Author: kannadanewsnow09

ಶಿವಮೊಗ್ಗ: ರಾಜ್ಯ ಸರ್ಕಾರ ಸಾಮಾಜಿಕ, ಶೈಕ್ಷಣಿಕವಾಗಿ ಜಾತಿ ಸಮೀಕ್ಷೆಗೆ ಮುಂದಾಗಿದ್ದು, ಜಿಲ್ಲೆಯ ಬಹುಸಂಖ್ಯಾತ ಸಮಾಜವಾದ ಈಡಿಗ ಮತ್ತು ದೀವರು ಕಲಂ 9ರಲ್ಲಿ ಈಡಿಗ ಎಂದು, ಕಲಂ 10ರಲ್ಲಿ ದೀವರು ಎಂದೂ ನಮೂದಿಸುವಂತೆ ಸೊರಬ ತಾಲ್ಲೂಕು ಆರ್ಯ ಈಡಿಗ (ದೀವರು) ಸಮಾಜದ ಮಾಜಿ ಅಧ್ಯಕ್ಷ ಕೆ.ಅಜ್ಜಪ್ಪ ಮನವಿ ಮಾಡಿದರು. ಈಗಾಗಲೇ ರಾಜ್ಯ ಮಟ್ಟದಲ್ಲಿ ಆರ್ಯ ಈಡಿಗ ಸಮಾಜದೊಂದಿಗೆ ದೀವರು ಸೇರಿಕೊಂಡಿದ್ದು, ಸಂಘಗಳಿಗೆ ಈಡಿಗ ಸಂಘದ ಹೆಸರಿನಲ್ಲಿ ಆಸ್ತಿ ಇದೆ. ತಪ್ಪಾಗಿ ಜಾತಿ ನಮೂಸಿದರೆ ಮುಂದಿನ ದಿನಗಳಲ್ಲಿ ಕಾನೂನಿನ ತೊಡಕು ಎದುರಿಸಬೇಕಾಗುತ್ತದೆ. ಈ ನಿಟ್ಟಿನಲ್ಲಿ ಮುಖ್ಯ ಜಾತಿ ಕಲಂನಲ್ಲಿ ಈಡಿಗ ಎಂತಲೂ, ಉಪಜಾತಿ ಕಲಂನಲ್ಲಿ ದೀವರು ಎಂದು ನಮೂಸುವಲ್ಲಿ ಜಾಗ್ರತೆ ವಹಿಸಿ ಎಂದು ತಿಳಿಸಿದರು. ಭೌಗೋಳಿಕವಾಗಿ ದೀವರು ಜನಾಂಗಕ್ಕೆ ಮಹತ್ವವಿದೆ‌. ಯಾವುದೇ ಕಾರಣಕ್ಕೂ ದೀವರು ಸಂಸ್ಕೃತಿ ಅಳಿಯುವುದಿಲ್ಲ. ಈ ಹಿಂದಿನ ಸಮೀಕ್ಷೆಯಲ್ಲಿ ಹಾಲಕ್ಷತ್ರೀಯ ಎಂದು ನಮೂದಿಸಿ ಗೊಂದಲ ಉಂಟಾಗಿತ್ತು. ಅಂತಹ ತಪ್ಪು ಮತ್ತೆ ಈಗ ಆಗಬರಾದು. ಸಾಂಸ್ಕೃತಿಕವಾಗಿ ಶ್ರೀಮಂತವಾಗಿರುವ ದೀವರು ಈಡಿಗ ಜನಾಂಗದೊಂದಿಗೆ ಒಗ್ಗಟ್ಟಾಗಿಯೇ…

Read More

ಮಂಡ್ಯ : ಇಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಕಾವೇರಿ ನದಿಗೆ ಪುಷ್ಪಾರ್ಚನೆ ಮಾಡುವ ಮೂಲಕ “ಕಾವೇರಿ ಆರತಿ” ಕಾರ್ಯಕ್ರಮಕ್ಕೆ ಶಾಸ್ತ್ರೋಕ್ತವಾಗಿ ಚಾಲನೆ ನೀಡಲಿದರು. ಗಂಗಾ ಆರತಿ ಮಾದರಿಯಲ್ಲಿ ದಕ್ಷಿಣ ಭಾರತದಲ್ಲಿ ಮೊದಲ ಬಾರಿಗೆ ಕಾವೇರಿ ನದಿಗೆ “ಕಾವೇರಿ ಆರತಿ” ಮಾಡುವ ಕಾರ್ಯಕ್ರಮವು ಐದು ದಿನಗಳ ಕಾಲ‌ ಕೆಆರ್ ಎಸ್ ನ ಬೃಂದಾವನ ಉದ್ಯಾನವನದಲ್ಲಿ ನಡೆಯುತ್ತಿದೆ. ಕಾವೇರಿ ಆರತಿ ಕಾರ್ಯಕ್ರಮದ ವೀಕ್ಷಣೆಗೆ ಪ್ರತಿ ನಿತ್ಯ 8 ರಿಂದ 10 ಸಾವಿರಕ್ಕೂ ಅಧಿಕ ಪ್ರವಾಸಿಗರು ರಾಜ್ಯ, ಹೊರರಾಜ್ಯದ ನಾನಾ ಭಾಗಗಳಿಂದ ಆಗಮಿಸಿ “ಕಾವೇರಿ ಆರತಿ”ಯನ್ನು ಕಣ್ತುಂಬಿಕೊಳ್ಳಲಿದ್ದಾರೆ. ಕಾವೇರಿ ಆರತಿ ವೀಕ್ಷಿಸಲು ಆಗಮಿಸುವ ಪ್ರವಾಸಿಗರಿಗೆ ಉಚಿತವಾಗಿ ಹಂಚಲು ಜಲಸಂಪನ್ಮೂಲ ಸಚಿವರೂ ಆದ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಲಾಡು ಮಾಡಿಸಿದ್ದಾರೆ. ಪ್ರತಿನಿತ್ಯ ಲಾಡು ವಿತರಣೆಗೆ ಎಲ್ಲಾ ರೀತಿಯ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ. “ಕಾವೇರಿ ಆರತಿ” ವೀಕ್ಷಣೆಗೆ ಆಗಮಿಸುವ ಪ್ರವಾಸಿಗರಿಗೆ ಕಾವೇರಿ ತಾಯಿ ಪ್ರಸಾದವಾಗಿ ಲಾಡನ್ನು ಉಚಿತವಾಗಿ ವಿತರಣೆ ಮಾಡಲಾಗುತ್ತಿದೆ. ಕಾವೇರಿ ಕನ್ನಡ ನಾಡಿನ ಜೀವನದಿ. ಕೇರಳ,…

Read More

ಬೆಂಗಳೂರು: ನಗರದ ಜನರಿಗೆ ಗ್ರೇಟರ್ ಬೆಂಗಳೂರು ಪ್ರಾಧಿಕಾರ ರಚನೆಯ ನಂತ್ರ ಎಲ್ಲಾ ಮಾಹಿತಿ ಒಂದೆಡೆಗೆ ಲಭ್ಯವಾಗುವಂತೆ ಬೆಂಗಳೂರು ಸಿಟಿ ದಿಶಾಂಕ್ ಆಪ್ ಬಿಡುಗಡೆ ಮಾಡಲಾಗಿದೆ. ಈ ಆಪ್ ನಿಮ್ಮ ಮೊಬೈಲ್ ನಲ್ಲಿ ಹಾಕಿಕೊಂಡರೇ ಜಿಬಿಎ ಸಂಪೂರ್ಣ ಮಾಹಿತಿ ನಿಮ್ಮ ಅಂಗೈನಲ್ಲೇ ಲಭ್ಯವಾಗಲಿದೆ. ಈ ಕುರಿತಂತೆ ಜಿಬಿಎ ಮಾಹಿತಿ ತಂತ್ರಜ್ಞಾನ ವಿಶೇಷ ಆಯುಕ್ತರಾದಂತ ಮುನೀಶ್ ಮೌದ್ಗಿಲ್ ಅವರು ಮಾಹಿತಿ ನೀಡಿದ್ದು, ಗ್ರೇಟರ್‌ ಬೆಂಗಳೂರು ಪ್ರಾಧಿಕಾರ ಹಾಗೂ 5 ನಗರ ಪಾಲಿಕೆಗಳು ಸೇರಿದಂತೆ ಎಲ್ಲ ಮಾಹಿತಿಯನ್ನು ತಿಳಿಯಲು ಮೊಬೈಲ್‌ ತಂತ್ರಾಂಶ ʼಬೆಂಗಳೂರು ಸಿಟಿ ದಿಶಾಂಕ್‌ʼ ಬಿಡುಗಡೆ ಮಾಡಲಾಗಿದೆ. ಇದು ಜಿಐಎಸ್‌ ಮೊಬೈಲ್‌ ಅಪ್ಲಿಕೇಶನ್‌ ಆಗಿದ್ದು, ಜಿಬಿಎ, 5 ನಗರ ಪಾಲಿಕೆಗಳು, ವಲಯ, ವಿಧಾನಸಭಾ ಕ್ಷೇತ್ರ ಹಾಗೂ ವಾರ್ಡ್‌ಗಳ (ಹಳೆಯ 198 ವಾರ್ಡ್‌) ಅಧಿಕೃತ ಗಡಿಗಳನ್ನು ವೀಕ್ಷಿಸಬಹುದು ಎಂದು ತಿಳಿಸಿದ್ದಾರೆ. ಗ್ರೇಟರ್ ಬೆಂಗಳೂರು ಪ್ರಾಧಿಕಾರ ಹಾಗೂ 5 ನಗರ ಪಾಲಿಕೆಗಳು ಸೇರಿದಂತೆ “ಬೆಂಗಳೂರು ಸಿಟಿ ದಿಶಾಂಕ್” ಮೊಬೈಲ್ ತಂತ್ರಾಂಶವನ್ನು ಬಿಡುಗಡೆ ಮಾಡಲಾಗಿದೆ. ಇದು ಜಿ.ಐ.ಎಸ್ ಮೊಬೈಲ್ ಅಪ್ಲಿಕೇಶನ್…

Read More

ಶಿವಮೊಗ್ಗ: ಬಳಸಗೋಡಲ್ಲಿ ಜನರು ಅರಣ್ಯ ಭೂಮಿ ಒತ್ತುವರಿ ಮಾಡಿರುವುದಾಗಿ ಸಾಗರದ ಅರಣ್ಯ ಇಲಾಖೆಯ ಅಧಿಕಾರಿಗಳು ನೋಟಿಸ್ ನೀಡಿದ್ದರು. ಇದು ಪ್ರತಿಭಟನೆಗೂ ಕಾರಣವಾಗಿತ್ತು. ಇದರಿಂದ ಸಿಟ್ಟಗೊಂಡ ಶಾಸಕ ಗೋಪಾಲಕೃಷ್ಣ ಬೇಳೂರು ಅವರು, ಸಾಗರದ ಅರಣ್ಯ ಇಲಾಖೆಯ ಅಧಿಕಾರಿಗಳನ್ನು ಪುಲ್ ಕ್ಲಾಸ್ ತೆಗೆದುಕೊಂಡರು. ಇಂದು ಸಾಗರದ ಪ್ರವಾಸಿ ಮಂದಿರದಲ್ಲಿ ಅರಣ್ಯಾಧಿಕಾರಿಗಳ ಸಭೆ ನಡೆಸಿದಂತ ಅವರು, ನನ್ನ ಗಮನಕ್ಕೆ ಬಾರದೇ ಜನರಿಗೆ ನೋಟಿಸ್ ಕೊಟ್ಟಿದ್ದು ಏಕೆ ಎಂಬುದಾಗಿ ತರಾಟೆಗೆ ತೆಗೆದುಕೊಂಡರು. ಯಾವುದೇ ಕಾರಣಕ್ಕೂ ಜನರಿಗೆ ಒತ್ತುವರಿ ಸಂಬಂಧ ನನ್ನ ಗಮನಕ್ಕೆ ಬಾರದೇ ನೋಟಿಸ್ ನೀಡದಂತೆ ಖಡಕ್ ಸೂಚನೆ ನೀಡಿದರು. ಬಳಸಗೋಡಲ್ಲಿ ಹೌಸಿಂಗ್ ಬೋರ್ಡ್ ಕಾಲೋನಿ ನಿರ್ಮಿಸಲು ಉದ್ದೇಶಿಸಲಾಗಿದೆ. ನಮಗೆ 100 ಎಕರೆ ಬೇಕಿದೆ. ಆದರೇ ಅಲ್ಲಿ 80 ಎಕರೆ ಇದೆ ಎಂಬುದಾಗಿ ಗಮನಕ್ಕೆ ಬಂದಿದೆ. ಯಾವುದೇ ಒತ್ತುವರಿಯಾಗದಂತೆ ಇಲಾಖೆಯವರು ಗಮನ ಹರಿಸಬೇಕು ಎಂದು ಸೂಚಿಸಿದರು. ಬೆಳ್ಳಂದೂರು ಅರಣ್ಯ ಭೂಮಿ ವಿಚಾರವಾಗಿಯೂ ಚರ್ಚಿಸಿದಂತ ಅವರು, ಕಾನೂನು ಪ್ರಕಾರ ಗೇಣಿದಾರರಿಗೆ ಮೂರು ಎಕರೆ ಬಗರ್ ಹುಕುಂ ಅಡಿಯಲ್ಲಿ ಭೂಮಿ…

Read More

ಮಹಿಷಾಸುರನ ನಾಶಕ್ಕಾಗಿ ಅವತಾರ ತಾಳಿದ ಶ್ರೀ ದೇವಿಯ ಉತ್ಸವ ಎಂದರೆ ನವರಾತ್ರಿ, ನವರಾತ್ರಿಯಲ್ಲಿ ಶ್ರೀ ದೇವಿಯ ಉಪಾಸನೆಯನ್ನು ಭಕ್ತಿ ಶ್ರದ್ಧೆಯಿಟ್ಟು ಮಾಡುವುದರಿಂದ ದೇವಿತತ್ತ್ವದ ಲಾಭವಾಗುತ್ತದೆ. ಸಾಧಕರ ದೃಷ್ಟಿಯಲ್ಲಿ ಈ ‘ರಾತ್ರಿ’ಗಳು ಮಹತ್ವಪೂರ್ಣವಾಗಿರುತ್ತವೆ. ಹೀಗೆ ಬಹಳಷ್ಟು ರೀತಿಯ ರಾತ್ರಿಗಳಿರುತ್ತವೆ, ಉದಾ. ಕಾಲರಾತ್ರಿ, ಶಿವರಾತ್ರಿ, ಮೋಹರಾತ್ರಿ, ವೀರರಾತ್ರಿ, ದಿವ್ಯರಾತ್ರಿ, ದೇವರಾತ್ರಿ ಇತ್ಯಾದಿ. ಇವುಗಳಲ್ಲಿ ಭಗವತಿ ತತ್ವವನ್ನು ಜಾಗೃತಗೊಳಿಸಬೇಕಾಗುತ್ತದೆ; ನವರಾತ್ರಿಯಲ್ಲಿನ ಮೊದಲ ಮೂರು ದಿನಗಳಂದು ತಮೋಗುಣವನ್ನು ಕಡಿಮೆ ಮಾಡಲು ತಮೋಗುಣಿ ಮಹಾಕಾಳಿಯ, ನಂತರದ ಮೂರು ದಿನಗಳಂದು ರಜೋಗುಣವನ್ನು ವೃದ್ಧಿಸಲು ಮಹಾಲಕ್ಷ್ಮೀಯ ಮತ್ತು ಕೊನೆಯ ಮೂರು ದಿನಗಳಂದು ಸಾಧನೆಯನ್ನು ತೀವ್ರವಾಗಿ ಮಾಡಲು ಸತ್ತ್ವಗುಣಿ ಮಹಾಸರಸ್ವತಿಯ ಪೂಜೆಯನ್ನು ಮಾಡುತ್ತಾರೆ. ನವರಾತ್ರಿಯ ಬಗ್ಗೆ ಧರ್ಮಶಾಸ್ತ್ರವು ಏನು ಹೇಳುತ್ತದೆ ? : ‘ರಾತ್ರಿ’ ಎಂದರೆ ಆಗುತ್ತಿರುವ ಬದಲಾವಣೆ. ದೇವಿಯ ಒಂದು ಹೆಸರು ‘ಕಾಲರಾತ್ರಿ’ ಎಂದಾಗಿದೆ. ‘ಕಾಲರಾತ್ರಿ’ ಎಂದರೆ ಕಾಲಪುರುಷನಲ್ಲಿ ಬದಲಾವಣೆ ಮಾಡುವವಳು. ತಿರುಗುವುದು ಪೃಥ್ವಿಯ ಗುಣಧರ್ಮವಾಗಿದೆ. ಪೃಥ್ವಿಯು ತಿರುಗುತ್ತಿರುವುದರಿಂದ ಬದಲಾವಣೆಗಳು ಆಗುತ್ತಿರುತ್ತವೆ, ಅಂದರೆ ರಾತ್ರಿ ಮತ್ತು ಹಗಲು ಆಗುತ್ತವೆ. ಇಂತಹ ಬದಲಾವಣೆಗಳನ್ನು…

Read More

ಬೆಂಗಳೂರು: ರಾಜ್ಯದಲ್ಲಿ ಸಾಮಾಜಿಕ, ಶೈಕ್ಷಣಿಕ ಮತ್ತು ಆರ್ಥಿಕ ಸಮೀಕ್ಷೆ ಬರದಿಂದ ಸಾಗಿದೆ. ಹೀಗೆ ಜಾತಿಗಣತಿ ಸಮೀಕ್ಷೆ ಕೈಗೊಳ್ಳುವ ಶಿಕ್ಷಕರಿಗೆ ಗೌರವಧನವನ್ನು ಬಿಡುಗಡೆ ಮಾಡಿ ರಾಜ್ಯ ಸರ್ಕಾರ ಆದೇಶಿಸಿದೆ. ಈ ಕುರಿತಂತೆ ರಾಜ್ಯ ಸರ್ಕಾರ ಆದೇಶಿಸಿದ್ದು, ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದಿಂದ ಉಲ್ಲೇಖ(1)ರ ಆದೇಶದನ್ವಯ ರಾಜ್ಯಾದ್ಯಂತ ಎಲ್ಲಾ ನಾಗರಿಕರ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯನ್ನು ದಿನಾಂಕ:22.09.2025 ರಿಂದ 07.10.2025ರ ವರೆಗೆ ಕೈಗೊಳ್ಳಲಾಗುತ್ತಿದೆ. ಈಗಾಗಲೇ ಜಿಲ್ಲೆಗಳಲ್ಲಿ ಸಮೀಕ್ಷಾ ಕಾರ್ಯವನ್ನು ಪ್ರಾರಂಭಿಸಿದ್ದು, ಸಮೀಕ್ಷೆಯ ಕಾರ್ಯ ಪ್ರಗತಿಯಲ್ಲಿದೆ ಎಂದಿದೆ. ಉಲ್ಲೇಖ (2)ರ ಆದೇಶದಲ್ಲಿ ಆಯೋಗದಿಂದ ಕೈಗೊಳ್ಳಲಾಗುತ್ತಿರುವ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷಾ ಕಾರ್ಯಕ್ಕೆ ಆರ್ಥಿಕ ಇಲಾಖೆಯಿಂದ ಪೂರಕ ಆಯವ್ಯಯ-2 ರಲ್ಲಿ ಅನುದಾನ ಒದಗಿಸುವ ಷರತ್ತುಗಳಿಗೆ ಒಳಪಟ್ಟು, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಅಧೀನದಲ್ಲಿ ಬರುವ ನಿಗಮಗಳ ಪಿ.ಡಿ. ಖಾತೆಗಳಲ್ಲಿ ಲಭ್ಯವಿರುವ ರೂ.348.36 ಕೋಟಿಗಳನ್ನು ಸಮೀಕ್ಷೆಯ ಉದ್ದೇಶಕ್ಕೆ ಬಳಸಿಕೊಳ್ಳಲು ಅನುಮೋದನೆ ನೀಡಿ ಆದೇಶಿಸಲಾಗಿದೆ. ಉಲ್ಲೇಖ (3)ರ ಆದೇಶದಲ್ಲಿ ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ವತಿಯಿಂದ ರಾಜ್ಯದ…

Read More

ಬೆಂಗಳೂರು: ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯ ನೂತನ ಅಧ್ಯಕ್ಷರಾಗಿ ನಿಕೇತ್ ರಾಜ್.ಎಂ ಅವರು ಅಧಿಕಾರ ವಹಿಸಿಕೊಂಡರು.  ದಿನಾಂಕ 26-09-2025 ರಂದು ನಿಕೇತ್ ರಾಜ್. ಎಂ ಅವರು ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯ ನೂತನ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡಿರುತ್ತಾರೆ. ನೂತನ ಅಧ್ಯಕ್ಷರಾಗಿ ಅಧಿಕಾರ ವಹಿಸುವ ಸಂದರ್ಭದಲ್ಲಿ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕರಾದ ರಾಮಚಂದ್ರನ್. ಆರ್ (ಭಾ.ಆ.ಸೇ), ನಿರ್ದೇಶಕರು (ಮಾ.ತಂ) ಶಿಲ್ಪಾ. ಎಂ (ಭಾ.ಆ.ಸೇ) ಹಾಗೂ ನಿರ್ದೇಶಕರು (ಭ&ಜಾ) ಶ್ರೀ ಅಬ್ದುಲ್ ಅಹದ್ (ಭಾ.ಪೊ.ಸೇ) ಉಪಸ್ಥಿತರಿದ್ದರು. ಈ ಸಂದರ್ಭದಲ್ಲಿ, ಸಂಸ್ಥೆಯ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಹೊಸ ಅಧ್ಯಕ್ಷರನ್ನು ಸ್ವಾಗತಿಸಿದರು.

Read More

ಬೆಂಗಳೂರು: ಇಂದು ಕರ್ನಾಟಕ ರಾಜ್ಯ ಕುರುಬರ ಜಾಗೃತಿ ಸಮಿತಿ ಪತ್ರಿಕಾಗೋಷ್ಠಿ ನಡೆಸಿತು. ಆ ಸುದ್ದಿಗೋಷ್ಠಿಯ ಮುಖ್ಯಾಂಶಗಳು ಮುಂದಿದೆ.. ಕರ್ನಾಟಕ ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ರಾಜ್ಯಾಧ್ಯಕ್ಷರು, ಮಾಜಿ ಸಚಿವ ಎಚ್.ಎಂ ರೇವಣ್ಣ ಅವರು ಮಾತನಾಡಿ ಕಳೆದ 1931 ರಿಂದ ದೇಶದಲ್ಲಿ ಜನಗಣತಿ ಆಗಿಲ್ಲ. ಹೀಗಾಗಿ ಸಮುದಾಯಗಳ ಸ್ಥಿತಿಗತಿ ತಿಳಿಯಬೇಕಿದೆ ಎಂದರು. ಹಾವನೂರು ವರದಿ ಬಳಿಕ ಯಾವ ವರದಿಗಳು ಆಗಲಿಲ್ಲ. ಕಾಂತರಾಜ್ ವರದಿಗೆ 10 ವರ್ಷ,ಅದು ಸರಿ ಇಲ್ಲ ಎಂದವರು ಮತ್ತೆ ಮಾಡಿ ಎಂದಿದ್ದರು. ಇದು ಹಿಂದುಳಿದ ಜಾತಿಗಳ ಪ್ರಶ್ನೆ ಮಾತ್ರ ಅಲ್ಲ. ಎಲ್ಲಾ ಸಮುದಾಯಗಳ ಪರಿಸ್ಥಿತಿ ತಿಳಿಯಲಿದೆ ಎಂದರು. ನಾವು ಕುರುಬ ಸಮುದಾಯಗಳು ಈ ಸಮೀಕ್ಷೆಯಲ್ಲಿ ಭಾಗಿಯಾಗಬೇಕು. ಇದು ಸಿದ್ದರಾಮಯ್ಯ ಉಳಿವಿಗಾಗಿ ಅಂತ ಬಹಳ ಜನ ಮಾತಾಡ್ತಾರೆ. ದೇವರಾಜು ಅರಸು ನಂತರ ಎಲ್ಲಾ ಸಮುದಾಯಗಳ ಏಳಿಗೆ ಬಗ್ಗೆ ಕಾಳಜಿ ಇರುವುದು ಸಿದ್ದರಾಮಯ್ಯ ಅವರಿಗೆ. ಕಾನೂನು ಅಡಿ, ಸಾಂವಿಧಾನಿಕ ಅಡಿ ನಡೆಯುತ್ತಿರುವ ಸಮೀಕ್ಷೆಯಾಗಿದೆ. ಯಾರನ್ನೂ ಒತ್ತಾಯ ಮಾಡಬಾರದು ಅಂತ ಕೋರ್ಟ್ ಹೇಳಿದೆ…

Read More

ಶಿವಮೊಗ್ಗ : ಸಾಗರದಲ್ಲಿ ನಿವೇಶನ ಇಲ್ಲದವರಿಗೆ ನಿವೇಶನ ಜೊತೆಗೆ ಗುಂಪು ಮನೆ ನಿರ್ಮಾಣಕ್ಕೆ ಗಮನ ಹರಿಸಲಾಗುತ್ತದೆ ಎಂದು ಶಾಸಕ ಹಾಗೂ ಅರಣ್ಯ ಕೈಗಾರಿಕಾ ಅಭಿವೃದ್ದಿ ನಿಗಮದ ಅಧ್ಯಕ್ಷ ಗೋಪಾಲಕೃಷ್ಣ ಬೇಳೂರು ತಿಳಿಸಿದರು. ಈ ಮೂಲಕ ಸಾಗರದ ನಿವೇಶನ ರಹಿತರಿಗೆ ಶಾಸಕರು ಗುಡ್ ನ್ಯೂಸ್ ನೀಡಿದ್ದಾರೆ. ಶಿವಮೊಗ್ಗ ಜಿಲ್ಲೆಯ ಸಾಗರದ ನಗರಸಭೆಯಲ್ಲಿ ಆಶ್ರಯ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಹಿಂದೆ ಆಶ್ರಯ ನಿವೇಶನಕ್ಕಾಗಿ ಅರ್ಜಿ ಸಲ್ಲಿಸಿದವರ ಅರ್ಜಿಯನ್ನು ನಿವೇಶನ ಕೊಡುವ ಸಂದರ್ಭದಲ್ಲಿ ಪರಿಗಣಿಸಲಾಗುತ್ತದೆ ಎಂದರು. ಎಲ್ಲರಿಗೂ ಪ್ರತ್ಯೇಕ ನಿವೇಶನ ಕೊಡಲು ಕಷ್ಟಸಾಧ್ಯವಾಗಬಹುದು. ಈ ಹಿನ್ನೆಲೆಯಲ್ಲಿ ಗುಂಪು ಮನೆಗಳನ್ನು ನಿರ್ಮಿಸಿ, ಎಲ್ಲರಿಗೂ ಸೂರು ಕಲ್ಪಿಸುವ ಉದ್ದೇಶವನ್ನೂ ಹೊಂದಲಾಗಿದೆ. ಈಗಾಗಲೆ ನಿವೇಶನ ನೀಡಲು ಅಗತ್ಯವಾದ ಜಾಗವನ್ನು ಕೆಲವು ಕಡೆಗಳಲ್ಲಿ ಗುರುತಿಸಲಾಗಿದ್ದು, ಅದನ್ನು ಮಂಜೂರಾತಿಗೆ ಕಳಿಸಲಾಗುತ್ತದೆ ಎಂದು ಹೇಳಿದರು. ಹಿಂದೆ ಕೆಲವರು ಮನೆ ಕಟ್ಟಿಕೊಳ್ಳಲು ಆಶ್ರಯ ನಿವೇಶನ ಪಡೆದಿದ್ದು ಮನೆಕಟ್ಟದೆ ನಿವೇಶನ ಹಾಗೆ ಬಿಟ್ಟಿದ್ದಾರೆ. ಆಶ್ರಯ ನಿವೇಶನ ಪಡೆದು ಯರ‍್ಯಾರು ಮನೆ ಕಟ್ಟಿಲ್ಲವೋ ಅಂತಹವರಿಗೆ…

Read More

ಮಂಡ್ಯ : ಕೆಎಂಎಫ್ ಸಂಸ್ಥೆಯು ಹಾಲಿನಿಂದ ತಯಾರಿಸುವ ಉಪ ಉತ್ಪನ್ನಗಳ ಮಾದರಿಯಲ್ಲೇ ಕೋಳಿ ಮಾಂಸದ ವಿವಿಧ ಭಾಗಗಳನ್ನು ಪ್ರತ್ಯೇಕಿಸಿ ರಿಟೇಲ್ ಮಳಿಗೆಗಳಲ್ಲಿ ಮಾರಾಟ ಮಾಡುವ ಮಹತ್ವದ ಯೋಜನೆಯನ್ನು ನಮ್ಮ ಒಕ್ಕೂಟವು ಈಗಾಗಲೇ ರೂಪುರೇಷೆ ತಯಾರಿಸಿದೆ ಎಂದು ಒಕ್ಕೂಟದ ನೂತನ ಅಧ್ಯಕ್ಷ ಎಂ.ಆರ್.ಬಾಲಕೃಷ್ಣ ಹೇಳಿದರು. ಇಂದು ಮಂಡ್ಯದ ಮದ್ದೂರು ನಗರದ ಶಿವಪುರದ ಒಕ್ಕೂಟದ ಕಛೇರಿ ಆವರಣದಲ್ಲಿ ಮಂಡ್ಯ ಜಿಲ್ಲಾ ಕೋಳಿ ಉತ್ಪಾದಕ ರೈತರ ಸಹಕಾರ ಒಕ್ಕೂಟಕ್ಕೆ ಅಧ್ಯಕ್ಷರು ಮತ್ತು ಉಪಾಧ್ಯಕ್ಷರ ಚುನಾವಣೆ ನಡೆಯಿತು. ಇಂದಿನ ಚುನಾವಣೆಯಲ್ಲಿ ಅಧ್ಯಕ್ಷರಾಗಿ ಎಂ.ಆರ್.ಬಾಲಕೃಷ್ಣ, ಉಪಾಧ್ಯಕ್ಷರಾಗಿ ಡಿ.ಕೃಷ್ಣಪ್ಪ ಹಾಗೂ ನಿರ್ದೇಶಕರಾಗಿ ಕೆ.ಕೃಷ್ಣಯ್ಯ, ಗೋಪಾಲ, ಬೆಟ್ಟಸ್ವಾಮಿ, ಆತ್ಮಾನಂದ, ಎಂ.ವಿ.ವೆಂಕಟೇಶ್, ಜೋಗಿಗೌಡ, ಬಿ.ಗಿರೀಶ್, ಆರ್.ಸಿದ್ದಪ್ಪ, ಎಸ್.ಎಲ್. ಜಯಲಿಂಗೇಗೌಡ, ಸಿ.ಕೆಂಪರಾಜು, ಎಂ.ಸಿ.ಯೋಗೇಶ್, ಎಲ್.ಸಿ.ಪ್ರವೀಣ್ ಕುಮಾರ್, ಚುನಾಯಿತರಾದರು‌. ಅಧ್ಯಕ್ಷರಾಗಿ ಆಯ್ಕೆಯಾದ ಬಳಿಕ ಮಾತನಾಡಿದ ಬಾಲಕೃಷ್ಣ ಅವರು, ರಾಜ್ಯದಲ್ಲಿಯೇ ಪ್ರಥಮ ಬಾರಿಗೆ ಮಂಡ್ಯ ಜಿಲ್ಲಾ ಕೋಳಿ ಉತ್ಪಾದಕ ರೈತರ ಸಹಕಾರ ಒಕ್ಕೂಟ ಅಸ್ತಿತ್ವಕ್ಕೆ ಬಂದಿದ್ದು, ಕೆಎಂಎಫ್ ಸಂಸ್ಥೆಯು ಹಾಲಿನಿಂದ ತಯಾರಿಸುವ ಉಪ ಉತ್ಪನ್ನಗಳ ಮಾದರಿಯಲ್ಲೇ ಕೋಳಿ…

Read More