Author: kannadanewsnow09

ಬೆಂಗಳೂರು: “ಪ್ರತಾಪ್ ಸಿಂಹರಿಗೆ ಅವರ ಪಕ್ಷದಲ್ಲಿ ಟಿಕೆಟ್ ಕೊಟ್ಟಿಲ್ಲ. ಹೀಗಾಗಿ ತಾನು ರಾಜಕೀಯವಾಗಿ ಬದುಕಿದ್ದೇನೆ ಎಂದು ತೋರಿಸಿಕೊಳ್ಳುವ ಪ್ರಯತ್ನ ಮಾಡುತ್ತಿದ್ದಾರೆ. ಅವರಿಗೆ ಒಳ್ಳೆಯದಾಗಲಿ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು. ವಿಧಾನಸೌಧದ ಆವರಣದಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಸೋಮವಾರ ಪ್ರತಿಕ್ರಿಯೆ ನೀಡಿದರು. ನಾಡಹಬ್ಬ ದಸರಾ ಉದ್ಘಾಟನೆಗೆ ಬಾನು ಮುಷ್ತಾಕ್ ಅವರಿಗೆ ಆಹ್ವಾನ ನೀಡಿರುವ ಸರ್ಕಾರ ನಿರ್ಧಾರದ ವಿರುದ್ಧ, ಬಿಜೆಪಿ ಮಾಜಿ ಸಂಸದ ಪ್ರತಾಪ್ ಸಿಂಹ ಅವರು ಸಲ್ಲಿಸಿದ್ದ ಪಿಐಎಲ್ ಅನ್ನು ಹೈಕೋರ್ಟ್ ವಜಾಗೊಳಿಸಿರುವ ಬಗ್ಗೆ ಮಾಧ್ಯಮಗಳು ಕೇಳಿದಾಗ, “ನ್ಯಾಯ ಪೀಠದಿಂದ ನ್ಯಾಯ ಸಿಕ್ಕಿದೆ. ನಮ್ಮ ನ್ಯಾಯಾಂಗ ವ್ಯವಸ್ಥೆಗೆ ನಾವು ತಲೆಬಾಗುತ್ತೇವೆ. ನಮ್ಮದು ಪ್ರಜಾಪ್ರಭುತ್ವದ ವ್ಯವಸ್ಥೆ. ನಾವಿಂದು ಪ್ರಜಾಪ್ರಭುತ್ವ ದಿನ ಆಚರಿಸುತ್ತಿದ್ದೇವೆ. ನಮ್ಮ ಮತ ನಮ್ಮ ಹಕ್ಕು. ಬ್ಯಾಲೆಟ್ (ಮತ) ಬುಲೆಟ್ ಗಿಂತ ಶಕ್ತಿಶಾಲಿ. ನಮ್ಮದು ಈ ಮತಗಳಿಂದ ಆರಿಸಲಾಗಿರುವ ಸರ್ಕಾರ. ಜನರ ಬಹುಮತದೊಂದಿಗೆ ಆರಿಸಿ ಬಂದಿರುವ ಸರ್ಕಾರದ ತೀರ್ಮಾನ ಇದು” ಎಂದು ತಿಳಿಸಿದರು. “ನಮ್ಮ ಸಂವಿಧಾನ ಸಮಾನತೆಯ ಸಂದೇಶ ಸಾರುತ್ತದೆ.…

Read More

ಬೆಂಗಳೂರು: ಭಾರತದಲ್ಲಿ ಶೇ.60 ರಷ್ಟು ಸಾವುಗಳು ಜೀವನಶೈಲಿ ಸಂಬಂಧಿತ ಕಾಯಿಲೆಗಳಾದ ಹೃದಯಾಘಾತ, ಮಧುಮೇಹ, ಪಾರ್ಶ್ವವಾಯು, ಕ್ಯಾನ್ಸರ್ ಮತ್ತು ಡಿಜಿಟಲ್ ಸಾಧನಗಳ ಅತಿಯಾದ ಬಳಕೆ ಮತ್ತು ಒಂಟಿತನಕ್ಕೆ ಸಂಬಂಧಿಸಿದ ಮಾನಸಿಕ ಆರೋಗ್ಯ ಅಸ್ವಸ್ಥತೆಗಳಿಂದ ಉಂಟಾಗುತ್ತವೆ. ಸದ್ದಿಲ್ಲದೆ ಕಾಡುವ ಈ ಸಾಂಕ್ರಾಮಿಕ ರೋಗವನ್ನು ಪರಿಹರಿಸದೆ ಯಾವುದೇ ರಾಷ್ಟ್ರವು ಪ್ರಗತಿ ಸಾಧಿಸಲು ಸಾಧ್ಯವಿಲ್ಲ ಎಂದು ಸಂಸದ ಮತ್ತು ಜಯದೇವ ಹೃದಯರಕ್ತನಾಳ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆಯ ಮಾಜಿ ನಿರ್ದೇಶಕರಾದ ಡಾ. ಸಿ.ಎನ್. ಮಂಜುನಾಥ್ ಹೇಳಿದರು. ಇಂದು ಎಂಜಿನಿಯರ್‌ಗಳ ದಿನದಂದು ಕರ್ನಾಟಕ ವಾಣಿಜ್ಯ ಮತ್ತು ಕೈಗಾರಿಕಾ ಒಕ್ಕೂಟ ವತಿಯಿಂದ (FKCCI) ಸರ್ ಎಂ. ವಿಶ್ವೇಶ್ವರಯ್ಯ ಪ್ರಶಸ್ತಿಯನ್ನು ಸ್ವೀಕರಿಸಿದ ನಂತರ ಅವರು ಮಾತನಾಡುತ್ತಿದ್ದರು. ದೇಶದಲ್ಲಿ ತಂತ್ರಜ್ಞಾನ ಮತ್ತು ಎಂಜಿನಿಯರಿಂಗ್ ನ್ನು ಕೈಗಾರಿಕಾ ಬೆಳವಣಿಗೆಗೆ ಮಾತ್ರವಲ್ಲದೆ ಸಾರ್ವಜನಿಕ ಆರೋಗ್ಯ, ನೀರಿನ ಸುರಕ್ಷತೆ ಮತ್ತು ಪರಿಸರ ಸುಸ್ಥಿರತೆಗೂ ಬಳಸಿಕೊಳ್ಳಬೇಕು ಎಂದು ಡಾ. ಮಂಜುನಾಥ್ ಒತ್ತಿ ಹೇಳಿದರು. “ಶುದ್ಧ ಗಾಳಿ, ಶುದ್ಧ ನೀರು, ಕಲಬೆರಕೆಯಿಲ್ಲದ ಆಹಾರ ಮತ್ತು ಶುದ್ಧ ಮನಸ್ಸು ಆರೋಗ್ಯದ ನಿಜವಾದ…

Read More

ಬೆಂಗಳೂರು: ಅಧಿಕ ಸಂಖ್ಯೆಯಲ್ಲಿ ಅರ್ಜಿಗಳನ್ನು ಸ್ವೀಕರಿಸುವ ಹಿನ್ನೆಲೆಯಲ್ಲಿ, ರಾಜ್ಯದ ಪ್ರಮುಖ ಅನುದಾನ ಕಾರ್ಯಕ್ರಮದಲ್ಲಿ ಭಾಗವಹಿಸಲು ಎಲ್ಲಾ ಅರ್ಹ ನವೋದ್ಯಮಗಳಿಗೆ ಅವಕಾಶ ಕಲ್ಪಿಸುವ ಉದ್ದೇಶದಿಂದ ಅರ್ಜಿ ಸಲ್ಲಿಕೆಯ ಅಂತಿಮ ದಿನಾಂಕವನ್ನು 15ನೇ ಸೆಪ್ಟೆಂಬರ್ 2025, ಸಂಜೆ 5:00 ಗಂಟೆ ಯಿಂದ 17ನೇ ಸೆಪ್ಟೆಂಬರ್ 2025, ರಾತ್ರಿ 11:59 ಗಂಟೆಯ ವರೆಗೆ ವಿಸ್ತರಿಸಲಾಗಿದೆ. ಹೆಚ್ಚಿನ ಸಂಖ್ಯೆಯಲ್ಲಿ ಆಸಕ್ತ ನವೋದ್ಯಮಗಳು ವ್ಯಕ್ತಪಡಿಸಿರುವಂತೆ, ತಮ್ಮ ಅರ್ಜಿಗಳನ್ನು ಪೂರ್ಣಗೊಳಿಸಲು ಅಗತ್ಯ ಸಮಯಾವಕಾಶ ನೀಡುವ ಉದ್ದೇಶದಿಂದ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ. “ಎಲಿವೇಟ್” ಕಾರ್ಯಕ್ರಮವು ವಿಶ್ವಮಟ್ಟದ ನವೋದ್ಯಮ ಪರಿಸರ ವ್ಯವಸ್ಥೆಯನ್ನು ಬೆಳೆಸುವ ಕರ್ನಾಟಕ ಸರ್ಕಾರದ ಕಾರ್ಯತಂತ್ರದ ಪ್ರಮುಖ ಅಂಶವಾಗಿದೆ. ಈ ಯೋಜನೆಯು ನಾವೀನ್ಯತಾ ಆವಿಷ್ಕಾರಗಳನ್ನು ಹೊಂದಿರುವ ಆರಂಭಿಕ ಹಂತದ ನವೋದ್ಯಮಳನ್ನು ಗುರುತಿಸಿ, ಅವರಿಗೆ Grant-In-Aid (ಅನುದಾನ), ಉದ್ಯಮ ತಜ್ಞರಿಂದ ಮಾರ್ಗದರ್ಶನ ಮತ್ತು ಮಾರುಕಟ್ಟೆ ಪ್ರವೇಶ ಸೇರಿದಂತೆ ವಾಣಿಜ್ಯೋದ್ಯಮವನ್ನು ವಿಸ್ತರಿಸಲು ಅಗತ್ಯ ಸಂಪನ್ಮೂಲಗಳನ್ನು ಒದಗಿಸುತ್ತದೆ. ಸಮಗ್ರ ಬೆಳವಣಿಗೆಯನ್ನು ಉತ್ತೇಜಿಸಲು ಹಾಗೂ ರಾಜ್ಯದ…

Read More

ಮಂಡ್ಯ: ಜಿಲ್ಲೆಯಲ್ಲಿ ಟ್ಯಾಂಕರ್ ಹಾಗೂ ಬೈಕ್ ನಡುವೆ ಡಿಕ್ಕಿ, ಸ್ಥಳದಲ್ಲೇ ಬೈಕ್ ಸವಾರ ಸಾವನ್ನಪ್ಪಿರುವಂತ ಘಟನೆ ನಡೆದಿದೆ. ಮಂಡ್ಯಸ ಮದ್ದೂರಿನ ಎಳೆನೀರು ಮಾರುಕಟ್ಟೆ ಬಳಿಯ ಬೆಂ-ಮೈ ಹೆದ್ದಾರಿಯಲ್ಲಿ ಹಿಂಬದಿಯಿಂದ ಹಾಲಿನ ಟ್ಯಾಂಕರ್ ಭೈಕ್ ಗೆ ಡಿಕ್ಕಿಯಾಗಿದೆ. ಈ ಅಪಘಾತದಲ್ಲಿ ಕೆ.ಆರ್.ಪೇಟೆ ತಾಲೂಕಿನ ಗೊಲ್ಲರಕೊಪ್ಪಲು ಗ್ರಾಮದ ದೀಪಕ್ (21) ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಸೋಮನಹಳ್ಳಿ ಎಸ್.ಸಿ.ಎಂ.ಎಂ ಕಾಲೇಜು ಆವರಣದಲ್ಲಿ ನಡೆಯುತ್ತಿದ್ದ ಕ್ರೀಡೆಗೆ ತಂಗಿ ಬಿಡಲು ಬಂದಿದ್ದ ದೀಪಕ್. ತಂಗಿಯನ್ನು ಬಿಟ್ಟು ಮಂಡ್ಯ ಕಡೆ ಬೈಕ್ ಚಾಲಕ ದೀಪಕ್ ಹೊರಟಿದ್ದರು. ಎಳೆನೀರು ಮಾರುಕಟ್ಟೆ ಬಳಿ ಹೋಗುತ್ತಿದ್ದ ವೇಳೆ ದುರ್ಘಘಟನೆ ಸಂಭವಿಸಿದೆ. ಈ ವಿಷಯ ತಿಳಿದು ಸ್ಥಳಕ್ಕೆ ಪೊಲೀಸರ ಭೇಟಿ ಪರಿಶೀಲನೆ ನಡೆಸಿದರು. ಮೃತ ಚಾಲಕನ ಶವವನ್ನು ಮದ್ದೂರು ಸಾರ್ವಜನಿಕ ಆಸ್ಪತ್ರೆಗೆ ರವಾನಿಸಲಾಗಿದೆ. ಮದ್ದೂರು ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ವರದಿ: ಗಿರೀಶ್ ರಾಜ್, ಮಂಡ್ಯ https://kannadanewsnow.com/kannada/invitation-to-apply-for-opening-a-new-fair-price-shop/ https://kannadanewsnow.com/kannada/judge-shows-humanity-in-front-of-the-public-he-goes-to-the-elderly-man-and-gives-a-verdict-providing-relief-on-the-spot/

Read More

ಬೆಂಗಳೂರು: ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ವತಿಯಿಂದ ಕರ್ನಾಟಕ ಅಗತ್ಯ ವಸ್ತುಗಳ ಸಾರ್ವಜನಿಕ ವಿತರಣಾ ಪದ್ಧತಿ ನಿಯಂತ್ರಣದ ಆದೇಶದನ್ವಯ ಹೊಸ ನ್ಯಾಯಬೆಲೆ ಅಂಗಡಿ ತೆರೆಯಲು ಅರ್ಹ ಸಂಘಗಳು ಹಾಗೂ ವ್ಯಕ್ತಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಬೆಂಗಳೂರು ನಗರ ಜಿಲ್ಲೆಯ ಯಲಹಂಕ ತಾಲ್ಲೂಕು ವ್ಯಾಪ್ತಿಯ ಹೊಸ ನ್ಯಾಯಬೆಲೆ ಅಂಗಡಿ ತೆರೆಯಲು ಪ್ರಸ್ತಾಪಿಸಿರುವ ಪ್ರದೇಶವಾದ ಸಿಂಗಪುರ ಒಟ್ಟು ಪಡಿತರ ಚೀಟಿ- 843 ಗಳನ್ನು ಹೊಸ ನ್ಯಾಯಬೆಲೆ ಅಂಗಡಿಗಳಿಗೆ ನಿಯೋಜಿಸಲಾಗಿದೆ. ಹೊಸ ನ್ಯಾಯಬೆಲೆ ಅಂಗಡಿ ಪ್ರಾಧಿಕಾರ ಪಡೆಯಲು ತಾಲ್ಲೂಕು ಕೃಷಿ ಪ್ರಾಥಮಿಕ ಪತ್ತಿನ ಮಾರಾಟ ಸರ್ಕಾರ ಸಂಘ, ಪ್ರಾಥಮಿಕ ಕೃಷಿ ಸಹಕಾರ ಸಂಘ ಅಥವಾ ವ್ಯವಸಾಯೋತ್ಪನ್ನ ಸಹಕಾರ ಸಂಘ, ತೋಟಗಾರಿಕಾ ಉತ್ಪನ್ನಗಳ ಬಳಕೆದಾರರ ಸಹಕಾರ ಸಂಘ, ನೊಂದಾಯಿತ ಸಹಕಾರ ಸಂಘಗಳು, ನೊಂದಾಯಿತ ಪ್ರಾಥಮಿಕ ಬಳಕೆದಾರರ ಸಹಕಾರ ಸಂಘಗಳು, ಬೃಹತ್ ಪ್ರಮಾಣದ ಆದಿವಾಸಿ ವಿವಿದ್ದೋದ್ದೇಶ ಸಹಕಾರ ಸಂಘಗಳು, ನೊಂದಾಯಿತ ನೇಕಾರರ ಸಹಕಾರ ಸಂಘಗಳು, ನೊಂದಾಯಿತ ಮಹಿಳಾ ವಿವಿದೋದ್ದೇಶ ಸಹಕಾರ ಸಂಘಗಳು, ನೊಂದಾಯಿತ ವಿವಿದೋದ್ದೇಶ ಸಹಕಾರ…

Read More

ನವದೆಹಲಿ: ಜಾರಿ ನಿರ್ದೇಶನಾಲಯದಿಂದ ದಾಖಲಿಸಲಾದಂತ 53 ಪ್ರಕರಣದಲ್ಲಿ 50 ಕೇಸಲ್ಲಿ ಶಿಕ್ಷೆಯಾಗಿದೆ. ಇನ್ನೂ ಪಿಎಂಎಲ್ಎ ಪ್ರಕರಣಗಳ ತನಿಖೆ, ವಿಚಾರಣೆಗಳ ತ್ವರಿತಕ್ಕೆ ಇಡಿ ನಿರ್ದೇಶಕರು ಖಡಕ್ ಸೂಚನೆ ನೀಡಿದ್ದಾರೆ. ಪಿಎಂಎಲ್‌ಎ ತನಿಖೆಗಳು ಮತ್ತು ವಿಚಾರಣೆಗಳನ್ನು ತ್ವರಿತಗೊಳಿಸುವಂತೆ ಇಡಿ ನಿರ್ದೇಶಕರು ಕರೆ ನೀಡಿದ್ದಾರೆ. ಇಡಿ 53 ಪ್ರಕರಣಗಳಲ್ಲಿ 50 ಪ್ರಕರಣಗಳಲ್ಲಿ ಶಿಕ್ಷೆ ವಿಧಿಸಿದೆ, ಶೇಕಡಾ 94ಕ್ಕಿಂತ ಹೆಚ್ಚು ಶಿಕ್ಷೆಯ ಪ್ರಮಾಣದೊಂದಿಗೆ, ಇದು ಜಾಗತಿಕವಾಗಿ ಅತ್ಯಧಿಕವಾಗಿದೆ ಎಂದು ಗಮನಿಸಲಾಗಿದೆ. ₹34,000 ಕೋಟಿಗೂ ಹೆಚ್ಚು ಮೌಲ್ಯದ ಆಸ್ತಿಯನ್ನು ಹಿಂದಿರುಗಿಸಲಾಗಿದೆ ಎಂದು ಇಡಿ ತಿಳಿಸಿದೆ. https://twitter.com/dir_ed/status/1967578192514052210 https://kannadanewsnow.com/kannada/training-on-pest-management-and-value-addition-on-the-18th/ https://kannadanewsnow.com/kannada/judge-shows-humanity-in-front-of-the-public-he-goes-to-the-elderly-man-and-gives-a-verdict-providing-relief-on-the-spot/

Read More

ಚಿತ್ರದುರ್ಗ: ಹಿರಿಯೂರು ತಾಲ್ಲೂಕು ಬಬ್ಬೂರು ಫಾರಂನ ಜಿಲ್ಲಾ ಕೃಷಿ ತರಬೇತಿ ಕೇಂದ್ರದಲ್ಲಿ ಇದೇ ಸೆ.18 ರಂದು ಬೆಳಿಗ್ಗೆ 10ಕ್ಕೆ ಚಿತ್ರದುರ್ಗ ಜಿಲ್ಲೆಯ ರೈತರಿಗೆ “ಅಣಬೆ ಬೇಸಾಯ ಹಾಗೂ ಮೌಲ್ಯವರ್ಧನೆ” ಕುರಿತು ಒಂದು ದಿನದ ತರಬೇತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ತರಬೇತಿ ಕಾರ್ಯಕ್ರಮದಲ್ಲಿ ಬಬ್ಬೂರು ಫಾರಂ ತೋಟಗಾರಿಕೆ ಮಹಾವಿದ್ಯಾಲಯ ಕೃಷಿ ಸೂಕ್ಷ್ಮಜೀವಿಶಾಸ್ತ್ರ ವಿಭಾಗದ ಸಹಾಯಕ ಪ್ರಾಧ್ಯಪಕ ಗೊರಪ್ಪನವರ ಭರಮಪ್ಪ ಅವರು ಉತ್ತಮ ಅಣಬೆಯ ವಿವಿಧ ತಳಿಗಳ ಆಯ್ಕೆ, ಬೇಸಾಯ ಕ್ರಮ, ನಿರ್ವಹಣೆ ಬಗ್ಗೆ ವಿಷಯ ಮಂಡನೆ ಮತ್ತು ಅಣಬೆ ಬೆಳೆಯುವ ಪ್ರಾತ್ಯಕ್ಷಿಕೆ ಮಾಡಲಿದ್ದಾರೆ. ಹಿರಿಯೂರು ಕೃಷಿ ವಿಜ್ಞಾನ ಕೇಂದ್ರದ ಗೃಹ ವಿಜ್ಞಾನಿಗಳಾದ ಡಾ. ಸರಸ್ವತಿ ಜೆ ಎಂ ಅವರು ಅಣಬೆ ಮೌಲ್ಯವರ್ಧನೆ ಬಗ್ಗೆ ಉಪನ್ಯಾಸ ನೀಡಲಿದ್ದಾರೆ. ನಂತರ ಯಶಸ್ವಿಯಾಗಿ ಅಣಬೆ ಬೆಳೆದ ರೈತರು ತಮ್ಮ ಅಣಬೆ ಕೃಷಿಯ ಅನುಭವವನ್ನು ರೈತರೊಂದಿಗೆ ಹಂಚಿಕೊಳ್ಳುವರು. ಆದ ಪ್ರಯುಕ್ತ ಆಸಕ್ತ 50 ಜನ ರೈತಭಾಂದವರು ಈ ತರಬೇತಿಯಲ್ಲಿ ಭಾಗವಹಿಸಲು ಮೊಬೈಲ್ ಸಂಖ್ಯೆ 8277931058 ಗೆ ಕರೆಮಾಡಿ ತರಬೇತಿಯ ಸದುಪಯೋಗ ಪಡೆದುಕೊಳ್ಳಬೇಕು…

Read More

ದುಬೈ: ಏಷ್ಯಾ ಕಪ್‌ನಲ್ಲಿ ಭಾನುವಾರ ನಡೆದ ಏಕಪಕ್ಷೀಯ ಘರ್ಷಣೆಯ ನಂತರ ಪಾಕಿಸ್ತಾನವು ಹ್ಯಾಂಡ್‌ಶೇಕ್ ವಿವಾದದ ಬಗ್ಗೆ ಇನ್ನೂ ಅಸಮಾಧಾನ ವ್ಯಕ್ತಪಡಿಸಿದೆ. ಏಷ್ಯಾ ಕಪ್‌ನ ಉಳಿದ ಭಾಗಗಳಿಂದ ಮ್ಯಾಚ್ ರೆಫರಿ ಆಂಡಿ ಪೈಕ್ರಾಫ್ಟ್ ಅವರನ್ನು ತೆಗೆದುಹಾಕುವಂತೆ ಪಾಕಿಸ್ತಾನ ಕ್ರಿಕೆಟ್ ಮಂಡಳಿ (ಪಿಸಿಬಿ) ಐಸಿಸಿಯನ್ನು ಕೇಳಿದೆ. ಈ ಮಧ್ಯೆ, ಈ ವಿಷಯದ ಬಗ್ಗೆ ಸಕಾಲಿಕ ಕ್ರಮ ಕೈಗೊಳ್ಳದ ಕಾರಣ ಮಂಡಳಿಯು ತನ್ನ ಉನ್ನತ ಅಧಿಕಾರಿ, ಅಂತರರಾಷ್ಟ್ರೀಯ ಕ್ರಿಕೆಟ್ ಕಾರ್ಯಾಚರಣೆಗಳ ನಿರ್ದೇಶಕ ಉಸ್ಮಾನ್ ವಾಹ್ಲಾ ಅವರನ್ನು ಅಮಾನತುಗೊಳಿಸಿದೆ ಎಂದು ವರದಿಯಾಗಿದೆ. ಪಾಕಿಸ್ತಾನ ಮಾಧ್ಯಮ ವರದಿಗಳ ಪ್ರಕಾರ, ಪಿಸಿಬಿ ಮುಖ್ಯಸ್ಥ ಮೊಹ್ಸಿನ್ ನಖ್ವಿ ಅವರು ಹ್ಯಾಂಡ್‌ಶೇಕ್ ವಿವಾದದ ಬಗ್ಗೆ ಕ್ರಮ ಕೈಗೊಳ್ಳಲು ವಿಫಲವಾದ ಕಾರಣ ಉಸ್ಮಾನ್ ವಾಹ್ಲಾ ವಿರುದ್ಧ ಶಿಸ್ತು ಕ್ರಮ ಕೈಗೊಂಡಿದ್ದಾರೆ. ಪಾಕಿಸ್ತಾನದ ನಾಯಕ ಸೂರ್ಯಕುಮಾರ್ ಯಾದವ್ ಪಂದ್ಯವನ್ನು ಸಿಕ್ಸರ್‌ನೊಂದಿಗೆ ಮುಗಿಸಿದರು ಮತ್ತು ಪಾಕಿಸ್ತಾನ ಆಟಗಾರರೊಂದಿಗೆ ಹ್ಯಾಂಡ್‌ಶೇಕ್ ಮಾಡದೆ ಶಿವಂ ದುಬೆ ಅವರೊಂದಿಗೆ ಹೊರನಡೆದರು. ಭಾರತೀಯ ಆಟಗಾರರು ಮತ್ತು ಸಹಾಯಕ ಸಿಬ್ಬಂದಿ ಸಹ ಅವರ ನಡುವೆ…

Read More

ಬೆಳಗಾವಿ: ರೈಲ್ವೆ ರಾಜ್ಯ ಸಚಿವರು ವಿ.ಸೋಮಣ್ಣ ಅವರು ಬೆಳಗಾವಿ ಮತ್ತು ಖಾನಾಪುರದಲ್ಲಿ ಎರಡು ರಸ್ತೆ ಕೆಳ ಸೇತುವೆಗಳು ಹಾಗೂ ಪ್ರಯಾಣಿಕರ ಸೌಲಭ್ಯಗಳಿಗೆ ಶಂಕುಸ್ಥಾಪನೆ ನೆರವೇರಿಸಿದರು. ಅಲ್ಲದೇ ಈ ರೈಲಿಗೆ ಹಸಿರು ನಿಶಾನೆ ತೋರಿದರು. ರೈಲ್ವೆ ಮತ್ತು ಜಲಶಕ್ತಿ ಇಲಾಖೆಯ ಕೇಂದ್ರ ರಾಜ್ಯ ಸಚಿವರಾದ ವಿ. ಸೋಮಣ್ಣ ಅವರು ಬೆಳಗಾವಿ ಮತ್ತು ಖಾನಾಪುರದಲ್ಲಿ ಎರಡು ಪ್ರಮುಖ ರಸ್ತೆ ಕೆಳ ಸೇತುವೆಗಳು ಹಾಗೂ ಖಾನಾಪುರ ರೈಲು ನಿಲ್ದಾಣದಲ್ಲಿ ಪ್ರಯಾಣಿಕರ ಸೌಲಭ್ಯಗಳಿಗೆ ಶಂಕುಸ್ಥಾಪನೆ ನೆರವೇರಿಸಿದರು. ಈ ಯೋಜನೆಗಳು ಈ ಪ್ರದೇಶಗಳ ಸಂಪರ್ಕ ಪ್ರಯಾಣದ ದಕ್ಷತೆ ಮತ್ತು ಪ್ರಯಾಣಿಕರ ಸೌಕರ್ಯವನ್ನು ಹೆಚ್ಚಿಸುವ ಗುರಿಯನ್ನು ಹೊಂದಿವೆ. ಇದೇ ಸಂದರ್ಭದಲ್ಲಿ, ಖಾನಾಪುರದಲ್ಲಿ ಹೆಚ್ಚುವರಿ ನಿಲುಗಡೆಗೆ ಅವಕಾಶ ಕಲ್ಪಿಸಿದ ಎಸ್ಎಸ್ಎಸ್ ಹುಬ್ಬಳ್ಳಿ – ದಾದರ್ ಸೆಂಟ್ರಲ್ ಎಕ್ಸ್ ಪ್ರೆಸ್ (17317) ರೈಲಿಗೆ ಅವರು ಹಸಿರು ನಿಶಾನೆ ತೋರಿದರು. ಅಂಗೋಲ್ ಗೇಟ್ (4ನೇ ಗೇಟ್) ನಲ್ಲಿರುವ ಎಲ್ಸಿ 380 ರಲ್ಲಿ, ರೂ. 26.05 ಕೋಟಿ ವೆಚ್ಚದಲ್ಲಿ ರಸ್ತೆ ಕೆಳ ಸೇತುವೆಯನ್ನು ನಿರ್ಮಿಸಲಾಗುತ್ತದೆ. ಹಾಗೆಯೇ,…

Read More

ಬಳ್ಳಾರಿ : ಜಿಲ್ಲೆಯಲ್ಲಿ ಪೌರರಕ್ಷಣಾ ದಳದ ಸ್ವಯಂ ಸೇವಕರಾಗಲು ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ. ಪೌರರಕ್ಷಣಾ ದಳದ ಉದ್ದೇಶ ಪ್ರಕೃತಿ ವಿಕೋಪ, ವಿಪತ್ತು ನಿರ್ವಹಣೆ ಮತ್ತು ಮಾನವ ನಿರ್ಮಿತ ವಿಕೋಪಗಳ ಸಮಯದಲ್ಲಿ ಸಾರ್ವಜನಿಕರ ಆಸ್ತಿ ಮತ್ತು ಪ್ರಾಣ ಕಾಪಾಡಲು ಪ್ರಮುಖ ಪಾತ್ರವಹಿಸುತ್ತಿದ್ದಾರೆ. ಇಂತಹ ಸಾಮಾಜಿಕ ಕಾರ್ಯವನ್ನು ಮಾಡಲು ಇಚ್ಛಿಸುವ ಬಳ್ಳಾರಿ ನಗರ ಮತ್ತು ಗ್ರಾಮೀಣ ಪ್ರದೇಶದ ಸಾರ್ವಜನಿಕರು ಮತ್ತು ಕಾಲೇಜು ವಿದ್ಯಾರ್ಥಿಗಳು ಸದಸ್ಯರಾಗುವ ಮೂಲಕ ಸೇವೆ ಸಲ್ಲಿಸಬಹುದಾಗಿದೆ. ಅರ್ಜಿಗಳನ್ನು ನಗರದ ಡಾ.ಜೋಳದರಾಶಿ ದೊಡ್ಡನಗೌಡ ರಂಗಮಂದಿರ ರಸ್ತೆಯ ದೇವರಾಜು ಅರಸು ಭವನ ಎದುರುಗಡೆಯ ಜಿಲ್ಲಾ ಪೌರರಕ್ಷಣಾ ಕಚೇರಿ ಅಥವಾ ಜಿಲ್ಲಾ ಗೃಹರಕ್ಷಕದಳ ಕಚೇರಿಯಲ್ಲಿ ಅಕ್ಟೋಬರ್ 04 ರವರೆಗೆ ಅರ್ಜಿ ಪಡೆಯಬಹುದಾಗಿದೆ. ಸೂಚನೆ: ಪೌರರಕ್ಷಣಾ ವಿಭಾಗದ ಸದಸ್ಯನಾಗಲು ಯಾವುದೇ ವಿದ್ಯಾರ್ಹತೆ ಇರುವುದಿಲ್ಲ. ಮಾಜಿ ಯೋಧರು ಮತ್ತು ನಿವೃತ್ತ ಸರ್ಕಾರಿ ನೌಕರರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಮುನ್ನಡೆಸಬಹುದು. ಈ ಸದಸ್ಯರು ಸಮಾಜ ಸೇವೆಯ ಭಾವನೆಯಿಂದ ಬರಬೇಕೆ ಹೊರತು ಅನ್ಯ ಭಾವನೆಗಳಿಂದ ಕೂಡಿರುವುದಿಲ್ಲ. ಸ್ವ-ಇಚ್ಛೆಯಿಂದ ಸ್ವಯಂ ಸೇವಕರಾಗಿ ಕಾರ್ಯ/ಕರ್ತವ್ಯ ನಿರ್ವಹಿಸಬೇಕು.…

Read More