Subscribe to Updates
Get the latest creative news from FooBar about art, design and business.
Author: kannadanewsnow09
ಬೆಂಗಳೂರು: ಯುಜಿಸಿಇಟಿ-2025ರಲ್ಲಿನ ಪರೀಕ್ಷೆಯ ನಂತ್ರ ಕೆಇಎಯಿಂದ CET Rank ಪ್ರಕಟಿಸಲಾಗಿತ್ತು. ಈ ಬಳಿಕ ವಿದ್ಯಾರ್ಥಿಗಳಿಗಿದ್ದಂತ ಕೆಲ ಗೊಂದಲಗಳಿಗೆ ಕೆಇಎ ಮಹತ್ವದ ಕ್ಲಾರಿಫಿಕೇಷನ್ ಬಿಡುಗಡೆ ಮಾಡಿದೆ. ಈ ಬಗ್ಗೆ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಕೆಇಎ, UGCET-25 BPT, BPO AHS ಕೋರ್ಸ್ ಗಳ ಪ್ರವೇಶಕ್ಕೆ ಅಭ್ಯರ್ಥಿಗಳ ದ್ವಿತೀಯ ಪಿಯುಸಿ ಅಂಕಗಳ ಆಧಾರದ ಮೇಲೆ CET Rank ನೀಡಲಾಗಿದೆ. UGCET-25 ಬರೆದಿದ್ದ ಎಲ್ಲ ಅಭ್ಯರ್ಥಿಗಳಿಗೂ Rank ನೀಡಲಾಗಿದೆ ಎಂಬುದಾಗಿ ತಿಳಿಸಿದೆ. ಬಿಪಿಟಿ ಮತ್ತು ಎಎಚ್ಎಸ್ ಕೋರ್ಸ್ ಗಳಿಗೆ ವಿಜ್ಞಾನ ಮತ್ತು ಬಿಪಿಒ ಕೋರ್ಸ್ ಗಳ ಪ್ರವೇಶಕ್ಕೆ ಕಲಾ ಮತ್ತು ವಾಣಿಜ್ಯ ವಿಷಯಗಳಲ್ಲಿ ಪಿಯುಸಿ ಶಿಕ್ಷಣ ಮುಗಿಸಿರುವವರು ಅರ್ಹರು ಎಂದು ಸ್ಪಷ್ಟ ಪಡಿಸಿದೆ. https://twitter.com/KEA_karnataka/status/1935316653308510241 https://kannadanewsnow.com/kannada/transfer-18-kas-officers-as-per-state-government-order/ https://kannadanewsnow.com/kannada/sadananda-murder-case-in-sagar-why-did-the-police-release-the-murder-accused/
ಬೆಂಗಳೂರು: ರಾಜ್ಯ ಸರ್ಕಾರದಿಂದ ಆಡಳಿತ ಯಂತ್ರಕ್ಕೆ ಚುರುಕು ಮುಟ್ಟಿಸೋ ಸಲುವಾಗಿ 18 ಕೆ ಎ ಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶಿಸಿದೆ. ಇಂದು ಅಧಿಸೂಚನೆ ಹೊರಡಿಸಿರುವಂತ ರಾಜ್ಯ ಸರ್ಕಾರವು ಕೆ ಎಎಸ್ ಅಧಿಕಾರಿ ಡಾ.ಚನ್ನಪ್ಪ.ಎ ಅವರನ್ನು ರಾಯಚೂರು ವಿವಯ ಕುಲಸಚಿವರನ್ನಾಗಿ ನೇಮಿಸಿದ್ದರೇ, ರೂಪಶ್ರೀ.ಕೆ ಅವರನ್ನು ಮಂಡ್ಯ ವಿವಿಯ ಆಡಳಿತದ ಕುಲಸಚಿವರನ್ನಾಗಿ ನಿಯೋಜಿಸಿ ಆದೇಶಿಸಿದೆ. ಡಾ.ರುದ್ರೇಶ್ ಎಸ್ ಘಾಳಿ ಅವರನ್ನು ಧಾರವಾಡದ ಶಾಲಾ ಶಿಕ್ಷಣ ಇಲಾಖೆಯ ಅಪರ ಆಯುಕ್ತರಾಗಿ, ಪುಷ್ಪಲತಾ ಹೆಚ್ ಅವರನ್ನು ಕರ್ನಾಟಕ ರಾಜ್ಯ ಪ್ರವಾಸೋದ್ಯಮ ಅಭಿವೃದ್ಧಿ ನಿಗಮ ನಿಯಮಿತದ ಪ್ರಧಾನ ವ್ಯವಸ್ಥಾಪಕರ ಹುದ್ದೆಗೆ ನೇಮಿಸಿದೆ. ಮಹೇಶ್ ಬಾಬು ಎನ್ ಅವರನ್ನು ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದ ವ್ಯವಸ್ಥಾಪಕ ನಿರ್ದೇಶಕರಾಗಿ ನೇಮಕ ಮಾಡಿದ್ದರೇ, ನೂರ್ ಜಹರಾ ಖಾನಂ ಅವರನ್ನು ಬೆಂಗಳೂರಿನ ಲೆಕ್ಕಪತ್ರ ವಿಭಾಗದ ಅಪರ ಕಂದಾಯ ಆಯುಕ್ತರಾಗಿ ನೇಮಕ ಮಾಡಲಾಗಿದೆ. ಹೀಗಿದೆ 18 ಕೆಎಎಸ್ ಅಧಿಕಾರಿಗಳ ವರ್ಗಾವಣೆ ಪಟ್ಟಿ https://kannadanewsnow.com/kannada/as-long-as-we-are-here-there-is-no-room-for-the-privatization-of-escoms-deputy-chief-minister-d-k-shivakumar/ https://kannadanewsnow.com/kannada/sadananda-murder-case-in-sagar-why-did-the-police-release-the-murder-accused/
ಬೆಂಗಳೂರು: 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಸವಿನೆನಪಿಗಾಗಿ ಮಂಡ್ಯ ಜಿಲ್ಲೆಯಲ್ಲಿ ಕನ್ನಡ ಭವನ ನಿರ್ಮಾಣಕ್ಕೆ ರಾಜ್ಯ ಸರ್ಕಾರ ಅನುಮತಿಸಿ ಆದೇಶಿಸಿದೆ. ಈ ಸಂಬಂಧ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ನಡವಳಿ ಹೊರಡಿಸಿದ್ದು, 2024-25ನೇ ಸಾಲಿನ ನಮ್ಮ ನಾಡು, ನುಡಿ, ಸಂಸ್ಕೃತಿಯನ್ನು ಬಿಂಬಿಸಲು 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಮಂಡ್ಯ ಜಿಲ್ಲೆಯಲ್ಲಿ ಆಯೋಜಿಸಲು 2024-25ನೇ ಸಾಲಿನ ಕ್ರಿಯಾಯೋಜನೆ ಲೆಕ್ಕಶೀರ್ಷಿಕ: 2205-00-102-4-22 ಕನ್ನಡ ಸಾಹಿತ್ಯ ಪರಿಷತ್ಗೆ ಸಹಾಯಾನುದಾನ 103 ಸಹಾಯಾನುದಾನ-ಸಾಮಾನ್ಯ ರಡಿ ರೂ.10.00 ಕೋಟಿ ಅನುದಾನವನ್ನು ಮಂಜೂರು ಮಾಡಲಾಗಿರುತ್ತದೆ ಎಂದಿದ್ದಾರೆ. ಮಂಡ್ಯ ಜಿಲ್ಲೆಯಲ್ಲಿ ಆಯೋಜಿಸಲು ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಹೆಚ್ಚುವರಿಯಾಗಿ ರೂ.15.00 ಕೋಟಿ ಅನುದಾನ ಮಂಜೂರು ಮಾಡಲಾಗಿರುತ್ತದೆ. 2024-25ನೇ ಸಾಲಿನ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಮಂಡ್ಯ ಜಿಲ್ಲೆಯಲ್ಲಿ ಆಯೋಜಿಸಿದ್ದ ಕಾರ್ಯಕ್ರಮಕ್ಕೆ ಹೆಚ್ಚುವರಿಯಾಗಿ ರೂ.5.00 ಕೋಟಿ ಅನುದಾನ ಮಂಜೂರು ಮಾಡಲಾಗಿರುತ್ತದೆ ಎಂದು ಹೇಳಿದ್ದಾರೆ. 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ…
ಜ್ಯೋತಿಷ್ಯದಲ್ಲಿ, ಒಂಬತ್ತು ಗ್ರಹಗಳಲ್ಲಿ ಶುಕ್ರನಿಗೆ ಪ್ರಮುಖ ಸ್ಥಾನವಿದೆ. ಈ ಗ್ರಹವು ಮುಖ್ಯವಾಗಿ ವ್ಯಕ್ತಿಯ ಭೌತಿಕ ಸಂತೋಷ, ಪ್ರೇಮ ಸಂಬಂಧ, ಆಕರ್ಷಣೆ, ಕಲೆ, ಸೌಂದರ್ಯ, ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಮೇಲೆ ಪರಿಣಾಮ ಬೀರುತ್ತದೆ. ಶುಕ್ರನು ತನ್ನ ಚಲನೆಯನ್ನು ಬದಲಾಯಿಸಿದಾಗ ಅಥವಾ ಹೊಸ ನಕ್ಷತ್ರಪುಂಜವನ್ನು ಪ್ರವೇಶಿಸಿದಾಗ, ಅದು ಎಲ್ಲಾ ರಾಶಿಚಕ್ರ ಚಿಹ್ನೆಗಳ ಮೇಲೆ ಒಂದಲ್ಲ ಒಂದು ರೂಪದಲ್ಲಿ ಪರಿಣಾಮ ಬೀರುತ್ತದೆ. ಜುಲೈ ತಿಂಗಳಲ್ಲಿ ಶುಕ್ರನು ನಕ್ಷತ್ರ ಬದಲಾವಣೆ ಮಾಡಲಿದ್ದು, ಇದರಿಂದಾಗಿ ಈ ರಾಶಿಯವರ ಅದೃಷ್ಟ ಹೊಳೆಯಲಿದೆ. ಆ ಲಕ್ಕಿ ರಾಶಿಗಳಾವುವು ಎಂಬುದು ಇಲ್ಲಿದೆ. ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ವಿದ್ವಾನ್ ವಿದ್ಯಾಧರ್ ತಂತ್ರಿ ಜ್ಯೋತಿಷ್ಯರ ಮೊಬೈಲ್ ಸಂಖ್ಯೆ 9686268564 ಇವರು ಚೌಡಿ ಉಪಾಸನಾ ಮತ್ತು ಕೇರಳದ ವಿಶಿಷ್ಟ ಅನುಷ್ಠಾನ ಪೂಜೆಗಳಿಂದ ತಮ್ಮಲ್ಲಿ ಉಲ್ಬಣಿಸುವ ಸಕಲ ಸಮಸ್ಯೆಗಳಿಗೆ ಪರಿಹಾರ ಮತ್ತು ಮಾರ್ಗದರ್ಶನ ತಿಳಿಸಿಕೊಡುತ್ತಾರೆ. ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಜಾತಕ…
ಬೆಂಗಳೂರು: “ನಾನು, ಸಿಎಂ ಸಿದ್ದರಾಮಯ್ಯ ಅವರು ಅಧಿಕಾರದಲ್ಲಿರುವವರೆಗೂ ರಾಜ್ಯದಲ್ಲಿರುವ ಎಸ್ಕಾಂಗಳನ್ನು ಖಾಸಗೀಕರಣ ಮಾಡಲು ಅವಕಾಶ ನೀಡುವುದಿಲ್ಲ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ ನೀಡಿದರು. ಬೆಂಗಳೂರಿನ ಅರಮನೆ ಮೈದಾನದಲ್ಲಿ ಬುಧವಾರ ನಡೆದ ಕರ್ನಾಟಕ ಪ್ರಸರಣ ನಿಗಮ ನೌಕರರ ಸಂಘದ 60ನೇ ವಜ್ರ ಮಹೋತ್ಸವ ಸಂಭ್ರಮ ಹಾಗೂ ವಜ್ರಜ್ಯೋತಿ ಸ್ಮರಣ ಸಂಚಿಕೆ ಲೋಕಾರ್ಪಣೆ ಸಮಾರಂಭದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಮಾತನಾಡಿದರು. “ನಾನು ಇಂಧನ ಸಚಿವನಾದ ಬಳಿಕ ಕೇಂದ್ರದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದಿತು. ಮುಂಬೈ, ದೆಹಲಿ ಸೇರಿದಂತೆ ದೇಶದ ವಿವಿಧ ನಗರಗಳಲ್ಲಿ ಎಸ್ಕಾಂಗಳನ್ನು ಖಾಸಗಿಯವರಿಗೆ ನೀಡಲಾಗಿದೆ. ಹೀಗಾಗಿ ಬೆಂಗಳೂರಿನಲ್ಲೂ ಖಾಸಗಿಯವರಿಗೆ ನೀಡಬೇಕು ಎಂದು ನನ್ನ ಮೇಲೆ ಒತ್ತಡ ಹೇರಲಾಗಿತ್ತು. ಆಗ ನಾನು ಅವರಿಗೆ ನಮ್ಮ ನೌಕಕರು, ಇಂಜಿನಿಯರ್ ಗಳು, ವ್ಯವಸ್ಥಾಪಕ ಮಂಡಳಿಯವರು ಬಹಳ ಶಕ್ತಿಶಾಲಿಯಾಗಿದ್ದು ಎಸ್ಕಾಂಗಳನ್ನು ಸಮರ್ಥವಾಗಿ ಮುನ್ನಡೆಸಲಿದ್ದಾರೆ ಎಂದು ಹೇಳಿದ್ದೆ. ರಾಜ್ಯದಲ್ಲಿ ಈ ಡಿ.ಕೆ. ಶಿವಕುಮಾರ್, ಸಿಎಂ ಸಿದ್ದರಾಮಯ್ಯ ಅವರು ಇರುವವರೆಗೂ ಎಸ್ಕಾಂಗಳನ್ನು ಖಾಸಗೀಕರಣಗೊಳಿಸಲು ಅವಕಾಶ ನೀಡುವುದಿಲ್ಲ” ಎಂದು ತಿಳಿಸಿದರು. “ನಾನು…
ಹುಬ್ಬಳ್ಳಿ: ನೈರುತ್ಯ ರೈಲ್ವೆಯ ಹುಬ್ಬಳ್ಳಿ ವಿಭಾಗದ ಮಿರಜ್ – ಬೆಳಗಾವಿ ವಿಶೇಷ ರೈಲುಗಳ ಆಗಮನದ ವೇಳೆಯಲ್ಲಿ ಪರಿಷ್ಕರಣೆ ಮಾಡಲಾಗಿದೆ. ನೈಋತ್ಯ ರೈಲ್ವೆಯು ರೈಲು ಸಂಖ್ಯೆ 07302 ಮಿರಜ್-ಬೆಳಗಾವಿ ಕಾಯ್ದಿರಿಸದ ವಿಶೇಷ ಮತ್ತು ರೈಲು ಸಂಖ್ಯೆ 07304 ಮಿರಜ್-ಬೆಳಗಾವಿ ಕಾಯ್ದಿರಿಸದ ವಿಶೇಷ ರೈಲುಗಳ ಬೆಳಗಾವಿ ನಿಲ್ದಾಣಕ್ಕೆ ಆಗಮನದ ಸಮಯವನ್ನು 2025ರ ಜೂನ್ 19 ರಿಂದ ಪರಿಷ್ಕರಿಸಿದೆ. ಅದರಂತೆ, ರೈಲು ಸಂಖ್ಯೆ 07302 ಮಿರಜ್ – ಬೆಳಗಾವಿ ಕಾಯ್ದಿರಿಸದ ವಿಶೇಷ ರೈಲು ಬೆಳಗಾವಿಗೆ ಆಗಮಿಸುವ ಸಮಯವನ್ನು ಈಗಿರುವ 12:50 ಗಂಟೆಗಳಿಂದ 13:00 ಗಂಟೆಗಳಿಗೆ ಪರಿಷ್ಕರಿಸಲಾಗಿದೆ. ಅದೇ ರೀತಿ, ರೈಲು ಸಂಖ್ಯೆ 07304 ಮಿರಜ್ – ಬೆಳಗಾವಿ ಕಾಯ್ದಿರಿಸದ ವಿಶೇಷ ರೈಲಿನ ಆಗಮನದ ಸಮಯವನ್ನು ಬೆಳಗಾವಿ ನಿಲ್ದಾಣದಲ್ಲಿ 20:35 ಗಂಟೆಗಳಿಂದ 21:00 ಗಂಟೆಗಳಿಗೆ ಪರಿಷ್ಕರಿಸಲಾಗಿದೆ. ಈ ಎರಡೂ ರೈಲುಗಳ ಮಿರಜ್ ಮತ್ತು ಸಾಂಬ್ರೇ ನಿಲ್ದಾಣಗಳ ನಡುವಿನ ಸಮಯಗಳಲ್ಲಿ ಯಾವುದೇ ಬದಲಾವಣೆ ಇರುವುದಿಲ್ಲ. ಬೆಲ್ಲಂಪಲ್ಲಿಯಲ್ಲಿ ರೈಲುಗಳ ನಿಲುಗಡೆ ರದ್ದು ಸಿಕಂದರಾಬಾದ್ ವಿಭಾಗದ ಬಲ್ಹರ್ಷಾ-ಕಾಜಿಪೇಟೆ ವಿಭಾಗದಲ್ಲಿ ರೆಚ್ನಿ ರೋಡ್…
ಬೆಂಗಳೂರು: ರಾಜ್ಯದ ಪದವಿ, ಸ್ನಾತಕೋತ್ತರ ಪದವಿ ಹಾಗೂ ಡಿಪ್ಲೋಮಾ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ ಎನ್ನುವಂತೆ ಯುವನಿಧಿ ಯೋಜನೆಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ಈ ಬಗ್ಗೆ ರಾಜ್ಯ ಸರ್ಕಾರದಿಂದ ಮಾಹಿತಿ ನೀಡಲಾಗಿದ್ದು, 2024-25ನೇ ಶೈಕ್ಷಣಿಕ ಸಾಲಿನಲ್ಲಿ ವ್ಯಾಸಂಗ ಮಾಡಿ 2025ರಲ್ಲಿ ಪದವಿ/ಸ್ನಾತಕೋತ್ತರ ಪದವಿ/ ಡಿಪ್ಲೋಮಾ ಉತ್ತೀರ್ಣರಾದ ಅರ್ಹ ಅಭ್ಯರ್ಥಿಗಳು ಯುವನಿಧಿ ಯೋಜನೆಗೆ ನೋಂದಾಯಿಸಿಕೊಳ್ಳಬಹುದಾಗಿದೆ ಎಂದಿದೆ. ತಕ್ಷಣ ಸೇವಾಸಿಂಧು ವೆಬ್ಸೈಟ್ಗೆ ಭೇಟಿ ನೀಡಿ, ಯುವನಿಧಿಗೆ ಅರ್ಜಿ ಹಾಕಿ. ಹೆಚ್ಚಿನ ಮಾಹಿತಿಗೆ 1800-5999-918 ಅಥವಾ 1800 599 7154ಕ್ಕೆ ಕರೆ ಮಾಡಿ ಎಂದು ಹೇಳಿದೆ. ಕರ್ನಾಟಕ ಸರ್ಕಾರದ ಐದು ಖಾತರಿ ಯೋಜನೆಗಳಲ್ಲಿ ಒಂದಾದ ಯುವನಿಧಿ ಯೋಜನೆಯು ರಾಜ್ಯದ ನಿರುದ್ಯೋಗಿ ಯುವಕ/ಯುವತಿಯರಿಗೆ ನಿರುದ್ಯೋಗ ಭತ್ಯೆಯನ್ನು ನೀಡಿ ಸಬಲೀಕರಣಗೊಳಿಸಲು ಜಾರಿಗೊಳಿಸಿರುವ ಮಹತ್ತರ ಯೋಜನೆಯಾಗಿರುತ್ತದೆ. ಪದವೀಧರರಿಗೆ/ಸ್ನಾತಕೋತ್ತರ ಪದವೀಧರರಿಗೆ ಮಾಹೆವಾರು ರೂ.3,000/- ಮತ್ತು ಡಿಪ್ಲೋಮಾ (6 ಬೋರ್ಡ್ಗಳಿಂದ) ತೇರ್ಗಡೆಯಾದವರಿಗೆ ಮಾಹೆವಾರು ರೂ.1,500/- ನಿರುದ್ಯೋಗ ಭತ್ಯೆಯನ್ನು ನೇರ ನಗದು ವರ್ಗಾವಣೆ ಮೂಲಕ ಪಾವತಿಸಲಾಗುತ್ತಿದೆ. ಯುವನಿಧಿ ಯೋಜನೆಯು ಪ್ರಸಕ್ತ ಸಾಲಿಗೂ ಮುಂದುವರೆದ ಯೋಜನೆಯಾಗಿದ್ದು, 2024-25ನೇ ಶೈಕ್ಷಣಿಕ ಸಾಲಿನಲ್ಲಿ…
ಚಿತ್ರದುರ್ಗ: ಜಿಲ್ಲೆಯಲ್ಲಿ ಕಾರೊಂದು ಬೈಕಿಗೆ ಡಿಕ್ಕಿ ಹೊಡೆದ ಪರಿಣಾಮ, ಸ್ಥಳದಲ್ಲೇ ಬೈಕ್ ಸವಾರ ಸಾವನ್ನಪ್ಪಿರುವಂತ ಘಟನೆ ಹಿರಿಯೂರು ತಾಲ್ಲೂಕಿನ ಹಿಂಡಸಕಟ್ಟೆ ಬಳಿಯಲ್ಲಿ ನಡೆದಿದೆ. ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲ್ಲೂಕಿನ ಹಿಂಡಸಕಟ್ಟೆ ಬಳಿಯಲ್ಲಿ ಕಾರೊಂದು ಬೈಕಿಗೆ ಡಿಕ್ಕಿಯಾಗಿದೆ. ಈ ಅಪಘಾತದಲ್ಲಿ ಬೈಕ್ ಸವಾರ ಹಿಂಡಸಕಟ್ಟೆಯ ವಿಠಲಪ್ಪ(50) ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಇನ್ನೂ ಕಾರು ಮತ್ತು ಬೈಕ್ ನಡುವಿನ ಅಪಘಾತದಲ್ಲಿ ಕಾರಿನಲ್ಲಿದ್ದಂತ ಮತ್ತೊಬ್ಬ ವ್ಯಕ್ತಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಅವರನ್ನು ಹಿರಿಯೂರು ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಈ ವಿಷಯ ತಿಳಿದು ಸ್ಥಳಕ್ಕೆ ಹಿರಿಯೂರು ಗ್ರಾಮಾಂತರ ಠಾಣೆಯ ಪೊಲೀಸರು ಭೇಟಿ ನೀಡಿ, ಪರಿಶೀಲಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. https://kannadanewsnow.com/kannada/just-do-this-experiment-with-2-cloves-even-the-poorest-will-become-rich/ https://kannadanewsnow.com/kannada/sadananda-murder-case-in-sagar-why-did-the-police-release-the-murder-accused/
ಲವಂಗದಿಂದ ಈ ಪರಿಹಾರವನ್ನು ಮಾಡಿಕೊಳ್ಳಿ ಮೂರು ಶುಕ್ರ ವಾರ ಗಳ ಕಾಲ ಈ ಪರಿಹಾರವನ್ನು ನೀವು ಪಾಲಿಸಿಕೊಂಡು ಬಂದಿದೆ ಅದರೆ ನಿಮ್ಮ ಜೀವನದಲ್ಲಿ ಎದುರಾಗುತ್ತ ಇರುವಂತಹ ಹಣಕಾಸಿಗೆ ಸಂಬಂಧಪಟ್ಟ ವಿಚಾರಗಳು ಬೇಗ ಪರಿಹರವಾಗುತ್ತದೆ. ಪಂಡಿತ್ ವಿದ್ಯಾಧರ್ ನಕ್ಷತ್ರಿ ಪ್ರಧಾನ ಅರ್ಚಕರು ಹಾಗೂ ಮಾಂತ್ರಿಕರು 9686268564 ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತುಪ್ರಶ್ನೆಗಳಿಗೆ ಉತ್ತರಿಸಬಹುದು ಏಷ್ಟೇ ಪೂಜೆ ಪ್ರಯತ್ನಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..?ನಿಮ್ಮ ಯಾವುದೇ ಘೋರ ನಿಗೂಢ ಗುಪ್ತಸಮಸ್ಯೆಗಳಿಗೆ 2 ದಿನಗಳಲ್ಲಿ ಪರಿಹಾರ ಶತಸಿದ್ಧ, ದಿಗ್ಭಂಧನ, ಸ್ತಂಭನ, ವುಚ್ಛಾಟನೆಯಂತಹ ಸಮಸ್ಯೆಗಳಿಗೆ ಶ್ರೀ ಕ್ಷೇತ್ರ ಕಟೀಲು ರಕ್ತೇಶ್ವರೀ ದೇವಿಯ ವಿಶೇಷ ಪೂಜಾದೈವಿಕ ವಿಧಿವಿಧಾನದಿಂದ ಪರಿಹಾರ ತಿಳಿಸುತ್ತಾರೆ ಶ್ರೀ ವಿದ್ಯಾಧರ್ ನಕ್ಷತ್ರಿ ಪ್ರಧಾನ್ ತಾಂತ್ರಿಕ್ 9686268564 ಅದು ಹೇಗೆ ಅಂತೀರಾ ಈ ಲವಂಗಕ್ಕೆ ಬಹಳ ವಿಶೇಷವಾದ ಶಕ್ತಿ ಇದೆ ಹಾಗೂ ದುಷ್ಟಶಕ್ತಿಯನ್ನು ದೂರ ಮಾಡುವಂತಹ…
ಬೆಂಗಳೂರು: ಬೆಂಗಳೂರಿನಲ್ಲಿ ಕೆಂಗೇರಿಯಲ್ಲಿ ತನ್ನ 12 ನೇ ಡೀಲರ್ಶಿಪ್ ಅನ್ನು ತೆರೆಯುವ ಮೂಲಕ ಜಾವಾ ಯೆಜ್ಡಿ ಮೋಟಾರ್ಸೈಕಲ್ಸ್ ತನ್ನ ಆಕ್ರಮಣಕಾರಿ ವಿಸ್ತರಣೆಯನ್ನು ಮುಂದುವರೆಸಿದೆ. ಹೊಸ ಡೀಲರ್ಶಿಪ್, ಐಕಾನಿಕ್ ಮೋಟಾರ್ಸ್, ಪ್ರೀಮಿಯಂ ಹೆರಿಟೇಜ್ ಬ್ರ್ಯಾಂಡ್ಗಳನ್ನು ನಗರದ ಪಶ್ಚಿಮ ಉಪನಗರಗಳಿಗೆ ಹತ್ತಿರ ತರುತ್ತದೆ ಮತ್ತು ನಗರದಲ್ಲಿ ಜಾವಾ ಮತ್ತು ಯೆಜ್ಡಿ ಉತ್ಸಾಹಿಗಳ ಬಲವಾದ ಸಮುದಾಯವನ್ನು ಸೇರಿಸಲು ಸಹಾಯ ಮಾಡುತ್ತದೆ. ಐಕಾನಿಕ್ ಮೋಟಾರ್ಸ್ ಜೊತೆಗೂಡಿ, ಕಂಪನಿಯು ಕರ್ನಾಟಕದಲ್ಲಿ 22 ಡೀಲರ್ಗಳನ್ನು ಹೊಂದಿದೆ, ಇದು ಬ್ರ್ಯಾಂಡ್ಗಳ ವೇಗವಾಗಿ ಬೆಳೆಯುತ್ತಿರುವ ಕೆಲವು ಮಾರುಕಟ್ಟೆಗಳಿಗೆ ನೆಲೆಯಾಗಿದೆ, ಇದರಲ್ಲಿ ಬೆಂಗಳೂರು ಸೇರಿದಂತೆ ಜಾವಾ ಮತ್ತು ಯೆಜ್ಡಿಯ ಮೋಟಾರ್ಸೈಕಲ್ಗಳ ಮೇಲಿನ ಉತ್ಕಟ ಬ್ರಾಂಡ್ ಪ್ರೀತಿಯ ಪರಂಪರೆಯನ್ನು ಹೊಂದಿದೆ. ಇದು ತನ್ನ ಡೀಲರ್ ನೆಟ್ವರ್ಕ್ ಅನ್ನು ವಿಸ್ತರಿಸುತ್ತಿದ್ದಂತೆ, ಜಾವಾ ಯೆಜ್ಡಿ ಮೋಟಾರ್ಸೈಕಲ್ಸ್ ಬೆಂಗಳೂರಿನ ಗ್ರಾಹಕರಿಗೆ ಪ್ರೀಮಿಯಂ ಮೋಟಾರ್ಸೈಕ್ಲಿಂಗ್ ಅನುಭವವನ್ನು ನೀಡಲು ಸಮರ್ಪಿಸಲಾಗಿದೆ. ಈ ಸಂದರ್ಭದಲ್ಲಿ ಮಾತನಾಡಿದ ಕ್ಲಾಸಿಕ್ ಲೆಜೆಂಡ್ಸ್ನ ಸಿಬಿಒ ಶರದ್ ಅಗರ್ವಾಲ್, “ನಮ್ಮ ಬ್ರ್ಯಾಂಡ್ಗಳ ಐತಿಹಾಸಿಕ ಪರಂಪರೆ ಮತ್ತು ಜಾವಾ ಯೆಜ್ಡಿ ಮೋಟಾರ್ಸೈಕಲ್…













