Subscribe to Updates
Get the latest creative news from FooBar about art, design and business.
Author: kannadanewsnow09
ಮುಂಬೈ: ಎಲಿಫೆಂಟಾ ಗುಹೆಗಳಿಗೆ ಪ್ರವಾಸಕ್ಕೆ ತೆರಳಿದ್ದ ಮುಂಬೈನ ಗೇಟ್ ವೇ ಆಫ್ ಇಂಡಿಯಾದಲ್ಲಿ ದೋಣಿ ಮಗುಚಿ ಕನಿಷ್ಠ 13 ಜನರು ಮುಳುಗಿ ಸಾವನ್ನಪ್ಪಿದ್ದಾರೆ. ದೋಣಿಯಲ್ಲಿ ಒಟ್ಟು 80 ಪ್ರಯಾಣಿಕರು ಮತ್ತು ಐವರು ಸಿಬ್ಬಂದಿ ಇದ್ದರು ಎಂದು ಬೃಹನ್ಮುಂಬೈ ಮುನ್ಸಿಪಲ್ ಕಾರ್ಪೊರೇಷನ್ ತಿಳಿಸಿದೆ. 101 ಮಂದಿಯನ್ನು ಈವರೆಗೆ ರಕ್ಷಿಸಲಾಗಿದೆ. ಭಾರತೀಯ ನೌಕಾಪಡೆ, ಭಾರತೀಯ ಕೋಸ್ಟ್ ಗಾರ್ಡ್, ಮುಂಬೈ ಪೊಲೀಸರು ಮತ್ತು ಜವಾಹರಲಾಲ್ ನೆಹರು ಬಂದರು ಪ್ರಾಧಿಕಾರ ಸೇರಿದಂತೆ ಅನೇಕ ಏಜೆನ್ಸಿಗಳು ಭಾರಿ ಶೋಧ ಮತ್ತು ರಕ್ಷಣಾ ಕಾರ್ಯಾಚರಣೆಯನ್ನು ಕೈಗೊಂಡಿವೆ. 11 ನೌಕಾಪಡೆಯ ದೋಣಿಗಳು, ಮೆರೈನ್ ಪೊಲೀಸ್ ನ ಮೂರು ದೋಣಿಗಳು ಮತ್ತು ಭಾರತೀಯ ಕೋಸ್ಟ್ ಗಾರ್ಡ್ ನ ಒಂದು ದೋಣಿ ಈ ಪ್ರದೇಶದಲ್ಲಿವೆ. ಇದಲ್ಲದೆ, ನಾಲ್ಕು ಹೆಲಿಕಾಪ್ಟರ್ಗಳು ಶೋಧ ಮತ್ತು ರಕ್ಷಣಾ ಕಾರ್ಯಾಚರಣೆಯನ್ನು ಕೈಗೊಳ್ಳುತ್ತಿವೆ. https://twitter.com/MBTheGuide/status/1869354363078275211 https://kannadanewsnow.com/kannada/alert-mobile-users-beware-if-you-see-these-signs-it-means-your-phone-is-hacked/ https://kannadanewsnow.com/kannada/epfo-extends-deadline-for-employers-to-upload-pending-pension-applications-until-january-31-2025/
ಮಂಡ್ಯ : 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಮಾಂಸಾಹಾರ ನಿಷೇಧಿಸಿರುವುದನ್ನು ವಿರೋಧಿಸಿ ‘ಮನೆಗೊಂದು ಕೋಳಿ ಮತ್ತು ಊರಿಗೊಂದು ಕುರಿ ಸಂಗ್ರಹ’ ಅಭಿಯಾನಕ್ಕೆ ಚಾಲನೆ ನೀಡಿ, ಸಮ್ಮೇಳನದಲ್ಲಿ ಮಾಂಸಪ್ರಿಯರಿಗೆ ಅಡುಗೆ ಮಾಡಿಸುತ್ತೇವೆ ಎಂದು ಸಾಹಿತಿ ರಾಜೇಂದ್ರ ಪ್ರಸಾದ್ ಹೇಳಿದರು. ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಸಮ್ಮೇಳನದಲ್ಲಿ ಮಾಂಸಾಹಾರಕ್ಕೆ ಪ್ರಾತಿನಿಧ್ಯವಿರುಬೇಕೆಂಬುದು ನಮ್ಮ ಉದ್ದೇಶ. ತಂಬಾಕು, ಮದ್ಯಪಾನ ಹಾಗೂ ಮಾಂಸಾಹಾರ ನಿಷೇಧಿಸಲಾಗಿದೆ ಎಂಬ ನಿಬಂಧನೆಯನ್ನು ಖಂಡಿಸಿಯೇ ಇದು ಪ್ರಾರಂಭವಾಗಿದ್ದು ಎಂಬುದನ್ನು ಅರಿತುಕೊಳ್ಳಬೇಕು ಎಂದರು. ಸಮ್ಮೇಳನದಲ್ಲಿ ಮಾಂಸಾಹಾರಕ್ಕೆ ನಿಷೇಧವಿಲ್ಲ. ಆದರೂ ಅದನ್ನು ಕೀಳಾಗಿ ಕಾಣುತ್ತಿರುವುದನ್ನು ಹೋಗಲಾಡಿಸುವ ಹಾಗೂ ಆಹಾರದಲ್ಲಿ ಸಮಾನತೆ ತರುವ ಪ್ರಯತ್ನ ನಮ್ಮದು. ಸಾರ್ವಜನಿಕರ ಹಣವನ್ನು ಸಮ್ಮೇಳನದಲ್ಲಿ ಬಳಸುತ್ತಿದ್ದು, ಒಂದು ಮೊಟ್ಟೆ ಹಾಗೂ ಒಂದು ತುಂಡು ಮಾಂಸ ನೀಡಲು ಸಮಸ್ಯೆ ಏನಿದೆ ಎಂದು ಪ್ರಶ್ನಿಸಿದರು. ಕರುನಾಡು ಸೇವಕರ ಸಂಘಟನೆಯ ಎಂ.ಬಿ.ನಾಗಣ್ಣಗೌಡ, ಸಮ್ಮೇಳನಕ್ಕೆ ಹಾಕಿರುವ ಬ್ರಾಹ್ಮಣ್ಯದ ಜನಿವಾರವನ್ನು ಬಾಡೂಟದ ಮೂಲಕ ತೆರವುಗೊಳಿಸುವ ಪ್ರಯತ್ನ ಮಾಡುತ್ತೇವೆ ಎಂದರು. ವರದಿ: ಗಿರೀಶ್ ರಾಜ್, ಮಂಡ್ಯ https://kannadanewsnow.com/kannada/kas-re-exam-scheduled-for-december-29-here-are-the-full-details/ https://kannadanewsnow.com/kannada/alert-mobile-users-beware-if-you-see-these-signs-it-means-your-phone-is-hacked/
ಬೆಳಗಾವಿ ಸುವರ್ಣಸೌಧ : ದೇವಸ್ಥಾನ ಹಾಗೂ ರೈತರ ಜಮೀನುಗಳನ್ನು ವಕ್ಫ್ಗೆ ಸೇರ್ಪಡೆ ಮಾಡುವುದಿಲ್ಲ. ಒಂದು ವೇಳೆ ವಕ್ಫ್ ಆಸ್ತಿ ಸಂಬಂಧವಾಗಿ ನೋಟಿಸು ನೀಡಿದ್ದರೆ, ಆ ನೋಟಿಸಗಳನ್ನು ಹಿಂಪಡೆಯುವುದಾಗಿ ವಸತಿ, ವಕ್ಫ್ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಸಚಿವ ಬಿ.ಝಡ್.ಜಮೀರ್ ಅಹಮದ್ ಖಾನ್ ಸ್ಪಷ್ಟ ಪಡಿಸಿದರು. ಬೆಳಗಾವಿ ಸುವರ್ಣಸೌಧದಲ್ಲಿ ನಡೆಯುತ್ತಿರುವ ಅಧಿವೇಶನದಲ್ಲಿ, ವಿರೋಧ ಪಕ್ಷದ ನಾಯಕರು ನಿಯಮ 69 ಅಡಿ, ರೈತರ ಜಮೀನು, ಮಠ-ಮಂದಿರ ಜಾಗ, ಸಾರ್ವಜನಿಕರ ಆಸ್ತಿ, ಸರ್ಕಾರಿ ಕಟ್ಟಡಗಳ ಪಹಣಿಯಲ್ಲಿ ವಕ್ಫ್ ಆಸ್ತಿ ಎಂದು ನಮೂದು ಮಾಡಿರುವ ಕುರಿತು ಪ್ರಸ್ತಾಪಿಸಿದ್ದ ವಿಚಾರಗಳಿಗೆ, ಗುರುವಾರ ವಿಧಾನಸಭೆಯ ಕಲಾಪದಲ್ಲಿ ಸಚಿವ ಜಮೀರ್ ಅಹಮದ್ ಖಾನ್ ಉತ್ತರಿಸಿದರು. ಒಂದು ವೇಳೆ ವಕ್ಫ್ ಜಾಗದಲ್ಲಿಯೇ ದೇವಸ್ಥಾನ ನಿರ್ಮಿಸಿದ್ದರೂ ಕೂಡ, ಸರ್ಕಾರ ಅದನ್ನು ಮುಟ್ಟುವುದಿಲ್ಲ. ಬದಲಿಗೆ ದೇವಸ್ಥಾನಕ್ಕೆ ಮರಳಿ ಆ ಜಾಗವನ್ನು ನೀಡಲಾಗುವುದು. ರೈತರು ಉಳುಮೆ ಮಾಡುತ್ತಿರುವ ಜಮೀನುಗಳನ್ನು ಸಹ ವಕ್ಫ್ ಸೇರ್ಪಡೆ ಮಾಡುವುದಿಲ್ಲ. ವಕ್ಫ್ ತಿದ್ದುಪಡಿ ಕಾಯ್ದೆ ಹಾಗೂ ಸರ್ವೋಚ್ಛ ನ್ಯಾಯಾಲಯದ ಆದೇಶದ ಹಿನ್ನಲೆಯಲ್ಲಿ ಕಳೆದ ಜೂನ್…
ಬೆಳಗಾವಿ ಸುವರ್ಣ ಸೌಧ : ಕಲ್ಯಾಣ ಕರ್ನಾಟಕ ವ್ಯಾಪ್ತಿಯಲ್ಲಿ ಹೊಸದಾಗಿ ರಚಿಸಲಾಗಿರುವ ಎಲ್ಲ 18 ತಾಲ್ಲೂಕುಗಳಲ್ಲಿ ಪ್ರಜಾಸೌಧ ನಿರ್ಮಾಣ ಮಾಡಲು ನಿರ್ಧರಿಸಲಾಗಿದ್ದು, ಶೀಘ್ರದಲ್ಲಿಯೇ ಟೆಂಡರ್ ಪ್ರಕ್ರಿಯೆ ಪ್ರಾರಂಭಿಸಲಾಗುವುದು ಎಂದು ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿ ಅಧ್ಯಕ್ಷ ಅಜಯ್ ಸಿಂಗ್ ಅವರು ಹೇಳಿದರು. ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ಅಧಿವೇಶನದಲ್ಲಿ ವಿಧಾನಸಭೆಯಲಿ ಬುಧವಾರ ಉತ್ತರ ಕರ್ನಾಟಕದ ವಿಷಯಗಳ ಬಗ್ಗೆ ನಡೆದ ಚರ್ಚೆ ಸಂದರ್ಭದಲ್ಲಿ ಅವರು ಮಾತನಾಡಿದರು. ಕಲ್ಯಾಣ ಕರ್ನಾಟಕ ಪ್ರದೇಶ ವ್ಯಾಪ್ತಿಯಲ್ಲಿ ನೂತನವಾಗಿ ರಚಿಸಲಾಗಿರುವ 18 ಹೊಸ ತಾಲ್ಲೂಕುಗಳಲ್ಲಿ ಕೆಕೆಆರ್ಡಿಬಿ ಅನುದಾನ ವಿನಿಯೋಗಿಸಿ ಹೊಸದಾಗಿ ಪ್ರಜಾಸೌಧ ನಿರ್ಮಾಣ ಮಾಡಲಾಗುತ್ತಿದ್ದು, ಬರುವ ತಿಂಗಳಿನಲ್ಲಿ ಟೆಂಡರ್ ಪ್ರಕ್ರಿಯೆ ನಡೆಯಲಿದೆ. ಪ್ರಸಕ್ತ ವರ್ಷ ಕಲ್ಯಾಣ ಕರ್ನಾಟಕಕ್ಕೆ ಸರ್ಕಾರ 5000 ಕೋಟಿ ರೂ. ಅನುದಾನ ಒದಗಿಸಿದೆ ಎಂದರು. ಕಲ್ಯಾಣ ಕರ್ನಾಟಕದ ರಾಯಚೂರು, ಕಲಬುರ್ಗಿ ಜಿಲ್ಲೆಯಲ್ಲಿ ಶಿಕ್ಷಣದಲ್ಲಿ ಹಿಂದುಳಿದಿದ್ದು, ಈ ಭಾಗಕ್ಕೆ ನೀಡಲಾಗಿರುವ ಅನುದಾನದಲ್ಲಿ ಶೇ. 25 ರಷ್ಟು ಅನುದಾನವನ್ನು ಶಿಕ್ಷಣ ಕ್ಷೇತ್ರಕ್ಕೆ ಖರ್ಚು ಮಾಡಲು ನಿರ್ಧರಿಸಲಾಗಿದೆ. ಗ್ರಾಮೀಣ…
ಬಹುಶಃ ಇಂದು ಅತ್ಯಂತ ಜನಪ್ರಿಯವಾದ ಸಿದ್ಧ ಈ ಕಲ್ಯಕ್ಯ ಸಿದ್ಧವಾಗಿದೆ. ಗೂಗಲ್ನಲ್ಲಿ ಹುಡುಕಿದರೆ ಅವರ ಹೆಸರು ಸಿಗುವುದಿಲ್ಲ. ಆದರೆ ಅವರು ಅನೇಕ ಜನರ ಜೀವನದಲ್ಲಿ ಪವಾಡಗಳನ್ನು ಮಾಡಿದರು ಎಂದು ಹೇಳಲಾಗುತ್ತದೆ. ಸತತ 3 ದಿನ ಕೇಳಕಿಯಾರ್ ಮಂತ್ರವನ್ನು ಪಠಿಸುವುದರಿಂದ 3 ದಿನಗಳಲ್ಲಿ ನಿಮ್ಮ ಸಮಸ್ಯೆ ನಿವಾರಣೆಯಾಗುತ್ತದೆ. ವಾಕ್ಯ ಸಿದ್ದಿ, ಮಂತ್ರಸಿದ್ದಿ ಯಂತ್ರ ಸಿದ್ದಿಯಿಂದ ಪ್ರಖ್ಯಾತಿ ಪಡೆದಿರುವ ಭಾರತದ ಏಕ್ಕೈಕ ಜೋತಿಷ್ಯರು ವಿದ್ವಾನ್ ವಿದ್ಯಾಧರ್ ನಕ್ಷತ್ರಿ ತಂತ್ರಿ 9686268564 ಇಷ್ಟ ಪಟ್ಟವರು ನೀಮ್ಮಂತೇ ಆಗಲು, ಪ್ರೀತಿಯಲ್ಲಿ ಮೋಸ ಹೋಗಿದ್ದರೆ ಮದುವೆ ವಿಳಂಬ, ಸತಿ ಪತಿ ಕಲಹ, ಸಂತಾನ, ಅತ್ತೆ ಸೋಸೆ ಕಲಹ, ಶತ್ರು ಭಾದೆ, ಅನಾರೋಗ್ಯ, ಸಾಲದ ಭಾದೆ, ಮನೆಯಲ್ಲಿ ಅಶಾಂತಿ, ಬೀಜೀನೇಸ್ಸ ನಲ್ಲಿ ನಷ್ಟ , ಕೋರ್ಟ್ ಕೇಸ್, ಎಷ್ಟೇ ಪ್ರಯತ್ನ ಜೀವನದಲ್ಲಿ ಏಳಿಗೆ ಅಭಿವೃದ್ಧಿ ಆಗದೆ ನೋಂದಿದ್ದರೆ ಇನ್ನೂ ನಿಮ್ಮ ಸಮಸ್ಯೆ ಯಾವುದೇ ಇರಲಿ ಎಷ್ಟೇ ಕಠಿಣವಾಗಿರಲಿ ಕೇವಲ 2 ದಿನದಲ್ಲಿ ಪರಿಹಾರ ಶತಃಸಿದ್ದ ವಿದ್ವಾನ್ ವಿದ್ಯಾಧರ್ ನಕ್ಷತ್ರಿ ತಂತ್ರಿ…
ಬೆಂಗಳೂರು: ಕನ್ನಡ ಭಾಷಾಂತರ ಎಡವಟ್ಟಿನ ಕಾರಣದಿಂದ ರದ್ದುಗೊಂಡಿದ್ದಂತ 384 ಕೆಎಎಸ್ ನೇಮಕಾತಿಗೆ ಮರು ಪರೀಕ್ಷೆ ನಡೆಸಲು ಡಿಸೆಂಬರ್.29ರಂದು ದಿನಾಂಕ ನಿಗದಿ ಪಡಿಸಲಾಗಿದೆ. ಈ ಸಂಬಂಧ ಕರ್ನಾಟಕ ಲೋಕಸೇವಾ ಆಯೋಗದಿಂದ ಮಾಹಿತಿ ನೀಡಲಾಗಿದ್ದು ಕನ್ನಡ ಭಾಷಾಂತರ ಪರೀಕ್ಷೆಯ ಸಮಸ್ಯೆಯಿಂದ ಕೆಎಎಸ್ ಪರೀಕ್ಷೆ ರದ್ದುಗೊಂಡಿತ್ತು. ಈ ಪರೀಕ್ಷೆಯನ್ನು ಡಿಸೆಂಬರ್.29ರಂದು ನಡೆಸಲು ನಿಗದಿ ಪಡಿಸಲಾಗಿದೆ ಎಂದಿದೆ. ಡಿಸೆಂಬರ್.29ರಂದು ಬೆಳಿಗ್ಗೆ 10ರಿಂದ ಮಧ್ಯಾಹ್ನ 12ರವರೆಗೆ ಪೇಪರ್-1ರ ಪರೀಕ್ಷೆ ಹಾಗೂ ಮಧ್ಯಾಹ್ನ 2ರಿಂದ ಸಂಜೆ 4 ಗಂಟೆಯವರೆಗೆ ಪೇಪರ್-2 ಪರೀಕ್ಷೆಯನ್ನು ನಡೆಸುತ್ತಿರುವುದಾಗಿ ಕೆಪಿಎಸ್ಸಿ ತಿಳಿಸಿದೆ. https://kannadanewsnow.com/kannada/robotic-surgery-performed-on-a-man-suffering-from-gallstones-and-infected-gallbladder-by-doctors-at-fortis-hospital-in-bengaluru/ https://kannadanewsnow.com/kannada/alert-mobile-users-beware-if-you-see-these-signs-it-means-your-phone-is-hacked/
ಬೆಂಗಳೂರು: ಪಿತ್ತಕಲ್ಲು ಮತ್ತು ಸೋಂಕಿತ ಪಿತ್ತಕೋಶದ ಸಮಸ್ಯೆಯಿಂದ ಬಳಲುತ್ತಿದ್ದ 93 ವರ್ಷದ ವ್ಯಕ್ತಿಗೆ ಫೋರ್ಟಿಸ್ ಆಸ್ಪತ್ರೆಯಲ್ಲಿ ಸುಧಾರಿತ ರೋಬೋಟ್ ನೆರವಿನ ಮೂಲಕ ಯಶಸ್ವಿಯಾಗಿ ಶಸ್ತ್ರಚಿಕಿತ್ಸೆಯನ್ನು ನೆರವೇರಿಸಲಾಯಿತು. ಫೋರ್ಟಿಸ್ ಆಸ್ಪತ್ರೆಯ ಮಿನಿಮಲ್ ಆಕ್ಸೆಸ್ ಮತ್ತು ರೊಬೊಟಿಕ್ ಜನರಲ್ ಸರ್ಜರಿ ನಿರ್ದೇಶಕ ಡಾ. ಶ್ರೀಧರ ವಿ ಮಾತನಾಡಿ, 93 ವರ್ಷದ ಸೋಮೇಶ್ (ಹೆಸರು ಬದಲಾಯಿಸಲಾಗಿದೆ) ಎಂಬ ರೋಗಿಯು 4-6 ದಿನಗಳಿಂದ ತೀವ್ರ ಹೊಟ್ಟೆ ನೋವು ಅನುಭವಿಸುತ್ತಿದ್ದರು. ಸಾಕಷ್ಟು ಕಡೆ ತೋರಿಸಿದರೂ ಸೂಕ್ತ ಕಾರಣ ತಿಳಿದಿರಲಿಲ್ಲ. ಬಳಿಕ ಅವರು ಫೋರ್ಟಿಸ್ಗೆ ದಾಖಲಾದರು, ಅವರನ್ನು ಸಂಪೂರ್ಣವಾಗಿ ತಪಾಸಣೆ ಮಾಡಿದ ಬಳಿಕ ಅವರಿಗೆ ಪಿತ್ತಕಲ್ಲುಗಳೊಂದಿಗೆ ಸೋಂಕಿತ ಪಿತ್ತಕೋಶ ಇರುವುದು ಕಂಡು ಬಂತು. ಅಷ್ಟೇ ಅಲ್ಲದೆ, ರೋಗಿಯು ಈ ಮೊದಲೇ ಹೃದ್ರೋಗ, ಮಧುಮೇಹ, ಅಧಿಕ ರಕ್ತದೊತ್ತಡದ ಇತಿಹಾಸ ಹೊಂದಿದ್ದು, ಈ ಹಿಂದೆ ಹೃದಯ ಬೈಪಾಸ್ ಶಸ್ತ್ರಚಿಕಿತ್ಸೆ ಮತ್ತು ಆಂಜಿಯೋಪ್ಲ್ಯಾಸ್ಟಿಗೆ ಒಳಪಟ್ಟಿದ್ದರು. ಈ ಎಲ್ಲಾ ಕಾರಣದಿಂದ ಹಾಗೂ ಅವರ ವಯಸ್ಸಿನ ಕಾರಣದಿಂದ ಅವರಿಗೆ ಓಪನ್ ಸರ್ಜರಿ ಮಾಡುವುದು ಅಸಾಧ್ಯವಾಗಿತ್ತು. ಹೀಗಾಗಿ ಅವರಿಗೆ…
ಬೆಂಗಳೂರು : ಟ್ರಾವೆಲ್ ಹಾಗೂ ಲೀಶರ್ ಇಂಡಿಯಾ ನೀಡುವ ಪ್ರತಿಷ್ಠಿತ ಪ್ರಶಸ್ತಿಯಾದ ‘ಅತ್ಯುತ್ತಮ ದೇಶೀಯ ಏರ್ಪೋರ್ಟ್ ಲಾಂಜ್’ ಮನ್ನಣೆಯನ್ನು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಟರ್ಮಿನಲ್ 2 ನಲ್ಲಿ ದೇಶೀಯ ನಿರ್ಗಮನ ಪ್ರದೇಶದಲ್ಲಿರುವ 080 ಲಾಂಜ್ ಪಡೆದುಕೊಂಡಿದೆ. ಇದಲ್ಲದೆ, ಕಾಂಡೆ ನಾಸ್ಟ್ ರೀಡರ್ಸ್ ಚಾಯ್ಸ್ ಅವಾರ್ಡ್ಸ್ -2024 ನಲ್ಲಿ ಟರ್ಮಿನಲ್ 2 ನಲ್ಲಿನ ಅಂತಾರಾಷ್ಟ್ರೀಯ ನಿರ್ಗಮನ ಪ್ರದೇಶದಲ್ಲಿರುವ 080 ಲಾಂಜ್ಗೆ ‘ಮೆಚ್ಚಿನ ವಿಮಾನ ನಿಲ್ದಾಣ ಲಾಂಜ್’ ಎಂಬ ಶೀರ್ಷಿಕೆಯ ಮನ್ನಣೆಯನ್ನು ನೀಡಲಾಗಿದೆ. ಈ ಮೂಲಕ ಪ್ರಯಾಣಿಕರಿಗೆ ವಿಶ್ವದರ್ಜೆಯ ಪ್ರಯಾಣದ ಅನುಭವ, ಸೌಕರ್ಯ, ಸೌಲಭ್ಯ ಮತ್ತು ಅಸಾಧಾರಣ ಸೇವೆ ನೀಡುತ್ತಿರುವ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬದ್ದತೆಯನ್ನು ಎತ್ತಿಹಿಡಿಯುತ್ತದೆ. ಪ್ರತಿಷ್ಠಿತ ಟ್ರಾವೆಲ್ + ಲೀಶರ್ ಮತ್ತು ಕಾಂಡೆ ನಾಸ್ಟ್ ಟ್ರಾವೆಲರ್ ನಿಯತಕಾಲಿಕೆಗಳು ಪ್ರಯಾಣ ಮತ್ತು ಆತಿಥ್ಯ ಉದ್ಯಮದಲ್ಲಿನ ಅತ್ಯುತ್ತಮ ಸಂಸ್ಥೆಗಳನ್ನು ಓದುಗರ ಆಯ್ಕೆಯ ಮೂಲಕ ಪ್ರಶಸ್ತಿಗೆ ಆಯ್ಕೆ ಮಾಡುತ್ತವೆ. ಈ ಪುರಸ್ಕಾರಗಳು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ 080 ಲಾಂಜ್ ಬಗ್ಗೆ ಪ್ರಯಾಣಿಕರು…
ಮಂಡ್ಯ: ದಸರಾದಲ್ಲಿ ಮಾತ್ರ ನುಡಿಸುವ ಪೊಲೀಸ್ ಬ್ಯಾಂಡ್ ಇದೇ ಪ್ರಪ್ರಥಮವಾಗಿ ಸಾಹಿತ್ಯ ಸಮ್ಮೇಳನದಲ್ಲಿ ಸಂಗೀತದ ರಸಧಾರೆ ಹರಿಸಲಿದೆ ಎಂದು ಶಾಸಕರು ಹಾಗೂ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಸಾಂಸ್ಕೃತಿಕ ಸಮನ್ವಯ ಸಮಿತಿ ಅಧ್ಯಕ್ಷರಾದ ದಿನೇಶ್ ಗೂಳಿಗೌಡ ಅವರು ಹೇಳಿದರು. ವೇದಿಕೆ ಸಿದ್ಧತೆ ಕುರಿತು ಪರಿಶೀಲನೆ ನಡೆಸಿದ ನಂತರ ಮಾಧ್ಯಮದವರನ್ನು ಉದ್ದೇಶಿಸಿ ಮಾತನಾಡಿದ ಅವರು, ಸಾಕಷ್ಟು ಹೊಸತನಗಳಿಗೆ ಸಾಕ್ಷಿಯಾಗುತ್ತಿರುವ ಮಂಡ್ಯದಲ್ಲಿ ನಡೆಯುತ್ತಿರುವ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಮೂರನೇ ದಿನ (ಡಿ.22ರ ಭಾನುವಾರ ಸಂಜೆ) ರಾಜ್ಯ ಪೊಲೀಸ್ ಇಲಾಖೆ ವತಿಯಿಂದ ವಾದ್ಯಮೇಳ ನಡೆಯಲಿದೆ ಎಂದರು. ಡಿ.22ರಂದು ಗೋಷ್ಠಿಗಳು ಮುಕ್ತಾಯದ ನಂತರ ಸಂಜೆ ನಡೆಯಲಿರುವ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಪೊಲೀಸ್ ಬ್ಯಾಂಡ್ ನಿಂದ 45 ನಿಮಿಷಗಳ ಕಾಲ ಹತ್ತಕ್ಕೂ ಹೆಚ್ಚು ಹಾಡುಗಳಿಗೆ ವಾದ್ಯವೃಂದದವರು ಸಂಗೀತ ಪ್ರಸ್ತುತಿಪಡಿಸಲಿದ್ದಾರೆ ಎಂದು ಹೇಳಿದರು. ದಾಸರ ಕೀರ್ತನೆಗಳು, ಭಕ್ತಿ ಗೀತೆಗಳು, ಕನ್ನಡದ ಗೀತೆಗಳು ಸೇರಿದಂತೆ ಹತ್ತಕ್ಕೂ ಹೆಚ್ಚು ಗೀತೆಗಳನ್ನು ನುಡಿಸಲಿದ್ದಾರೆ. ಪೊಲೀಸ್ ಬ್ಯಾಂಡ್ ಕೇವಲ ದಸರಾದಲ್ಲಿ…
ಬೆಂಗಳೂರು : ಬೆಂಗಳೂರು ನಗರ ಜಿಲ್ಲಾ ಸಹಕಾರ ಒಕ್ಕೂಟದ ಪದಾಧಿಕಾರಿಗಳ ಚುನಾವಣೆಯಲ್ಲಿ ನೂತನ ಅಧ್ಯಕ್ಷರಾಗಿ ಜೆ.ಮಂಜುನಾಥ್ ,ಉಪಾಧ್ಯಕ್ಷರಾಗಿ ಕೆ.ಸಿ.ಕೃಷ್ಣಪ್ಪ, ಖಚಾಂಚಿಯಾಗಿ ಹೆಚ್.ಎನ್.ಗೌತಮ್ ಆಯ್ಕೆಯಾಗಿದ್ದಾರೆ. ಬೆಂಗಳೂರು ನಗರ ಜಿಲ್ಲಾ ಸಹಕಾರ ಒಕ್ಕೂಟದ ಕಛೇರಿಯಲ್ಲಿ ನಡೆದ ಪದಾಧಿಕಾರಿಗಳ ಸಭೆಯಲ್ಲಿ ನೂತನ ಪದಾಧಿಕಾರಿಗಳನ್ನು ಸರ್ವಾನುಮತದಿಂದ ಅವಿರೋಧವಾಗಿ ಆಯ್ಕೆ ಮಾಡಲಾಗಿದೆ. ಬಳಿಕ ಮಾತನಾಡಿದ ಜೆ.ಮಂಜುನಾಥ್, ಹೆಚ್.ಎನ್.ಗೌತಮ್, ಬೆಂಗಳೂರು ಸಹಕಾರ ಮಹಾಮಂಡಳದ ಅಧೀನದಲ್ಲಿರುವ ಕಟ್ಟಡವನ್ನು ಬೆಂಗಳೂರು ಸಹಕಾರ ಒಕ್ಕೂಟಕ್ಕೆ ತೆಗೆದು ಕೊಳ್ಳುವುದು ನಮ್ಮ ಮೊದಲ ಆದ್ಯತೆಯಾಗಿದೆ,ಸಹಕಾರ ಬ್ಯಾಂಕು,ಸೊಸೈಟಿಗಳನ್ನು ನಡೆಸುತ್ತಿರುವವರಿಗೆ ಸೂಕ್ತ ತರಬೇತಿ ನೀಡುವುದು ನಮ್ಮ ಉದ್ದೇಶವಾಗಿದ್ದು ಈ ನಿಟ್ಟಿನಲ್ಲಿ ತರಬೇತಿ ಕಾರ್ಯಗಾರಗಳನ್ನು ಹಮ್ಮಿಕೊಳ್ಳಲಾಗುವುದು ಎಂದು ತಿಳಿಸಿದರು. https://kannadanewsnow.com/kannada/panchayat-raj-amendment-bill-passed-by-voice-vote-in-legislative-council/ https://kannadanewsnow.com/kannada/alert-mobile-users-beware-if-you-see-these-signs-it-means-your-phone-is-hacked/