Author: kannadanewsnow09

ಬೆಂಗಳೂರು: ನಗರದ ಸಬ್ ರಿಜಿಸ್ಟಾರ್ ಕಚೇರಿಯ ಮೇಲೆ ಲೋಕಾಯುತ್ತ ಹಾಗೂ ಉಪ ಲೋಕಾಯುಕ್ತ ಅಧಿಕಾರಿಗಳು ಖುದ್ದಾಗಿ ದಾಳಿ ನಡೆಸಿದ್ದಾರೆ. ನಗರದು ಹಣ ಪತ್ತೆಯಾಗಿದ್ದರೇ, ಹಲವು ಸಬ್ ರಿಜಿಸ್ಟಾರ್ ಕಚೇರಿಯ ದ್ವಿತೀಯ ದರ್ಜೆ ಸಹಾಯಕರಂತು ಪೋನ್ ಪೇ, ಜೀ ಪೇ ಮೂಲಕ ಲಕ್ಷ ಲಕ್ಷ ಲಂಚವನ್ನು ಪಡೆದಿರುವುದನ್ನು ಪತ್ತೆ ಹಚ್ಚಿದ್ದಾರೆ. ಈ ಬಗ್ಗೆ ಪತ್ರಿಕಾ ಪ್ರಕಟಣೆಯಲ್ಲಿ ಕರ್ನಾಟಕ ಲೋಕಾಯುಕ್ತದಿಂದ ಮಾಹಿತಿ ಬಿಡುಗಡೆ ಮಾಡಲಾಗಿದ್ದು, ಈ ದಿನ ಅಂದರೆ ವಿನಾಂಕ: 06.03.2025ರಂದು ಬೆಂಗಳೂರು ನಗರ, ಗ್ರಾಮಾಂತರ ಹಾಗೂ ರಾಮನಗರ ಜಿಲ್ಲೆಯ 25 ಉಪ ನೋಂದಣಾಧಿಕಾರಿಗಳ ಕಛೇರಿಗಳಿಗೆ ಏಕ ಕಾಲಕ್ಕೆ ಅನಿರೀಕ್ಷಿತ ತಪಾಸಣೆಯನ್ನು ನಡೆಸಲಾಯಿತು. ಈ ದಿನ ತಪಾಸಣೆ ನಡೆಸಲಾದ ಉಪನೋಂದಣಾಧಿಕಾರಿಗಳ ಕಛೇಲಿಗಳ ಪೈಕಿ ಅನೇಕ ಉಪ ನೋಂದಣಾಧಿಕಾರಿಗಳ ಕಛೇರಿಗಳಿಗೆ 2022ನೇ ಸಾಅನಲ್ಲಿಯೂ ಸಹಾ ತಪಾಸಣೆ ನಡೆಸಲಾಗಿತ್ತು ಎಂದಿದೆ. ಅನಿರೀಕ್ಷಿತ ತಪಾಸಣೆ ನಡೆಸಿದ ಪೊಲೀಸ್ ಹಾಗೂ ನ್ಯಾಯಾಂಗ ಅಧಿಕಾರಿಗಳ ತಂಡವು ಅನೇಕ ನ್ಯೂನ್ಯತೆಗಳನ್ನು ದಿನಾಂಕ: 19.07.2022ರ ಆದೇಶದ ರೀತ್ಯಾ ಪತ್ತೆ ಹಚ್ಚಿದ್ದರು. ಈ ನ್ಯೂನ್ಯತೆಗಳನ್ನು ಕಂದಾಯ…

Read More

ನವದೆಹಲಿ: ಭಾರತದ ದಾಖಲೆಯ ಗೋಲ್ ಸ್ಕೋರರ್ ಮತ್ತು ಮಾಜಿ ನಾಯಕ ಸುನಿಲ್ ಛೆಟ್ರಿ ತಮ್ಮ ನಿವೃತ್ತಿ ಕರೆಯನ್ನು ಹಿಂತೆಗೆದುಕೊಂಡಿದ್ದಾರೆ ಮತ್ತು ಫಿಫಾ ಮಾರ್ಚ್ ಅಂತರರಾಷ್ಟ್ರೀಯ ವಿಂಡೋದಲ್ಲಿ ರಾಷ್ಟ್ರೀಯ ತಂಡಕ್ಕೆ ಕಾಣಿಸಿಕೊಂಡಿದ್ದಾರೆ. ಎಎಫ್ಸಿ ಏಷ್ಯನ್ ಕಪ್ 2027 ರ ಅರ್ಹತಾ ಸುತ್ತಿನ ಮೂರನೇ ಸುತ್ತಿನಲ್ಲಿ ಭಾರತ ಮಾರ್ಚ್ 25 ರಂದು ಬಾಂಗ್ಲಾದೇಶವನ್ನು ಎದುರಿಸಲಿದೆ. 2024ರ ಜೂನ್ನಲ್ಲಿ ಅಂತಾರಾಷ್ಟ್ರೀಯ ಫುಟ್ಬಾಲ್ನಿಂದ ನಿವೃತ್ತಿ ಘೋಷಿಸಿದ್ದರು. ದಾಖಲೆಯ 19 ವರ್ಷಗಳ ಕಾಲ ರಾಷ್ಟ್ರೀಯ ಬಣ್ಣಗಳನ್ನು ಧರಿಸಿದ ನಂತರ ದಂತಕಥೆ ಛೆಟ್ರಿ ತಮ್ಮ ಅಪ್ರತಿಮ ಅಂತರರಾಷ್ಟ್ರೀಯ ವೃತ್ತಿಜೀವನಕ್ಕೆ ತೆರೆ ಎಳೆಯಲು ನಿರ್ಧರಿಸಿದರು. 2024ರ ಮೇ 16ರಂದು ಫಿಫಾ ವಿಶ್ವಕಪ್ ಕ್ವಾಲಿಫೈಯರ್ನಲ್ಲಿ ಕುವೈತ್ ವಿರುದ್ಧ ಆಡಿದ ಬಳಿಕ ನಿವೃತ್ತಿ ಘೋಷಿಸುವುದಾಗಿ ಛೆಟ್ರಿ ಘೋಷಿಸಿದ್ದರು. ಅಖಿಲ ಭಾರತ ಫುಟ್ಬಾಲ್ ಫೆಡರೇಶನ್ (ಎಐಎಫ್ಎಫ್) ತನ್ನ ಅಧಿಕೃತ ಎಕ್ಸ್ ಖಾತೆಯ ಮೂಲಕ ಛೆಟ್ರಿ ಮರಳಿದ್ದಾರೆ ಎಂದು ಘೋಷಿಸಿತು. https://twitter.com/IndianFootball/status/1897669852841844780 ಛೆಟ್ರಿ ಅವರ ಪ್ರತಿಷ್ಠಿತ ವೃತ್ತಿಜೀವನದಲ್ಲಿ ಅವರು ಅನೇಕ ದಾಖಲೆಗಳನ್ನು ಗಳಿಸಿದ್ದಾರೆ. ತಮ್ಮ ನಾಯಕನು ತಂಡವನ್ನು…

Read More

ಶಿವಮೊಗ್ಗ : ಆಲ್ಕೊಳ ವಿದ್ಯುತ್ ವಿತರಣಾ ಕೇಂದ್ರದಿAದ ಸರಬರಾಜಾಗುವ ಫೀಡರ್ ಎ.ಎಫ್-11 ರಲ್ಲಿ ತುರ್ತು ಕಾಮಗಾರಿ ಹಮ್ಮಿಕೊಂಡಿರುವುದರಿಂದ ಮಾ.8 ರ ಬೆಳಗ್ಗೆ 10 ರಿಂದ ಮಧ್ಯಾಹ್ನ 2 ಗಂಟೆಯವರೆಗೆ ಈ ಕೆಳಕಂಡ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ. ಕರಿಯಣ್ಣ ಜಿಲ್ಡಿಂಗ್ ಸುತ್ತ ಮುತ್ತ, 100 ಅಡಿ ರಸ್ತೆ, ಕೆಂಚಪ್ಪ ಬಡಾವಣೆ, ಸೂಡಾ ಕಛೇರಿ, ವೀರ ಸಾವರ್ಕರ್ ಬಿಲ್ಡಿಂಗ್, ಕೆಎಚ್‌ಬಿ ಕ್ವಾಟ್ರಸ್, ಸವಿ ಬೇಕರಿ ಎದುರು, ಆರಾಧ್ಯ ಕಣ್ಣಿನ ಆಸ್ಪತ್ರೆ, ಪಿ & ಟಿ ಕಾಲೋನಿ, ವಿನೋಬ ನಗರ, ಪೋಲಿಸ್ ಚೌಕಿ, ಹುಚ್ಚುರಾಯ ಕಾಲೋನಿ, ವೀರಣ್ಣ ಲೇಔಟ್, ಅರವಿಂದ ನಗರ, ಮೇದಾರ ಕೇರಿ, ಕನಕ ನಗರ, ದೇವರಾಜ ಅರಸು ಬಡಾವಣೆ, ಶಾರದಮ್ಮ ಲೇಔಟ್, ಖಾಜಿ ಗಾರ್ಡನ್, ಮೈತ್ರಿ ಅಪಾರ್ಟ್ಮೆಂಟ್ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಸಹಕರಿಸಬೇಕೆಂದು ಮೆಸ್ಕಾಂ ನಗರ ಉಪ-ವಿಭಾಗ-3ರ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. https://kannadanewsnow.com/kannada/do-you-know-how-much-illegal-assets-were-found-in-the-possession-of-8-corrupt-officials-in-todays-lokayukta-raid/ https://kannadanewsnow.com/kannada/bengaluru-2965-people-fined-rs-6-50-lakh-for-travelling-without-tickets-in-bmtc-buses/

Read More

ಬೆಂಗಳೂರು: ನಗರದ ಬಿಎಂಟಿಸಿ ಬಸ್ಸಿನಲ್ಲಿ ಟಿಕೆಟ್ ಇಲ್ಲದೇ ಪ್ರಯಾಣಿಸಿದಂತ ಪ್ರಯಾಣಿಕರಿಗೆ ತನಿಖಾ ತಂಡದ ಅಧಿಕಾರಿಗಳು ದಂಡಾಸ್ತ್ರ ಪ್ರಯೋಗಿಸಿದ್ದಾರೆ. ಟಿಕೆಟ್ ರಹಿತವಾಗಿ ಪ್ರಯಾಣಿಸಿದಂತ 2,965 ಮಂದಿಗೆ 6.50 ಲಕ್ಷ ದಂಡವನ್ನು ಜನವರಿಯಲ್ಲಿ ವಸೂಲಿ ಮಾಡಿದ್ದಾರೆ. ಈ ಬಗ್ಗೆ  ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದು, ತಮ್ಮ ಸಂಸ್ಥೆಯ ವಾಹನಗಳಲ್ಲಿ ಸಂಚರಿಸುವ ಪ್ರಯಾಣಿಕರು ಟಿಕೇಟನ್ನು ಪಡೆಯದೆ ಅನಧಿಕೃತವಾಗಿ ಪ್ರಯಾಣ ಮಾಡುವವರನ್ನು ಮತ್ತು ಸಂಸ್ಥೆಯ  ಸಾರಿಗೆ ಆದಾಯದ ಸೋರಿಕೆಯನ್ನು ತಡೆಗಟ್ಟುವ ನಿಟ್ಟಿನಲ್ಲಿ, ನಗರದಾದ್ಯಂತ ಸಂಚರಿಸುವ ವಾಹನಗಳನ್ನು ನಮ್ಮ ಸಂಸ್ಥೆಯ  ತನಿಖಾ ತಂಡಗಳು ಜನವರಿ-2025 ರ ಮಾಹೆಯಲ್ಲಿ ಒಟ್ಟು 19‌,781 ಟ್ರಿಪ್‌ಗಳನ್ನು ತಪಾಸಿಸಿ 2965 ಟಿಕೇಟ್ ರಹಿತ ಪ್ರಯಾಣಿಕರನ್ನು ಪತ್ತೆ ಹಚ್ಚಿ, ಅವರಿಂದ ಒಟ್ಟು ರೂ. 6,50,395/- ದಂಡ ವಸೂಲಿ ಮಾಡಿ ಸಂಸ್ಥೆಯ  ನಿರ್ವಾಹಕರ ವಿರುದ್ಧ 1757 ಪ್ರಕರಣಗಳನ್ನು ದಾಖಲಿಸಿರುತ್ತಾರೆ ಎಂದಿದೆ. ಮಹಿಳಾ ಪ್ರಯಾಣಿಕರಿಗೆಂದೇ ಮೀಸಲಾಗಿರುವ ಆಸನಗಳಲ್ಲಿ ಕುಳಿತು ಪ್ರಯಾಣಿಸಿರುವ 325 ಪುರುಷ  ಪ್ರಯಾಣಿಕರಿಂದ  ಒಟ್ಟು ರೂ. 32,500/- ಅನ್ನು ಮೋಟಾರು ವಾಹನ…

Read More

ಬೆಂಗಳೂರು: ಇಂದು ಕರ್ನಾಟಕ ಲೋಕಾಯುಕ್ತ ಪೊಲೀಸ್ ವಿಭಾಗದ ಬೆಂಗಳೂರು ನಗರ-2, ಕೋಲಾರ-1, ಕಲಬುರಗಿ-1, ದಾವಣಗೆರೆ-1, ತುಮಕೂರು-1, ಬಾಗಲಕೋಟೆ-1 ಮತ್ತು ವಿಜಯಪುರ-1 ಜಿಲ್ಲಾ ಲೋಕಾಯುಕ್ತ ಪೊಲೀಸ್ ಠಾಣೆಗಳಲ್ಲಿ ಒಟ್ಟು 8 ಸರ್ಕಾರಿ ಅಧಿಕಾರಿಗಳು ತಮ್ಮ ಬಲ್ಲ ಆದಾಯದ ಮೂಲಗಳಿಗಿಂತ ಹೆಚ್ಚು ಅಸಮತೋಲನ ಆಸ್ತಿಯನ್ನು ಹೊಂದಿದ್ದ ಬಗ್ಗೆ ಪ್ರಕರಣಗಳು ದಾಖಲಾಗಿರುತ್ತವೆ. ಇಂದಿನ ಲೋಕಾಯುಕ್ತ ದಾಳಿಯಲ್ಲಿ ಭ್ರಷ್ಟ ಅಧಿಕಾರಿಗಳ ಬಳಿ ಸಿಕ್ಕ ಅಕ್ರಮ ಆಸ್ತಿ ಪಾಸ್ತಿ ಎಷ್ಟು ಅಂತ ಮುಂದೆ ಪುಲ್ ಡೀಟೆಲ್ಸ್ ಇದೆ ಓದಿ. ಈ ದಿನ ದಿನಾಂಕ: 06.03.2025 ರಂದು ಆರೋಪಿತ ಸರ್ಕಾರಿ ಅಧಿಕಾರಿಗಳಿಗೆ ಸಂಬಂಧಿಸಿದ ಮನೆ, ಕಛೇರಿ ಹಾಗೂ ಸಂಬಂಧಿಕರ ಮನೆಗಳು ಸೇರಿದಂತೆ ಒಟ್ಟು 40 ಸ್ಥಳಗಳಲ್ಲಿ ಏಕ ಕಾಲಕ್ಕೆ ಶೋಧನಾ ಕಾರ್ಯ ಕೈಗೊಂಡಿದ್ದು, ಶೋಧನಾ ಸಮಯದಲ್ಲಿ ಈ ಕೆಳಕಂಡಂತೆ ಅಸಮತೋಲನ ಆಸ್ತಿ ಹೊಂದಿದ್ದ ಬಗ್ಗೆ ಮಾಹಿತಿ ತಿಳಿದುಬಂದಿರುತ್ತದೆ. 1)  ಟಿ. ಡಿ. ನಂಜುಂಡಪ್ಪ, ಮುಖ್ಯ ಅಭಿಯಂತರರು, ಪಂಚಾಯತ್ ರಾಜ್ ಇಂಜಿನಿಯರಿಂಗ್ ಇಲಾಖೆ, ಗ್ರಾಮೀಣಾಭಿವೃದ್ಧಿ ಭವನ, ಆನಂದ ರಾವ್ ಸರ್ಕಲ್, ಬೆಂಗಳೂರು.…

Read More

ಬೆಂಗಳೂರು: “ಬಿಜೆಪಿ ಸರ್ಕಾರ ಆರಂಭಿಸಿದ್ದ ನೂತನ ವಿವಿಗಳ ಸಾಧಕ ಬಾದಕಗಳನ್ನು ಅಧ್ಯಯನ ಮಾಡಿದ ನಂತರ ನಮ್ಮ ಸರ್ಕಾರ ಈ ವಿವಿಗಳನ್ನು ಹಳೆಯ ವಿವಿಗಳ ಜತೆಗೆ ವಿಲೀನ ಮಾಡುತ್ತೇವೆಯೇ ಹೊರತು, ಸಂಪೂರ್ಣವಾಗಿ ವಜಾ ಮಾಡುತ್ತಿಲ್ಲ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು. ವಿಧಾನಸಭೆಯಲ್ಲಿ ವಿರೋಧ ಪಕ್ಷದ ನಾಯಕರಾದ ಆರ್.ಅಶೋಕ್ ಹಾಗೂ ಮಾಜಿ ಸಚಿವ ಅಶ್ವತ್ಥ್ ನಾರಾಯಣ ಅವರು ನೂತನ ವಿವಿಗಳ ವಿಚಾರವನ್ನು ಪ್ರಸ್ತಾಪಿಸಿದಾಗ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ರಾಜ್ಯ ಸರ್ಕಾರದ ನಿರ್ಧಾರವನ್ನು ಗುರುವಾರ ಸಮರ್ಥಿಸಿಕೊಂಡರು. “ನಿಮ್ಮ (ಬಿಜೆಪಿ) ಸರ್ಕಾರದ ಅವಧಿಯಲ್ಲಿ ಅಶ್ವತ್ಥ್ ನಾರಾಯಣ ಅವರು ಉನ್ನತ ಶಿಕ್ಷಣ ಸಚಿವರಾಗಿದ್ದಾಗ, ನಿಮ್ಮ ಪರಿಕಲ್ಪನೆ ಮೇಲೆ ನೀವು ಈ ಹೊಸ ವಿವಿಗಳನ್ನು ಸ್ಥಾಪಿಸಿದ್ದೀರಿ. ನಾವು ಖಾಸಗಿ ವಿವಿ ಮಾಡಬೇಕಾದರೂ ಕೆಲವು ಮಾನದಂಡಗಳನ್ನು ನಿಗದಿ ಮಾಡಿದ್ದೇವೆ. ವಿದ್ಯಾರ್ಥಿಗಳಿಗೂ ವಿವಿಗಳಿಗೂ ಏನು ಸಂಬಂಧ? ವಿದ್ಯಾರ್ಥಿಗಳು ತಾವುಗಳು ವ್ಯಾಸಂಗ ಮಾಡುತ್ತಿರುವ ಅದೇ ಕಾಲೇಜುಗಳಲ್ಲಿ ವ್ಯಾಸಂಗ ಮುಂದುವರಿಸುತ್ತಾರೆ. ಆದರೆ ಮೈಸೂರು ವಿವಿ, ಮಂಡ್ಯ ವಿವಿ, ಚಾಮರಾಜನಗರ ವಿವಿಗಳನ್ನೇ ಉದಾಹರಣೆಯಾಗಿ ತೆಗೆದುಕೊಡು ನೋಡುವುದಾಗರೆ,…

Read More

ಬೆಂಗಳೂರು: ರಾಜ್ಯ ಸರ್ಕಾರದಿಂದ ವಿಧಾನಸಭೆಯಲ್ಲಿ ಇಂದು ಬೆಂಗಳೂರು ಅರಮನೆ ಮೈದಾನದ ಭೂಸ್ವಾಧೀನ ಪ್ರಕ್ರಿಯೆ ಕೈಬಿಡುವ ಉದ್ದೇಶದ ಬೆಂಗಳೂರು ಅರಮನೆ (ಭೂ ಬಳಕೆ ಮತ್ತು ನಿಯಂತ್ರಣ) ಮಸೂದೆ 2025ವನ್ನು ಮಂಡಿಸಲಾಯಿತು. ಈ ವಿಧೇಯಕಕ್ಕೆ ವಿಪಕ್ಷಗಳ ತೀವ್ರ ವಿರೋಧದ ನಡುವೆಯೂ ಅಂಗೀಕಾರ ದೊರೆತಿದೆ. ಇಂದು ರಾಜ್ಯ ವಿಧಾನಸಭೆಯಲ್ಲಿ ಅರಮನೆ ಮೈದಾನದ ಭೂಸ್ವಾಧೀನ ಪ್ರಕ್ರಿಯೆ ಕೈಬಿಡುವ ಉದ್ದೇಶದ ಬೆಂಗಳೂರು ಅರಮನೆ (ಭೂ ಬಳಕೆ ಮತ್ತು ನಿಯಂತ್ರಣ) ಮಸೂದೆ 2025 ವಿಧೇಯಕವನ್ನು ಮಂಡಿಸಲಾಯಿತು. ವಿಧೇಯಕ ಕುರಿತಾಗಿ ಆಡಳಿತ ವಿಪಕ್ಷಗಳ ನಡುವೆ ಜಟಾವಟಿ ನಡೆಯಿತು. ಇದನ್ನು ರಾಜಕೀಯ ದ್ವೇಷಕ್ಕಾಗಿ ತಂದಿದ್ದೀರಿ ಎಂಬುದಾಗಿ ವಿಪಕ್ಷ ನಾಯಕ ಬಿ.ವೈ ವಿಜಯೇಂದ್ರ ಆರೋಪಿಸಿದರು. ಇದಷ್ಟೇ ಅಲ್ಲದೇ ವಿಧಾನಸಭೆಯಲ್ಲಿ ಅರಮನೆ ಭೂ ನಿಯಂತ್ರ ವಿಧೇಯಕ ಅಂಗೀಕರಿಸುತ್ತಿದ್ದಂತೆ, ವಿಪಕ್ಷಗಳ ನಾಯಕರು ಸರ್ಕಾರಕ್ಕೆ ಚಾಮುಂಡೇಶ್ವರಿ ಶಾಪ ತಟ್ಟುತ್ತದೆ ಎಂಬುದಾಗಿ ಗುಡುಗಿದರು. ಸದನದಲ್ಲಿ ವಿಧೇಯಕ ವಿರುದ್ಧ ಅಭಿಪ್ರಾಯವನ್ನು ವಿಪಕ್ಷ ಬಿಜೆಪಿ ನಾಯಕರು ತೋರಿಸಿದರ ನಡುವೆ ಬೆಂಗಳೂರು ಅರಮನೆ ಮೈದಾನದ ಭೂಸ್ವಾಧೀನ ಪ್ರಕ್ರಿಯೆ ಕೈಬಿಡುವ ಉದ್ದೇಶದ ಬೆಂಗಳೂರು ಅರಮನೆ (ಭೂ…

Read More

ಶಿವಮೊಗ್ಗ: ಜಿಲ್ಲೆಯ ಆನಂದಪುರ ಠಾಣೆ ವ್ಯಾಪ್ತಿಯಲ್ಲಿ ಕಳ್ಳತನ ಪ್ರಕರಣವನ್ನು ಬೇದಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಈ ಪ್ರಕರಣದಲ್ಲಿ ಕಳ್ಳತನ ಮಾಡಿದಂತ ಕಳ್ಳ, ಕಂದ ಆಭರಣ ಖರೀದಿಸಿದ ವ್ಯಕ್ತಿಯನ್ನು ಪೊಲೀಸರು ಬಂಧಿಸಿ, ಜೈಲಿಗಟ್ಟಿದ್ದಾರೆ. ಇಂದು ಪತ್ರಿಕಾ ಗೋಷ್ಠಿಯಲ್ಲಿ ಮಾಹಿತಿ ನೀಡಿದಂತ ಸಾಗರ ಡಿವೈಎಸ್ಪಿ ಗೋಪಾಲಕೃಷ್ಣ ನಾಯಕ್ ಅವರು, ಆನಂದಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿನ ಮನೆಗಳ್ಳತನ ಪ್ರಕರಣಗಳು ದಾಖಲಾಗಿದ್ದವು. ಈ ಕೇಸ್ ಗಳನ್ನು ಬೇಧಿಸಿ ಆರೋಪಿ ಪತ್ತೆಗಾಗಿ ಶಿವಮೊಗ್ಗ ಎಸ್ಪಿ ಮಿಥುನ್ ಕುಮಾರ್ ಅವರು, ಹೆಚ್ಚುವರಿ ಪೊಲೀಸ್ ಅಧೀಕ್ಷಕ ಅನಿಲ್ ಕುಮಾರ್ ಭೂಮರೆಡ್ಡಿ, ಕಾರಿಯಪ್ಪ ಅವರು ಸೂಚಿಸಿದ್ದರು ಎಂದರು. ಎಸ್ಪಿ ಸೂಚನೆಯಂತೆ ಸಾಗರ ಗ್ರಾಮಾಂತರ ವೃತ್ತ ನಿರೀಕ್ಷಕ ಸಂತೋಷ್ ಶೆಟ್ಟಿ ಅವರ ನೇತೃತ್ವದಲ್ಲಿ, ಆನಂದಪುರ ಪೊಲೀಸ್ ಠಾಣೆಯ ಪಿಎಸ್ಐ ಯುವರಾಜ್.ಕೆ, ಸಿಬ್ಬಂದಿಗಳಾದಂತ ಅಶೋಕ್, ಪರಶುರಾಮ, ಉಮೇಶ್ ಲಮಾಣಿ, ಸಂತೋಷ್ ಕುಮಾರ್, ನೂತನ್, ನಿರಂತನ್, ಸುಬ್ರಹ್ಮಣ್ಯ ಎಸ್, ಭರತ್ ಕುಮಾರ್, ಚಾಲಕ ನರಸಿಂಹಸ್ವಾಮಿ, ಸತೀಶ್ ನೇತೃತ್ವದಲ್ಲಿ ವಿಶೇಷ ತಂಡ ರಚಿಸಲಾಗಿತ್ತು ಎಂದು ಹೇಳಿದರು. ಈ ತಂಡವು 12…

Read More

ಚಿತ್ರದುರ್ಗ : ಚಳ್ಳಕೆರೆ ತಾಲ್ಲೂಕು ನಾಯಕನಹಟ್ಟಿ ಕ್ಷೇತ್ರದ ಶ್ರೀ ಗುರುತಿಪ್ಪೇರುದ್ರಸ್ವಾಮಿ ಜಾತ್ರಾ ಮಹೋತ್ಸವದ ಅಂಗವಾಗಿ ವಿವಿಧ ಇಲಾಖೆಗಳ ಕಾರ್ಯಕ್ರಮಗಳು, ಯೋಜನೆಗಳು, ಸೌಲಭ್ಯಗಳು ಹಾಗೂ ಆಯಾ ಇಲಾಖೆಗೆ ಸಂಬಂಧಿಸಿದ ಇನ್ನಿತರೆ ವಿಷಯಗಳ ಬಗ್ಗೆ ಸಾರ್ವಜನಿಕರಿಗೆ ಅರಿವು ಮೂಡಿಸುವ ನಿಟ್ಟಿನಲ್ಲಿ ವಿವಿಧ ಇಲಾಖೆಗಳ ವಸ್ತುಪ್ರದರ್ಶವನ್ನು ವ್ಯವಸ್ಥಿತವಾಗಿ ಆಯೋಜಿಸಬೇಕು ಎಂದು ಉಪವಿಭಾಗಾಧಿಕಾರಿ ಮೆಹಬೂಬ್ ಜಿಲಾನ್ ಅಧಿಕಾರಿಗಳಿಗೆ ಸೂಚನೆ ನೀಡಿದರು. ನಗರದ ಉಪವಿಭಾಗಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಗುರುವಾರ ನಾಯಕನಹಟ್ಟಿ ಶ್ರೀ ಗುರುತಿಪ್ಪೇರುದ್ರಸ್ವಾಮಿ ಜಾತ್ರೆಯಲ್ಲಿ ವಸ್ತುಪ್ರದರ್ಶನ ಏರ್ಪಡಿಸುವ ಸಂಬಂಧ ಹಮ್ಮಿಕೊಂಡಿದ್ದ ಪೂರ್ವಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ನಾಯಕನಹಟ್ಟಿ ಗ್ರಾಮದ ಶ್ರೀ ಗುರುತಿಪ್ಪೇರುದ್ರಸ್ವಾಮಿ ಕ್ಷೇತ್ರದಲ್ಲಿ ಇದೇ ಮಾರ್ಚ್ 09 ರಿಂದ 24 ರವರೆಗೆ ಜಾತ್ರೆ ನಡೆಯಲಿದ್ದು, ಮಾರ್ಚ್ 16ರಂದು ದೊಡ್ಡ ರಥೋತ್ಸವ ನಡೆಯಲಿದೆ. ಜಾತ್ರೆಗೆ 3 ರಿಂದ 4 ಲಕ್ಷಕ್ಕೂ ಹೆಚ್ಚು ಭಕ್ತಾಧಿಗಳು ಆಗಮಿಸುವ ನಿರೀಕ್ಷೆ ಇದ್ದು, ಜಾತ್ರಾ ವೇಳೆಯಲ್ಲಿ ಜಿಲ್ಲಾ ಪಂಚಾಯಿತಿ ಸಹಕಾರದೊಂದಿಗೆ ಕನಿಷ್ಟ 10 ರಿಂದ 12 ಮಳಿಗೆಗಳಲ್ಲಿ ಕೃಷಿ, ಅರಣ್ಯ, ತೋಟಗಾರಿಕೆ, ಪಶುಸಂಗೋಪನೆ, ರೇಷ್ಮೆ…

Read More

ಬೆಂಗಳೂರು: ಬಜೆಟ್ ಎಂಬುದು ಬರಿ ಹಾಳೆಗಳ ಮೇಲಿನ ಲೆಕ್ಕವಲ್ಲ, ರಾಜ್ಯದ ಏಳುಕೋಟಿ ಕನ್ನಡಿಗರ ಭವಿಷ್ಯ ರೂಪಿಸುವ ಕೈಪಿಡಿ ಎಂಬುದು ನನ್ನ ನಂಬಿಕೆಯಾಗಿದೆ ಎಂಬುದಾಗಿ ಸಿಎಂ ಸಿದ್ಧರಾಮಯ್ಯ ಹೇಳಿದ್ದಾರೆ. ಈ ಬಗ್ಗೆ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವಂತ ಅವರು, ಕಳೆದ ಕೆಲವು ದಿನಗಳಿಂದ ನಮ್ಮ ಸಂಪುಟದ ಸಚಿವರು, ವಿವಿಧ ಇಲಾಖೆಯ ಹಿರಿಯ ಅಧಿಕಾರಿಗಳು, ರೈತ, ಶೋಷಿತ, ಅಲ್ಪಸಂಖ್ಯಾತ, ಹಿಂದುಳಿದ ವರ್ಗಗಳ ಸಂಘಟನೆಗಳ ಮುಖಂಡರು ಹಾಗೂ ವಿವಿಧ ಧರ್ಮಗಳ ಗುರುಗಳೊಂದಿಗೆ ಸಭೆ ನಡೆಸಿ, ಪಕ್ಷಾತೀತವಾಗಿ ಸಮಾಜದ ಎಲ್ಲಾ ಜಾತಿ, ಜನಾಂಗ, ವರ್ಗದ ಜನರ ಆಶೋತ್ತರಗಳನ್ನು ಆಲಿಸಿ, ಅವುಗಳಿಗೆ ಸಕಾರಾತ್ಮಕವಾಗಿ ಸ್ಪಂದಿಸುವ ಪ್ರಯತ್ನವನ್ನು ಈ ಬಜೆಟ್ ಮೂಲಕ ಮಾಡಿದ್ದೇನೆ ಎಂದಿದ್ದಾರೆ. ಬಜೆಟ್ ಎಂಬುದು ಬರಿ ಹಾಳೆಗಳ ಮೇಲಿನ ಲೆಕ್ಕವಲ್ಲ, ರಾಜ್ಯದ ಏಳುಕೋಟಿ ಕನ್ನಡಿಗರ ಭವಿಷ್ಯ ರೂಪಿಸುವ ಕೈಪಿಡಿ ಎನ್ನುವುದು ನನ್ನ ನಂಬಿಕೆ. ನಾಡಿನ ಪ್ರತಿಯೊಬ್ಬ ಪ್ರಜೆಯನ್ನು ಸರ್ಕಾರದ ಯಾವುದಾದರೊಂದು ಯೋಜನೆಯ ಫಲಾನುಭವಿಯನ್ನಾಗಿಸುವ ಪ್ರಾಮಾಣಿಕ ಪ್ರಯತ್ನವನ್ನು ಬಜೆಟ್ ಮೂಲಕ ಮಾಡಿಸುತ್ತಿದ್ದೇನೆ ಎನ್ನುವ ಭರವಸೆ ನನಗಿದೆ ಎಂಬುದಾಗಿ ತಿಳಿಸಿದ್ದಾರೆ. https://twitter.com/CMofKarnataka/status/1897627755178557753?t=wdzmfS33SlyXHOSbkAg1gw&s=19…

Read More