Author: kannadanewsnow09

ಬೆಂಗಳೂರು : ರಾಜ್ಯ ಬಜೆಟ್‌ನಲ್ಲಿ ʻಮುಖ್ಯಮಂತ್ರಿ ಸೌರ ಕೃಷಿ ಯೋಜನೆʼ ಎಂಬ ಹೊಸ ಕಾರ್ಯಕ್ರಮವನ್ನು ಘೋಷಿಸುವ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜ್ಯದಲ್ಲಿ ರೈತರ ಕೃಷಿ ಪಂಪ್ ಸೆಟ್‌ಗಳಿಗೆ ಹಗಲು ವೇಳೆ 7 ತಾಸು ವಿದ್ಯುತ್ ಪೂರೈಸುವ ಬದ್ಧತೆಯನ್ನು ಸಾಕಾರಗೊಳಿಸುತ್ತಿದ್ದಾರೆ ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್ ಹೇಳಿದ್ದಾರೆ. ಬಜೆಟ್ ಕುರಿತು ಗುರುವಾರ ಪ್ರತಿಕ್ರಿಯೆ ನೀಡಿರುವ ಸಚಿವರು, “ನಮ್ಮ ಸರ್ಕಾರ ಅಧಿಕಾರಕ್ಕೆ ಬಂದಾಗ ತೀವ್ರ ಬರಗಾಲ ಇದ್ದರೂ ರೈತರಿಗೆ 7 ಗಂಟೆ ವಿದ್ಯುತ್ ಪೂರೈಸಲು ಎಲ್ಲಾ ರೀತಿಯ ಕ್ರಮ ಕೈಗೊಳ್ಳಲಾಗಿತ್ತು. ಇದಕ್ಕೆ ಪೂರಕವಾಗಿ ನಾವು ಕೇಂದ್ರ ಪುರಸ್ಕೃತ ಕುಸುಮ್- ಸಿ ಯೋಜನೆಯನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸುವ ಮೂಲಕ ಕೃಷಿ ಫೀಡರ್‌ಗಳನ್ನು ಸೌರೀಕರಣಗೊಳಿಸಿ ರೈತರಿಗೆ ಹಗಲು ವೇಳೆ ವಿದ್ಯುತ್ ನೀಡಲು ಪ್ರಯತ್ನಿಸಿದ್ದೆವು. ಇದೇ ಮಾದರಿಯಲ್ಲಿ ಈಗ ಸುಮಾರು 3000 ಮೆಗಾವ್ಯಾಟ್ ಸೌರ ವಿದ್ಯುತ್ ಉತ್ಪಾದಿಸಿ ರೈತರ ಪಂಪ್ ಸೆಟ್‌ಗಳಿಗೆ ಹಗಲು ವೇಳೆ ವಿದ್ಯುತ್ ಪೂರೈಸುವ ʻಮುಖ್ಯಮಂತ್ರಿ ಸೌರ ಕೃಷಿ ಯೋಜನೆʼ ಜಾರಿಗೊಳಿಸುವುದಾಗಿ ಹೇಳಿದ್ದಾರೆ. ಅಲ್ಲದೆ, ಕೃಷಿ…

Read More

ಶಿವಮೊಗ್ಗ ಜಿಲ್ಲೆಯ ಸಾಗರ ನಗರದಲ್ಲಿ ರೈಲಿಗೆ ಸಿಲುಕಿ ಯುವಕನೊಬ್ಬ ಆತ್ಮಹತ್ಯೆಗೆ ಶರಣಾಗಿದ್ದಾನೆ. ಬೆಲ್ಲದ ಕೃಷ್ಣಪ್ಪ ಅವರ ಮಗ ನಾಗರಾಜ್ ಎಂಬುವರ ಪುತ್ರ ನಿತಿನ್ ಈ ದುರ್ಘಟನೆಗೆ ಬಲಿಯಾದವರು. ಶಿವಮೊಗ್ಗದಿಂದ ಆಗಮಿಸುತ್ತಿದ್ದ ರೈಲು ಪಟ್ಟಣ ತಲುಪುವ ಸಂದರ್ಭದಲ್ಲಿ ಈ ಘಟನೆ ನಡೆದಿದೆ. ಲೋಕೋ ಪೈಲಟ್‌ನವರು ತುರ್ತು ಬ್ರೇಕ್ ಹಾಕಿದರೂ ನಿತಿನ್ ಅವರನ್ನು ಉಳಿಸಲು ಸಾಧ್ಯವಾಗಲಿಲ್ಲ. ರೈಲು ಅವರ ಕುತ್ತಿಗೆಯ ಮೇಲೆ ಹರಿದಿದ್ದರಿಂದ ರುಂಡ ದೇಹದಿಂದ ಬೇರ್ಪಟ್ಟಿದ್ದು, ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ನಿತಿನ್ ಅವರ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದೆ. ಈ ದುರ್ಘಟನೆಯಿಂದಾಗಿ ರೈಲು ಕೆಲಕಾಲ ಸ್ಥಳದಲ್ಲೇ ನಿಲ್ಲುವಂತಾಗಿತ್ತು. ಸಾಗರ ಪೇಟೆ ಠಾಣೆಯ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ. ಆತ್ಮಹತ್ಯೆಗೆ ಕಾರಣವೇನು ಎಂಬುದು ಇನ್ನು ತಿಳಿದುಬಂದಿಲ್ಲ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಕೈಗೊಂಡಿದ್ದಾರೆ. ಯುವಕನ ಆತ್ಮಹತ್ಯೆ ಸಾಗರ ನಗರದಲ್ಲಿ ಆತಂಕ ಮೂಡಿಸಿದೆ. ಆತ್ಮಹತ್ಯೆಗೆ ನಿಖರ ಕಾರಣ ಏನಿರಬಹುದು ಎಂಬುದು ಪೊಲೀಸರ ತನಿಖೆಯಿಂದ ತಿಳಿಯಬೇಕಿದೆ. https://kannadanewsnow.com/kannada/elections-for-the-marigudi-committee-of-sagar-the-hitarakshan-vedike-team-is-expected-to-win-a-majority-convener-m-d-anand/ https://kannadanewsnow.com/kannada/cm-siddaramaiah-sets-another-record-presents-budget-while-standing-for-3-hours-and-30-minutes/

Read More

ಶಿವಮೊಗ್ಗ: ಮಾ. 8ರಂದು ನಡೆಯಲಿರುವ ಸಾಗರದ ಶ್ರೀ ಮಾರಿಕಾಂಬಾ ದೇವಿ ನ್ಯಾಸ ಪ್ರತಿಷ್ಠಾನದ ಚುನಾವಣೆಯಲ್ಲಿ ನಮ್ಮ ತಂಡ ಬಹುಮತ ಪಡೆಯುವ ಎಲ್ಲಾ ಸಾಧ್ಯತೆ ಇದೆ ಎಂದು ಮಾರಿಕಾಂಬಾ ಹಿತರಕ್ಷಣಾ ವೇದಿಕೆ ಸಂಚಾಲಕ ಎಂ.ಡಿ. ಆನಂದ್ ಅಭಿಪ್ರಾಯ ಪಟ್ಟಿದ್ದಾರೆ. ಇಂದು ಶಿವಮೊಗ್ಗ ಜಿಲ್ಲೆಯ ಸಾಗರದ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಭವನದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕಳೆದ 13 ವರ್ಷಗಳಿಂದ ಹಾಲಿ ಸಮಿತಿ ವಿರುದ್ಧ ನಿರಂತರ ಹೋರಾಟ ನಡೆಸಿದ್ದರ ಫಲವಾಗಿ ಚುನಾವಣೆ ಘೋಷಣೆಯಾಗಿದೆ. ನಮ್ಮ ಸಮಿತಿ ಮತದಾರರ ಬಳಿ ಸದುದ್ದೇಶ ಇರಿಸಿಕೊಂಡು ಮತಯಾಚನೆ ಮಾಡುತ್ತಿದ್ದು, ಮತದಾರರು ಪೂರಕವಾಗಿ ಸ್ಪಂದಿಸುತ್ತಿದ್ದಾರೆ ಎಂದು ಹೇಳಿದರು. ಹಾಲಿ ಸಮಿತಿ ನಡೆಸುತ್ತಿದ್ದ ಸಾಕಷ್ಟು ಲೋಪಗಳನ್ನು ಜನರ ಎದುರು ತೆರೆದಿಡುವ ಕೆಲಸ ನಮ್ಮ ಸಮಿತಿ ಮಾಡಿದೆ. ಪ್ರಸ್ತುತ ಒಗ್ಗಟ್ಟಿನಿಂದ ಚುನಾವಣೆ ಎದುರಿಸುತ್ತಿರುವ ನಮ್ಮ ತಂಡ, ಹೋರಾಟದ ಪ್ರತಿಫಲವಾಗಿ 5 ಮಹಿಳೆಯರಿಗೆ ಅವಕಾಶ ಕಲ್ಪಿಸಲು ಯಶಸ್ವಿಯಾಗಿದೆ. ನಮ್ಮ ಸಮಿತಿ ಆಯ್ಕೆಯಾಗಿ ಬಂದರೆ ದೇವಸ್ಥಾನದಲ್ಲಿ ನಿತ್ಯದಾಸೋಹ ವ್ಯವಸ್ಥೆ, ನಗರದ ಕೆಲವು ಭಾಗಗಳಲ್ಲಿ ಕುಡಿಯುವ ನೀರಿನ…

Read More

ಶಿವಮೊಗ್ಗ: ಸಾಮಾಜಿಕ ಸ್ವಾಸ್ಥ್ಯವನ್ನು ಕಾಪಾಡಿಕೊಳ್ಳುವ ನಿಟ್ಟಿನಲ್ಲಿ ನೈಸರ್ಗಿಕ ಉತ್ಪನ್ನಗಳನ್ನು ಬಳಸುವಿಕೆ ಅತ್ಯಾಗತ್ಯವಾಗಿದೆ. ಈ ನಿಟ್ಟಿನಲ್ಲಿ ರಾಸಾಯನಿಕ ಮುಕ್ತ ಉತ್ಪನ್ನಗಳನ್ನು ಬಳಸುವ ಮೂಲಕ ವೈಯಕ್ತಿಕ ಆರೋಗ್ಯವನ್ನು ಕಾಪಾಡಿಕೊಳ್ಳುವ ಅವಶ್ಯಕತೆಯಿದೆ ಎಂದು ಹಿಂದೂಸ್ತಾನಿ ಸಂಗೀತ ಕಲಾವಿದೆ ವಿದುಷಿ ವಸುಧಾ ಶರ್ಮ ಅಭಿಪ್ರಾಯಪಟ್ಟಿದ್ದಾರೆ. ಇಂದು ಶಿವಮೊಗ್ಗ ಜಿಲ್ಲೆಯ ಸಾಗರ ನಗರದಲ್ಲಿ ಚರಕ ಮಹಿಳಾ ವಿವಿದೋದ್ಧೇಶ ಸಹಕಾರ ಸಂಘದ ವತಿಯಿಂದ ಬ್ರಾಸಂನಲ್ಲಿ ಆಯೋಜಿಸಿದ್ದ ಮೂರು ದಿನಗಳ ನೈಸರ್ಗಿಕ ಕೈಮಗ್ಗ ಮತ್ತು ಕೈಉತ್ಪನ್ನಗಳ ಪ್ರದರ್ಶನ ಹಾಗೂ ಮಾರಾಟ ಮೇಳವನ್ನು ಉದ್ಘಾಟಿಸಿ ಅವರು ಮಾತನಾಡುತ್ತಿದ್ದರು. ಒತ್ತಡದ ಜೀವನದ ನಡುವೆ ಪ್ರಕೃತಿಯನ್ನು ಪ್ರೀತಿಸುವ ಮತ್ತು ಅದರೊಂದಿಗೆ ಬದುಕುವ ಮನೋಭಾವ ಬೆಳೆಸಿಕೊಳ್ಳುವುದು ಬಹುಮುಖ್ಯ ಎಂದ ಶರ್ಮ, ರಂಗಕರ್ಮಿ ಪ್ರಸನ್ನ ಅವರು ಸ್ಥಾಪಿಸಿದ ಚರಕ ಸಂಸ್ಥೆ ನೂರಾರು ಗ್ರಾಮೀಣ ಮಹಿಳೆಯರಿಗೆ ಆರ್ಥಿಕ ಮತ್ತು ಸಾಮಾಜಿಕ ಸಬಲೀಕರಣವನ್ನು ಕಲ್ಪಿಸಿದೆ. ಚರಕ ಉತ್ಪನ್ನಗಳು ಇಡೀ ದೇಶದಲ್ಲೇ ತನ್ನದೇ ಆದ ವಿಶಿಷ್ಟ ಗುರುತು ಮೂಡಿಸಿದ್ದು, ಹಿಂದುಳಿದ ವರ್ಗಗಳ ಮಹಿಳೆಯರಿಗೆ ಜೀವನೋಪಾಯದ ಅವಕಾಶಗಳನ್ನು ಕಲ್ಪಿಸಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು. ಚರಕ…

Read More

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ವಿಧಾನಸಭೆಯಲ್ಲಿ 2026-27ನೇ ಸಾಲಿನ ಐತಿಹಾಸಿಕ ಬಜೆಟ್ ಮಂಡಿಸಿದ್ದಾರೆ. ಒಟ್ಟು 4.48 ಲಕ್ಷ ಕೋಟಿ ರೂ. ಗಾತ್ರದ ಬೃಹತ್ ಬಜೆಟ್ ಇದಾಗಿದ್ದು, ಸಿದ್ದರಾಮಯ್ಯ ಅವರು ಮಂಡಿಸಿದ ದಾಖಲೆಯ ಬಜೆಟ್ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ. ರಾಜ್ಯದ ಸಮಗ್ರ ಅಭಿವೃದ್ಧಿಯನ್ನು ಗಮನದಲ್ಲಿಟ್ಟುಕೊಂಡು ಶಿಕ್ಷಣ, ಆರೋಗ್ಯ, ತಂತ್ರಜ್ಞಾನ ಮತ್ತು ಕೃಷಿ ಕ್ಷೇತ್ರಗಳಿಗೆ ಹೆಚ್ಚಿನ ಆದ್ಯತೆ ನೀಡಲಾಗಿದೆ. ಬಜೆಟ್‌ನಲ್ಲಿ ಘೋಷಿಸಲಾದ ಪ್ರಮುಖ ಜಿಲ್ಲಾವಾರು ಯೋಜನೆಗಳ ವಿವರ ಈ ಕೆಳಗಿನಂತಿದೆ: ಬೆಂಗಳೂರು: ರಾಜಧಾನಿಗೆ ಹೈಟೆಕ್ ಸ್ಪರ್ಶ ಆರೋಗ್ಯ: ಗೋವಿಂದರಾಜನಗರದಲ್ಲಿ 15 ಕೋಟಿ ರೂ. ವೆಚ್ಚದಲ್ಲಿ ಜಯದೇವ ಹೃದ್ರೋಗ ಸಂಸ್ಥೆಯ ಪ್ರಾದೇಶಿಕ ಕೇಂದ್ರ ಸ್ಥಾಪನೆ. ವಿಕ್ಟೋರಿಯಾ ಆಸ್ಪತ್ರೆಗೆ ‘ಶಾಂತವೇರಿ ಗೋಪಾಲಗೌಡ ಆಸ್ಪತ್ರೆ’ ಎಂದು ಮರುನಾಮಕರಣ. ತಂತ್ರಜ್ಞಾನ: ಐಐಎಸ್‌ಸಿ ಮತ್ತು ಕಿಯೋನಿಕ್ಸ್ ಸಹಯೋಗದಲ್ಲಿ ‘ಬೆಂಗಳೂರು ರೋಬೋಟಿಕ್ಸ್ ಮತ್ತು AI ಇನ್ನೊವೇಶನ್ ಝನ್’ (BRAINz) ಕ್ಯಾಂಪಸ್ ಸ್ಥಾಪನೆ. ಸಮ್ಮೇಳನ: ಮಲ್ಲೇಶ್ವರಂನ ಮೈಸೂರು ಲ್ಯಾಂಪ್ಸ್ ಆವರಣದಲ್ಲಿ ಅಂತಾರಾಷ್ಟ್ರೀಯ ಮಟ್ಟದ ಸಮಾವೇಶ ಕೇಂದ್ರ ಅಭಿವೃದ್ಧಿ. ಇತರೆ: ಹೆಸರಘಟ್ಟ ಕೆರೆಯಲ್ಲಿ ಕಯಾಕಿಂಗ್…

Read More

ಬೆಂಗಳೂರು: ಇಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು 17ನೇ ಬಾರಿಗೆ ಬಜೆಟ್ ಮಂಡಿಸಿದ್ದಾರೆ. ಸತತ 17ನೇ ಬಾರಿಗೆ ಬಜೆಟ್ ಮಂಡಿಸಿದಂತ ಕೀರ್ತಿಗೆ ಸಿಎಂ ಸಿದ್ಧರಾಮಯ್ಯ ಪಾತ್ರರಾಗಿದ್ದಾರೆ. ಇದಷ್ಟೇ ಅಲ್ಲದೇ ಸತತ 3 ಗಂಟೆ 30 ನಿಮಿಷ ನಿಂತುಕೊಂಡೇ ಸಿಎಂ ಸಿದ್ಧರಾಮಯ್ಯ ಬಜೆಟ್ ಮಂಡಿಸುವ ಮೂಲಕ ಮತ್ತೊಂದು ದಾಖಲೆಯನ್ನು ಬರೆದಿದ್ದಾರೆ. ರಾಜ್ಯ ಸರ್ಕಾರದ ಬಹುನಿರೀಕ್ಷಿತ 2026-27ನೇ ಸಾಲಿನ ಬಜೆಟ್ ಅನ್ನು ವಿಧಾನಸಭೆಯಲ್ಲಿ ಮಂಡಿಸಲಾಗಿದ್ದು, ಒಟ್ಟು 4,48,004 ಕೋಟಿ ರೂ. ಗಾತ್ರದ ಬೃಹತ್ ಆಯವ್ಯಯವನ್ನು ಮಂಡಿಸಲಾಗಿದೆ. ‘ಸರ್ವೋದಯವಾಗಲಿ ಸರ್ವರಲಿ’ ಎಂಬ ಕವಿವಾಣಿಯಂತೆ ರಾಜ್ಯದ ಸಮಗ್ರ ಅಭಿವೃದ್ಧಿಯನ್ನು ಗುರಿಯಾಗಿಟ್ಟುಕೊಂಡು, ಆರ್ಥಿಕ ಶಿಸ್ತಿನೊಂದಿಗೆ ಕಲ್ಯಾಣ ಯೋಜನೆಗಳು ಮತ್ತು ಮೂಲಸೌಕರ್ಯಗಳಿಗೆ ಸಮಾನ ಆದ್ಯತೆ ನೀಡಲಾಗಿದೆ. ಬಜೆಟ್‌ನ ಪ್ರಮುಖ ಮುಖ್ಯಾಂಶಗಳು ಈ ಕೆಳಗಿನಂತಿವೆ: 1. ವಸತಿ ಮತ್ತು ಮೂಲಸೌಕರ್ಯ (Housing & Infrastructure) ಮನೆಗಳ ನಿರ್ಮಾಣ: ಪ್ರಸಕ್ತ ಸಾಲಿನಲ್ಲಿ 3 ಲಕ್ಷ ಮನೆಗಳನ್ನು ಪೂರ್ಣಗೊಳಿಸುವ ಗುರಿ. ಹಿಂದಿನ ಸರ್ಕಾರ ಅನುದಾನವಿಲ್ಲದೆ ಮಂಜೂರು ಮಾಡಿದ್ದ 4.90 ಲಕ್ಷ ಮನೆಗಳನ್ನು ಪೂರ್ಣಗೊಳಿಸಲು ಕ್ರಮ. ಅಂತಾರಾಷ್ಟ್ರೀಯ…

Read More

ಬೆಂಗಳೂರು: ಮಾದಕ ದ್ರವ್ಯ ಸೇವನೆ ಮುಕ್ತ ಸಮಾಜ ನಿರ್ಮಾಣದ ನಿಟ್ಟಿನಲ್ಲಿ ಬೆಂಗಳೂರು ಪಶ್ಚಿಮ ವಿಭಾಗದ ಪೊಲೀಸರು ಇಂದು ಭರ್ಜರಿ ಕಾರ್ಯಾಚರಣೆ ನಡೆಸಿದ್ದಾರೆ. ನಗರದ 6 ಶಿಕ್ಷಣ ಸಂಸ್ಥೆಗಳು ಹಾಗೂ 2 ಹಾಸ್ಟೆಲ್‌ಗಳ ಮೇಲೆ ದಿಢೀರ್ ತಪಾಸಣೆ ನಡೆಸಿದ ಪೊಲೀಸರು, ಮಾದಕ ದ್ರವ್ಯ ಸೇವನೆ ಪತ್ತೆ ಹಚ್ಚುವ ಪರೀಕ್ಷೆ ನಡೆಸಿದ್ದಾರೆ. ಈ ವೇಳೆ ಶಾಕಿಂಗ್ ಮಾಹಿತಿ ಎನ್ನುವಂತೆ 31 ವಿದ್ಯಾರ್ಥಿಗಳು ಡ್ರಗ್ಸ್ ಸೇವಿಸಿರೋದು ಪರೀಕ್ಷೆಯಲ್ಲಿ ದೃಢಪಟ್ಟಿದೆ. ಶಿಕ್ಷಣ ಸಂಸ್ಥೆಗಳು ಹಾಗೂ ಹಾಸ್ಟೆಲ್ ವ್ಯವಸ್ಥಾಪಕರ ಪೂರ್ವ ಅನುಮತಿಯೊಂದಿಗೆ ಪೊಲೀಸರು ಸುಮಾರು 1,200 ವಿದ್ಯಾರ್ಥಿಗಳಿಂದ ಮಾದರಿಗಳನ್ನು (Samples) ಸಂಗ್ರಹಿಸಿದ್ದರು. ಇದರಲ್ಲಿ ಮೊದಲ ಹಂತವಾಗಿ 585 ವಿದ್ಯಾರ್ಥಿಗಳ ಮಾದರಿಗಳನ್ನು ರ‍್ಯಾಂಡಮ್ ಆಗಿ ಪರೀಕ್ಷೆಗೆ ಒಳಪಡಿಸಿದಾಗ, 31 ವಿದ್ಯಾರ್ಥಿಗಳು ಮಾದಕ ದ್ರವ್ಯ ಸೇವಿಸಿರುವುದು ದೃಢಪಟ್ಟಿದೆ. ಈ ತಪಾಸಣಾ ಕಾರ್ಯಕ್ಕೆ ಪುಣ್ಯ, ಪದ್ಮದೇವಯ್ಯ, ಕಾಡೆ, ಶರಾವತಿ, ಶ್ರೀಲಕ್ಷ್ಮೀ ಮಲ್ಟಿ ಸ್ಪೆಷಾಲಿಟಿ ಮತ್ತು ಕಾಂಗರೂ ಕೇರ್ ಆಸ್ಪತ್ರೆಯ ವೈದ್ಯರು ಹಾಗೂ ಸಿಬ್ಬಂದಿಗಳು ಸಂಪೂರ್ಣ ಸಹಕಾರ ನೀಡಿದ್ದಾರೆ. ‘ಸನ್ಮಿತ್ರ’ ಯೋಜನೆಯಡಿ ಪುನರ್ವಸತಿ: ಮಾದಕ…

Read More

ಬೆಂಗಳೂರು: ರಾಜ್ಯದ ಶೈಕ್ಷಣಿಕ ಇತಿಹಾಸದಲ್ಲಿ ಕರ್ನಾಟಕ ಸರ್ಕಾರವು ಅತ್ಯಂತ ಮಹತ್ವದ ಮತ್ತು ಕ್ರಾಂತಿಕಾರಿ ನಿರ್ಧಾರವೊಂದನ್ನು ಕೈಗೊಂಡಿದೆ. ಇಂದಿನವರೆಗೂ ಕೇವಲ ಶಾಲಾ ಹಂತಕ್ಕೆ ಸೀಮಿತವಾಗಿದ್ದ ‘ಉಚಿತ ಪಠ್ಯಪುಸ್ತಕ’ ಯೋಜನೆಯನ್ನು ಇದೀಗ ಮೊದಲ ಬಾರಿಗೆ ಸರ್ಕಾರಿ ಪದವಿಪೂರ್ವ (PU) ಕಾಲೇಜುಗಳಿಗೂ ವಿಸ್ತರಿಸಲು ನಿರ್ಧರಿಸಲಾಗಿದೆ. ಸರ್ಕಾರದ ಈ ನಡೆ ಲಕ್ಷಾಂತರ ವಿದ್ಯಾರ್ಥಿಗಳ ಉನ್ನತ ಶಿಕ್ಷಣದ ಹಾದಿಯನ್ನು ಸುಗಮಗೊಳಿಸಲಿದೆ. ಆರ್ಥಿಕ ಅಡೆತಡೆಗಳಿಗೆ ಇತಿಶ್ರೀ ಹಲವು ಪ್ರತಿಭಾವಂತ ವಿದ್ಯಾರ್ಥಿಗಳು ಎಸ್ಎಸ್ಎಲ್‌ಸಿ ನಂತರ ಆರ್ಥಿಕ ಮುಗ್ಗಟ್ಟಿನಿಂದಾಗಿ ಪಠ್ಯಪುಸ್ತಕಗಳನ್ನು ಖರೀದಿಸಲಾಗದೆ ಶಿಕ್ಷಣ ಮೊಟಕುಗೊಳಿಸುವ ಅಥವಾ ಸಂಕಷ್ಟ ಅನುಭವಿಸುವ ಪರಿಸ್ಥಿತಿ ಇತ್ತು. ಇದನ್ನು ಗಂಭೀರವಾಗಿ ಪರಿಗಣಿಸಿರುವ ಸರ್ಕಾರ, ಶಿಕ್ಷಣದ ಹಾದಿಯಲ್ಲಿ ಆರ್ಥಿಕತೆ ಎಂದಿಗೂ ಅಡ್ಡಿಯಾಗಬಾರದು ಎಂಬ ದೃಢ ಸಂಕಲ್ಪದೊಂದಿಗೆ ಈ ಯೋಜನೆಯನ್ನು ಜಾರಿಗೆ ತಂದಿದೆ. ಯೋಜನೆಯ ಪ್ರಮುಖ ಮುಖ್ಯಾಂಶಗಳು: ಐತಿಹಾಸಿಕ ಹೆಜ್ಜೆ: ರಾಜ್ಯದ ಇತಿಹಾಸದಲ್ಲೇ ಮೊದಲ ಬಾರಿಗೆ ಪಿಯುಸಿ ವಿದ್ಯಾರ್ಥಿಗಳಿಗೆ ಈ ಸೌಲಭ್ಯ ಸಿಗುತ್ತಿದೆ. ಲಕ್ಷಾಂತರ ವಿದ್ಯಾರ್ಥಿಗಳಿಗೆ ಲಾಭ: ರಾಜ್ಯಾದ್ಯಂತ ಇರುವ ಸಾವಿರಾರು ಸರ್ಕಾರಿ ಪಿಯು ಕಾಲೇಜುಗಳ ಕಲೆ, ವಾಣಿಜ್ಯ ಮತ್ತು ವಿಜ್ಞಾನ…

Read More

ಉತ್ತರ ಕನ್ನಡ: ಮಕ್ಕಳು, ಮಹಿಳೆಯರು, ವಯೋವೃದ್ದರು ಹಾಗೂ ಸಾರ್ವಜನಿಕರಿಗೆ ಅತ್ಯಂತ ಅಗತ್ಯ ಮತ್ತು ಅವಶ್ಯಕ ಸೇವೆಗಳನ್ನು ಒದಗಿಸುವ ಸರಕಾರದ ಪ್ರಮುಖ ಇಲಾಖೆಗಳು, ಸಾರ್ವಜನಿಕರು ತುರ್ತು ಸಂದರ್ಭದಲ್ಲಿ ಇಲಾಖೆಯ ನೆರವು ಪಡೆಯಲು, ಇಲಾಖೆಯನ್ನು ಸುಲಭವಾಗಿ ಸಂಪರ್ಕಿಸಲು ಸಾಧ್ಯವಾಗುವಂತೆ ಸಹಾಯವಾಣಿ ಸಂಖ್ಯೆಗಳನ್ನು ಹೊಂದಿದ್ದು, ಅವುಗಳಲ್ಲಿ ಕೆಲವೇ ಕೆಲವು ಸಹಾಯವಾಣಿ ಸಂಖ್ಯೆಗಳ ಬಗ್ಗೆ ಮಾತ್ರ ಸಾರ್ವಜನಿಕರಿಗೆ ತಿಳಿದಿದ್ದು, ಇನ್ನೂ ಹಲವು ಪ್ರಮುಖ ಸಹಾಯವಾಣಿ ಸಂಖ್ಯೆಗಳ ಬಗ್ಗೆ ಸಮರ್ಪಕ ಮಾಹಿತಿ ಇಲ್ಲವಾಗಿದೆ. ಈ ಎಲ್ಲಾ ಸಹಾಯವಾಣಿ ಸಂಖ್ಯೆಗಳ ಮಾಹಿತಿಯನ್ನು ಸಾರ್ವಜನಿಕರಿಗೆ ಒಂದೇ ಕಡೆಗಳಲ್ಲಿ ಒದಗಿಸುವ ವಿನೂತನ ಮತ್ತು ಅತ್ಯಂತ ಉಪಯುಕ್ತ ಕಾರ್ಯವನ್ನು ಉತ್ತರ ಜಿಲ್ಲಾಡಳಿತ ಕೈಗೊಂಡಿದೆ. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಆಹಾರ ನಾಗರೀಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ, ಆಹಾರ ನಾಗರಿಕ ಸರಬರಾಜು ನಿಗಮ ನಿ. ಹಾಗೂ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗ, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ ಉತ್ತರ ಕನ್ನಡ ವತಿಯಿಂದ, ಪ್ರಮುಖ ಎಲ್ಲಾ ಸರಕಾರಿ ಇಲಾಖೆಗಳ ಸಹಾಯವಾಣಿ ಸಂಖ್ಯೆಗಳನ್ನು ಒಳಗೊಂಡ ಜಾಗೃತಿ ಫಲಕಗಳನ್ನು…

Read More

ಬೆಂಗಳೂರು: ರಾಜ್ಯದ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯು ಎಸ್‌ಎಸ್‌ಎಲ್‌ಸಿ (SSLC) ಮತ್ತು ದ್ವಿತೀಯ ಪಿಯುಸಿ (2nd PUC) ಪರೀಕ್ಷೆಗಳಿಗೆ ಸಂಬಂಧಿಸಿದಂತೆ ತೇರ್ಗಡೆಯಾಗಲು ಅಗತ್ಯವಿರುವ ಕನಿಷ್ಠ ಅಂಕಗಳ ವಿವರವನ್ನು ಸ್ಪಷ್ಟಪಡಿಸಿದೆ. ವಿದ್ಯಾರ್ಥಿಗಳು ಪರೀಕ್ಷೆಯಲ್ಲಿ ಯಶಸ್ವಿಯಾಗಲು ಒಟ್ಟಾರೆ ಅಂಕಗಳ ಗುರಿಯನ್ನು ತಲುಪುವುದು ಕಡ್ಡಾಯವಾಗಿದೆ. ತೇರ್ಗಡೆಗೆ ಬೇಕಿರುವ ಕನಿಷ್ಠ ಅಂಕಗಳು ಎಷ್ಟು? ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಯನ್ನು ಗಮನದಲ್ಲಿಟ್ಟುಕೊಂಡು ಮಂಡಳಿಯು ಈ ಕೆಳಗಿನಂತೆ ಅಂಕಗಳ ಮಿತಿಯನ್ನು ನಿಗದಿಪಡಿಸಿದೆ: ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ: ಒಟ್ಟು 625 ಅಂಕಗಳ ಪರೀಕ್ಷೆಯಲ್ಲಿ ತೇರ್ಗಡೆ ಹೊಂದಲು ವಿದ್ಯಾರ್ಥಿಗಳು ಕನಿಷ್ಠ 206 ಅಂಕಗಳನ್ನು ಪಡೆಯುವುದು ಕಡ್ಡಾಯವಾಗಿದೆ. ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ: ಒಟ್ಟು 600 ಅಂಕಗಳ ಪರೀಕ್ಷೆಯಲ್ಲಿ ಉತ್ತೀರ್ಣರಾಗಲು ಕನಿಷ್ಠ 198 ಅಂಕಗಳನ್ನು ಗಳಿಸುವುದು ಅನಿವಾರ್ಯವಾಗಿದೆ. ಈ ಕನಿಷ್ಠ ಅಂಕಗಳು ಕೇವಲ ತೇರ್ಗಡೆಯ ಮಾನದಂಡವಾಗಿದ್ದು, ಉನ್ನತ ಶಿಕ್ಷಣದ ಪ್ರವೇಶಾತಿಗಾಗಿ ವಿದ್ಯಾರ್ಥಿಗಳು ಹೆಚ್ಚಿನ ಅಂಕಗಳನ್ನು ಗಳಿಸುವುದು ಅತ್ಯಗತ್ಯವಾಗಿದೆ. ಉನ್ನತ ಸಾಧನೆಯೇ ನಿಮ್ಮ ಗುರಿಯಾಗಿರಲಿ ಕೇವಲ ಪಾಸಾಗುವ ಅಂಕಗಳನ್ನು ಪಡೆಯುವುದಕ್ಕಿಂತ, ವಿದ್ಯಾರ್ಥಿಗಳು ತಮ್ಮ ಶೈಕ್ಷಣಿಕ ಭವಿಷ್ಯವನ್ನು ಉಜ್ವಲಗೊಳಿಸಲು ಇನ್ನೂ…

Read More