Author: kannadanewsnow09

ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮವು ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳಿಗೆ ಅನುಕೂಲ ಕಲ್ಪಿಸೋ ನಿಟ್ಟಿನಲ್ಲಿ, ಪರೀಕ್ಷೆ-1ರಂದು ತಮ್ಮ ವಾಸಸ್ಥಳದಿಂದ ಪರೀಕ್ಷಾ ಕೇಂದ್ರಕ್ಕೆ ಉಚಿತವಾಗಿ ಸಾರಿಗೆ ಬಸ್ಸುಗಳಲ್ಲಿ ಪ್ರಯಾಣಿಸಲು ಅವಕಾಶ ನೀಡಿದೆ. ಈ ಬಗ್ಗೆ ಪತ್ರಿಕಾ ಪ್ರಕಟಣೆಯಲ್ಲಿ ಕೆ ಎಸ್ ಆರ್ ಟಿಸಿ ಮಾಹಿತಿ ನೀಡಿದ್ದು, ಎಸ್‌ಎಸ್‌ಎಲ್‌ಸಿ ವಾರ್ಷಿಕ ಪರೀಕ್ಷೆಗಳು ದಿನಾಂಕ 18-03-2026 ರಿಂದ 02-04-2026 ರವರೆಗೆ ನಡೆಯಲಿದ್ದು, ಕ.ರಾ.ರ.ಸಾ ನಿಗಮವು, ಎಸ್‌ಎಸ್‌ಎಲ್‌ಸಿ ವಾರ್ಷಿಕ ಪರೀಕ್ಷೆಗಳಿಗೆ ಹಾಜರಾಗುವ ವಿದ್ಯಾರ್ಥಿಗಳಿಗೆ ತಮ್ಮ ವಾಸಸ್ಥಳದಿಂದ ನಿಯೋಜಿತ ಪರೀಕ್ಷಾ ಕೇಂದ್ರದವರೆಗೆ, ಹೋಗುವಾಗ ಮತ್ತು ಹಿಂದಿರುಗುವಾಗ, “ಎಸ್‌ಎಸ್‌ಎಲ್‌ಸಿ ವಾರ್ಷಿಕ ಪರೀಕ್ಷೆ ಪ್ರವೇಶ ಪತ್ರವನ್ನು” ತೋರಿಸಿ, ನಿಗಮದ ನಗರ, ಹೊರವಲಯ, ಸಾಮಾನ್ಯ ಹಾಗೂ ವೇಗದೂತ ಬಸ್ಸುಗಳಲ್ಲಿ ಉಚಿತವಾಗಿ ಪ್ರಯಾಣಿಸಲು ಅವಕಾಶ ಕಲ್ಪಿಸಿದೆ. ವಿದ್ಯಾರ್ಥಿ ವರ್ಗದವರು ಈ ಸೌಲಭ್ಯವನ್ನು ಪಡೆದುಕೊಳ್ಳಬೇಕಾಗಿ ಕೋರಿದೆ. https://kannadanewsnow.com/kannada/central-govt-shocks-gas-cylinder-consumers-surrender-of-lpg-is-mandatory-if-there-is-png/ https://kannadanewsnow.com/kannada/these-are-the-amazing-health-benefits-of-consuming-grapes/

Read More

ನವದೆಹಲಿ: ಕೇಂದ್ರ ಸರ್ಕಾರದಿಂದ ಗ್ಯಾಸ್ ಸಿಲಿಂಡರ್ ಅಭಾವ ತಪ್ಪಿಸೋದಕ್ಕೆ ಮಹತ್ವದ ಕ್ರಮ ಕೈಗೊಳ್ಳಲಾಗಿದೆ. ಪಿಎನ್ ಜಿ ಸಂಪರ್ಕ ಇದ್ದವರು ಎಲ್ ಪಿ ಜಿ ಸಂಪರ್ಕವನ್ನು ಸರೆಂಡರ್ ಮಾಡುವುದನ್ನು ಕಡ್ಡಾಯಗೊಳಿಸಿ ಆದೇಶಿಸಿದೆ. ಈ ಕುರಿತಂತೆ ಕೇಂದ್ರ ಸರ್ಕಾರ ಆದೇಶ ಮಾಡಿದ್ದು, ಪಿಎನ್ ಜಿ ಗ್ರಾಹಕರು ತಪ್ಪದೇ ಎಲ್ ಪಿ ಜಿ ಸಿಲಿಂಡರ್ ಸಂಪರ್ಕ ಇದ್ದರೇ ಸರೆಂಡರ್ ಮಾಡುವಂತೆ ಸೂಚಿಸಿದೆ. ಮನೆಗಳಲ್ಲಿ ಫೈಪ್ಡ್ ನ್ಯಾಚುರಲ್ ಗ್ಯಾಸ್ ಸಂಪರ್ಕ ಹೊಂದಿರೋ ಗ್ರಾಹಕರಿಗೆ ಈ ಸೂಚನೆ ನೀಡಲಾಗಿದೆ. LPG ಸಿಲಿಂಡರ್ ಸಂಪರ್ಕವನ್ನು ಕಡ್ಡಾಯವಾಗಿ ಹಿಂದುರುಗಿಸಬೇಕು ಎಂಬುದಾಗಿ ಪಿಎನ್ ಜಿ ಸಿಲಿಂಡರ್ ಗ್ರಾಹಕರಿಗೆ ಕೇಂದ್ರ ಸರ್ಕಾರ ಖಡಕ್ ಸೂಚನೆ ನೀಡಿದೆ. https://kannadanewsnow.com/kannada/trees-burnt-in-the-name-of-layout-near-lingadahalli-in-sagara/ https://kannadanewsnow.com/kannada/these-are-the-amazing-health-benefits-of-consuming-grapes/

Read More

ಮುಂಬೈ: ಸತತ ಮೂರು ದಿನಗಳ ಕುಸಿತದ ನಂತರ ದೇಶೀಯ ಷೇರು ಮಾರುಕಟ್ಟೆ ಸೋಮವಾರ ಭರ್ಜರಿ ಚೇತರಿಕೆ ಕಂಡಿದೆ. ಆಟೋಮೊಬೈಲ್, ಹಣಕಾಸು ಮತ್ತು ಖಾಸಗಿ ಬ್ಯಾಂಕಿಂಗ್ ವಲಯದ ಷೇರುಗಳ ಉತ್ತಮ ಖರೀದಿಯಿಂದಾಗಿ ದಲಾಲ್ ಸ್ಟ್ರೀಟ್ ಮತ್ತೆ ಹಸಿರು ನಿಶಾನೆಯೊಂದಿಗೆ ವಹಿವಾಟು ಮುಗಿಸಿದೆ. ಮಾರುಕಟ್ಟೆಯ ಅಂಕಿ-ಅಂಶ: ಬಿಎಸ್‌ಇ ಸೆನ್ಸೆಕ್ಸ್ (Sensex): 938.93 ಪಾಯಿಂಟ್‌ಗಳ ಏರಿಕೆ ಕಂಡು 75,502.85 ಮಟ್ಟದಲ್ಲಿ ಸ್ಥಿರವಾಯಿತು. ಎನ್‌ಎಸ್‌ಇ ನಿಫ್ಟಿ (Nifty50): 257.70 ಪಾಯಿಂಟ್‌ಗಳ ಲಾಭದೊಂದಿಗೆ 23,408.80 ಅಂಕಗಳಿಗೆ ತಲುಪಿತು. ತಜ್ಞರ ವಿಶ್ಲೇಷಣೆ: ಜಿಯೋಜಿತ್ ಇನ್ವೆಸ್ಟ್‌ಮೆಂಟ್ ಲಿಮಿಟೆಡ್‌ನ ಸಂಶೋಧನಾ ಮುಖ್ಯಸ್ಥ ವಿನೋದ್ ನಾಯರ್ ಈ ಬಗ್ಗೆ ಪ್ರತಿಕ್ರಿಯಿಸಿ, “ಕಳೆದ ಕೆಲವು ದಿನಗಳಿಂದ ನಡೆದ ಮಾರಾಟದ ಒತ್ತಡದ ನಂತರ, ಮಾರುಕಟ್ಟೆಯು ಇಂದಿನ ವಹಿವಾಟಿನ ಅಂತ್ಯದ ವೇಳೆಗೆ ಪುಟಿದೆದ್ದಿದೆ. ಆಟೋ, ಬ್ಯಾಂಕಿಂಗ್ ಮತ್ತು ಎಫ್‌ಎಂಸಿಜಿ (FMCG) ವಲಯಗಳಲ್ಲಿ ಹೂಡಿಕೆದಾರರು ಮೌಲ್ಯಾಧಾರಿತ ಖರೀದಿಗೆ ಮುಂದಾಗಿದ್ದು ಮಾರುಕಟ್ಟೆಗೆ ಆಸರೆಯಾಯಿತು,” ಎಂದು ತಿಳಿಸಿದ್ದಾರೆ. ಜಾಗತಿಕ ಸವಾಲುಗಳು: ಮಾರುಕಟ್ಟೆ ಚೇತರಿಸಿಕೊಂಡಿದ್ದರೂ ಕೆಲವು ಸವಾಲುಗಳು ಹಾಗೆಯೇ ಇವೆ ಎಂದು ನಾಯರ್ ಎಚ್ಚರಿಸಿದ್ದಾರೆ.…

Read More

ಮಂಡ್ಯ : ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳು ಪರೀಕ್ಷಾ ಭಯವನ್ನು ಬಿಟ್ಟು ಆತ್ಮವಿಶ್ವಾಸದಿಂದ ಪರೀಕ್ಷೆ ಬರೆಯುವಂತೆ ಮದ್ದೂರು ಕ್ಷೇತ್ರ ಶಿಕ್ಷಣಾಧಿಕಾರಿ ಎಸ್.ಬಿ. ಧನಂಜಯ ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು. 2025 – 26 ನೇ ಸಾಲಿನ ಶೈಕ್ಷಣಿಕ ಸಾಲಿನ ಎಸ್ಸೆಸ್ಸೆಲ್ಸಿ ಪರೀಕ್ಷೆಯ ಪೂರ್ವ ಸಿದ್ಧತಾ ಕ್ರಮಗಳ ಕುರಿತು ಸೋಮವಾರ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿ, ಮದ್ದೂರು ತಾಲೂಕಿನಲ್ಲಿ ಪರೀಕ್ಷೆಯನ್ನು ಸುಗಮವಾಗಿ ಹಾಗೂ ಪಾರದರ್ಶಕವಾಗಿ ನಡೆಸುವ ನಿಟ್ಟಿನಲ್ಲಿ ಎಲ್ಲಾ ಅಗತ್ಯ ಪೂರ್ವ ಸಿದ್ಧತಾ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ತಿಳಿಸಿದರು. ಮದ್ದೂರು ತಾಲೂಕಿನಲ್ಲಿ 39 ಸರ್ಕಾರಿ, 16 ಅನುದಾನಿತ, 29 ಅನುದಾನ ರಹಿತ, ಹಾಗೂ 6 ವಸತಿ ಶಾಲೆಗಳಿಂದ ಒಟ್ಟು 3545 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಲಿದ್ದಾರೆ. ಅದರಲ್ಲಿ ಗಂಡು ಮಕ್ಕಳು 1562, ಹೆಣ್ಣು ಮಕ್ಕಳು 1554 ಹಾಗೂ 16 ವಿಶೇಷ ಅಗತ್ಯವುಳ್ಳ ವಿದ್ಯಾರ್ಥಿಗಳಿದ್ದಾರೆ ಎಂದರು. ತಾಲೂಕಿನ 12 ಪರೀಕ್ಷಾ ಕೇಂದ್ರಗಳನ್ನು ಗುರುತಿಸಲಾಗಿದ್ದು, ಎಲ್ಲಾ ಕೇಂದ್ರಗಳಲ್ಲಿ ಸಿಸಿ ಟಿವಿ ಕ್ಯಾಮೆರಾಗಳನ್ನು ಅಳವಡಿಸಿ ವೆಬ್ ಕಾಸ್ಟಿಂಗ್ ವ್ಯವಸ್ಥೆ ಮಾಡಲಾಗಿದ್ದು,…

Read More

ಶಿವಮೊಗ್ಗ: ಹಸಿರು ವಲಯದಲ್ಲಿದ್ದಂತ ಭೂಮಿಯನ್ನು ವಾಣಿಜ್ಯ ವಲಯವಾಗಿ ಬದಲಾವಣೆ ಮಾಡೋದಕ್ಕೆ ಅದರಲ್ಲಿ ಇರೋದು ಏನು ಅನ್ನೋದನ್ನು ಸಂಬಂಧ ಪಟ್ಟಂತ ಸ್ಥಳೀಯ ಆಡಳಿತ, ತಾಲ್ಲೂಕು ಹಾಗೂ ಜಿಲ್ಲಾ ಆಡಳಿತ ಗಮನಿಸಿ ಅನುಮತಿ ನೀಡಬೇಕು. ಆದರೇ ಕಾಡಂತಿದ್ದ ಖಾಸಗಿ ಭೂಮಿಯನ್ನು ವಾಣಿಜ್ಯ ಬಳಕೆಗೆ ಭೂ ಪರಿವರ್ತನೆ ವೇಳೆಯಲ್ಲಿ ಅದನ್ನೇ ಮರೆತ ಅಧಿಕಾರಿಗಳು ಮಾತ್ರ ಅನುಮತಿಸಿದ್ದರ ಪರಿಣಾಮ ಸಾಗರದ ಲಿಂಗದಹಳ್ಳಿ ಬಳಿಯಲ್ಲಿ ಲೇಔಟ್ ಹೆಸರಲ್ಲಿ ಮರಗಳ ಮಾರಣಹೋಮವೇ ನಡೆದಿದೆ. ಹೌದು.. ಶಿವಮೊಗ್ಗ ಜಿಲ್ಲೆಯ ಸಾಗರ ತಾಲ್ಲೂಕಿನ ಲಿಂಗದಹಳ್ಳಿಯ ಸರ್ಕಾರಿ ಪ್ರೌಢಶಾಲೆಯ ಎದುರಲ್ಲಿನ ಸರ್ವೆ ನಂಬರ್ 84, 85ರಲ್ಲೇ ಲೇಔಟ್ ಹೆಸರಿನಲ್ಲಿ ಮರಗಳ ಮಾರಣಹೋಮವಾಗುತ್ತಿದೆ. ಕಾಡಿಗೆ ಹೊಂದಿಕೊಂಡಿರುವಂತ ಈ ಖಾಸಗಿ ಜಮೀನನ್ನು ಲೇಔಟ್ ಮಾಡೋದಕ್ಕೆ ಭೂ ವರಿವರ್ತನೆ ಮಾಡಲಾಗಿದೆ. ಆದರೇ ಭೂ ಪರಿವರ್ತನೆ ಮಾಡಿ ಕೊಡುವ ಮೊದಲು ಸ್ಥಳೀಯ ಪಡವಗೋಡು ಗ್ರಾಮ ಪಂಚಾಯ್ತಿಯವರು ಮಾತ್ರ ಮಾನದಂತವನ್ನೇ ಅನುಸರಿಸದೇ, ತಾಲ್ಲೂಕು, ಜಿಲ್ಲಾ ಆಡಳಿತಕ್ಕೆ ಶಿಫಾರಸ್ಸು ಮಾಡಿರೋದೇ ಕಾಡಂತಿದ್ದಂತ ಜಮೀನಿನಲ್ಲಿನ ಮರಗಳನ್ನು ಕಡಿತಲೆ ಮಾಡಿ ಬೆಂಗಾಡಾಗಿ ಮಾರ್ಪಡಿಸಲಾಗಿದೆ. ನೂರಾರು ಮರಗಳ…

Read More

ನವದೆಹಲಿ: ಕನ್ನಡದ ಖ್ಯಾತ ಸಾಹಿತಿ ಅಮರೇಶ ನುಗಡೋಣಿ ಅವರಿಗೆ 2025ನೇ ಸಾಲಿನ ಪ್ರತಿಷ್ಠಿತ ‘ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ’ ಲಭಿಸಿದೆ. ಅವರ ಅಮೂಲ್ಯ ಕೃತಿಯಾದ ‘ದಡ ಸೇರಿಸು ತಂದೆ’ ಕಥಾ ಸಂಕಲನಕ್ಕೆ ಈ ಗೌರವ ಸಂದಿದೆ. ಆಯ್ಕೆ ಪ್ರಕ್ರಿಯೆ: ಕೇಂದ್ರ ಸಾಹಿತ್ಯ ಅಕಾಡೆಮಿಯು 2025ನೇ ಸಾಲಿನ ಪ್ರಶಸ್ತಿ ಆಯ್ಕೆಗಾಗಿ ಜನವರಿ 30, 2025 ರಂದು ಅರ್ಜಿಗಳನ್ನು ಆಹ್ವಾನಿಸಿತ್ತು. ಸುದೀರ್ಘ ಪರಿಶೀಲನೆಯ ನಂತರ, ಆಯ್ಕೆ ಸಮಿತಿಯಲ್ಲಿದ್ದ ಗಣ್ಯರಾದ ಡಾ. ಸಿದ್ದಲಿಂಗ ಪಟ್ಟಣಶೆಟ್ಟಿ, ಡಾ. ಜಯಲಲಿತ ಮತ್ತು ಸಹನಾ ಕಾಂತಬೈಲು ಅವರು ಅಮರೇಶ ನುಗಡೋಣಿ ಅವರ ಹೆಸರನ್ನು ಪ್ರಶಸ್ತಿಗೆ ಅಂತಿಮಗೊಳಿಸಿದರು. ಪ್ರಶಸ್ತಿಯ ವಿವರ: ಈ ಪ್ರತಿಷ್ಠಿತ ಪ್ರಶಸ್ತಿಯು ಈ ಕೆಳಗಿನವುಗಳನ್ನು ಒಳಗೊಂಡಿರುತ್ತದೆ: ₹1,00,000 (ಒಂದು ಲಕ್ಷ ರೂಪಾಯಿ) ನಗದು ಬಹುಮಾನ. ಪ್ರಶಸ್ತಿ ಪತ್ರ. ಸ್ಮರಣಿಕೆ. ಮುಂದಿನ ದಿನಗಳಲ್ಲಿ ನವದೆಹಲಿಯಲ್ಲಿ ನಡೆಯಲಿರುವ ವಿಶೇಷ ಸಮಾರಂಭದಲ್ಲಿ ಅಮರೇಶ ನುಗಡೋಣಿ ಅವರಿಗೆ ಈ ಪ್ರಶಸ್ತಿಯನ್ನು ಪ್ರದಾನ ಮಾಡಲಾಗುವುದು. ಸಾಹಿತ್ಯ ಲೋಕದಲ್ಲಿ ಹರ್ಷ: ಕನ್ನಡದ ಗ್ರಾಮೀಣ ಬದುಕಿನ ಸೊಗಡು ಮತ್ತು…

Read More

ಬೆಂಗಳೂರು: ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ಸಂಘರ್ಷದಿಂದಾಗಿ ರಾಜ್ಯದಲ್ಲಿ ಉಂಟಾಗಿರುವ ಅಡುಗೆ ಅನಿಲ (LPG) ಅಭಾವದ ಬಿಸಿ ಇದೀಗ ಹೋಟೆಲ್ ಉದ್ಯಮಕ್ಕೆ ತಟ್ಟಿದೆ. ಹೋಟೆಲ್‌ಗಳಿಗೆ ಸದ್ಯಕ್ಕೆ ವಾಣಿಜ್ಯ ಬಳಕೆಯ ಗ್ಯಾಸ್ ಪೂರೈಕೆ ಮಾಡಲು ಸಾಧ್ಯವಿಲ್ಲ ಎಂದು ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಕೆ.ಹೆಚ್. ಮುನಿಯಪ್ಪ ಸ್ಪಷ್ಟಪಡಿಸಿದ್ದಾರೆ. ತೈಲ ಪೂರೈಕೆ ಕಂಪನಿಗಳ ಮುಖ್ಯಸ್ಥರೊಂದಿಗೆ ನಡೆಸಿದ ಮಹತ್ವದ ಸಭೆಯ ನಂತರ ಮಾತನಾಡಿದ ಅವರು, ಪರಿಸ್ಥಿತಿ ಗಂಭೀರವಾಗಿದ್ದು ಮುಂದಿನ ಒಂದು ವಾರದಿಂದ 10 ದಿನಗಳವರೆಗೆ ಹೋಟೆಲ್‌ಗಳು ಸಹಕರಿಸಬೇಕು ಎಂದು ಮನವಿ ಮಾಡಿದರು. ಸುದ್ದಿಯ ಮುಖ್ಯಾಂಶಗಳು: ಆದ್ಯತಾ ವಲಯಕ್ಕೆ ಪೂರೈಕೆ: ಸದ್ಯ ಲಭ್ಯವಿರುವ ಅನಿಲ ದಾಸ್ತಾನನ್ನು ಆಸ್ಪತ್ರೆಗಳು, ಶೈಕ್ಷಣಿಕ ಸಂಸ್ಥೆಗಳು (ಹಾಸ್ಟೆಲ್‌ಗಳು), ಇಂದಿರಾ ಕ್ಯಾಂಟೀನ್, ರೈಲ್ವೆ ಕ್ಯಾಂಟೀನ್ ಮತ್ತು ಏರ್‌ಲೈನ್ಸ್‌ಗಳಿಗೆ ಆದ್ಯತೆಯ ಮೇಲೆ ಪೂರೈಸಲು ನಿರ್ಧರಿಸಲಾಗಿದೆ. ಎಲೆಕ್ಟ್ರಿಕ್ ಸ್ಟವ್ ಬಳಕೆಗೆ ಮನವಿ: ವಾಣಿಜ್ಯ ಸಿಲಿಂಡರ್ ಅಭಾವವಿರುವುದರಿಂದ ಹೋಟೆಲ್ ಮಾಲೀಕರು ಅನಿವಾರ್ಯವಾಗಿ ಎಲೆಕ್ಟ್ರಿಕ್ ಅಥವಾ ಇಂಡಕ್ಷನ್ ಸ್ಟವ್‌ಗಳನ್ನು ಬಳಸುವ ಮೂಲಕ ಪರ್ಯಾಯ ವ್ಯವಸ್ಥೆ ಮಾಡಿಕೊಳ್ಳಬೇಕು ಎಂದು ಸಚಿವರು ಸೂಚಿಸಿದ್ದಾರೆ. ಗೃಹಬಳಕೆ…

Read More

ಬೆಂಗಳೂರು: ಡಾ. ಬಾಬಾಸಾಹೇಬ ಅಂಬೇಡ್ಕರ್ ಅವರಿಗೆ ಅಪಮಾನ ಮಾಡಿದ ಬಾನು ಮುಷ್ತಾಕ್ ಅವರ ವಿರುದ್ಧ ಸರಕಾರ ಸ್ವಯಂಪ್ರೇರಿತ ಪ್ರಕರಣ ದಾಖಲಿಸಿ ಬಂಧಿಸಬೇಕು ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರು ಆಗ್ರಹಿಸಿದ್ದಾರೆ. ಇಂದು ಅವರು ಮಾಧ್ಯಮಗಳ ಜೊತೆ ಮಾತನಾಡಿದರು. ಮಂಡ್ಯ ಜಿಲ್ಲೆಯಲ್ಲಿ ಬಾನು ಮುಷ್ತಾಕ್ ಅವರು ಚಪ್ಪಲಿ ಧರಿಸಿ ಡಾ. ಬಾಬಾಸಾಹೇಬ ಅಂಬೇಡ್ಕರ್ ಅವರ ಫೋಟೊಗೆ ಪುಷ್ಪಾರ್ಚನೆ ಮಾಡಿದ್ದನ್ನು ನಾನು ಖಂಡತುಂಡವಾಗಿ ಖಂಡಿಸುತ್ತೇನೆ ಎಂದರು. ಸರಕಾರ, ಅವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದರು. ನನ್ನ ಪ್ರಕಾರ ಬಾನು ಮುಷ್ತಾಕ್ ಅವರು ಅಲ್ಲಾಹರನ್ನು ಚಪ್ಪಲಿಗೆ ಹೋಲಿಸಿದ್ದಾರೆ. ಬಾಬಾ ಸಾಹೇಬ ಅಂಬೇಡ್ಕರರಿಗೂ ಅಪಮಾನ ಮಾಡಿದ್ದಾರೆ ಎಂದು ವಿಶ್ಲೇಷಿಸಿದರು. ಬಾನು ಮುಷ್ತಾಕ್ ಅವರು ಯಾರು ಅಂಬೇಡ್ಕರ್ ಅವರನ್ನು ದೇವರೆಂದು ನಂಬಿದ್ದಾರೋ ಅವರಿಗೆ ಅಪಮಾನ ಮಾಡಿದ್ದಾರೆ. ಹಿಂದೂಗಳಿಗೆ ಮತ್ತು ಮುಸಲ್ಮಾನರಿಗೆ ಅಪಮಾನ ಮಾಡಿದ ಅವರ ದುರಹಂಕಾರಕ್ಕೆ ನನ್ನ ಧಿಕ್ಕಾರವಿದೆ ಎಂದು ತಿಳಿಸಿದರು. ನಾವು ಅವರನ್ನು ದಸರಾ ಉದ್ಘಾಟನೆಗೆ ಕರೆದಾಗ ಹಲವರು ವಿರೋಧ ಮಾಡಿದ್ದರು.…

Read More

ದ್ರಾಕ್ಷಿಯು ಕೇವಲ ರುಚಿಕರವಾದ ಹಣ್ಣಷ್ಟೇ ಅಲ್ಲ, ಇದು ಅದ್ಭುತವಾದ ಆರೋಗ್ಯ ಪ್ರಯೋಜನಗಳನ್ನು ಹೊಂದಿರುವ ‘ಪವರ್ ಹೌಸ್’ ಕೂಡ ಹೌದು. ಹಸಿರು, ಕಪ್ಪು ಅಥವಾ ಕೆಂಪು – ಯಾವುದೇ ಬಣ್ಣದ ದ್ರಾಕ್ಷಿಯಿರಲಿ, ಅದರಲ್ಲಿರುವ ಪೋಷಕಾಂಶಗಳು ನಮ್ಮ ದೇಹಕ್ಕೆ ರಕ್ಷಾ ಕವಚದಂತೆ ಕೆಲಸ ಮಾಡುತ್ತವೆ. 1. ಹೃದಯದ ಆರೋಗ್ಯಕ್ಕೆ ವರದಾನ ದ್ರಾಕ್ಷಿಯಲ್ಲಿರುವ ‘ರೆಸ್ವೆರಾಟ್ರೋಲ್’ (Resveratrol) ಎಂಬ ಪೋಷಕಾಂಶವು ರಕ್ತನಾಳಗಳನ್ನು ಸಡಿಲಗೊಳಿಸುತ್ತದೆ. ಇದು ರಕ್ತದೊತ್ತಡವನ್ನು (Blood Pressure) ನಿಯಂತ್ರಣದಲ್ಲಿಡಲು ಮತ್ತು ರಕ್ತ ಹೆಪ್ಪುಗಟ್ಟುವಿಕೆಯನ್ನು ತಡೆಯಲು ಸಹಾಯ ಮಾಡುತ್ತದೆ. ಕೆಂಪು ಮತ್ತು ಕಪ್ಪು ದ್ರಾಕ್ಷಿಗಳು ಹೃದಯದ ಕಾಯಿಲೆಗಳ ಅಪಾಯವನ್ನು ಕಡಿಮೆ ಮಾಡುತ್ತವೆ. 2. ಕ್ಯಾನ್ಸರ್ ವಿರೋಧಿ ಗುಣಗಳು ದ್ರಾಕ್ಷಿಯು ಆಂಟಿ-ಆಕ್ಸಿಡೆಂಟ್‌ಗಳ ಆಗರವಾಗಿದೆ. ಇದರಲ್ಲಿರುವ ಪಾಲಿಫೆನಾಲ್‌ಗಳು ಕ್ಯಾನ್ಸರ್ ಕೋಶಗಳ ಬೆಳವಣಿಗೆಯನ್ನು ತಡೆಯುವ ಶಕ್ತಿಯನ್ನು ಹೊಂದಿವೆ. ವಿಶೇಷವಾಗಿ ಸ್ತನ, ಶ್ವಾಸಕೋಶ ಮತ್ತು ಕರುಳಿನ ಕ್ಯಾನ್ಸರ್ ತಡೆಗಟ್ಟುವಲ್ಲಿ ಇದು ಸಹಕಾರಿ ಎಂದು ಸಂಶೋಧನೆಗಳು ತಿಳಿಸಿವೆ. 3. ಹೊಳೆಯುವ ಚರ್ಮ ಮತ್ತು ಆರೋಗ್ಯಕರ ಕೂದಲು ದ್ರಾಕ್ಷಿಯಲ್ಲಿ ವಿಟಮಿನ್ ಸಿ ಮತ್ತು ಆಂಟಿ-ಆಕ್ಸಿಡೆಂಟ್‌ಗಳು ಹೇರಳವಾಗಿವೆ.…

Read More

ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಕ್ಷುಲ್ಲಕ ಕಾರಣಗಳಿಗಾಗಿ ಅಪರಾಧ ಕೃತ್ಯಗಳು ನಡೆಯುತ್ತಿರುವುದು ಆತಂಕಕ್ಕೆ ಕಾರಣವಾಗಿದೆ. ಯುವತಿಯೊಂದಿಗಿದ್ದ ದೃಶ್ಯವನ್ನು ಮೊಬೈಲ್‌ನಲ್ಲಿ ಚಿತ್ರೀಕರಿಸಿದ ಎಂಬ ಕಾರಣಕ್ಕೆ ವ್ಯಕ್ತಿಯೊಬ್ಬನನ್ನು ಸಿನಿಮೀಯ ಶೈಲಿಯಲ್ಲಿ ಅಪಹರಿಸಿದ ಘಟನೆ ಮಹಾದೇವಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ಏನಿದು ಪ್ರಕರಣ? ಮೂಲತಃ ಅಸ್ಸಾಂನವರಾದ ಶಬ್ಬೀರ್ ಅಲಿಯಾಸ್ ಸಾದಿರ್ ಖಾ ಬೆಂಗಳೂರಿನ ಜ್ಯೂಸ್ ಶಾಪ್ ಒಂದರಲ್ಲಿ ಕೆಲಸ ಮಾಡುತ್ತಿದ್ದರು. ಪ್ರಕರಣದ ಪ್ರಮುಖ ಆರೋಪಿ ಸಜೀದ್ ಎಂಬಾತ ಯುವತಿಯೊಬ್ಬಳ ಜೊತೆಗಿದ್ದಾಗ ಸಾದಿರ್ ಅದನ್ನು ತನ್ನ ಮೊಬೈಲ್‌ನಲ್ಲಿ ವಿಡಿಯೋ ಮಾಡಿಕೊಂಡಿದ್ದ ಎನ್ನಲಾಗಿದೆ. ಈ ವಿಷಯ ತಿಳಿದು ಆಕ್ರೋಶಗೊಂಡ ಸಜೀದ್, ಸಾದಿರ್‌ನನ್ನು ಸದೆಬಡಿಯಲು ಸಂಚು ರೂಪಿಸಿದ್ದ. ಆಟೋದಲ್ಲಿ ಸಿನಿಮೀಯ ಅಪಹರಣ: ಸಾದಿರ್ ತನ್ನ ಸ್ನೇಹಿತನ ಮನೆ ಬಳಿ ಇದ್ದಾಗ ಆಟೋದಲ್ಲಿ ಬಂದ ಸಜೀದ್ ಮತ್ತು ಆತನ ನಾಲ್ವರು ಸಹಚರರು ಆತನನ್ನು ಬಲವಂತವಾಗಿ ಅಪಹರಿಸಿದ್ದಾರೆ. ಜನನಿಬಿಡ ಪ್ರದೇಶದಲ್ಲೇ ಈ ಕೃತ್ಯ ನಡೆದಿದ್ದು, ಸಾದಿರ್‌ನನ್ನು ರಾಮಮೂರ್ತಿನಗರದ ಕಡೆಗೆ ಕರೆದೊಯ್ದಿದ್ದಾರೆ. ದಾರಿಯುದ್ದಕ್ಕೂ ಬೆದರಿಕೆ ಹಾಕಿದ…

Read More