Subscribe to Updates
Get the latest creative news from FooBar about art, design and business.
Author: kannadanewsnow09
ಬೆಂಗಳೂರು: ರಾಜ್ಯದಲ್ಲಿ ಇನ್ಮುಂದೆ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಅತೀ ಹೆಚ್ಚು ಅಂಕ ಗಳಿಸೋ ವಿದ್ಯಾರ್ಥಿಗಳಿಗೆ ಸರ್ಕಾರ ಭರ್ಜರಿ ಸಿಹಿಸುದ್ದಿ ನೀಡಿದೆ. ಅದೇನೆಂದ್ರೆ ಇನ್ಮುಂದೆ ಲ್ಯಾಪ್ ಟಾಪ್ ಬದಲಾಗಿ ರೂ.50,000 ಪ್ರೋತ್ಸಾಹಧನ ನೀಡಲು ನಿರ್ಧರಿಸಿದೆ. ಈ ಕುರಿತಂತೆ ಶಾಲಾ ಶಿಕ್ಷಣ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ನಡವಳಿಯನ್ನು ಹೊರಡಿಸಿದ್ದಾರೆ. ಅದರಲ್ಲಿ 2025-26ನೇ ಸಾಲಿಗೆ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ರಾಜ್ಯ ವಲಯದ ಆಯವ್ಯಯದಲ್ಲಿ “ಗುಣಮಟ್ಟ ಭರವಸೆ ಮತ್ತು ವಿದ್ಯಾರ್ಥಿ ಪ್ರೇರಣಾ ಉಪಕ್ರಮ” ಲೆಕ್ಕಶೀರ್ಷಿಕ 2202-01-109-0-10 ರ ಉಪ ಲೆಕ್ಕಶೀರ್ಷಿಕೆ 015 ರಲ್ಲಿ ಸರ್ಕಾರಿ ಶಾಲೆಗಳಲ್ಲಿ ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ ಜಿಲ್ಲಾ / ತಾಲ್ಲೂಕು ಹಂತದಲ್ಲಿ ಅತೀ ಹೆಚ್ಚು ಅಂಕ ಪಡೆದ 3 ವಿದ್ಯಾರ್ಥಿಗಳಿಗೆ ಲ್ಯಾಪ್ ಟಾಪ್ ವಿತರಣೆಗಾಗಿ ರೂ.325.00 ಅನುಷ್ಠಾನಗೊಳಿಸಲು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಲಿಗೆ ಆಡಳಿತಾತ್ಮಕ ಅನುಮೋದನೆ ನೀಡಿ ಆದೇಶಿಸಲಾಗಿದೆ. ಅಧ್ಯಕ್ಷರು, ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಲಿ, ಬೆಂಗಳೂರು, ಇವರ…
ಬೆಂಗಳೂರು: ರಾಜ್ಯದಲ್ಲಿ ವ್ಯಾಸಂಗ ಮಾಡುತ್ತಿರುವಂತ 6 ರಿಂದ 12ನೇ ತರಗತಿ ವರೆಗಿನ ಹೆಣ್ಣುಮಕ್ಕಳಿಗೆ ಉಚಿತ ಸ್ಯಾನಿಟರಿ ಪ್ಯಾಡ್ ವಿತರಣೆ ಮಾಡಲಾಗುತ್ತದೆ ಎಂಬುದಾಗಿ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ. ಶುಚಿ ಕಾರ್ಯಕ್ರಮದಡಿಯಲ್ಲಿ ಸರ್ಕಾರಿ ಮತ್ತು ಸರ್ಕಾರಿ ಅನುದಾನಿತ ಶಾಲಾ-ಕಾಲೇಜುಗಳಲ್ಲಿನ 6 ರಿಂದ 12ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ಹೆಣ್ಣುಮಕ್ಕಳಿಗೆ ಹಾಗೂ ವಸತಿ ನಿಲಯಗಳಲ್ಲಿನ (ಸಮಾಜ ಕಲ್ಯಾಣ ಇಲಾಖೆ, ಅಲ್ಪಸಂಖ್ಯಾತ ಕಲ್ಯಾಣ ಇಲಾಖೆ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, KREIS, ಪರಿಶಿಷ್ಟ ಪಂಗಡ ಇಲಾಖೆ) ಒಟ್ಟು 19,64,507 ಹೆಣ್ಣುಮಕ್ಕಳಿಗೆ ಉಚಿತವಾಗಿ ಸ್ಯಾನಿಟರಿ ನ್ಯಾಪ್ಕಿನ್ ಪ್ಯಾಡ್ಗಳನ್ನು ಒದಗಿಸಿದ್ದೇವೆ. ಮುಟ್ಟಿನ ಕಪ್ʼ ಯೋಜನೆಯಡಿಯಲ್ಲಿ ಗ್ರಾಮೀಣ ಮತ್ತು ನಗರ ಪ್ರದೇಶಗಳಲ್ಲಿನ ಸರ್ಕಾರಿ, ಸರ್ಕಾರಿ ಅನುದಾನಿತ ಶಾಲೆಗಳಲ್ಲಿ ಓದುತ್ತಿರುವ ಒಟ್ಟು 9,44,466 ಹೆಣ್ಣುಮಕ್ಕಳಿಗೆ ಮುಟ್ಟಿನ ಕಪ್ ಅನ್ನು ಒದಗಿಸಲು ಇಲಾಖೆ ಸಜ್ಜಾಗಿದೆ ಎಂದು ಆರೋಗ್ಯ ಸಚಿವರಾದ ದಿನೇಶ್ ಗುಂಡೂರಾವ್ ಅವರು ಹೇಳಿದ್ದಾರೆ. https://twitter.com/KarnatakaVarthe/status/2014679394934259929 ಗರ್ಭಕಂಠದ ಕಾನ್ಸರ್ ವಿರುದ್ಧ ಆರೋಗ್ಯ ಇಲಾಖೆ ಸಮರೋಪಾದಿಯಲ್ಲಿ ಕೆಲಸ ಮಾಡುತ್ತಿದ್ದು, ಕಲ್ಯಾಣ ಕರ್ನಾಟಕ ಮತ್ತು…
ಬೆಂಗಳೂರು: ರಾಜ್ಯ ಸರ್ಕಾರ ಸರ್ಕಾರಿ ಕಚೇರಿಯಲ್ಲಿ ವೀಡಿಯೋ ಚಿತ್ರೀಕರಣ ಮಾಡದಂತೆ, ತಪ್ಪು ಪ್ರಶ್ನಿಸುವ, ಭ್ರಷ್ಟಾಚಾರವನ್ನು ಸಾರ್ವಜನಿಕರವಾಗಿ ಖಂಡಿಸುವ ನಮ್ಮ ಪಕ್ಷದ ಮುಖಂಡರ ವಿರುದ್ಧ ಎಫ್ಐಆರ್ ದಾಖಲಿಸುವಂತೆ ಎಲ್ಲಿಯೂ ಹೇಳಿಲ್ಲ. ವೈರಲ್ ಆಗಿರುವಂತ ಆದೇಶದಲ್ಲಿ ಅಂತಹ ಯಾವುದೇ ಸೂಚನೆಗಳಿಲ್ಲ ಎಂಬುದಾಗಿ ಕೆ ಆರ್ ಎಸ್ ಪಕ್ಷದ ರವಿಕೃಷ್ಣಾರೆಡ್ಡಿ ಸ್ಪಷ್ಟ ಪಡಿಸಿದ್ದಾರೆ. ಈ ಕುರಿತಂತೆ ಕನ್ನಡ ನ್ಯೂಸ್ ನೌ ಜೊತೆಗೆ ಮಾತನಾಡಿದಂತ ಅವರು, ಪೊಲೀಸ್ ಇಲಾಖೆ ಹೊರಡಿಸಿದೆ ಎನ್ನಲಾಗಿರುವಂತ ಆದೇಶವನ್ನು ಸರಿಯಾಗಿ ಓದಿಲ್ಲ. ಅದೊಂದು ಆದೇಶವೂ ಅಲ್ಲ. ಹಿರಿಯ ಅಧಿಕಾರಿಗಳಿಗೆ ಸಲ್ಲಿಕೆಯಾಗುವಂತ ಮನವಿಗಳನ್ನು ಕೆಳ ಹಂತದ ಅಧಿಕಾರಿಗಳಿಗೆ ಸೂಕ್ತ ಕ್ರಮವಹಿಸುವಂತೆ ವರ್ಗಾವಣೆ ಮಾಡುವಂತ ಆದೇಶದ ಪ್ರತಿ ಅದಾಗಿದೆ ಎಂಬುದಾಗಿ ತಿಳಿಸಿದ್ದಾರೆ. ನಮ್ಮ ಕೆ ಆರ್ ಎಸ್ ಪಕ್ಷದಿಂದ ಭ್ರಷ್ಟಾಚಾರದ ವಿರುದ್ಧದ ಹೋರಾಟ ಮುಂದುವರೆಯಲಿದೆ. ಅದನ್ನು ಯಾರಿಂದಲೂ ತಡೆಯುವುದಕ್ಕೆ ಆಗುವುದಿಲ್ಲ. ತಡೆಯುವಂತೆ, ಎಫ್ಐಆರ್ ದಾಖಲಿಸುವಂತೆ ಆದೇಶವನ್ನು ಹೊರಡಿಸಲು ಸಾಧ್ಯವಿಲ್ಲ. ಒಂದು ವೇಳೆ ಅಂತಹ ಆದೇಶಗಳನ್ನು ಹೊರಡಿಸಿದರೂ ನಾವು ಜಗ್ಗುವುದೂ ಇಲ್ಲ, ಬಗ್ಗುವುದು ಇಲ್ಲ. ನಮ್ಮ ಹೋರಾಟ…
ಬೆಂಗಳೂರು: ರಾಜ್ಯದಲ್ಲಿ ಸರ್ಕಾರಿ ಕಾರ್ಯಕ್ರಮಗಳು ಸೇರಿದಂತೆ ರಾಷ್ಟ್ರೀಯ ಹಬ್ಬಗಳು ಹಾಗೂ ಶಾಲಾ-ಕಾಲೇಜುಗಳ ಇತರೆ ಸಾಂಸ್ಕೃತಿಕ ಮತ್ತು ಆಡಳಿತಾತ್ಮಕ ಕಾರ್ಯಕ್ರಮಗಳನ್ನು ಆಯೋಜಿಸುವ ಸಂದರ್ಭಗಳಲ್ಲಿ ಅಪಘಾತಗಳು ಸಂಭವಿಸದಂತೆ ಮಕ್ಕಳ ಮತ್ತು ಸಾರ್ವಜನಿಕರ ರಕ್ಷಣೆಗೆ ಈ ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ಅಳಡಿಸಿಕೊಳ್ಳುವಂತೆ ಸರ್ಕಾರ ಖಡಕ್ ಆದೇಶ ಮಾಡಿದೆ. ಈ ಕುರಿತಂತೆ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಸುತ್ತೋಲೆ ಹೊರಡಿಸಿದ್ದು, ಶಾಲಾ ಕಾಲೇಜುಗಳಲ್ಲಿ ಮಕ್ಕಳ ಸುರಕ್ಷತೆಗೆ ಸಂಬಂಧಿಸಿದಂತೆ ಮಕ್ಕಳ ರಕ್ಷಣಾ ನೀತಿ, ರಾಷ್ಟ್ರೀಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಮಾರ್ಗಸೂಚಿಯನ್ವಯ ಮಕ್ಕಳ ಹಕ್ಕುಗಳು ಮತ್ತು ಮಕ್ಕಳ ಸುರಕ್ಷತೆಗೆ ಬಗ್ಗೆ ಅಗತ್ಯ ಕ್ರಮವಹಿಸಲು ಎಲ್ಲಾ ಶಾಲೆಗಳ ಮುಖ್ಯ ಶಿಕ್ಷಕರು ಮತ್ತು ಶಿಕ್ಷಕರಿಗೆ ಸೂಚನೆಗಳನ್ನು ನೀಡಲಾಗಿರುತ್ತದೆ ಎಂದಿದೆ. ಮುಂದುವರೆದು ಶಾಲಾ ಕಾಲೇಜುಗಳಲ್ಲಿ ಸರ್ಕಾರಿ ಕಾರ್ಯಕ್ರಮಗಳು ಸೇರಿದಂತೆ ರಾಷ್ಟ್ರೀಯ ಹಬ್ಬಗಳು ಹಾಗೂ ಇತರ ಸಾಂಸ್ಕೃತಿಕ ಮತ್ತು ಆಡಳಿತಾತ್ಮಕ ಕಾರ್ಯಕ್ರಮಗಳನ್ನು ಆಯೋಜಿಸುವ ಸಂದರ್ಭಗಳಲ್ಲಿ ಸಂಭವಿಸಬಹುದಾದ ಅನಿರೀಕ್ಷಿತ ಅವಘಡಗಳ ಸಾಧ್ಯತೆಗಳನ್ನು ಗಮನದಲ್ಲಿರಿಸಿಕೊಂಡು, ಯಾವುದೇ ರೀತಿಯ ಅವಘಡಗಳಾಗದಂತೆ ತಡೆಗಟ್ಟುವ, ನಿವಾರಿಸುವ…
ಚಿಕ್ಕಮಗಳೂರು: ಜಿಲ್ಲೆಯಲ್ಲಿ ಅಪರೂಪದಲ್ಲಿ ಅಪರೂಪ ಎನ್ನುವಂತೆ ಕಡಲಾಚೆಯ ಪ್ರೇಮಕಥೆಯೊಂದು ಬೆಳಕಿಗೆ ಬಂದಿದೆ. ಚಿಕ್ಕಮಗಳೂರಿನ ಯುವಕನಿಗೆ ಚೀನಾದ ಯುವತಿಯೊಬ್ಬಳು ಜೋಡಿಯಾಗಿದ್ದಾಳೆ. ಹೌದು ಹೀಗೊಂದು ಕಾಫಿನಾಡಲ್ಲಿ ಕಡಲಾಚೆಯ ಪ್ರೇಮಕಥೆ ಹೊರಬಿದ್ದಿದೆ. ಪ್ರೀತಿ ಎಂಬುದು ದೇಶ, ಭಾಷೆ, ಗಡಿಯನ್ನು ಮೀರಿದ್ದು ಎಂಬುದಕ್ಕೆ ಸಾಕ್ಷಿಯಾಗಿದೆ. ಚಿಕ್ಕಮಗಳೂರಿನ ಹೌಸಿಂಗ್ ಬೋರ್ಡಿನ ಯುವಕನಿಗೆ ಚೀನಾದ ಯುವತಿಯೊಬ್ಬಳು ಜೋಡಿಯಾಗಿದ್ದಾಳೆ. ಇವರಿಬ್ಬರ ವಿವಾಹವನ್ನು ಕುಟುಂಬಸ್ಥರ ಸಮ್ಮುಖದಲ್ಲಿ ಅದ್ಧೂರಿಯಾಗಿ ನೆರವೇರಿಸಲಾಗಿದೆ. ಚಿಕ್ಕಮಗಳೂರಿನ ಯುವಕ ರೂಪಕ್ ಎಂಬಾತ ಚೀನಾ ಮೂಲದ ಜೇಡ್ ಎಂಬಾಕೆಯನ್ನು ಕುಟುಂಬಸ್ಥರ ಸಮ್ಮುಖದಲ್ಲಿ ಅದ್ಧೂರಿಯಾಗಿ ನಗರದ ಒಕ್ಕಲಿಗರ ಕಲ್ಯಾಣ ಮಂಟಪದಲ್ಲಿ ಕೈ ಹಿಡಿದಿದ್ದಾನೆ. ಯುವತಿಯ ತಂದೆ-ತಾಯಿಯೇ ಚೀನಾದಿಂದ ಪುತ್ರಿಯನ್ನು ಕರೆತಂದು, ಯುವಕನಿಖೆ ಧಾರೆ ಎರೆದುಕೊಟ್ಟು ಅಪರೂಪದ ಮದುವೆಗೆ ಸಾಕ್ಷಿಯಾಗಿ ಗಮನ ಸೆಳೆದರು. ಆಸ್ಟ್ರೇಲಿಯಾದಲ್ಲಿ ಓದುವಾಗ ರೂಪಕ್ ಹಾಗೂ ಜೇಡ್ ಮಧ್ಯೆ ಪ್ರೇಮಾಂಕುರವಾಗಿತ್ತು. ಈ ವಿಚಾರವನ್ನು ಇಬ್ಬರು ಪರಸ್ಪರ ಕುಟುಂಬಸ್ಥರಿಗೆ ಹೇಳಿಕೊಂಡಿದ್ದರು. ಅಲ್ಲದೇ ಮದುವೆಗೆ ಒಪ್ಪಿಸಿದ್ದರು. ಅಂತಿಮವಾಗಿ ಭಾರತ-ಚೀನಾ ಸಂಪ್ರದಾಯ ಎರಡು ಒಂದೇ ಎನ್ನುವ ರೀತಿಯಲ್ಲಿ ರೂಪಕ್ -ಜೆಡ್ ಹಿಂದೂ ಸಂಪ್ರದಾಯದಂತೆ ಮದುವೆಯಾಗುವ ಮೂಲಕ…
ಬೆಂಗಳೂರು: ನವೀಕರಿಸಬಹುದಾದ ಇಂಧನಗಳ ಮೂಲ ಅಭಿವೃದ್ಧಿ ವಿಚಾರದಲ್ಲಿ ಮಧ್ಯವರ್ತಿಗಳ ಹಾವಳಿಗೆ ಕಡಿವಾಣ ಹಾಕಿ, ನೀತಿ-ನಿಯಮಗಳನ್ನು ಸರಳಗೊಳಿಸುವ ಮೂಲಕ ನೈಜ ಬಂಡವಾಳ ಹೂಡಿಕೆದಾರರಿಗೆ ಅನುಕೂಲ ಮಾಡಿಕೊಡುವುದೇ ನಮ್ಮ ಗುರಿ ಎಂದು ಸಚಿವ ಕೃಷ್ಣ ಬೈರೇಗೌಡ ಅವರು ತಿಳಿಸಿದರು. ಶುಕ್ರವಾರ ವಿಕಾಸಸೌಧದಲ್ಲಿ ನಡೆದ ಕಾರ್ಯಕ್ರಮದಲ್ಲಿ ನವೀಕರಿಸಬಹುದಾದ ಇಂಧನಗಳ ಘಟಕ ಸ್ಥಾಪನೆಗೆ ಸಂಬಂಧಿಸಿದ ಭೂಮಿ ಸ್ವಯಂ ಚಾಲಿತವಾಗಿಯೇ ಭೂ ಪರಿವರ್ತನೆಗೊಳ್ಳುವ ನೂತನ ತಂತ್ರಾಂಶಕ್ಕೆ ಚಾಲನೆ ನೀಡಿ ಮಾತನಾಡಿದರು. “ಪ್ರಸ್ತುತ ಜಗತ್ತಿನಲ್ಲಿ ಅತಿಹೆಚ್ಚು ಚರ್ಚೆಯಾಗುತ್ತಿರುವ ವಿಚಾರ ಇಂಧನ ಭದ್ರತೆ. ಇಂಧನ ಭದ್ರತೆ ಇಲ್ಲದ ಯಾವ ದೇಶವೂ ಅಭಿವೃದ್ಧಿಯ ಪಥದಲ್ಲಿ ನಡೆಯುವುದು, ಆರ್ಥಿಕವಾಗಿ ಸಬಲರಾಗುವುದು ಅಸಾಧ್ಯ. ತಾಂತ್ರಿಕತೆ, ಬೌದ್ಧಿಕ ಶಕ್ತಿ ಆಧಾರಿತ ಆರ್ಥಿಕತೆ ಸಹ ವಿದ್ಯುತ್ ಸೇರಿದಂತೆ ನಾನಾ ಇಂಧನ ಮೂಲಗಳ ಮೇಲೆಯೇ ಅವಲಂಭಿತವಾಗಿವೆ. ನಮ್ಮ ದೇಶದಲ್ಲಿ ಕಡುಬಡವರೂ ಸಹ ಬಡತನದಿಂದ ವಿಮುಕ್ತಿ ಹೊಂದಲು, ನೀರಿನ ಭದ್ರತೆಯಂತೆಯೇ ಇಂಧನ ಭದ್ರತೆಯೂ ಮುಖ್ಯವಾಗಿದೆ. ಆ ನಿಟ್ಟಿನಲ್ಲಿ ಭಾರತಕ್ಕೆ ಇಂಧನ ಭದ್ರತೆಯನ್ನು ಖಾತರಿಪಡಿಸುವ ಜವಾಬ್ದಾರಿ ನವೀಕರಿಸಬಹುದಾದ ಇಂಧನಗಳ ಘಟಕಗಳ ಮೇಲಿದೆ” ಎಂದು…
ನಮ್ಮ ಅಡುಗೆಮನೆಯಲ್ಲಿ ಎಳ್ಳನ್ನು ಸಿಹಿತಿಂಡಿಗಾಗಿ ಅಥವಾ ಹಬ್ಬಗಳ ಸಮಯದಲ್ಲಿ ಅಲಂಕಾರಕ್ಕಾಗಿ ಮಾತ್ರ ಬಳಸಲಾಗುತ್ತದೆ ಎಂದು ಭಾವಿಸುವುದು ತಪ್ಪು. ವಾಸ್ತವವಾಗಿ, ಈ ಸಣ್ಣ ಬಿಳಿ ಬೀಜಗಳು ಪ್ರಕೃತಿ ನೀಡಿದ ಅಮೃತ ಬೀಜ. ಈ ಬೀಜಗಳ ಪೌಷ್ಟಿಕಾಂಶದ ಮೌಲ್ಯವು ಅಪಾರವಾಗಿದೆ. ತಜ್ಞರ ಪ್ರಕಾರ, ನೀವು ಎಳ್ಳನ್ನು ಕೇವಲ 7 ದಿನಗಳವರೆಗೆ ಸರಿಯಾದ ರೀತಿಯಲ್ಲಿ ಸೇವಿಸಿದರೆ, ನಿಮ್ಮ ದೇಹದಲ್ಲಿ ಅದ್ಭುತ ಬದಲಾವಣೆಗಳು ಸಂಭವಿಸಬಹುದು. ಎಳ್ಳು ಕ್ಯಾಲ್ಸಿಯಂ, ಮೆಗ್ನೀಸಿಯಮ್, ಸತು, ತಾಮ್ರ, ಮ್ಯಾಂಗನೀಸ್, ವಿಟಮಿನ್ ಬಿ 1, ವಿಟಮಿನ್ ಇ, ಫೈಬರ್ ಮತ್ತು ಒಮೆಗಾ -3 ಕೊಬ್ಬಿನಾಮ್ಲಗಳಂತಹ ಅನೇಕ ಪೋಷಕಾಂಶಗಳಲ್ಲಿ ಸಮೃದ್ಧವಾಗಿದೆ. ಎಳ್ಳು ಹಾಲಿಗಿಂತ ಅನೇಕ ಪಟ್ಟು ಹೆಚ್ಚು ಕ್ಯಾಲ್ಸಿಯಂ ಅನ್ನು ಹೊಂದಿರುತ್ತದೆ ಮತ್ತು ಅವು ಬಾದಾಮಿಗಿಂತ ಉತ್ತಮ ಕೊಬ್ಬನ್ನು ಸಹ ಹೊಂದಿರುತ್ತವೆ ಎಂದು ನಿಮಗೆ ತಿಳಿದಿದೆಯೇ? 7-ದಿನಗಳ ಎಳ್ಳು ಸವಾಲು – ನಿಮ್ಮ ದೇಹದಲ್ಲಿನ ಬದಲಾವಣೆಗಳು: ಮೊದಲ 1-2 ದಿನಗಳು (ಜೀರ್ಣಕ್ರಿಯೆಯನ್ನು ಸುಧಾರಿಸಿ): ಎಳ್ಳಿನಲ್ಲಿರುವ ಹೆಚ್ಚಿನ ಆಹಾರದ ನಾರು ಕರುಳನ್ನು ಶುದ್ಧೀಕರಿಸುತ್ತದೆ. ಮಲಬದ್ಧತೆ, ಅಜೀರ್ಣ, ಅನಿಲ…
ಬೆಂಗಳೂರು: ರಾಜ್ಯದಲ್ಲಿ ಇನ್ಮುಂದೆ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಅತೀ ಹೆಚ್ಚು ಅಂಕ ಗಳಿಸೋ ವಿದ್ಯಾರ್ಥಿಗಳಿಗೆ ಸರ್ಕಾರ ಭರ್ಜರಿ ಸಿಹಿಸುದ್ದಿ ನೀಡಿದೆ. ಅದೇನೆಂದ್ರೆ ಇನ್ಮುಂದೆ ಲ್ಯಾಪ್ ಟಾಪ್ ಬದಲಾಗಿ ರೂ.50,000 ಪ್ರೋತ್ಸಾಹಧನ ನೀಡಲು ನಿರ್ಧರಿಸಿದೆ. ಈ ಕುರಿತಂತೆ ಶಾಲಾ ಶಿಕ್ಷಣ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ನಡವಳಿಯನ್ನು ಹೊರಡಿಸಿದ್ದಾರೆ. ಅದರಲ್ಲಿ 2025-26ನೇ ಸಾಲಿಗೆ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ರಾಜ್ಯ ವಲಯದ ಆಯವ್ಯಯದಲ್ಲಿ “ಗುಣಮಟ್ಟ ಭರವಸೆ ಮತ್ತು ವಿದ್ಯಾರ್ಥಿ ಪ್ರೇರಣಾ ಉಪಕ್ರಮ” ಲೆಕ್ಕಶೀರ್ಷಿಕ 2202-01-109-0-10 ರ ಉಪ ಲೆಕ್ಕಶೀರ್ಷಿಕೆ 015 ರಲ್ಲಿ ಸರ್ಕಾರಿ ಶಾಲೆಗಳಲ್ಲಿ ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ ಜಿಲ್ಲಾ / ತಾಲ್ಲೂಕು ಹಂತದಲ್ಲಿ ಅತೀ ಹೆಚ್ಚು ಅಂಕ ಪಡೆದ 3 ವಿದ್ಯಾರ್ಥಿಗಳಿಗೆ ಲ್ಯಾಪ್ ಟಾಪ್ ವಿತರಣೆಗಾಗಿ ರೂ.325.00 ಅನುಷ್ಠಾನಗೊಳಿಸಲು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಲಿಗೆ ಆಡಳಿತಾತ್ಮಕ ಅನುಮೋದನೆ ನೀಡಿ ಆದೇಶಿಸಲಾಗಿದೆ. ಅಧ್ಯಕ್ಷರು, ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಲಿ, ಬೆಂಗಳೂರು, ಇವರ…
ಬಳ್ಳಾರಿ: ಜಿಲ್ಲೆಯಲ್ಲಿ ಬ್ಯಾನರ್ ಗಲಾಟೆ ಮಾಸೋ ಮುನ್ನವೇ ಮತ್ತೊಂದು ದೃಶ್ ಕೃತ್ಯ ಎಸಗಲಾಗಿದೆ. ಮಾಜಿ ಸಚಿವ ಜನಾರ್ದನ ರೆಡ್ಡಿ, ಬಿ.ಶ್ರೀರಾಮುಲುಗೆ ಸೇರಿದಂತ ಮಾಡೆಲ್ ಹೌಸ್ ಗೆ ಬೆಂಕಿ ಇಡಲಾಗಿದೆ. ಬಳ್ಳಾರಿಯ ಬ್ಯಾನರ್ ಗಲಾಟೆ ಮಾಸೋ ಮುನ್ನವೇ ಮತ್ತೊಂದು ಕೃತ್ಯವನ್ನು ಎಸಗಲಾಗಿದೆ. ರೆಡ್ಡಿ, ಬಿ.ಶ್ರೀರಾಮುಲುಗೆ ಸೇರಿದಂತ ಮಾಡೆಲ್ ಹೌಸ್ ಗೆ ದುಷ್ಕರ್ಮಿಗಳು ಬೆಂಕಿ ಇಟ್ಟಿದ್ದಾರೆ. ಪೆಟ್ರೋಲ್ ಸುರಿದು ಮಾಡೆಲ್ ಹೌಸ್ ಗೆ ಬೆಂಕಿ ಇರಿಸಿರೋದಾಗಿ ಹೇಳಲಾಗುತ್ತಿದೆ. ಕೈ ಶಾಸಕ ಭರತ್ ರೆಡ್ಡಿ ಬೆಂಬಲಿಗರೇ ಇನ್ನು ಮಾಡಿರುವುದು ಎಂಬುದಾಗಿ ಬಳ್ಳಾರಿಯಲ್ಲಿ ಮಾಜಿ ಶಾಸಕ ಸೋಮಶೇಖರ್ ರೆಡ್ಡಿ ಹೇಳಿದ್ದಾರೆ. ಶಾಸಕ ಭರತ್ ರೆಡ್ಡಿ ವಿರುದ್ಧ ಸೋಮಶೇಖರ ರೆಡ್ಡಿ ಗಂಭೀರ ಆರೋಪ ಮಾಡಿದ್ದಾರೆ. ಬೆಂಕಿ ಹಚ್ಚಿದಂತ ಘಟನಾ ಸ್ಥಳಕ್ಕೆ ಪೊಲೀಸರು ಕೂಡಲೇ ಬಂದಿದ್ದಾರೆ. ಇದನ್ನು ನಾವು ಬಿಡಲ್ಲ. ಪೊಲೀಸ್ ಠಾಣೆಗೆ ದೂರು ನೀಡುತ್ತೇವೆ ಎಂದಿದ್ದಾರೆ. ಬ್ಯಾನರ್ ಗಲಾಟೆಯಾಗಿ ಇನ್ನೂ 15 ದಿನಗಳು ಸಹ ಆಗಿಲ್ಲ. ಆಗಲೇ ಇಂತಹ ಘಟನೆ ನಡೆದಿದೆ. ಈ ಘಟನೆಯ ಕುರಿತಂತೆ ಬಳ್ಳಾರಿ ಎಸ್…
ಬಳ್ಳಾರಿ: ಜಿಲ್ಲೆಯ ಜಿ ಸ್ಕ್ರೈರ್ ಲೇಔಟ್ ನಲ್ಲಿ ಇರುವಂತ ಜನಾರ್ಧನ ರೆಡ್ಡಿ ಹಾಗೂ ಶ್ರೀರಾಮುಲುಗೆ ಸೇರಿದಂತ ಮಾಡೆಲ್ ಹೌಸ್ ಗೆ ಬೆಂಕಿ ಇಡಲಾಗಿದೆ. ಬಳ್ಳಾರಿಯ ಬ್ಯಾನರ್ ಗಲಾಟೆ ಬಳಿಕ ಮತ್ತೊಂದು ಕೃತ್ಯ ಎಸಗಲಾಗಿದೆ. ಬಳ್ಳಾರಿಯ ಬ್ಯಾನರ್ ಗಲಾಟೆ ಮಾಸೋ ಮುನ್ನವೇ ಮತ್ತೊಂದು ಕೃತ್ಯವನ್ನು ಎಸಗಲಾಗಿದೆ. ರೆಡ್ಡಿ, ಬಿ.ಶ್ರೀರಾಮುಲುಗೆ ಸೇರಿದಂತ ಮಾಡೆಲ್ ಹೌಸ್ ಗೆ ದುಷ್ಕರ್ಮಿಗಳು ಬೆಂಕಿ ಇಟ್ಟಿದ್ದಾರೆ. ಕೈ ಶಾಸಕ ಭರತ್ ರೆಡ್ಡಿ ಬೆಂಬಲಿಗರೇ ಇನ್ನು ಮಾಡಿರುವುದು ಎಂಬುದಾಗಿ ಬಳ್ಳಾರಿಯಲ್ಲಿ ಮಾಜಿ ಶಾಸಕ ಸೋಮಶೇಖರ್ ರೆಡ್ಡಿ ಹೇಳಿದ್ದಾರೆ. ಶಾಸಕ ಭರತ್ ರೆಡ್ಡಿ ವಿರುದ್ಧ ಸೋಮಶೇಖರ ರೆಡ್ಡಿ ಗಂಭೀರ ಆರೋಪ ಮಾಡಿದ್ದಾರೆ. ಬೆಂಕಿ ಹಚ್ಚಿದಂತ ಘಟನಾ ಸ್ಥಳಕ್ಕೆ ಪೊಲೀಸರು ಕೂಡಲೇ ಬಂದಿದ್ದಾರೆ. ಇದನ್ನು ನಾವು ಬಿಡಲ್ಲ. ಪೊಲೀಸ್ ಠಾಣೆಗೆ ದೂರು ನೀಡುತ್ತೇವೆ ಎಂದಿದ್ದಾರೆ.














