Author: kannadanewsnow09

ಹುಬ್ಬಳ್ಳಿ : ಮೊದಲು ನೀವೆಲ್ಲಾ ಊಹಾ ಪತ್ರಿಕೋದ್ಯಮವನ್ನು ನಿಲ್ಲಿಸಿ. ಇದು ಸಮಾಜಕ್ಕೆ ಹಾನಿಕರ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಎಲೆಕ್ಟ್ರಾನಿಕ್ ಮೀಡಿಯಾ ಪತ್ರಕರ್ತರಿಗೆ ಕರೆ ನೀಡಿದರು. ಕರ್ನಾಟಕ ಎಲೆಕ್ಟ್ರಾನಿಕ್ ಮೀಡಿಯಾ ಜರ್ನಲಿಸ್ಟ್ ಅಸೋಸಿಯೇಷನ್ ಉದ್ಘಾಟಿಸಿ, ಲೋಗೋ ಬಿಡುಗಡೆ ಮಾಡಿ ಮಾತನಾಡಿದರು. ನಾನು ರಾಜಕಾರಣಕ್ಕೆ ಬಂದು ಇಷ್ಟು ವರ್ಷದಲ್ಲಿ ಯಾವ ಮಾಧ್ಯಮಗಳಿಗೂ ನನ್ನ ಬಗ್ಗೆ ಹೀಗೇ ಬರೆಯಿರಿ, ಹಾಗೇ ಬರೆಯಿರಿ ಎಂದು ಯಾವತ್ತೂ ಹೇಳಿಲ್ಲ. ನನ್ನ ಬಗ್ಗೆ ಸುಳ್ಳುಗಳನ್ನು ಸತತವಾಗಿ ತೋರಿಸುವಾಗಲೂ ಯಾಕೆ ಹೀಗೆ ತೋರಿಸ್ತೀರಿ ಅಂತಲೂ ಯಾರಿಗೂ ಕೇಳಿಲ್ಲ. ನಿಮ್ಮಿಂದ ನನಗೆ ಏನೇನೂ ಅಪೇಕ್ಷೆ ಇಲ್ಲ. ಸಾಧ್ಯವಾದರೆ ಸತ್ಯ ತೋರಿಸಿ, ಸತ್ಯ ಬರೆಯಿರಿ ಎಂದರು. ನನ್ನ ಕಾರಿನ ಮೇಲೆ ಕಾಗೆ ಕುಳಿತದ್ದೇ ಏನ್ ದೊಡ್ಡ ದೊಡ್ಡ ಚರ್ಚೆ ನಡೆಸಿದರು. ಆ ಚರ್ಚೆಯಲ್ಲಿ ಜ್ಯೋತಿಷಿಗಳು, ಚಾನಲ್ ಗಳು ತೋರಿಸಿದ್ದೆಲ್ಲಾ ಅಪ್ಪಟ ಸುಳ್ಳಾಯ್ತು. ನೀವು ಹೀಗೆಲ್ಲಾ ತೋರಿಸಿದರೆ ಜನ ಒಪ್ತಾರಾ ಯೋಚನೆ ಮಾಡಿ ಎಂದರು. ಅಭಿವ್ಯಕ್ತಿ ಸ್ವಾತಂತ್ರ್ಯಕ್ಕೆ ನಮ್ಮ‌ ಸರ್ಕಾರ ಸದಾ ಸಿದ್ದ. ಯಾವತ್ತೂ…

Read More

ನವದೆಹಲಿ: ಸೋಮವಾರ ಆದಾಯ ತೆರಿಗೆ ಇಲಾಖೆಯು 2025-26ರ ಮೌಲ್ಯಮಾಪನ ವರ್ಷಕ್ಕೆ ಆದಾಯ ತೆರಿಗೆ ರಿಟರ್ನ್ಸ್ (ಐಟಿಆರ್) ಸಲ್ಲಿಸುವ ಗಡುವನ್ನು ಒಂದು ದಿನ ವಿಸ್ತರಿಸಿದೆ. ಅದನ್ನು ಸೆಪ್ಟೆಂಬರ್ 15 ರಿಂದ ಸೆಪ್ಟೆಂಬರ್ 16ಕ್ಕೆ ಬದಲಾಯಿಸಲಾಗಿದೆ. ಆರಂಭದಲ್ಲಿ ಜುಲೈ 31 ಕ್ಕೆ ನಿಗದಿಪಡಿಸಲಾಗಿದ್ದ ಗಡುವನ್ನು ಈಗಾಗಲೇ ಒಮ್ಮೆ ವಿಸ್ತರಿಸಲಾಗಿತ್ತು. 2025-26ನೇ ಸಾಲಿನ ಆದಾಯ ತೆರಿಗೆ ರಿಟರ್ನ್ಸ್ (ಐಟಿಆರ್) ಸಲ್ಲಿಸಲು ಜುಲೈ 31, 2025 ಕ್ಕೆ ನಿಗದಿಪಡಿಸಲಾಗಿದ್ದ ದಿನಾಂಕವನ್ನು ಸೆಪ್ಟೆಂಬರ್ 15, 2025 ಕ್ಕೆ ವಿಸ್ತರಿಸಲಾಗಿದೆ. ಕೇಂದ್ರೀಯ ನೇರ ತೆರಿಗೆ ಮಂಡಳಿಯು ಈಗ ಸೆಪ್ಟೆಂಬರ್ 16, 2025 ಕ್ಕೆ ವಿಸ್ತರಿಸಲು ನಿರ್ಧರಿಸಿದೆ ಎಂದು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ. ಆದಾಯ ತೆರಿಗೆ ಇ-ಫೈಲಿಂಗ್ ಪೋರ್ಟಲ್‌ನಲ್ಲಿನ ನಿರಂತರ ತಾಂತ್ರಿಕ ದೋಷಗಳಿಂದಾಗಿ ಅನೇಕ ತೆರಿಗೆದಾರರು ಪ್ರಕ್ರಿಯೆಯನ್ನು ಪೂರ್ಣಗೊಳಿಸಲು ಹೆಣಗಾಡಿದ ನಂತರ ಈ ವಿಸ್ತರಣೆ ಮಾಡಲಾಗಿದೆ. ಫೈಲಿಂಗ್ ಉಪಯುಕ್ತತೆಗಳಲ್ಲಿ ಅಗತ್ಯ ನವೀಕರಣಗಳು ಮತ್ತು ಬದಲಾವಣೆಗಳನ್ನು ಸುಗಮಗೊಳಿಸಲು, ಸೆಪ್ಟೆಂಬರ್ 16, 2025 ರಂದು ಬೆಳಿಗ್ಗೆ 12:00 ರಿಂದ 2:30 ರವರೆಗೆ ಇ-ಫೈಲಿಂಗ್ ಪೋರ್ಟಲ್…

Read More

ಮಂಡ್ಯ: ಸಾರ್ವಜನಿಕರೆದುರು ಮಾನವೀಯತೆಯನ್ನು ನ್ಯಾಯಾಧೀಶರೊಬ್ಬರು ಮೆರಿದ್ದಾರೆ. ಕೋರ್ಟ್ ಮೆಟ್ಟಿಲೇರಿ ಬರಲಾಗದೇ ಇದ್ದಂತ ವೃದ್ಧನ ಬಳಿಗೆ ತೆರಳಿ, ವಿಚಾರಣೆ ನಡೆಸಿ, ತೀರ್ಪು ನೀಡಿ ಸಾರ್ವಜನಿಕರ ಮೆಚ್ಚುಗೆಗೂ ಪಾತ್ರರಾದಂತ ಘಟನೆ ಮಂಡ್ಯದ ಮದ್ದೂರಲ್ಲಿ ನಡೆದಿದೆ. ಮಂಡ್ಯ ಜಿಲ್ಲೆಯ ಮದ್ದೂರಿನ JMFC ನ್ಯಾಯಾಲಯದಲ್ಲಿ ಇಂತದ್ದೊಂದು ಘಟನೆ ನಡೆದಿದೆ. ನಡೆಯಲಾಗದ ಸ್ಥಿತಿಯಲ್ಲಿದ್ದ ವೃದ್ದನ ಬಳಿಗೆ ಬಂದು ನ್ಯಾಯಾಧೀಶೆ ವಿಚಾರಣೆ ಮಾಡಿದ್ದಾರೆ. ಲೋಕ ಅದಾಲತ್ ಕಾರ್ಯಕ್ರಮದಲ್ಲಿ ಅಪಘಾತ ವಿಮಾ ಸಂಬಂಧ ವಿಚಾರಣೆಗೆ ಬಂದಿದ್ದ ವೃದ್ದ ಮಾದೇಗೌಡ. ಅಪಘಾತವಾಗಿ ಕಾಲು ಸ್ವಾಧೀನವಿಲ್ಲದೆ ನಡೆಯಲು ಸಾಧ್ಯವಾಗದೆ ವೃದ್ಧರು ಕುಳಿತಿದ್ದರು. ಕೋರ್ಟ್ ಮೇಲಂತಸ್ಥಿನ ಕಟ್ಟಡದಲ್ಲಿ ನಡೆಯುತ್ತಿದ್ದ ಕೋರ್ಟ್ ಕಲಾಪ ನಡೆಯುತ್ತಿತ್ತು. ವೃದ್ಧರ ವಿಚಾರಣೆ ಬಂದಾಗ ಅವರು ಬಾರದ ಕಾರಣ ತಿಳಿದಂತ ನ್ಯಾಯಾಧೀಶೆ ಹರಿಣಿ ಅವರು, ಕೋರ್ಟ್ ನ ವಿಚಾರಣೆ ವೇಳೆ ಸಂತ್ರಸ್ಥನ ಮಾಹಿತಿ ತಿಳಿದು ಕೆಳಗೆ ಇಳಿದು ಬಂದು ವಿಚಾರಿಸಿದರು. ಅವರ ಅಹವಾಲು ಕೇಳಿದಂತ ನ್ಯಾಯಾಧೀಶೆ ಹರಣಿ ಅವರು ತಕ್ಷಣವೇ ಸ್ಥಳದಲ್ಲಿ ವಿಮಾ ಕಂಪನಿಯಿಂದ ಸಂತ್ರಸ್ಥ ವ್ಯಕ್ತಿಗೆ ಪರಿಹಾರದಲ್ಲಿ 2.5 ಲಕ್ಷ ಹಣ…

Read More

ಬೆಂಗಳೂರು: ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ)ಯ ವ್ಯಾಪ್ತಿಯಲ್ಲಿ ಬರುವ ಸರ್ಕಾರಿ ಪದವಿ ಪೂರ್ವ ಕಾಲೇಜು ಹಾಗೂ ಜಿಲ್ಲಾ ಉಪ ನಿರ್ದೇಶಕರ ಕಚೇರಿಯ ಎಲ್ಲಾ ಅಧಿಕಾರಿ / ಸಿಬ್ಬಂದಿಗಳ ಸೇವಾ ವಹಿಯನ್ನು Electronic Service Register (ESR) ಅನುಷ್ಠಾನಗೊಳಿಸಲಾಗಿದೆ. ಈ ಬಗ್ಗೆ ಆದೇಶ ಹೊರಡಿಸಿರುವಂತ ರಾಜ್ಯ ಸರ್ಕಾರವು,  ಸರ್ಕಾರಿ ನೌಕರರ ಸೇವಾ ವಹಿಗಳನ್ನು ESR ಗೆ ಬದಲಾಯಿಸಿ ಮುಂದೆ E-SR ನಲ್ಲಿಯೇ ಮುಂದುವರೆಸಲು ತಿಳಿಸಲಾಗಿದೆ. ಆದ್ದರಿಂದ ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ)ಯ ವ್ಯಾಪ್ತಿಯಲ್ಲಿ ಬರುವ ಸರ್ಕಾರಿ ಪದವಿ ಪೂರ್ವ ಕಾಲೇಜು ಹಾಗೂ ಜಿಲ್ಲಾ ಉಪ ನಿರ್ದೇಶಕರ ಕಚೇರಿಯ ಎಲ್ಲಾ ಅಧಿಕಾರಿ / ಸಿಬ್ಬಂದಿಗಳ ಸೇವಾ ವಹಿಯನ್ನು Electronic Service Register (ESR)ನಲ್ಲಿ ಅನುಷ್ಠಾನಗೊಳಿಸಲು ಸೂಚಿಸಲಾಗಿರುತ್ತದೆ. ಈ ಹಿನ್ನಲೆಯಲ್ಲಿ, ಸೇವಾ ವಹಿಯನ್ನು Electronic Service Register (ESR) ನಲ್ಲಿ ಅನುಷ್ಠಾನಗೊಳಿಸುವ ಕುರಿತು ಈಗಾಗಲೇ ಆನ್ ಲೈನ್‌ನಲ್ಲಿ, ಹೆಚ್.ಆರ್.ಎಂ.ಎಸ್ -2 ನಿಂದ ತರಬೇತಿ ನೀಡಲಾಗಿರುತ್ತದೆ. ಆದರೂ ಸಹ ಇದುವರೆಗೂ ಶಾಲಾ ಶಿಕ್ಷಣ ಇಲಾಖೆ…

Read More

ಬೆಂಗಳೂರು: ಕೆಪಿಟಿಸಿಎಲ್ ವತಿಯಿಂದ ತುರ್ತು ನಿರ್ವಹಣಾ ಕಾಮಗಾರಿ ಹಿನ್ನೆಲೆಯಲ್ಲಿ ಆಡುಗೋಡಿ ಉಪಕೇಂದ್ರ ವ್ಯಾಪ್ತಿಯಲ್ಲಿ ದಿನಾಂಕ 16.09.2025 (ಮಂಗಳವಾರ) ರಂದು ಬೆಳಗ್ಗೆ 10:00 ಗಂಟೆಯಿಂದ ಸಂಜೆ 05:00 ಗಂಟೆವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ. ಆಡುಗೋಡಿ, ಸಲಾಪುರಿಯಾ ಟವರ್, ಬಿಗ್ ಬಜಾರ್, ಆಕ್ಸೆಂಚರ್, ಕೆ.ಎಮ್.ಎಪ್, ಗೋಡೌನ್, ನಂಜಪ್ಪ ಲೇಔಟ್, ನ್ಯೂ ಮೈಕೋ ರಸ್ತೆ, ಚಿಕ್ಕಲಕ್ಷ್ಮೀ ಲೇಔಟ್, ಮಹಲಿಂಗೇಶ್ವರ ಬಡಾವಾಣೆ, ಬೆಂಗಳೂರು ಡ್ಯೆರಿ, ಫೋರಾಮ್, ರಂಗದಾಸಪ್ಪ ಲೇಔಟ್, ಲಕ್ಕಸಂದ್ರ, ವಿಲ್ಸನ್ ಗಾರ್ಡ್ನ್, ಚಿನ್ನಯ್ಯನ್ನ ಪಾಳ್ಯ, ಚಂದ್ರಪ್ಪ ನಗರ, ನಿಮ್ಯಾನ್ಸ್ ಅಡ್ಮಿನಿಸ್ರೆಟಿವ್ ಬ್ಲಾಕ್, ಬಂಡೆ ಸ್ಲಮ್, ಸುಣ್ಣದಕಲ್ಲು, ಬೃಂದವನ ಸ್ಲಮ್, ಲಾಲ್ ಜಿ ನಗರ, ಶಾಮಣ್ಣ ಗಾರ್ಡನ್, ಎನ್ ಡಿ ರ್ ಐ, ಪೋಲಿಸ್ ವಸತಿ ಗೃಹಗಳು ಮತ್ತು ಸುತ್ತಮುತ್ತಲ ಪ್ರದೇಶಗಳಲ್ಲಿ ವಿದ್ಯುತ್ ಇರುವುದಿಲ್ಲ. 66/11 ಕೆವಿ ರಾಜನಕುಂಟೆ ಉಪಕೇಂದ್ರ ವ್ಯಾಪ್ತಿಯಲ್ಲಿ ದಿನಾಂಕ 17.09.2025 (ಬುಧವಾರ) ರಂದು ಬೆಳಗ್ಗೆ 10:00 ಗಂಟೆಯಿಂದ ಸಂಜೆ 04:00 ಗಂಟೆವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ. ಹೊನ್ನೇನಹಳ್ಳಿ, ಸಿಂಗನಾಯಕನಹಳ್ಳಿ, ರಾಜನಕುಂಟೆ,…

Read More

ನವದೆಹಲಿ: ದೇಶದಲ್ಲಿ, ಭಾರತ ಸರ್ಕಾರದ ಶಿಕ್ಷಣ ಸಚಿವಾಲಯದ ಅಡಿಯಲ್ಲಿ ಎರಡು ರಾಷ್ಟ್ರೀಯ ಶಾಲಾ ಮಂಡಳಿಗಳಿವೆ, ಅವುಗಳೆಂದರೆ CBSE ಮತ್ತು NIOS. CBSE ಮುಖಾಮುಖಿ ಶಿಕ್ಷಣದ ಮೂಲಕ ಶಿಕ್ಷಣವನ್ನು ನೀಡುತ್ತಿದ್ದರೆ, NIOS ಮುಕ್ತ ಮತ್ತು ದೂರ ಶಿಕ್ಷಣದ ಮೂಲಕ ಶಿಕ್ಷಣವನ್ನು ನೀಡುತ್ತಿದೆ. CBSE ನಡೆಸುವ ಮಂಡಳಿ ಪರೀಕ್ಷೆಗಳಲ್ಲಿ ಹಾಜರಾಗಲು ಅಗತ್ಯವಾದ ಅವಶ್ಯಕತೆಗಳು ಈ ಕೆಳಗಿನಂತಿವೆ. 1. X ತರಗತಿ ಮತ್ತು XII ತರಗತಿಗಳು ಕ್ರಮವಾಗಿ IX ಮತ್ತು X ತರಗತಿ ಮತ್ತು XII ಮತ್ತು XII ತರಗತಿಗಳನ್ನು ಒಳಗೊಂಡಿರುವ ಎರಡು ವರ್ಷಗಳ ಕಾರ್ಯಕ್ರಮವಾಗಿದೆ. ಅದರಂತೆ, ಪರೀಕ್ಷೆಗಳಿಗೆ ಹಾಜರಾಗಲು ಅರ್ಹತೆ ಪಡೆಯಲು ಎಲ್ಲಾ ವಿಷಯಗಳು ವಿದ್ಯಾರ್ಥಿಯು 2 ವರ್ಷಗಳ ಕಾಲ ಅಧ್ಯಯನ ಮಾಡಿರಬೇಕು. 2. ವಿದ್ಯಾರ್ಥಿಗಳು ಕನಿಷ್ಠ 75% ಹಾಜರಾತಿಯನ್ನು ಹೊಂದಿರುವುದು ಕಡ್ಡಾಯವಾಗಿದೆ. 3. CBSE ನೀಡುವ ಎಲ್ಲಾ ವಿಷಯಗಳಲ್ಲಿ, ಆಂತರಿಕ ಮೌಲ್ಯಮಾಪನವು NEP-2020 ರ ಪ್ರಕಾರ ಮೌಲ್ಯಮಾಪನದ ಕಡ್ಡಾಯ ಅವಿಭಾಜ್ಯ ಅಂಗವಾಗಿದೆ. ಇದು 2 ವರ್ಷಗಳ ದೀರ್ಘ ಪ್ರಕ್ರಿಯೆಯಾಗಿದೆ. ಒಬ್ಬ ವಿದ್ಯಾರ್ಥಿ ಶಾಲೆಗೆ ಹೋಗದಿದ್ದರೆ,…

Read More

ಶಿವಮೊಗ್ಗ: ರಾಜ್ಯದಲ್ಲೊಂದು ವಿಚಿತ್ರ ಕೇಸ್ ಎನ್ನುವಂತೆ ಪಕ್ಕದ ಮನೆಯವರು ಸಾಕಿರುವಂತ ಕೋಳಿ ಕೂಗೋದರಿಂದ ನಿದ್ದೆ ಮಾಡೋದಕ್ಕೆ ಆಗುತ್ತಿಲ್ಲ. ನನ್ನ ನಿದ್ದೆಗೆ ತೊಂದರೆ ಆಗಿದೆ. ಕೋಳಿ ಸಾಗಿರುವಂತ ಮಾಲೀಕರ ವಿರುದ್ಧ ಕ್ರಮ ಕೈಗೊಳ್ಳುವಂತೆ ಪೊಲೀಸರಿಗೆ ದೂರು ನೀಡಿರುವಂತ ಘಟನೆ ಸಾಗರದಲ್ಲಿ ನಡೆದಿದೆ. ಶಿವಮೊಗ್ಗ ಜಿಲ್ಲೆಯ ಸಾಗರ ಪಟ್ಟಣದ ಲೋಹಿಯಾ ನಗರದ ಡೇನಿಯಲ್.ಎನ್ ಎಂಬಾತ ಪಕ್ಕದ ಮನೆಯಲ್ಲಿ ನಾಟಿ ಕೋಳಿ ಸಾಕಿರುವಂತ ಮಾಲೀಕನ ವಿರುದ್ಧ ಇಂತದ್ದೊಂದು ದೂರನ್ನು ಕೆ ಎಸ್ ಪಿ ಆಪ್ ಮೂಲಕ ಸಾಗರ ಟೌನ್ ಪೊಲೀಸರಿಗೆ ಸಲ್ಲಿಸಿದ್ದಾರೆ. ಸಾಗರದ ಲೋಹಿಯಾನಗರದ ನಿವಾಸಿ ಡೇನಿಯಲ್ ಸಲ್ಲಿಸಿರುವಂತ ದೂರಿನಲ್ಲಿ ವಸತಿ ಪ್ರದೇಶದಲ್ಲಿ ಪಕ್ಕದ ಮನೆಯ ಮಾಲೀಕರೊಬ್ಬರು ನಾಟಿ ಕೋಳಿಗಳನ್ನು ಸಾಕಿದ್ದಾರೆ. ಇದರಿಂದ ಶಬ್ದ ಮಾಲೀನ್ಯ ಉಂಟಾಗುತ್ತಿದೆ. ಶಬ್ದ ಮಾಲಿನ್ಯ ಮಾನದಂಡಗಳಂತೆ ವಸತಿ ಪ್ರದೇಶದಲ್ಲಿ ಹಗಲಿನಲ್ಲಿ 55 ಡಿಬಿ, ರಾತ್ರಿಯ ವೇಳೆಯಲ್ಲಿ 45 ಡಿಬಿ ಶಬ್ದವಿರಬೇಕು. ಅದಕ್ಕಿಂತ ಹೆಚ್ಚು ಇರಬಾರದು ಎಂದಿದೆ ಎಂದು ತಿಳಿಸಿದ್ದಾರೆ. ಪಕ್ಕದ ಮನೆಯವರು ಸಾಕಿರುವಂತ ನಾಟಿ ಕೋಳಿಗಳಿಂದ ಒಂದೊಂದು ಕೋಳಿ ಕೂಗುವಾಗಲೂ…

Read More

ಕೊಡಗು: ಇಲ್ಲಿನ ತಲಕಾವೇರಿಯಲ್ಲಿ ಪವಿತ್ರ ತೀರ್ಥೋದ್ಭವಕ್ಕೆ ಮುಹೂರ್ತ ನಿಗದಿ ಪಡಿಸಲಾಗಿದೆ. ಅಕ್ಟೋಬರ್ 17ರ ಶುಕ್ರವಾರ ಮಧ್ಯಾಹ್ನ 1.45ಕ್ಕೆ ತೀರ್ಥೋದ್ಭವ ಆಗಲಿದೆ. ಅಕ್ಟೋಬರ್.17ರಂದು ತೀರ್ಥರೂಪಿಣಿಯಾಗಿ ಕಾವೇರಿ ತಾಯಿಯು ಭಕ್ತರಿಗೆ ತನ್ನ ದರ್ಶವನ್ನು ನೀಡಲಿದ್ದಾಳೆ. ಈ ಬಗ್ಗೆ ದೇವಸ್ಥಾನದಿಂದ ಮಾಹಿತಿ ನೀಡಲಾಗಿದ್ದು, ಅಕ್ಟೋಬರ್ 17ರಂದು ಮಧ್ಯಾಹ್ನ 1.45ಕ್ಕೆ ತೀರ್ಥೋದ್ಭವ ಆಗಲಿದೆ. ತುಲಾ ಲಘ್ನದಲ್ಲಿ ಕಾವೇರಿ ಮಾತೆ ಆವಿರ್ಭವಿಸಲಿದೆ ಎಂದಿದೆ. ಮಡಿಕೇರಿ ತಾಲ್ಲೂಕಿನ ಭಾಗಮಂಡಲ ಬಳಿಯಿರುವಂತ ತಲಕಾವೇರಿ ಸನ್ನಿಧಿಯಲ್ಲಿ ಪ್ರತಿವರ್ಷದಂತೆ ಈ ವರ್ಷವೂ ಪವಿತ್ರ ತೀರ್ಥೋದ್ಭವ ಆಗಲಿದೆ. ವಿಸ್ಮಯಕಾರಿ ಕುಂಡಿಕೆ ಮಾಹಿತಿ ಹೀಗಿದೆ.. ತಲಕಾವೇರಿಯಲ್ಲಿನ ಕುಂಡಿಕೆಯಲ್ಲಿ ಪ್ರತಿ ವರ್ಷ ಕಾವೇರಿ ತೀರ್ಥ ರೂಪದಲ್ಲಿದರ್ಶನ ನೀಡುತ್ತಾಳೆ ಎನ್ನುವುದು ಪುರಾತನ ಕಾಲದಿಂದಲೂ ಇರುವ ನಂಬಿಕೆ. ಈ ಸಂದರ್ಭ ಸಹಸ್ರಾರು ಭಕ್ತರು ತೀರ್ಥರೂಪಿಣಿ ಕಾವೇರಿ ತಾಯಿಯನ್ನು ಕಣ್ಣು ತುಂಬಿಕೊಳ್ಳುತ್ತಾರೆ. ಕೇವಲ ಕೊಡಗು ಮಾತ್ರವಲ್ಲದೆ ರಾಜ್ಯದ ಮೂಲೆ ಮೂಲೆಗಳಿಂದ ಹಾಗೂ ತಮಿಳುನಾಡಿನಿಂದಲೂ ಸಾಕಷ್ಟು ಭಕ್ತರು ಆಗಮಿಸಿ ಇಲ್ಲಿಂದ ತೀರ್ಥ ಕೊಂಡೊಯ್ಯುತ್ತಾರೆ. ಇಲ್ಲಿನ ಪುಟ್ಟ ಕುಂಡಿಕೆಯಲ್ಲಿನ ಕಾವೇರಿ ಜಲವನ್ನು ತೀರ್ಥವೆಂದು ನಂಬಿ ಪೂಜಿಸುವುದಲ್ಲದೆ…

Read More

ಬೆಂಗಳೂರು: ರಾಜ್ಯದ ಎಲ್ಲಾ ಸರ್ಕಾರಿ ಇಲಾಖೆ, ನಿಗಮ, ಮಂಡಳಿ, ನಗರಸಭೆ, ಸರ್ಕಾರದ ಇತರೆ ಅಧೀನ ಸಂಸ್ಥೆಗಳಿಗೆ ಸೇರಿದ, ನೋಂದಣಿಯಾಗಿ 15 ವರ್ಷಗಳನ್ನು ಮೀರಿದ ವಾಹನಗಳನ್ನು ಕಡ್ಡಾಯವಾಗಿ ನಾಶ ಪಡಿಸುವಂತೆ ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ. ಈ ಕುರಿತಂತೆ ರಾಜ್ಯ ಸರ್ಕಾರವು ವಿಶೇಷ ರಾಜ್ಯ ಪತ್ರಿಕೆ ಹೊರಡಿಸಿದ್ದು, ಕೇಂದ್ರ ಸರ್ಕಾರವು ನಿಗದಿಪಡಿಸಿರುವ ಮಾನದಂಡಗಳ ಅನ್ವಯ ಮೋಟಾರು ವಾಹನಗಳ ಕಾಯ್ದೆ 1988ರ ಕಲಂ 64(ಪಿ)ರಲ್ಲಿ ಪುದತ್ತವಾದ ಅಧಿಕಾರದಡಿ ರಾಜ್ಯದಲ್ಲಿ Registered Vehicle Scrapping Policy of Karnataka ಜಾರಿಗೊಳಿಸಲಾಗಿದೆ ಎಂದು ಹೇಳಿದೆ. Registered Vehicle Scrapping Policy – 2022ನ್ನು ಜಾರಿಗೊಳಿಸಲು 15 ವರ್ಷಗಳನ್ನು ಪೂರೈಸಿರುವ, ರಾಜ್ಯ ಸರ್ಕಾರ/ಕೇಂದ್ರ ಸರ್ಕಾರ/ಸರ್ಕಾರದ ಅಧೀನದಲ್ಲಿ ಕಾರ್ಯನಿರ್ವಹಿಸುತ್ತಿರುವ ಸಂಸ್ಥೆಗಳು/ನಿಗಮಗಳು/ಮಂಡಳಿಗಳು/ ಸ್ಥಳೀಯ ಸಂಸ್ಥೆ/ಇತ್ಯಾದಿಗಳಲ್ಲಿರುವ 5000 ವಾಹನಗಳನ್ನು ಆದ್ಯತೆ ಮತ್ತು ಉಪಯೋಗದ ಆಧಾರದ ಮೇಲೆ ಹಂತಹಂತವಾಗಿ ನಾಶಪಡಿಸಲು ಅನುಮೋದನೆ ನೀಡಲಾಗಿರುತ್ತದೆ. ಭಾರತ ಸರ್ಕಾರದ ಹಣಕಾಸು ಮಂತ್ರಾಲಯದ ಪತ್ರದಲ್ಲಿ scheme Guidelines for reform-based parts of the ‘Scheme for Special…

Read More

ಗುಜರಾತ್ : ಸುಪ್ರೀಂ ಕೋರ್ಟ್ ನೇಮಿಸಿದ್ದ ವಿಶೇಷ ತನಿಖಾ ತಂಡದ (ಎಸ್ ಐಟಿ) ವರದಿ ಆಧಾರದ ಮೇಲೆ ನ್ಯಾಯಮೂರ್ತಿಗಳು ಸೋಮವಾರ ನೀಡಿದ ತೀರ್ಪಿನ ಬಗ್ಗೆ ವಂತಾರ ತಂಡದಿಂದ ಹೇಳಿಕೆಯನ್ನು ಬಿಡುಗಡೆ ಮಾಡಲಾಗಿದೆ.  “ಗೌರವಾನ್ವಿತ ಸುಪ್ರೀಂ ಕೋರ್ಟ್ ನೇಮಿಸಿದ ವಿಶೇಷ ತನಿಖಾ ತಂಡದ (SIT) ಅಂಶಗಳನ್ನು ನಾವು ಅತ್ಯಂತ ನಮ್ರತೆ ಹಾಗೂ ಕೃತಜ್ಞತೆಯಿಂದ ಸ್ವಾಗತಿಸುತ್ತೇವೆ. ವಂತಾರದ ಪ್ರಾಣಿ ಕಲ್ಯಾಣ ಧ್ಯೇಯದ ವಿರುದ್ಧ ವ್ಯಕ್ತಪಡಿಸಿದಂಥ ಅನುಮಾನಗಳು ಹಾಗೂ ಆರೋಪಗಳು ಯಾವುದೇ ಆಧಾರ ಇಲ್ಲದಂಥದ್ದು ಎಂದು ಎಸ್ಐಟಿ ವರದಿ ಮತ್ತು ಸುಪ್ರೀಂ ಕೋರ್ಟ್‌ನ ಆದೇಶ ಸ್ಪಷ್ಟಪಡಿಸಿದೆ. ಎಸ್ಐಟಿಯ ಗಣ್ಯ ಮತ್ತು ಗೌರವಯುತ ಸದಸ್ಯರಿಂದ ಸತ್ಯದ ದೃಢೀಕರಣವು ವಂತಾರದಲ್ಲಿರುವ ಎಲ್ಲರಿಗೂ ಸಮಾಧಾನವನ್ನು ನೀಡುವುದಲ್ಲದೆ, ಇದು ಆಶೀರ್ವಾದ ಸಹ ಆಗಿದೆ, ಏಕೆಂದರೆ ಅದು ಸ್ವತಃ ನಮ್ಮ ಕೆಲಸವೇ ಮಾತನಾಡುವುದಕ್ಕೆ ಅನುವು ಮಾಡಿಕೊಡುತ್ತದೆ. ತಮಗಾಗಿ ಧ್ವನಿ ಎತ್ತುವುದಕ್ಕೆ ಸಾಧ್ಯವಾಗದವರಿಗೆ ವಿನಮ್ರತೆ ಮತ್ತು ಭಕ್ತಿಯಿಂದ ಸೇವೆ ಸಲ್ಲಿಸುವುದನ್ನು ಮುಂದುವರಿಸಲು ಎಸ್ಐಟಿ ಕಂಡುಕೊಂಡಂಥ ಅಂಶಗಳು ಹಾಗೂ ಸುಪ್ರೀಂ ಕೋರ್ಟ್‌ನ ಆದೇಶವು ನಮಗೆ ಮತ್ತಷ್ಟು…

Read More