Author: kannadanewsnow09

ನವದೆಹಲಿ: ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ (NHAI) ವಾಹನದ ವಿಂಡ್‌ಸ್ಕ್ರೀನ್‌ಗೆ ಅಂಟಿಸದ “ಲೂಸ್ ಫಾಸ್ಟ್‌ಟ್ಯಾಗ್‌ಗಳನ್ನು” ವರದಿ ಮಾಡುವ ಮತ್ತು ಕಪ್ಪುಪಟ್ಟಿಗೆ ಸೇರಿಸುವ ತನ್ನ ನೀತಿಯನ್ನು ಬಲಪಡಿಸಿದೆ. ಸುಗಮ ಟೋಲಿಂಗ್ ಕಾರ್ಯಾಚರಣೆಗಳು ಮತ್ತು ಎಲೆಕ್ಟ್ರಾನಿಕ್ ಟೋಲ್ ಸಂಗ್ರಹ ವ್ಯವಸ್ಥೆಯ ದೃಢೀಕರಣವನ್ನು ಖಚಿತಪಡಿಸಿಕೊಳ್ಳಲು ಈ ಟ್ಯಾಗ್‌ಗಳನ್ನು “ಟ್ಯಾಗ್-ಇನ್-ಹ್ಯಾಂಡ್” ಎಂದೂ ಕರೆಯಲಾಗುತ್ತದೆ. ವಾಹನ ಮಾಲೀಕರು ಉದ್ದೇಶಪೂರ್ವಕವಾಗಿ ತಮ್ಮ ವಿಂಡ್‌ಸ್ಕ್ರೀನ್‌ಗಳಿಗೆ FASTags ಅನ್ನು ಜೋಡಿಸದ ಕಾರಣ, ಲೇನ್ ದಟ್ಟಣೆ, ತಪ್ಪು ಚಾರ್ಜ್‌ಬ್ಯಾಕ್‌ಗಳು ಮತ್ತು ಕ್ಲೋಸ್ಡ್-ಲೂಪ್ ಟೋಲಿಂಗ್ ವ್ಯವಸ್ಥೆಗಳಲ್ಲಿ ದುರುಪಯೋಗಕ್ಕೆ ಕಾರಣವಾಗುವ ಕಾರ್ಯಾಚರಣೆಯ ಸವಾಲುಗಳನ್ನು ಪರಿಹರಿಸುವ ಗುರಿಯನ್ನು ಈ ಕ್ರಮ ಹೊಂದಿದೆ. NHAI ಈ ನಿರ್ಧಾರವನ್ನು ಏಕೆ ತೆಗೆದುಕೊಂಡಿತು ವಾರ್ಷಿಕ ಪಾಸ್ ಮತ್ತು ಮಲ್ಟಿ-ಲೇನ್ ಫ್ರೀ ಫ್ಲೋ (MLFF) ಟೋಲಿಂಗ್‌ನಂತಹ ಹೊಸ ವ್ಯವಸ್ಥೆಗಳನ್ನು ಜಾರಿಗೆ ತರುವ ಮೊದಲು NHAI ನ ಈ ಕ್ರಮವು ಬಂದಿದೆ. ಎಲೆಕ್ಟ್ರಾನಿಕ್ ಟೋಲ್ ಸಂಗ್ರಹ ಚೌಕಟ್ಟಿನಲ್ಲಿನ ಅಡಚಣೆಗಳನ್ನು ತಡೆಗಟ್ಟಲು NHAI ಈ ಕಠಿಣ ನಿರ್ಧಾರವನ್ನು ತೆಗೆದುಕೊಂಡಿದೆ, ಇದು ಟೋಲ್ ಪ್ಲಾಜಾಗಳಲ್ಲಿ ಅನಗತ್ಯ ವಿಳಂಬ ಮತ್ತು ಇತರ…

Read More

ಬೆಂಗಳೂರು: ಕರ್ನಾಟಕ ವಿಧಾನ ಮಂಡಲದ ಮುಂಗಾರು ಅಧಿವೇಶನಕ್ಕೆ ಮುಹೂರ್ತ ಫಿಕ್ಸ್ ಆಗಿದೆ. ಆಗಸ್ಟ್ 11, 2025ರಿಂದ ಆರಂಭಗೊಳ್ಳಲಿದೆ. ಆಗಸ್ಟ್.11ರಿಂದ 22ರವರೆಗೆ ಕರ್ನಾಟಕ ವಿಧಾನ ಮಂಡಲದ ಮುಂಗಾರು ಅಧಿವೇಶನ ನಡೆಯಲಿದೆ. ಈ ಕುರಿತಂತೆ ರಾಜ್ಯ ಸರ್ಕಾರದ ಸಂಸದೀಯ ವ್ಯವಹಾರಗಳ ಕಾರ್ಯದರ್ಶಿ ಜಿ.ಶ್ರೀಧರ್ ಅಧಿಸೂಚನೆ ಹೊರಡಿಸಿದ್ದು, ಭಾರತ ಸಂವಿಧಾನದ 174ನೇ ಅನುಚ್ಛೇದದ (1)ನೇ ಖಂಡದ ಮೂಲಕ ನನಗೆ ಪ್ರದತ್ತವಾದ ಅಧಿಕಾರಗಳನ್ನು ಚಲಾಯಿಸಿ ಥಾವರ್ ಚಂದ್ ಗೆಹ್ಲೋಟ್, ಕರ್ನಾಟಕ ರಾಜ್ಯಪಾಲರು ಆದ ನಾನು 2025ರ ಆಗಸ್ಟ್.11ನೇ ದಿನಾಂಕದಂದು ಸೋಮವಾರ ಪೂರ್ವಾಹ್ನ 11ಕ್ಕೆ ಬೆಂಗಳೂರಿನಲ್ಲಿ ಕರ್ನಾಟಕ ವಿಧಾನಮಂಡಲದ ಅಧಿವೇಶನ ಸಮಾವೇಶಗೊಳಿಸಬೇಕೆಂದು ಈ ಮೂಲಕ ಕರೆಯುತ್ತಿದ್ದೇನೆ ಎಂಬುದಾಗಿ ತಿಳಿಸಿದ್ದಾರೆ. ಇನ್ನೂ ಕರ್ನಾಟಕ ವಿಧಾನಮಂಡಲದ ಅಧಿವೇಶನದ ತಾತ್ಕಾಲಿಕ ಕಾರ್ಯಕ್ರಮಗಳ ಪಟ್ಟಿಯನ್ನು ಬಿಡುಗಡೆ ಮಾಡಲಾಗಿದ್ದು ದಿನಾಂಕ 11-08-2025ರ ಸೋಮವಾರ ಸರ್ಕಾರಿ ಕಾರ್ಯಕಲಾಪಗಳು ಎಂಬುದಾಗಿ ತಿಳಿಸಲಾಗಿದೆ. ಆಗಸ್ಟ್.11ರಿಂದ ಆರಂಭಗೊಂಡು ದಿನಾಂಕ 22-08-2025ರವರೆಗೆ ವಿಧಾನಮಂಡಲದ ಕಲಾಪಗಳು ನಡೆಯಲಿದೆ.

Read More

ಯಾದಗಿರಿ: ಜಿಲ್ಲೆಯಲ್ಲಿ ಮೋಟಾರ್ ಪಂಪ್ ಸೆಟ್ ದುರಸ್ತಿ ವೇಳೆಯಲ್ಲಿ ವಿದ್ಯುತ್ ತಗುಲಿ ಮೂವರು ರೈತರು ದುರ್ಮರಣ ಹೊಂದಿರುವಂತ ಧಾರುಣ ಘಟನೆ ನಡೆದಿದೆ. ಯಾದಗಿರಿ ಜಿಲ್ಲೆಯ ಹುಣಸಗಿ ತಾಲ್ಲೂಕಿನ ಆಗತೀರ್ಥ ಗ್ರಾಮದಲ್ಲಿ ಮೋಟರ್ ಪಂಪ್ ಸೆಟ್ ದುರಸ್ತಿಯಲ್ಲಿ ರೈತರು ತೊಡಗಿದ್ದರು. ಈ ಸಂದರ್ಭದಲ್ಲಿ ವಿದ್ಯುತ್ ತಂತಿ ತಗುಲಿದ ಪರಿಣಾಮ ಮೂವರು ರೈತರು ಸಾವನ್ನಪ್ಪಿದ್ದಾರೆ. ಮೃತರನ್ನು ರೈತ ಈರಪ್ಪ (40) ದೇವು(30) ಹಾಗೂ ಸುರೇಶ್ (22) ಎಂಬುದಾಗಿ ಗುರುತಿಸಲಾಗಿದೆ. ಸ್ಥಳಕ್ಕೆ ಪೊಲೀಸರು ಆಗಮಿಸಿ ಪರಿಶೀಲಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಆಗತೀರ್ಥ ಗ್ರಾಮದಲ್ಲಿ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. https://kannadanewsnow.com/kannada/home-to-home-police-program-inaugurated-by-home-minister-dr-g-parameshwara/ https://kannadanewsnow.com/kannada/minister-sharanprakash-patil-instructed-to-provide-adequate-information-to-farmers-about-the-fertilizer-supply/

Read More

ರಾಯಚೂರು : ಸಹಕಾರಿ ಸಂಘಗಳು ಮತ್ತು ಖಾಸಗಿ ಮಳಿಗೆಗಳಲ್ಲಿ ಗೊಬ್ಬರ ದಾಸ್ತಾನು ಇರುವ ಬಗ್ಗೆ ಪ್ರತಿದಿನ ಫಲಕದ‌ ಮೂಲಕ ಮಾಹಿತಿ ನೀಡಬೇಕು. ಸರಿಯಾಗಿ ಮಾಹಿತಿ ನೀಡದ ಖಾಸಗಿ ಮಾರಾಟಗಾರರನ್ನು ಬ್ಲ್ಯಾಕ್‌ ಲಿಸ್ಟ್‌ಗೆ ಸೇರಿಸಬೇಕು ಎಂದು ಕೃಷಿ ಅಧಿಕಾರಿಗಳಿಗೆ ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ, ಜೀವನೋಪಾಯ ಹಾಗೂ ರಾಯಚೂರು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ. ಶರಣಪ್ರಕಾಶ ಆರ್. ಪಾಟೀಲ್ ಸೂಚನೆ ನೀಡಿದರು. ಸಚಿವರ ಅಧ್ಯಕ್ಷತೆಯಲ್ಲಿ ಶುಕ್ರವಾರ ನಗರದ ಜಿಲ್ಲಾ ಪಂಚಾಯತ್ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾ ತ್ರೈಮಾಸಿಕ ಕೆ.ಡಿ.ಪಿ ಸಭೆಯಲ್ಲಿ ರಸಗೊಬ್ಬರ ವಿತರಣೆ ವಿಷಯದ ಬಗ್ಗೆ ಚರ್ಚೆ ನಡೆಸಲಾಯಿತು. ಪ್ರಸಕ್ತ ಸಾಲಿನಲ್ಲಿ ರೈತರಿಗೆ ಯಾವುದೇ ರೀತಿಯಲ್ಲಿ ತೊಂದರೆಯಾಗದಂತೆ ಗೊಬ್ಬರ ಪೂರೈಕೆ ಆಗಬೇಕು ಎಂದು ಸಚಿವ ಸಂಪುಟ ಸಭೆಯಲ್ಲಿ ಚರ್ಚೆಯಾಗಿದೆ. ಕೃಷಿ ಅಧಿಕಾರಿಗಳು ಜಾಗೃತರಾಗಿ ಕೆಲಸ ಮಾಡಬೇಕು. ರಸಗೊಬ್ಬರದ ಕೊರತೆ ಇರುವ ಬಗ್ಗೆ ತಿಳಿಸಿದಲ್ಲಿ ಕೃಷಿ ಇಲಾಖೆಯ ಕಾರ್ಯದರ್ಶಿಗಳೊಂದಿಗೆ ಮಾತನಾಡಿ ಸೂಕ್ತ ವ್ಯವಸ್ಥೆಗೆ ಕ್ರಮ ಕೈಗೊಳ್ಳುತ್ತೇನೆ ಎಂದು ಹೇಳಿದರು. 1.45,000 ಮೆಟ್ರಿಕ್ ಟನ್ ರಸಗೊಬ್ಬರ ಸರಬರಾಜು…

Read More

ರಾಯಚೂರ : ಜಿಲ್ಲಾ ಪಂಚಾಯತ್ ಕಚೇರಿ ಸಭಾಂಗಣದಲ್ಲಿ ಜುಲೈ 18ರಂದು ನಡೆದ ತ್ರೈಮಾಸಿಕ ಕೆಡಿಪಿ ಸಭೆಯಲ್ಲಿ ಉಪ ಅರಣ್ಯ ಸಂರಕ್ಷಣಾ ಅಧಿಕಾರಿಯು ಅಶಿಸ್ತು ತೋರಿದ್ದಾಗಿ ಖಾಸಗಿ ಸುದ್ದಿವಾಹಿನಿಯಲ್ಲಿ ಪ್ರಸಾರವಾದ ವರದಿಯ ಬಗ್ಗೆ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ಶರಣಪ್ರಕಾಶ ಪಾಟೀಲ ಅವರು ಸಭೆಯಲ್ಲಿ ಉಪ ಅರಣ್ಯ ಸಂರಕ್ಷಣಾ ಅಧಿಕಾರಿಗೆ ಎದ್ದು ನಿಲ್ಲಿಸಿ ವಿವರಣೆ ಕೇಳಿದರು. ಈ ವೇಳೆ ಅಧಿಕಾರಿ ಪ್ರವೀಣ ಅವರು ಕ್ಷಮೆ ಕೇಳಿದರು. ಅತ್ಯಂತ ಮಹತ್ವದ ಕೆಡಿಪಿ ಸಭೆಯಲ್ಲಿ ಶಿಸ್ತಿನಿಂದ ಭಾಗಿಯಾಗದೇ ಮೋಬೈಲನಲ್ಲಿ ತಲ್ಲೀಣರಾಗಿ ಅಸಭ್ಯ ವರ್ತನೆ ತೋರಿರುವುದು ಅಕ್ಷಮ್ಯ ಎಂದು ಸಚಿವರು ತರಾಟೆ ತೆಗೆದುಕೊಂಡರು. ಇದೆ ವೇಳೆ, ಅಧಿಕಾರಿಯನ್ನು ಸಭೆಯಿಂದ ಹೊರ ಕಳುಹಿಸಿದ ಸಚಿವರು, ಅಧಿಕಾರಿಯ ಅಸಭ್ಯ ಕಾರ್ಯವೈಖರಿಯ ಬಗ್ಗೆ ನೋಟೀಸ್ ಜಾರಿ ಮಾಡಿ ಶಿಸ್ತಿನ ಕ್ರಮಕ್ಕಾಗಿ ಸರ್ಕಾರಕ್ಕೆ ವರದಿ ಸಲ್ಲಿಸಲು ಜಿಲ್ಲಾಧಿಕಾರಿಗಳಿಗೆ ತಿಳಿಸಿದರು. ಉಪ ಅರಣ್ಯ ಸಂರಕ್ಷಣಾಧಿಕಾರಿ ಪ್ರವೀಣ್ ಅವರು ಕೆಡಿಪಿ ಸಭೆಯ ಆಗುಹೋಗುಗಳ ಬಗ್ಗೆ ಆಲಿಸದೇ ರಮ್ಮಿಯಲ್ಲಿ ಮಗ್ನರಾಗಿರುವುದು ಖಾಸಗಿ ಸುದ್ದಿವಾಹಿನಿಯ ಕ್ಯಾಮೆರಾದಲ್ಲಿ‌ ಸೆರೆಯಾಗಿದೆ ಎಂದು ಖಾಸಗಿ…

Read More

ಬೆಂಗಳೂರು: ನಿನ್ನೆ ಮುಖ್ಯಮಂತ್ರಿ ಸಿದ್ಧರಾಮಯ್ಯ ನೇತೃತ್ವದಲ್ಲಿ ಮಹತ್ವದ ರಾಜ್ಯ ಸಚಿವ ಸಂಪುಟ ಸಭೆ ನಡೆಯಿತು. ಈ ಸಭೆಯಲ್ಲಿ ಬೆಂಗಳೂರಿನ ಬಿಬಿಎಂಪಿ ವ್ಯಾಪ್ತಿಯಲ್ಲಿರುವ ಎಲ್ಲಾ ನಿವೇಶನಗಳಿಗೆ ಕಾನೂನು ಉದ್ದೇಶಕ್ಕಾಗಿ ಅಧಿಕೃತ ಎ-ಖಾತಾ ನೀಡಲು ನಿರ್ಧಾರವನ್ನು ಕೈಗೊಳ್ಳಲಾಗಿದೆ. ಕಾನೂನುಬಾಹಿರವಾಗಿ ಅನಿಯಂತ್ರಿತ ಕಟ್ಟಡ ನಿರ್ಮಾಣ ಮತ್ತು ಬಡಾವಣೆಗಳ ನಿರ್ಮಾಣದಲ್ಲಿ ಶಿಸ್ತು ತರಲು, ಬೆಂಗಳೂರು ನಗರದ ನಾಗರಿಕರಿಗೆ ಆಗುತ್ತಿರುವ ತೊಂದರೆಯನ್ನು ನಿವಾರಿಸಲು ಬಿಬಿಎಂಪಿ ವ್ಯಾಪ್ತಿಯಲ್ಲಿರುವ ಎಲ್ಲ ನಿವೇಶನಗಳಿಗೆ ಕಾನೂನು ಉದ್ದೇಶಕ್ಕೆ ಅಧಿಕೃತ ʼಎʼ ಖಾತಾ ನೀಡಲು ನಿನ್ನೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ನಿರ್ಧರಿಸಲಾಗಿದೆ. https://twitter.com/KarnatakaVarthe/status/1946114855695683866 https://kannadanewsnow.com/kannada/the-complaint-against-my-son-to-the-womens-commission-by-the-youth-is-a-political-conspiracy-former-minister-prabhu-chavan/ https://kannadanewsnow.com/kannada/mandatory-order-for-the-establishment-of-old-students-associations-in-all-schools-of-the-state-deputy-chief-minister-d-k-shivakumar/

Read More

ಬೀದರ್ : ಮಹರಾಷ್ಟ್ರ ಮೂಲದ ಯುವತಿಯೊಬ್ಬರು ನನ್ನ ಪುತ್ರನ ವಿರುದ್ಧ ಮಹಿಳಾ ಆಯೋಗಕ್ಕೆ ದೂರು ನೀಡಿರುವುದು ವಿರೋಧಿಗಳ ರಾಜಕೀಯ ಷಡ್ಯಂತ್ರವಾಗಿದೆ ಎಂದು ಮಾಜಿ ಸಚಿವರು ಹಾಗೂ ಔರಾದ(ಬಿ) ಶಾಸಕರಾದ ಪ್ರಭು ಬಿ.ಚವ್ಹಾಣ ಅವರು ತಿಳಿಸಿದ್ದಾರೆ ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಅವರು, ನನ್ನ ಮಗನೊಂದಿಗೆ ವರ್ಷದ ಹಿಂದೆ ನಿಶ್ಚಿತಾರ್ಥವಾಗಿರುವುದು ನಿಜ. ನಂತರ ಯುವತಿಯ ಪೋಷಕರು ಮತ್ತು ಸಮಾಜದ ಪಂಚರ ಸಮ್ಮುಖದಲ್ಲಿ ಪರಸ್ಪರ ಒಪ್ಪಿಗೆಯೊಂದಿಗೆ ಸಂಬಂಧ ಮುರಿದು ಬಿದ್ದಿದೆ. ಯಾವ ಕಾರಣಕ್ಕಾಗಿ ಸಂಬಂಧ ಮುರಿದು ಬಿತ್ತು ಎನ್ನುವುದನ್ನು ಯುವತಿಯ ಭವಿಷ್ಯದ ಹಿತದೃಷ್ಟಿಯಿಂದ ಮಾಧ್ಯಮಗಳಲ್ಲಿ ಬಹಿರಂಗ ಪಡಿಸುವುದಿಲ್ಲ. ಕಾರಣಗಳು ಮತ್ತು ಸಾಕ್ಷ್ಯವನ್ನು ಈಗಾಗಲೇ ಯುವತಿಯ ಪಾಲಕರಿಗೆ ಮನವರಿಕೆ ಮಾಡಿಕೊಡಲಾಗಿದೆ ಎಂದಿದ್ದಾರೆ. ನಾಲ್ಕು ಗೋಡೆಗಳ ಮಧ್ಯ ಬಗೆಹರಿಯುವಂತಹ, ಬಗೆಹರಿಯಬೇಕಿದ್ದ ಕೌಟುಂಬಿಕ ಸಮಸ್ಯೆಯನ್ನು ವ್ಯವಸ್ಥಿತವಾಗಿ ಷಡ್ಯಂತ್ರದ ರೂಪ ನೀಡಿ ಆ ಕುಟುಂಬವನ್ನು ಬಳಕೆ ಮಾಡಿಕೊಂಡು ಸಮಸ್ಯೆ ಸೃಷ್ಟಿಸುತ್ತಿರುವುದು ನಿಜಕ್ಕೂ ದೌರ್ಭಾಗ್ಯದ ಸಂಗತಿ. ಮೂರನೇಯವರು ಈ ಕುಟುಂಬವನ್ನು ಬಳಕೆ ಮಾಡಿಕೊಂಡು ಅವರ ಕುಟುಂಬಕ್ಕೆ ಮಸಿ ಬಳಿಯುವುದರ ಮೂಲಕ…

Read More

ಬೆಂಗಳೂರು: ಕೆಪಿಟಿಸಿಎಲ್ ವತಿಯಿಂದ ತುರ್ತು ನಿರ್ವಹಣಾ ಕಾಮಗಾರಿ ಹಿನ್ನೆಲೆಯಲ್ಲಿ 66/11ಕೆವಿ ಕಾಡುಗೋಡಿ” ಉಪಕೇಂದ್ರ ವ್ಯಾಪ್ತಿಯಲ್ಲಿ ದಿನಾಂಕ 19.07.2025 (ಶನಿವಾರ) ರಂದು ಬೆಳಗ್ಗೆ 10:00 ಯಿಂದ ಸಂಜೆ 05:00 ಗಂಟೆವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ. ಸಹಕರಿಸುವಂತೆ ಬೆಸ್ಕಾಂ ಮನವಿ ಮಾಡಿದೆ. ಬೆಳತ್ತೂರು, ಅಯಪ್ಪ ದೇವಸ್ಥಾನ, ಕುಂಬೆನ ಅಗ್ರಹಾರ, ಪಟಾಲಮ್ಮ ಲೇಔಟ್, ವಿಎಸ್‌ಆರ್ ಲೇಔಟ್, ಕಾಡುಗೋಡಿ, ಚನ್ನಸದ್ರ, ಎಫ್‌ಸಿಐ ಗೌಡನ್, ಸಫಲ್, ವಿಎಸ್‌ಆರ್ ಲೇಔಟ್, ಕಾಡುಗೋಡಿ, ಶಂಕ್ರಪುರ, ಸಿದ್ದರ‍್ಥ ಲೇಔಟ್, ಸಾಯಿ ಆಶ್ರಮ, ಎಚ್‌ಡಿಎಫ್‌ಸಿ ಬ್ಯಾಂಕ್, ಅಲಂಬಿಕ್ ಆ್ಯಪ್ಟ್, ಮರ‍್ವೆಲ್ ಆಪ್ಟ್, ರ‍್ವೆಲ್ಲ್ ಡಿಐಎಂಐಟಿ. ಲೇಔಟ್, ದಿನ್ನೂರು ಪೊಲೀಸ್ ಠಾಣೆ, ಮೈತ್ರಿ ಲೇಔಟ್, ಸರ್ಕಾರಿ ಪಾಲಿಟೆಕ್ನಿಕ್, ಚನ್ನಸಂದ್ರ ಮುಖ್ಯ ರಸ್ತೆ ನಾಗೊಂಡನಹಳ್ಳಿ, ನಾಗರಾಜ್ ಲೇಔಟ್, ದೊಮ್ಮರ ಪಾಳ್ಯ, ಪ್ರಶಾಂತ್ ಲೇಔಟ್, ಉಪಕಾರ್ ಲೇಔಟ್, ಪೃಥ್ವಿ ಲೇಔಟ್ ನಲ್ಲಿ ಕರೆಂಟ್ ಇರಲ್ಲ. ಸ್ವಾಮಿ ವಿವೇಕಾನಂದ ರಸ್ತೆ, ವೈಟ್‌ಫೀಲ್ಡ್ ಮುಖ್ಯ ರಸ್ತೆ, ಇಸಿಸಿ ರಸ್ತೆ, ಪ್ರಶಾಂತ್ ಲೇಔಟ್, ಪ್ರಶಾಂತ್ ಲೇಔಟ್, ಪ್ರಶಾಂತ್ ಲೇಔಟ್, ಪ್ರಶಾಂತ್ ಲೇಔಟ್,…

Read More

ಬೆಂಗಳೂರು: ಸೆಲ್ಫಿ ವೀಡಿಯೋ ಮಾಡಿಟ್ಟು ಬೆಂಗಳೂರಲ್ಲಿ ಖಾಸಗಿ ಬ್ಯಾಂಕ್ ಉದ್ಯೋಗಿಯೊಬ್ಬ ನೇಣಿಗೆ ಶರಣಾಗಿರುವಂತ ಘಟನೆ ನಡೆದಿದೆ. ಬೆಂಗಳೂರಲ್ಲಿ ಸೆಲ್ಫಿ ವೀಡಿಯೋ ಮಾಡಿಟ್ಟು ಖಾಸಗಿ ಬ್ಯಾಂಕ್ ಉದ್ಯೋಗಿಯಾಗಿದ್ದಂತ ಮನೋಜ್ ಕುಮಾರ್(25) ಎಂಬಾತ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ತಾನು ಕೆಲಸ ಮಾಡುತ್ತಿದ್ದ ಬ್ಯಾಂಕ್ ನಿಂದ ಲೋನ್ ಪೆಡದು ಬೆಟ್ಟಿಂಗ್ ಆಡಿ ಕಳೆದುಕೊಂಡಿದ್ದನು ಎನ್ನಲಾಗಿದೆ. ಲಕ್ಷಾಂತರ ಹಣ ಬೆಟ್ಟಿಂಗ್ ನಲ್ಲಿ ಕಳೆದುಕೊಂಡಿದ್ದ ಕಾರಣಕ್ಕಾಗಿ ಆತ್ಮಹತ್ಯೆಗೆ ಶರಣಾಗಿದ್ದಾನೆ. ಮೃತ ಮನೋಜ್ ಕುಮಾರ್ ಶರೀರವನ್ನು ವಿಕ್ಟೋರಿಯಾ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ. ಈ ಸಂಬಂಧ ರಾಜರಾಜೇಶ್ವರಿನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. https://kannadanewsnow.com/kannada/reliance-retail-acquires-the-brand-of-home-appliances-kelvinator/ https://kannadanewsnow.com/kannada/the-language-you-used-harataalu-hallappan-is-an-insult-to-voters-and-legislators-nagodi-vishwanath/

Read More

ಶಿವಮೊಗ್ಗ: ಮಾಜಿ ಸಚಿವ ಹರತಾಳು ಹಾಲಪ್ಪನವೇ ನಿಮ್ಮ ಬಗ್ಗೆ ನಮಗೆ ಅಪಾರ ಗೌರವವಿದೆ. ಆದರೇ ನೀವು ಬಳಸಿದ ಭಾಷೆ ನಮಗೆ ನೋವುಂಟು ಮಾಡಿದೆ. ನೀವು ಬಳಸಿದ ಪದ ನಮ್ಮ ಶಾಸಕ ಗೋಪಾಲಕೃಷ್ಣ ಬೇಳೂರು ಅವರಿಗೆ ಮಾಡಿದ ಅವಮಾನ ಅಷ್ಟೇ ಅಲ್ಲ, ನಿಮ್ಮನ್ನು ಹೊಸನಗರ ಭಾಗದಿಂದ ಬೆಂಬಲಿಸಿದಂತ ಕಾರ್ಯಕರ್ತರು, ಮತದಾರರಿಗೆ ಮಾಡಿದಂತ ಅವಮಾನವಾಗಿದೆ ಎಂಬುದಾಗಿ ಹೊಸನಗರ ಬ್ಲಾಕ್ ಕಾಂಗ್ರೆಸ್ ಸದಸ್ಯ ಹಾಗೂ ನಿಟ್ಟೂರು ಗ್ರಾಮ ಪಂಚಾಯ್ತಿ ಸದಸ್ಯ ನಾಗೋಡಿ ವಿಶ್ವನಾಥ್ ಕಿಡಿಕಾರಿದ್ದಾರೆ. ಈ ಕುರಿತಂತೆ ವೀಡಿಯೋ ಹೇಳಿಕೆ ಬಿಡುಗಡೆ ಮಾಡಿರುವಂತ ಅವರು, ಕರೂರು, ಬಾರಂಗಿ ಹೋಬಳಿಯ ಅಂಬಾರಗೋಡ್ಲು-ಕಳಸವಳ್ಳಿ ಸೇತುವೆಯನ್ನು ಕೇಂದ್ರ ಸಚಿವರು ಲೋಕಾರ್ಪಣೆಗೊಳಿಸಿದ್ದು ಸಂತೋಷದ ವಿಚಾರವಾಗಿದೆ. ಈ ಉದ್ಘಾಟನಾ ಕಾರ್ಯಕ್ರಮಕ್ಕೆ ಸಂಬಂಧಿಸಿದಂತೆ ಸಂಸದ ಬಿವೈ ರಾಘವೇಂದ್ರ ಹಾಗೂ ಮಾಜಿ ಸಚಿವ ಹರತಾಳು ಹಾಲಪ್ಪ ಅವರು ಮಾತನಾಡುತ್ತಾ ಶಾಸಕರು ಬಾರದೇ ಇದ್ದ ಬಗ್ಗೆ, ಶಿಷ್ಟಾಚಾರ ಉಲ್ಲಂಘನೆಯ ಬಗ್ಗೆ ಮಾತನಾಡಿದ್ದಾರೆ. ಅದರ ಬಗ್ಗೆ ಬಿಜೆಪಿಯಿಂದ ಸ್ಪಷ್ಟನೆ ನೀಡಿದ್ದು ಸರಿಯಷ್ಟೇ. ಇದೇ ಸುದ್ದಿಗೋಷ್ಠಿಯಲ್ಲಿ ಮಾಜಿ ಸಚಿವ ಹರತಾಳು…

Read More