Subscribe to Updates
Get the latest creative news from FooBar about art, design and business.
Author: kannadanewsnow09
ನವದೆಹಲಿ: ದೆಹಲಿಯ ಶಹದಾರ ಜಿಲ್ಲೆಯ ವಿವೇಕ್ ವಿಹಾರ್ ಪ್ರದೇಶದಲ್ಲಿ ಭಾನುವಾರ (ಮೇ 3, 2026) ಬೆಳಗಿನ ಜಾವ ಸಂಭವಿಸಿದ ಭೀಕರ ಅಗ್ನಿ ಅವಘಡದಲ್ಲಿ ಕನಿಷ್ಠ 9 ಮಂದಿ ಸಾವನ್ನಪ್ಪಿದ್ದು, ಈ ಘಟನೆಗೆ ಪ್ರಧಾನಿ ನರೇಂದ್ರ ಮೋದಿ ತೀವ್ರ ಆಘಾತ ಮತ್ತು ವ್ಯಕ್ತಪಡಿಸಿದ್ದಾರೆ. https://twitter.com/PMOIndia/status/2050904879896629675 ಸುದ್ದಿಯ ಪ್ರಮುಖ ಅಂಶಗಳು: ಪ್ರಧಾನಿ ಸಂತಾಪ: “ದೆಹಲಿಯ ಶಹದಾರ ಜಿಲ್ಲೆಯಲ್ಲಿ ಸಂಭವಿಸಿದ ಅಗ್ನಿ ಅವಘಡದಲ್ಲಿ ಜೀವಹಾನಿಯಾಗಿರುವುದು ಅತ್ಯಂತ ದುರದೃಷ್ಟಕರ ಮತ್ತು ನೋವಿನ ಸಂಗತಿ. ಮೃತರ ಕುಟುಂಬಗಳಿಗೆ ನನ್ನ ಸಾಂತ್ವನಗಳು. ಗಾಯಗೊಂಡವರು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಪ್ರಾರ್ಥಿಸುತ್ತೇನೆ,” ಎಂದು ಪ್ರಧಾನಿ ಮೋದಿ ಸಾಮಾಜಿಕ ಜಾಲತಾಣ ‘X’ ನಲ್ಲಿ ಪೋಸ್ಟ್ ಮಾಡಿದ್ದಾರೆ. ಪರಿಹಾರ ಘೋಷಣೆ: ದುರಂತದಲ್ಲಿ ಮೃತಪಟ್ಟವರ ಕುಟುಂಬಗಳಿಗೆ ಪ್ರಧಾನ ಮಂತ್ರಿ ರಾಷ್ಟ್ರೀಯ ಪರಿಹಾರ ನಿಧಿಯಿಂದ (PMNRF) ತಲಾ 2 ಲಕ್ಷ ರೂಪಾಯಿ ಹಾಗೂ ಗಾಯಗೊಂಡವರಿಗೆ 50,000 ರೂಪಾಯಿ ಪರಿಹಾರವನ್ನು ಪ್ರಧಾನಿ ಘೋಷಿಸಿದ್ದಾರೆ. ಘಟನೆಯ ಹಿನ್ನೆಲೆ: ಭಾನುವಾರ ಮುಂಜಾನೆ ಸುಮಾರು 4 ಗಂಟೆಗೆ ನಾಲ್ಕು ಅಂತಸ್ತಿನ ವಸತಿ ಕಟ್ಟಡದಲ್ಲಿ ಬೆಂಕಿ…
ನವದೆಹಲಿ: ವಿಶ್ವದ ವಿಭಿನ್ನ ರುಚಿಗಳನ್ನು ಪರಿಚಯಿಸುವ ಖ್ಯಾತ ಫುಡ್ ಗೈಡ್ ‘ಟೇಸ್ಟ್ ಅಟ್ಲಾಸ್’ (TasteAtlas) ಏಪ್ರಿಲ್ ತಿಂಗಳ ‘ವಿಶ್ವದ ಟಾಪ್ 100 ಪ್ಯಾನ್ಕೇಕ್ಗಳ’ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಆಶ್ಚರ್ಯಕರ ಸಂಗತಿಯೆಂದರೆ, ಈ ಜಾಗತಿಕ ಪಟ್ಟಿಯಲ್ಲಿ ಭಾರತದ 11 ಜನಪ್ರಿಯ ಖಾದ್ಯಗಳು ಸ್ಥಾನ ಪಡೆದು ದೇಶದ ಕೀರ್ತಿ ಹೆಚ್ಚಿಸಿವೆ. ಪಾಶ್ಚಿಮಾತ್ಯ ದೇಶಗಳಲ್ಲಿ ‘ಪ್ಯಾನ್ಕೇಕ್’ ಎಂದರೆ ಸಿಹಿಯಾದ ತಿಂಡಿ ಎಂಬ ಭಾವನೆ ಇದೆ. ಆದರೆ ಟೇಸ್ಟ್ ಅಟ್ಲಾಸ್ ತನ್ನ ಪಟ್ಟಿಯಲ್ಲಿ ಭಾರತದ ದೋಸೆಗಳನ್ನು ಈ ವರ್ಗಕ್ಕೆ ಸೇರಿಸಿದೆ. ಹದವಾಗಿ ಹುದುಗು (Fermentation) ಬಂದ ಹಿಟ್ಟು ಮತ್ತು ತಯಾರಿಕೆಯ ವಿಶಿಷ್ಟ ಶೈಲಿಯಿಂದಾಗಿ ಭಾರತೀಯ ಖಾದ್ಯಗಳು ಜಾಗತಿಕ ಮಟ್ಟದಲ್ಲಿ ಗಮನ ಸೆಳೆದಿವೆ. ಪಟ್ಟಿಯಲ್ಲಿ ಸ್ಥಾನ ಪಡೆದ ಭಾರತೀಯ ಖಾದ್ಯಗಳು: ಜಾಗತಿಕ ಮಟ್ಟದಲ್ಲಿ ಗುರುತಿಸಿಕೊಂಡಿರುವ ಭಾರತೀಯ ‘ಪ್ಯಾನ್ಕೇಕ್’ಗಳು ಇಲ್ಲಿವೆ: ಮಸಾಲ ದೋಸೆ: ಜಾಗತಿಕ ಮಟ್ಟದಲ್ಲಿ 6ನೇ ಸ್ಥಾನ ಪಡೆಯುವ ಮೂಲಕ ಭಾರತದ ಹೆಮ್ಮೆಯಾಗಿ ಹೊರಹೊಮ್ಮಿದೆ. ದೋಸೆ (ತಮಿಳುನಾಡು): 15ನೇ ಸ್ಥಾನ. ಪೇಪರ್ ದೋಸೆ: 35ನೇ ಸ್ಥಾನ. ಅಪ್ಪಂ (ಕೇರಳ):…
ಮಂಡ್ಯ : ಜಿಲ್ಲೆಯಲ್ಲಿನ ಪುಸ್ತಕದ ಮನೆಯೊಂದು ಜಿಲ್ಲೆ ಮತ್ತು ರಾಜ್ಯವನ್ನು ದಾಟಿ ರಾಷ್ಟ್ರದ ರಾಜಧಾನಿ ದೆಹಲಿವರೆವಿಗೂ ತಲುಪಿರುವುದು ಶ್ಲಾಘನೀಯ ಕಾರ್ಯವೆಂದು ಪದ್ಮಶ್ರೀ ಪುರಸ್ಕೃತ ಅಂಕೇಗೌಡ ದಂಪತಿಗಳ ಸಾಧನೆ ಅಪಾರವೆಂದು ವಿಶ್ರಾಂತ ಐಎಎಸ್ ಅಧಿಕಾರಿ ಹಾಗೂ ರಾಯಚೂರು ಸಂಸದ ಜಿ.ಕುಮಾರನಾಯಕ್ ಅಭಿಪ್ರಾಯ ಪಟ್ಟರು. ಮದ್ದೂರು ನಗರದ ಎಂ.ಎಚ್.ಚನ್ನೇಗೌಡ ವಿದ್ಯಾಸಂಸ್ಥೆ ವತಿಯಿಂದ ಎಚ್.ಕೆ.ವೀರಣ್ಣಗೌಡರ 128ನೇ ಜಯಂತಿ ಹಾಗೂ ಮಾಹಿತಿ ತಂತ್ರಜ್ಞಾನದ ಹರಿಹಾರ ಡಾ| ಎಸ್.ಎಂ.ಕೃಷ್ಣರವರ 95ನೇ ಜನ್ಮದಿನದ ಅಂಗವಾಗಿ ಎಚ್.ಕೆ.ವೀರಣ್ಣಗೌಡ ಪ್ರಶಸ್ತಿ ವಿತರಣಾ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಎಚ್.ಕೆ.ವೀರಣ್ಣಗೌಡ ಅವರ ಜೀವನ ಚರಿತ್ರೆಯೇ ಒಂದು ವಿಶ್ವ ವಿದ್ಯಾಲಯದಂತಿದ್ದು ಸ್ವಾತಂತ್ರ್ಯದ ಕಿಚ್ಚು ಹಚ್ಚಲು ಪತ್ರಿಕೆಯನ್ನೇ ಹೊರತಂದ ದುರೀಣರೆಂದು ಬಣ್ಣಿಸಿದರು. ಸ್ವಾತಂತ್ರ್ಯದ ಕಿಚ್ಚು ಹೆಚ್ಚಲು ಅಂದಿನ ಹೋರಾಟಗಳು ತಾರಕಕ್ಕೇರಲು ಎಚ್.ಕೆ.ವೀರಣ್ಣಗೌಡ ಶ್ರಮ, ಸಂಘಟನೆ ಇಂದಿಗೂ ಅನುಕರಣೀಯ ಕಾರ್ಯವೆಂದು ಬಣ್ಣಿಸಿದರು. ಹಿರಿಯ ಮುತ್ಸದ್ಧಿ ಸುಸಂಸ್ಕೃತ ರಾಜಕಾರಣಿ ಎಲ್ಲಾ ಸ್ಥರದ ಅಧಿಕಾರಿಗಳನ್ನು ವಿಶ್ವಾಸಕ್ಕೆ ಪಡೆದು ಕಾರ್ಯಸಾಧು ಕೆಲಸಗಳಿಗೆ ಒತ್ತು ನೀಡುತ್ತಿದ್ದ ಅಂದಿನ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಅವಧಿಯಲ್ಲಿ ತಾವು ಮೈಸೂರು ಜಿಲ್ಲಾಧಿಕಾರಿ…
ಮಂಡ್ಯ : ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಮದ್ದೂರು ತಾಲೂಕು ಘಟಕದ ನೂತನ ಅಧ್ಯಕ್ಷರಾಗಿ ಬ್ಯಾಡರಹಳ್ಳಿ ಅಂಕೇಗೌಡ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಮದ್ದೂರು ನಗರದ ಸಂಘದ ಕಛೇರಿಯಲ್ಲಿ 2024-2029 ನೇ ಸಾಲಿನ ಉಳಿದ ಅವಧಿಗೆ ಭಾನುವಾರ ಮೂರು ಸ್ಥಾನಗಳಿಗೆ ಚುನಾವಣೆ ನಿಗದಿಯಾಗಿತ್ತು. ಚುನಾವಣಾ ಪ್ರಕ್ರಿಯೆ ವೇಳೆಗೆ ಅಧ್ಯಕ್ಷ ಸ್ಥಾನಕ್ಕೆ ಪದವಿ ಪೂರ್ವ ಶಿಕ್ಷಣ ಇಲಾಖೆಯ ಬ್ಯಾಡರಹಳ್ಳಿ ಅಂಕೇಗೌಡ, ರಾಜ್ಯ ಪರಿಷತ್ ಸ್ಥಾನಕ್ಕೆ ಶಿಕ್ಷಣ ಇಲಾಖೆಯ ಕೆ.ಮಂಜು ಹಾಗೂ ಖಜಾಂಚಿ ಸ್ಥಾನಕ್ಕೆ ಆರೋಗ್ಯ ಇಲಾಖೆಯ ಹೆಚ್.ಎಮ್.ಮಣಿ ಅವರುಗಳು ಮಾತ್ರ ಮೂರು ಸ್ಥಾನಗಳಿಗೆ ನಾಮಪತ್ರ ಸಲ್ಲಿಸಿದ್ದರು. ಆದರೆ, ಈ ವೇಳೆ ಬೇರೆ ಯಾರು ನಾಮಪತ್ರ ಸಲ್ಲಿಸದ ಹಿನ್ನೆಲೆಯಲ್ಲಿ ಮೂವರು ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಎಂದು ಚುನಾವಣಾಧಿಕಾರಿ ಎಸ್.ಶಂಭುಗೌಡ ಘೋಷಣೆ ಮಾಡಿದರು. ನೂತನ ಅಧ್ಯಕ್ಷ ಬ್ಯಾಡರಹಳ್ಳಿ ಅಂಕೇಗೌಡ ಮಾತನಾಡಿ, ಮದ್ದೂರು ತಾಲೂಕು ವ್ಯಾಪ್ತಿಯಲ್ಲಿ ಸರ್ಕಾರಿ ನೌಕರರ ಭವನವನ್ನು ವಿಸ್ತರಣೆ ( ಮೇಲ್ದರ್ಜೆಗೆ )ನಿರ್ಮಾಣ ಮಾಡಬೇಕೆಂಬ ಕನಸಿದ್ದು, ಶಾಸಕರು ಹಾಗೂ ಸಂಬಂಧಪಟ್ಟವರ ಜೊತೆ ಚರ್ಚೆ ನಡೆಸಿ ಮೊದಲ…
ಸಾಮಾನ್ಯವಾಗಿ ಹೃದಯಾಘಾತ (Heart Attack) ಎಂದಾಕ್ಷಣ ಸಿನಿಮಾಗಳಲ್ಲಿ ತೋರಿಸುವಂತೆ ಎದೆಯಲ್ಲಿ ತೀವ್ರವಾದ, ಚೂಪಾದ ನೋವು ಬರುತ್ತದೆ ಎಂದುಕೊಳ್ಳುತ್ತೇವೆ. ಆದರೆ, ತಜ್ಞ ವೈದ್ಯರು (ಕಾರ್ಡಿಯಾಲಜಿಸ್ಟ್ಗಳು) ತಿಳಿಸುವ ಪ್ರಕಾರ, ಹೃದಯಾಘಾತದ ಮೊದಲ ಲಕ್ಷಣಗಳು ಇಷ್ಟು ಸರಳವಾಗಿರದೆ, ತುಂಬಾ ಸೂಕ್ಷ್ಮವಾಗಿ ಮತ್ತು ‘ನಿಶ್ಯಬ್ದ’ವಾಗಿರಬಹುದು. ಇವುಗಳನ್ನು ಗುರುತಿಸುವುದು ಹೇಗೆ ಹಾಗೂ ಯಾವೆಲ್ಲಾ ಲಕ್ಷಣಗಳ ಬಗ್ಗೆ ಎಚ್ಚರ ವಹಿಸಬೇಕು ಎಂಬುದರ ಸಂಪೂರ್ಣ ಮಾಹಿತಿ ಇಲ್ಲಿದೆ. ನಿಶ್ಯಬ್ದ ಲಕ್ಷಣಗಳನ್ನು ಗುರುತಿಸುವುದು ಹೇಗೆ? ಹೃದಯಾಘಾತದ ಲಕ್ಷಣಗಳು ಯಾವಾಗಲೂ ತೀಕ್ಷ್ಣವಾದ ಅಥವಾ ಚುಚ್ಚುವ ನೋವಿನ ರೂಪದಲ್ಲಿ ಇರುವುದಿಲ್ಲ. ಬದಲಿಗೆ, ಇದು ಎದೆಯಲ್ಲಿ ಉಂಟಾಗುವ ಸಣ್ಣ ಅಸ್ವಸ್ಥತೆ ಅಥವಾ ಭಾರವಾದ ಅನುಭವದೊಂದಿಗೆ ಪ್ರಾರಂಭವಾಗಬಹುದು. ಎದೆಯ ಬಿಗಿತ ಅಥವಾ ಒತ್ತಡ: ಎದೆಯ ಮಧ್ಯಭಾಗದಲ್ಲಿ ಭಾರವಾದ ಅನುಭವ, ಹಿಂಡಿದಂತೆ ಅಥವಾ ಒತ್ತಡ ಉಂಟಾಗುವುದು. ಇದು ಕೆಲವೇ ನಿಮಿಷಗಳ ಕಾಲ ಇರಬಹುದು ಅಥವಾ ಬಂದು ಹೋಗಬಹುದು. ಉಸಿರಾಟದ ತೊಂದರೆ: ಯಾವುದೇ ಕಠಿಣ ಕೆಲಸ ಮಾಡದೆಯೂ ಉಸಿರಾಟದ ತೊಂದರೆ ಅಥವಾ ದಮ್ಮು ಕಟ್ಟಿದಂತಾಗುವುದು ಹೃದಯಾಘಾತದ ಆರಂಭಿಕ ಲಕ್ಷಣಗಳಲ್ಲಿ ಒಂದಾಗಿದೆ. ದೇಹದ…
ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗದಲ್ಲಿ (KPSC) ದಶಕಗಳಿಂದ ಕೇಳಿಬರುತ್ತಿರುವ ಭ್ರಷ್ಟಾಚಾರದ ಆರೋಪಗಳು, ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ನೇಮಕಾತಿ ವಿಳಂಬದಂತಹ ಅಕ್ರಮಗಳಿಗೆ ಶಾಶ್ವತ ಪರಿಹಾರ ಕಂಡುಕೊಳ್ಳಲು ರಾಜ್ಯ ಸರ್ಕಾರ ಮುಂದಾಗಿದೆ. ಆಯೋಗದ ಸಮಗ್ರ ಸುಧಾರಣೆಗಾಗಿ ಹಿರಿಯ ಶಾಸಕ ಆರ್.ವಿ. ದೇಶಪಾಂಡೆ ಅವರ ಅಧ್ಯಕ್ಷತೆಯಲ್ಲಿ ವಿಶೇಷ ಸದನ ಸಮಿತಿಯನ್ನು ರಚಿಸಿ ಆದೇಶ ಹೊರಡಿಸಲಾಗಿದೆ. ಸಮಿತಿಯ ಉದ್ದೇಶಗಳು: ಅಕ್ರಮ ತಡೆಗಟ್ಟುವಿಕೆ: ನೇಮಕಾತಿ ಪ್ರಕ್ರಿಯೆಯಲ್ಲಿ ಮಧ್ಯವರ್ತಿಗಳ ಹಸ್ತಕ್ಷೇಪ ಮತ್ತು ಅಕ್ರಮಗಳನ್ನು ಸಂಪೂರ್ಣವಾಗಿ ನಿಯಂತ್ರಿಸುವುದು. ಪಾರದರ್ಶಕತೆ: ಪರೀಕ್ಷಾ ಪದ್ಧತಿ ಮತ್ತು ಅಭ್ಯರ್ಥಿಗಳ ಆಯ್ಕೆ ಪ್ರಕ್ರಿಯೆಯಲ್ಲಿ ಆಧುನಿಕ ತಂತ್ರಜ್ಞಾನ ಅಳವಡಿಸಿ ಪಾರದರ್ಶಕತೆ ತರುವುದು. ಸಮಯೋಚಿತ ನೇಮಕಾತಿ: ಅಧಿಸೂಚನೆಯಿಂದ ಹಿಡಿದು ನೇಮಕಾತಿ ಆದೇಶ ನೀಡುವವರೆಗೆ ನಿಗದಿತ ಕಾಲಮಿತಿಯನ್ನು ನಿಗದಿಪಡಿಸುವುದು. ಶಿಫಾರಸ್ಸುಗಳು: ಯುಪಿಎಸ್ಸಿ (UPSC) ಮಾದರಿಯಲ್ಲಿ ಅಥವಾ ಇತರ ರಾಜ್ಯಗಳ ಯಶಸ್ವಿ ಮಾದರಿಗಳನ್ನು ಗಮನಿಸಿ ಕೆಪಿಎಸ್ಸಿಗೆ ಹೊಸ ರೂಪ ನೀಡಲು ವರದಿ ಸಿದ್ಧಪಡಿಸುವುದು. ಸಮಿತಿಯ ಸದಸ್ಯರು: ಈ ಸಮಿತಿಯು ಆಡಳಿತ ಮತ್ತು ಪ್ರತಿಪಕ್ಷಗಳ ಪ್ರಮುಖ ನಾಯಕರನ್ನು ಒಳಗೊಂಡಿದ್ದು, ಕೆಳಕಂಡವರು ಸಮಿತಿಯ ಸದಸ್ಯರಾಗಿದ್ದಾರೆ: ಅಧ್ಯಕ್ಷರು:…
ಮಂಡ್ಯ: ಮೈಸೂರು-ಬೆಂಗಳೂರು ಹೆದ್ದಾರಿಯು ರಾಜ್ಯದ ಪ್ರಮುಖ ಹಾಗೂ ಜನನಿಬಿಡ ರಸ್ತೆಗಳಲ್ಲಿ ಒಂದಾಗಿದೆ. ಆದರೆ, ಈ ಹೆದ್ದಾರಿಯಲ್ಲಿ ದಿನೇ ದಿನೇ ಸಂಭವಿಸುತ್ತಿರುವ ಅಪಘಾತಗಳು ಸಾರ್ವಜನಿಕರಲ್ಲಿ ಆತಂಕವನ್ನು ಸೃಷ್ಟಿಸುತ್ತಿವೆ. ಇತ್ತೀಚೆಗೆ ಮಂಡ್ಯ ತಾಲೂಕಿನ ಹಳೇಬೂದನೂರು ಬಳಿ ನಡೆದ ಎಳನೀರು ತುಂಬಿದ ಬೊಲೆರೊ ವಾಹನ ಪಲ್ಟಿಯಾದ ಘಟನೆಯು ಹೆದ್ದಾರಿ ಸುರಕ್ಷತೆಯ ಬಗ್ಗೆ ಗಂಭೀರ ಚಿಂತನೆ ನಡೆಸುವಂತೆ ಮಾಡಿದೆ. ಘಟನೆಯ ಹಿನ್ನೆಲೆ ಮಂಡ್ಯ ತಾಲೂಕಿನ ಹಳೇಬೂದನೂರು ಬಳಿಯ ಹೆದ್ದಾರಿಯಲ್ಲಿ ನಡೆದ ಈ ಭೀಕರ ಅಪಘಾತದಲ್ಲಿ ಮದ್ದೂರು ತಾಲೂಕು ಬನ್ನಹಳ್ಳಿ ಗ್ರಾಮದ ರಮೇಶ್ (45) ಎಂಬುವವರು ಸ್ಥಳದಲ್ಲೇ ಮೃತಪಟ್ಟಿದ್ದು, ಮತ್ತೊಬ್ಬ ಪ್ರಯಾಣಿಕರಾದ ಶಿವನಂಜೇಗೌಡ ಅವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಎಳನೀರು ತುಂಬಿಕೊಂಡು ಸಾಗುತ್ತಿದ್ದ ವಾಹನವು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿರುವುದು ಈ ದುರಂತಕ್ಕೆ ಕಾರಣವಾಗಿದೆ. ಡ್ಯಾಶ್ಬೋರ್ಡ್ ಕ್ಯಾಮೆರಾದಲ್ಲಿ ವೀಡಿಯೋ ರೆಕಾರ್ಡ್ ಈ ಅಪಘಾತದ ದೃಶ್ಯಾವಳಿಗಳು ಹಿಂಬದಿಯಲ್ಲಿ ಬರುತ್ತಿದ್ದ ಮತ್ತೊಂದು ಕಾರಿನ ಡ್ಯಾಶ್ಬೋರ್ಡ್ ಕ್ಯಾಮೆರಾದಲ್ಲಿ ಸ್ಪಷ್ಟವಾಗಿ ಸೆರೆಯಾಗಿವೆ. ಇಂದಿನ ಆಧುನಿಕ ಯುಗದಲ್ಲಿ ಡ್ಯಾಶ್ಬೋರ್ಡ್ ಕ್ಯಾಮೆರಾಗಳು ಅಪಘಾತದ ನೈಜ ಕಾರಣಗಳನ್ನು ಪತ್ತೆಹಚ್ಚಲು ಮತ್ತು ಸಾಕ್ಷ್ಯಾಧಾರಗಳನ್ನು…
ಶಿವಮೊಗ್ಗ: ಸಾಗರ ತಾಲೂಕಿನ ಬೇಸೂರು ಗ್ರಾಮದ ಸುತ್ತಮುತ್ತಲ ಪ್ರದೇಶದಲ್ಲಿ ಅಣುಸ್ಥಾವರ ಸ್ಥಾಪನೆಯಾಗಲಿದೆ ಎಂಬ ಸುದ್ದಿಯಿಂದ ಜನರು ಆತಂಕಕ್ಕೆ ಒಳಗಾಗ ಬಾರದು. ಪರಿಸರ ಸೂಕ್ಷ್ಮ ಪ್ರದೇಶದಲ್ಲಿ ಅಂತಹ ಯಾವುದೇ ಯೋಜನೆಗೆ ಅವಕಾಶ ನೀಡುವುದಿಲ್ಲ. ಯಾವುದೇ ಕಾರಣಕ್ಕೂ ಅಣುಸ್ಥಾವರ ಯೋಜನೆಗೆ ಅವಕಾಶ ನೀಡುವುದಿಲ್ಲ ಎಂಬುದಾಗಿ ಶಾಸಕ ಗೋಪಾಲಕೃಷ್ಣ ಬೇಳೂರು ಘೋಷಿಸಿದ್ದಾರೆ. ಇಂದು ಶಿವಮೊಗ್ಗ ಜಿಲ್ಲೆಯ ಸಾಗರದಲ್ಲಿ ಆವಿನಹಳ್ಳಿ ಸಮೀಪದ ಬೇಸೂರು ಗ್ರಾಮದ ಬಳಿಯಲ್ಲಿ ಅಣುಸ್ಥಾವರ ಯೋಜನೆ ಕುರಿತಂತೆ ಸುದ್ದಿಗಾರರೊಂದಿಗೆ ಮಾತನಾಡಿದರು. ಸುದ್ದಿಯ ಮುಖ್ಯಾಂಶಗಳು: ಸರ್ವೆ ಕಾರ್ಯದ ಬಗ್ಗೆ ಮಾಹಿತಿ: ಕಾರವಾರ, ಚಿತ್ರದುರ್ಗ ಸೇರಿದಂತೆ ರಾಜ್ಯದ ನಾಲ್ಕೈದು ಕಡೆಗಳಲ್ಲಿ ಅಣುಸ್ಥಾವರಕ್ಕೆ ಸಂಬಂಧಿಸಿದಂತೆ ಪ್ರಾಥಮಿಕ ಮಾಹಿತಿಗಾಗಿ ಹೆಲಿಕಾಪ್ಟರ್ ಮೂಲಕ ಸರ್ವೆ ನಡೆಸಲಾಗಿದೆ. ಅದೇ ರೀತಿ ಸಿದ್ಧಾಪುರ ಹಾಗೂ ಬೇಸೂರು ಭಾಗದಲ್ಲೂ ಸರ್ವೆ ಮಾಡಲಾಗಿದೆ. ಆದರೆ ಇದು ಕೇವಲ ಮಾಹಿತಿಗಾಗಿ ನಡೆದಿದೆಯೇ ಹೊರತು, ಯಾವುದೇ ಅಂತಿಮ ಆದೇಶವಾಗಿಲ್ಲ ಎಂದು ಶಾಸಕರು ತಿಳಿಸಿದ್ದಾರೆ. ಅಧಿಕಾರಿಗಳೊಂದಿಗೆ ಚರ್ಚೆ: ಈ ವಿಚಾರವಾಗಿ ರಾಜ್ಯದ ಮುಖ್ಯ ಕಾರ್ಯದರ್ಶಿಗಳನ್ನು (Chief Secretary) ಭೇಟಿ ಮಾಡಿರುವ ಶಾಸಕರು,…
ಬೆಂಗಳೂರು: ರಾಜ್ಯದ ಕಬ್ಬು ಬೆಳೆಗಾರರ ಹಿತದೃಷ್ಟಿಯಿಂದ ಸರ್ಕಾರ ಘೋಷಿಸಿರುವ ಪ್ರೋತ್ಸಾಹಧನ ಪಾವತಿಸಲು ದಕ್ಷಿಣ ಕರ್ನಾಟಕದ 7 ಸಕ್ಕರೆ ಕಾರ್ಖಾನೆಗಳು ನಿರಾಕರಿಸುತ್ತಿವೆ. ಅಲ್ಲದೆ, ಸರ್ಕಾರವು ತನ್ನ ಪಾಲಿನ ಮೊತ್ತವನ್ನು ರೈತರ ಬ್ಯಾಂಕ್ ಖಾತೆಗಳಿಗೆ ಹಾಕಲು ವಿವರಗಳನ್ನು ಕೇಳಿದರೂ ನೀಡುತ್ತಿಲ್ಲ. ಈ ಮೂಲಕ ಸರ್ಕಾರದ ಆದೇಶವನ್ನೇ ದಕ್ಷಿಣ ಕರ್ನಾಟಕದ 7 ಖಾಸಗಿ ಸಕ್ಕರೆ ಕಾರ್ಖಾನೆಗಳು ಉಲ್ಲಂಘಿಸುತ್ತಿವೆ. ಇವುಗಳ ವಿರುದ್ಧ ಕಠಿಣ ಕಾನೂನು ಕ್ರಮ ಜರುಗಿಸುವಂತೆ ಗ್ಯಾರಂಟಿ ಪ್ರಾಧಿಕಾರದ ರಾಜ್ಯ ಉಪಾಧ್ಯಕ್ಷರು ಹಾಗೂ ಶಾಸಕರಾದ ದಿನೇಶ್ ಗೂಳಿಗೌಡ ಅವರು ಸರ್ಕಾರಕ್ಕೆ ಮನವಿ ಮಾಡಿದ್ದಾರೆ. ಈ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಸಕ್ಕರೆ ಸಚಿವ ಶಿವಾನಂದ ಪಾಟೀಲ್ ಹಾಗೂ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರಿಗೆ ಪತ್ರ ಬರೆದಿರುವ ಅವರು, ರೈತರಿಗೆ ಸೇರಬೇಕಾದ ಬಾಕಿ ಹಣವನ್ನು ಕೊಡಿಸದಿದ್ದರೆ ಮುಂಬರುವ ಹಂಗಾಮಿನಲ್ಲಿ ಈ ಕಾರ್ಖಾನೆಗಳ ಪರವಾನಗಿ ರದ್ದುಗೊಳಿಸಬೇಕು ಎಂದು ಮನವಿ ಮಾಡಿದ್ದಾರೆ. ಮನವಿಯಲ್ಲೇನಿದೆ? 2025-26ನೇ ಸಾಲಿನ ಹಂಗಾಮಿನಲ್ಲಿ ರಾಜ್ಯದ ರೈತ ಸಮುದಾಯದ ಆರ್ಥಿಕ…
ರಾಯಚೂರು: ಜಿಲ್ಲೆಯ ಸಿಂಧನೂರಿನಲ್ಲಿ ನಡೆಯುತ್ತಿರುವ ಸಾಮೂಹಿಕ ವಿವಾಹ ಕಾರ್ಯಕ್ರಮಕ್ಕೆ ಆಗಮಿಸಿದ ಗಣ್ಯರ ಹೆಲಿಕಾಪ್ಟರ್ ಲ್ಯಾಂಡಿಂಗ್ ವಿಚಾರದಲ್ಲಿ ಪೈಲಟ್ ಮಾಡಿದ ಸಣ್ಣ ಎಡವಟ್ಟು, ಜಿಲ್ಲಾಡಳಿತ ಹಾಗೂ ಪೊಲೀಸ್ ಇಲಾಖೆಯಲ್ಲಿ ಕೆಲಕಾಲ ಆತಂಕ ಮತ್ತು ಗೊಂದಲ ಮೂಡಿಸಿದ ಘಟನೆ ನಡೆದಿದೆ. ನಡೆದಿದ್ದೇನು? ಸಿಂಧನೂರಿನ ಜ್ಯೂನಿಯರ್ ಕಾಲೇಜು ಮೈದಾನದಲ್ಲಿ ಒಂದೇ ಕಡೆ ಮೂರು ಹೆಲಿಪ್ಯಾಡ್ಗಳನ್ನು ಸಿದ್ಧಪಡಿಸಲಾಗಿತ್ತು. ಸಾಮೂಹಿಕ ವಿವಾಹ ಕಾರ್ಯಕ್ರಮಕ್ಕೆ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹಾಗೂ ನಟ ಕಿಚ್ಚ ಸುದೀಪ್ ಅವರು ಪ್ರತ್ಯೇಕ ಹೆಲಿಕಾಪ್ಟರ್ಗಳಲ್ಲಿ ಆಗಮಿಸಿದ್ದರು. ಈ ವೇಳೆ ಸುದೀಪ್ ಅವರಿದ್ದ ಹೆಲಿಕಾಪ್ಟರ್ನ ಪೈಲಟ್, ತಮಗೆ ನಿಗದಿಪಡಿಸಿದ್ದ ಹೆಲಿಪ್ಯಾಡ್ ಬಿಟ್ಟು, ಡಿ.ಕೆ. ಶಿವಕುಮಾರ್ ಅವರು ಇಳಿಯಬೇಕಿದ್ದ ಹೆಲಿಪ್ಯಾಡ್ನಲ್ಲಿ ಹೆಲಿಕಾಪ್ಟರ್ ಲ್ಯಾಂಡ್ ಮಾಡಿದರು. ಅಧಿಕಾರಿಗಳ ಆತಂಕ: ಗಣ್ಯರ ಸುರಕ್ಷತೆ ಮತ್ತು ಶಿಷ್ಟಾಚಾರದ (Protocol) ದೃಷ್ಟಿಯಿಂದ ನಿಗದಿತ ಹೆಲಿಪ್ಯಾಡ್ನಲ್ಲಿಯೇ ಲ್ಯಾಂಡಿಂಗ್ ಆಗಬೇಕಿತ್ತು. ಆದರೆ ಸ್ಥಳ ಬದಲಾವಣೆಯಿಂದಾಗಿ ತಬ್ಬಿಬ್ಬಾದ ಪೊಲೀಸ್ ಅಧಿಕಾರಿಗಳು ತಕ್ಷಣವೇ ಪೈಲಟ್ ಅತಾರಾಟೆ ತೆಗೆದುಕೊಂಡರು. ನಂತರ ಅಧಿಕಾರಿಗಳ ಸೂಚನೆ ಮೇರೆಗೆ ಹೆಲಿಕಾಪ್ಟರ್ ಅನ್ನು ಪುನಃ ಮೇಲೆಬ್ಬಿಸಿ, ನಿಗದಿಪಡಿಸಿದ…














