಮುಖ್ಯ ಶಿಕ್ಷಕ ಕಿರಣ್ ಅವರನ್ನು ಅಮಾನತುಗೊಳಿಸಿ ಡಿಡಿಪಿಐ ಶಶಿಧರ್ ಆದೇಶ ಮಾಡಿದ್ದಾರೆ. ಆ ಮೂಲಕ ಟಿಪ್ಪರ್ ನಲ್ಲಿ ವಿದ್ಯಾರ್ಥಿಗಳನ್ನು ಪ್ರವಾಸಕ್ಕೆ ಕರೆದೊಯ್ದ ಶಿಕ್ಷಕನಿಗೆ ಶಿಕ್ಷಣ ಇಲಾಖೆ ಶಾಕ್ ನೀಡಿದೆ. https://kannadanewsnow.com/kannada/ahead-of-maha-shivaratri-on-feb-15-gba-orders-ban-on-animal-slaughter-meat-sale-in-bengaluru/ https://kannadanewsnow.com/kannada/big-news-possibility-of-permission-for-rcb-rhyme-at-chinnaswamy-stadium-under-several-conditions/














