Author: kannadanewsnow09

ಗ್ಯಾಂಗ್ಟಾಕ್: ಹಿಮಾಲಯನ್ ರಾಜ್ಯದಲ್ಲಿ ಭಾರೀ ಮಳೆಯಾಗುತ್ತಿರುವ ಭೂಕುಸಿತದಿಂದಾಗಿ ಸುಂದರವಾದ ಉತ್ತರ ಸಿಕ್ಕಿಂನಲ್ಲಿ ಸುಮಾರು 1,000 ಪ್ರವಾಸಿಗರು ಸಿಲುಕಿಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಗುರುವಾರ ಚುಂಗ್ಥಾಂಗ್‌ನಲ್ಲಿ ಸುಮಾರು 200 ಪ್ರವಾಸಿ ವಾಹನಗಳು ಸಿಲುಕಿಕೊಂಡಿದ್ದು, ಅಲ್ಲಿನ ನಿವಾಸಿಗಳು ಅಲ್ಲಿನ ಗುರುದ್ವಾರದಲ್ಲಿ ತಂಗಿದ್ದಾರೆ ಎಂದು ಅವರು ಹೇಳಿದರು. ಚುಂಗ್ಥಾಂಗ್ ರಾಜ್ಯ ರಾಜಧಾನಿ ಗ್ಯಾಂಗ್ಟಾಕ್‌ನಿಂದ ಸುಮಾರು 100 ಕಿ.ಮೀ ದೂರದಲ್ಲಿದೆ. ಲಾಚೆನ್-ಚುಂಗ್ಥಾಂಗ್ ರಸ್ತೆಯ ಮುನ್ಶಿಥಾಂಗ್ ಮತ್ತು ಲಾಚುಂಗ್-ಚುಂಗ್ಥಾಂಗ್ ರಸ್ತೆಯ ಲೆಮಾ/ಬಾಬ್‌ನಲ್ಲಿ ಭಾರಿ ಭೂಕುಸಿತಗಳು ಸಂಭವಿಸಿವೆ ಎಂದು ಪೊಲೀಸರು ತಿಳಿಸಿದ್ದಾರೆ. https://twitter.com/ians_india/status/1915678927982649683 ಈ ಪ್ರದೇಶದಲ್ಲಿ ನಿರಂತರ ಮಳೆಯಿಂದಾಗಿ ಪರಿಸ್ಥಿತಿ ಹದಗೆಟ್ಟಿದೆ. ಶುಕ್ರವಾರ ಮತ್ತು ಮುಂದಿನ ಸೂಚನೆ ಬರುವವರೆಗೆ ಉತ್ತರ ಸಿಕ್ಕಿಂಗೆ ಪ್ರವಾಸಿಗರನ್ನು ಕಳುಹಿಸದಂತೆ ಜಿಲ್ಲಾಡಳಿತವು ಎಲ್ಲಾ ಪ್ರವಾಸಿ ನಿರ್ವಾಹಕರಿಗೆ ಸೂಚನೆ ನೀಡಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಏಪ್ರಿಲ್ 25 ರಂದು ಪ್ರವಾಸಿಗರಿಗೆ ಈ ಪ್ರದೇಶಕ್ಕೆ ಭೇಟಿ ನೀಡಲು ನೀಡಲಾದ ಎಲ್ಲಾ ಪರವಾನಗಿಗಳನ್ನು ಅಧಿಕಾರಿಗಳು ರದ್ದುಗೊಳಿಸಿದ್ದಾರೆ. ಸ್ಥಳೀಯ ಆಡಳಿತದ ಪ್ರಕಾರ, ಲಾಚುಂಗ್ ಮತ್ತು ಲಾಚೆನ್‌ಗೆ ಪ್ರವೇಶ ರಸ್ತೆಗಳು ತೀವ್ರವಾಗಿ ಪರಿಣಾಮ ಬೀರಿವೆ. ಸುಮಾರು…

Read More

ಬೆಂಗಳೂರು: 2025-26 ನೇ ಸಾಲಿಗೆ ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದಿಂದ ಮತೀಯ ಅಲ್ಪಸಂಖ್ಯಾತರಾದ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಸಿಖ್ಖರು, ಪಾರ್ಸಿಗಳು ಹಾಗೂ ಆಂಗ್ಲೋ ಇಂಡಿಯನ್ ಸಮುದಾಯ ವಿದ್ಯಾರ್ಥಿಗಳು ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ(ಕೆಇಎ) ಆಯ್ಕೆಯಾಗುವ ಫ್ರೆಶ್/ಸಿಇಟಿ/ನೀಟ್ ವಿದ್ಯಾರ್ಥಿಗಳಿಗೆ ವೃತ್ತಿಪರ ಕೋರ್ಸ್ಗಳಿಗೆ ಪ್ರವೇಶ ಪಡೆಯಲು ಅರಿವು ಯೋಜನೆಯಡಿಯಲ್ಲಿ ಸಾಲ ಸೌಲಭ್ಯವನ್ನು ಒದಗಿಸಲು ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ವೃತ್ತಿಪರ ಕೋರ್ಸ್ಗಳಾದ ಎಂಬಿಬಿಎಸ್, ಬಿಡಿಎಸ್, ಬ್ಯಾಚುಲರ್ ಆಫ್ ಆಯುಷ್, ಬ್ಯಾಚುಲರ್ ಆಫ್ ಆರ್ಕಿಟೆಕ್ಚರ್, ಬ್ಯಾಚುಲರ್ ಆಫ್ ಇಂಜಿನಿಯರಿAಗ್, ಬ್ಯಾಚುಲರ್ ಆಫ್ ಟೆಕ್ನಾಲಜಿ, ಫಾರ್ಮಸಿ, ಅಗ್ರಿಕಲ್ಚರ್ ಸೈನ್ಸ್, ವೆಟರ್ನರಿ ಹಾಗೂ ಫಾರ್ಮ್ ಸೈನ್ಸ್ ಕೋರ್ಸ್ ಗಳಿಗೆ ಪ್ರವೇಶ ಪಡೆಯಬಯಸುವ ವಿದ್ಯಾರ್ಥಿಗಳಿಗೆ ಈ ಸೌಲಭ್ಯವನ್ನು ಒದಗಿಸಲಾಗುತ್ತದೆ. ಮೇ.5 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವಾಗಿದ್ದು, www.kmdconline.karnataka.gov.in ಮೂಲಕ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬೇಕು. ಎಸ್‌ಎಸ್‌ಎಲ್‌ಸಿ ಮಾರ್ಕ್ಸ್ ಕಾರ್ಡ್/ಪಿಯುಸಿ ಮಾರ್ಕ್ಸ್ ಕಾರ್ಡ್, ಆಧಾರ್ ಕಾರ್ಡ್, ಜಾತಿ ಹಾಗೂ ಆದಾಯ ಪ್ರಮಾಣ ಪತ್ರ(8 ಲಕ್ಷ ಒಳಗಿದ್ದವರಿಗೆ), ವಿದ್ಯಾರ್ಥಿ/ ಪೋಷಕರ ಫೋಟೋ, ಸಿಇಟಿ/ನೀಟ್ ಹಾಲ್ ಟಿಕೆಟ್,…

Read More

ಬೆಂಗಳೂರು: ಹಾಸನ, ಕೊಡಗೆ ಮತ್ತು ಚಿಕ್ಕಮಗಳೂರು ಭಾಗದಲ್ಲಿ ಕಾಡಾನೆಗಳಿಂದ ಸಂಭವಿಸುತ್ತಿರುವ ಜೀವಹಾನಿ, ಬೆಳೆ ಹಾನಿ ತಡೆಯಲು ಭದ್ರಾ ಅಭಯಾರಣ್ಯದಲ್ಲಿ ನಿರ್ಮಿಸಲುದ್ದೇಶಿಸಿರುವ ಸಾಫ್ಟ್ ರಿಲೀಸ್ ಸೆಂಟರ್ – ಆನೆ ಧಾಮದ ಕಾಮಗಾರಿ ಇನ್ನು ಒಂದೂವರೆ -ಎರಡು ತಿಂಗಳಲ್ಲಿ ಆರಂಭವಾಗಲಿದೆ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ತಿಳಿಸಿದ್ದಾರೆ. ವಿಕಾಸಸೌಧದಲ್ಲಿಂದು ತಮ್ಮನ್ನು ಭೇಟಿ ಮಾಡಿದ್ದ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈಗಾಗಲೇ ಸ್ಥಳ ಪರಿಶೀಲನೆ ಮಾಡಲಾಗಿದ್ದು, 53 ಕೋಟಿ ರೂ. ವೆಚ್ಚದಲ್ಲಿ ಈ ಕಾಮಗಾರಿ ಕೈಗೆತ್ತಿಕೊಳ್ಳಲು, ಡಿಪಿಆರ್ ಸಿದ್ಧವಾಗುತ್ತಿದೆ ಎಂದರು. ಪ್ರತಿ ವರ್ಷ ಸರಾಸರಿ 50-60 ಜನರು ವನ್ಯಜೀವಿ- ಮಾನವ ಸಂಘರ್ಷದಿಂದ ಮೃತಪಡುತ್ತಿದ್ದಾರೆ. ಪ್ರತಿಯೊಂದು ಜೀವವೂ ಅಮೂಲ್ಯವಾಗಿದ್ದು, ಜನರ ಜೀವ ರಕ್ಷಿಸಲು ಸರ್ಕಾರ ಶ್ರಮಿಸುತ್ತಿದೆ ಎಂದರು. 6225.31 ಎಕರೆ ಅರಣ್ಯ ಒತ್ತುವರಿ ತೆರವು: ರಾಜ್ಯದಲ್ಲಿ ಕಳೆದ 21 ತಿಂಗಳ ಅವಧಿಯಲ್ಲಿ 1203 ಪ್ರಕರಣಗಳಲ್ಲಿ 6225.31 ಎಕರೆ ಅರಣ್ಯ ಒತ್ತುವರಿ ತೆರವು ಮಾಡಿಸಲಾಗಿದೆ. ಇದರ ಜೊತೆಗೆ 15422 ಎಕರೆ ಜಮೀನನ್ನು ಅರಣ್ಯ…

Read More

ಶನಿವಾರ ಆಂಜನೇಯ ಸ್ವಾಮಿಗೆ ವಿಶೇಷ ದಿನವಾಗಿದ್ದು ಈ ದಿನ ಈ ಆರು ಪವರ್ ಫುಲ್ ಮಂತ್ರಗಳನ್ನು ಹೇಳಿದರೆ ನಿಮ್ಮ ಕಷ್ಟಗಳು ದೂರವಾಗುವುದು. ಆ ಮಂತ್ರಗಳು ಯಾವುವು ನೋಡಿ.ಓಂ ಹನುಮತೇ ನಮಃ- ಈ ಮಂತ್ರ ಹೇಳುವುದರಿಂದ ನಿಮಗೆ ಕಾನೂನಿನ ವಿವಾದಗಳು, ಸಂಕಷ್ಟಗಳಿದ್ದರೆ ನಿವಾರಣೆಯಾಗುವುದು. ಓಂ ಹಂ ಹನುಮತೇ ರುದ್ರಾತ್ಮಕಾಯಂ ಹಮ್ ಫಟ್- ಈ ಮಂತ್ರವು ನಿಮ್ಮನ್ನು ಮೃತ್ಯುಭಯದಿಂದ ದೂರ ಮಾಡುತ್ತದೆ. ಅಕಾಲ ಮೃತ್ಯು ಭಯವಿದ್ದರೆ ತಪ್ಪದೇ ಈ ಮಂತ್ರವನ್ನು ಜಪಿಸಿ. ಓಂ ಹಂ ಪವನ ನಂದನಾಯೇ ಸ್ವಾಹ- ಈ ಮಂತ್ರವನ್ನು ಹೇಳುವುದರಿಂದ ಹನುಮಂತನ ಆಶೀರ್ವಾದ ಪಡೆಯುತ್ತೀರಿ. ವಿಶೇಷವಾಗಿ ಇದನ್ನು ಬ್ರಹ್ಮಚಾರಿಗಳು ಹೇಳಿದರೆ ಉತ್ತಮ. ಓಂ ನಮೊ ಹರಿ ಮರ್ಕಟ ಮರ್ಕಟಾಯೇ ಸ್ವಾಹ- ಈ ಮಂತ್ರವನ್ನು ಹೇಳುವುದರಿಂದ ಶತ್ರುಭಯ ನಾಶವಾಗುತ್ತದೆ. ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ವಿದ್ವಾನ್ ವಿದ್ಯಾಧರ್ ತಂತ್ರಿ ಜ್ಯೋತಿಷ್ಯರ ಮೊಬೈಲ್ ಸಂಖ್ಯೆ 9686268564 ಇವರು ಚೌಡಿ ಉಪಾಸನಾ ಮತ್ತು ಕೇರಳದ ವಿಶಿಷ್ಟ ಅನುಷ್ಠಾನ ಪೂಜೆಗಳಿಂದ ತಮ್ಮಲ್ಲಿ ಉಲ್ಬಣಿಸುವ ಸಕಲ…

Read More

ಬೆಂಗಳೂರು: ಶಿವಮೊಗ್ಗ ಜಿಲ್ಲೆಯ ಸಾಗರ ತಾಲ್ಲೂಕಿನ ವಿಶ್ವ ಪ್ರಸಿದ್ಧ ಜೋಗ ಜಲಪಾತ ವೀಕ್ಷಣೆಗೆ ಪ್ರವಾಸಿಗರು ಹಾಗೂ ಸಾರ್ವಜನಿಕರಿಗೆ ಮೇ.1ರಿಂದ ಮುಕ್ತ ಅವಕಾಶ ನೀಡಲಾಗುತ್ತಿದೆ. ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನಲ್ಲಿರುವ ವಿಶ್ವ ಪ್ರಸಿದ್ಧ ಜೋಗ ಜಲಪಾತದ ವೀಕ್ಷಣೆಗೆ ಪ್ರವಾಸಿಗರು ಹಾಗೂ ಸಾರ್ವಜನಿಕರಿಗೆ ಪ್ರವೇಶವನ್ನು ಮೇ 1 ರಿಂದ ಪುನರಾರಂಭಿಸಲಾಗುತ್ತಿದೆ. ಜಲಪಾತದ ಪ್ರವೇಶ ದ್ವಾರದ ಅಭಿವೃದ್ಧಿ ಕಾಮಗಾರಿ ನಡೆಯುತ್ತಿದ್ದ ಕಾರಣ ಏಪ್ರಿಲ್‌ 30ರ ವರೆಗೆ ಪ್ರವಾಸಿಗರ ಹಾಗೂ ಸಾರ್ವಜನಿಕರ ಪ್ರವೇಶವನ್ನು ತಾತ್ಕಾಲಿಕವಾಗಿ ನಿರ್ಬಂಧಿಸಲಾಗಿದೆ. ಮುಂದಿನ ತಿಂಗಳಿಂದ ಮತ್ತೆ ಪ್ರವೇಶಾವಕಾಶ ಕಲ್ಪಿಸಲಾಗಿದೆ. https://twitter.com/KarnatakaVarthe/status/1915736443475099854 https://kannadanewsnow.com/kannada/beware-of-the-public-case-fixed-if-crude-bomb-is-planted-to-kill-wild-boar/ https://kannadanewsnow.com/kannada/breaking-fir-filed-against-6-people-on-suspicion-of-murdering-pregnant-woman-over-caste-barrier-to-falling-in-love-on-instagram/

Read More

ಬೆಂಗಳೂರು: ರಾಜ್ಯದಲ್ಲಿ ಬೆಳೆ ರಕ್ಷಣೆಗಾಗಿ ಕಾಡುಹಂದಿ ಸಾಯಿಸಲು ಕಚ್ಚಾ ಬಾಂಬ್ ಇಟ್ಟರೇ ಅಂತವರ ವಿರುದ್ಧ ಪ್ರಕರಣ ದಾಖಲಿಸುವುದಾಗಿ ಅರಣ್ಯ ಸಚಿವ ಈಶ್ವರ್ ಖಂಡ್ರೆ ಎಚ್ಚರಿಕೆ ನೀಡಿದ್ದಾರೆ. ಚಾಮರಾಜನಗರ ಜಿಲ್ಲೆಯ ವಿವಿಧೆಡೆ ಕಾಡುಹಂದಿಯನ್ನು ಸಾಯಿಸಲು ಕಡಿಮೆ ತೀವ್ರತೆಯ ಕಚ್ಚಾ ಬಾಂಬ್‌ ತಯಾರಿಸಿ ಇಡಲಾಗುತ್ತಿದ್ದು, ಇದನ್ನು ತಿಂದು ಜಾನುವಾರುಗಳು ಹಾಗೂ ವನ್ಯಜೀವಿಗಳು ಸಾವಿಗೀಡಾಗುತ್ತಿವೆ. ಕೂಡಲೇ ಈ ಬಗ್ಗೆ ನಿಗಾ ಇಟ್ಟು ಕಚ್ಚಾ ಬಾಂಬ್‌ ಇಡುವವರ ವಿರುದ್ಧ ವನ್ಯಜೀವಿ ಸಂರಕ್ಷಣಾ ಕಾಯ್ದೆ ಅಡಿ ಪ್ರಕರಣ ದಾಖಲಿಸಲು ಅಧಿಕಾರಿಗಳಿಗೆ ಸೂಚಿಸಿದ್ದೇನೆ ಎಂದು ಅರಣ್ಯ ಸಚಿವರಾದ ಈಶ್ವರ್ ಖಂಡ್ರೆ ತಿಳಿಸಿದ್ದಾರೆ. https://twitter.com/KarnatakaVarthe/status/1915738005500727298 https://kannadanewsnow.com/kannada/general-yaroslav-mosklik-killed-in-moscow-car-bomb-blast/ https://kannadanewsnow.com/kannada/breaking-fir-filed-against-6-people-on-suspicion-of-murdering-pregnant-woman-over-caste-barrier-to-falling-in-love-on-instagram/

Read More

ಮಾಸ್ಕೋ : ರಷ್ಯಾದ ಹಿರಿಯ ಮಿಲಿಟರಿ ಅಧಿಕಾರಿ ಜನರಲ್ ಯಾರೋಸ್ಲಾವ್ ಮೊಸ್ಕಾಲಿಕ್ ಅವರು ಶುಕ್ರವಾರ ನಡೆದ ಕಾರ್ ಬಾಂಬ್ ಸ್ಫೋಟದಲ್ಲಿ ಸಾವನ್ನಪ್ಪಿದ್ದಾರೆ. ರಷ್ಯಾದ ಸಶಸ್ತ್ರ ಪಡೆಗಳ ಮುಖ್ಯ ಗುಪ್ತಚರ ನಿರ್ದೇಶನಾಲಯದ ಉಪ ಮುಖ್ಯಸ್ಥರಾಗಿ ಸೇವೆ ಸಲ್ಲಿಸಿದ್ದ 59 ವರ್ಷದ ಅವರನ್ನು ಕ್ರೆಮ್ಲಿನ್ನಿಂದ ಕೇವಲ 15 ನಿಮಿಷಗಳ ದೂರದಲ್ಲಿರುವ ಬಾಲಶಿಖಾದಲ್ಲಿನ ಅವರ ಮನೆಯ ಬಳಿ ಸ್ಫೋಟದ ಸ್ಥಳದಿಂದ ಹಲವಾರು ಮೀಟರ್ ದೂರದಲ್ಲಿ ಎಸೆಯಲಾಗಿದೆ ಎಂದು ವರದಿಯಾಗಿದೆ. ವಸತಿ ಅಂಗಳದಲ್ಲಿ ಸಂಭವಿಸಿದ ಸ್ಫೋಟವು ಮಾಸ್ಕೋ ಆಕಾಶದ ಮೇಲೆ ಬೆಂಕಿ ಮತ್ತು ಕಪ್ಪು ಹೊಗೆಯನ್ನು ಹೆಚ್ಚಿಸಿತು. ಆರಂಭಿಕ ವರದಿಗಳು ಸ್ಫೋಟವು ಉದ್ದೇಶಿತ ದಾಳಿಯಾಗಿರಬಹುದು, ಬಹುಶಃ ಕಾರ್ ಬಾಂಬ್ ಆಗಿರಬಹುದು ಎಂದು ಸೂಚಿಸುತ್ತವೆ. https://twitter.com/MarioNawfal/status/1915701709512311120 ಮೊಸ್ಕಾಲಿಕ್ ಈ ಹಿಂದೆ ಪ್ಯಾರಿಸ್ನಲ್ಲಿ ರಷ್ಯಾ-ಉಕ್ರೇನ್ ಶಾಂತಿ ಮಾತುಕತೆಯ ನೇತೃತ್ವ ವಹಿಸಿದ್ದರು ಮತ್ತು ಅವರ ಸಾವು ದೇಶದಲ್ಲಿ ನಡೆಯುತ್ತಿರುವ “ರಹಸ್ಯ ಸ್ಫೋಟಗಳ” ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ. ಅಧಿಕಾರಿಗಳು ಘಟನೆಯ ಬಗ್ಗೆ ತನಿಖೆ ನಡೆಸುತ್ತಿದ್ದು, ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗಿದೆ. https://kannadanewsnow.com/kannada/digital-title-deeds-to-be-distributed-to-1-lakh-families-in-revenue-villages-on-may-20-minister-krishna-byre-gowda/ https://kannadanewsnow.com/kannada/breaking-fir-filed-against-6-people-on-suspicion-of-murdering-pregnant-woman-over-caste-barrier-to-falling-in-love-on-instagram/

Read More

ಬೆಂಗಳೂರು : ರಾಜ್ಯ ಸರ್ಕಾರದ ಎರಡು ವರ್ಷಗಳ ಜನಪರ ಆಡಳಿತಕ್ಕೆ ಸಾಕ್ಷಿಯಾಗಿ ಮೇ.20 ರಂದು ಕಂದಾಯ ಗ್ರಾಮಗಳ 1 ಲಕ್ಷ ಕುಟುಂಬಗಳಿಗೆ ಶಾಶ್ವತ ಡಿಜಿಟಲ್ ಹಕ್ಕುಪತ್ರ ವಿತರಿಸಲು ಉದ್ದೇಶಿಸಲಾಗಿದೆ ಎಂದು ಸಚಿವ ಕೃಷ್ಣ ಬೈರೇಗೌಡ ಅವರು ತಿಳಿಸಿದರು. ಶುಕ್ರವಾರ ವಿಕಾಸಸೌಧದಲ್ಲಿ ಎಲ್ಲಾ ಜಿಲ್ಲಾಧಿಕಾರಿಗಳ ಮಾಸಿಕ ಪ್ರಗತಿ ಪರಿಶೀಲನಾ ಸಭೆ ಬಳಿಕ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು, “ಹಾಡಿ, ಹಟ್ಟಿ, ತಾಂಡಾಗಳು ಸೇರಿದಂತೆ ಜನ ವಸತಿ ಪ್ರದೇಶಗಳು ಕಂದಾಯ ಗ್ರಾಮಗಳಾಗಿ ಅಂಗೀಕರಿಸದ ಕಾರಣ ಅಲ್ಲಿನ ನಿವಾಸಿಗಳು ಅನೇಕ ಸರ್ಕಾರಿ ಸೌಲಭ್ಯಗಳಿಂದ ವಂಚಿತರಾಗುತ್ತಿದ್ದಾರೆ. ಇದಕ್ಕೆ ಪರಿಹಾರ ನೀಡಲು ಕಳೆದ ಎರಡು ವರ್ಷದ ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಸೂಕ್ತ ನಿರ್ಧಾರ ತೆಗೆದುಕೊಳ್ಳಲಾಯಿತು. ಅದರಂತೆ ಹಟ್ಟಿ, ತಾಂಡಾ ನಿವಾಸಿಗಳ ತ್ರಿಶಂಕು ಸ್ಥಿತಿ ನಿವಾರಿಸಲು ಹಾಗೂ ಅವರಿಗೆ ಶಾಶ್ವತ ನೆಮ್ಮದಿ ನೀಡುವ ಸಲುವಾಗಿ ತಾಂಡಾಗಳಿಗೆ ಕಂದಾಯ ಗ್ರಾಮ ಸ್ಥಾನಮಾನ ನೀಡಲು ನಿರ್ಧರಿಸಲಾಗಿದೆ” ಎಂದು ಮಾಹಿತಿ ನೀಡಿದರು. ಮುಂದುವರೆದು, “ ಹಟ್ಟಿ, ತಾಂಡಾ ನಿವಾಸಿಗಳ ಮನೆಗಳಿಗೆ ಕಾನೂನಿನ ಆಸರೆ ನೀಡಬೇಕು ಎಂಬ…

Read More

ಬೆಂಗಳೂರು: ದಶಕಗಳ ಹಿಂದೆ ಸರ್ಕಾರದಿಂದ ಭೂ ಮಂಜೂರಾಗಿದ್ದರೂ, ಪಕ್ಕಾ ದಾಖಲೆಗಳಲ್ಲಿದೆ ಪರಿತಪಿಸುತ್ತಿದ್ದ ರೈತರಿಗೆ ಈ ವರ್ಷಾಂತ್ಯದೊಳಗೆ ಸಿಎಂ ಸಿದ್ದರಾಮಯ್ಯ ಅವರ ಸೂಚನೆಯ ಮೇರೆಗೆ ಪೋಡಿ ದುರಸ್ಥಿ ಮಾಡಿಕೊಡಲಾಗುವುದು ಎಂದು ಸಚಿವ ಕೃಷ್ಣ ಬೈರೇಗೌಡ ಅವರು ಭರವಸೆ ನೀಡಿದರು. ಈ ಮೂಲಕ ರಾಜ್ಯದಲ್ಲಿ ಪಕ್ಕಾ ದಾಖಲೆಗಳಲ್ಲದೇ ದಶಕಗಳಿಂದ ಭೂಮಿ ಉಳುಮೆ ಮಾಡುತ್ತಿರುವಂತ ರೈತರಿಗೆ ಗುಡ್ ನ್ಯೂಸ್ ನೀಡಿದ್ದಾರೆ. ರೈತರಿಗೆ ಕಳೆದ 60 ವರ್ಷಗಳಿಂದ ನಾನಾ ಸರ್ಕಾರಿ ಯೋಜನೆಗಳ ಅಡಿಯಲ್ಲಿ ಭೂ ಮಂಜೂರಾಗಿದೆ. ಆದರೆ, ರೈತರು ಆ ಜಮೀನಿನಲ್ಲಿ ಅನುಭೋಗದಲ್ಲಿದ್ದಾರೆ, ಪಹಣಿಯಲ್ಲಿ ಅವರ ಹೆಸರಿದೆ ಎಂಬುದನ್ನು ಬಿಟ್ಟರೆ ಬೇರೆ ಯಾವ ದಾಖಲೆಗಳೂ ಇಲ್ಲ. ಇದರಿಂದ ರೈತರು ಸಾಕಷ್ಟು ತೊಂದರೆ ಅನುಭವಿಸುತ್ತಿದ್ದಾರೆ. ಹೀಗಾಗಿ ರೈತರು ಪಕ್ಕಾ ದಾಖಲೆಗಳಿಗಾಗಿ ಸರ್ಕಾರಿ ಕಚೇರಿಗಳಿಗೆ ಅಲೆಯುವುದನ್ನು ತಪ್ಪಿಸುವ ಸಲುವಾಗಿ ಕಳೆದ ಜನವರಿ ತಿಂಗಳಿಂದ ರಾಜ್ಯಾದ್ಯಂತ ಪೋಡಿ ಅಭಿಯಾನಕ್ಕೆ ಚಾಲನೆ ನೀಡಲಾಗಿದೆ. ಆದರೆ, ಕಳೆದ ಒಂದೂವರೆ ವರ್ಷದಿಂದ ಕಂದಾಯ ಮತ್ತು ಸರ್ವೇ ಇಲಾಖೆ ಒಟ್ಟಾಗಿ ಸಾಕಷ್ಟು ಅಧ್ಯಯನ ನಡೆಸಿ ಪೋಡಿ ದುರಸ್ಥಿ…

Read More

ಬೆಂಗಳೂರು: ಹಾವೇರಿ ಮತ್ತು ಬ್ಯಾಡಗಿ ನಿಲ್ದಾಣಗಳ ನಡುವೆ ರೈಲು ಹಳಿಗಳ ನಿರ್ವಹಣೆ ಮತ್ತು ದುರಸ್ತಿ ಕಾರ್ಯಗಳನ್ನು ಕೈಗೊಳ್ಳಲಾಗುವುದರಿಂದ, ರೈಲು ಸಂಖ್ಯೆ 17325 ಬೆಳಗಾವಿ – ಮೈಸೂರು ವಿಶ್ವಮಾನವ ದೈನಂದಿನ ಎಕ್ಸ್ ಪ್ರೆಸ್ ರೈಲಿನ ವೇಳಾಪಟ್ಟಿಯಲ್ಲಿ ಬದಲಾವಣೆ ಮಾಡಲಾಗಿದೆ. ಈ ಹಿಂದೆ ಏಪ್ರಿಲ್ 23, 2025 ರಂದು ಪ್ರಕಟಿಸಲಾದ ಪತ್ರಿಕಾ ಪ್ರಕಟಣೆ ಸಂಖ್ಯೆ 38ರಲ್ಲಿ ತಿಳಿಸಿದಂತೆ, ಏಪ್ರಿಲ್ 28, 29; ಮೇ 1, 2, 4, 5, 6, 8, 9, 11, 12, 13, 15 ಮತ್ತು 16, 2025 ರಂದು ರೈಲು ಸಂಖ್ಯೆ 17325 ಬೆಳಗಾವಿ – ಮೈಸೂರು ವಿಶ್ವಮಾನವ ದೈನಂದಿನ ಎಕ್ಸ್ ಪ್ರೆಸ್ ರೈಲನ್ನು ಮಾರ್ಗಮಧ್ಯೆ ಸುಮಾರು 105 ನಿಮಿಷಗಳ ಕಾಲ ನಿಯಂತ್ರಿಸಲಾಗುವುದು ಎಂದು ತಿಳಿಸಲಾಗಿತ್ತು. ಆದರೆ, ಈಗ ರೈಲಿನ ನಿರ್ಗಮನ ಸಮಯ ಮತ್ತು ಮಾರ್ಗಮಧ್ಯೆ ನಿಯಂತ್ರಣದ ಅವಧಿಯಲ್ಲಿ ಬದಲಾಯಿಸಲಾಗಿದೆ. ಪರಿಷ್ಕೃತ ವೇಳಾಪಟ್ಟಿಯ ಪ್ರಕಾರ, ಈ ರೈಲು (17325) ಬೆಳಗಾವಿಯಿಂದ ತನ್ನ ನಿಗದಿತ ನಿರ್ಗಮನ ಸಮಯವಾದ 06:15 ಗಂಟೆಯ ಬದಲು…

Read More