Subscribe to Updates
Get the latest creative news from FooBar about art, design and business.
Author: kannadanewsnow09
ಕೆಎನ್ಎನ್ ಡಿಜಿಟಲ್ ಡೆಸ್ಕ್: ವಾಟರ್ ಹೀಟ್ ಮೂಲಕ ಬಿಸಿ ನೀರು ಕಾಯಿಸಿ ಉಪಯೋಗಿಸುವಾಗ ಎಚ್ಚರಿಕೆ ವಹಿಸಬೇಕಿದೆ. ಒಂದು ವೇಳೆ ವಾಟರ್ ಹೀಟರ್ ಬಳಸುವಾಗ ಈ ತಪ್ಪು ಮಾಡಿದರೇ ಪ್ರಾಣಾಪಾಯ ಉಂಟಾಗುವ ಸಾಧ್ಯತೆ ಇದೆ. ಗೀಸರ್ ಅಥವಾ ಇಮ್ಮರ್ಶನ್ ರಾಡ್ ಬಳಸಿ ನೀರನ್ನು ಅತಿಯಾಗಿ ಕಾಯಿಸಿ ಸ್ನಾನ ಮಾಡುವುದು ನಿಮ್ಮ ಚರ್ಮ ಮತ್ತು ಆರೋಗ್ಯದ ಮೇಲೆ ಗಂಭೀರ ಪ್ರಭಾವ ಬೀರಬಹುದು ಎಂದು ವೈದ್ಯಕೀಯ ತಜ್ಞರು ಎಚ್ಚರಿಸಿದ್ದಾರೆ. ಚರ್ಮದ ನೈಸರ್ಗಿಕ ತೇವಾಂಶಕ್ಕೆ ಕುತ್ತು ನಮ್ಮ ಚರ್ಮದ ಮೇಲೆ ನೈಸರ್ಗಿಕವಾಗಿ ತೇವಾಂಶದ ಪದರವೊಂದು (Moisture Barrier) ಇರುತ್ತದೆ, ಇದು ಬಾಹ್ಯ ಸೋಂಕುಗಳಿಂದ ಚರ್ಮವನ್ನು ಕಾಪಾಡುತ್ತದೆ. ನೀರನ್ನು ಅತಿಯಾದ ಉಷ್ಣಾಂಶಕ್ಕೆ ಕಾಯಿಸಿ ಸ್ನಾನ ಮಾಡುವುದರಿಂದ ಈ ರಕ್ಷಣಾ ಪದರವು ಹಾನಿಗೊಳಗಾಗುತ್ತದೆ. ಇದರಿಂದಾಗಿ ಈ ಕೆಳಗಿನ ಸಮಸ್ಯೆಗಳು ಎದುರಾಗಬಹುದು: ಚರ್ಮದ ಶುಷ್ಕತೆ: ಚರ್ಮವು ಅತಿಯಾಗಿ ಒಣಗುವುದು ಮತ್ತು ಬಿರುಕು ಬಿಡುವುದು. ತುರಿಕೆ ಮತ್ತು ಅಲರ್ಜಿ: ಚರ್ಮ ಕೆಂಪಾಗುವುದು ಮತ್ತು ನಿರಂತರ ತುರಿಕೆ ಕಾಣಿಸಿಕೊಳ್ಳುವುದು. ಸುಟ್ಟ ಗಾಯಗಳು: ವಿಶೇಷವಾಗಿ ಸಣ್ಣ ಮಕ್ಕಳು…
ನವದೆಹಲಿ: ಇಂದಿನ ವೇಗದ ಜೀವನಶೈಲಿಯಲ್ಲಿ ಸದಾ ಸುಸ್ತು ಮತ್ತು ನಿಶಕ್ತಿ ಸಾಮಾನ್ಯ ಎಂದು ಅನೇಕರು ನಿರ್ಲಕ್ಷಿಸುತ್ತಾರೆ. ಆದರೆ, ರಕ್ತದಲ್ಲಿನ ಹಿಮೋಗ್ಲೋಬಿನ್ (Hb) ಮಟ್ಟ ಕಡಿಮೆಯಾಗುವುದು ಇದಕ್ಕೆ ಪ್ರಮುಖ ಕಾರಣವಾಗಿರಬಹುದು. ಹಿಮೋಗ್ಲೋಬಿನ್ ಪ್ರಮಾಣ ಕುಂಠಿತಗೊಂಡಾಗ ಜೀವಕೋಶಗಳಿಗೆ ಆಮ್ಲಜನಕದ ಪೂರೈಕೆ ಕಡಿಮೆಯಾಗಿ, ದಣಿವು, ಉಸಿರಾಟದ ತೊಂದರೆ ಮತ್ತು ಪೇಲವ ಚರ್ಮದಂತಹ ಸಮಸ್ಯೆಗಳು ಕಾಣಿಸಿಕೊಳ್ಳುತ್ತವೆ. ನೈಸರ್ಗಿಕವಾಗಿ ರಕ್ತದ ಮಟ್ಟವನ್ನು ಹೆಚ್ಚಿಸಲು ಮತ್ತು ಆರೋಗ್ಯವಾಗಿರಲು ತಜ್ಞರು ಈ ಕೆಳಗಿನ 6 ಆಹಾರ ಸಲಹೆಗಳನ್ನು ನೀಡಿದ್ದಾರೆ: 1. ಕಬ್ಬಿಣಾಂಶಯುಕ್ತ (Iron-rich) ಆಹಾರಗಳ ಸೇವನೆ ದೇಹದಲ್ಲಿ ಹಿಮೋಗ್ಲೋಬಿನ್ ಉತ್ಪಾದನೆಗೆ ಕಬ್ಬಿಣಾಂಶ ಅತಿ ಮುಖ್ಯ. ನಿಮ್ಮ ಆಹಾರದಲ್ಲಿ ದಾಳಿಂಬೆ, ಖರ್ಜೂರ, ಬೀಟ್ರೂಟ್, ಕುಂಬಳಕಾಯಿ ಬೀಜ, ನುಗ್ಗೆ ಸೊಪ್ಪು, ಒಣದ್ರಾಕ್ಷಿ, ಎಳ್ಳು, ಮೊಟ್ಟೆ, ಮೀನು ಮತ್ತು ಹಸಿರು ಎಲೆ ತರಕಾರಿಗಳನ್ನು ಹೆಚ್ಚಾಗಿ ಬಳಸಿ. 2. ವಿಟಮಿನ್ ಬಿ12 ಮರೆಯಬೇಡಿ ಕೆಂಪು ರಕ್ತಕಣಗಳ ಉತ್ಪಾದನೆಗೆ ವಿಟಮಿನ್ ಬಿ12 ಇಂಧನದಂತೆ ಕೆಲಸ ಮಾಡುತ್ತದೆ. ಹಾಲು, ಮೊಸರು, ಚೀಸ್ನಂತಹ ಡೈರಿ ಉತ್ಪನ್ನಗಳು ಮತ್ತು ಮೊಟ್ಟೆಗಳು ಬಿ12 ನ…
ಹುಬ್ಬಳ್ಳಿ: ಜಿಲ್ಲೆಯಲ್ಲಿ ಕಟ್ಟಡ ನಿರ್ಮಾಣದ ವೇಳೆಯಲ್ಲಿ ಕಾರ್ಮಿಕರಿಬ್ಬದು ಬಿದ್ದು ಸಾವನ್ನಪ್ಪಿರುವಂತ ಧಾರುಣ ಘಟನೆ ನಡೆದಿದೆ. ಹುಬ್ಬಳ್ಳಿಯ ಕೆ ಎಲ್ ಇ ಮೆಡಿಕಲ್ ಕಾಲೇಜಿನಲ್ಲಿ ಈ ಘಟನೆ ನಡೆದಿದೆ. ಮೃತ ಕಾರ್ಮಿಕರನ್ನು ಕುಂದಗೋಳ ತಾಲ್ಲೂಕಿನ ಹೊತ್ತಿಗೇರಿಯ ಮಲ್ಲೇಶ್(45) ಹಾಗೂ ಅಣ್ಣಿಗೇರಿಯ ವರ್ಷ ಅಕ್ಬರ ಸಂಗಟಿ(36) ಎಂಬುದಾಗಿ ಗುರುತಿಸಲಾಗಿದೆ. ಮಂಗಳವಾರ ಈ ಘಟನೆ ನಡೆದಿದ್ದು, ನಿರ್ಮಾಣ ಕಾಮಗಾರಿ ವೇಳೆ ಸಮತೋಲನ ತಪ್ಪಿ ಕಾರ್ಮಿಕರು ಎತ್ತರದಿಂದ ಕೆಳಗೆ ಬಿದ್ದಿದ್ದಾರೆ ಎನ್ನಲಾಗಿದೆ. ಗಾಯಗೊಂಡ ಅವರನ್ನು ತಕ್ಷಣವೇ ಸಮೀಪದ ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ, ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ. ನಿರ್ಮಾಣ ಕಾರ್ಯದಲ್ಲಿ ಅಗತ್ಯ ಭದ್ರತಾ ಕ್ರಮಗಳನ್ನು ಪಾಲಿಸಲಾಗಿತ್ತೇ ಎಂಬುದರ ಕುರಿತು ತನಿಖೆ ನಡೆಯುತ್ತಿದೆ. ಈ ದುರ್ಘಟನೆಯಿಂದ ಕಾಲೇಜು ಆವರಣದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ. ಮೃತ ಕಾರ್ಮಿಕರ ಕುಟುಂಬಗಳಿಗೆ ಪರಿಹಾರ ನೀಡುವಂತೆ ಸ್ಥಳೀಯರು ಆಗ್ರಹಿಸಿದ್ದಾರೆ. https://kannadanewsnow.com/kannada/good-news-for-rural-teachers-without-merit-in-the-state-government-orders-revision-of-salary-scale-payment-of-arrears/ https://kannadanewsnow.com/kannada/government-has-not-filled-2-94-lakh-vacant-posts-in-karnataka-union-minister-h-d-kumaraswamy-concerned/
ಬೆಂಗಳೂರು : ನಾನಾ ಕೈಗಾರಿಕಾ ವಲಯಗಳ ಭವಿಷ್ಯದ ಹಾದಿ ಹೇಗಿರಬೇಕು ಮತ್ತು ಸರಕಾರವು ಈ ನಿಟ್ಟಿನಲ್ಲಿ ತೆಗೆದುಕೊಳ್ಳಬೇಕಿರುವ ಕ್ರಮಗಳ ಸ್ವರೂಪ ಯಾವುದಾಗಿರಬೇಕು ಎಂದು ತಿಳಿದುಕೊಳ್ಳುವ ಉದ್ದೇಶದಿಂದ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ ಬಿ ಪಾಟೀಲ ಸೋಮವಾರ ಏರೋಸ್ಪೇಸ್ ಮತ್ತು ರಕ್ಷಣೆ, ಮಶೀನ್ ಟೂಲ್ಸ್, ಆಟೋ/ಇ.ವಿ, ಮತ್ತು ಪರಿಸರಸ್ನೇಹಿ ಇಂಧನ ವಲಯಗಳ ವಿಷನ್ ಗ್ರೂಪ್ ಗಳ ಮಹತ್ತ್ವದ ಸಭೆ ನಡೆಸಿದರು. ಖನಿಜ ಭವನದಲ್ಲಿ ಇಡೀ ದಿನ ನಡೆದ ಸಭೆಗಳಲ್ಲಿ ಪ್ರಮುಖ್ಯ ಉದ್ಯಮಿಗಳು ಹಾಗೂ ಅವರ ಪ್ರತಿನಿಧಿಗಳು ಭಾಗವಹಿಸಿದ್ದರು. ಕೆಲವರು ವರ್ಚುವಲ್ ಮೂಲಕ ಭಾಗವಹಿಸಿದ್ದರು. ಕೈಗಾರಿಕಾ ಇಲಾಖೆ ಪ್ರಧಾನ ಕಾರ್ಯದರ್ಶಿ ಸೆಲ್ವಕುಮಾರ್, ಆಯುಕ್ತೆ ಗುಂಜನ್ ಕೃಷ್ಣ, ಐಕೆಎಫ್ ಸಿಇಒ ಜೋತ್ಸ್ನಾ, ಉದ್ಯೋಗ ಮಿತ್ರ ಎಂಡಿ ದೊಡ್ಡ ಬಸವರಾಜು ಸೇರಿದಂತೆ ಇತರರು ಇದ್ದರು. ಈ ಬಗ್ಗೆ ಮಾತನಾಡಿರುವ ಸಚಿವ ಪಾಟೀಲ ಅವರು, ಇಡೀ ದೇಶದ ವೈಮಾಂತರಿಕ್ಷ ಮತ್ತು ರಕ್ಷಣಾ ಉದ್ಯಮಗಳ ಕ್ಷೇತ್ರದಲ್ಲಿ ಕರ್ನಾಟಕ ಮುಂಚೂಣಿಯಲ್ಲಿದೆ. ಜಪಾನಿನಲ್ಲಿ 2028ರ ಹೊತ್ತಿಗೆ ಸುಝುಕಿ ಮತ್ತು ಟೊಯೊಟಾ…
ಬೆಂಗಳೂರು: ಶಿವಮೊಗ್ಗ ನಗರದ ಸಮೀಪದ ಊರುಗಡೂರಿನಲ್ಲಿ ಶಾಲಾ ವಿದ್ಯಾರ್ಥಿಯನ್ನು ಥಳಿಸಿ, ಹತ್ಯೆಗೈದಿರುವುದನ್ನು ತೀವ್ರವಾಗಿ ಖಂಡಿಸುತ್ತೇನೆ. ಮೃತರ ಕುಟುಂಬಕ್ಕೆ 15 ಲಕ್ಷವನ್ನು ಸರ್ಕಾರದಿಂದ ಪರಿಹಾರವಾಗಿ ನೀಡುವುದಾಗಿ ಸಿಎಂ ಸಿದ್ಧರಾಮಯ್ಯ ಘೋಷಿಸಿದ್ದಾರೆ. ಇಂದು ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವಂತ ಅವರು, ಮೃತ ವಿದ್ಯಾರ್ಥಿಯ ಕುಟುಂಬಕ್ಕೆ ನೆರವಾಗುವುದರ ಜೊತೆಗೆ, ಕೃತ್ಯದಲ್ಲಿ ಭಾಗಿಯಾದ ಪ್ರತಿಯೊಬ್ಬ ಅಪರಾಧಿಗೂ ಕಾನೂನಿನ ಮೂಲಕ ತಕ್ಕ ಶಿಕ್ಷೆಯಾಗುವಂತೆ ಕ್ರಮವಹಿಸಿ, ಆತನ ಸಾವಿಗೆ ನ್ಯಾಯ ಕೊಡಿಸಲು ಪ್ರಾಮಾಣಿಕ ಪ್ರಯತ್ನ ಮಾಡಲಿದ್ದೇವೆ ಎಂದಿದ್ದಾರೆ. ಕೊಲೆಯಲ್ಲಿ ಭಾಗಿಯಾದವರು ಇನ್ನೂ ಚಿಕ್ಕಪ್ರಾಯದ ಹುಡುಗರು ಎಂದು ಕೇಳಿ ದಿಗ್ಭ್ರಮೆಯಾಯಿತು. ಚೆನ್ನಾಗಿ ಓದಿ, ಭವಿಷ್ಯ ರೂಪಿಸಿಕೊಂಡು, ಕುಟುಂಬಕ್ಕೆ ಆಸರೆಯಾಗಬೇಕಿದ್ದ ಮಕ್ಕಳು ದುಶ್ಚಟಗಳಿಗೆ ಬಲಿಯಾಗಿ, ಹೀಗೆ ಕಾನೂನುಬಾಹಿರ ಕೃತ್ಯಗಳಲ್ಲಿ ತೊಡಗುವುದು ದುರದೃಷ್ಟಕರ ಎಂದು ತಿಳಿಸಿದ್ದಾರೆ. ಕೊಲೆಯ ಹಿಂದಿನ ಉದ್ದೇಶವೇನೇ ಇರಲಿ, ಕೊಲೆಗೈದವರು ಯಾರೇ ಆಗಿರಲಿ, ಅವರನ್ನು ಕಾನೂನಿನ ಮೂಲಕ ಹೆಡೆಮುರಿ ಕಟ್ಟಿ, ಭವಿಷ್ಯದಲ್ಲಿ ಇಂತಹ ಕೃತ್ಯಗಳನ್ನು ಎಸಗುವ ಮುನ್ನ ನೂರು ಬಾರಿ ಯೋಚಿಸಬೇಕಾದಂತಹ ಸ್ಥಿತಿ ನಿರ್ಮಾಣ ಮಾಡುವಂತೆ ಪೊಲೀಸ್ ಇಲಾಖೆಗೆ ಸೂಚನೆ ನೀಡಿದ್ದೇನೆ.…
ನವದೆಹಲಿ: ರಾಜ್ಯದಲ್ಲಿ ಖಾಲಿ ಇರುವ ಸರಕಾರಿ ಹುದ್ದೆಗಳನ್ನು ಭರ್ತಿ ಮಾಡದಿರುವ ಬಗ್ಗೆ ಕಳವಳ ವ್ಯಕ್ತಪಡಿಸಿರುವ ಕೇಂದ್ರ ಸಚಿವರಾದ ಹೆಚ್.ಡಿ. ಕುಮಾರಸ್ವಾಮಿ ಅವರು; ನಿರುದ್ಯೋಗಿ ಯುವಜನರ ಪ್ರತಿಭಟನೆಯನ್ನು ಲಘುವಾಗಿ ಪರಿಗಣಿಸಬೇಡಿ ಎಂದು ಸರಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ. ಈ ಬಗ್ಗೆ ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿರುವ ಅವರು; ಧಾರವಾಡದಲ್ಲಿ ಅಸಂಖ್ಯಾತ ಉದ್ಯೋಗಾಕಾಂಕ್ಷಿಗಳು ಬೀದಿಗೆ ಇಳಿದಿರುವುದನ್ನು ರಾಜ್ಯ ಸರಕಾರ ಲಘುವಾಗಿ ಪರಿಗಣಿಸಬಾರದು. ಸರಕಾರಿ ಹುದ್ದೆಗಳನ್ನು ಕಾಲ ಕಾಲಕ್ಕೆ ತುಂಬದೇ ನಿರ್ಲಕ್ಷಿಸಿದ ಪರಿಣಾಮವೇ ಯುವಜನರು ಪ್ರತಿಭಟನೆ ದಾರಿ ತುಳಿಯಲು ಕಾರಣ ಎಂದಿದ್ದಾರೆ. ಅಲ್ಲದೆ; ಯುವಜನರ ಪ್ರತಿಭಟನೆ ಶಾಂತಿಯುತವಾಗಿರಲಿ, ನಿಮ್ಮೊಂದಿಗೆ ನಾನಿದ್ದೇನೆ ಎಂದು ಸಚಿವರು ಬೆಂಬಲ ಸೂಚಿಸಿದ್ದಾರೆ. ರಾಜ್ಯದಲ್ಲಿ 2.94 ಲಕ್ಷ ಸರಕಾರಿ ಹುದ್ದೆಗಳು ಖಾಲಿ ಬಿದ್ದಿವೆ. ಸಂಪುಟ ದರ್ಜೆ ಹುದ್ದೆಗಳು ಮಾತ್ರ ಸೂಪರ್ʼಫಾಸ್ಟ್ ಆಗಿ ಭರ್ತಿ ಆಗುತ್ತಿವೆ. ಕಾಂಗ್ರೆಸ್ ಸರಕಾರದ ಆದ್ಯತೆ ಯಾವ ರೀತಿಯಲ್ಲಿದೆ ಎಂಬುದು ಅರ್ಥವಾಗುತ್ತದೆ. ಆರ್.ವಿ. ದೇಶಪಾಂಡೆ ಅವರ ಅಧ್ಯಕ್ಷತೆಯ ಕರ್ನಾಟಕ ಆಡಳಿತ ಸುಧಾರಣೆ ಆಯೋಗದ ವರದಿಯಂತೆ ರಾಜ್ಯದಲ್ಲಿ 7 ಲಕ್ಷ ನಿರುದ್ಯೋಗಿಗಳಿದ್ದಾರೆ. ಇವರೆಲ್ಲರೂ…
ವಾಸ್ತು, ಇತ್ತೀಚೆಗೆ ನಾವು ಈ ವಾಸ್ತು ಬಗ್ಗೆ ಹೆಚ್ಚು ಮಾತನಾಡುತ್ತಿದ್ದೇವೆ. ಆದರೆ ವಾಸ್ತು ಇಂದು ನಿನ್ನೆಯದಲ್ಲ. ವಾಸ್ತು ರಾಜರ ಕಾಲದಿಂದಲೂ ಇದೆ. ವಾಸ್ತುವನ್ನು ನಂಬುವವರು ಈ ಪರಿಹಾರವನ್ನು ಅನುಸರಿಸಬಹುದು. ಅನೇಕರ ಮನೆಯಲ್ಲಿ ವಾಸ್ತು ಸರಿಯಾಗಿ ಹೊಂದಿಸದೇ ಇರುವುದರಿಂದ ಕುಟುಂಬದಲ್ಲಿ ಕೆಲವು ಸಮಸ್ಯೆಗಳು ಉದ್ಭವಿಸುತ್ತವೆ. ಕೆಲವರಿಗೆ ಮನೆಯಲ್ಲಿ ನೆಮ್ಮದಿ ಕಳೆದುಕೊಳ್ಳಬಹುದು, ವ್ಯಾಪಾರದಲ್ಲಿ ನಷ್ಟ ಉಂಟಾಗಬಹುದು, ಕೆಲವರಿಗೆ ಮನೆಯಲ್ಲಿ ಜಗಳಗಳು ಕೂಡ ಬರಬಹುದು. ಕೆಲವು ಮನೆಗಳಲ್ಲಿ ವಾಸ್ತು ಸರಿಯಿಲ್ಲದ ಕಾರಣ ಕುಟುಂಬ ಎರಡು ಹೋಳಾಗುತ್ತದೆ. ಸಣ್ಣಪುಟ್ಟ ವಾಸ್ತು ಸಮಸ್ಯೆಯಾಗಿದ್ದರೆ ಅದನ್ನು ಸುಲಭವಾಗಿ ಸರಿಪಡಿಸಬಹುದು. ಶ್ರೀ ಸಿಗಂದೂರು ಚೌಡೇಶ್ವರಿ ಜ್ಯೋತಿಷ್ಯ ಪೀಠ ನಂ 1ಕೇರಳ ಕೊಳ್ಳೇಗಾಲದ ಮಹಾ ಮಾಂತ್ರಿಕ ಜ್ಯೋತಿಷ್ಯರು ವಿದ್ವಾನ್ ವಿದ್ಯಾಧರ್ ತಂತ್ರಿ ನಂ:- 9686268564 ನಂ 1ವಶೀಕರಣ ಸ್ಪೆಷಲಿಸ್ಟ್ ಒಂದು ಕರೆಯಲ್ಲಿ ಪರಿಹಾರ ತಿಳಿಸುತ್ತಾರೆ ತಾವು ಎಷ್ಟೋ ಜ್ಯೋತಿಷ್ಯರಲ್ಲಿ ಕೇಳಿಯು ಪರಿಹಾರ ಸಿಗದೇ ಮನನೊಂದಿದ್ದರೆ ಪರಿಹಾರ ನಿಮ್ಮ ಸಮಸ್ಯೆಗಳಾದ ಅತ್ತೆ-ಸೊಸೆ ಕಿರಿಕಿರಿ, ಪ್ರೀತಿಯಲ್ಲಿ ನಂಬಿ ಮೋಸ, ಇಷ್ಟ ಪಟ್ಟವರು ನಿಮ್ಮಂತೆ ಆಗಲು, ಗಂಡ ಹೆಂಡತಿ ಕಿರಿಕಿರಿ,…
ಬೆಂಗಳೂರು: ಕರ್ನಾಟಕ ಹೈಕೋರ್ಟ್ ನಲ್ಲಿ ಖಾಲಿ ಇರುವಂತ ವಿವಿಧ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ ನೀಡಿದೆ. ವಿವಿಧ ವೃಂದದ ಹುದ್ದೆಗಳನ್ನು ಸೃಜಿಸೋದಕ್ಕೆ ಮಂಜೂರಾತಿ ನೀಡುವ ಮೂಲಕ ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್ ನೀಡಿದೆ. ಈ ಸಂಬಂಧ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯಿಂದ ನಡವಳಿಯನ್ನು ಹೊರಡಿಸಲಾಗಿದ್ದು, ರಿಜಿಸ್ಟ್ರಾರ್ ಜನರಲ್, ಕರ್ನಾಟಕ ಉಚ್ಚ ನ್ಯಾಯಾಲಯ, ಬೆಂಗಳೂರು ಇವರ ಪತ್ರಗಳಲ್ಲಿ, ಕರ್ನಾಟಕ ಉಚ್ಚ ನ್ಯಾಯಾಲಯ ಬೆಂಗಳೂರು, ಕಲಬುರಗಿ ಹಾಗೂ ಧಾರವಾಡ ಪೀಠಗಳಲ್ಲಿ ಪುಕರಣಗಳು ಹೆಚ್ಚಿನ ಪ್ರಮಾಣದಲ್ಲಿ ಬಾಕಿಯಿದ್ದು ಹಾಗೂ ಪ್ರತಿ ವರ್ಷ ಪಕರಣಗಳ ದಾಖಲಾತಿಗಳ ಸಂಖ್ಯೆಯೂ ಹೆಚ್ಚುತ್ತಿದೆ. ಇದರಿಂದ ನ್ಯಾಯಾಲಯಗಳ ಕಾರ್ಯ ನಿರ್ವಹಣೆಯೂ ಸಹ ಕಾಲಕಾಲಕ್ಕೆ ಹೆಚ್ಚುತ್ತಿದೆ. ಹಾಲಿ ಸಿಬ್ಬಂದಿಗಳಿಗೆ ಪುಕರಣಗಳ ದಾಖಲಾತಿ ಮತ್ತು ವಿಲೇವಾರಿ, ಲೋಕ ಅದಾಲತ್ಗಳು ಮತ್ತು ಮಧ್ಯಸ್ಥಿಕೆ ಚಟುವಟಿಕೆಗಳಿಂದಾಗಿ ಹೆಚ್ಚಿನ ಕೆಲಸದ ಹೊರೆ ಎದುರಾಗಿದ್ದು, ನಿಗದಿತ ಸಮಯದೊಳಗೆ ಕೆಲಸ ನಿರ್ವಹಿಸುವುದು ತುಂಬಾ ಕಷ್ಟಕರವಾಗಿದೆ ಎಂದಿದೆ. ಆದ್ದರಿಂದ ನ್ಯಾಯಾಲಯದ ವಿಚಾರಣೆಗಳು ಸುಗಮವಾಗಿ ನಡೆಯಲು ಪ್ರಧಾನ ಪೀಠ, ಕಲಬುರಗಿ ಹಾಗೂ ಧಾರವಾಡ ಪೀಠಗಳಲ್ಲಿ…
ಬೆಂಗಳೂರು: ಜಾಗತಿಕ ಅಭಿವೃದ್ದಿಯನ್ನು ಮುನ್ನಡೆಸುವ ಪ್ರಮುಖ ಒಕ್ಕೂಟವಾಗಿರುವ ʼಬ್ರಿಕ್ಸ್” ರಾಷ್ಟ್ರಗಳು ಕ್ವಾಂಟಮ್ ತಂತ್ರಜ್ಞಾನದ ಅಭಿವೃದ್ದಿಗೆ ಪರಸ್ಪರ ಸಹಕಾರಕ್ಕೆ ಮುಂದಾಗಬೇಕು ಎಂದು ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವರಾದ ಎನ್.ಎಸ್. ಭೋಸರಾಜು ಕರೆ ನೀಡಿದರು. ಇಂದು ವಿಧಾನಸೌಧದಲ್ಲಿ ತಮ್ಮ ನ್ನು ಭೇಟಿಯಾದ ಬ್ರೆಜಿಲ್ನ ಸಾರ್ವಜನಿಕ ಸೇವೆಗಳ ನಿರ್ವಹಣೆ ಮತ್ತು ನಾವೀನ್ಯತೆ ಸಚಿವೆಯಾದ ಎಸ್ತರ್ ಡ್ವೆಕ್ (Esther Dweck) ಅವರ ನೇತೃತ್ವದ ಬ್ರೆಜಿಲ್ ದೇಶದ ಉನ್ನತ ಮಟ್ಟದ ನಿಯೋಗದೊಂದಿಗೆ ಸಭೆ ನಡೆಸಿ ಅವರು ಮಾತನಾಡಿದರು. “ಆಸಿಯಾನ್ (ASEAN) ನಂತಹ ಇತರ ಅಂತರರಾಷ್ಟ್ರೀಯ ಒಕ್ಕೂಟಗಳು ಈಗಾಗಲೇ ಕ್ವಾಂಟಮ್ ಶೃಂಗಸಭೆಗಳನ್ನು ಆಯೋಜಿಸುತ್ತಿವೆ. ಬ್ರಿಕ್ಸ್ ಸದಸ್ಯರಾಗಿ ನಾವು ಕೃಷಿ, ಔಷಧ ಸಂಶೋಧನೆ ಜಲಸಂಪನ್ಮೂಲ ನಿರ್ವಹಣೆ, ಹವಾಮಾನ ಮುನ್ಸೂಚನೆ ಮತ್ತು ಪ್ರವಾಹ ನಿರ್ವಹಣೆಯನ್ನು ಸುಧಾರಿಸಲು ಕ್ವಾಂಟಮ್ ತಂತ್ರಜ್ಞಾನವನ್ನು ಬಳಸುವ ನಿಟ್ಟಿನಲ್ಲಿ ಒಟ್ಟಾಗಿ ಕೆಲಸ ಮಾಡಬೇಕು. ಆ ಮೂಲಕ ನಮ್ಮ ಸಮಸ್ಯೆಗಳನ್ನು ಜಂಟಿಯಾಗಿ ಬಗೆಹರಿಸಿಕೊಂಡು ದೇಶದ ಅಭಿವೃದ್ದಿಗೆ ಮುಂದಾಗಬೇಕಾಗಿದೆ” ಎಂದು ಸಚಿವರು ತಿಳಿಸಿದರು. ರಾಜ್ಯದ ಪ್ರಮುಖ ಸಾಧನೆಗಳನ್ನು ವಿವರಿಸಿದ ಸಚಿವರು,…
ಬೆಂಗಳೂರು: UGCET-26: ಸಾಮಾನ್ಯ ಪ್ರವೇಶ ಪರೀಕ್ಷೆಗೆ (ಸಿಇಟಿ-2026) ಅರ್ಜಿ ಸಲ್ಲಿಕೆಯ ಕೊನೆಯ ದಿನಾಂಕದ ನಂತರವೂ ಮಾರ್ಚ್ 30ರವರೆಗೆ ಅರ್ಜಿಯಲ್ಲಿನ ದೋಷಗಳ ತಿದ್ದುಪಡಿಗೆ ಕಾಲಾವಕಾಶ ನೀಡಲಾಗಿದೆ. ಅರ್ಜಿ ಸಲ್ಲಿಸಲು ಸದ್ಯ ಫೆ.27 ಕೊನೆ ದಿನ. ಶುಲ್ಕ ಪಾವತಿಗೆ ಮಾರ್ಚ್ 3 ಕೊನೆ ದಿನ. ಈ ನಿಗದಿತ ದಿನಾಂಕದೊಳಗೆ ಅರ್ಜಿ ಸಲ್ಲಿಸಿದವರು ಅಗತ್ಯ ಇದ್ದರೆ ತಿದ್ದುಪಡಿ ಮಾಡಿಕೊಳ್ಳಬಹುದು. ಆದರೆ, ಅರ್ಜಿ ಸಲ್ಲಿಕೆಯ ದಿನಾಂಕದಲ್ಲಿ ಯಾವುದೇ ವಿಸ್ತರಣೆ ಇರುವುದಿಲ್ಲ. ಎಸ್ ಸಿ ಒಳಮೀಸಲಾತಿ RD ಕಡ್ಡಾಯ ಪರಿಶಿಷ್ಟ ಜಾತಿಯ ಅಭ್ಯರ್ಥಿಗಳು ಆರ್ ಡಿ ಸಂಖ್ಯೆ ಇರುವ ಪ್ರವರ್ಗ-ಎ, ಪ್ರವರ್ಗ-ಬಿ ಮತ್ತು ಪ್ರವರ್ಗ-ಸಿ ಎಂದು ಮುದ್ರಿತವಾಗಿರುವ ಪ್ರಮಾಣ ಪತ್ರವನ್ನು ಸಂಬಂಧಿಸಿದ ತಹಶೀಲ್ದಾರರಿಂದ ಪಡೆದು ಅರ್ಜಿಯ ಪೋರ್ಟಲ್ ನಲ್ಲಿ ಎಡಿಟಿಂಗ್ ಮಾಡುವ ಮೂಲಕ ಆರ್ ಡಿ ಸಂಖ್ಯೆಯನ್ನು ದಾಖಲಿಸಬೇಕು. ಇದಕ್ಕಾಗಿ ಎಡಿಟಿಂಗ್ ಅರ್ಜಿ ಪೋರ್ಟಲ್ ಅನ್ನು ಮಾರ್ಚ್ 30ರವರೆಗೆ ತೆರೆದಿರುತ್ತದೆ. ಸದ್ಯ 40 ಸಾವಿರ ಪರಿಶಿಷ್ಟ ಜಾತಿಯ ಅಭ್ಯರ್ಥಿಗಳು ಅರ್ಜಿ ಸಲ್ಲಿಸಿದ್ದು, ಅದರಲ್ಲಿ ಕೇವಲ 20 ಸಾವಿರ ಅಭ್ಯರ್ಥಿಗಳು…














