Author: kannadanewsnow09

ಬೆಂಗಳೂರು: ಮಲೆನಾಡಿನ ಭಾಗದಲ್ಲಿ ಹರಡುತ್ತಿರುವಂತ ಮಂಗನ ಕಾಯಿಲೆ ನಿಯಂತ್ರಣಕ್ಕೆ ಮುಂದಿನ ವರ್ಷ ಹೊಸ ಲಸಿಕೆ ಬರುವ ನಿರೀಕ್ಷೆಯಿದೆ ಎಂಬುದಾಗಿ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ. ಗುರುವಾರದಂದು ವಿಧಾನಸಭೆಯಲ್ಲಿ ಬಿಜೆಪಿಯ ಅರಗ ಜ್ಞಾನೇಂದ್ರ ಕೇಳಿದಂತ ಪ್ರಶ್ನೆಗೆ ಉತ್ತರಿಸಿದಂತ ಅವರು ಪುಣೆ ಪ್ರಯೋಗಾಲಯ 1989ರಲ್ಲಿ ಸಂಶೋಧಿಸಿದ್ದ ಲಸಿಕೆಯ ಕ್ಷಮತೆ ತಗ್ಗಿದೆ ಎಂಬುದಾಗಿ ತಜ್ಞರು ಖಚಿತ ಪಡಿಸಿದ್ದಾರೆ. ಹೊಸ ಲಸಿಕೆಗಾಗಿ ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ ಜೊತೆಗೆ ಚರ್ಚಿಸಿ ಒಪ್ಪಿಸಲಾಗಿದೆ. ಹೈದರಾಬಾದ್ ಪ್ರಯೋಗಾಲಯದಲ್ಲಿ ಸಂಶೋಧನೆ ಪ್ರಗತಿಯಲ್ಲಿದೆ ಎಂದರು. ಮಂಗನ ಕಾಯಿಲೆ ಅಂದರೆ ಕ್ಯಾಸನೂರು ಅರಣ್ಯ ರೋಗಕ್ಕೆ ಮುಂದಿನ ವರ್ಷ ಹೊಸ ಲಸಿಕೆ ಬರುವ ನಿರೀಕ್ಷೆಯಿದೆ. ಬೇಸಿಗೆಯಲ್ಲಿ ಈ ರೋಗ ಹೆಚ್ಚು ಬಾಧಿಸುವ ಸಾಧ್ಯತೆಗಳಿರುವ ಕಾರಣ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಹೇಳಿದರು. https://kannadanewsnow.com/kannada/home-minister-g-parameshwara-warns-of-suo-motu-case-against-those-who-create-riots-in-the-state/

Read More

ಬೆಂಗಳೂರು: ರಾಜ್ಯದಲ್ಲಿ ಸಮಾಜದ ಸ್ವಾಸ್ಥ್ಯ ಹಾಳು ಮಾಡುವ ಉದ್ದೇಶದಿಂದ ಜಾಲತಾಣಗಳಲ್ಲಿ ಸುಳ್ಳು ಸುದ್ದಿ ಹಬ್ಬಿಸಿ ಗಲಭೆ ಸೃಷ್ಟಿಸುವವರ ವಿರುದ್ಧ ಸ್ವಯಂ ಪ್ರೇರಿತ ಕೇಸ್ ದಾಖಲಿಸಲಾಗುತ್ತದೆ ಎಂಬುದಾಗಿ ಗೃಹ ಸಚಿವ ಡಾ.ಜಿ ಪರಮೇಶ್ವರ್ ಎಚ್ಚರಿಕೆ ನೀಡಿದ್ದಾರೆ. ಗುರುವಾರದಂದು ವಿಧಾನ ಪರಿಷತ್ ಸದಸ್ಯರಾದ ಎಸ್. ಎಲ್.ಭೋಜೇಗೌಡ ಅವರು ಇಂದು ಪ್ರಶ್ನೋತ್ತರ ಕಲಾಪ ವೇಳೆ ಪೊಲೀಸ್ ಇಲಾಖೆಗೆ ಸಂಬಂಧಿಸಿದಂತೆ ಕೇಳಿದ ವಿವಿಧ ಪ್ರಶ್ನೆಗಳಿಗೆ ಮಾನ್ಯ ಗೃಹ ಸಚಿವರಾದ ಡಾ. ಜಿ. ಪರಮೇಶ್ವರ ಅವರು ಉತ್ತರಿಸಿರುವ ಪ್ರಮುಖ ಅಂಶಗಳು:- ರಾಜ್ಯಾದ್ಯಂತ 136 ವ್ಹಿಲಿಂಗ್ ಪ್ರಕರಣಗಳನ್ನು ದಾಖಲಿಸಿ, ಈ ಪ್ರಕರಣಗಳಲ್ಲಿ 128 ಜನರನ್ನು ಬಂಧಿಸಿ ಕಾನೂನು ಕ್ರಮ ಕೈಗೊಳ್ಳಲಾಗಿದೆ. 2024ರಲ್ಲಿ 266 ಪ್ರಕರಣಗಳಲ್ಲಿ 179 ಜನರನ್ನು ಬಂಧಿಸಲಾಗಿದೆ. 2025ರಲ್ಲಿ ಈವರೆಗೆ 47 ಪ್ರಕರಣಗಳಲ್ಲಿ 30 ಜನರನ್ನು ಬಂಧಿಸಲಾಗಿದೆ. ಮಾರಕಸ್ತ್ರಗಳನ್ನು ಹಿಡಿದು ಪುಂಡಾಟಿಕೆ ನಡೆಸಿದ ಕಿಡಿಗೇಡಿಗಳ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗಿದೆ. 2023ರಲ್ಲಿ 68 ಪ್ರಕರಣ ದಾಖಲಿಸಿ, 147 ಆರೋಪಿಗಳನ್ನು ಬಂಧಿಸಲಾಗಿದೆ. 2024ರಲ್ಲಿ 66 ಪ್ರಕರಣಗಳಲ್ಲಿ 187 ಆರೋಪಿಗಳು ,…

Read More

ಸ್ಯಾಂಟಿಯಾಗೊ: ಉತ್ತರ ಚಿಲಿಯಲ್ಲಿ ಗುರುವಾರ 6.1 ತೀವ್ರತೆಯ ಭೂಕಂಪ ಸಂಭವಿಸಿದೆ. ಹೀಗಾಗಿ ಚಿಲಿಯಲ್ಲಿ ಜನರು ಬೆಚ್ಚಿ ಬಿದ್ದಿದ್ದಾರೆ. ಯುನೈಟೆಡ್ ಸ್ಟೇಟ್ಸ್ ಜಿಯೋಲಾಜಿಕಲ್ ಸರ್ವೆ (ಯುಎಸ್ಜಿಎಸ್) ಪ್ರಕಾರ, ಭೂಕಂಪದ ಕೇಂದ್ರಬಿಂದು ಬೊಲಿವಿಯಾ ಗಡಿಯ ಸಮೀಪವಿರುವ ಸಣ್ಣ ಪಟ್ಟಣವಾದ ಸ್ಯಾನ್ ಪೆಡ್ರೊ ಡಿ ಅಟಕಾಮಾದ ನೈಋತ್ಯಕ್ಕೆ 104 ಕಿಲೋಮೀಟರ್ ದೂರದಲ್ಲಿದೆ. ಅಧಿಕಾರಿಗಳ ಪ್ರಕಾರ, ಯಾವುದೇ ಹಾನಿ ಅಥವಾ ಸಾವುನೋವುಗಳ ಬಗ್ಗೆ ತಕ್ಷಣದ ವರದಿಗಳು ಹೊರಬಂದಿಲ್ಲ. ಭೂಕಂಪದ ನಂತರ ಯಾವುದೇ ಹಾನಿ, ಗಾಯಗಳು ಅಥವಾ ಸುನಾಮಿ ಎಚ್ಚರಿಕೆಗಳ ಬಗ್ಗೆ ಅಧಿಕಾರಿಗಳು ಪರಿಸ್ಥಿತಿಯನ್ನು ನಿರ್ಣಯಿಸುತ್ತಿದ್ದಾರೆ. ಸ್ಥಳೀಯ ಅಧಿಕಾರಿಗಳು ಮತ್ತು ತುರ್ತು ಸೇವೆಗಳು ಯಾವುದೇ ಭೂಕಂಪನಗಳು ಅಥವಾ ಸಂಭಾವ್ಯ ಪರಿಣಾಮಕ್ಕಾಗಿ ಪರಿಸ್ಥಿತಿಯನ್ನು ಮೇಲ್ವಿಚಾರಣೆ ಮಾಡುತ್ತಿವೆ. ಗಮನಾರ್ಹವಾಗಿ, ಪೆಸಿಫಿಕ್ ರಿಂಗ್ ಆಫ್ ಫೈರ್ ಉದ್ದಕ್ಕೂ ಇರುವ ಚಿಲಿ ಹೆಚ್ಚು ಭೂಕಂಪನಾತ್ಮಕವಾಗಿ ಸಕ್ರಿಯವಾಗಿದೆ ಮತ್ತು ಆಗಾಗ್ಗೆ ಭೂಕಂಪಗಳನ್ನು ಅನುಭವಿಸುತ್ತದೆ. ಅಧಿಕಾರಿಗಳ ಪ್ರಕಾರ, ಸ್ಥಳೀಯ ಸಮಯ ಮಧ್ಯಾಹ್ನ 12.21 ಕ್ಕೆ ಸಂಭವಿಸಿದ ಭೂಕಂಪವು 93 ಕಿಲೋಮೀಟರ್ ಆಳದಲ್ಲಿತ್ತು. ಚಿಲಿಯ ರಾಷ್ಟ್ರೀಯ ವಿಪತ್ತು ಸಂಸ್ಥೆ…

Read More

ಬೆಂಗಳೂರು: ರಾಜ್ಯ ಹೆದ್ದಾರಿಗಳು ಹಾದು ಹೋಗುವ ನಗರ, ಪಟ್ಟಣ, ಗ್ರಾಮಗಳ ಪರಿಮಿತಿ ಹಾಗೂ ಇತರೆ ಆಕ್ಷೇಪಿತ ಪ್ರದೇಶಗಳಿಗೆ ಅನ್ವಯಿಸುವಂತೆ ನಿಗದಿಪಡಿಸಿದ್ದ ಕಟ್ಟಡ ರೇಖೆಯನ್ನು ಜಿಲ್ಲಾ ಮುಖ್ಯ ರಸ್ತೆಗಳಿಗೂ ಅನ್ವಯಿಸುವಂತೆ ಸರ್ಕಾರ ಪರಿಷ್ಕೃತ ಆದೇಶ ಹೊರಡಿಸಿದೆ. ಈ ಕುರಿತು ಲೋಕೋಪಯೋಗಿ ಇಲಾಖೆಯ ಸರ್ಕಾರದ ಉಪ ಕಾರ್ಯದರ್ಶಿಯವರು ನಡವಳಿಯನ್ನು ಹೊರಡಿಸಿದ್ದು, ಲೋಕೋಪಯೋಗಿ ಇಲಾಖೆ ವ್ಯಾಪ್ತಿಯಲ್ಲಿರುವ ರಾಜ್ಯ ಹೆದ್ದಾರಿಗಳಲ್ಲಿ ಬರುವ ಸಿಟಿ ಕಾರ್ಪೊರೇಷನ್, ಸಿಟಿ ಮುನಿಸಿಪಲ್ ಕೌನ್ಸಿಲ್, ಟೌನ್ ಮುನಿಸಿಪಲ್ ಕೌನ್ಸಿಲ್, ಟೌನ್ ಪಂಚಾಯತ್ ಮತ್ತು ಗ್ರಾಮ ಪಂಚಾಯತ್ ಪರಿಮಿತಿಗಳಲ್ಲಿ ರಾಜ್ಯ ಹೆದ್ದಾರಿಯ ದಾಖಲಿತ ರಸ್ತೆ ಭೂಗಡಿಯ ಅಂಚಿನಿಂದ ಕಟ್ಟಡಗಳ ರೇಖೆಯ ಅಂತರವನ್ನು ಮೇಲೆ ಕ್ರಮ ಸಂಖ್ಯೆ (1)ರಲ್ಲಿ ಓದಲಾದ ಆದೇಶದಲ್ಲಿ ನಿಗಧಿಗೊಳಿಸಿ ಆದೇಶಿಸಲಾಗಿತ್ತು. ಸದರಿ ಆದೇಶವು ಇದುವರೆವಿಗೂ ಚಾಲ್ತಿಯಲ್ಲಿರುತ್ತದೆ. ಹಾಗೂ ಸದರಿ ಆದೇಶದಲ್ಲಿ ತಿಳಿಸಿರುವಂತೆ ಕಟ್ಟಡ ರೇಖೆಗಳನ್ನು ಗುರುತಿಸುವ ಬಗ್ಗೆ ಹೆಚ್ಚುವರಿ ಸ್ಪಷ್ಟನೆಯನ್ನು ಮೇಲೆ ಕ್ರಮ ಸಂಖ್ಯೆ (2)ರಲ್ಲಿ ಓದಲಾದ ಸುತ್ತೋಲೆಯಲ್ಲಿ ನೀಡಲಾಗಿರುತ್ತದೆ ಎಂದಿದ್ದಾರೆ. ದಿನಾಂಕ:18.10.2004 ರ ಆದೇಶವು ಲೋಕೋಪಯೋಗಿ ಇಲಾಖೆ ವ್ಯಾಪ್ತಿಯ ರಾಜ್ಯ…

Read More

ನವದೆಹಲಿ: ನಿಮ್ಮ ಇಪಿಎಫ್ ಖಾತೆಯಲ್ಲಿ ನಿಮ್ಮ ವೈಯಕ್ತಿಕ ವಿವರಗಳನ್ನು ನವೀಕರಿಸುವುದು ಹೆಚ್ಚು ಸುಲಭವಾಗಿದೆ. ನೌಕರರ ಭವಿಷ್ಯ ನಿಧಿ ಸಂಸ್ಥೆ (ಇಪಿಎಫ್ಒ) ಈಗ ಆಧಾರ್-ಪರಿಶೀಲಿಸಿದ ಯುನಿವರ್ಸಲ್ ಅಕೌಂಟ್ ನಂಬರ್ (ಯುಎಎನ್) ಹೊಂದಿರುವ ಸದಸ್ಯರಿಗೆ ಯಾವುದೇ ದಾಖಲೆಗಳನ್ನು ಅಪ್ಲೋಡ್ ಮಾಡದೆಯೇ ತಮ್ಮ ಪ್ರೊಫೈಲ್ ಅನ್ನು ನವೀಕರಿಸಲು ಅನುಮತಿಸುತ್ತದೆ. ನಿಮ್ಮ ಯುಎಎನ್ ಈಗಾಗಲೇ ಆಧಾರ್ ಗೆ ಲಿಂಕ್ ಆಗಿದ್ದರೆ, ನೀವು ಯಾವುದೇ ದಾಖಲೆಗಳನ್ನು ಸಲ್ಲಿಸದೆ ಹೆಸರು, ಹುಟ್ಟಿದ ದಿನಾಂಕ, ಲಿಂಗ, ರಾಷ್ಟ್ರೀಯತೆ, ಪೋಷಕರ ಹೆಸರುಗಳು, ವೈವಾಹಿಕ ಸ್ಥಿತಿ, ಸಂಗಾತಿಯ ಹೆಸರು, ಸೇರಿದ ದಿನಾಂಕ ಮತ್ತು ಕೆಲಸ ಬಿಟ್ಟ ದಿನಾಂಕದಂತಹ ವೈಯಕ್ತಿಕ ವಿವರಗಳನ್ನು ನವೀಕರಿಸಬಹುದು. ಈ ಮೊದಲು, ಸದಸ್ಯರು ಈ ವಿವರಗಳನ್ನು ಬದಲಾಯಿಸಲು ತಮ್ಮ ಉದ್ಯೋಗದಾತರಿಂದ ಅನುಮೋದನೆ ಪಡೆಯಬೇಕಾಗಿತ್ತು. ಇದಲ್ಲದೆ, ಮೇಲೆ ತಿಳಿಸಿದ ವಿವರಗಳನ್ನು ಬದಲಾಯಿಸುವುದು ಸಮಯ ತೆಗೆದುಕೊಳ್ಳುತ್ತದೆ. ಅಲ್ಲದೆ, ಈ ಹಿಂದೆ, ಉದ್ಯೋಗದಾತರ ಪರಿಶೀಲನೆಯಿಂದಾಗಿ ಬದಲಾವಣೆಗಳು 28 ದಿನಗಳವರೆಗೆ ತೆಗೆದುಕೊಳ್ಳುತ್ತಿದ್ದವು. ಯುಎಎನ್ ಅನ್ನು ಅಕ್ಟೋಬರ್ 1, 2017 ಕ್ಕಿಂತ ಮೊದಲು ನೀಡಿದ್ದರೆ, ಪ್ರೊಫೈಲ್ನಲ್ಲಿ ಯಾವುದೇ ನವೀಕರಣವು…

Read More

ಬೆಂಗಳೂರು: ರಾಜ್ಯ ಸರ್ಕಾರದಿಂದ 2025-26ನೇ ಸಾಲಿನಲ್ಲಿ ಕೌನ್ಸಿಲಿಂಗ್ ಮೂಲಕ ಪಂಚಾಯತ್ ಅಭಿವೃದ್ಧಿ ಅಧಿಕಾರಿ, ಗ್ರಾಮ ಪಂಚಾಯ್ತಿ ಕಾರ್ಯದರ್ಶಿ ಮತ್ತು ದ್ವಿತೀಯ ದರ್ಜೆ ಲೆಕ್ಕ ಸಹಾಯಕರನ್ನು ವರ್ಗಾವಣೆ ಮಾಡೋದಕ್ಕೆ ವೇಳಾಪಟ್ಟಿಯನ್ನು ಪ್ರಕಟಿಸಲಾಗಿದೆ. ಈ ಕುರಿತಂತೆ ಕರ್ನಾಟಕ ಪಂಚಾಯತ್ ರಾಜ್ ಆಯುಕ್ತಾಲಯ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ನಿರ್ದೇಶಕರು ರಾಜ್ಯದ ಎಲ್ಲಾ ಜಿಲ್ಲಾ ಪಂಚಾಯ್ತಿಗಳ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. 2024-25 ನೇ ಸಾಲಿನ ಆಯವ್ಯಯದಲ್ಲಿ ಸ್ಥಳೀಯ ಆಡಳಿತ ಸಂಸ್ಥೆಗಳಲ್ಲಿ ತ್ವರಿತ ಸೇವಾ ಪೂರೈಕೆ, ಭ್ರಷ್ಟಾಚಾರ ನಿಯಂತ್ರಣ ಮತ್ತು ದಕ್ಷತೆಯನ್ನು ಹೆಚ್ಚಿಸಲು 2024-25 ನೇ ಸಾಲಿನಿಂದ ಪಂಚಾಯತಿ ಅಭಿವೃದ್ಧಿ ಅಧಿಕಾರಿ, ಗ್ರಾಮ ಪಂಚಾಯತಿ ಕಾರ್ಯದರ್ಶಿ ಗ್ರೇಡ್-1 ಮತ್ತು 2 ಹಾಗೂ ದ್ವಿತೀಯ ದರ್ಜೆ ಲೆಕ್ಕ ಸಹಾಯಕರ ವರ್ಗಾವಣೆಯನ್ನು ಕೌನ್ಸಿಲಿಂಗ್ ಮೂಲಕ ಮಾಡಲಾಗುವುದು ಎಂದು ಘೋಷಿಸಲಾಗಿರುತ್ತದೆ ಹಾಗೂ ವರ್ಗಾವಣೆಯನ್ನು ಕೌನ್ಸಿಲಿಂಗ್ ಮೂಲಕ ಮಾಡಲು ದಿನಾಂಕ:25.06.2024 ರಂದು ಆದೇಶವನ್ನು ಹೊರಡಿಸಲಾಗಿದೆ. ಈ ಸಂಬಂಧ ತಂತ್ರಾಂಶ ಅಭಿವೃದ್ಧಿಪಡಿಸಿ https://rdprtransfer.karnataka.gov.in ವೆಬ್‌ಸೈಟ್‌ನಲ್ಲಿ ಆರೋಹಿಸಲಾಗಿರುತ್ತದೆ. ಉಲ್ಲೇಖ (2) ಮತ್ತು…

Read More

ಬೆಂಗಳೂರು: ರಾಜ್ಯದಲ್ಲಿ ಸದ್ಯಕ್ಕೆ ಇ-ಖಾತಾದ್ದೇ ಸದ್ದು. ಅದರಲ್ಲೂ ನಮ್ಮದು ಎ-ಖಾತಾ, ನನ್ನದು ಬಿ-ಖಾತಾ ಎಂಬುದಾಗಿ ಮಾತುಗಳು ಕೇಳಿ ಬರುತ್ತಿದೆ. ಸಾರ್ವಜನಿಕರಾದಂತ ನಿಮಗೆ ಏನಿದು ಎ-ಖಾತಾ ಅಂದ್ರೆ? ಏನಿದು ಬಿ-ಖಾತಾ ಅಂದ್ರೆ ಅನ್ನೋದು ಕೆಲವರಿಗೆ ಗೊತ್ತಿದ್ದರೇ, ಮತ್ತೆ ಕೆಲವರಿಗೆ ಗೊತ್ತಿಲ್ಲ. ಅವರಿಗೆ ಮಾಹಿತಿಗಾಗಿ ಏನಿದರು ಎರಡರ ನಡುವಿನ ವ್ಯತ್ಯಾಸ ಅಂತ ಮುಂದೆ ಓದಿ. ಸಾರ್ವಜನಿಕರಿಗೆ ಸರಳವಾಗಿ ಎ, ಬಿ-ಖಾತಾ ನಡುವಿನ ವ್ಯತ್ಯಾಸವನ್ನು ಹೇಳಬಹುದಾದರೇ ಎ-ಖಾತಾ ಅಂದ್ರೆ ಡಿಸಿ ಕನ್ವರ್ಷನ್ ಲೇಔಟ್ ಆದರೇ, ಬಿ-ಖಾತಾ ಅಂದ್ರೆ ಕಂದಾಯ ಭೂಮಿ, ತಹಶೀಲ್ದಾರ್ ಲೇಔಟ್ ಆಗಿದೆ. ಎ-ಖಾತಾ ಮಾಲೀಕರಿಗೆ ಬ್ಯಾಂಕ್ ಮೂಲಕ ಶೀಘ್ರವೇ ಸಾಲ ಸೌಲಭ್ಯಗಳು ದೊರೆತದರೇ, ಬಿ-ಖಾತಾ ನಿವೇಶನಗಳಿಗೆ ಇದು ಸ್ವಲ್ಪ ಕಷ್ಟವೇ ಎಂದು ಹೇಳಲಾಗುತ್ತಿದೆ. ಆದರೂ ಬ್ಯಾಂಕ್ ಮ್ಯಾನೇಜರ್ ಮೇಲೆ ಇದು ನಿರ್ಧಾರವಾಗಿದೆ ಎಂಬುದಾಗಿಯೂ ತಿಳಿದು ಬಂದಿದೆ. ಒಟ್ಟಾರೆಯಾಗಿ ಎ-ಖಾತ ನಿವೇಶನ ಅಂದ್ರೆ ಅದು ಡಿಸಿ ಕನ್ವರ್ಷನ್ ಲೇಔಟ್. ಸರಳವಾಗಿ ಹೇಳುವುದಾದರೆ, ಆಸ್ತಿಯು ಸಂಪೂರ್ಣವಾಗಿ ಕಾನೂನುಬದ್ಧವಾಗಿದ್ದರೆ, ಅವುಗಳನ್ನು ಎ ಖಾತಾ ಎಂದು ವರ್ಗೀಕರಿಸಲಾಗುತ್ತದೆ. ಆಸ್ತಿ…

Read More

ಬೆಂಗಳೂರು: ರಾಜ್ಯದ ಶಾಲಾ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ ಎನ್ನುವಂತೆ ಈ ಬಾರಿ ಬೇಸಿಗೆ ರಜೆಯಲ್ಲೂ ಬಿಸಿಯೂಟ ನೀಡುವುದಕ್ಕೆ ಸರ್ಕಾರ ಅನುದಾನ ಬಿಡುಗಡೆ ಮಾಡಿ ಆದೇಶ ಹೊರಡಿಸಿದೆ. ಈ ಕುರಿತಂತೆ ಶಾಲಾ ಶಿಕ್ಷಣ ಇಲಾಖೆಯ ಆಯುಕ್ತರು ಆದೇಶ ಹೊರಡಿಸಿದ್ದು,  2024-25 ನೇ ಸಾಲಿನಲ್ಲಿ ಕೇಂದ್ರ ಪುರಸ್ಕೃತ ಯೋಜನೆಯಾದ ಪಿ.ಎಂ.ಪೋಷಣ್-ಮಧ್ಯಾಹ್ನ ಉಪಹಾರ ಯೋಜನೆಯಡಿ PAB ಅನುಮೋದನೆಯಂತೆ ಏಪ್ರಿಲ್-ಮೇ 2024ರ 41 ದಿನಗಳ ಬೇಸಿಗೆ ರಜೆ ಅವಧಿಯಲ್ಲಿ ಬರಪೀಡಿತ ಎಂದು ಗುರುತಿಸಲಾಗಿರುವ ಒಟ್ಟು 31 ಜಿಲ್ಲೆಗಳಲ್ಲಿನ 223 ತಾಲ್ಲೂಕುಗಳಲ್ಲಿ 1-8 ನೇ ತರಗತಿಯ ಮಕ್ಕಳಿಗೆ ಮಧ್ಯಾಹ್ನ ಬಿಸಿಯೂಟ ಸಂಬಂಧಿಸಿದಂತೆ ಕೇಂದ್ರದ ಪಾಲಿನ ಅನುದಾನ ರೂ.2958.87 ಲಕ್ಷಗಳು ಸಂವಾದಿ ರಾಜ್ಯದ ಪಾಲಿನ ಅನುದಾನ ರೂ 1742.74 ಲಕ್ಷಗಳು ಹಾಗೂ ರಾಜ್ಯದ ಹೆಚ್ಚುವರಿ ಅನುದಾನ (Top-up) ರೂ.2692.17 ಲಕ್ಷಗಳು ಸೇರಿ ಒಟ್ಟಾರೆಯಾಗಿ ರೂ.7393.78 ಲಕ್ಷಗಳ ಅನುದಾನ ಬಿಡುಗಡೆಗೊಳಿಸಿ ಆದೇಶ ಹೊರಡಿಸಲಾಗಿರುತ್ತದೆ ಎಂದಿದ್ದಾರೆ. ಉಲ್ಲೇಖಿತ (3) ರ ಆದೇಶದಂತೆ ಜಿಲ್ಲಾ ಮತ್ತು ತಾಲ್ಲೂಕುವಾರು ಈಗಾಗಲೇ ಸಲ್ಲಿಸಿರುವ ಅನುದಾನ ಬೇಡಿಕೆ ಮತ್ತು…

Read More

ಬೆಂಗಳೂರು: ರಾಜ್ಯ ಸರ್ಕಾರದಿಂದ ಪಂಚಾಯ್ತಿ ಅಭಿವೃದ್ಧಿ ಅಧಿಕಾರಿಗಳನ್ನು ಕೌನ್ಸಿಲಿಂಗ್ ಮೂಲಕ ವರ್ಗಾವಣೆ ಮಾಡುವ ಸಂಬಂಧ ಮಹತ್ವದ ಆದೇಶವನ್ನು ಹೊರಡಿಸಲಾಗಿದೆ. ಈ ಮೂಲಕ ಪಿಡಿಓಗಳಿಗೆ ಗುಡ್ ನ್ಯೂಸ್ ನೀಡಲಾಗಿದೆ. ಈ ಕುರಿತಂತೆ ಕರ್ನಾಟಕ ಪಂಚಾಯತ್ ರಾಜ್ ಆಯುಕ್ತಾಲಯ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ನಿರ್ದೇಶಕರು ರಾಜ್ಯದ ಎಲ್ಲಾ ಜಿಲ್ಲಾ ಪಂಚಾಯ್ತಿಗಳ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. 2024-25 ನೇ ಸಾಲಿನ ಆಯವ್ಯಯದಲ್ಲಿ ಸ್ಥಳೀಯ ಆಡಳಿತ ಸಂಸ್ಥೆಗಳಲ್ಲಿ ತ್ವರಿತ ಸೇವಾ ಪೂರೈಕೆ, ಭ್ರಷ್ಟಾಚಾರ ನಿಯಂತ್ರಣ ಮತ್ತು ದಕ್ಷತೆಯನ್ನು ಹೆಚ್ಚಿಸಲು 2024-25 ನೇ ಸಾಲಿನಿಂದ ಪಂಚಾಯತಿ ಅಭಿವೃದ್ಧಿ ಅಧಿಕಾರಿ, ಗ್ರಾಮ ಪಂಚಾಯತಿ ಕಾರ್ಯದರ್ಶಿ ಗ್ರೇಡ್-1 ಮತ್ತು 2 ಹಾಗೂ ದ್ವಿತೀಯ ದರ್ಜೆ ಲೆಕ್ಕ ಸಹಾಯಕರ ವರ್ಗಾವಣೆಯನ್ನು ಕೌನ್ಸಿಲಿಂಗ್ ಮೂಲಕ ಮಾಡಲಾಗುವುದು ಎಂದು ಘೋಷಿಸಲಾಗಿರುತ್ತದೆ ಹಾಗೂ ವರ್ಗಾವಣೆಯನ್ನು ಕೌನ್ಸಿಲಿಂಗ್ ಮೂಲಕ ಮಾಡಲು ದಿನಾಂಕ:25.06.2024 ರಂದು ಆದೇಶವನ್ನು ಹೊರಡಿಸಲಾಗಿದೆ. ಈ ಸಂಬಂಧ ತಂತ್ರಾಂಶ ಅಭಿವೃದ್ಧಿಪಡಿಸಿ https://rdprtransfer.karnataka.gov.in ವೆಬ್‌ಸೈಟ್‌ನಲ್ಲಿ ಆರೋಹಿಸಲಾಗಿರುತ್ತದೆ. ಉಲ್ಲೇಖ (2) ಮತ್ತು (3) ರನ್ವಯ…

Read More

ಬೆಂಗಳೂರು: ಈಗಾಗಲೇ ವಿಧಾನ ಮಂಡಲ ಬಜೆಟ್ ಅಧಿವೇಶನ ಆರಂಭವಾಗಿದ್ದು, ಮಾರ್ಚ್ 7ರ ಇಂದು ಸಿಎಂ ಸಿದ್ದರಾಮಯ್ಯ ಅವರು ದಾಖಲೆಯ 16ನೇ ರಾಜ್ಯ ಬಜೆಟ್ ( Karnataka Budget 2025-26 ) ಮಂಡಿಸಲಿದ್ದಾರೆ. ಮಾರ್ಚ್.7ರ ಇಂದು ಬೆಳಿಗ್ಗೆ 10.15ಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ( Chief Minister Siddaramaiah ) ದಾಖಲೆಯ 16ನೇ ಬಜೆಟ್‌ ಅನ್ನು ವಿಧಾನಸಭೆಯಲ್ಲಿ ಮಂಡನೆ ಮಾಡಿಸಲಿದ್ದಾರೆ. ಗ್ಯಾರಂಟಿಗಳ ಒತ್ತಡದ ನಡುವೆ ಯಾವ ರೀತಿಯ ಬಜೆಟ್‌ ಮಂಡಿಸಲಿದ್ದಾರೆ? ಯಾವ ಹೊಸ ಕಾರ್ಯಕ್ರಮಗಳನ್ನು ನೀಡಲಿದ್ದಾರೆ ಎಂಬ ಬಗ್ಗೆ ತೀವ್ರ ಕುತೂಹಲ ಹುಟ್ಟಿಕೊಂಡಿವೆ. ರಾಜ್ಯದಲ್ಲಿ ಜುಲೈ 2023ರಲ್ಲಿ 14ನೇ ಬಜೆಟ್ ಮಂಡಿಸಿದಾಗಲೇ ಅತಿ ಹೆಚ್ಚು ಬಜೆಟ್ ಮಂಡಿಸಿದ ದಾಖಲೆ ಸಿದ್ದರಾಮಯ್ಯ ಅವರ ಹೆಸರಿನಲ್ಲಿದೆ. 2024-25ನೇ ಸಾಲಿನ ಬಜೆಟ್ ಅನ್ನು ಫೆಬ್ರವರಿ ತಿಂಗಳಲ್ಲಿ ಮಂಡಿಸಿದ್ದರು. ಇದು ಅವರ 15ನೇ ಬಜೆಟ್ ಆಗಿತ್ತು. ಇಂದು ಸಿಎಂ ಸಿದ್ದರಾಮಯ್ಯ ಅವರ 16ನೇ ಬಜೆಟ್ ಹಲವು ವಿಶೇಷತೆಗಳನ್ನು ಹೊಂದಿದೆ. ರಾಜ್ಯದ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಬಜೆಟ್ ಗಾತ್ರ 4…

Read More