Author: kannadanewsnow09

ಬೆಂಗಳೂರು: 7ನೇ ವೇತನ ಆಯೋಗದ ವರದಿಯಂತೆ ವೇತನ ಪರಿಷ್ಕರಣೆ, ಸೌಲಭ್ಯಗಳು ಯಥಾವತ್ ಜಾರಿ ಮಾಡುವಂತೆ ಆಗ್ರಹಿಸಿ ಕರ್ನಾಟಕ ಹಾಲು ಮಹಾಮಂಡಳ(KMF)ದ ಚಟುವಟಿಕೆ ಗಳು ಫೆ.1ರಿಂದ ಸ್ಥಗಿತಗೊಳಿಸುವ ನಿರ್ಧಾರ ಕೈಗೊಳ್ಳಲಾಗಿತ್ತು. ಇದೀಗ ಸರ್ಕಾರದ ಜೊತೆಗಿನ ಮಾತುಕತೆ ಸಕ್ಸಸ್ ಆಗಿದ್ದು, ಕೆಎಂಎಫ್ ನೌಕರರ ಮುಷ್ಕರ ವಾಪಾಸ್ ಪಡೆಯಲಾಗಿದೆ. ಹೀಗಾಗಿ ನಾಳೆಯಿಂದ ಎಂದಿನಂತೆ ನಂದಿನಿ ಉತ್ಪನ್ನಗಳು ಗ್ರಾಹಕರಿಗೆ ಲಭ್ಯವಾಗಲಿವೆ. ಈ ಕುರಿತಂತೆ ಪತ್ರಿಕಾ ಪ್ರಕಟಣೆಯಲ್ಲಿ ಕೆ ಎಂ ಎಫ್ ಅಧಿಕಾರಿಗಳ ಸಂಘ ಮಾಹಿತಿ ನೀಡಿದ್ದು, ಕರ್ನಾಟಕ ಸರ್ಕಾರ ಹಾಲು ಮಹಾಮಂಡಳ ಹಾಗೂ ಎಲ್ಲಾ ಜಿಲ್ಲಾ ಹಾಲು ಒಕ್ಕೂಟಗಳು, ಹೈನುಗಾರ ರೈತರಿಂದ ಪ್ರತಿನಿತ್ಯ ಹಾಲನ್ನು ಖರೀದಿಸಿ ನಂದಿನಿ ಬ್ರಾಂಡ್ ಹೆಸರಿನಲ್ಲಿ ವಿವಿಧ ಮಾದರಿಯ ಹಾಲು ಹಾಗೂ ಹಾಲಿನ ಉತ್ಪನ್ನಗಳನ್ನು ಗ್ರಾಹಕರಿಗೆ ಸುಮಾರು 50 ವರ್ಷಗಳಿಂದಲೂ ನೀಡುತ್ತಾ ಬರಲಾಗುತ್ತಿದೆ ಎಂದಿದೆ. ಕರ್ನಾಟಕದ ಹೆಮ್ಮೆಯ ನಂದಿನಿ ಹಾಲು ರಾಜ್ಯಾದ್ಯಂತ ಹೆಸರುಗಳಿಸಿ ಪ್ರಚಲಿತದಲ್ಲಿದ್ದು, ಸುಮಾರು 150 ಕ್ಕೂ ಹೆಚ್ಚು ವಿವಿಧ ಮಾದರಿಯ ಹಾಲನ ಉತ್ಪನ್ನಗಳನ್ನು ಗ್ರಾಹಕರಿಗೆ ಪ್ರತಿನಿತ್ಯ ಪೂರೈಸಲಾಗುತ್ತಿದೆ. ಕಹಾಮ ಮಹಾದಂಡಳದಲ್ಲಿ…

Read More

ನವದೆಹಲಿ: ಉತ್ತರ ಪ್ರದೇಶದ ಗಾಜಿಪುರದಲ್ಲಿ ಶುಕ್ರವಾರ ಸಂಜೆ ಪ್ರಯಾಗ್ರಾಜ್ನ ಮಹಾ ಕುಂಭ ಮೇಳದಿಂದ ಹಿಂದಿರುಗುತ್ತಿದ್ದ ಭಕ್ತರನ್ನು ಕರೆದೊಯ್ಯುತ್ತಿದ್ದ ವಾಹನಕ್ಕೆ ಘಾಜಿಪುರದಲ್ಲಿ ಅನಿಯಂತ್ರಿತ ಟ್ರಕ್ ಡಿಕ್ಕಿ ಹೊಡೆದ ಪರಿಣಾಮ ಅನೇಕ ಜನರು ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಪ್ರಾಥಮಿಕ ಮಾಹಿತಿಯ ಪ್ರಕಾರ, ನಂದಗಂಜ್ ಪೊಲೀಸ್ ಠಾಣೆಯ ಬಳಿಯ ಕುಸ್ಮಿ ಕಲಾ ಪ್ರದೇಶದಲ್ಲಿ ಈ ಅಪಘಾತ ಸಂಭವಿಸಿದೆ. ಹಿಂದೂ ಕ್ಯಾಲೆಂಡರ್ನ ಅತ್ಯಂತ ಶುಭ ದಿನಗಳಲ್ಲಿ ಒಂದಾದ ಮೌನಿ ಅಮಾವಾಸ್ಯೆಯ ಸಂದರ್ಭದಲ್ಲಿ ಪವಿತ್ರ ಸ್ನಾನ ಮಾಡಲು ಲಕ್ಷಾಂತರ ಯಾತ್ರಾರ್ಥಿಗಳು ಸ್ಥಳಕ್ಕಾಗಿ ಮುಗಿಬಿದ್ದಿದ್ದರಿಂದ ಪ್ರಯಾಗ್ರಾಜ್ನ ಮಹಾ ಕುಂಭದ ಸಂಗಮ್ ಪ್ರದೇಶದಲ್ಲಿ ಮುಂಜಾನೆ ಕಾಲ್ತುಳಿತದಲ್ಲಿ ಕನಿಷ್ಠ 30 ಜನರು ಸಾವನ್ನಪ್ಪಿ 60 ಜನರು ಗಾಯಗೊಂಡ ಕೆಲವು ದಿನಗಳ ನಂತರ ಈ ಘಟನೆ ನಡೆದಿದೆ. https://kannadanewsnow.com/kannada/union-budget-to-be-presented-tomorrow-nirmala-sitharaman-cm-siddaramaiah/ https://kannadanewsnow.com/kannada/breaking-court-allows-darshan-to-stay-in-mysuru-till-feb-10/

Read More

ಬೆಂಗಳೂರು: 2025-26ನೇ ಸಾಲಿನ ಕೇಂದ್ರ ಬಜೆಟ್ ನಲ್ಲಿ ಸೇರಿಸಬೇಕೆಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರಿಗೆ ಸಲ್ಲಿಸಲಾಗಿರುವ ಕರ್ನಾಟಕ ರಾಜ್ಯದ ಬೇಡಿಕೆಗಳು ಈ ಕೆಳಕಗಿನಂತಿವೆ. ಕೇಂದ್ರ ಸರ್ಕಾರವು ಕರ್ನಾಟಕದ ಬಗ್ಗೆ ಅನುಸರಿಸುತ್ತಿರುವ ತಾರತಮ್ಯ ಧೋರಣೆ ಜಗಜ್ಜಾಹೀರಾಗಿದೆ. ನಮ್ಮ ಒಕ್ಕೂಟ ವ್ಯವಸ್ಥೆಯು ಬಲಿಷ್ಠವಾಗಿರಬೇಕೆಂದರೆ ಕೇಂದ್ರ ಸರ್ಕಾರವು ತಾರತಮ್ಯರಹಿತ, ನ್ಯಾಯಸಮ್ಮತ, ಪಾರದರ್ಶಕ ನೀತಿಯನ್ನು ತನ್ನದಾಗಿಸಿಕೊಳ್ಳಬೇಕು. ರಾಜ್ಯಗಳನ್ನು ಸಂಪನ್ಮೂಲ ಸಂಗ್ರಹಣೆ ಮಾಡುವ ಘಟಕಗಳೆಂದು ನೋಡದೆ, ಅವುಗಳ ಕಷ್ಟನಷ್ಟಗಳಿಗೆ ಮಾನವೀಯವಾಗಿ ಸ್ಪಂದಿಸಬೇಕು. ತೆರಿಗೆ ಪಾಲಿನ ಹಂಚಿಕೆಯೂ ಸೇರಿದಂತೆ ರಾಜ್ಯಗಳಿಗೆ ಸಂಪನ್ಮೂಲ ಹಂಚಿಕೆ ಮಾಡುವ ವಿಷಯದಲ್ಲಿ ವೈಜ್ಞಾನಿಕವಾದ ಮಾನದಂಡಗಳನ್ನು ಅನುಸರಿಸಬೇಕು. ವಿಶೇಷವಾಗಿ, ಕರ್ನಾಟಕವೂ ಸೇರಿದಂತೆ ಅಭಿವೃದ್ಧಿ ಪಥದಲ್ಲಿ ಮುಂಚೂಣಿಯಲ್ಲಿರುವ ರಾಜ್ಯಗಳ ಆದ್ಯತೆಗಳನ್ನು ಗುರುತಿಸಿ ಸಂಪನ್ಮೂಲ ಹಂಚಿಕೆಯ ವಿಚಾರದಲ್ಲಿ ಅವುಗಳಿಗೆ ಹೆಚ್ಚಿನ ಶಕ್ತಿಯನ್ನು ತುಂಬಬೇಕು, ಅವುಗಳ ಬೇಡಿಕೆಗೆ ಸಕಾರಾತ್ಮಕವಾಗಿ ಸ್ಪಂದಿಸಬೇಕು. ಇದರಿಂದ ದೇಶಕ್ಕೆ ಹೆಚ್ಚು ಲಾಭವಿದ್ದು, ಈ ರಾಜ್ಯಗಳ ಸಾಧನೆಯ ಪಾಲು ಇತರೆ ರಾಜ್ಯಗಳಿಗೂ ಸಹಜವಾಗಿಯೇ ಸಲ್ಲುತ್ತದೆ. ಈ ಹಿನ್ನೆಲೆಯಲ್ಲಿ ನಮ್ಮ ರಾಜ್ಯಕ್ಕೆ ಆಗುತ್ತಿರುವ ಸರಣಿ ಅನ್ಯಾಯಗಳನ್ನು ನಿರಂತರವಾಗಿ ಕೇಂದ್ರ…

Read More

ಬೆಂಗಳೂರು: ರಾಜ್ಯದಲ್ಲಿ ಗಂಭೀರ ಖಾಯಿಲೆಯಿಂದ ಬಳಲುತ್ತಿರುವಂತ ರೋಗಿಗಳಿಗೆ ದಯಾಮರಣಕ್ಕೆ ಅವಕಾಶ ನೀಡಿ ಸರ್ಕಾರ ಆದೇಶಿಸಿದೆ. ಈ ಸಂಬಂಧ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಆದೇಶ ಹೊರಡಿಸಿದ್ದು, ಮಾರಣಾಂತಿಕ ಖಾಯಿಲೆಯಿಂದ ಬಳಲುತ್ತಿದ್ದು, ಚೇತರಿಸಿಕೊಳ್ಳದೇ ಜೀವನಪೂರ್ತಿ ಸಂಕಷ್ಟ ಅನುಭವಿಸುವ ಸ್ಥಿತಿಯಲ್ಲಿದ್ದವರಿಗೆ ದಯಾಮರಣಕ್ಕೆ ಅವಕಾಶವನ್ನು ನೀಡಿದೆ. ಅಂದಹಾಗೇ ದಯಾಮರಣಕ್ಕೆ ಅವಕಾಶ ನೀಡುವುದನ್ನು ಇಬ್ಬರು ವೈದ್ಯರನ್ನೊಳಗೊಂಡ ಎರಡು ಮಂಡಳಿಗಳ ಸ್ಥಾಪನೆ ಮಾಡುವುದಕ್ಕೂ ಆದೇಶ ಮಾಡಿದೆ. ಸುಪ್ರೀಂ ಕೋರ್ಟ್ ನಿರ್ದೇಶನದ ಮೇರೆಗೆ ಈ ಆದೇಶವನ್ನು ಆರೋಗ್ಯ ಇಲಾಖೆ ಮಾಡಿದೆ. ಈಗ ಮಾರಕ ರೋಗದಿಂದ ಬಳಲುತ್ತಿರುವವರು ದಯಾಮರಣದ ಅವಕಾಶವನ್ನು ಕರ್ನಾಟಕದಲ್ಲಿ ನೀಡಲಾಗಿದೆ. ರೋಗಿಯು ಘನತೆಯಿಂದ ಸಾಯುವ ಹಕ್ಕಿನ ಬಗ್ಗೆ ಸುಪ್ರೀಂ ಕೋರ್ಟ್ ನೀಡಿರುವ ನಿರ್ದೇಶನವನ್ನು ಅನುಷ್ಠಾನಗೊಳಿಸಲು ರಾಜ್ಯ ಆರೋಗ್ಯ ಇಲಾಖೆ ಐತಿಹಾಸಿಕ ಆದೇಶ ಹೊರಡಿಸಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಶುಕ್ರವಾರ ಪ್ರಕಟಿಸಿದ್ದಾರೆ. ಸಾಮಾಜಿಕ ಮಾಧ್ಯಮ ಪೋಸ್ಟ್ ‘ಎಕ್ಸ್’ ನಲ್ಲಿ, ಇಲಾಖೆಯು ಅಡ್ವಾನ್ಸ್ ಮೆಡಿಕಲ್ ಡೈರೆಕ್ಟಿವ್ (ಎಎಮ್ಡಿ) ಅಥವಾ ಜೀವಂತ ವಿಲ್ ಅನ್ನು ಸಹ ಹೊರತಂದಿದೆ,…

Read More

ಬೆಂಗಳೂರು: ರಾಜ್ಯದ ಅನುದಾನಿತ ಶಾಲೆಗಳಲ್ಲಿ ಖಾಲಿ ಇರುವಂತ ಶಿಕ್ಷಕರ ಹುದ್ದೆ ಭರ್ತಿ ಪ್ರಕ್ರಿಯೆ ಚಾಲನೆಯಲ್ಲಿದೆ. ಈ ಪ್ರಕ್ರಿಯೆಯಲ್ಲಿ ಉಂಟಾಗಿರುವಂತ ತಾಂತ್ರಿಂಕ ಸಮಸ್ಯೆ ಬಗೆ ಹರಿಸಿ, ಚುರುಕುಗೊಳಿಸುವುದಾಗಿ ಶಿಕ್ಷಣ ಸಚಿವ ಮಧು ಎಸ್ ಬಂಗಾರಪ್ಪ ಭರವಸೆ ನೀಡಿದ್ದಾರೆ. ಈ ಸಂಬಂಧ ಕರ್ನಾಟಕ ರಾಜ್ಯ ಅನುದಾನಿತ ಶಿಕ್ಷಣ ಸಂಸ್ಥೆಗಳ, ಅನುದಾನ ರಹಿತ ಶಿಕ್ಷಕರ ಸಂಘಟನೆಯ ಅಧ್ಯಕ್ಷರು, ಸದಸ್ಯರು ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರನ್ನು ಭೇಟಿಯಾಗಿ ಮನವಿ ಮಾಡಿದರು. ಈ ಮನವಿಗೆ ಸಕಾರಾತ್ಮಕವಾಗಿಯೇ ಪ್ರತಿಕ್ರಿಯೆ ನೀಡಿರುವಂತ ಅವರು, ಅನುದಾನಿತ ಶಾಲೆಗಳಲ್ಲಿನ ಖಾಲಿ ಹುದ್ದೆಗಳ ಭರ್ತಿಗೆ ಚುರುಕುಗೊಳಿಸುವಂತ ಭರವಸೆ ನೀಡಿದ್ದಾರೆ. ಶಿಕ್ಷಣಕರ ಸಂಘಟನೆಯ ಮನವಿ ಏನು.? ಹಿಂದಿನ ಸರ್ಕಾರಗಳ ನಿರ್ಲಕ್ಷಕ್ಕೆ ಒಳಗಾಗಿ ಅಸ್ಥಿತ್ವವನ್ನು ಕಳೆದುಕೊಳ್ಳುತ್ತಿದ್ದ ಅನುಹಾನಿತ ಶಾಲೆಗಳು, ಮಾನ್ಯವರರಾದ ತಮ್ಮ ಅವಿರತ ಪ್ರಯತ್ನದ ಫಲವಾಗಿ ಮತ್ತೆ ಮರು ಜೀವ ಪಡೆಯುವ ಹಂತದಲ್ಲಿ ಇವೆ. ತಾವು ಐದು ವರ್ಷಗಳ ವರೆಗಿನ (2016-2020ರ ವರೆಗಿನ) ಅನುದಾನಿತ ಶಾಲೆಗಳ ಬೋಧಕ ಹುದ್ದೆಗಳನ್ನು ತುಂಬಿಕೊಳ್ಳಲು ಆರ್ಥಿಕ ಇಲಾಖೆಯಿಂದ ಅನುಮತಿ ಕೊಡಿಸಿ…

Read More

ಬೆಂಗಳೂರು: ಬೆಂಗಳೂರು ನಗರ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿ ಸೈಬರ್ ವಂಚನೆ ಮಾಡುತ್ತಿದ್ದಂತ 7 ಆರೋಪಿಗಳನ್ನು ಬಂಧಿಸಿದ್ದಾರೆ. ಈ ಆರೋಪಿಗಳಿಂದ 9 ಮೊಬೈಲ್, 11 ಬ್ಯಾಂಕ್ ಪಾಸ್ ಬುಕ್, 6 ಚೆಕ್ ಬುಕ್, 31 ಎಟಿಎಂ ಕಾರ್ಡ್, 9 ಆಧಾರ್ ಕಾರ್ಡ್ ಸೀಜ್ ಮಾಡಿದ್ದಾರೆ. ಈ ಕುರಿತಂತೆ ಬೆಂಗಳೂರು ನಗರ ಪೊಲೀಸರು ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದು, ದಿನಾಂಕ:07/01/2025 ರಂದು ಪಿರಾದುದಾರರಿಗೆ ಓರ್ವ ವ್ಯಕ್ತಿಯು ಪೇಸ್‌ಬುಕ್‌ನಲ್ಲಿ ನಕಲಿ ಖಾತೆಯಿಂದ ಫ್ರೆಂಡ್ಸ್ ರಿಕ್ವೆಸ್ಟ್ ಕಳುಹಿಸಿದ್ದು, ಆ ನಕಲಿ ಖಾತೆಯ ಫೇಸ್‌ಬುಕ್ ಪ್ರೊಫೈಲ್‌ನಲ್ಲಿ ಪಿರಾದುದಾರರ ಹಳೆಯ ಸ್ನೇಹಿತನ ಫೋಟೋ ಇರುವುದನ್ನು ಪಿರಾದುದಾರರು ಕಂಡು ಅದು ನಿಜವೆಂದು ನಂಬಿ, ಪ್ರೆಂಡ್ಸ್ ರಿಕ್ವೆಸ್ಟ್ ಅನ್ನು ಅಕ್ಸೆಪ್ಟ್ ಮಾಡಿರುತ್ತಾರೆ. ಪೇಸ್‌ಬುಕ್‌ನಲ್ಲಿ ಪ್ರೆಂಡ್ಸ್ ರಿಕ್ವೆಸ್ಟ್ ಕಳುಹಿಸಿದ್ದ ವ್ಯಕ್ತಿಯು ಪಿರ್ಯಾದುದಾರರಿಗೆ ತಾನು ದುಬೈನಲ್ಲಿ ಇರುವುದಾಗಿ ತಿಳಿಸಿ, ಮುಂದಿನ ದಿನಗಳಲ್ಲಿ ತಾನು ವಾಪಸ್ ಭಾರತಕ್ಕೆ ಬರುವುದಾಗಿ ತಿಳಿಸಿ ತನ್ನ ಬಳಿ ಇರುವ ಅಪಾರವಾದ ಹಣ ತೆಗೆದುಕೊಂಡು ಭಾರತಕ್ಕೆ ಬಂದರೆ ಹೆಚ್ಚಿನ ತೆರಿಗೆಯನ್ನು ನೀಡಬೇಕಾಗಿರುತ್ತದೆ.…

Read More

ಮಂಗಳೂರು: ಕಳೆದ ಒಂದು ವಾರದ ಹಿಂದೆ ಮಂಗಳೂರಿನ ಮಸಾಜ್ ಪಾರ್ಲರ್ ಮೇಲೆ ಪೊಲೀಸರು ದಾಳಿ ನಡೆಸಿ, ರಾಮಸೇನೆ ಮುಖಂಡ ಪ್ರಸಾದ್ ಅತ್ತಾವರ ಎಂಬುವರನ್ನು ಬಂಧಿಸಿದ್ದರು. ಆತನ ಮೊಬೈಲ್ ಕೂಡ ಸೀಜ್ ಮಾಡಿದ್ದರು. ಇಂತಹ ಮೊಬೈಲ್ ನಲ್ಲಿ ಹೋರಾಟಗಾರರಿಗೆ ಶಕ್ತಿ ತುಂಬೋ ಸಲುವಾಗಿ ಸ್ನೇಹಮಯಿ ಕೃಷ್ಣ, ಗಂಗರಾಜುಗಾಗಿ ಪ್ರಾಣಿ ಬಲಿ ನಡೆಸಿ, ರಕ್ತಾಭಿಷೇಕ ಮಾಡಿರುವಂತ ಶಾಕಿಂಗ್ ವೀಡಿಯೋ ಪತ್ತೆಯಾಗಿದೆ. ಈ ಬಗ್ಗೆ ಮಾಹಿತಿ ನೀಡಿರುವಂತ ಮಂಗಳೂರು ಕಮೀಷನರ್ ಮಸಾಜ್ ಪಾರ್ಲರ್ ಕೇಸಲ್ಲಿ ಬಂಧಿತ ಆರೋಪಿಯಾಗಿದ್ದಂತ ಪ್ರಸಾದ್ ಅತ್ತಾವರ ಅವರ ಮೊಬೈಲ್ ಅನ್ನು ಪರಿಶೀಲಿಸಲಾಗಿ ಅದರಲ್ಲಿ ಸ್ಪೋಟಕ ವೀಡಿಯೋಗಳು ಪತ್ತೆಯಾಗಿವೆ. ದೇವರ ಮುಂದೆ ಪ್ರಾಣಿಬಲಿ ಕೊಟ್ಟು ಮುಡಾ ಹಗರಣದ ದೂರುದಾರ ಸ್ನೇಹಮಯಿ ಕೃಷ್ಣ, ಗಂಗರಾಜು ಪೋಟೋ ಇರಿಸಿ ರಕ್ತಾಭಿಷೇಕ ಮಾಡಿರೋ ವೀಡಿಯೋ ಕೂಡ ಪತ್ತೆಯಾಗಿರುವುದಾಗಿ ತಿಳಿಸಿದ್ದಾರೆ. ಅಂದಹಾಗೇ ಐದು ಕುರಿಗಳನ್ನು ಸ್ನೇಹಮಯಿ ಕೃಷ್ಣ ಹಾಗೂ ಗಂಗರಾಜು ಪೋಟೋ ಇರಿಸಿ ಬಲಿಕೊಡಲಾಗಿದೆ. ಆ ಬಳಿಕ ಆ ಪೋಟೋಗಳಿಗೆ ರಕ್ತಾಭಿಷೇಕವನ್ನು ಮಾಡಲಾಗಿದೆ. ಈ ಹಿನ್ನಲೆಯಲ್ಲಿ ಪ್ರಸಾದ್ ಅತ್ತಾವರ…

Read More

ಬೆಂಗಳೂರು: ಹಿರಿಯ ನಾಗರೀಕರಿಗೆ ಉಚಿತ ಡಿಜಿಟಲ್ ಸಾಕ್ಷರತೆ ಮತ್ತು ಸೈಬರ್ ಸುರಕ್ಷತೆಯ ತರಬೇತಿಯನ್ನು ಫೆಬ್ರವರಿ 2ರಂದು ಪೊಲೀಸ್ ಇಲಾಖೆಯಿಂದ ಹಮ್ಮಿಕೊಳ್ಳಲಾಗಿದೆ. ಈ ಕುರಿತಂತೆ ಬೆಂಗಳೂರು ನಗರ ಪೊಲೀಸ್ ಇಲಾಖೆಯಿಂದ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದು, ಬೆಂಗಳೂರು ನಗರ ಪೊಲೀಸ್ ಹಾಗೂ ನೈಟಿಂಗೇಲ್ಸ್ ಮೆಡಿಕಲ್ ಟ್ರಸ್ಟ್ ಜಂಟಿ ಸಹಯೋಗದಲ್ಲಿ ಕಳೆದ 22 ವರ್ಷಗಳಿಂದ ಹಿರಿಯರ ಸಹಾಯವಾಣಿ ಕಾರ್ಯ ನಿರ್ವಹಿಸುತ್ತಿದೆ. ಅದರಂತೆ ಪ್ರತಿ ತಿಂಗಳು ನೈಟಿಂಗೇಲ್ಸ್ ಮೆಡಿಕಲ್ ಟ್ರಸ್ಟ್ ವತಿಯಿಂದ ಬೆಂಗಳೂರಿನ ಎಲ್ಲಾ ವಲಯಗಳಲ್ಲೂ ಹಿರಿಯರ ನಾಗರಿಕರಿಗೆ ಉಚಿತ ಡಿಜಿಟಲ್ ಸಾಕ್ಷರತೆ ಮತ್ತು ಸೈಬರ್ ಸುರಕ್ಷತೆಯ ತರಬೇತಿಯನ್ನು ಆಯೋಜಿಸಿ, ಹಿರಿಯ ನಾಗರಿಕರಿಗೆ ಇದರ ಬಗ್ಗೆ ಅರಿವನ್ನು ಮೂಡಿಸುವ ಸಲುವಾಗಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿರುತ್ತದೆ. ಅದರಂತೆ ದಿನಾಂಕ:02/02/2025 ರ ಬೆಳಿಗ್ಗೆ 10.30 ಗಂಟೆಯಿಂದ ಮಧ್ಯಾಹ್ನ 1.30 ಗಂಟೆಯ ವರೆಗೆ ನಂ.130, ರಾಷ್ಟ್ರೀಯ ವಿದ್ಯಾಲಯ ರಸ್ತೆ, 2ನೇ ಬ್ಲಾಕ್ ಜಯನಗರ, ಬೆಂಗಳೂರು-560004, ಈ ವಿಳಾಸದಲ್ಲಿರುವ ನೈಟಿಂಗೇಲ್ಸ್ ಮೆಡಿಕಲ್ ಟ್ರಸ್ಟಿನ ಡಿಮೆನ್ಸಿಯ ಡೇ ಕೇರ್ ಆವರಣದಲ್ಲಿ ಕಾರ್ಯಕ್ರಮ ನಡೆಸಲಾಗುತ್ತಿದೆ. ಆದ್ದರಿಂದ…

Read More

ಬೆಂಗಳೂರು: ದೇವನೂರು 3ನೇ ಹಂತದ ಬಡಾವಣೆಯಲ್ಲಿ ನಿವೇಶನಗಳು ಲಭ್ಯವಿರದ ಕಾರಣಕ್ಕೆ ಸಮಾನಂತರ ಬಡಾವಣೆಯಲ್ಲಿ ನಿವೇಶನಗಳನ್ನು ನೀಡುವಂತೆ ಮನವಿ ಮಾಡಿಕೊಳ್ಳಲಾಗಿತ್ತು ಎಂದು ತಮ್ಮ ಅಧಿಕೃತ ಎಕ್ಸ್ ಖಾತೆಯಲ್ಲಿ ಸ್ಪಷ್ಟಪಡಿಸಿದ್ದೀರಿ. ಆ ಸುಳ್ಳಿನಿಂದ ಈಗ ನೀವು ಜನರೆದುರು ಬೆತ್ತಲಾಗಿದ್ದೀರಿ ಎಂಬುದಾಗಿ ಸಿಎಂ ಸಿದ್ಧರಾಮಯ್ಯ ವಿರುದ್ಧ ಜೆಡಿಎಸ್ ಕಿಡಿಕಾರಿದೆ. ಇಂದು ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವಂತ ಜೆಡಿಎಸ್ ಪಕ್ಷವು, ಮುಡಾದಲ್ಲಿ ಮುಕ್ಕಿ ತಿಂದಿರುವ ಮಜಾವಾದಿಯ ಸುಳ್ಳುಗಳು ಬಗೆದಷ್ಟು ಹೊರಬರುತ್ತಲೇ ಇದೆ. ಸಿದ್ಧರಾಮಯ್ಯ ಅವರೇ, ನೀವೇ ಹೇಳಿಕೊಂಡಂತೆ, ದೇವನೂರು 3ನೇ ಹಂತದ ಬಡಾವಣೆಯಲ್ಲಿ ನಿವೇಶನಗಳು ಲಭ್ಯವಿರದ ಕಾರಣಕ್ಕೆ ಸಮಾನಂತರ ಬಡಾವಣೆಯಲ್ಲಿ ನಿವೇಶನಗಳನ್ನು ನೀಡುವಂತೆ ಮನವಿ ಮಾಡಿಕೊಳ್ಳಲಾಗಿತ್ತು ಎಂದು ತಮ್ಮ ಅಧಿಕೃತ ಎಕ್ಸ್ ಖಾತೆಯಲ್ಲಿ ಸ್ಪಷ್ಟಪಡಿಸಿದ್ದೀರಿ. ಆ ಸುಳ್ಳಿನಿಂದ ಈಗ ನೀವು ಜನರೆದುರು ಬೆತ್ತಲಾಗಿದ್ದೀರಿ ಎಂದಿದೆ. ದೇವನೂರು 3ನೇ ಹಂತದ ಬಡಾವಣೆಯಲ್ಲಿ ಈಗಲೂ ಇನ್ನೂ 370 ನಿವೇಶನಗಳು ಬಾಕಿ ಇದೆ ಎಂದು ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರವೇ ( 28-01-2025) ರಂದು ಮಾಹಿತಿ ನೀಡಿದೆ. ತಾವು ರಾಜಕೀಯ ಪ್ರಭಾವ ಬೀರಿ…

Read More

ಉತ್ತರಪ್ರದೇಶ: ಪ್ರಯಾಗ್ರಾಜ್ನಲ್ಲಿ ನಡೆದ ಕುಂಭಮೇಳ 2025 ರಲ್ಲಿ ಹೂಮಾಲೆಗಳನ್ನು ಮಾರಾಟ ಮಾಡುತ್ತಿದ್ದ ಇಂದೋರ್ನ ಯುವತಿ ಮೊನಾಲಿಸಾ ಭೋಸಲೆ ಈಗ ಇಂಟರ್ನೆಟ್ ಸೆನ್ಸೇಷನ್ ಆಗಿ ಮಾರ್ಪಟ್ಟಿದ್ದಾರೆ. ಈಗ ಚಲನಚಿತ್ರ ಜಗತ್ತಿಗೆ ಕಾಲಿಡಲು ಸಿದ್ಧರಾಗಿದ್ದಾರೆ. ಚಲನಚಿತ್ರ ನಿರ್ಮಾಪಕ ಸನೋಜ್ ಮಿಶ್ರಾ ಅವರು ಮುಂಬರುವ ಚಿತ್ರ ‘ದಿ ಡೈರಿ ಆಫ್ ಮಣಿಪುರ’ದಲ್ಲಿ ಅವರಿಗೆ ಒಂದು ಪಾತ್ರವನ್ನು ನೀಡಿದ್ದಾರೆ. ಕುಂಭಮೇಳ 2025 ರಲ್ಲಿ ಹೂಮಾಲೆಗಳನ್ನು ಮಾರಾಟ ಮಾಡುವಾಗ, ಮೊನಾಲಿಸಾ ತನ್ನ ಮುಗ್ಧ ಮೋಡಿ ಮತ್ತು ಅದ್ಭುತ ಸೌಂದರ್ಯದಿಂದ ಅನೇಕ ಹೃದಯಗಳನ್ನು ಗೆದ್ದರು. ಅವರ ಖ್ಯಾತಿಯು ಸಾಮಾಜಿಕ ಸಂಬಂಧಿತ ವಿಷಯಗಳ ಮೇಲಿನ ಕೆಲಸಕ್ಕಾಗಿ ಹೆಸರುವಾಸಿಯಾದ ನಿರ್ದೇಶಕ ಸನೋಜ್ ಮಿಶ್ರಾ ಅವರ ಗಮನವನ್ನು ಸೆಳೆಯಿತು. ಈ ಹಿಂದೆ ‘ದಿ ಡೈರಿ ಆಫ್ ವೆಸ್ಟ್ ಬೆಂಗಾಲ್’ ಚಿತ್ರವನ್ನು ನಿರ್ದೇಶಿಸಿದ್ದ ಮಿಶ್ರಾ, ತಮ್ಮ ಮುಂದಿನ ಯೋಜನೆಯಲ್ಲಿ ಮೊನಾಲಿಸಾಗೆ ಒಂದು ಪಾತ್ರವನ್ನು ನೀಡಲು ನಿರ್ಧರಿಸಿದರು. ವರದಿಗಳ ಪ್ರಕಾರ, ಚಲನಚಿತ್ರ ನಿರ್ಮಾಪಕರು ಮೊನಾಲಿಸಾ ಅವರ ತಂದೆಯೊಂದಿಗೆ ದೂರವಾಣಿಯಲ್ಲಿ ಮಾತನಾಡಿದ್ದಾರೆ. ಈ ಸಂಬಂಧ ಮಹೇಶ್ವರದಲ್ಲಿ ಒಪ್ಪಂದಕ್ಕೆ ಸಹಿ…

Read More