Author: kannadanewsnow09

ಬೆಂಗಳೂರು: ಗ್ರಾಮೀಣ ಪ್ರದೇಶಗಳಲ್ಲಿನ ಆಸ್ತಿಗಳ ನೋಂದಣಿಗೆ ಕಂದಾಯ ಇಲಾಖೆಯು ಇ-ಸ್ವತ್ತು ಕಡ್ಡಾಯಗೊಳಿಸಿರುವುದರಿಂದ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಬಾಕಿ ಇರುವ ಸುಮಾರು 90 ಲಕ್ಷ ಆಸ್ತಿಗಳಿಗೆ ಕಾಲಮಿತಿಯೊಳಗೆ ಇ-ಸ್ವತ್ತು ವಿತರಣೆ ಮಾಡಿ, ಆಸ್ತಿ ತೆರಿಗೆ ಸಂಗ್ರಹ ಅಭಿಯಾನವನ್ನು ಕೈಗೊಳ್ಳಲು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಹಾಗೂ ಮಾಹಿತಿ ತಂತ್ರಜ್ಞಾನ ಸಚಿವ ಪ್ರಿಯಾಂಕ್‌ ಖರ್ಗೆ ಸೂಚಿಸಿದ್ದಾರೆ. ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಇಲಾಖೆಯ ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ (ಪಂಚಾಯತ್‌ ರಾಜ್‌) ಉಮಾ ಮಹದೇವನ್‌ ಹಾಗೂ ಅಧಿಕಾರಿಗಳೊಂದಿಗೆ ಸಚಿವರು ಸಭೆ ನಡೆಸಿ ಇನ್ನು ಮುಂದೆ ಕಂದಾಯ ಜಮೀನಿನಲ್ಲಿ ಬಡಾವಣೆ ನಿರ್ಮಾಣಕ್ಕೆ ಅವಕಾಶ ನೀಡದಿರಲು ಸೂಚಿಸಿದರಲ್ಲದೆ, ಹೊಸ ಬಡಾವಣೆಗಳ ನಿರ್ಮಾಣವನ್ನು ತಡೆಯಲು ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳಬೇಕು ಎಂದೂ ಹೇಳಿದರು. ಖಾತಾ ಇಲ್ಲದ ಬಹಳಷ್ಟು ಆಸ್ತಿಗಳ ಸಂಬಂಧ ಖೊಟ್ಟಿ ದಾಖಲೆಗಳನ್ನು ಸೃಷ್ಟಿಸಿ ನಿವೇಶನ ಹಾಗೂ ಮನೆಗಳನ್ನು ನೋಂದಣಿ ಮಾಡುವ ಬಗ್ಗೆ ವರದಿಗಳು ಬರುತ್ತಿದ್ದು, ಇಂತಹ ಪ್ರಕ್ರಿಯೆಗೆ ಕಡಿವಾಣ ಹಾಕಬೇಕು ಎಂದೂ ಸಚಿವರು ತಮ್ಮ ತಿಳಿಸಿದರು. ಸ್ಥಳೀಯ ಸಂಸ್ಥೆಗಳಾದ ಗ್ರಾಮ…

Read More

ಬೆಂಗಳೂರು : ರಾಜ್ಯದ ಕಾಂಗ್ರೆಸ್ ಸರ್ಕಾರದಲ್ಲಿ ಯಾವುದೇ ಗೊಂದಲಗಳಿಲ್ಲ. ನಮಗೆ ಸರ್ಕಾರಕ್ಕಿಂತ ಪಕ್ಷವೇ ಮುಖ್ಯ. ಸಿಎಂ ಬದಲಾವಣೆ ಕಾಂಗ್ರೆಸ್ ಹೈಕಮಾಂಡ್ ಗೆ ಬಿಟ್ಟಿದ್ದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಹೇಳಿದ್ದಾರೆ. ಕೆಪಿಸಿಸಿ ಕಚೇರಿ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸರ್ಕಾರಕ್ಕಿಂತ ಪಕ್ಷವೇ ದೊಡ್ಡದು. ಶತಮಾನಗಳ ಇತಿಹಾಸ ಇರುವ ಈ ಪಕ್ಷಕ್ಕೆ ತನ್ನದೇ ಆದ ಬದ್ಧತೆ ಇದೆ. ಪಕ್ಷ ಇದ್ದರೆ ಸರ್ಕಾರ ರಚನೆ ಸಾಧ್ಯ ಎಂದು ಸಚಿವರು ತಿಳಿಸಿದರು. ಕರ್ನಾಟಕದಲ್ಲಿ ಕಾಂಗ್ರೆಸ್ ಪಕ್ಷ ಬಲವರ್ಧನೆಗೊಂಡಿದೆ‌. ನಮ್ಮ ಪಕ್ಷದಲ್ಲಿ ಯಾರೇ ಸಚಿವರಾದರೂ ಕಾರ್ಯಕರ್ತರು ಇದ್ದ ಹಾಗೆ ಎಂದು ಅಭಿಪ್ರಾಯಪಟ್ಟರು. ಸಿಎಂ ಬದಲಾವಣೆ ಹೈಕಮಾಂಡ್ ಗೆ ಬಿಟ್ಟಿದ್ದು ಅಧಿಕಾರ ಹಂಚಿಕೆ ಕುರಿತಂತೆ ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಸಚಿವರು, ನಾನು ಪಕ್ಷದ ಶಿಸ್ತಿನ ಸಿಪಾಯಿ, ಮುಖ್ಯಮಂತ್ರಿ ಬದಲಾವಣೆ ಎನ್ನುವ ವಿಚಾರ ಹೈಕಮಾಂಡ್ ಗೆ ಬಿಟ್ಟಿದ್ದು, ಪಕ್ಷದ ಚೌಕಟ್ಟಿನ ಒಳಗೆ ಮಾತನಾಡುವ ವಿಶ್ವಾಸ ಇಟ್ಟುಕೊಂಡಿದ್ದೇನೆ ಅಷ್ಟೇ ಎಂದರು. ಇಂದು ಮುಖ್ಯಮಂತ್ರಿ ಹಾಗೂ…

Read More

ಬೆಂಗಳೂರು : ರಾಜ್ಯದ ಕಾಂಗ್ರೆಸ್ ಸರ್ಕಾರದಲ್ಲಿ ಯಾವುದೇ ಗೊಂದಲಗಳಿಲ್ಲ. ನಮಗೆ ಸರ್ಕಾರಕ್ಕಿಂತ ಪಕ್ಷವೇ ಮುಖ್ಯ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಹೇಳಿದ್ದಾರೆ. ಕೆಪಿಸಿಸಿ ಕಚೇರಿ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸರ್ಕಾರಕ್ಕಿಂತ ಪಕ್ಷವೇ ದೊಡ್ಡದು. ಶತಮಾನಗಳ ಇತಿಹಾಸ ಇರುವ ಈ ಪಕ್ಷಕ್ಕೆ ತನ್ನದೇ ಆದ ಬದ್ಧತೆ ಇದೆ. ಪಕ್ಷ ಇದ್ದರೆ ಸರ್ಕಾರ ರಚನೆ ಸಾಧ್ಯ ಎಂದು ಸಚಿವರು ತಿಳಿಸಿದರು. ಕರ್ನಾಟಕದಲ್ಲಿ ಕಾಂಗ್ರೆಸ್ ಪಕ್ಷ ಬಲವರ್ಧನೆಗೊಂಡಿದೆ‌. ನಮ್ಮ ಪಕ್ಷದಲ್ಲಿ ಯಾರೇ ಸಚಿವರಾದರೂ ಕಾರ್ಯಕರ್ತರು ಇದ್ದ ಹಾಗೆ ಎಂದು ಅಭಿಪ್ರಾಯಪಟ್ಟರು. ಸಿಎಂ ಬದಲಾವಣೆ ಹೈಕಮಾಂಡ್ ಗೆ ಬಿಟ್ಟಿದ್ದು ಅಧಿಕಾರ ಹಂಚಿಕೆ ಕುರಿತಂತೆ ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಸಚಿವರು, ನಾನು ಪಕ್ಷದ ಶಿಸ್ತಿನ ಸಿಪಾಯಿ, ಮುಖ್ಯಮಂತ್ರಿ ಬದಲಾವಣೆ ಎನ್ನುವ ವಿಚಾರ ಹೈಕಮಾಂಡ್ ಗೆ ಬಿಟ್ಟಿದ್ದು, ಪಕ್ಷದ ಚೌಕಟ್ಟಿನ ಒಳಗೆ ಮಾತನಾಡುವ ವಿಶ್ವಾಸ ಇಟ್ಟುಕೊಂಡಿದ್ದೇನೆ ಅಷ್ಟೇ ಎಂದರು. ಇಂದು ಮುಖ್ಯಮಂತ್ರಿ ಹಾಗೂ ಉಪ ಮುಖ್ಯಮಂತ್ರಿಗಳ ಸಮ್ಮುಖದಲ್ಲಿ ಪಕ್ಷ ಸಂಘಟನೆ ಬಗ್ಗೆ…

Read More

ನವದೆಹಲಿ: ರಸ್ತೆ ಅಪಘಾತದಲ್ಲಿ ಗಾಯಗೊಂಡ ವ್ಯಕ್ತಿಗೆ ಸಹಾಯ ಮಾಡುವವರಿಗೆ 25,000 ರೂ.ಗಳ ಬಹುಮಾನ ನೀಡಲಾಗುವುದು ಎಂದು ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಹೇಳಿದ್ದಾರೆ. ನಾಗ್ಪುರದಲ್ಲಿ ನಟ ಅನುಪಮ್ ಖೇರ್ ಅವರೊಂದಿಗೆ ರಸ್ತೆ ಸುರಕ್ಷತೆ ಕುರಿತ ಕಾರ್ಯಕ್ರಮದಲ್ಲಿ ಮಾತನಾಡಿದ ಗಡ್ಕರಿ, ಅಪಘಾತದ ನಿರ್ಣಾಯಕ ಮೊದಲ ಗಂಟೆಯಲ್ಲಿ ರಸ್ತೆ ಅಪಘಾತ ಸಂತ್ರಸ್ತರನ್ನು ಆಸ್ಪತ್ರೆಗಳಿಗೆ ಸಾಗಿಸುವ ವ್ಯಕ್ತಿಗೆ ಪ್ರಸ್ತುತ ಬಹುಮಾನ ಸಾಕಾಗುವುದಿಲ್ಲ ಎಂದು ಹೇಳಿದರು. ಅಪಘಾತಗಳಲ್ಲಿ ಗಾಯಗೊಂಡವರಿಗೆ ಮೊದಲ ಏಳು ದಿನಗಳವರೆಗೆ 1.5 ಲಕ್ಷ ರೂ.ವರೆಗಿನ ಆಸ್ಪತ್ರೆ ವೆಚ್ಚವನ್ನು ಸರ್ಕಾರ ಭರಿಸಲಿದೆ ಎಂದು ಸಚಿವರು ಹೇಳಿದರು. ಈ ಯೋಜನೆಯು ರಾಷ್ಟ್ರೀಯ ಹೆದ್ದಾರಿಗಳಲ್ಲಿ ಗಾಯಗೊಂಡವರಿಗೆ ಮಾತ್ರ ಸೀಮಿತವಾಗಿಲ್ಲ. ರಾಜ್ಯ ಹೆದ್ದಾರಿಗಳಲ್ಲಿ ಗಾಯಗೊಂಡ ಜನರಿಗೂ ಅನ್ವಯಿಸುತ್ತದೆ ಎಂದು ಅವರು ಹೇಳಿದರು. ಅಪಘಾತದಲ್ಲಿ ಸಹಾಯ ಮಾಡಿದವರಿಗೆ ಬಹುಮಾನ ನೀಡುವ ಯೋಜನೆಯನ್ನು ಅಕ್ಟೋಬರ್ 2021 ರಲ್ಲಿ ಪ್ರಾರಂಭಿಸಲಾಯಿತು. ಈ ಯೋಜನೆಯ ಪ್ರಕಾರ, ಮಾರಣಾಂತಿಕ ಅಪಘಾತಕ್ಕೊಳಗಾದವರ ಜೀವವನ್ನು ತಕ್ಷಣದ ಸಹಾಯವನ್ನು ಒದಗಿಸುವ ಮೂಲಕ ಮತ್ತು ವೈದ್ಯಕೀಯ ಚಿಕಿತ್ಸೆಗಾಗಿ…

Read More

ಬೆಂಗಳೂರು: ಉತ್ತರ ಪ್ರದೇಶದ ಪ್ರಯಾಗರಾಜ್ ನಲ್ಲಿ ಇಂದಿನಿಂದ ಕುಂಭಮೇಳ ಆರಂಭಗೊಂಡಿದೆ. ದೇಶ, ವಿದೇಶಗಳಿಂದ ಕೋಟ್ಯಂತರ ಜನರು ಕುಂಭಮೇಳದಲ್ಲಿ ಭಾಗಿಯಾಗುತ್ತಿದ್ದಾರೆ. ಕರ್ನಾಟಕದಿಂದಲೂ ಅನೇಕರು ತೆರಳಿದ್ದಾರೆ. ಇಂತಹವರಿಗೆ ಗುಡ್ ನ್ಯೂಸ್ ಎನ್ನುವಂತೆ ಮಹಾ ಕುಂಭಮೇಳದಲ್ಲಿ ನಂದಿನಿ ಹಾಲಿನ ( Nandini Milk ) ಟೀ ಕೂಡ ಲಭ್ಯವಾಗಲಿದೆ. ಹೌದು ಇದಕ್ಕಾಗಿ ಕೆಎಂಎಫ್ ಉತ್ತರ ಪ್ರದೇಶದ ಸರ್ಕಾರದ ಜೊತೆಗೆ ಒಪ್ಪಂದ ಮಾಡಿಕೊಂಡಿದೆ. ಪ್ರಯಾಗರಾಜ್ ನ ಮಹಾ ಕುಂಭಮೇಳದಲ್ಲಿ ಚಹಾ ವಿತರಿಸಲು ಚಾಯ್ ಪಾಯಿಂಟ್ ತೆರೆಯುತ್ತಿದೆ. ಕುಂಭಮೇಳದಾಧ್ಯಂತ 10 ನಂದಿನಿ ಹಾಲಿನ ಚಾಯ್ ಪಾಯಿಂಟ್ ಮಳಿಗೆಯನ್ನು ಸ್ಥಾಪಿಸಲಿದೆ. ಈ ಬೂತ್ ಗಳಿಂದ ಸುಮಾರು 1 ಕೋಟಿ ಕಪ್ ಚಹಾ ವಿತರಿಸುವಂತ ಗುರಿಯನ್ನು ಕೆಎಂಎಫ್ ಹೊಂದಿದೆ ಎಂಬುದಾಗಿ ಪ್ರಕಟಣೆಯಲ್ಲಿ ತಿಳಿಸಿದೆ. ಉತ್ತರ ಪ್ರದೇಶದ ಪ್ರಯಾಗರಾಜ್ ನಲ್ಲಿನ ಮಹಾ ಕುಂಭಮೇಳದಲ್ಲಿ ಸವಿಯುವ ಪ್ರತೀ ಕಪ್ ಚಾಹ ಕೂಡ ನಂದಿನಿಯ ಶ್ರೀಮಂತ ಹಾಗೂ ಉತ್ತಮ ಗುಣಮಟ್ಟದ ಹಾಲಿನಿಂದ ತಯಾರಿಸಲಾಗುತ್ತದೆ. ಚಾಹ ಪ್ರಿಯರಿಗೆ ಸಂತೋಷದ ಅನುಭವ ನೀಡಲಿದೆ ಎಂದು ಪ್ರಕಟಣೆಯಲ್ಲಿ ಕೆಎಂಎಫ್ ಹೇಳಿದೆ. https://kannadanewsnow.com/kannada/opposition-leader-r-ashoka-demands-police-find-out-those-behind-cow-slaughter-incident/…

Read More

ಬೆಂಗಳೂರು : ಚಾಮರಾಜಪೇಟೆಯಲ್ಲಿ ಹಸುಗಳ ಕೆಚ್ಚಲು ಕೊಯ್ದ ಘಟನೆಯ ಹಿಂದೆ ಇರುವವರನ್ನು ರಾಜ್ಯ ಸರ್ಕಾರ ಪತ್ತೆ ಮಾಡಬೇಕೇ ಹೊರತು ಒಬ್ಬ ವ್ಯಕ್ತಿಯನ್ನು ಕಾಟಾಚಾರಕ್ಕೆ ಬಂಧಿಸುವುದಲ್ಲ. ಪೊಲೀಸರು ಇದರ ಹಿಂದಿರುವವರನ್ನು ಹುಡುಕಲಿ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ಆಗ್ರಹಿಸಿದ್ದಾರೆ. ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬೆಂಗಳೂರಿನ ಚಾಮರಾಜಪೇಟೆಯಲ್ಲಿ ಹಿಂದೂಗಳಿಗೆ ಘಾಸಿಯಾಗುವ ಘಟನೆ ನಡೆದಿದೆ. ಸಂಕ್ರಾಂತಿ ಹಬ್ಬದ ಸಮಯದಲ್ಲೇ ಹಸುಗಳ ಕೆಚ್ಚಲು ಕೊಯ್ದಿದ್ದು, ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ವಹಿಸಬೇಕೆಂದು ಸರ್ಕಾರಕ್ಕೆ ಆಗ್ರಹಿಸಿದ್ದೆ. ಈಗ ಕಾಟಾಚಾರಕ್ಕಾಗಿ ಒಬ್ಬನನ್ನು ಬಂಧಿಸಿದ್ದು, ಈತ ಬಿಹಾರದಿಂದ ಬಂದವನು ಎನ್ನಲಾಗಿದೆ. ಆದರೆ ಈತ ಇದೇ ಊರಿನಲ್ಲಿ ಹತ್ತು ವರ್ಷಗಳಿಂದ ನೆಲೆಸಿದ್ದು, ಆತನ ಅಣ್ಣನಿಗೆ ಫ್ಯಾಕ್ಟರಿ ಕೂಡ ಇದೆ. ಪೊಲೀಸರು ಈತನನ್ನು ವಿಚಾರಣೆ ಮಾಡಿ, ಇದರ ಹಿಂದೆ ಯಾರಿದ್ದಾರೆ ಎಂದು ಪತ್ತೆ ಮಾಡಬೇಕಿತ್ತು ಎಂದರು. ಈ ಘಟನೆಯಲ್ಲಿ ಯಾರ ಕೈವಾಡವಿದೆ ಎಂದು ತನಿಖೆ ಮಾಡಬೇಕಿತ್ತು. ಇಲ್ಲಿ ಪಶು ಆಸ್ಪತ್ರೆಯ ಜಾಗವಿದ್ದು, ಅದನ್ನು ವಕ್ಫ್‌ಗೆ ನೀಡಲು ಪ್ರಯತ್ನ ನಡೆದಿತ್ತು. ಸುಮಾರು 500 ಕೋಟಿ ರೂ.…

Read More

ಬೆಂಗಳೂರು: ದಿನಾಂಕ 16.01.2025 (ಗುರುವಾರ) ಬೆಳಿಗ್ಗೆ 11:00 ಗಂಟೆಯಿAದ ಮದ್ಯಾಹ್ನ 5:00 ಗಂಟೆಯವರೆಗೆ “66/11ಕೆ.ವಿ ಪಾಟರಿ ರೋಡ್” ಸ್ಟೇಷನ್ ನಲ್ಲಿ ಕೆ.ಪಿ.ಟಿ.ಸಿ.ಎಲ್ ವತಿಯಿಂದ ತುರ್ತುನಿರ್ವಹಣಾ ಕೆಲಸಗಳನ್ನು ನಿರ್ವಹಿಸುವುದರಿಂದ ಈ ಕೆಳಗಿನ ಸ್ಥಳಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗುವುದು. ವಿದ್ಯುತ್ ವ್ಯತ್ಯಯವಾಗುವ ಸ್ಥಳಗಳು: ಹಳೆ ಬೈಯಪ್ಪನಹಳ್ಳಿ, ನಾಗೇನಪಾಳ್ಯ, ಸತ್ಯನಗರ, ಗಜೇಂದ್ರನಗರ, ಎಸ್.ಕುಮಾರ್ ಲೇಔಟ್, ಆಂಧ್ರ ಬ್ಯಾಂಕ್ ರಸ್ತೆ, ಕುಕ್ಸನ್ ರಸ್ತೆ, ಡೇವಿಸ್ ರಸ್ತೆ, ರಿರ‍್ಡ್ಸ್ ಪರ‍್ಕ್ ರಸ್ತೆ, ಆಯಿಲ್ ಮಿಲ್ ರಸ್ತೆ, ಸದಾಶಿವ ದೇವಸ್ಥಾನ ರಸ್ತೆ, ಕಾಮನಹಳ್ಳಿ ಮುಖ್ಯರಸ್ತೆ, ಕೆ.ಹಚ್.ಬಿ ಕಾಲೋನಿ, ಜೈಭಾರತ್ ನಗರ, ಸಿ.ಕೆ. ಗರ‍್ಡನ್, ಡಿ’ಕೋಸ್ಟಾ ಲೇಔಟ್, ಹಚಿನ್ಸ್ ರಸ್ತೆ, ಉತ್ತರ ರಸ್ತೆ, ವೀಲರ್ ರಸ್ತೆ, ಅಶೋಕ ರಸ್ತೆ, ಬಾಣಸವಾಡಿ ರೈಲು ನಿಲ್ದಾಣ ರಸ್ತೆ, ಮರಿಯಮ್ಮ ಟೆಂಪಲ್ ಸ್ಟ್ರೀಟ್, ಲಾಜರ್ ಲೇಔಟ್, ವಿವೇಕಾನಂದ ನಗರ, ಕ್ಲೈನ್ ರಸ್ತೆ, ಟೆಲಿಫೋನ್ ಎಕ್ಸ್‌ಚೇಂಜ್ ರಸ್ತೆ, ಗ್ಯಾಂಗ್‌ಮೆನ್ ಕ್ವರ‍್ಟರ‍್ಸ್, ಹಚಿನ್ಸ್ ರಸ್ತೆ ಪರ‍್ಕ್ ರಸ್ತೆ, ದೇಶೀಯನಗರ ಸ್ಲಂ, 5ನೇ ಮತ್ತು 6ನೇ ಅಡ್ಡ ಹಚಿನ್ಸ್ ರಸ್ತೆ,…

Read More

ಬೆಂಗಳೂರು: ದಿವಂಗತ ಜಯಲಲಿತಾ ವಿರುದ್ಧ ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣದಲ್ಲಿ ಜಪ್ತಿ ಮಾಡಲಾಗಿದ್ದಂತ ಒಡವೆಯನ್ನು ತಮಿಳುನಾಡು ಸರ್ಕಾರಕ್ಕೆ ಹಿಂದಿರುಗಿಸುವ ಆದೇಶ ಪ್ರಶ್ನಿಸಿ ಸಲ್ಲಿಸಿದ್ದಂತ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ. ಅಲ್ಲದೇ ಜಯಲಲಿತಾ ಅವರಿಂದ ಜಪ್ತಿ ಮಾಡಲಾಗಿದ್ದಂತ ಒಡವೆಗಳನ್ನು ತಮಿಳುನಾಡು ಸರ್ಕಾರಕ್ಕೆ ಹಿಂದಿರುಗಿಸುವಂತೆ ಹೈಕೋರ್ಟ್ ಆದೇಶಿಸಿದೆ. ಇಂದು ಜಯಲಲಿತಾಗೆ ಸಂಬಂಧಿಸಿದಂತ ಜಪ್ತಿಯಾದ ಒಡವೆ ತಮಿಳುನಾಡು ಸರ್ಕಾರಕ್ಕೆ ಹಿಂತಿರುಗಿಸಲು ಹೈಕೋರ್ಟ್ ಅನುಮತಿ ಆಕ್ಷೇಪಿಸಿ ಜಯಲಲಿತಾ ವಾರಸುದಾರೆ ಜೆ.ದೀಪಾ ಸಲ್ಲಿಸಿದ್ದಂತ ಅರ್ಜಿಯನ್ನು ಕರ್ನಾಟಕ ಹೈಕೋರ್ಟ್ ವಜಾಗೊಳಿಸಿತು. ನ್ಯಾಯಮೂರ್ತಿ ವಿ ಶ್ರಿಶಾನಂದ ಅವರಿದ್ದಂತ ಹೈಕೋರ್ಟ್ ಏಕಸದಸ್ಯ ನ್ಯಾಯಪೀಠವು ಈ ಆದೇಶ ಹೊರಡಿಸಿದೆ. ಅಂದಹಾಗೇ ಕಳೆದ ಮಾರ್ಚ್ 6, 7ರಂದು ದಿವಂಗತ ಜಯಲಲಿತಾ ಅವರ ವಿರುದ್ಧದ ಆದಾಯ ಮೀರಿ ಆಸ್ತಿ ಗಳಿಗೆ ಪ್ರಕರಣದಲ್ಲಿ ಜಪ್ತಿ ಮಾಡಲಾಗಿದ್ದಂತ ಒಡವೆಯನ್ನು ಹಸ್ತಾಂತರಿಸಬೇಕಿತ್ತು. ಆದರೇ ವಿಶೇಷ ಕೋರ್ಟ್ ಆದೇಶದಿಂದ ತಮ್ಮ ಹಕ್ಕಿಗೆ ಧಕ್ಕೆಯಾಗಿದಂತೆ ಎಂಬುದಾಗಿ ಜೆ.ದೀಪಾ ಅರ್ಜಿಯನ್ನು ಸಲ್ಲಿಸಿದ್ದರು. ಸುಪ್ರೀಂ ಕೋರ್ಟ್ ಆದೇಶದಂತೆ ಕ್ರಮ ಕೈಗೊಳ್ಳಲಾಗಿದೆ ಎಂಬುದಾಗಿ ಎಸ್ ಪಿಪಿ ಕಿರಣ್ ಜವಳಿ…

Read More

ಬೆಂಗಳೂರು: ಬಿಬಿಎಂಪಿ ವ್ಯಾಪ್ತಿಯಲ್ಲಿ ಅನಧಿಕೃತ ಜಾಹೀರಾತುಗಳನ್ನು ಅಳವಡಿಸಿರುವವರ ಮೇಲೆ ಎಫ್.ಐ.ಆರ್ ದಾಖಲಿಸಲು ಮುಖ್ಯ ಆಯುಕ್ತರಾದ ತುಷಾರ್ ಗಿರಿ ನಾಥ್ ರವರು ಅಧಿಕಾರಿಗಳಿಗೆ ಸೂಚನೆ ನೀಡಿದರು. ಬಿಬಿಎಂಪಿ ವ್ಯಾಪ್ತಿಯಲ್ಲಿ ವಿವಿಧ ವಿಷಯಗಳಿಗೆ ಸಂಬಂಧಿಸಿದಂತೆ ಇಂದು ಪಾಲಿಕೆ ಕೇಂದ್ರ ಕಛೇರಿಯಲ್ಲಿ ನಡೆದ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು, ಪಾಲಿಕೆ ವ್ಯಾಪ್ತಿಯಲ್ಲಿ ಎಲ್ಲಿಯೂ ಅನಧಿಕೃತ ಜಾಹೀರಾತುಗಳನ್ನು ಅಳವಡಿಸದಂತೆ ಸೂಕ್ತ ಕ್ರಮಗಳನ್ನು ಕೈಗೊಳ್ಳಬೇಕೆಂದು ಅಧಿಕಾರಿಗಳಿಗೆ ಸೂಚನೆ ನೀಡಿದರು. ಪಾಲಿಕೆಯ ಎಲ್ಲಾ 8 ವಲಯಗಳಲ್ಲಿ ಅನಧಿಕೃತ ಜಾಹೀರಾತುಗಳನ್ನು ಅಳವಡಿಸಿರುವುದನ್ನು ತೆರವುಗೊಳಿಸಿ, ಅಳವಡಿಸಿರುವವರ ಮೇಲೆ ಎಫ್.ಐ.ಆರ್ ದಾಖಲಿಸಬೇಕು. ಮತ್ತೆ ಯಾವುದೇ ರೀತಿಯ ಅನಧಿಕೃತ ಜಾಹೀರಾತುಗಳು ಅಳವಡಿಸದಂತೆ ಅಗತ್ಯ ಕ್ರಮಗಳನ್ನು ಕೈಗೊಳ್ಳಲು ಸೂಚಿಸಲಾಯಿತು. ಆಸ್ತಿಗಳನ್ನು ಟ್ಯಾಕ್ಸ್ ನೆಟ್ ಗೆ ತರಲು ಸೂಚನೆ: ಬಿಬಿಎಂಪಿ ವ್ಯಾಪ್ತಿಯಲ್ಲಿ ಆಸ್ತಿ ತೆರಿಗೆಯಿಂದ ಹೊರಗುಳಿದ ಆಸ್ತಿಗಳನ್ನು ಟ್ಯಾಕ್ಸ್ ನೆಟ್ ಗೆ ತರಬೇಕು. ಈ ಸಂಬಂಧ ಆಯಾ ವಲಯ ವ್ಯಾಪ್ತಿಯಲ್ಲಿ ಎಷ್ಟು ಆಸ್ತಿಗಳು ಆಸ್ತಿ ತೆರಿಗೆ ವ್ಯಾಪ್ತಿಯಿಂದ ಹೊರಗುಳಿದಿವೆ ಎಂಬುದನ್ನು ಗುರುತಿಸಿ ಎಲ್ಲಾ ಆಸ್ತಿಗಳನ್ನು ಆಸ್ತಿ ತೆರಿಗೆ ವ್ಯಾಪ್ತಿಗೆ…

Read More

ಕಾರವಾರ: ಜಿಲ್ಲೆಯ ನೌಕಾನೆಲೆಯ ಸಿಬ್ಬಂದಿಯೊಬ್ಬರು ಅಯ್ಯಪ್ಪ ಮಾಲಾಧಾರಿ ಮೇಲೆಯೇ ಹಲ್ಲೆ ಮಾಡಿರುವಂತ ಘಟನೆ ನಡೆದಿದೆ. ಇದನ್ನು ಖಂಡಿಸಿ ಸಾರ್ವಜನಿಕರು ಸ್ಥಳದಲ್ಲಿ ಪ್ರತಿಭಟನೆ ಮಾಡುತ್ತಿರುವುದಾಗಿ ತಿಳಿದು ಬಂದಿದೆ. ನಿನ್ನೆ ರಾತ್ರಿ 25ಕ್ಕೂ ಹೆಚ್ಚು ನೌಕಾನೆಲೆಯ ಸಿಬ್ಬಂದಿಗಳಿಂದ ಅಯ್ಯಪ್ಪ ಮಾಲಾಧಾರಿಯೊಬ್ಬರ ಮೇಲೆ ಹಲ್ಲೆ ಮಾಡಿರುವುದಾಗಿ ಆರೋಪ ಕೇಳಿ ಬಂದಿದೆ. ಈ ಹಿನ್ನಲೆಯಲ್ಲಿ ನೌಕಾನೆಲೆಯ ಗೇಟ್ ಬಳಿಯಲ್ಲಿ ಜಮಾಯಿಸಿರುವಂತ ಸಾರ್ವಜನಿಕರು ಹಲ್ಲೆ ಕೋರರನ್ನು ಬಂಧಿಸುವಂತೆ ಆಗ್ರಹಿಸಿ ಪ್ರತಿಭಟನೆ ನಡೆಸುತ್ತಿದ್ದಾರೆ. ಇನ್ನೂ ಈ ಪ್ರತಿಭಟನೆಗೆ ಮಾಜಿ ಶಾಸಕಿ ರೂಪಾಲಿ ನಾಯ್ಕ್ ಕೂಡ ಬೆಂಬಲ ಸೂಚಿಸಿದ್ದಾರೆ. ಕಾಂಗ್ರೆಸ್ ಮುಖಂಡ ಶಂಭು ಶೆಟ್ಟಿ ಸೇರಿದಂತೆ ಇತರರು ಸ್ಥಳದಲ್ಲಿದ್ದಾರೆ. ಸ್ಥಳದಲ್ಲಿ ಬಿಗುವಿನ ವಾತಾವರಣದಿಂದ ಕೂಡಿದ್ದು, ಮುಂಜಾಗ್ರತಾ ಕ್ರಮವಾಗಿ 4 ಡಿಎಆರ್ ಎಫ್ ತುಕಡಿಯನ್ನು ನಿಯೋಜಿಸಲಾಗಿದೆ. ಜೊತೆಗೆ ಸ್ಥಳದಲ್ಲೇ ಹಿರಿಯ ಪೊಲೀಸ್ ಅಧಿಕಾರಿಗಳು ಮೊಕ್ಕಾಂ ಕೂಡ ಹೂಡಿದ್ದಾರೆ. https://kannadanewsnow.com/kannada/breaking-in-yet-another-shocking-incident-in-the-state-a-mother-four-children-died-after-jumping-into-a-canal-with-their-children/ https://kannadanewsnow.com/kannada/breaking-in-yet-another-incident-in-the-state-mother-attempts-suicide-after-killing-four-children-in-vijayapura/

Read More